ಒಟ್ಟು 4058 ಕಡೆಗಳಲ್ಲಿ , 131 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಂಗಾಪಿತ ವೆಂಕಟ ಪರ್ವತನಿಲಯಕೌಸಲ್ಯತನಯಾ |ಮಂಗಳವಲ್ಲಭಭವಕರಕರೆಯ ಪರಿಹರಿಪುದು ತ್ವರಿಯಾ |ಅಂಗಜಜನಕನೆ ಸಂಗರಹಿತ ಸತ್ಸಂಗ ಕೃಪಾಬ್ಧಿ ವಿಹಂಗವಾಹನನೇ ಪಸ್ವಾಮಿಲಾಲಿಸುಯನ್ನಯ ಮನದುಸರ ನೀನಲ್ಲದಿತರರ |ಭೂಮಿಯೊಳ್ಕಾಣೆನೋ ಉದ್ಧರಿಸುವರನವನೀತಚೋರ |ಸಾಮಜದ್ರೌಪದಿ ಆ ಮುಚುಕುಂದ ಸುಧಾಮರ ಪೊರೆದ ತ್ರಿಧಾಮ ಮಹಾತ್ಮ 1ವಾಸುಕೀ ಶಯನ ದಯಾ ಸಂಪನ್ನ ನಾರಾಯಣ ನಿನ್ನ |ದಾಸರೊಳಗಾಡಿಸೊ ಸದ್ಗುಣ ಪೂರ್ಣ ಸಾರ್ವರಿಗೆ ಪ್ರಸನ್ನ |ಈಸಲಾರೆ ಈ ಸಂಸಾರಶರಧಿಕೈ ಸೋತಿತೆಲೋ ಪರಾಶರ ತನಯ 2ನಿತ್ಯಾನಂದ ನಿಗಮೋದ್ಧಾರ ಪೂತನೀ ಸಂಹಾರ |ಮೃತ್ಯುಂಜಯಸಖರವಿದರ ಗದಾಧರ ಸುಖಪಾರಾವಾರ|ಭೃತ್ಯವತ್ಸಲ ಸುರೋತ್ತಮ ಪಾರ್ಥನ ತೊತ್ತಿಗನಾದಿ ಸುಸತ್ಯ ಸಂಕಲ್ಪ ಗಂಗಾ3ಮಂದರಾಚಲ ಧರಿಸಿದ ಗೋವಿಂದ ಶ್ರೀ ಯಶೋದಾನಂದ |ನಂದನ ಶ್ರೀ ಕೇಶವ ಮುಕುಂದ ವಾಮನ ಸುಖಸಾಂದ್ರ |ತಂದೆ ಸಲಹೊ ನಿನ್ನ ಬಂಧಕ ಶಕುತಿಯಲಿಂದ ದಣಿಸದೆ ಅರಿಂದಮ ಪ್ರಭುವೇ 4ಅಂತರಂಗವ ಬಲ್ಲ ಮಧುದ್ವೇಷಿ ಯನ್ನಯ ಮನದಾಸೀ |ಅಂತು ಪೂರ್ತಿಸಿ ದುಷ್ಕರ್ಮದ ರಾಶಿ ಉಳಿಸದೆ ಪರಿಹರಿಸಿ |ಸಂತತ ಹೃದಯದಿ ನಿಂತು ಪೊಳೆವುದೋ ಅನಂತ ಮುರಾಂತಕ ಚಿಂತಾರಹಿತನೆ 5ಶಕ್ರವರಪೂಜಿತ ಬಲವಂತ ರುಕ್ಮಣೀಪತಿ ದಂತ |ವಕ್ತ್ರಾರಿ ಬಾಧಿಸದಂತೆಕೃತಾಂತಮಾಳ್ಪುದು ಕೆಡದಂಥ |ಸುಕೃತಪೀಡಿಸೋ ತ್ರಿವಿಕ್ರಮ ಮೂರುತಿ ಶುಕ್ರ ಯುಕ್ತಿ ಹರ ಅಕ್ರೂರ ವರದ 6ಕಂಕಾನುಜ ಮಂದಿರ ಪ್ರಾಣೇಶ ವಿಠಲ ಗೋಕುಲ ಗೋಪಾಲ |ಪಂಕಜಾಸನ ಜನಕ ಶಕಟಕಾಲಜಾಂಬವತೀಲೋಲ|ಶಂಕರಾದ್ಯಮರರ ಕಳಂಕೆಣಿಸದ ಗರುಡಾಂಕಉರಗಪರ್ಯಂಕ ಸುಖಾತ್ಮ 7
--------------
ಪ್ರಾಣೇಶದಾಸರು
ಗರುಡಗಮನಬಂದನೋ-ನೋಡಿರೊ ಬೇಗಗರುಡಗಮನಬಂದನೋಪಗರುಡಗಮನಬಂದ ಧರಣಿಯಿಂದೊಪ್ಪುತಕರೆದು ಬಾರೆನ್ನುತ ವರಗಳ ಬೀರುತ ಅ.ಪಎನ್ನ ರಕ್ಷಿಪ ದೊರೆ ಇಲ್ಲಿಗೆ ತಾ ಬಂದಚಿನ್ನದೊಲ್ ಪೊಳೆವವಿಹಂಗರಥದಲಿ ||ಘನ್ನ ಮಹಿಮ ಬಂದsಚ್ಛಿನ್ನ ಮೂರುತಿ ಬಂದಸಣ್ಣ ಕೃಷ್ಣನು ಬಂದ ಬೆಣ್ಣೆಗಳ್ಳನು ಬಂದ 1ಪಕ್ಷಿವಾಹನ ಬಂದ ಲಕ್ಷ್ಮೀಪತಿಯು ಬಂದಕುಕ್ಷಿಯೊಳೀರೇಳು ಜಗವನಿಟ್ಟವ ಬಂದ ||ಸೂಕ್ಷ್ಮ-ಸ್ಥೂಲದೊಳಗಿರುವನು ತಾ ಬಂದಸಾಕ್ಷೀ ಭೂತನಾದ ಸರ್ವೇಶ್ವರ ಬಂದ 2ತಂದೆಪುರಂದರವಿಠಲರಾಯ ಬಂದಬಂದುನಿಂದುನಲಿದಾಡುತಿಹ ||ಅಂದು ಸಾಂದೀಪನ ನಂದನನ ತಂದಿತ್ತಸಿಂಧುಶಯನ ಆನಂದ ಮೂರುತಿ ಬಂದ3
--------------
ಪುರಂದರದಾಸರು
ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ಗುರುವಿನ ಮರೆಯಾದಿರಮ್ಮ ಪಅಂಕಿತವನೆ ಇತ್ತಸಿರಿ ಗುರುವಿನ ನೀನುಮನದೊಳು ನೆನೆಯಬÉೀಕಮ್ಮ ತಂಗಿ ಅ.ಪಗುರುವಿನ ಮರೆತರೆ ನಿನಗೆ ಥರಥರ ನರಕಥರಥರನರಕವ ಅನುಭವಿಸಬೇಕಮ್ಮ ತಂಗೀ 1ಜ್ಞಾನಾನಂದಾತ್ಮಕನಾದ ಶ್ರೀಹರಿಯನ್ನುಗುರುವಿನದ್ವಾರಾ ನೀ ತಿಳಿ ಮಂಗಳಾಂಗಿ 2ಗುರುವೆ ತಂದೆಯು ಬಂಧು ಬಳಗಾವೆಂದು ಅಕ್ಕರೆಯಿಂದ ನೀ ನೆನೆಯಬೇಕಮ್ಮಾ 3ಗುರುವಿನ ಸೇವೆಯ ಮಾಡುತ್ತ ಗುರುಗಳಕೃಪೆಗೆ ಪಾತ್ರರಾಗಿ ಬಾಳಬೇಕಮ್ಮಾ 4ಮಂಗಳ ಮಹಿಮ ಶ್ರೀ ತಂದೆಮುದ್ದುಮೋಹನ್ನವಿಠಲ ದಾಸರೆನಿನಗೆ ಸದ್ಗುರು ಎಂದು ತಿಳಿಯಮ್ಮ ತಂಗಿಈ ಮಾತು ಪುಸಿಯಲ್ಲ ಮರೆಯಬೇಡಮ್ಮ ತಂಗೀ 5
--------------
ತಂದೆ ಮುದ್ದುಮೋಹನ ವಿಠಲರು
ಗುರುವೆ ಭಾರತಿನಾಥ | ಶರಣು ಲಾಲಿಸೋ ಮಾತ |ಹರಿಪದಾರ್ಚನೆ ಕೊಟ್ಟು ಪೊರೆಯೋ ದಯೆಯಿಟ್ಟು ಪರಾಮ ಸೇವಕನಾಗಿವಾನರಕಟಕನೆರಹಿ |ನೀಂ ಮುದದಿ ಲವಣಾಬ್ಧಿ ದಾಟಿ ಪೋಗಿ ||ಭೂಮಿ ತನುಜೆಳಿಗೆ ವಾರ್ತೆಯನೆ ಪೇಳಿ | ರಾಗಟಿಯಸ್ವಾಮಿಗರ್ಪಿಸಿದ ಬಲವಂತ ಹನುಮಂತ 1ರಾಜಸೂಯವ ಮಾಡುವದಕೆ ಮಾಗಧನ ಕೊಂದೆ |ಮಾಜಿಸಿದೆ ಕುರುಪತಿಯ ಸಂತತಿಯನು ||ಸೋಜಿಗವು ನಿನ್ನ ಲೀಲೆಯು ಆಯುಜಾತ ಬಿ |ಡೌಜ ರಕ್ಷಕ ದ್ರೌಪದೀಶ ಬಲವಂತ 2ಬುಧಮಧ್ಯಗೇಹನಲಿ ಅವತರಿಸಿ ಕುಮತಗಳ |ಬೆದರಿಸಿತ್ರಿದಶಸಪ್ತ ಗ್ರಂಥ ಮಾಡಿ ||ಸುದಯದಿಂದುತ್ತಮರಿಗಿತ್ತು ಮತವನು ನಿಲಿಸಿ |ಬದರಿಯೋಳ್ ಪ್ರಾಣೇಶ ವಿಠಲನಲ್ಲಿರುವೆ 3
--------------
ಪ್ರಾಣೇಶದಾಸರು
ಗೆದ್ದೆಯೊ ಹನುಮಂತಾ-ಅಸುರರಒದ್ದೆಯೊ ಬಲವಂತಾ ಪಬದ್ಧಾಂಜಲಿಯಿಂದ ರಘುಪತಿ ಪಾದವಹೃದ್ಯದಿ ಭಜನೆ ಮಾಡುವ ಬುದ್ಧಿವಂತ ಅ.ಪಅಂಜನಿಸುತನೀತ-ಲಂಕಾಪುರದಿ-ಅಕ್ಷಯನ ಕೊಂದಾತ ||ಕಂಜಾಕ್ಷಿ ಸೀತೆಯ ಕಂಡು ಮುದ್ರಿಕೆಯಿತ್ತು |ಮಂಜುಳವಾರೆಯ ತಂದ ರಾಮನ ದೂತ 1ಈರೇಳು ಜಗದೊಳಗೆ-ಇನ್ನು ಮತ್ತೆ ಯಾರು ಸರಿಯೊ ನಿನಗೆವೀರ ಮಹಾಬಲ ಶೂರ ಪರಾಕ್ರಮ |ಧೀರಸಮೀರಉದಾರ ಗಂಭೀರ2ವಾಂಛಿತಫಲವೀವ-ನಾದ ಮುಖ್ಯ- ಪ್ರಾಣ ಮಹಾನುಭಾವ ||ಕಿಂಚಿತ್ತು ಕಷ್ಟವ ಪಡಲೀಸ ಭಕ್ತರ್ಗೆ |ಪಾಂಚಜನ್ಯಪುರಂದರವಿಠಲದಾಸ3
--------------
ಪುರಂದರದಾಸರು
ಗೆಲಿಸು ಭವವಗುರುಹನುಮಂತಖಳಜಲಧಿ ವಡವಾನಳ ಬಲವಂತ ಪ.ದಾಶರಥಿüಯ ಪದವನೆ ನಂಬಿ ಇತರಾಶೆಯಿಲ್ಲದೆ ಭಕ್ತಿರಸತುಂಬಿತೋಷವೃತ್ತಿಗೆ ಕಡೆಮೊದಲಿಲ್ಲ ಕ್ಷುದ್ರದೇಶ ಕೋಶದೆಣಿಕೆ ನಿನಗಿಲ್ಲ 1ಅಂಧಕಾತ್ಮಜ ತೃಣಸುರಧೇನುಗೋವಿಂದಾಂಘ್ರಿಬಿಸಜಮಧುಪನೀನುಸಂಧಕಾಯನ ಸದೆದ್ಯೈ ದೇವ ದಯಾಸಿಂಧುವೈಷ್ಣವಜನ ಸಂಜೀವ2ಶ್ರೀ ಸತ್ಯವತಿಜನ ನೇಮದಲಿಹರಿದ್ವೇಷಿಗಳನು ಗೆದ್ದೆ ಭೂಮಿಯಲಿಶ್ರೀಸುಖತೀರ್ಥಭೀಮ ಕಪಿವರದ ಸ್ವಾಮಿಪ್ರಸನ್ನವೆಂಕಟೇಶ ಭೃತ್ಯಗಣಮುದದ 3
--------------
ಪ್ರಸನ್ನವೆಂಕಟದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಗೌರೀವರಶಿವ ನಮೋ ನಮೋ | ಶಿವ |ಗೌರೀವರ ಶಿವ ನಮೋ ನಮೋ |ಈಶಪರಾತ್ಪರದೋಷನಿವಾರ |ಕಾಶೀಪುರವರವಾಸ ವಿಶ್ವೇಶ್ವರ 1ಕರಿಚರ್ಮಾಂಬರ ಕರುಣಾಕರ |ಸ್ಮರಿಸಲು ಸರ್ವರದುರಿತನಿವಾರ 2ಭಸ್ಮಾಲೇಪನ ಶಶಿಶೇಖರವೃಷಭವಾಹನ ಸ್ಮಶಾನ ಸಂಚಾರ 3ಸುರ ಗಂಗಾಧರ | ನರರುಂಡಮಾಲಾ |ಕರದಿ ತ್ರಿಶೂಲವು ಉರಗಕುಂಡಲ 4ಜಟಾಮಕುಟ ನೀಲಕಂಠೇಶ್ವರಾ |ಅಡವಿಯೊಳ್ಕೈರಾತನಟನ ಶಂಕರ 5ಷಣ್ಮುಖ ಭೈರವ ಭೃಂಗಿ ಪ್ರಮಥ |ಗಣನಾಥ ವೀರಭದ್ರ | ನಂದಿವಂ ದಿತ 6ಮಂದರಧರಗೋವಿಂದನ ಸಖನೆ |ವಂದಿಪೆದಾಸನ ಪಾಲಿಸು ಶಿವನೆ 7
--------------
ಗೋವಿಂದದಾಸ
ಘಟಿಕಾಚಲದಿ ನಿಂತ-ಶ್ರೀ ಹನುಮಂತ ಪಘಟಿಕಾಚಲದಿ ನಿಂತ-ಪಟು ಹನುಮಂತ ತನ್ನಪಠನೆಯ ಮಾಡಲುತ್ಕಟದಿ ಪೊರೆವೆನೆಂದು ಅ.ಪಚತುರ ಯುಗದಿ ತಾನು-ಮುಖ್ಯ ಪ್ರಾಣ- ಚತುರ ಮುಖನಯ್ಯನ |ಚತುರಮೂರ್ತಿಗಳನು ಚತುರತನದಿ ಭಜಿಸಿ |ಚತುರ್ಮುಖವಾಣಿ ಜಗಕೆ ಚತುರ್ವಿಧ ಫಲವ ಕೊಡುತ 1ಸರಸಿಜಭವಗೋಸುಗ- ಕರ್ಮಠ ದೂಮವರಚಕ್ರತೀರ್ಥಸರ |ಮೆರೆವ ಛಲದಿನಿತ್ಯನರಹರಿಗೆದುರಾಗಿಸ್ಥಿರ ಯೋಗಾಸನದಲಿ ಕರೆದು ವರಗಳ ಕೊಡುತ 2ಶಂಖಚಕ್ರವ ಧರಿಸಿ-ಭಕ್ತರ ಮನಃ-ಪಂಕವ ಪರಿಹರಿಸಿ |ಪಂಕಜನಾಭಶ್ರೀ ಪುರಂದರವಿಠಲನ |ಬಿಂಕದ ಸೇವಕ ಸಂಕಟ ಕಳೆಯುತ 3
--------------
ಪುರಂದರದಾಸರು
ಚಂಚಲಿಸದಿರು ನೀನು ಚತುರನಾಗುವಂಚಿಸದೆ ಸಕಲವೊಪ್ಪಿಸು ಹರಿಗೆ ಮನವೆ ಪ.ಆರು ನಿನ್ನವರೆಂಬೆ ಅವರಗಲಿದರು ಕಡೆಗೆಭೂರಿಸಂಚಿತ ಸಂಪದೆರವಾಯಿತುಜಾರುತಿವೆ ಕ್ಷಣಲವಗಳೀಗಾಗೆ ತಿಳಿಯದುನಾರಸಿಂಹನ ನಂಬು ನಿಷ್ಠೆಯಲಿ ಮನವೆ 1ಅಲ್ಪಸುಖಕಾಗಿ ನೀ ಅನೇಕ ಸುಖ ಮರೆವರೆಕಲ್ಪಕಲ್ಪಕೆ ನಿರಯವುಣಲಿಬಹುದೆಅಲ್ಪರುಪದೇಶದಲಿ ಭ್ರಾಂತನಾಗದೆಶೇಷತಲ್ಪನ್ನ ಮರೆಹೋಗು ತಡೆಯದಲೆ ಮನವೆ 2ನಿನ್ನಿಂದಭವಬಂಧನವು ಮೋಚನವುನೋಡುನಿನ್ನಿಂದ ಪ್ರಸನ್ವೆಂಕಟೇಶನೊಲುಮೆಇನ್ನೆನ್ನ ದಣಿಸದಿರು ಇದರಿಂದ ಮೀರಿದರೆಘನ್ನಗುರು ಮಧ್ವೇಶನಾಣೆ ನಿನಗೆ 3
--------------
ಪ್ರಸನ್ನವೆಂಕಟದಾಸರು
ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚಂದ್ರಚೂಡ ಶಿವಶಂಕರ ಪಾರ್ವತಿ ರಮಣಾನಿನಗೆ ನಮೋ ನಮೋ ಪಸುಂದರ ಮೃಗಧರ ಪಿನಾಕಧರ ಹರ |ಗಂಗಾಧರಗಜಚರ್ಮಾಂಬರಧರಅ.ಪನಂದಿವಾಹನಾನಂದದಿಂದ ಮೂಜಗದಿ ಮೆರೆವನು ನೀನೆ |ಕಂದರ್ಪನ ಕ್ರೋಧದಿಂದ ಕಣ್ದೆರೆದು ಕೊಂದ ಉಗ್ರನು ನೀನೆ ||ಅಂದು ಅಮೃತ ಘಟದಿಂದುದಿಸಿದ ವಿಷತಂದುಭುಂಜಿಸಿದವನು ನೀನೆ |ಬಂದು ಚೆಂದದಿ ಇಂದಿರೇಶ ಶ್ರೀ ರಾಮನ ಪೊಂದಿಪೊಗಳುವವ ನೀನೆ 1ಬಾಲಮೃಕಂಡನ ಕಾಲನು ಎಳೆವಾಗಪಾಲಿಸಿದಾತನು ನೀನೆ |ನೀಲಕಂಠ ಕಾಲಕೂಟ ವಿಷವ ಮೆದ್ದಶೂಲಪಾಣಿಯು ನೀನೆ |ವಾಲಾಯದಿ ಕಪಾಲವ ಪಿಡಿದುಭಿಕ್ಷೆಕೇಳುವ ದಿಗಂಬರ ನೀನೆ |ಜಾಲಮಾಡುವ ಗೋಪಾಲನೆಂಬಪೆಣ್ಣಿಗೆ ಮರುಳಾದವ ನೀನೆ 2ಧರೆಗೆ ದಕ್ಷಿಣ ಕಾವೇರಿ ತೀರ ಕುಂಭಪುರನಿವಾಸನು ನೀನೆ |ಕರದಲಿ ವೀಣೆಯ ನುಡಿಸುವ ನಮ್ಮಉರಗಭೂಷಣನು ನೀನೆ ||ಕೊರಳಲಿ ಭಸ್ಮ ರುದ್ರಾಕ್ಷಿಯ ಧರಿಸಿದಪರಮವೈಷ್ಣವನು ನೀನೆ |ಗರುಡಗಮನಶ್ರೀಪುರಂದರವಿಠಲನ ಪ್ರಾಣ ಪ್ರಿಯನುನೀನೆ3
--------------
ಪುರಂದರದಾಸರು
ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲಚೈತ್ಯದಲಿಹ ಚೆನ್ನಿಗ ಬಲ ಹನುಮ ಪ.ಮೊದಲೆ ರಾಮರ ಭಟನಾಗಿ ಅಂದುಪದ್ಮದೇವಿಯ ಚರಣಕೆ ತಲೆಬಾಗಿಮುದದಿ ಮುದ್ರಿಕೆಯ ನೀ ಕೊಟ್ಟೆ ಬಲುಮದ ಸೊಕ್ಕಿದಸುರನ ಪುರವನೆ ಸುಟ್ಟೆಚೂಡಾಮಣಿಯ ತಂದಿಟ್ಟೆ ಬಲು ಹರುಷವ ಕೊಟ್ಟೆ 1ಕೊಬ್ಬಿದ ಕುರುಪತಿ ಬಲದಿ ಪೊಕ್ಕುಬೊಬ್ಬೆಯನಿರಿದು ಶೂರರ ಶಿರ ಹರಿದೆಆರ್ಭಟವನು ತೋರಿದೆ ಬಲುದುರ್ಬುದ್ಧ್ಯ ದುಶ್ಯಾಸನನ್ನೋಡಲ್ಬಗಿದೆ ಖಳರ ಹÀಲ್ಲುಮುರಿದೆಮಪುರಕೆ ಕಳುಹಿದೆ 2ಪರಮಪುರುಷ ಹರಿಯೆಂದು ಮಿಕ್ಕಸುರರುಈತನ ದಾಸಾಂಕಿತರಹುದೆಂದುಅರುಹಿದೆಶ್ರುತಿಇತಿಹಾಸಅಹಿಗಿರಿಯ ಪ್ರಸನ್ವೆಂಕಟೇಶನ ದಾಸ ತುಂಗಾತೀರವಾಸನೆ ಸಲಹೊ ಮುಖ್ಯೇಶ 3
--------------
ಪ್ರಸನ್ನವೆಂಕಟದಾಸರು
ಚಿತ್ರ ವಿಚಿತ್ರವುಹರಿವ್ಯಾಪಾರಚಿತ್ತದಿ ಚಿಂತಿಪರಿಗೆ ಪಸತ್ಯಭಾಮೆಯ ರಮಣನ ಕ್ರಿಯೆಗಳುಉತ್ತಮ ಋಷಿವರರರಿಯರೆನಲು ಬಹು ಅ.ಪಮಿತ್ರೆ ರುಕ್ಮಿಣಿ ಕೂಡುತಹರಿಇರಲು ಪಾರಿಜಾತದ ಹೂಮತ್ತೆ ಮಾಧವಗೀಯಲು ನಾರದರು ಕೌತುಕವನೆ ಕೇಳುತಸತ್ಯಭಾಮೆಯು ಕೋಪವ ತಾಳುತಲಿ ಶಚಿಪತಿಯೊಳು ಕಲಹಉತ್ತಮ ಶ್ರೀಹರಿ ಸಮರದಿ ಸೋಲಲುಮತ್ತೆ ಇಂದ್ರ ಜಯಭೇರಿಯ ಹೊಡಿಸಲುಸತ್ಯಭಾಮೆ ಸಮರದಿ ಗೆಲ್ಲುತ ಪುಷ್ಪವೃಕ್ಷಸಹಿತ ದ್ವಾರಕಿಗೈತರೆ ಬಹು 1ದುರುಳದೈತ್ಯರು ಕೂಡುತ ಗುಂಪಾಗಿ ಶ್ರೀಹರಿಯನು ಪಿಡಿಯಲುಭರದಿಂದೋಡುತ ಬರುತಿರಲದ ನೋಡಿ ಶ್ರೀಹರಿ ತಾ ತಿಳಿದುತ್ವರದಿಂದೋಡುತ ಬರುತಲಿ ಗುಹೆ ಸೇರಿ ಮುಚುಕುಂದರಾಯನಿಗೆಜರದವಲ್ಲಿ ಹೊದಿಸುತ ಮಾಯವಾಗಲುಖಳರು ಬಂದೊದ್ದರು ಮಚುಕುಂದಗೆತೆರೆದು ಕಣ್ಣ ನೋಡಲು ಖಳರೆಲ್ಲರುಉರಿದು ಭಸ್ಮವಾದರು ಕೇಳಿರಿ ಬಹು 2ಮತ್ತೊಮ್ಮೆ ಖಳರೆಲ್ಲರು ಸೇರುತಲಿ ಸತ್ಯೇಶನ ಪಿಡಿಯಲುಸುತ್ತಮುತ್ತ ಚೀರುತ ಬರುತಿರಲು ಹರಿಬೆದರಿದಪರಿಮತ್ತೋಡೂತ ಹಿಂದಕೆ ನೋಡುತ ಓಡುತಲಿ ಪರ್ವತವನೆ ಏರಲುಸುತ್ತಲು ನಿಂತರು ಖಳರೆಲ್ಲರುಹರಿಒತ್ತಿ ತುಳಿಯೆ ಪರ್ವತ ಕುಸಿಯಲು ಜಲಎತ್ತಿ ಮುಖಕೆರಚಲು ಖಳರೋಡಲುಮೆತ್ತನಿಳಿದುದ್ವಾರಕಿ ಸೇರಿದ ಬಹು 3ಚಕ್ರವ್ಯೂಹದಿ ಸಿಕ್ಕಿದ ಅಭಿಮನ್ಯು ಷಡುರಥದೊಳು ಕಾದಿದಿಕ್ಕು ದಿಕ್ಕಿಲಿ ಬಾಣದ ಮಳೆಸುರಿಸಿ ರಥಿಕ ಮಹರಥರÉೂಳುಉಕ್ಕಿ ಬರುತಿಹ ರೋಷದಿ ಹೊಯ್ದಾಡಿ ದುರುಳರ ವಶವಾಗಲುಅಕ್ಕರದಲಿ ದೇವಕಿತನಯ ತನ್ನಮಿತ್ರನ ಸುತನ ವಿಯೋಗ ದು:ಖದತಕ್ಕ ಉಪಾಯದಿ ಪರಿಹರಿಸಲು ಸಾ-ಮಥ್ರ್ಯನಾಗಿರಲು ನರನಂತೆ ನಟಿಸಿದ 4ಹತ್ತು ಹನ್ನೊಂದನೆ ಸಲ ಸಮರದಲಿ ಸರ್ವೇಶನ ಜಯಿಸಲುದೈತ್ಯದಾನವಜರೆಸುತ ಬರುತಿರಲು ಶ್ರೀಹರಿತಾ ತಿಳಿದುಉತ್ತಮ ದ್ವಾರಕಾಪುರ ರಚಿಸುತಲಿ ಜಲಮಧ್ಯದೊಳಿರಲುಪಟ್ಟದರಿಸಿ ಅಷ್ಟ ಸತಿಯರು ಸೌಳಸಾಸಿರ ಸತಿಯರ ಕೂಡುವ ಹರುಷದಿಕರ್ತೃಕಮಲನಾಭ ವಿಠ್ಠಲ ಭಕುತರಇಚ್ಛಿಸಲಿಸಲೀಪರಿ ನಟಿಸಿದ ಬಹು 5
--------------
ನಿಡಗುರುಕಿ ಜೀವೂಬಾಯಿ