ಒಟ್ಟು 3655 ಕಡೆಗಳಲ್ಲಿ , 116 ದಾಸರು , 2523 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ನಾರು ಕೃಷ್ಣಗೆ ಮಂಗಳ ಜಗವಮನ್ನಿಸಿದೊಡೆಯಗೆಮಂಗಳ ಪ.ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆಕಮ್ಮಗೋಲನಯ್ಯಗೆ ಮಂಗಳ ||ಧರ್ಮಸಂರಕ್ಷಗೆ ದಾನವ ಶಿಕ್ಷಗೆನಮ್ಮ ರಕ್ಷಕನಿಗೆ ಮಂಗಳ 1ತುರುಗಳ ಕಾಯ್ದಗೆ ಕರುಣಾಕರನಿಗೆಗಿರಿಯನೆತ್ತಿದನಿಗೆ ಮಂಗಳ ||ಪುರದ ತಿಮ್ಮಪ್ಪಗೆ ವಾರಿಜನಾಭಗೆಹರಿರ್ವೋತ್ತಮನಿಗೆ ಮಂಗಳ 2ದೇವಕಿ ದೇವಿಯ ತನಯಗೆ ಮಂಗಳದೇವ ತಿಮ್ಮಪ್ಪಗೆ ಮಂಗಳ ||ಮಾವನ ಕೊಂದು ಮಲ್ಲರ ಮಡುಹಿದಪುರಂದರವಿಠಲಗೆ ಮಂಗಳ 3
--------------
ಪುರಂದರದಾಸರು
ಮರವನೇರಿ ಮಡುವದು ಮುಂದಾ ಶ್ರೀ ಕೃಷ್ಣ ಕಾಳಿಶಿರವನೇರಿ ತಾಂಡವವಾಡಿದಾಸ್ಮರಿಸಲವನ ತರುಣಿಯರಿಗೆ ವರವ ಪ್ರಾಣವಿರಿಸಿ ಕೊಟ್ಟುಶಿರದಿಚರಣಗುರುತನಿರಿಸಿ ಪೊರೆದ ಕಾಳಿಂಗನನು ಕೃಷ್ಣ 1ರಜತಗಿರಿಗೆ ಸದೃಶವೆನಿಸಿದ ಶ್ರೀಕೃಷ್ಣ ಯಮ-ಳಾರ್ಜುನವೆಂಬ ಮರವ ಕೆಡಹಿದಅಜಗರನ ನಿಜ ಉರಕೆ ಬಿಜಯಂಗೈದು ಸುಜನೋದ್ಭಾರಿಭಜಿಸೆ ಗೋವ್ರಜವ ಕಾಯ್ದ ಅಜಗರನ ಸೀಳಿ ಕೃಷ್ಣ 2ಚಂದ್ರಮುಖಿಯರುಡುವ ಶೀರೆಯ ಶ್ರೀಕೃಷ್ಣನು ಮರದಿಬಂಧಿಸಿಟ್ಟು ಮಾನಗಳೆವೆಯಾನಂದನನ್ನು ಬಂದು ತುಡುಕಿದಂದು ಫಣಿಯ ಹೊಂದಿಸಿದೆನಂದಗೋಪಿ ಕಂದ ಗೋವಿಂದದಾಸವಂದ್ಯ 3
--------------
ಗೋವಿಂದದಾಸ
ಮರೆತನೇನೇ ರಂಗ ಸ್ತ್ರೀಯರಸುರತದ ಸುಖಸಂಗ ಪಪರಿಪರಿ ವಿಧದಲಿ ಸರಸವನಾಡುತಗುರುಕುಚ ಎದೆಗಿರಿಸಿ ಮುದ್ದಿಸುವುದ ಅ.ಪಗೋವರ್ಧನವೆತ್ತಿ ವನದೊಳುಗೋವ್ಗಳೊಡನೆ ಸುತ್ತಿಹಾವನು ಭಂಗಿಸಿ ಮಾವನ ಮರ್ದಿಸಿಕಾಯದಿ ಘನತರ ನೋವಾಗಿದೆಯೆಂದು 1ಭಕ್ತ ಜನರಿಗೊಲಿದು ದೈತ್ಯರಶಕ್ತಿಯಿಂದಲಿ ಗೆಲಿದುಭಕ್ತರಂದದಿ ವೀರಕ್ತಿಯ ತಳೆದನೆನಕ್ತ ನಡತೆಗೆನ್ನ ಶಕ್ತಿ ಕುಂದಿಹುದೆಂದೂ 2ಎಣಿಕೆಯಿಲ್ಲದ ನಾರೀ ಜನರೊಳುಸೆಣಸಿ ರಮಿಸಿದಶೌರಿದಣಿದು ಮನದಿ ಗೋವಿಂದನ ದಾಸರಮನೆಯ ಸೇರ್ದನೆ ಮ£ÀುªÀುಥನನು ಜರೆಯುತ 3
--------------
ಗೋವಿಂದದಾಸ
ಮರೆತೆಯೇನೋ ರಂಗ-ಮಂಗಳಾಂಗ ಪಕೋಲು ಕೈಯಲಿ ಕೊಳಲು, ಜೋಲುಗಂಬಳಿ ಹೆಗಲ |ಮೇಲೆ ಕಲ್ಲಿಯ ಚೀಲ ಕಂಕುಳಲಿ ||ಕಾಲಿಗೆ ಕಡಗವು ಕಾಯುತ ಹಸು ಹಿಂಡ |ಬಾಲಕರ ಮೇಳದಿ ಇದ್ದೆಯೊ ರಂಗ 1ಕಲ್ಲುಮಣಿ ಕವಡಿ ಚೆನ್ನೆ ಗುಳ್ಳೆಗುಂಜಿ ಒಡವೆ |ಎಲ್ಲವು ನಿನ್ನ ಸರ್ವಾಂಗದಲಿ ||ಅಲ್ಲಲ್ಲಿಗಳವಟ್ಟು ನವಿಲುಗರಿಯ ದಂಡೆ |ಗೊಲ್ಲ ಮಕ್ಕಳ ಕೂಡೆ ಸಲ್ಲಾಪವಾಡುತೆ 2ಸಿರಿದೇವಿ ಬಂದು ಸೇರಿದ ಬಳಿಕ ಲೋಕದೊಳಗೆ |ಸಿರಿಯರಸನೆಂಬುವರು ||ವರಮುಖ್ಯ ಪ್ರಾಣವಂದಿತ ಉಡುಪಿಯ |ಸಿರಿಪುರಂದರವಿಠಲ ಶ್ರೀ ಕೃಷ್ಣ* 3
--------------
ಪುರಂದರದಾಸರು
ಮರೆಯದಿರು ಶ್ರೀ ಹರಿಯನು ಪ.ಮರೆಯದಿರು ಶ್ರೀ ಹರಿಯ ಮರಣಾತುರದಿ ಮಗನಕರೆದವಗೆ ಸಾಯುಜ್ಯವಿತ್ತ ನಾರಾಯಣನಸ್ಮರಣೆಯನು ಮಾಡುವರಚರಣ ಸೇವಕರಿಂಗೆಪರಮಪದವೀವ ಹರಿಯಅಪದೇವಕಿಯ ಬಂಧುವನು ಪರಿದವನ ಪೂತನಿಯಜೀವರಸವೀಂಟಿದನ ಮಾವನನು ಮಡುಹಿದನಪಾವನ ತರಂಗಿಣಿಯ ಪದನಖದಿ ಪಡೆದವನಗೋವರ್ಧನೋದ್ಧಾರನ ||ದಾವಾನಲನ ಪಿಡಿದು ನುಂಗಿದನ ಲೀಲೆಯಲಿಗೋವತ್ಸ ಗೋಪಾಲ ರೂಪವನು ತಾಳ್ದವನದೇವಮುನಿ ಮುಖ್ಯ ಸುರರಾರಾಧಿಸುವನ ಶ್ರೀ ಪಾದವನುಭಜಿಸು ಮನವೆ 1ಕಂಜಸಂಭವಪಿತನ ಕರುಣಾಪಯೋನಿಧಿಯಕುಂಜರನ ನುಡಿಕೇಳಿ ಒದಗಿದನ ರಣದೊಳು ಧ-ನಂಜಯನ ಜೀವವಂ ಕೃಪೆಯಿಂದ ಕಾಯ್ದವನಆಂಜನೇಯನ ನಾಳ್ದನ ||ರಂಜಿಸುವ ಕೌಸ್ತುಭವಿಭೂಷಣನ ಜಲಧಿಯಲಿನಂಜಿನೊಡೆಯನ ಮೇಲೆ ಮಲಗಿದನ ತಮದೊಳಗೆ ಪ -ರಂಜ್ಯೋತಿಮಯನಾಗಿ ಬೆಳಗುವನಶ್ರೀ ಚರಣಕಂಜವಂ ಭಜಿಸು ಮನವೆ 2ವಾರಿಧಿಯೊಳಾಡಿದನ ವರಗಿರಿಯ ತಾಳಿದನಧಾರಿಣಿಯ ತಂದವನ ದೈತ್ಯನನು ಕೊಂದವನಮೂರಡಿಯಲಳೆದವನ ಮೊನೆಗೊಡಲಿ ಪಿಡಿದವನ ನೀರಧಿಯಬಂಧಿಸಿದನ||ದ್ವಾರಕೆಯನಾಳ್ದವನ ತ್ರಿಪುರಗಳ ಜಗುಳ್ದವನಚಾರುಹಯವೇರಿದನ ಸಕಲ ಸುಜನರ ಪೊರೆವಧೀರ ಪುರಂದರವಿಠಲನ ಚರಣಕಮಲವನುನಂಬಿ ನೀ ಭಜಿಸು ಮನವೇ 3
--------------
ಪುರಂದರದಾಸರು
ಮಹಾದೇವ ಶಿತಿಕಂಠ ದಾಸ ಕಲ್ಪಮಹೀಜ ಬಿನ್ನವಿಪೆ ನಿರ್ದೋಷ ||ಆಹಾ ||ಕುಹಕಾರಿ ಹರಿಪಾದ ಮಹಿಮೆ ಕೊಂಡಾಡಿಸೊ |ಗಹನವಿಕ್ರಮಭೀಮ ಮಹೀಧರಪ ಜಾಧವ ಪಸ್ಫಟಿಕಾಭ ಶ್ರೀಕಂಠ ದಕ್ಷ ಧ್ವಂಸಿ |ನಿಟಿಲಲೋಚನ ಸುರಪಕ್ಷ ಹೇ || ಧೂ |ರ್ಜಟ ಹೀನ ವಿಷಯಾಖ್ಯ ಕಕ್ಷವಹ್ನಿ|ಕುಟಿಲತ್ವ ಬಿಡಿಸತಿ ದಕ್ಷ ||ಆಹಾ||ಕಠಿಣ ಸಂಸಾರದಿತ್ರುಟಿಮಾತ್ರ ಸುಖ ಕಾಣೆ |ವಟುರೂಪಿ ಭಕುತರ ಕಟಕದೊಳಿರಿಸೆನ್ನ1ಇಳಿರಥ ನಗಶರಸೋಮಮೌಳಿ|ನಳನಂದಿನಿಪ ಸುತ ರಾಮ ನಾಮಾ |ನಲಿದು ಪಾಡುವ ಗುಣಧಾಮ ರೌಪ್ಯಾ |ಬಲಾವಾಸಾನಂಗ ವಿರಾಮಾ ||ಆಹಾ||ಹಲವರಾಶ್ರಯಿಸಿ ನಾ ಬಲು ನೊಂದೆನೋರ್ವರು ಕಾಯ್ವ |ಸುಳಿವು ಕಾಣೆನೋ ಹೇ ಗರಳಕಂಠ ಪೊರೆಯೆನ್ನ 2ಪಂಚ ಸುಸ್ಮಿತ ಯುಕ್ತ ವದನಾ ನಿಷ್ಪ್ರ |ಪಂಚ ಗಜಾಸುರ ಹನನಾ ಏಕಪಂಚಾಸ್ಯ ಜನಕ ಕೇಶವನಾ ಪ್ರೀತಿ |ಮಂಚ ನೀನಾಹೆ ಖಳರನಾ ||ಆಹಾ||ಹಿಂಚಾಗಿ ಅಳಿವಂಥ ಹಂಚಿಕೆಯಲಿವರ|ಮುಂಚೆ ಕರೆದು ಕೊಟ್ಟು ವಂಚಿಪೆ ಅತ್ರಿಜ 3ಅಹಂಕಾರಾಧೀಶ ನಭೇಶತಾತ|ಮಹಾ ಮುನಿ ವಂದ್ಯಾಮರಾಸ್ಯ ಚಂದ್ರ |ದಿನಪತೇಕ್ಷಣನೆ ಅಶೇಷಾಮೋದ|ಬಹುಮೋದಸಕ್ತಾಯನ್ನಾಶಾ ||ಆಹಾ||ದಹಿಸೊಜಠರಪೋಷ ವಹಿಸಿ ಬೆಂಡಾದೆನೊ |ಅಹಿಮಲಾಂಧಕಾಸುರ ಗುಹಹ ಅಶ್ವತ್ಥಾಮ 4ಶಕ್ರಾವರಜ ಶ್ರೀ ಪ್ರಾಣೇಶ ವಿಠ್ಠಲ |ನಕ್ರಾಹನಂಘ್ರಿಯನಿಶದಲ್ಲಿ |ವಕ್ರವಿಲ್ಲದೆ ಸೇವಿಪೀಶ ಹೇ ತ್ರಿ- |ವಿಕ್ರಮಕರವ್ಯೋಮಕೇಶ||ಆಹಾ||ಶುಕ್ರಪೂಜಿತಪಾದಅಕ್ರೂರಯನ್ನೊಳಿ |ದ್ದ ಕ್ರಮವೆಣಿಸದೆ ಸುಕೃತವೊದಗಿಸೊ5
--------------
ಪ್ರಾಣೇಶದಾಸರು
ಮಾನಭಂಗವಮಾರಿ ಮೇಲುಪಚಾರವ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರಿಲ್ಲಿ ಇರಬಾರದಯ್ಯ ಪ.ಕುಂದುಗಳನಾಡಿ ಕುಚೋದ್ಯಗಳನೆ ಮಾಡಿಕಂದ ಬಾಯೆಂದು ಬಣ್ಣಿಸಿ ಕರೆಯಲುಹಿಂದೆ ಮುಮ್ಮೊಳೆಯಿಟ್ಟು ಮುಂದೆ ಬಣ್ಣಿಸಿ ಕರೆದುಮುಂದಲೆಯನು ಕೊಯ್ದು ಮಂಡೆಗೆ ಹೂವ ಮುಡಿಸಿದಂತೆ 1ನಗಗೇಡಿ ಮಾಡಿ ನಾಲುವರೊಳಗೆ ಕೈಯಮುಗಿವೆ ಬಾಯೆಂದು ಬಣ್ಣಿಸಿ ಕರೆಯಲುಮಿಗಿಲಾದ ವಸ್ತ್ರಭೂಷಣವಿತ್ತು ಮನ್ನಿಸಲುತುದಿಮೂಗ ಕೊಯ್ದು ಚಿನ್ನದ ಮೂಗನಿಟ್ಟಂತೆ 2ಆರ್ಥ ಹೋದರು ಪ್ರಾಣ ಹೋದರೂಮಾನವ್ಯರ್ಥವಾಗದ ಹಾಗೆ ಕಾಯಬೇಕುಕರ್ತೃ ಶ್ರೀಹರಿ ನಮ್ಮ ಪುರಂದರವಿಠಲನಭಕ್ತರಿಲ್ಲದ ಸ್ಥಳ ಬಿಡಬೇಕು ಹರಿಯೆ 3
--------------
ಪುರಂದರದಾಸರು
ಮಾಯಾಮಯ ಜಗವೆಲ್ಲ ಇದ-ರಾಯತ ತಿಳಿದವರಿಲ್ಲ ಪ.ಕಾಯದಿಂ ಜೀವನಿಕಾಯವ ಬಂಧಿಸೆನೋಯಿಸುವಳು ಸುಳ್ಳಲ್ಲ ಅ.ಪ.ತಿಳಿದು ತಿಳಿಯದಂತೆ ಮಾಡಿ ಹೊರ-ಒಳಗಿರುವಳು ನಲಿದಾಡಿಹಲವು ಹಂಬಲವ ಮನದೊಳು ಪುಟ್ಟಿಸೆನೆಲೆಗೆಡಿಸುವಳೊಡಗೂಡಿ 1ಯೋಷಿದ್ರೂಪವೆ ಮುಖ್ಯ ಅ-ಲ್ಪಾಸೆಗೆ ಗೈವಳು ಸಖ್ಯದೋಷದಿ ಪುಣ್ಯದವಾಸನೆತೋರ್ಪಳುಜೈಸಲಾರಿಂದಶಕ್ಯ 2ಕರ್ತಲಕ್ಷ್ಮೀನಾರಾಯಣನಭೃತ್ಯರ ಕಂಡರೆ ದೂರಚಿತ್ಪ್ರಕೃತಿಯಿಂದ ಪ್ರೇರಿತಳಾಗಿ ಪ-ರಾರ್ಥಕೆ ಕೊಡಳು ವಿಚಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಯಿ ಬಗಳಾಂಬ ಸತ್ಯ ಬ್ರಹ್ಮ ರುದ್ರರತಾಯಿ ನಿಜ ಮುಕ್ತಿ ದಾಯಿ ನಂಬಿದವರತಾಯಿ ಈ ಅಜಾಂಡಾನಂತ ಕೋಟಿಯನುಕಾಯ್ವ ಕೊಲ್ವ ತಾಯಿಪಹೆಚ್ಚೇ ಕೋಪವು ಅವಡುಗಚ್ಚೆ ಕೇವಲರೌದ್ರಮುಚ್ಚೆ ಖಡ್ಗವ ಒರೆಯಿಂ ಬಿಚ್ಚೆ ಶತ್ರುಗಳೆದೆಬಚ್ಚೆ ಸಚ್ಚರಿತಳು ತಾ ಸವರಿಯೆ ರಿಪುಗಳನುನುಚ್ಚು ನುಚ್ಚನೆ ಮಾಡಿ ನಲಿವಅಂಬ1ಬಿಗಿದೆ ಬತ್ತಳಿಕೆಯಿಂದಲುಗಿದೆ ಶರವನೆ ಕೆನ್ನೆಗೆತೆಗೆದೆ ಬಿಡಲಿಕೆ ತಟ್ಟುಗಿದೆ ಪ್ರಾಣಗಳೆಲ್ಲವ ಮುಗಿಸಿದೆತೆಗೆದಸುರರ ತೆಕ್ಕೆಯಲಪ್ಸರೆಯರುನೆಗೆ ನೆಗೆದು ಹಾರಲು ನಸುನಗುವಅಂಬ2ತ್ಯಾಗಿ ಸರ್ವಸಾಮ್ರಾಜ್ಯಭೋಗಿಅಮಿತ್ರರೆಂಬರನೀಗಿಸರ್ವ ಶಾಂತಿಯದಾಗಿ ಭಕ್ತರ ಭಯ ಹೋಗಿಯೋಗಿಎನಿಪ ಚಿದಾನಂದ ಬಗಳೆನೀಗಿದಳೀಪರಿ ದ್ವೇಷಿಗಳೆಂಬರ3
--------------
ಚಿದಾನಂದ ಅವಧೂತರು
ಮಾಯೆಎನ್ನ ಕಾಯವನ್ನುಪಾಯದಿಂದ ಮೋಹಿಸಿ |ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಪಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ |ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು ||ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು |ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ 1ಎಲವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು |ಒಳಗೆ ರಕ್ತದಿಂದ ಮೆತ್ತಿ ಹೊಸೆ ಪಾಪದಿಂದ ನಿಂದೆ ||ನೆಲೆಯ ಮನೆಯ ಮಾಡಿ ಚರ್ಮಹೊಲಿzಯ ಹೊದಿಕೆ ಹೊದಿಸಿದಂಥ |ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ 2ಎನ್ನ ಸತಿಯು ಎನ್ನ ಸುತರು ಎನ್ನ ಬಂಧು - ಬಳಗವು |ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು ||ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ |ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ 3ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ |ಹರಿದು ಪಾಪಕರ್ಮದಿಂದೆ ತೊಪಳಲಿಬಳಲಿ ನೊಂದೆ ನಾ ||ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ |ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ 4ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ |ಅಕ್ಷಯ- ಅನಂತ ನನ್ನನೇಕೆ ಹೊರಗೆ ಮಾಡಿದೆ ||ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು |ರಕ್ಷಿಸಯ್ಯ ಲಕ್ಷೀಪತಿಪುರಂದರವಿಠಲನೆ5
--------------
ಪುರಂದರದಾಸರು
ಮುತ್ತು ಬಂದಿದೆ ಕೇರಿಗೆ ಜನರುಕೇಳಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಮುತ್ತು ಬಂದಿದೆ ಪ.ಭಕ್ತಿಯುಳ್ಳವರೆಲ್ಲ ಕಟ್ಟಿಕೊಳ್ಳಿ ಸೆರಗಿನಲ್ಲಿ ಅಪಥಳಥಳಿಸುವ ಮುತ್ತುಕಮಲ ನೇತ್ರದ ಮುತ್ತುಕಲುಷ ಪರ್ವತಕ್ಕಿದು ಕಲಶವಾಗಿಪ್ಪ ಮುತ್ತುಹಲಧರಾನುಜವೆಂಬ ಪವಿತ್ರ ನಾಮದ ಮುತ್ತುಒಲಿದು ಭಜಿಪರಭವತರಿದು ಕಾಯುವ ಮುತ್ತು1ಅಂಜದಿದ್ದವರಿಗೆ ಅಂಜಿಕೆ ತೋರುವ ಮುತ್ತುಭಂಜಿಸದ ಇತರ ಭಯವ ತೋರುವ ಮುತ್ತುಸಂಜೀವರಾಯ ಹೃದಯದೊಳಗಿಹ ಮುತ್ತು------------------------ 2ಜಾÕನವೆಂಬೊ ದಾರದಲ್ಲಿ ಪೋಣಿಸಿ ನೋಡುವ ಮುತ್ತುಜಾÕನಿಗಳ ಮನದಲ್ಲಿ ಮೆರೆವ ಮುತ್ತುಆನಂದ ತೀರ್ಥರ ಮನದಲ್ಲೊಪ್ಪುವ ಮುತ್ತುಶ್ರೀನಿಧಿ ಪುರಂದರವಿಠಲನೆಂಬೋ ಆಣಿಯ ಮುತ್ತು * 3
--------------
ಪುರಂದರದಾಸರು
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು
ಮೋಸ ಹೋದೆನಲ್ಲ - ಸಕಲವು-|ವಾಸುದೇವಬಲ್ಲಪಭಾಸುರಂಗ ಶ್ರೀ ವಾಸುಕಿಶಯನನ |ಸಾಸಿರ ನಾಮವ ಲೇಸಾಗಿ ಪಠಿಸದೆ ಅ.ಪದುಷ್ಟಜನರ ಕೂಡಿ - ನಾನತಿ-|ಭ್ರಷ್ಟನಾದೆ ನೋಡಿ ||ಸೃಷ್ಟಿಗೊಡೆಯ ಮುರ-ಮುಷ್ಟಿಕ ವೈರಿಯ |ದೃಷ್ಠಿಯಿಂದ ನಾ ನಿಟ್ಟಿಸಿ ನೋಡದೆ 1ಕಾಯವು ಸ್ಥಿರವಲ್ಲ-ಎನ್ನೊಳು-|ಮಾಯೆತುಂಬಿತಲ್ಲ ||ಪ್ರಾಯ ಮದದಿ ಪರಸ್ತ್ರೀಯರ ಕೂಡುತೆ |ಕಾಯಜಜನಕನ ಧ್ಯಾನವ ಮಾಡದೆ2ಕಂಗಳಿಂದಲಿ ನೋಡೊ-ದೇವಾನಿ-|ನ್ನಂಗ ಸಂಗವ ನೀಡೋ ||ಮಂಗಳ ಮಹಿಮ ಶ್ರೀ ಪುರಂದರವಿಠಲ ನಿ-|ನ್ನಂಗದೊಳಿರುವಂತೆ ದಯವನು ಮಾಡೊ 3
--------------
ಪುರಂದರದಾಸರು
ಮೋಸ ಹೋದೆನಲ್ಲ -ವಿಠಲ- ಮೋಸ ಹೋದೆನಲ್ಲಾ ಪಆಸೆಬಿಟ್ಟು ಹಂಬಲಿಸಿ |ಹೇಸಿ ನರಕದೊಳಗೆ ಸಿಲುಕಿ ಅ.ಪಪುಷ್ಪ ಶ್ರೀ ತುಳಸಿಯನ್ನು |ಒಪ್ಪದಿಂದ ಮನೆಗೆ ತಂದು ||ಅಪ್ಪ ಕೃಷ್ಣನ ಪೂಜೆಯ ಮಾಡಿ - ಮೇ-|ಲಿಪ್ಪ ಲೋಕದ ಸೂರೆಗೊಳದೆ 1ಕಾಯದಾಸೆಗೆ ಕಂಡುದ ಬಯಸಿ |ನಾಯಿಯಂತೆ ಮನೆಮನೆ ತಿರುಗಿ ||ಮಾಯಾಪಾಶದೋಳಗೆ ಸಿಲುಕಿ |ಜೀಯನಿನ್ನನು ಧ್ಯಾನಿಸಲರಿಯದೆ2ಸತಿಸುತರು- ಪಿತೃ-ಬಾಂಧವರು |ಪಥವ ತೋರಿಸಬಲ್ಲರೆ ಇವರು ||ಗತಿನೀನೇಪುರಂದರವಿಠಲ |ಹಿತವ ತಾಯಿ ತಂದೆ ನೀನು 3
--------------
ಪುರಂದರದಾಸರು
ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು