ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೇಳ ಸುಲಭವೆ ಜಗದಿ ಕಾಲಮಹಿಮೆಯ ನಮ್ಮ ಮೂಲ ಪುರುಷನ ದಿವ್ಯ ಲೀಲೆಯಲ್ಲವೆ ಎಲ್ಲ ಅ.ಪ ಮುಂದೆ ಸ್ತುತಿಪರು ಜನರು ಹಿಂದೆ ಜರಿವರು ಬಹಳ ತಂದೆ ಬಡವನ ನೀನ್ಯಾರೆಂದು ಕೇಳ್ವರು ಮನದಿ 1 ನೀಚಕೃತ್ಯವ ಮನದಿ ಯೋಚಿಸುತ್ತಲಿ ಸತತ ನಾಚಿಕೆಯನು ಪೊಂದದೆಲೆ ಯಾಚಿಸುವರು ದ್ರವ್ಯವನು 2 ಸತಿಯರೆಲ್ಲರು ಶುದ್ಧಮತಿಯ ತೊರೆಯುತ ತಮ್ಮ ಪತಿಯ ಜರಿವರು ಮುದದಿ ಇತರರನ್ನು ಕೋರುವರು 3 ಕಾಲ ಕಳೆದು ಖ್ಯಾತಿ ಪಡೆವರು ಬಹಳ ಸೋತು ತಮ್ಮ ದ್ರವ್ಯಗಳ ಪಾತಕಗಳ ಮಾಡುವರು4 ಸ್ನಾನ ಜಪತಪ ಪೂಜೆ ಏನನರಿಯರು ದುಷ್ಟ ಪಾನಗಳನು ಸೇವಿಸುತ ಮಾನ ದೂರ ಮಾಡುವರು 5 ಹರಿಯ ಮಹಿಮೆಗಳನ್ನು ಅರಿಯದಂತೆ ಸಂತತವು ಧರೆಯ ದುಷ್ಟ ಭೋಗದಲಿ ಕುರಿಗಳಂತೆ ಬೀಳುವರು 6 ಘನ್ನ ಧರ್ಮಗಳೆಲ್ಲ ಶೂನ್ಯವಾಗಿರೆ ಸುಪ್ರ ಸನ್ನ ಹರಿಯ ಸೇವಕರು ಇನ್ನು ಇರುವುದಚ್ಚರಿಯು7
--------------
ವಿದ್ಯಾಪ್ರಸನ್ನತೀರ್ಥರು
ಪೇಳಲೇನು ವಿಧಿಯ ಲೀಲೆಯ ಮಹಿಮೆ ಪ ವ್ಯಾಳಶಯನನ ಸಂಕಲ್ಪದಂತಿಹುದು ಅ.ಪ. ಮೂರ್ತಿ ನೋಡುವ ಕಂಗಳು ಅಂಗನೆಯರ ರೂಪ ನೋಡಲೆಳಸಿದವು 1 ಶ್ರೀ ರಮಣನ ಕಥೆ ಕೇಳುವ ಕರ್ಣಗಳು ವಾರನಾರಿಯರ ವಾರ್ತೆಗೆ ಸೋತವು 2 ಮಂಧರಧರನ ನಿರ್ಮಾಲ್ಯವನೊಲ್ಲದೆ ಸುಂದರಿಯರ ಮೈ ಗಂಧ ಬಯಸಿತು ಘ್ರಾಣ 3 ಹರಿಯ ಪ್ರಸಾದವು ಭುಜಿಸದೆ ಜಿಹ್ವೆಯು ಪರಮ ನಿಷಿದ್ಧ ಪಾನ ಭೋಜನ ಬಯಸಿತು 4 ರಂಗನ ಭಕ್ತರ ಸಂಗವ ಬಿಟ್ಟು ಸ್ಪರ್ಶ ಅಂಗನೆಯ ದೇಹಾಲಿಂಗನ ಬಯಸಿತು 5 ಶ್ರೀನಿಕೇತನ ನಾಮ ನುಡಿಯುವ ನಾಲಿಗೆ ದೀನ ಕಾಮಾತುರ ನುಡಿಯಲಿ ನಲಿಯಿತು 6 ಪಾದ ಸ್ಮರಣೆಯ ಬಿಟ್ಟಾ ಮನ ತರುಣಿಯರು ಸದಾ ನೆನೆಸಿತು ಅಕಟಾ 7
--------------
ವರಾವಾಣಿರಾಮರಾಯದಾಸರು
ಪೇಳಿದರೆ ತಿಳಿಯುವುದೆ ಮಾಯಮೋಹಿಗಳಿಗೆ ನೀಲಶ್ಯಾಮನ ದಿವ್ಯಗೂಢದಿಹಮಹಿಮೆ ಪ ಬಂಜೆಗ್ಹೊಳೆವುದೆ ಪ್ರಸೂತಿವೇದನೆ ಸುದ್ದಿ ಸಂಜೀವನ ಮಹಿಮೆ ತಿಪ್ಪೆ ತೃಣಕೆ ತಿಳಿಯುವುದೆ ಅಂಜುಬುರುಕಗ್ವೀರತ್ವ ಸಾರಸವಿದೋರುವುದೆ ವಂಜಗೊಳುಪಾಗುವುದೆ ಹರಿಭಕ್ತಿಸಾರ 1 ನಾಗನ್ಹೆಡೆಯೆತ್ತಾಡಲಮೇಧ್ಯಜಂತರಿಯುವುದೆ ಕೋಗಿಲೆಯು ಕೂಗಲು ಕಾಗೆ ತಿಳಿಯುವುದೆ ಗೂಗೆಗ್ಹೇಳಲು ಅರುಣಪ್ರಭೆ ನೋಡಬಲ್ಲುದೆ ಭಾಗವತರ ನಡೆ ಭವರೋಗಿಗ್ಹೊಳಪಹ್ಯದೆ 2 ರಾಜ್ಯದಾಡಳಿತವನು ಚಾಂಡಾಳ ತಿಳಿಯುವನೆ ತೇಜಿಯ ಮಹಯೋಗ ಪಾಜಿಗ್ಹುಟ್ವುದೆ ಭೋಜನದ ಸವಿಸಾರ ರೋಗಿಗ್ಹೇಳಲು ಫಲವೆ ರಾಜಿಪ ಪರಲೋಕ ಕುಜನರರಿಯುವರೆ 3 ಹೀನನಿಗತಿ ತಿಳಿಯುವುದೆ ಜ್ಞಾನಬೋಧಾಮೃತ ಶ್ವಾನನಿಗೆ ಸೇರುವುದೆ ರಾಗ ಸುಖಸ್ವಾದ ಕೋಣಗ್ಹೊಳೆವುದೆ ವೇಣು ಮೃದಂಗ ಸುಖವಾದ್ಯ ಧ್ಯಾನಮಹಿಮೆಯ ಫಲವು ಭವಿಗೆ ತಿಳಿಬಲ್ಲುದೆ 4 ನೇಮದೊರುಷವು ಸುರಿಯೆ ಕಲ್ಲು ನೀರು ಕುಡಿಯುವುದೆ ಕಾಮಿಗಳಗನುಭವದ ಹಾದಿ ತಿಳಿ ಬಲ್ಲುದೆ ಪಾಮರಧಮರಿಗಿಲ್ಲ ದೀನಜನನಾಥ ಶ್ರೀ ರಾಮನಡಿ ನಿಜಭಕ್ತಿ ಸಾಧ್ಯವಾಗುವುದೆ 5
--------------
ರಾಮದಾಸರು
ಪೇಳುವೆ ಮನವೆ ನಿನಗೊಂದು ಕುಳಿತು ಲಾಲಿಪುದು ಮುಕ್ತಿಗೆ ಹಾದಿ ಎಂದು ಪ ಹರಿಯ ಚರಣಾಬ್ಜ್ಬಕೆ ಎರಗು ಬಡ ವರನ ಕಂಡರೆ ಅಕಟಾ ಎಂದು ಮರಗು ಹರಿ ಭಕುತಿಗೆ ನೀನೆ ಕರಗು ಇಹ ಪರದಲ್ಲಿ ಉತ್ತಮ ಯೆಂದೆನಿಸಿ ತಿರುಗು 1 ಅಹಂಕಾರ ಮಮಕಾರ ಬಿಟ್ಟು ಅಂಬು ರುಹಲೋಚನನ ಸುಮತವನ್ನೆ ತೊಟ್ಟು ಕುಹಕ ಮತಿಗಳನ್ನು ಬಿಟ್ಟು ಗುರು ದ್ರೋಹಿಗಳಾದವರ ಹೃದಯವÀ ಮೆಟ್ಟು 2 ಅಲ್ಪ ಬುದ್ಧಿಗಳನ್ನು ಮಾಣು ಒಂದು ಸ್ವಲ್ಪವಾದರು ಜ್ಞಾನದ ಮಾರ್ಗ ಕಾಣು ಬಲ್ಪಂಥದಲಿ ಬಾಹದೇನು ಬಿಡು ಅಲ್ಪಗಳ ಸಂಗ ಎಂದು ಸಾರಿದೆನು 3 ಸ್ವಾಮಿಯ ಪಾದವ ನೋಡು ನಿನ್ನ ಕಾಮ ಕ್ರೋಧಗಳೆಲ್ಲ ಕಳೆದು ಈಡಾಡು ನಾಮ ಕೀರ್ತನೆಗಳನ್ನು ಪಾಡು ತ್ರಿ ಧಾಮದೊಳಗೆ ಒಂದು ಇಂಬನೆ ಬೇಡು 4 ಎಚ್ಚತ್ತು ತಿಳಿದುಕೋ ಸೊಲ್ಲಾ ನಾನು ಮುಚ್ಚುಮೊರಿಲ್ಲದೆ ಪೇಳಿದೆನಲ್ಲಾ ಅಚ್ಚುತ ವಿಜಯವಿಠ್ಠಲನಲ್ಲದಿಲ್ಲ 5
--------------
ವಿಜಯದಾಸ
ಪೊಗಳಲರಿಯೆನೆ ಲೋಕಮಾತೇ ನಿನ್ನ ಸೊಗಸಾದ ರೂಪುರೇಖೆಯ ಸಿಂಧುಜಾತೇ ನಿಗಮವಿಖ್ಯಾತೇ ಪ ಅಳಕ ನಿಚಯವು ಇಂದ್ರನೀಲಗಳು ತುಂಬಿಗಳು ತಳಪುಗಳು ಯೆಸೆವ ನಳಿನಗಳು ಬಾಳೆಗಳು ಚೆಲುವಹಿ ಸುನಾಸಿಕವು ಅಲಕೆ ಸುಮವು ಚಂಪಕವು ಅಲರ್ವಿಲ್ಲಿನ ಧನುವೋ ಪುರ್ಬುಗಳೋ ಪೊಳೆವರದನದಸಾಲುಗಳುಕಳಸಗಳೋ ಕುಂಡಲಗಳೋ ವಿಲಸದಧರವು ಬಿಂಬಫಲವೋ ನವವಿದ್ರುಮವೋ ಅಳವಟ್ಟ ಸವಿನುಡಿಯು ಗಿಣಿಯ ಸೋಲಿಪ ಪರಿಯೋ ಕಳೆ ಪೆರ್ಚಿದಾನನವೋ ಶಶಿಯೋ ಭಳಿರೆ ಮಳಯಜಗಂಧಿನಿ ಮಹೇಶರಿಪು ಜನನೀ 1 ಗಳವು ಶಂಖವು ಮೆರೆವ ಕದಪುಗಳು ಮುಖರಗಳು ಕುಸುಮ ಮಾಲೆಗಳು ಸುಲಲಿತವಯವವೋ ಲತಾವಳಿಗಳ ತರಂಗವೋ ತಳಿವ ಪೂಜಡೆಯೋ ಸುಲಿಪಲ್ಲವವೋ ತೊಳಗುವ ತೊಡೆಯೆನಲೋ ಸಲಿಲಜಾಗಾರೇ ಸಮ್ಮೋಹನಾಕಾರೇ ಸೌಂದರ್ಯಭರಿತೆ 2 ವರಜಂಘೆಗಳು ಪಂಚಶರನ ಶರಧಿಗಳೋ ಸರಸೀರುಹ ಕೆಂದಳಿರೋ ಚರಣಗಳು ನಖಗಳು ಸುರುಚಿರಾಂಬಕೀ ದಯಾಕಾರೇ ಶುಭಚರಿತೆ ವಿಖ್ಯಾತೆ ಪುರಹರ ಸುರೇಶ್ವರ ಸುಪೂಜಿತಾಂಘ್ರಿಸರೋಜೇ ಭಕ್ತ ಮಂದಾರೇ ವರವೇಲಾನಗರವಾಸಿ ವೈಕುಂಠಚನ್ನಿಗರಾಯನರಸಿ ಗುಣರಾಸಿ ದುರಿತಾಸಿ ನಮೋ ಪರಮಪದದಾಯಕಿಯೆ ಸೌಮ್ಯನಾಯಕಿಯೆ 3
--------------
ಬೇಲೂರು ವೈಕುಂಠದಾಸರು
ಪೊಡವಿ ಪತಿಯೇ ನಿನ್ನಾ ಅಡಿಗಳಿಗೆರಗುವೆ ತಡೆಯಲಾರೆನೋ ಈ ಕಡುತಾಪದಿಂದೆನ್ನ ಕಡೆಗ್ಹಾಯಿಸೆನ್ನ ಶ್ರೀ ರಾಘವಾ ಪ ಧರಣೀಶ ನಿನ್ನ ಚರಣವೇ ಗತಿ ಎಂದು ಸ್ಮರಿಸುತ್ತಲಿರುವೆನೋ ರಾಘವಾ ಸ್ಥಿರ ಭಕುತಿಯ ನಿನ್ನೊಳಿರಿಸಿ ಸತ್ವರದಿಂದ ಕರುಣಿಸಿ ಸಲಹೈಯಾ ರಾಘವಾ 1 ಪುಟ್ಟಿದುದಕೆ ನೀ ಹೊಟ್ಟೆಗೆ ಸಾಕಷ್ಟು ಕೊಟ್ಟು ಕಾಪಾಡೊ ಶ್ರೀ ರಾಘವಾ ಇಟ್ಟು ತವ ಸ್ಮರಣೆಯ ಕೊಟ್ಟೆನ್ನ ಪುಷ್ಟವ ಮಾಡೋ ಶ್ರೀ ರಾಘವಾ 2 ತನು ಧನ ನೀನೆ ಜನನಿ ಜನಕನು ನೀನೆ ವನಿತೆ ಸುತರು ನೀನೆ ರಾಘವಾ ಹನುಮೇಶ ವಿಠಲನೆ ದಿನಗಳೆಯದೇ ತ್ವರ ಮನದಘ ಬಿಡಿಸೋ ಶ್ರೀ ರಾಘವಾ 3
--------------
ಹನುಮೇಶವಿಠಲ
ಪೊಡೆದಾ ದೈವವೇ | ಅವರೆ ಕುಸುಮ ವಿರಚೇ ಶಿವ ದೀಪದಿಂವೆಗ್ಗಳವೇನೊ ನಿನಗೆ | 1 ಶಿರವನೆ ತರಿಸಿ ತೊಲಗಿದ ಪದಾರ್ಥದಿಂದೇನಯ್ಯಾ | ಹಂಸ ಕು ಬೇರ ನಿನ್ನವರಾಗಿದೆ | ಬರಿದೆಯಲಾ ಯೆನ್ನ ಸುವರ್ಣ ಪುಷ್ಪವೆ | ಪರಿಪರಿಗಾಯನ ನಾರದಾದ್ಯರು ಪಾಡೆ ಪೊಗಳಬಲ್ಲನೆ ನಿನ್ನನಗಣಿತ ಸ್ತೋ ನಿನಗೆರಗಿ ಕೈಮುಗಿವೆನೊ ತರಳತನದಲ್ಲಿ ನಾನು2
--------------
ವಿಜಯದಾಸ
ಪೊಂದಿ ಪ್ರಾರ್ಥಪೆನಯ್ಯಾ ಪ. ಬಂಧನದೊಳು ನೊಂದೆನಯ್ಯ ಮುಂದೆ ಸನ್ಮಾರ್ಗತೋರಿಸು ಜೀಯಾ | ಎನ್ನ ಕುಂದುಗಳೆಣಿಸದಿರಯ್ಯಾ ಗುರು ಗಂಧವಾಹನ ವಜ್ರಕಾಯಾ ಅ.ಪ ನಾನು ನನ್ನದು ಎಂಬ ಮದ ಬಿಡಿಸೊ ಜ್ಞಾನ ಭಕ್ತಿ ವಿರಕ್ತಿ ಕೊಡಿಸೊ ಜಾನಕಿಪತಿ ಪದದಿ ಮನ ನಿಲಿಸೊ ಸಾನುರಾಗದಿ ಸತತ ಉದ್ಧರಿಸೊ 1 ನಿನ್ನ ದಯದಿಂ ರವಿಜ ಭಯ ಕಳೆದಾ ನಿನ್ನ ವಲಿಮೆಲಿ ಪಾರ್ಥ ಜಯ ಪಡೆದಾ ನಿನ್ನ ನಂಬದೆ ರಾವಣನು ತಾ ಮಡಿದಾ2 ಶ್ರೀಮದಾನಂದತೀರ್ಥ ಮಧ್ವೇಶಾ ಶಾಮಸುಂದರ ಸ್ವಾಮಿ ನಿಜದಾಸಾ ಕಾವಿತಾರ್ಥಗಳಿತ್ತು ಪೊರೆ ಅನಿ ಶಾ 3
--------------
ಶಾಮಸುಂದರ ವಿಠಲ
ಪೊರಿಯ ಬೇಕೆಲಾ |ಮರಿ ನೀನು ಛಲಾ ಪ ಏಸು ಜನ್ಮದಿ ನಿನ್ನ ದಾಸನೆನಿಸಿದೆ | ಉ |ದಾಸ ಮಾಡದೆ ಮಹಿದಾಸ ಎನ್ನನು ನೀ 1 ನಿನ್ನನೆ ಮರೆವುದು ಎನ್ನ ಸ್ವಧರ್ಮವು |ನಿನ್ನ ಘನ್ನತಿಗಿದು ಸನ್ನು ಮತವೆ ಹರಿ 2 ಸರುವಜ್ಞ ನೀನೆಂದೂ ಒರೆದವು ಶೃತಿಗಳು |ಮರೆವುದುಚಿತವೇನೊ ಗುರು ಪ್ರಾಣೇಶ ವಿಠಲಾ 3
--------------
ಗುರುಪ್ರಾಣೇಶವಿಠಲರು
ಪೊರಿಯದಲಿರುವರೇನು ಶ್ರೀಹರಿ ನೀನು ಪ ನಿರುತ ನಿನ್ನನಾನು ಸ್ಮರಿಸುತಲಿರುವೆನು ಕೌಸ್ತುಭ ಭೂಷಾ ಹರುಷದಿ ಮಂಜುಭಾಷಾ 1 ಭವಾರ್ಣವ ಪಾರಗಾಣಿಸೋ ದೇವಾ ಸಾರಸದಲನೇತ್ರ ನೀರದ ನಿಭಗಾತ್ರ 2 ದಿನಕರ ಕೋಟಿ ತೇಜ ಘನ ಗರುಡಧ್ವಜ ವನಧಿ ಕನ್ಯಾಧವ 3 ವರಗಿರಿಧರ ಕರುಣಾಕರ ಶುಭವದನ ಶರಣರ ಕಾಯುವಂತಹ ಬಿರುದು ನಿನ್ನದೊ ಅನಂತ 4 ಪರಮ ಪಾವನನಾದ ತರುಳ ಪ್ರಹ್ಲಾದಗೊಲಿದ ನರಹರಿ `ಹೆನ್ನೆಯ ಪುರನಿಲಯ ಪ್ರಮೇಯ 5
--------------
ಹೆನ್ನೆರಂಗದಾಸರು
ಪೊರೆದ್ಯಾಕೋ ಸೀತಾನಾಥ ತಂದೆ ಮಂದರಧರ ಎನ್ನೊಳ್ದಯ ಮಾಡಲೊಲ್ಲ್ಯಾಕೋ ಸೀತಾನಾಥ ಪ ಕರಿರಾಜ ನಿಮ್ಮಯ ಚರಣ ಸರೋಜಕ್ಕೆ ಸೀತಾನಾಥ ಹರಿ ಬರೆದೋಲೆ ನಿನ್ನನು ಕರೆಕಳುಹಿದನೇನೊ ಸೀತಾನಾಥ ತರುಣಿ ದ್ರೌಪದಿ ತನ್ನ ಅವಮಾನಕಾಲಕ್ಕೆ ಸೀತಾನಾಥ ಸಿರಿವರ ನಿನ್ನ್ವೊಯ್ಕುಂಠಕೆ ತಾರು ಕೊಟ್ಟಿರ್ದಳೇ ಸೀತಾನಾಥ 1 ಕಂಬದಿ ಬಾರೆಂದಂಬುಧಿಗೆ ಬಂದ್ಹೇಳ್ದನೇ ಸೀತಾನಾಥ ಡೊಂಬೆ ಮಾಡುವ ದೂರ್ವಾಸಮುನಿಯಂದು ಸೀತಾನಾಥ ನಿನ್ನ ಬೆಂಬಲಿಟ್ಟು ಅಂಬರೀಷ ವ್ರತಗೈದನೇ ಸೀತಾನಾಥ 2 ವರಧ್ರುವ ಧರೆಯೊಳು ಜನಿಸುವ ಕಾಲಕ್ಕೆ ಸೀತಾನಾಥ ದೇವ ಕರವ ಪಿಡಿದು ನಿಮ್ಮ ಜೊತೆಲಿ ಕರೆತಂದನೇ ಸೀತಾನಾಥ ಪರಮಪಾಪಿ ಅಜಮಿಳನಗೆ ಪದವಿಯು ಸೀತಾನಾಥ ದೇವ ಕರುಣಿಸಿದವನಿನಗೆ ನೆರವಾಗಿರ್ದನೇನೊ ಸೀತಾನಾಥ 3 ಛಲದ ರಾವಣನಳಿದು ವರವಿಭೀಷಣನಿಗೆ ಸೀತಾನಾಥ ಲಂಕ ಕರುಣಿಸಿ (ದಿವೈಕುಂ) ಠ ಬಾಗಿಲೊಳಿರ್ದನೇ ಸೀತಾನಾಥ ಸೀತಾನಾಥ ಅವ ಇಳೆಯೊಳು ನಿಮಗೆ ಪಕ್ಷದ ಗೆಳೆಯನೆ ಸೀತಾನಾಥ 4 ಹಿಂದಿನ ಹಿರಿಯರವರನು ದುರಿತದಿಂ ಸಲಹಿದಿ ಸೀತಾನಾಥ ಇದು ಚೆಂದವೆ ನಿನಗೆ ಕಂದನ ಬಿಡುವುದು ಸೀತಾನಾಥ ಕಂಟಕ ಬೇಗ ಬಯಲ್ಹರಿಸಯ್ಯ ಸೀತಾನಾಥ ರಂಗ ಸಿಂಧುಶಯನ ಮಮ ತಂದೆಯೇ ಶ್ರೀರಾಮ ಸೀತಾನಾಥ 5
--------------
ರಾಮದಾಸರು
ಪೊರೆಯದಿರುವರೇ _ ಶ್ರೀ ರಮಣಾ ಪ ದುರಿತಗಜಕೆ ನೀ ಪಂಚಾನನಾ ಅ.ಪ. ಸಿರಿಯ ಮದದಿ ನಾನರಿಯದೆ ಪೋದರೆ ಗರುಡಗಮನ ನೀ ಮರೆತುಬಿಡುವರೇ ಕರುಣಶರಧಿ ಸರಿ ಬಿರುದು ಪೊಳ್ಳಾಗದೇ ಚರಣಪಿಡಿವೆ ಪೊರೆ ಮರುತನೊಡೆಯ ಹರಿ1 ಪಾತಕಿ ಎಂಬುವ ನೀತಿಯನುಡಿದೊಡೆ ಪೂತರಮಾಡುವ ಖ್ಯಾತಿಯ ಬಿಡುವೆಯ ನಾಥನೆ ನಂಬಿದೆ ಕಾತರ ಪಡುತಿಹೆ ಪ್ರೀತಿಲಿ ಕಾಣಿಸು ಆರ್ತಿವಿದೂರ 2 ನಡಿಯುವ ಚರಣವು ಎಡುವುದು ಸಹಜವೆ ಮೃಡ ಭೃಗು ಭೀಷ್ಮರು ದುಡುಕಲಿಲ್ಲೆ ದೊರೆ ಮಿಡಕಿ ನಡುಗುತಿಹೆ ನಡೆವುದು ಜಗಬಿಡೆ ಕಡಲಶಯನ ಪಿಡಿ ಬಿಡದೆ ಕೊಡುತ ರತಿ 3 ಸಿರಿವಿಧಿ ಶಿವನುತ ಸ್ವರತ ಸ್ವತಂತ್ರನೆ ಶರಣರ ಪೊರೆಯುವ ವರಗುಣ ಭೂಷಣ ಅರಿಯೆನುಪಾಯವ ಶರಣುಶರಣೈಯ ಪರಮಪುರುಷ ಭಗಸರಸದಿ ನಲಿನಲಿ 4 ಸಾಕುವ ಬಿಂಬನೆ ನೂಕಿದೆ ಯಾತಕೆ ಹಾಕುತ ಮಂಕನು ಏಕಾಯತನ ನಾಕರೊಡೆಯ ಭವನೂಕುತ ಬೇಗನೆ ಸ್ವೀಕರಿಸೆನ್ನನು ಶ್ರೀ ಕೃಷ್ಣವಿಠಲಾ 5
--------------
ಕೃಷ್ಣವಿಠಲದಾಸರು
ಪೊರೆಯಮ್ಮ ವಾಣಿ ತರುಣಿ ವಿಧಿರಾಣಿ ರಮಣಿ ಪ. ಸರಸ್ವತಿ ನಿನ್ನನೇ ನೆರೆ ಭಜಿಸುತ್ತಿಹ ಅರಿಯದೀ ತರಳರಂ ಕರುಣದೊಳೀಕ್ಷಿಸು 1 ದೇವಿ ನಿನ್ನಿಂದ ಲೇ ಜೀವಕೋಟಿಗಳಿಂತು ಜೀವಿಪುದಾರೆಯೆ ದೇವಿ ಸಂಜೀವಿನಿ 2 ಜ್ಞಾನಾಧಿದೇವತೆ ಆನಂದಪ್ರದಾತೆ ಮುನಿಜನ ಸಂಸ್ತುತೆ ವನಜಜದಯಿತೇ 3 ಸದಯ ನೀಂ ದಯೆಗೈಯೆ ಸದಸದ್ವಿಚಾರಮಂ ಹೃದಯ ಸಂಶುದ್ಧಿಯಂ ಪದುಳಮಂ ಧೈರ್ಯಮಂ4 ದೇಶಸೇವೆಗೆಂದು ಆಶಿಪರೊಳಿಂದು ಶೇಷಗಿರೀಶನ ದಾಸರೆನಿಸೆಂದು 5
--------------
ನಂಜನಗೂಡು ತಿರುಮಲಾಂಬಾ
ಪೊರೆಯಲಿದು ಸಮಯ ಗೋವಿಂದ ದೇವ ಶರಣರಕ್ಷಕ ನೆಂಬ ಬಿರುದು ಮೆರೆದ ಮುಕುಂದ ಪ ಬಂಧನದ ಭವದೊಳಗೆ ನಾನೊಂದು ದಿನ ಸುಖವನರಿಯೆ ಮಂದ ಮತಿಯಲಿ ತೊಳಲಿ ಕಂದಿಕುಂದಿ ಮುಂದು ಗಾಣದೆ ಯಮನ ಬಂಧದೊಳು ಸಿಲುಕಿದನು ಮಂಧರಧರ ಕರುಣಸಿಂಧು ನೀ ಬಂದು 1 ಘೋರ ತಾಪವು ಬಂದು ಸಾರಿ ಎನ್ನನು ಮುಸುಕೆ ಭೋರ ನುರಿಯಲಿ ಬಳಲಿ ಚೀರಿಹಾರಿ ದುರಿತ ವಾರಿಧಿಯೋಳ್ ಬಿದ್ದು ಬಾಯಾರಿ ಮೊರೆಯಿಡುವೆ ನರಕಾರಿ ದಯತೋರಿ 2 ತಂಡತಂಡದಿ ವೈರಿಗಳು ಕೂಡಿ ಕಾಯದೊಳು ಅಂಡುಗೊಂಡೆನ್ನಳೆದು ತಂದು ಕೊಂಡು ಹಿಂಡು ಖಂಡವನು ಸುಟ್ಟುರುವಿ ನುಂಗುವರೆನುತ ಕಂಡು ಕೊಂಡಾನು ಸಾರಿದೆನಿಂದು ಬಂದು 3 ತರಳತನ ದಾಯಸದÀಲಿ ನೊಂದೆ ಮುನ್ನಬಲು ತರುಣಿಯರ ಸಂಗದಲಿ ಮರುಳಾದೆನು ಜರೆಬಂದು ಮುಸುಕಿ ಕಣ್ಗಾದೀ ಪರಿಯಭವ ಶರಧಿಯೊಳು ಮುಳುಗಿ ಮೊರೆಯಿಡುವ ಚಿನ್ಮಯನೆ 4 ಹಿಂಗದಿದು ಭಯವ ಪೇಳಲು ತೀರದೆನಗೆ ಶ್ರೀ ರಂಗನಿನ್ನಧೀನ ಜನವರಿಯಲೂ ಮಂಗಳಾತ್ಮಕ ವಾಯುಜನ ಕೋಣೆ ಲಕ್ಷ್ಮೀಶ ನಿನ್ನ ಡಿಂಗರಿಗನ ಕಾಯ್ವುದೀಗ ಸಮಯ ಕೃಪಾಳೋ 5
--------------
ಕವಿ ಪರಮದೇವದಾಸರು
ಪೊರೆಯುವಳು ದೇವಿ ಪೊರೆಯುವಳು|| ಕರುಣದಿಂದ ನಮ್ಮ ಪೊರೆಯುವಳು ಪ ಶರಣರಿಗೊಲಿದವರಿಷ್ಟವ ಸಲಿಸುವ| ಪರಮಪಾವನೆ ದೇವಿ ಪೊರೆಯುವಳು ಅ ಪ ತೋಷದಿಂದಲವಳಾಶ್ರಿತ ಜನರಭಿ| ಲಾಷೆಯ ಸಲಿಸುತ ಪೊರೆಯುವಳು|| ವಾಸವಾದಿ ಸುರವಂದಿತೆ ಶ್ರೀ ಪರ| ಮೇಶ್ವರಿದೇವಿಯು ಪೊರೆಯುವಳು 1 ಮಹಿಷಾಸುರನನು ಮಹಿಯೊಳು ಕೆಡಹಿದ| ಮಹಿಷಮರ್ದಿನಿದೇವಿ ಪೊರೆಯುವಳು|| ಮಹಿಮೆಯದೋರುತ ಖಳ ಧೂಮ್ರಾಕ್ಷನ| ದಹಿಸುತ ಮಹಿಯನು ಪೊರೆದವಳು 2 ಚಂಡ ಮುಂಡ ಖಳ ತಂಡವಳಿಸಿ ಬ್ರ | ಹ್ಮಾಂಡದ ಭಾರವ ಕಳೆದವಳು|| ರುಂಡವ ತರಿಯುತ ಚೆಂಡಾಡಿದ ಶ್ರೀ| ಚಾಮುಂಡೇಶ್ವರಿ ಪೊರೆಯುವಳು 3 ಭಕ್ತರ ಪೊರೆಯಲು ರಕ್ತಬೀಜಾಖ್ಯನ| ರಕ್ತ ಪಾನÀವನು ಗೈದವಳು|| ಯುಕ್ತಿಯಿಂದಲಾ ನಕ್ತಂಚರನನು| ಶಕ್ತಿಸ್ವರೂಪಿಣಿ ತರಿದವಳು 4 ಶುಂಭ ನಿಶುಂಭರ ವಧಿಸಿದ ಶ್ರೀ ಜಗ| ದಂಬಾದೇವಿಯು ಪೊರೆಯುವಳು|| ಅಂಬುಜಲೋಚನೆ ಶಂಭುಮನೋಹರೆ | ಇಂಬುಗೊಡುತ ನಮ್ಮ ಪೊರೆಯುವಳು 5 ದುರುಳರ ಬಾಧೆಗೆ ಬೆದರುತ ಸುರತತಿ | ಮೊರೆಯಿಡಲಭಯವನಿತ್ತವಳು|| ಅರುಣಾಸುರನ ಸಂಹರಿಸುತ ನಂದಿನಿ| ನದಿಯೊಳು ಶರಣರಿಗೊಲಿದವಳು 6 ಪರಿಪರಿ ವಿಧದಲಿ ಧರಣಿಯ ಭಾರವ ಪರಿಹರಿಸುತಲಿ ಪೊರೆದವಳು|| ಪರಮಕೃಪಾಕರಿ ಶ್ರೀ ಜಗದೀಶ್ವರಿ ಶರಣರಾದ ನಮ್ಮ ಪೊರೆಯುವಳು 7 ಶಂಕರಿ ಶುಭಕರಿ ಕಿಂಕರಪ್ರಿಯಕರಿ|| ಪಂಕಜಲೋಚನೆ ಪೊರೆಯುವಳು|| ಶಂಖಚಕ್ರಾಂಕಿತೆ ಶ್ರೀ ದುರ್ಗಾಂಬಿಕೆ| ಕಿಂಕರರೆಮ್ಮನು ಪೊರೆಯುವಳು 8 ಕೈಟಭಾದಿ ಖಳಸಂಕುಲವಳಿಸಿದ| ನಿಟಿಲಾಂಬಕಿ ಶಿವೆ ಪೊರೆಯುವಳು|| ಜಟಾಮಕುಟ ಸುರತಟನೀಧರಸತಿ| ಕಟಿಲಪುರೇಶ್ವರಿ ಪೊರೆಯುವಳು9
--------------
ವೆಂಕಟ್‍ರಾವ್