ಒಟ್ಟು 4323 ಕಡೆಗಳಲ್ಲಿ , 125 ದಾಸರು , 2943 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಳ್ಳಿಗೆ ನಗರೇನೊರಂಗಯ್ಯನಿನ್ನ ಕಳ್ಳತನವ ನೋಡಿ ಪ. ಹಾರುವ ಹದ್ದನೇರಿ ತಿರುಗಾಡುವಿಜಾರಿಬಿದ್ದರೆ ತೆರನೇನೊ ಜಾರಿಬಿದ್ದರೆ ತೆರನೇನೊ ನಿನಗೆ ಬುದ್ಧಿಯಾರು ಹೇಳುವರೊ ಧರೆ ಮ್ಯಾಲ1 ಕ್ಷೀರ ಸಮುದ್ರಶಾಯಿ ಎಂದರೆ ಹಿಗ್ಗುವಿಯಾರು ಅರಿಯರು ನಿನ್ನ ಹುಳುಕುಯಾರು ಅರಿಯರು ನಿನ್ನ ಹುಳುಕು ಅತ್ತೆಮನೆ ಸೇರಿದವನೆಂದು ನಗತಾರೊ 2 ನೀರೊಳು ನಿನ್ನ ಮನೆ ಹಾವಿನ ಮ್ಯಾಲೆ ನಿದ್ರೆ ಹಾರುವ ಹದ್ದನೇರುವಿಹಾರುವ ಹದ್ದನೇರುವಿ ತಿರುತಿಂಬೊಮೂರು ಅಹಂಕಾರ ನಿನಗ್ಯಾಕೊ3 ಮಗಳ ಕೊಟ್ಟೆನೆಂದು ಮಮಕಾರದಿಂದಲೆಸುಗುಣ ಸಮುದ್ರ ಉಳುಹಿದಸುಗುಣ ಸಮುದ್ರ ಉಳುಹಿದ ಕಚ್ಚುವ ಶೇಷಖಗರಾಜನಿಂದ ಕೈಕಾಯ್ದ4 ಕರವ ಕರವ ನೆಗಹಿದ ಕಾರಣ ಹಾರುವ ಗರುಡ ಕೈ ಕಾಯ್ದ5 ಕಾಲ ಯವನನ ಕೂಡ ಕಲಹವ ಮಾಡಿಬಂದು ಮೂಲೆಲೆ ಹೋಗಿ ಅಡಗಿದಿಮೂಲೆಲೆ ಹೋಗಿ ಅಡಗಿದಿ ಮುಚಕುಂದ ರಾಯ ನಿಂತಾಗ ಉಳದೆಲ್ಲೊ6 ಮಧುವೈರಿ ನೀನು ಗೆಲಲಿಲ್ಲಮಧುವೈರಿ ನೀನು ಗೆಲಲಿಲ್ಲ ರಮಿಯರಸ ಮಧೂಕದಿಂದ ಅವರ ಮುಡುಹಿದ 7
--------------
ಗಲಗಲಿಅವ್ವನವರು
ಸುಳ್ಳು ಸುಳ್ಳು ಸುಳ್ಳು ಪೊಳ್ಳು ಜಗ ತಿಳಿಯಲೆ ಮಳ್ಳು ಮರುಳು ಪ ಸುಳ್ಳು ಬಂಗಾಲಿ ಕಂಡು ಮಳ್ಳಾಗ ಬೇಡೆಲೆ ಲೊಳ್ಳಟ್ಟಿಯಿದೆಲ್ಲ ಅ.ಪ ಕಾಜಿನ ಬುರುಡೆಯೊಳ್ ತೇಜಿಪದೀಪಕ್ಕೆ ಸೋಜಿಗಗಂಡು ಮತಿಮಾಜುವುದರಲವ ಮೋಜಿನ ಆಟಕ್ಕೆ 1 ನಾಶವಾಗುವುದೊಂದೇ ತಾಸು ತೋರೆಲ್ಲನು ಈಷಣ ಸಂಸಾರದಾಸೆಗೆ ಸಿಗದಿರು ಮೋಸವಿದೆಲ್ಲವು 2 ಮೋಹದಾಕಾರಕ್ಕೆ ಮೋಹಿಸಿ ಕೆಡದೆ ನೀ ಮೋಹಿಸಿ ಸ್ಥಿರಸುಖದೇಹವ ನೀಡೆಲೊ ಮಹ ಶ್ರೀರಾಮನೆ 3
--------------
ರಾಮದಾಸರು
ಸೂತ್ರನಾಮಕಪ್ರಾಣ ಜಗತ್ರಾಣ ಸೂತ್ರನಾಮಕ ಜಗಸೂತ್ರನೆ ಹರಿಕೃಪಾ ಪಾತ್ರ ನೀನಹುದೋ ಸರ್ವತ್ರದಿ ನೀನೆ ಪ ದೇವಾ ನೀನಿಲ್ಲದಿರೆ ಜಗವೆಲ್ಲವು ತಾ ನಿರ್ಜೀವ ಜೀವ ಕೋಟಿಗಳೆಲ್ಲ ಕಾವ ಪಾವನಾತ್ಮಕ ಸಂಜೀವ ಲವಕಾಲ ಬಿಡದೆ ಎಮ್ಮೊಳಿರುವ ಭೋ ದೇವ ಅ.ಪ ಸಾಟಿ ಯಾರೆಲೆ ತ್ರಿಕೊಟಿರೂಪನೆ ನಿಶಾಚರ ಕುಲಕೆ ಕುಠಾರಿ ಅಜಾಂಡ ಖರ್ಪರದಿ ಸೃಷ್ಟಿಯೊಳು ಸಂಚಾರಿ ಪಟುತರ ತ್ರಿವಿಕ್ರಮ ಚಟುಲ ಮೂರುತಿ ಮನತಟದಲಿ ಭಜಿಸಿದ ಶ್ರೇಷ್ಠನೆ ನಿಜಪರಮೇಷ್ಠಿಪದವನು ತೊಟ್ಟು ಪಾಲಿಪೆ ನಿಂದು ಬ್ರಹ್ಮಾಂಡ ಪೊತ್ತು ಅಂದು ಜಗಭಾರ ವಹಿಸಿದೆಯೊ ದಯಾಸಿಂಧು ಎಂದೆಂದೂ 1 ಸರುವ ತತುವೇಶರ ವ್ಯಾಪಾರ ಧೀರ ನೀ ನಡೆಸೆ ಜಗಸಂಸಾರ ಕಾರಣನು ಜಗಕಾರ್ಯ ಕಾ ವೈರಾಗ್ಯ ಐಶ್ವರ್ಯ ನಿನ್ನಯ ಗುಣ ಸ್ವರೂಪತನುಕರಣೇಂದ್ರಿಯ ಕರ್ಮಫಲವನು ಜೀ ವರುಗಳಿಗುಣಿಪ ಅನಿಲರೂಪನೆ ತನುಗೋಳಕದಲಿ ನೀ ನೆಲ ಅಂದು ಸೃಷ್ಟಿಯೊಳು ಬಂದೂ ಪೊಂದಿ ಸರ್ವರೊಳು ನಿಂದು ಹಿಂದೂ ಇಂದೂ ಇನ್ನು ಮುಂದೂ ಕರುಣಾಸಿಂಧು ಎಂದೆಂದೂ 2 ಪ್ರಾಣಪ್ರಾತರ ಸಾಯಂಬೀತೆರ ಅಭಿಧಾನ ಗುಣಸ್ತವನ ಮಾಳ್ಪರೆಲ್ಲ ಸುರ ಗಣಾ ಮಣಿದು ಬೇಡುವರೆಲ್ಲ ಅನುದಿನಾ ಎಣೆಯುಂಟೆ ನೀನಮಿತ ಗುಣಗಣಾ ಶ್ರೀ ಮುಖ್ಯ ಪ್ರಾಣಾ ಜಗಬಂಧಕೆ ಮಹಾರಜ್ಜು ರೂಪ ನೀ ಚಿತ್ಸುಖಮಯ ವಪುಷ ಖಗಪ ಶೇಷ ಶಿವ ಶಕ್ರಾದೀ ಜಗ ಬದ್ಧವು ಕೇಶ ನಖಾಗ್ರ ಪರ್ಯಂತ ಚಿತ್ಸುಖ ಗಭೇದ ನೀ ಛಂದ ಶಾಸ್ತ್ರದಿ ತನು ತ್ವಗ್ರೋಮ ಉಷ್ಣಿಕ್ ಗಾಯತ್ರಿ ನರ ಮಾಂಸನುಷ್ಟುಪ್ ಅನುಷ್ಟಪು ಅಸ್ತಿಮಜ್ಜಾ ಜಗತೀ ಪಂಕ್ತಿ ಬೃಹತಿನಾಮಕ ಘನ್ನಾ ಉರಗಾದ್ರಿವಾಸ ವಿಠಲನ್ನ 3
--------------
ಉರಗಾದ್ರಿವಾಸವಿಠಲದಾಸರು
ಸೂರ್ಯ | ತತ್ವವಾದಿ ವದನ ಕುಮುದ ಚಂದ್ರಾ ಪ ಧೃತ - ಬಾದರಾಯಣ ವೇದ ಸೂತ್ರವ | ಮೋದದಲಿ ಪ್ರಕಾಶ ಗೊಳಿಸುತಸಾಧುಜನ ಸಂತೋಷ ಕಾರಣ | ಸಾಧು ಟೀಕಾಚಾರ್ಯ ನಮಿಸುವೆ ಅ.ಪ. ವಾಸರ ತಾನು ನೀರಡಿಸೀ ||ಆಶುಗತಿ ಅಶ್ವವನು ಏರಿರ | ಲಾಸರಿತು ಕಾಗಿನಿಯ ಜಲವನು ಲೇಸು ಪಶುವಂದದಲಿ ಕುಡಿದು ಪಿ | ಪಾಸೆ ಕಳೆದ ಸುಯೋಧ ಕಾಯೋ 1 ಈಕ್ಷಿಸುತೀ ಚರ್ಯದವನಾ | ಮುನಿ | ಅಕ್ಷೋಭ್ಯ ತೀರ್ಥ ಶ್ರೀಚರಣಾಪಕ್ಷಿವಾಹನನಾ ತೈಜಸನಾ | ಮಾತ | ಲಕ್ಷಿಸಿ ತಾನೋರ್ವ ಶಿಷ್ಯನಾತಕ್ಷಣದಿ ಕಳಿಸ್ಯವನನಲ್ಲಿಗೆ | ಪ್ರೇಕ್ಷಿಸಲು ಬರ ಬಂದು ಇಲ್ಲಿಗೆದೀಕ್ಷೆಯನು ಕೈಕೊಂಡು ದಶಮತಿ | ಪಕ್ಷ ಸಾಧಿಸಿ ಗತಿಯ ತೋರ್ದರೆ 2 ಸಾರಥಿ ಕೃಷ್ಣನೊಲಿಸೀ | ಜಯ | ತೀರ್ಥ ಕಾಗಿನಿ ತಟದಿ ನೆಲಿಸೀ|ಕಾರ್ತ ಸ್ವರವದು ಲೋಷ್ಠಸಮವೆನು | ತಾರ್ತ ಸಜ್ಜನ ಕ್ವೊರೆದು ಪ್ರೀತಿಲಿಮೂರ್ತಿ ಗುರುಗೋವಿಂದ ವಿಠಲನ | ವಾರ್ತೆ ಸಚ್ಛರಿತೆ ಯನು ಪೇಳಿದ 3
--------------
ಗುರುಗೋವಿಂದವಿಠಲರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು
ಸೃಷ್ಟಿ ಕಾರಣ ದಯಾ ದೃಷ್ಟಿಯಲಿ ನೋಡೆನ್ನ ಘಟ್ಟಿಗನೆನಬೇಕೊ ಇಷ್ಟಿಲ್ಲ ಅಪರಾಧ ಪ ಇಷ್ಟವರನ ಬಂಧದೋಳೆನ್ನ ಸಿಲುಕಿಸಿ ದುಷ್ಟರೂ ಒಂದಾಗಿ ತಾವೆಲ್ಲ ಎನ್ನನೂ ಲಿಷ್ಟರೊಳು ನೀ ಕೇಳುವಂತೆ ಕೂಗಿದೆನಲ್ಲ 1 ನಿನ್ನ ಮಾತುಗಳಾಡಧ್ಹಾಂಗೆನ್ನ ಮಾಡಿಸಿ ಅನ್ಯವಾರುತಿಗಳು ಚನ್ನಾಗಿ ನುಡಿಸಲು ಅನ್ಯಾಯ ಬಂತೆಂದು ಅವರಂತೆ ನುಡಿದು ನಾ ಮನ್ನದೊಳಗೆ ಮೊರೆ ಇಟ್ಟದನರಿಯಾ 2 ಒಳಗೆ ಹೊರಗೆ ತುಂಬಿಕೊಂಡಿಹರು ಬಹಳ ಖಳರು ಅವರು ದೇಶ ಕಾಲವಯ್ಯ ಬಳಿಯಲಿ ನಿನ್ನವರು ಗೂಢ ವೇಷದಿ ತಾವು ಸುಳಿಯಲು ಅವರನ್ನು ಗುರುತು ಮಾಡಿದೆನಯ್ಯ 3 ಈಗಲೂ ನಿನ್ನ ಬಲಪವನನಾಗಮದಿಂದ ಬ್ಯಾಗನೆ ಖಳರನ್ನ ವರದು ಸವರಿಸೊ ಜಾಗರೂಕನಾಗಿ ಅದೇ ಪದ್ಧತಿ ಪಿಡಿದು ಸಾಗಿ ಬಂದೆನು ಕೇಳು ಎನ್ನಿಂದೇನಪರಾಧ4 ಲೇಸಾಗಿ ಬಲವಿತ್ತು ಎನ್ನನು ಕಳಿಸಲು ಆಸು ಅಸುರರನ್ನು ತರದೊಟ್ಟುವೆಯಾ ವಾಸುದೇವವಿಠಲ ನೀ ಕೈಯ್ಯ ಪಿಡಿದರೆ ಆ ಸುಕಾರ್ಯಕೆ ಬಾಹೆ ನೋಡೆನ್ನ ಶಕುತಿ5
--------------
ವ್ಯಾಸತತ್ವಜ್ಞದಾಸರು
ಸೃಷ್ಟಿಗೀಶ ನಿನಗಿಷ್ಟು ದಯಬಾರದ್ಯಕೊ ಎಷ್ಟು ಬೇಡಲು ಎನ್ನ ಮೊರೆ ಕೇಳದಿರುವಿ ಪ ಕರಿರಾಜನ ಪೊರೆದೆಲೋ ನರಗೆ ಸಾರಥಿಯಾದಿ ತರುಣಿಯನುದ್ಧರಿಸಿ ಪರಿಶುದ್ಧಗೈದಿ ಪರಮಕುರುಣಿಯು ನೀನು ದುರಿತಕಾರ್ಯದಿಂ ನಾನು ನರಕಿಯಾಗ್ವುದನರಿತು ಅರಿಯದಂತಿರುವಿ 1 ಖುಲ್ಲದಾನವರೊದೆದು ಎಲ್ಲ ದೇವತೇರಿಗೆ ನೀ ನುಲ್ಲಾಸವನು ಕೊಟ್ಟು ಪುಲ್ಲನಾಭ ಹರಿಯೆ ಕ್ಷುಲ್ಲಕರ ಸಂಗದಿಂ ನಾ ಸಲ್ಲದಂತಾಗುವೆ ಕ ಣ್ಣಲ್ಲಿ ಕಂಡು ನೀ ಕಂಡಿಲ್ಲದಂತಿರುವಿ 2 ಮುನಿಶಾಪದಿಂ ನೃಪನ ಕನಿಕರದಿ ಕಾಯ್ದಿ ನಿಂ ತನುದಿನದಿ ಬಾಗಿಲವ ಘನವಾಗಿ ಕಾಯ್ದಿ ಶುನಕನಂದದಿ ನಾನು ದಿನದಿನಕೆ ಮತ್ತಿಷ್ಟು ಘನಪಾಪಿಯಾಗ್ವುದನು ಮನಕೆ ತರದಿರುವಿ 3 ವನವಾಸಗೈದಯ್ಯಾ ವಾನರನ ಸಲಹಿದಿ ದನುಜನನು ಸಂಹರಿಸಿ ದನುಜನನುಜಂಗೆ ಮಾಣದ ಪಟ್ಟವನು ಮೆಚ್ಚಿ ನೀ ಕೊಟ್ಟೆಯ್ಯಾ ಎನಗ್ಯಾಕೀದುರ್ಬವಣೆ ದೂರಮಾಡದಿರುವಿ 4 ಇನಿತೆಲ್ಲ ಯೋಚಿಸಲು ಘನ ಕುರಣಾನಿಧಿ ನೀನು ನಿನಗವರೆ ದಾಸರೆ ನಾನಲ್ಲವೇನು ಮನಸಿಜಪಿತ ನಿನ್ನ ವನರುಹಂಘ್ರಿಯ ನಂಬಿ ಮಣಿದು ಬೇಡುವೆ ಕಾಯೊ ತಂದೆ ಶ್ರೀರಾಮ 5
--------------
ರಾಮದಾಸರು
ಸೆರೆಯೊಳಗೆ ಹರಿಸೆರೆಯೆ ಮುಖ್ಯಾ ಭಾವದೊಳಗೆ ಗುರುಭಾವನÉಯೆ ಮುಖ್ಯಾ ಪ ----ದೊಳಗೆ ಪ್ರಥಮ -----ರಾರÉೀ ಮುಖ್ಯಾ ಸೇವನೆಯೊಳಗೆ ಪುಣ್ಯ ಸೇವನೆ ಮುಖ್ಯಾ ದೇವರೊಳಗೆ ವಿಷ್ಣು ದೇವಾರೆ ಮುಖ್ಯಾವು ಯಾವ ಶಾಸ್ತ್ರಗಳಿಗೂ ವೇದವೇ ಮುಖ್ಯಾ 1 ವನದೊಳು ಫಲವುಳ್ಳಾ -----ಮುಖ್ಯಾ ದೀನದಾನವರೊಳಗೆ -----ದೀನನೆಂಬುವದೇ ಮುಖ್ಯ ಜನರೊಳು ಸಾಧು ಸಜ್ಜನರಾದವರೇ ಮುಖ್ಯಾ ಮನೆಗೆ ಹಿರಿಯನಾದ ಯಜಮಾನನೇ ಮುಖ್ಯಾ 2 ಮಾಸಗಳೊಳು ಚೈತ್ರಮಾಸವೆ ಮುಖ್ಯವು ವಾಸನೆಯೊಳು ಲಕ್ಷ್ಮೀವಾಸನೆ ಮುಖ್ಯ ಭೂಸುರರೊಳಗೆಲ್ಲ ಪೂರ್ಣ ಪಂಡಿತರೆ ಮುಖ್ಯ ವಾಸು ದೇವರಿಗೆ ----ದಾಸನೆ ಮುಖ್ಯ 3 ಸ್ಥಾನದೊಳಗೆ ಗಂಗಾಸ್ಥಾನವೇ ಮುಖ್ಯವು ಧೇನುಗಳೊಳು ಕಾಮಧೇನುವೇ ಮುಖ್ಯ ಜ್ಞಾನದಲ್ಲಿ ಹರಿಸರ್ವೋತ್ತಮ ಜ್ಞಾನವೆ ಮುಖ್ಯ ಗಾನದೊಳಗೆ ಸಾಮಗಾನವೇ ಮುಖ್ಯ 4 ವೃಕ್ಷಗಳೊಳು ತುಲಸೀ ವೃಕ್ಷವೇ ಮುಖ್ಯವು ಭಿಕ್ಷಗಳೊಳು ಯತಿ ಭಿಕ್ಷವೇ ಮುಖ್ಯವು ಪಕ್ಷಿಗಳೊಳು ಗರುಡ ¥ಕ್ಷಿಯೇ ಮುಖ್ಯ ಲಕ್ಷಾಧಿಕಾರರಿಗೆ ಲಕ್ಷ್ಮೀಯೆ ಮುಖ್ಯ 5 ಪರ್ವತಗಳೊಳು ಮೇರು ಪರ್ವತವೆ ಮುಖ್ಯ ಉರೆಗೆ ಮಳೆ ಬೆಳೆ ಉರುವೆ (ಬರುವೆ?) ಮುಖ್ಯ ಮರ್ಯಾದೆ ನ್ಯಾಯಗಳಿಗೆ ಹಿರಿಯರಾದವರೇ ಮುಖ್ಯ ಸರ್ವಾಧಿಕಾರರಿಗೆ ಸರ್ವಸಮತವೆ ಮುಖ್ಯ 6 ಕ್ಷೇತ್ರಗಳೊಳು ಕುರುಕ್ಷೇತ್ರವೆ ಮುಖ್ಯ ಯಾತ್ರಿಗಳೊಳು ಗಂಗಾಯಾತ್ರಿಯೆ ಮುಖ್ಯ ಸೂತ್ರಗಳೊಳು---------ಮುಖ್ಯವು ಸ್ತೋತ್ರಗಳೊಳು ಹರಿಸ್ತೋತ್ರವೇ ಮುಖ್ಯ 7 ಗ್ರಾಮಗಳೊಳು ಸಾಲಿಗ್ರಾಮವೇ ಮುಖ್ಯ ಭೂಮಿಗಳೊಳು ಪುಣ್ಯ ಭೂಮಿಯೇ ಮುಖ್ಯ ಆರು-------ಳಿಗೆಲ್ಲ ಆರೋಗ್ಯವೆ ಮುಖ್ಯ ಕಾಮುಕ ಸ್ತ್ರೀಯರಿಗೆಲ್ಲ ಕಾಮಪುರುಷನೇ ಮುಖ್ಯ 8 ಸನ್ಮಾರ್ಗಗಳೊಳಗೆ ಸನ್ಯಾಸಿ ಮಾರ್ಗವೆ ಮುಖ್ಯ ಅನಿಮೇಷಾ ಜಾಗರದೊಳಗೆ ಅನಿಮೇಷರೆ ಮುಖ್ಯ ಧನ್ಯ `ಹೆನ್ನೆ ವಿಠ್ಠಲನ ' ದಯವು ಇದ್ದರೆ ಮುಖ್ಯ 9
--------------
ಹೆನ್ನೆರಂಗದಾಸರು
ಸೇರಿ ಸುಖಿಸು ಮಾನವ ಗುರು ಚರಣ ಸರೋಜವ ಪ ಸೇರಿದ ಶರಣರ ಘೋರ ಪಾತಕವೆಂಬ ವಾರಿಧಿ ಭವಕೆ ಸಮೀರ ಜಗನ್ನಾಥ ಸೂರಿವರ್ಯ ದಾಸಾರ್ಯರಂಘ್ರಿಯನು 1 ತಾರತಮ್ಯವ ತಿಳಿಯದೆ ಕಲಿಯುಗದಿ ಮುಕ್ತಿ- ದಾರಿಕಾಣದೆ ಭವದಿ ಬಿದ್ದ ಜ- ನರುದ್ಧಾರ ಮಾಡಲು ದಯದಿ ಬ್ಯಾಗವಾಟದಿ ನರಸಿಂಗಾಖ್ಯ ವಿಪ್ರಗಾರ ದೋಳುದ್ಭವಿಸಿ ಚಾರು ಕಥಾಮೃತ ಸಾರವ ಧರೆಯೋಳು ಬೀರಿದಂಥವರ 2 ಮೇದಿನಿಯೊಳು ಚರಿಸಿ ವಾಕ್ಯಾರ್ಥದಿ ಬಹು ವಾದಿಗಳನೆ ಜಯಿಸಿ ಎನಿಸಿದರು ಪೂರ್ಣ ಬೋಧ ಮತಾಬ್ಧಿಗೆ ಶಶಿನೃಪ ಮಾನ್ಯರೆನಿಸಿ ಶ್ರೀದ ಪ್ರಹ್ಲಾದನನುಜ ಸಹ್ಲಾದರೆ ಇವರೆಂದು ಸಾದರ ಬಿಡದ ಪಾದಪಂಕಜಾರಾಧಕರಿಗೆ ಸುರಪಾದರೆನಿಪರ 3 ಕ್ಷೋಣಿ ವಿಬಂಧ ಗಣದಿ ಸೇವೆಯಗೊಂಡು ಮಾನವಿ ಎಂಬ ಕ್ಷೇತ್ರದಿ ಮಂದಿರ ಮಧ್ವ ಸ್ಥಾಣುವಿನೊಳು ಮುದದಿ ಕಾರ್ಪರವೆಂಬ ಕಾನನದಲ್ಲಿ ಕೃಷ್ಣವೇಣಿ ಕುಲದಿ ಮೆರೆವ ಶ್ರೀನಿಧಿ ನರಪಂಚಾನನಂಘ್ರಿಯುಗ ಧ್ಯಾನದಿ ಕುಳಿತ ಮಹಾನುಭಾವರನು 4
--------------
ಶ್ರೀನಿಧಿವಿಠಲರು
ಸೇರಿ ಸುಖಿಸುತಿರು ಮನುಜಾ ಗುರು ಶುಭ ಚರಣ ಸರೋಜ ಪ ಉದಧಿ ದಾಂಟಿ ಧಾರುಣಿಜಳಿಗೆ ಮುದ್ರಿಕೆಯಿತ್ತು ಜವದಿ ಶ್ರೀ ರಘುವರಗೆ ವಿನಯದಿ ಕ್ಷೇಮ ವಾರುತಿಯನು ಪೇಳಿದವನಂಘ್ರಿ ಮುದದಿ 1 ಇಂದು ಕುಲದಿ ಪಾಂಡು ನೃಪನ ಪುತ್ರ ನೆಂದು ಕರಿಸಿ ದುಷ್ಟ ಕೌರವಾಂತಕನ ನಂದ ನಂದನನೊಲಿಸಿದನ ದೃಪದ ನಂದಿನಿಯಳಿಗೆ ಪುಷ್ಪವ ತಂದಿತ್ತವನ 2 ಮಧ್ಯಗೇಹ ನೆಂಬೊದ್ವಿಜನ ಗೃಹದಿ ಮಧ್ವಾಭಿದಾನದಿ ಜನಿಸಿ ಮಾಯ್ಗಳನ ಗೆದ್ದು ಸಚ್ಛಾಸ್ತ್ರ ರಚಿಸಿದನ ಸುಪ್ರ ಸಿದ್ಧ ಸಿದ್ಧ ಕಾರ್ಪರ ನರಹರಿಗತಿ ಪ್ರಿಯನ 3
--------------
ಕಾರ್ಪರ ನರಹರಿದಾಸರು
ಸೇವಕನೆಲೊ ನಾನು ನಿನ್ನಯ ಪಾದಸೇವೆ ನೀಡೆಲೊ ನೀನು ಪ. ಸೇವಕನೆಲೊ ನಾನು ಸೇವೆ ನೀಡೆಲೊ ನೀನುಕಾವದೇನೆಲೊ ಶ್ರೀವಧೂವರ ರಾವಣಾಂತಕ ರಕ್ಷಿಸೆನ್ನನುಗೋವರ್ಧನ ಗಿರಿಧರ ದೇವ ಗೋವುಗಳ ಕಾವಶ್ರೀಮಹಾನುಭಾವ ವರಗಳನೀವ ದೇವಶ್ರೀವಲ್ಲಭ ದಯಮಾಡೆನ್ನನುಈ ವ್ಯಾಳೆಗೆ ಇಂದಿರೆರಮಣ ಅ.ಪ. ರಾಮ ದಶರಥನಂದನ ರಘುಕುಲಾಬ್ಧಿಸೋಮ ಸುಂದರವದನವಾಮನ ಪರಿಪೂರ್ಣಕಾಮ ಕೌಸಲ್ಯರಾಮಸ್ವಾಮಿ ಶ್ರೀರಂಗಧಾಮ ದೈತ್ಯವಿರಾಮಶ್ರೀಮದನಂತ ನಾಮಭೀಮ ಮುನಿಜನಸ್ತೋಮರಮ್ಯಗುಣಧಾಮ ರಣರಂಗಭೀಮಕೋಮಲಶ್ಯಾಮ ಹೇಸಾಮಜವರದ ನೀನನುದಿನಕಾಮಿತಫಲವನು ಕರುಣಿಸಿ ಕಾಯೊ 1 ಶಂಕರ ಸುರಸೇವಿತ ಶೇಷಗರುಡಾ-ಲಂಕಾರ ಮಣಿಶೋಭಿತಪಂಕಜನಯನ ಮೀ-ನಾಂಕ ಜನಕ ಪಾದ-ಪಂಕಜಾಸನವಿನುತ ತಿರುಪತಿವೆಂಕಟ ಬಿರುದಾಂಕ ಜಯ ಜಯಶಂಖಚಕ್ರಗದೆ ಪಂಖ ಪಿಡಿದಕಳಂಕ ಚರಿತ ತಾ-ಟಂಕಗೊಲಿದ ನಿಶ್ಶಂಕಲಂಕಾಧಿಪರಿಪು ರಘುಪತಿಕಿಂಕರರಿಗೆ ಕಿಂಕರ ನಾನೆಲೊ 2 ಮಾಧವ ಮಧುಸೂಧನನಂದಮಂಗಳ ವಿಗ್ರಹಬಿಂದುಮಾಧವ ಶ್ರೀಮುಕುಂದ ಶ್ರೀಮದಾ-ನಂದ ವಂದಿತಾಮರವೃಂದ ಶ್ರುತಿಗಳ ತಂದ ತುರಗವನೇರಿ ಬಂದವೃಂದಾವನದೊಳಗಿಂದ ಯಶೋದೆಯಕಂದ ಹರಿಗೋ-ವಿಂದ ಶೇಷಗಿರಿಯಲಿ ನಿಂದಮಂದಾಕಿನಿ ಪಡೆದೆಲೊ ಧ್ರುವಗೊಲಿ-ದಂದದಿ ಎನಗೊಲಿಯೊ ಹಯವದನ 3
--------------
ವಾದಿರಾಜ
ಸೇವೇ ಶ್ರೀರಮಣಂ ಸದಾ ಸೇವಕಾರ್ತಿಹರಣಂ ಪ ಪಾವನ ವಾಘ್ರಾಚಲವಿಹರಣಂ ಅ.ಪ ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿಪತ್ರಂ ಖಂಡಪರಶುಕೃತಸನ್ನುತಿಪಾತ್ರಂ ಚಂಡಕಿರಣಶತಸನ್ನಿಭಗಾತ್ರಂ7 1 ಕುಲಿಶಧರಾತ್ಮಜ ಮಿತ್ರಂ ಸುಲಲಿತ ಕರಧೃತ ಗೋತ್ರಂ ಕಲಿತರಥಾಂಗಧರಾಸಿತನುತ್ರಂ ಕಲಿಮಲಖಂಡನ ನಿಜಚಾರಿತ್ರಂ2 ಭಾವಿತಜನ ಮಂದಾರಂ ಭಾವಜಜನಕಮುದಾರಂ ಸೇವಕರಕ್ಷಣ ಧೃತಶರೀರಂ ದೇವಸಮೂಹಾಕಲಿತ ವಿಹಾರಂ3 ಶಂಕರಹೃದಯಧ್ಯೇಯಂ ಕಿಂಕರಜನ ಸಮುದಾಯಂ ನಿಜನಾಮಧೇಯ 4 ಪರಮಪುರುಷಮನವಂದ್ಯಂ ಸರಸಗುಣಾಕರಮಾದ್ಯಂ ವರದವಿಠಲಮಖಿಲಾಗಮಬೋಧ್ಯಂ 5
--------------
ವೆಂಕಟವರದಾರ್ಯರು
ಸೇವೇ ಶ್ರೀರಮಣಂ-ಸದಾ-ಸೇವಕಾರ್ತಿಹರಣಂ ಪ ಪಾವಕ ಶತರುಚಿ ರುಚಿರಾಭರಣಂ ಪಾವನವ್ಯಾಘ್ರಾಚಲವಿಹರಣಂ ಅ.ಪ. ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿ ಪತ್ರಂ ಶತ ಸನ್ನಿಭಗಾತ್ರಂ1 ಕುಲಿಶಧರಾತ್ಮಜಮಿತ್ರಂ-ಸುಲಲಿತ ಕರಧೃತ ಗೋತ್ರಂ ನಿಜ ಚಾರಿತ್ರಂ2 ಭಾವಿತ ಜನ ಮಂದಾರಂ-ಭಾವಜ-ಜನಕ ಮುದಾರಂ ಸಮೂಹಾಕಲಿತ ವಿಹಾರಂ3 ಶಂಕರ ಹೃದಯಧ್ಯೇಯಂ ಕಿಂಕರ ಜನ ಸಮುದಾಯಂ ನಿಜನಾಮಧೇಯಂ 4 ಪರಮ ಪುರುಷಮನವದ್ಯಂ ಸರಸಗುಣಾಕರ ಮಾದ್ಯಂ ವಿಠಲ ಮಖಿಳಾಗಮ ಬೋಧ್ಯಂ 5
--------------
ಸರಗೂರು ವೆಂಕಟವರದಾರ್ಯರು
ಸೈ ಸೈ ಸದ್ಗುರುವಿನ ದಯದಿಂದೆಲ್ಲಾ ಮೈ ಮರೆತೆನೆ |ಐ ಅದು ಏನು ಕಾರಣ ಮೈ ಮರೆದು ಮತ್ತುಳಿದೆನೆ | ಕೈ ಕೈ ತಲೆ ಮೇಲಿಡಲು ವೈರಾಗ್ಯ ಪಡೆದೆನೆ |ಥೈ ಥೈಯಂತ ಕುಣಿಸಿ ತನ್ನಂತೆ ತಾ ಮಾಡಿದನೆ ¥ ನಾನೂ ನೀನೆಂಬುದು ಮರೆಸಿ ತಾನೇ ತಾನಾದನೆ |ಮಾನ ಅಪಮಾನ ಎರಡೂ ಪಾನ ಮಾಡಿದನೆ |ಜ್ಞಾನ ಮಾರ್ಗವ ತೋರಿ ಧ್ಯಾನ ಹೇಳಿದನೆ |ಖೂನ ತೋರಿಸಿ ವಿನೋದ ಮಾಡಿದನೆ 1 ನಾದ ಶಬ್ದದಿ ಮನಲುಬ್ಧ ಮಾಡಿದನೆ |ವಾದಿ ದುರ್ವಾದಿಗೂಡ ಕಾದಿ ಗೆಲಿಸಿದನೆ |ಭೇದಾಭೇದವ ಅರಿಯದ ಹಾದೀ ತೋರಿದನೆ |ಈದ ಹುಲಿಯಂಥ ಮನಸು ಸಾದ ಮಾಡಿದನೆ 2 ಭೃಕುಟಿ ಮಧ್ಯದಿ ವಸ್ತು ಪ್ರಕಟ ಮಾಡಿದನೆ | ಆಸನ ದ್ವಾರ ಕವಾಟವ ಬಲಿಸಿ ಶ್ವಾಶಗಳೆಲ್ಲಾ ನಿಲಿಸಿದನೆ | ನಾಸಿಕಾಗ್ರದ ಕೊನೆಯ ಮೇಲೆ ಭಾನು ಪ್ರಕಾಶವ ತೋರಿದನೆ | ಈಶನು ದತ್ತ ಮಹೇಶ ದಿಗಂಬರ ಘೋಷದೊಳಗೆ ಮನವೀಸಿದನೆ 3
--------------
ಭೀಮಾಶಂಕರ