ಒಟ್ಟು 6900 ಕಡೆಗಳಲ್ಲಿ , 126 ದಾಸರು , 4284 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ಭ್ರಷ್ಟನಾದೆನಲ್ಲಾ ಶ್ರೀಹರಿ ಪೂಜೆ ಮಾಡಲಿಲ್ಲಾ ಸೃಷ್ಟಿಗೀಶ ಕಡು ಕಷ್ಟವ ತೊಲಗಿಸಿ ಶಿಷ್ಟದಾಗದೊಳು ನಿಷ್ಠೆಯಗೊಳಿಸಿದ ಪ ದುಷ್ಟ ವಿಷಯ ಪಾದೋದಿ ಜಲದಿನಾ [?] ಕಷ್ಟದಿಂದೀಸಿನೆಷ್ಟು ಹೈರಾಣಾದೆ 1 ಸುತ ವ್ಯಾಮೋಹದಿ ಮತಿಯ ಶಿಲುಕಿ ಹರಿ ಪಥವೆಂಬುದನ ಗತಿ ಗಹನಪ್ಪುದು 2 ಶರಣವತ್ಸಲೆಂಬ ಬಿರುದನಾಂತ ಶ್ರೀ ನರಸಿಂಹವಿಠ್ಠಲ ಪೊರೆ ಎನ್ನ ಕರುಣದಿ 3
--------------
ನರಸಿಂಹವಿಠಲರು
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ಮಗನೆಂದಾಡಿಸುವಳು ಮೊಗ ನೋಡಿ ನಗುವಳು ಪ ಜಗದುದ್ಧಾರನ ಮೊಗ ಮೊಗದೊಳಿರಿಸಿಕೊಂಡು ಅ ಕಾಲಲಂದುಗೆ ಗೆಜ್ಜೆ ತೋಳ ಮಣಿಯ ದಂಡೆಫಾಲದ ಅರಳೆಲೆಯು ಕುಣಿಯೆನೀಲದುಡುಗೆಯುಟ್ಟ ಬಾಲನೆ ಬಾರೆಂದುಪಾಲುಣಿಸುವ ಪುಣ್ಯವೆಂತು ಪಡೆದಳಯ್ಯ 1 ಬಣ್ಣ ಸರವಲ್ಲಾಡೆ ವರ ರನ್ನ ನೇವಳದಹೊನ್ನ ಗಂಟೆಯು ಘಣ ಘಣರೆನಲುಪನ್ನಗಶಯನನೆ ಕುಣಿಯೊಮ್ಮೆ ಕುಣಿಯೆಂದುಕುಣಿಸಿ ನಗುವ ಪುಣ್ಯವೆಂತು ಪಡೆದಳಯ್ಯ 2 ಪೊಡವಿಯ ಈರಡಿ ಮಾಡಿದ ದೇವನಕುಡಿಬೆರಳನೆ ಕರದಲಿ ಪಿಡಿದುಅಡಿಯಿಡು ಮಗನೆ ಮೆಲ್ಲಡಿಯಿಡು ಎನುತಲಿನಡೆಗಲಿಸುವ ಪುಣ್ಯವೆಂತು ಪಡೆದಳಯ್ಯ 3 ಕುಕ್ಷಿಯೊಳು ಈರೇಳು ಜಗವನ್ನು ಸಲಹುವನರಕ್ಷಿಪರು ಉಂಟೆ ತ್ರೈಜಗದೊಳಗೆಪಕ್ಷಿವಾಹನ ನೀನು ಅಂಜಬೇಡ ಎನುತಲಿರಕ್ಷೆ ಇಡುವ ಪುಣ್ಯವನೆಂತು ಪಡೆದಳಯ್ಯ 4 ಶಂಖ ಚಕ್ರ ಗದಾ ಪದುಮಧಾರಕನಪಂಕಜ ಮಿತ್ರ ಶತಕೋಟಿ ತೇಜನಸಂಖ್ಯೆಯಿಲ್ಲದಾಭರಣಗಳ ತೊಡಿಸಿಯಲಂಕರಿಸುವ ಪುಣ್ಯವೆಂತು ಪಡೆದಳಯ್ಯ 5 ಸಾಗರಶಯನನ ಭೋಗೀಶನ ಮೇಲೆಯೋಗ ನಿದ್ರೆಯೊಳಿಪ್ಪ ದೇವನನುಆಗಮ ನಿಗಮಗಳರಸಿ ಕಾಣದ ವಸ್ತುವನುತೂಗಿ ಪಾಡುವ ಪುಣ್ಯವೆಂತು ಪಡೆದಳಯ್ಯ 6 ವಾಹನ ದೇವರ ದೇವನಹಚೆನ್ನಾದಿಕೇಶವನನೆಂತು ಪಡೆದಳಯ್ಯ7
--------------
ಕನಕದಾಸ
ಮಂಗಳಂ ಜಯ ಮಂಗಳಂ ಲಿಂಗಾಕಾರದ ಪರಶಿವಗೆ ಪ ರಜತಾದ್ರಿಪುರದೊಳು ನಿಂದವಗೆ ಭಜಕರ ಸಲುಹಲು ಬಂದವಗೆ ನಿಜಸುರ ಸೇವಿತ ಗಜಚರ್ಮಾಂಬರ ತ್ರಿಜಗ ವಂದಿತನಾದ ಪರಶಿವಗೆ1 ಬಾಣನ ಬಾಗಿಲ ಕಾಯ್ದವಗೆ ತ್ರಾಣದಿ ತ್ರಿಪುರವ ಗೆಲಿದವಗೆ ಕಾಣದ ಅಸುರಗೆ ಪ್ರಾಣಲಿಂಗವನಿತ್ತು ಮಾಣದೆ ಭಕ್ತರ ಸಲುಹುವಗೆ 2 ಗಂಗೆಯ ಜಡೆಯೊಳು ಧರಿಸಿದಗೆ ಸಿಂಗಿಯ ಕೊರಳೊಳು ನುಂಗಿದಗೆ ತಿಂಗಳ ಸೂಡಿಯೆ ಅಂಗ ಭಸ್ಮಾಂಗದಿ ಕಂಗಳು ಮೂರುಳ್ಳ ಕೃಪಾಂಗನಿಗೆ 3 ಅಸ್ಥಿಯ ಮಾಲೆಯ ಧರಿಸಿದU É ಹಸ್ತದಿ ಶೂಲವ ಪಿಡಿದವಗೆ ವಿಸ್ತರವಾಗಿಯೆ ಭಸ್ಮಸುವಾಸಿಗೆ ಸತ್ಯದಿ ವರಗಳನಿತ್ತವಗೆ 4 ಅಂಬಿಕಪತಿಯೆಂದೆನಿಸಿದಗೆ ತ್ರಿ- ಯಂಬಕ ಮಂತ್ರದಿ ನೆಲೆಸಿದಗೆ ನಂಬಿದ ಸುರರಿಗೆ ಬೆಂಬಲವಾಗಿಯೆ ಇಂಬಾದ ಪದವಿಯ ತೋರ್ಪವಗೆ 5 ಪಂಚಾಕ್ಷರದೊಳು ಒಲಿದವಗೆ ಪಂಚಮ ಶಿರದೊಳು ಮೆರೆವವಗೆ ಪಾತಕ ಸಂಚಿತ ಕರ್ಮವ ವಂಚಿಸಿ ಭಕ್ತರ ವಾಂಛಿತವೀವಗೆ 6 ಪಾಶುಪತವ ನರಗಿತ್ತವಗೆ ಶೇಷಾಭರಣವ ಹೊತ್ತವಗೆ ಕಾಶಿಗಧಿಕವಾಗಿ ಕೈವಲ್ಯವಿತ್ತು ವಿ- ಶೇಷದಿ ಜನರನು ಸಲುಹುವಗೆ7 ಯಕ್ಷ ಸುರಾಸುರ ವಂದಿತಗೆ ದಕ್ಷನ ಮಖವನು ಕೆಡಿಸಿದಗೆ ಕುಕ್ಷಿಯೊಳೀರೇಳು ಜಗವನುದ್ಧರಿಸಿಯೆ ರಕ್ಷಿಸಿಕೊಂಬಂಥ ದೀಕ್ಷಿತಗೆ 8 ಕಾಮಿತ ಫಲಗಳ ಕೊಡುವವಗೆ ಪ್ರೇಮದಿ ಭಕ್ತರ ಸಲಹುವಗೆ ಭೂಮಿಗೆ ವರಾಹತಿಮ್ಮಪ್ಪನ ದಾಸರ ಸ್ವಾಮಿಯೆಂದೆನಿಸುವ ಈಶನಿಗೆ 9
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ಪ ಆದಿನಾರಾಯಣನೆನಿಸಿದಗೆ ಪಾದದಿ ಗಂಗೆಯ ಪಡೆದವಗೆ ಸಾಧುಸಜ್ಜನರನ್ನು ಸಲುಹುವ ದೇವಗೆ ವಿ ನೋದ ಮೂರುತಿಯಾದ ವೆಂಕಟಗೆ 1 ಶಂಖ ಚಕ್ರಧರಿಸಿಪ್ಪವU ಪಂಕಜ ಹಸ್ತವ ತೋರ್ಪವಗೆ ಬಿಂಕದೊಳಸುರರ ಕೆಡಹಿದ ಧೀರಗೆ ಮೀ ನಾಂಕನ ಪಿತನಾದ ವೆಂಕಟಗೆ 2 ಪೀತಾಂಬರಧರನೆನಿಸಿದಗೆ ನೂತನ ನಾಮದಿ ಮೆರೆವವಗೆ ಪಾತಕನಾಶನ ಪರಮಪಾವನಗೆ ಅ ತೀತ ಮಹಿಮನಾದ ವೆಂಕಟಗೆ 3 ಖಗವಾಹನನೆಂದೆನಿಸಿದಗೆ ನಗಧರನಾಗಿಹ ಅಘಹರಗೆ ಮೃಗಧರರೂಪಗೆ ಮುಂಚಕಲಾಪಗೆ ಜಗದಾಧಾರಕ ವೆಂಕಟಗೆ 4 ಲೋಕನಾಯಕನಾದ ಕೇಶವಗೆ ಶೋಕಭಂಜನನಾದ ಮಾಧವಗೆ ಸಾಕಾರ ರೂಪಗೆ ಸರ್ವಾತ್ಮಕನಿಗೆ ಶ್ರೀಕರನೆನಿಸುವ ವೆಂಕಟಗೆ 5 ಆಲದ ಎಲೆಯೊಳ್ವೊರಗಿದಗೆ ಆ ಕಾಲದಿ ಅಜನನು ಪೆತ್ತವಗೆ ನಿಗಮ ವಿದೂರಗೆ ಕಾಲಕಾಲಾಂತಕ ವೆಂಕಟಗೆ 6 ಸ್ವಾಮಿ ಪುಷ್ಕರಣಿಯ ವಾಸನಿಗೆ ಭೂಮಿ ವರಾಹತಿಮ್ಮಪ್ಪನಿಗೆ ಪ್ರೇಮದಿ ಜಗವನು ಸಲುಹುವ ನಾಮದ ಸೋಮ ಸನ್ನಿಭನಾದ ವೆಂಕಟಗೆ 7
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ಜಯರುಕ್ಮ ಕಿರೀಟಿಗೆ ಮಂಗಳಂ ಪ ಮುರಹರ ರಾಣಿಗೆ | ಸುಖಕರ ವಾಣಿಗೆ |ಮುಖರಿತ ವೇಣಿಗೆ ಮಂಗಳಂ 1 ಕಿಸಲಯ ಪಾಣಿಗೆ | ರಸಲಯ ಜಾಣೆಗೆ |ಬಿಸರುಹ ಬಾಣಿಗೆ ಮಂಗಳಂ 2 ಮಂದರ ಸದನಿಗೆ | ಕುಂದರ ರದನಿಗೆ |ಚಂದಿರ ವದನಿಗೆ ಮಂಗಳಂ 3 ಸುರದರಶ ಮುನಿಗೆ | ಹರಗಿರ ಮುನಿಗೆ |ಕರಿವರ ಗಮನಿಗೆ ಮಂಗಳಂ4 ಕೃತಮತಿವಶಳಿಗೆ | ಶ್ರುತಿನುತಿ ಯಶಳಿಗೆ |ದ್ಯುತಿ ತತಿ ದಿಶಗಳಿಗೆ ಮಂಗಳಂ 5
--------------
ರುಕ್ಮಾಂಗದರು
ಮಂಗಳಂ ಜಯ ಮಂಗಳಂ ರಾಮ ಮುನಿಜನ ಸ್ತೋಮ ಮಂಗಳಂ ಲೋಕಾಭಿರಘುರಾಮ ಸದ್ಗುಣ ಸ್ತೋಮ ಪ ದಶರಥನ ವರಪುತ್ರ ನೀನಾಗಿ ಕೌಶಿಕನ ಯಜ್ಞದಿ ಅಸಮಸಾಹಸ ದೈತ್ಯರನು ಗೆಲಿದಿ ವಸುಧೆಯೊಳು ಗೌತಮನ ಸತಿಯಳನು ಉದ್ಧರಿಸಿ ತಾಟಕಿ ಹೊಸಪರಿಯ ದೈತ್ಯರನು ಸಂಹರಿಸಿ ಎಸೆವ ಮಿಥಿಲಾ ಪುರದಿ ಜಾನಕಿ ಬಿಸಜನೇತ್ರೆಯ ಕೈಪಿಡಿದು ರನ್ನ ಹೊಸ ಪರಿಯ ರಥದೊಳಗೆ ಪೊರಟು ಸತಿಸಹಿತ ಅಯೋಧ್ಯೆಯಲಿ ಮೆರೆದಗೆ1 ದಶರಥನು ಪುತ್ರಗೆ ಪಟ್ಟವನು ಕಟ್ಟುವೆನು ಎನಲು ದಶದಿಕ್ಕಿಗೆ ಪತ್ರವನು ಕಳುಹಿಸಲು ಎಸೆವ ಮಂಗಳ ವಾದ್ಯ ಕೇಳುತಲೆ ಕೈಕೇಯಿ ಬರಲು ಅಸದಳದವರ ಬೇಡಿ ಕಾಡಿಸಲು ವಸುಧೆಗೀಶನ ವನಕೆ ಕಳುಹಲು ಕುಶಲವಿಲ್ಲದೆ ಮರುಗೆ ದಶರಥ ಮಿಸುಣಿಮಣಿ ಸಿಂಹಾಸನ ತ್ಯಜಿ- ಸುತಲಿ ಪಿತೃ ವಾಕ್ಯವ ನಡೆಸಿದಗೆ 2 ಮಡದಿ ಸೀತಾ ಲಕ್ಷ್ಮಣರ ಕೂಡಿ ಬಿಡದೆ ದೈತ್ಯರನೆಲ್ಲ ಕಡಿದಾಡಿ ಒಡತಿ ಸೀತೆಗೆ ಉಂಗುರವ ನೀಡಿ ಹನುಮಂತ ಬರಲು ಕಡುಜವದಿ ಸಾಗರದಿ ಸೇತುವೆಯ ಮಾಡಿ ತಡೆಯದಲೆ ರಾವಣನ ಮೂಲವ ಕಡಿದು ಕಮಲನಾಭ ವಿಠ್ಠಲನು ಮಡದಿಸಹಿತಾಯೋಧ್ಯೆ ಪುರದಲಿ ಸಡಗರದಿ ಸಾಮ್ರಾಜ್ಯವಾಳ್ದಗೆ3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ನರಶಿಂಗ ಮೂರುತಿಗೆ ಲಕ್ಷ್ಮೀಸಮೇತಗೆ ವಿಹಂಗ ವಾಹನಗೆ ಅಂಗಜನಪಿತಗೆ ಅಂಗುಟದಿ ಗಂಗೆಯನು ಪಡೆದವಗೆ ಮಾ ತಂಗವರದಗೆ ಪ ವಾರಿಜಾಸನ ಮುಖ್ಯಸುರನುತಗೆ ಉ- ದಾರ ಚರಿತಗೆ ಸೇರಿದವರಘದೂರ ಮಾಡುವಗೆ ಕಾರ್ಪರ ಋಷಿಗೆ ಘೋರ ತಪಸಿಗೆ ಒಲಿದು ಬಂದವಗೆ ಅಶ್ವತ್ಥ ರೂಪಗೆ 1 ಕುಕ್ಷಿಯೊಳು ಜಗವಿಟ್ಟು ರಕ್ಷಿಪಗೆ ಕರುಣಾಕ- ಟಾಕ್ಷಗೆ ವಕ್ಷದೊಳು ಶ್ರೀ ವತ್ಸಲಾಂಛನಗೆ ದ್ರೌಪದಿ ದೇವಿಗೆ ಅಕ್ಷಯಾಂಬರವಿತ್ತು ಸಲಹಿದಗೆ ಲಕ್ಷ್ಮೀನೃಸಿಂಹಗೆ 2 ಕೃಷ್ಣವೇಣಿ ತಟವಿರಾಜಿತಗೆ ಸೃಷ್ಟ್ಯಾದಿ ಕರ್ತಗೆ ಶ್ರೇಷ್ಠತರು ಪಿಪ್ಪಲದಿ ಪ್ರಕಟಿತಗೆ ದುಷ್ಟನಿಗ್ರಹಗೆ ದ್ಯಷ್ಟ ಬಾಹುಗಳಿಂದ ಭಜಕರಿಗೆ ಇಷ್ಟಾರ್ಥಗರಿವಗೆ 3 ಹಿಂದೆ ಗೋರೂಪದಲಿ ಬಂದವಗೆ ಬಹುಸುಂದರಾಂಗಗೆ ವಂದಿಸುವೆ ಶೀ ವೇಂಕಟೇಶನಿಗೆ ಮಂದರೋದ್ಧರಗೆ ಭವ ಬಂಧ ಬಿಡಿಸುವಗೆ ಆನಂದವೀವಗೆ 4 ತರುಳ ಪ್ರಹ್ಲಾದನ್ನ ಕಾಯ್ದವಗೆ ಸುರಸಾರ್ವಭೌಮಗೆ ಶರಣು ಜನ ಮಂದಾರನೆನಿಸುವಗೆ ಭೂಸುರರ ಪೊರಿವಗೆ ಧರಣಿಯೊಳು ಕಾರ್ಪರ ಸುಮಂದಿರಗೆ ಶಿರಿನಾರಶಿಂಹಗೆ 5
--------------
ಕಾರ್ಪರ ನರಹರಿದಾಸರು
ಮಂಗಳಂ ನರಹರಿಗೆ ಜಯ ಜಯ ಮಂಗಳ ಮುರಹರಗೆ ಪ ಮಂಗಳ ಮದನಗೋಪಾಲ ಶ್ರೀಕೃಷ್ಣಗೆ ಮಂಗಳ ಮಾಧವಗೆ ಅ.ಪ ವಸುದೇವ ಸುತನಾಗಿ ಗೋಕುಲದೊಳು ಮೊಸರು ಬೆಣ್ಣೆಯ ಕದ್ದು ಶಶಿಮುಖಿಯರ ಕೂಡಿ ನಿಶಿರಾತ್ರಿಯಲಿ ರಾಸ ಕ್ರೀಡೆಯಾಡಿದ ಹರಿಗೆ 1 ನಳಿನಮುಖಿಯರೆಲ್ಲ ನೀರೊಳಗಾಡಿ ಬಳಲಿ ಮೇಲಕೆ ಬರಲು ಲಲನೆಯರ ಕಂಡು ಪರಿಹಾಸ್ಯ ಮಾಡಿದ ಚೆಲುವ ಗೋಪಾಲಕೃಷ್ಣಗೆ2 ಬೆಟ್ಟವ ಬೆರಳಿನಲಿ ಎತ್ತಿದ ಭಕ್ತವತ್ಸಲ ಹರಿಗೆ ಮಿತ್ರೆಯರಿಗೆ ಮೊಸರು ಬುತ್ತಿಯ ಭುಕ್ತಿಯನೆವದಲಿ ಮುಕ್ತಿ ತೋರಿದ ದೊರೆಗೆ 3 ಪುಟ್ಟಬಾಲಕನಾಗಿ ಗೋವ್ಗಳನೆಲ್ಲ ಅಟ್ಟಿಯ ಮನೆಗೆ ಪೋಗಿ ದುಷ್ಟ ಕಾಳಿಂಗನ ಮೆಟ್ಟಿ ತುಳಿದ ಹರಿಗೆ ರತ್ನದಾರತಿ ಎತ್ತಿರೆ 4 ಕೊಂದು ಕಂಸನÀ ಬೇಗ ಮಧುರೆಲಿ ನಿಂತ ಮಹಾನುಭಾವಗೆ ತಂದೆ ಶ್ರೀ ಕಮಲನಾಭವಿಠ್ಠಲಗೆ ಕುಂದಣದಾರತಿಯ 5
--------------
ನಿಡಗುರುಕಿ ಜೀವೂಬಾಯಿ
ಮಂಗಳ ಪಾಡಿರೆ ಭಾವೆಯರೇ ರಂಗನ ರಮಣಿಯ ಭಾವಿಸಿರೇ ಪ ಅಂಗಜಜನನಿಯ ಕೃಪೆಯಿ ಸ- ತ್ಸಂಗತಿ ಪಡೆದೆವು ನಿಶ್ಚಯಂಅ.ಪ ಭೋಗವತೀಪತಿಶಾಯಿಯೊಳು ಅನು ರಾಗಗೊಂಡಿಹ ದೇವಿಯಿವಳ್ ಭಾಗ್ಯಲಕ್ಷ್ಮಿಯ ಪಾದದೊಳು ಬಾಗುತ ಶಿರವನು ರಾಗದೊಳು 1 ವೇದಸಾರದ ವಾಕ್ಯದಲಿ ಮಾಧವಿಯಂ ಸ್ತುತಿ ಮಾಡುತಲಿ ಭೇದವೆಣಿಸದೆ ಸಲಹೆನ್ನುತಲಿ ಮಾಧವನಂ ಕೊಂಡಾಡುತಲಿ 2 ತಾಪತ್ರಯಗಳ ಪರಿಹರಿಸಿ ಆಪತ್ತುಗಳಿಂದುದ್ಧರಿಸಿ ಕಾಪಾಡುವಳಿವಳೆಂದೆನಿಸಿ ಶ್ರೀಪದ್ಮಿನಿಯನು ಸಂಸ್ಮರಿಸಿ 3 ಶರಣಾಗತ ಸಂರಕ್ಷಕಿಗೆ ವರಶೇಷಗಿರಿನಿಲಯನಿಗೆ ಕರುಣಾರೂಪಿಣಿ ಪದ್ಮಿನಿಗೆ ಕರಗಳ ಮುಗಿಯುತೆ ಮಾಧವಿಗೆ 4
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ಮಂಗಳಂ ತುಲಸಿದೇವಿಗೆ ಪ ಮಂಗಳಂ ರಂಗನ ಅರ್ಧಾಂಗಿಗೆ ಮಾಧವ ಮಂಗಳ ಭಕ್ತರ ಸಲಹುವ ತಾಯಿಗೆ ಮಂಗಳ ಮಹಿಷಾಸುರಮರ್ದಿನಿಗೆ 1 ಮಂಗಳ ಮಂದಾರ ವನವಾಸಿಗೆ ಶರಧಿ ಉದ್ಭವಳಿಗೆ ಮಂಗಳ ರಾಮದಾಸಗಭಯವಿತ್ತವಳಿಗೆ ಮಂಗಳ ಸಂಜೆಯೊಳ್ ಪೂಜೆಗೊಂಬುವಳಿಗೆ 2 ಮಂಗಳ ನಾರದನುತ ಅಂಬೆಗೆ ಮಂಗಳ ಸೇವಿತ ಸುರ ಸಮುದಾಯಗಳಿಗೆ ಮಂಗಳ ಮನೋಭೀಷ್ಟದಾಯಕಳಿಗೆ ಮಂಗಳ ಹರಿದ್ರಾ ಕುಂಕುಮನಿಡುವಳಿಗೆ 3 ಮಂಗಳ ಕೃಷ್ಣನ ಅಂತಸ್ಥಿತಳಿಗೆ ಮಂಗಳ ಜಗನ್ಮೋಹನ ದೇವಿಗೆ ಮಂಗಳ ಹಾಟಕ ಸಮಕಾಂತ್ಯಾವಳಿಗೆ ಮಂಗಳ ಬೃಂದಾವನ ದೇವಿಗೆ 4 ಕಮಲ ಲೋಚನದೇವಿಗೆ ಮಂಗಳ ಪೀತಾಂಬರಧಾರಿ ಸುಂದರಿಗೆ ಮಂಗಳ ಸರ್ವಾಭರಣ ಭೂಷಿತಳಿಗೆ ಮಂಗಳ ವಿಜಯ ರಾಮಚಂದ್ರವಿಠಲನ ರಾಣಿಗೆ 5
--------------
ವಿಜಯ ರಾಮಚಂದ್ರವಿಠಲ