ಒಟ್ಟು 12057 ಕಡೆಗಳಲ್ಲಿ , 135 ದಾಸರು , 6158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ನಾರಾಯಣ ನಾರದನುತ ಮಾಂಪಾಹಿ ಪ ನೀರೇರುಹನಾಭ ಸತ್ಯ [ಪ್ರೀತ] ನಾರಾಯಣ ಮಾಂಪಾಹಿ ನಾರಾಯಣ ವೇದಾಂತ ನಾರಾಯಣ ಮಾಂಪಾಹಿ ಅ.ಪ ಶರಣಾಗತ ಪರಿಪೂಜಿತ ಸರಸೀರುಹಭವವಂದಿತ ಕರುಣಾಕರ ದಿವ್ಯಶೇಷ ನಾರಾಯಣ ಮುನಿಸೇವಿತ ಸುರನಾಯಕ ನಿತ್ಯವಿನುತ ಮುರಳೀರವ ಪರಿತೋಷಿತ ವರದಾಯಕ ಮಾಂಗಿರೀಶ ಪರಿಪಾಲಯ ಪಾರ್ಥಸೂರಿ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ನಾರಾಯಣ ನಾರಾಯಣ ಶರಣಾಗತ ಕರುಣಾ ನಾರಾಯಣ ನಾರಾಯಣ ಸರಸೀರುಹ ಚರಣಾ ಪ ನಾರಾಯಣ ನಾರಾಯಣ ಭವಸಾಗರ ತರಣಾ ನಾರಾಯಣ ನಾರಾಯಣ ಶೌರೆ ಮಾರಮಣಾ ಅ.ಪ ಮಾಧವ ಕೇಶವ ಪರಾತ್ಪರ ಸಾನಂದ ಹರೇ ಈಶ ಪರೇಶಾದಿನೇಶಾ ಮುರಾರೇ 1 ಗರುಡಗಮನ ನೀಲಾಂಬುದಗಾತ್ರ ಸುರನಾಯಕನುತ ಪರಮ ಪವಿತ್ರಾ 2 ಸೀತಾ ಮನೋಹರ ಸುರಮುನಿಪ್ರೇಮಾ ಖ್ಯಾತಚರಿತ್ರ ಮಾಂಗಿರಿ ವರಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಾರಾಯಣನಾರಾಯಣ ನಳಿನೋದರ ಪ ನಾರದಪ್ರಿಯನಾಮ ಜಯನಾರಾಯಣ ನರಕಾಂತಕಅ.ಪ. ಸುರಸಂಚಯ ಸುಖಕಾರಣ ದಿತಿಜಾಂತಕ ದೀನ ಶರಣಪರಾತ್ಪರ ಪಾಂಡವಪ್ರಿಯ ಪರಿಪೂರ್ಣ ಪರಮ ಜಯ1 ಅಘಕುಲವನದಾವಾನಲ ಅಗಣಿತಗುಣಗಣನಿರ್ಮಲತ್ರಿಗುಣಾತೀತ ತ್ರಿಭುವನ ತ್ರಿದಶೇಶ್ವರವಂದ್ಯ ಜಯ2 ಅತಿಮೋಹನಚರಿತ ನಮೋ ಅತಿ ಸದ್ಗುಣಭರಿತ ನಮೋಹತ ಕಲ್ಮಶ ಹಯವದನ ಹರಿ ಹಯರಿಪುಹರಣ ಜಯ 3
--------------
ವಾದಿರಾಜ
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಾರಾಯಣ ನಿನ್ನ ಸ್ಮರಣೆಯಲಿ ಮನ ಬೇರು ವೂರಿರುವಂತೆ ಕಾರುಣ್ಯದಲಿ ಕಾಯೊ ಪ ವೇದನಾಲ್ಕರ ಕದ್ದಂಥಾ ದೈತ್ಯನ ಕೊಲ್ವಾ ಶದಿ ಮತ್ಯಾವತಾರ ಧರಿಸಿದೆ ಹರಿಯೇ 1 ಮಂದರ ಪೊತ್ತೆ ಭಾವಕಿಯಳ ಮೋಹಿಸಿ ಮೋಹಿನಿಯಾದೆ 2 ವರಹರೂಪದಿ ಪೋಗಿ ಧರೆಯನು ಧರಿಸಿದೆ ದುರುಳ ಹಿರಣ್ಯಕನಕರದಿಂದ ಸೀಳಿದೆ 3 ಕಂದನ ನುಡಿಕೇಳಿ ಕಂಬದಿಂದುದಿಸಿದೆ ತಂದೆಯ ಬಗೆದವನಾ ಛಂದದಿ ಸಲಹಿದೆ 4 ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ತುಳಿದು ಆತನ ಮನೆ ಬಾಗಿಲ ಕಾಯ್ದೆಯೊ 5 ತಾತನ ಮಾತನು ಕೇಳಿ ಮಾತೆಯ ಕೊಂದೆ ಖ್ಯಾತಿಯಿಂದಲಿ ಕ್ಷತ್ರಿಯರನು ಸಂಹರಿಸಿದೆ 6 ಮಾತೆಯ ವರ ಕೇಳಿ ನೀತಿಯಿಂದಲಿ ಪೋದೆ ಸೇತುವೆ ಕಟ್ಟಿ ನೀಖ್ಯಾತರಾವಣನಕೊಂದೆ 7 ಪುಟ್ಟ ಶಿಶುವಾಗಿ ಗೋಪಿಗೆ ಮುದ್ದು ತೋರಿದೆ ಬೊಟ್ಟಿಲಿ ಗಿರಿಯನು ನೆಗಹಿದೆ ಶ್ರೀ ಕೃಷ್ಣಾ 8 ತ್ರಿಪುರರ ಸತಿಯರ ವ್ರತವಗೆಡಿಸುವಂಥಾ ಅಪರಿಮಿತದಿ ಮೋಹಿಸುವಾ ಮೂರ್ತಿಯಾದೆ 9 ಭಕ್ತವತ್ಸಲ ದೇವಾ ಯುಕ್ತಿಯಿಂದಲಿ ಕಾಯ್ವ ವ್ಯಕ್ತಿ ಕಲ್ಕ್ಯಾವತಾರ ಧರಿಸಿದ ಹರಿಯೇ 10 ಶಬ್ದವ ನುಡಿಸುವ ಅಬ್ದಿನಿನ್ನದೊ ದೇವಾ ಶಬ್ದವಾಲಿಸದ ನಿಶ್ಯಬ್ದದೊಳಿರಿಸೆನ್ನಾ 11 ಅಂತರದೊಳಗೆನ್ನಾ ಕಂತುನಾರಾಯಣಾ ಸಂತಸದೊಳು ನಿಜ ಶಾಂತಿ ಪಾಲಿಪ ಗುರು 12
--------------
ಶಾಂತಿಬಾಯಿ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ರಕ್ಷಿಸೊ ನಮ್ಮನು ಲಕ್ಷ್ಮೀನಾರಾಯಣ ರಕ್ಷಿಸೋ ಪ ಭವ ದೂರ ನಿತ್ಯೋದಾರ ಕರುಣದಿ ಅ.ಪ. ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖದಾಶಯನೇ ತೊರೆದೆ ಕಳತ್ರ ನಿವೇಶ ತನುಜ ಮಾಯಾ ನಿಖಿಲಸುರೇಶ ಕಮಲ ಭವ ಭಯ ಪಾಶ ಹರಪರಮೇಶ ವಂದಿತ||ನಾರಾಯಣ|| 1 ದೇಹಾಭಿಮಾನದಲ್ಲಿ ತೀವಿದಭೂತ ದ್ರೊಹವನಾಚರಿಸುತಲಿ ಸಿಲುಕಿ ದಾಸೋಹಮೆನ್ನದೆ ದೈವ ವಿದೇಹ ಜಾವರಿಗೂಹನೋಚಿತದೇಹ ವಿಜಿತವಿದೇಹ ಖಗವರವಾಹ ಶುಭಪರಿವಾಹ ನಿಖಿಲ ನಿರೀಹ ಲೋಕವಿ ಮೋಹನಾಚ್ಯುತ ||ನಾರಾಯಣ|| 2 ಧರ್ಮಾಚರಣೆಯನೆರೆತೊರೆದು ದುರುಳರ ಸಂಗದಿ ಜರಿದು ಸಜ್ಜನರನು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮ ಪುರುಷ ಪರಮ ಪಾವನ ಭವ ಸಂಹರಣ ವಿಶ್ವಂಭರಣ ಪುಲಿಗಿರಿ ವರದ ವಿಠಲ ||ನಾರಾಯಣ|| 3
--------------
ಸರಗೂರು ವೆಂಕಟವರದಾರ್ಯರು
ನಾರಾಯಣ ರಕ್ಷಿಸೋ ನಮ್ಮನು ಲಕ್ಷ್ಮೀ ನಾರಾಯಣ ರಕ್ಷಿಸೋ ಪ ಪಾರರಹಿತ ಭವಪಾರಾವಾರದಿ ಬಲು ಘೋರತಾಪವು ಮೀರಿತೋ ಭವದೂರ ನಿತ್ಯೋದಾರ ಕರುಣದಿ ಅ.ಪ ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖ ಕಳತ್ರ ನಿವೇಶ ತನುಜ ಮಾಯಾ ಪಾಶದೊಳಗೆ ಶಿಲ್ಕಿ ಗಾಸಿಯಾದೆನು ಜಗದೀಶ ನಿಖಿಲಸು ರೇಶ ಕಮಲಫಲಾಶನಯನ ದಿ ನೇಶಶತ ಸಂಕಾಶ ವ್ಯಾಘ್ರಗಿರೀಶ ಭವಭಯ ಪಾಶ ಹರಪರಮೇಶ ವಂದಿತ 1 ದೇಹಾಭಿಮಾನದಲ್ಲಿ ತೀವಿದ ಭೂತ ಸೋಹಮೆಂಬುವ ಬಲು ಮೋಹದಿ ಸಿಲುಕಿ ದಾ ಸೋಹಮೆನ್ನದೆ ದೈವ ದ್ರೋಹಿಯಾದೆನು ವಿದೇಹಜಾವರಿ ಗೂಹ ನೋಚಿತದೇಹ ವಿಜಿತ ವಿ ದೇಹ ಖಗವರವಾರಶುಭಪರಿವಾಹ ನಿಖಿಲ ನಿ ರೀಹ ಲೋಕವಿಮೋಹನಾಚ್ಯುತ 2 ಗುರುಹಿರಿಯರ ಮರೆದು ಗರ್ವದಿ ಧರ್ಮಾವ ಚರಣೆಯ ನೆರೆತೊರೆದು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮಪುರುಷ ಪಾವನ ಚರಣ ಸುಗುಣಾ ಭರಣ ದೀನೋ ಭವ ಸಂಹರಣವಿಶ್ವಂ ಭರಣ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾರಾಯಣನಮ್ಮ ಈತ ನಾರಿ ಒಳ್ಳೊಳ್ಳೆ[ಯ]ವರಿಗೆ ಮಾಡಿದ ಖ್ಯಾತ ಪ. ನಾನಾ ಬಗೆಯಿಂದ ಪೊಗಳುವೆನೀತ- ನ್ನಾನೆಂಬುವುದನ್ನು ಮುರಿದ ಪ್ರಖ್ಯಾತ ಅ.ಪ. ಕೈಕಾಲಿಲ್ಲದೆ ಆಟ ಆಡಿದ ಮೈಮ್ಯಾಲೆ ಹೊರೆಯ ಹೊತ್ತು ನೋಡಿದ ಕೋರೆಯ ಮಸೆದು ಹದ ಮಾಡಿದ ಕೋಯೆಂದು ಕೂಗಿ ಒದರುತೋಡಿದ ಇವ ಭಕ್ತರನ್ನ ಪಾತಾಳಕ್ಕೆ ದೂಡಿದ ಶಕ್ತಿ ಮಗನಾದ ಕ್ಷತ್ರಿಯರ ಕಾಡಿದ ಅಂಬು ತೆಗೆದು ಹೂಡಿದ ರಾಧಾನ್ಮನೆ ಪೊಕ್ಕು ಮೋಜು ಮಾಡಿದ ಇವ ದಿಗಂಬರನಾಗಿ ಅಶ್ವವೇರಿ ಓಡಿದ 1 ಕಲ್ಲು ಮಾಡಿಕೊಂಡು ಇರುವನು ನೆಳ್ಳ ಭೂಮಿ ನೆಗವಿ ಸುತ್ತಿ ಬಲ್ಲ ಬುದ್ಧಿವಂತ ಪ್ರಹ್ಲಾದಗೊಲಿದನಲ್ಲ ಇವ ಎರುಡುಪಾದ ಭೂಮಿ ದಾನ ಒಲ್ಲ ಇವನ ಕೊಡಲಿಬಾಯಿಗ್ಯಾರು ಇದಿರಿಲ್ಲ ಲಂಕೆಗೆ ಬೆಂಕಿಯನಲ್ಲ ಕೊಂಕಿ ಕೊಳಲನೂದುವನು ಗೊಲ್ಲ ಮೈಮೇಲೆ ಗೇಣು ಅರಿವ್ಯಿಲ್ಲ ಇವ ಮಾಮೇರೆಂಬೊ (?) ತೇಜಿ ಏರ್ಯಾನಲ್ಲ 2 ವೈರಿ ಕೊಂದ ಕಾಮಾತ್ಮರಿ[ಗಾ]ಗೋದೇನು ಛಂದ ದಾಡೆಯಿಂದ ದೂಡಿ ಭೂಮಿ ತಂದ ದಾಡೆಯಿಂದ ಕಂಬ ಒಡೆದು ಬಂದ ಇವ ಶುಕ್ರನ್ನ ಕಣ್ಣ ಮುರಿದೊಂದ ತಂದೆ ಮಾತಿಗೆ ತಾಯಿ ಮರಣಂದ ವನದ್ಹಿಂಡು ಕೂಡಿ ವನಕೆ ಕೇಡು ತಂದ ಒಮ್ಮೆ ಮೀಸಲ್ಬೆಣ್ಣೆ ಮೆದ್ದೇನಂದ ಇವ ಬತ್ತಲಾಗಿ ಹತ್ತು ಕುದುರಿದಂದ ತಂದೆ ಹೆಳವನಕಟ್ಟೆರಂಗ ಬಂದ 3
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣನಲ್ಲದಿಲ್ಲ ಜಗದಿ ಪ ನಾರಾಯಣನೆ ವಾರಿಶಾಯಿಯಾದ ಮೇಲೆ ವಾರಿಸಂಪರ್ಕವಿಲ್ಲದ ವಸ್ತುವುಂಟೆಅ.ಪ ತೃಣ ಲತೆ ತರು ವನಸ್ಪತಿ ಸಂತತಿಯೊಳೆಲ್ಲ ಗಣನೆಯಿಲ್ಲದ ಪ್ರಾಣಿವರ್ಗದೊಳೆಲ್ಲ ಅಣುಮಹತ್ತೆನಿಪ ಚರಾಚರಗಳೊಳೆಲ್ಲ ಅಣಗಿ ಪೋಷಿಪ ರಸ ವಾರಿಯಾದ ಮೇಲೆ 1 ಧರೆಯೊಳಗಡಗಿಹ ಧಾತುಜಾಲವ ಕರಗಿಸಿ ನೆರೆ ವನಸ್ಪತಿವರ್ಗಕೆ ಉಣಿಸನಿತ್ತು ಪರಿ ಧಾನ್ಯ ಫಲಂಗಳ ರಚಿಸುತ್ತ ಹರಹಿ ಲೋಕದೊಳೆಲ್ಲರನು ಪೋಷಿಪ ಪ್ರಭು 2 ಒಂದೇ ಸ್ಥಳದಲಿ ಮೊಳೆತು ಬೆಳೆವ ಬೀಜಕ್ಕೆಲ್ಲ ಒಂದೇ ವಾಸನೆ ಗುಣ ರುಚಿಗಳುಂಟೇ ಸಂದೇಹ ಬೇಡ ನಿರ್ಲಿಪ್ತ ತಾನವುಗಳ ಕುಂದಿಸದೆ ಗುಣ ಸ್ವಭಾವಗಳ ಪೋಷಿಸುವ 3 ಸರ್ವವಸ್ತುಗಳಲ್ಲು ಅಂತರ್ಯಾಮಿಯಾಗಿ ಸರ್ವ ಚರಾಚರಕೆ ನಿಯಾಮಕನಾಗಿ ಸರ್ವರೊಳಡಗಿ ಪೋಷಿಪ ಘನಪ್ರಭುವಾಗಿ ಸರ್ವರುತ್ಪತ್ತಿ ಸ್ಥಿತಿಗೆ ಕಾರಣನಹ 4 ಪರಮಪುರುಷ ತನ್ನನಂತ ಮಹಿಮೆಯೊಳು ಕಿರಿದೊಂದಂಶದಿ ವಾರಿರೂಪದೊಳಿಂತು ಸರುವ ಚರಾಚರದಿರುತಂತರ್ಗತನಾಗಿಪೊರೆವ ಜನವ ರಘುರಾಮವಿಠಲ ಪ್ರಭು 5
--------------
ರಘುರಾಮವಿಠಲದಾಸರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ