ಒಟ್ಟು 472 ಕಡೆಗಳಲ್ಲಿ , 66 ದಾಸರು , 418 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಿದೆ ಹಾಳು ಶರೀರ ಬಾಳು ಅರಿದಡಿದು ಮಹ ಟೊಳ್ಳು ಟೊಳ್ಳು ಪ ನಾರಿಪುರುಷರು ಮಾರಕದನದಿಂ ಸೇರಿ ಸುಖಿಸಲು ಜಾರಿದಿಂದ್ರಿಯ ಕಾರಣಾಗಿ ಮೂರುದಿನದಿ ತೋರಿ ಪೋಗ್ವಸಾರಮಯ 1 ಮಿಡುಮಿಡುಕಿ ಒಡಲಿಗಾಗಿ ದುಡಿದು ಮೂಢರಡಿಯ ಪಿಡಿದು ಬಿಡದೆ ರೋಗದೊಡನೆ ನರಳಿ ಪಡುತಕಷ್ಟ ಕಡೆಗೆ ಸಾಯ್ವ 2 ಪರರಸೇವೆ ನಿರುತಗೈದು ಪರಕೆ ಇಹ್ಯಕೆ ತಿರುಗಿ ತಿರುಗಿ ಗರುವದಿಂದ ಚರಿಸಿ ನಮ್ಮ ಸಿರಿಯರಾಮನ ಚರಣಕ್ಹೊಂದದ 3
--------------
ರಾಮದಾಸರು
ಬಾಗಿಲ ತೆಗೆಯವ್ವಾ ಲಕ್ಷ್ಮೀದೇವಿ ಬಾಗಿಲ ತೆಗೆಯವ್ವಾ ಪ ಬಾಗಿಲ ತೆಗೆಯವ್ವಾ ಸಾಗಿ ಬಂದಿಹನಯ್ಯಾ ಭೋಗಿ ಭೂಷಣ ಪ್ರಿಯ ಕೇಶವನ ದಾಸಾ ಅ.ಪ. ಸಂಸಾರ ಜಾಲದಲೀ ಸಿಲುಕಿ ಬೆಂದೇ ಸಂಸಾರ ಮಾಯದಲೀ ಹಿಂಸೆ ಮಾಡಿದವಯ್ಯಾ ಐದಾರುರಿಪುಗಳು ಸಂಶಯ ಪಡದೆ ಬಂದೇ ಶರಣೆಂದೇ 1 ಭವದೊಳುರಳಿ ಬಿದ್ದೆನೋ ಪ್ರಾಣಾಂತಕ ಸವೆದು ಕರಗಿ ಬೆಂದೆನೋ ಯುವತಿಯರೊಡಗೂಢಿ ಇಹವೆನ್ನೆ ನೆರೆನಂಬಿ ವಿವಿಧ ಕಷ್ಟವ ಪೊಂದಿ ಬಂದೇ ಶರಣೆಂದೇ 2 ಹಲವು ಜನ್ಮಗಳಿಂದ ನೋಡಲು ಬಂದೆ ಹಲವು ರೀತಿಗಳಿಂದ ನಳಿನ ನಾಭನ ದಿವ್ಯ ರೂಪವ ನೋಡುವೆ ನಳಿನಾಕ್ಷಿ ತಾಯ ಕೇಶವನ ಸೇರುವನು 3
--------------
ಕರ್ಕಿ ಕೇಶವದಾಸ
ಬಾರನೇಕೆ ಬಾಲಕೃಷ್ಣನೂ | ಎನ್ನ ಮನಕೆಪೋರ ಶೀಲ ಗೋಪ ಕೃಷ್ಣನೂ ಪ ಸಾರಿ ಸಾರಿ ಕೂಗಿದಾರೂ | ದೂರವಿರುವನಂತೆ ನಟಸಿತೋರಗೊಡನು ತನ್ನ ರೂಪ | ಅರಿಗ್ಹೋಗಿ ಪೇಳಲಮ್ಮ ಅ.ಪ. ಗೋಪಿ ಕೊಟ್ಟ | ಕಲ್ಲಿ ಬುತ್ತಿಯೊಡನೆ ಪೋಗಿಹಳ್ಳ ಕೊಳ್ಳದಲ್ಲಿ ಕುಳಿತು | ಮೆಲ್ಲುತಿರುವನೇನೊ ಅಮ್ಮ 1 ಗೋಪಿ ಜನರ | ಕಂಡು ಕಾಣಧಾಂಗೆ ಇಹನೆ 2 ತಂದೆ ಮುದ್ದು ಮೋಹನ ಗುರುಗಳೂ | ನಿನ್ನ ರೂಪತಂದು ತೋರಿ ಮನದಿ ನಿಲ್ಲಲೂ ||ಅಂದು ಕೇಳಿಕೊಂಡು ಇಹರು | ಅಂದ ವಚನ ಮರೆತೆಯೇನೋತಂದೆ ಗುರು ಗೋವಿಂದ ವಿಠಲ | ಇಂದೆ ನೀನೆ ಮನಕೆ ಪೊಳೆಯೊ 3
--------------
ಗುರುಗೋವಿಂದವಿಠಲರು
ಬಾರಮ್ಮಾ ಬಾರಮ್ಮಾ ಭಾಗ್ಯದನಿಧಿಯೇ ತೋರಮ್ಮಾ ತೋರಮ್ಮಾ ಕರುಣಾನಿಧಿಯೇ ಪ. ಬಾರಮ್ಮಾ ಮಹಲಕ್ಷ್ಮಿ ತೋರುತ ಕರುಣವ ಬೀರುತ ತವಕದಿ ಸೇರುತ ಪತಿಸಹ ಅ.ಪ. ಶ್ರೀ ರಮಾದೇವಿ ಇನ್ನಾರು ಸಮನಾಗರೇ ಭೂ ರಮೇಶನ ಸೇವೆಗೆ ನಿಲ್ಲಲು ಬಾರಮ್ಮಾ ಭಕ್ತರುದ್ಧಾರ ಮಾಡಲು ಎಲ್ಲಾ ಕಾರಳು ನೀನಾಗಿ ವಾರುಧಿಶಯನಗೆ ಸೇವಿಸಲು ಘೋರತರ ಸಂಸಾರ ಸಾಗರ ಪಾರುಗಾಣಿಪ ಹರಿಯು ನಿನ್ನೊಳು ಸೇರಿಯಿರುತಿಹನೇ ತೋರಿ ಭಕ್ತರಿಗೆ ಚಾರುಕಮಲ ಕರಾರವಿಂದದಿ ಧೀರೆಯೆತ್ತುಪಕಾರ ಮಾಡಲು ವಾರಿಜಾಕ್ಷಿಯೆ ಸಾರುತೀಗಲೆ 1 ಪುಲ್ಲಲೋಚನೆ ನಿನ್ನ ಗಲ್ಲ ಮಿಂಚಿನ ಸೊಬ ಗೆಲ್ಲ ನೋಡುತ ನಿನ್ನ ಒಡನಾಡುವ ಪಲ್ಲವಾಧರೆ ನಿನ್ನ ವಲ್ಲಭ ಹರಿಯಲ್ಲಿ ಎಲ್ಲ ಭಕ್ತರ ಮನಸಲ್ಲ ಅರುಹು ತಾಯೆ ನಿಲ್ಲದೆಲೆ ಕಾನಲ್ಲಿ ಇಹ ಹರಿ ಎಲ್ಲಿ ಭಕ್ತರು ಕರೆ ದಲ್ಲಿ ಬರುತಿಹನೆ ಮಲ್ಲಮರ್ಧನ ಶ್ರೀ ನಲ್ಲ ಕೃಷ್ಣನು ಚೆಲ್ಲಿ ಕರುಣವ ಬಲ್ಲೆ ನಿನಪತಿ ಗುಣಗಳನೆಲ್ಲ ಕಾಯೆ 2 ರಂಗನರ್ಧಾಂಗಿಯೆ ಮಂಗಳ ಮೂರುತಿ ನಿ ನ್ನಂಗಜನಯ್ಯನ ಕಾಣೆ ಕಾಯೆ ಗಂಗಜನಕ ಸಹ ಸರ್ವರಂಗದೊಳಿದ್ದು ನೀ ರಂಗನ ಲೀಲೆಯತಿಸಂಭ್ರಮದಲಿ ನೋಳ್ಪೆ ತುಂಬುರು ನಾರದರು ಪಾಡಲು ರಂಭೆ ಊರ್ವಶಿ ನಾಟ್ಯವಾಡಲು ಸಂಭ್ರಮದಿ ಶ್ರೀ ಶ್ರೀನಿವಾಸನ್ನ ಇಂಬತೋರಿಸೇ ಅಂಬುಜಾಕ್ಷಿಯೇ ಬೆಂಬಿಡದೇ ಎನ್ನ ನಂಬಿರುವೇ ನಿನ್ನ ಕಂಬುಕಂಧರೆ ಕುಂಭಿಣೀಪತಿ ಸಹಿತ ಬೇಗನೆ 3
--------------
ಸರಸ್ವತಿ ಬಾಯಿ
ಬಾರೆ ಸಖಿ ಪೋಗಿ ರಾಸ ಕ್ರೀಡೆಯಾಡುವ ಪ ಸಾರಸಾಕ್ಷ ಕೃಷ್ಣನು ತಾ ಕೊಳಲನೂದುವ ಅ.ಪ ಜಾರನೆಂದು ಸಣ್ಣಮಾತನಾಡಿದ್ದಾಯಿತು ಚೋರನೆಂದು ಬಹಳ ದೂರು ಮಾಡಿದ್ದಾಯಿತು ಮೂರು ನಿಮಿಷ ಅವನ ಮರೆಯಲಾಗದಾಯಿತು ಬೀರುತಿರುವ ಮೋಹಜಾಲ ಸಡಲದಾಯಿತು 1 ಯಾವನೀತನೆಂದು ಚಿಂತೆ ಮಾಡಿದ್ದಾಯಿತು ಗೋವಳನಿವನಲ್ಲವೆಂದು ನಿರ್ಧರಾಯಿತು ಯಾವನಾದರೇನು ಇವನ ಕ್ಷಣವು ಕಾಣದೆ ಜೀವನ ಕಳೆಯುವುದೆ ದೊಡ್ಡ ಭಾರವಾಯಿತು 2 ಮಂದಹಾಸದಿಂದ ಸಕಲ ಜಗವ ಬೆಳಗುವ ಚಂದ್ರನು ತಾನಿವನ ನೋಡಿ ಬಹಳ ನಾಚುವ ಸಾಂದ್ರವಾಯಿತಂತರಿಕ್ಷ ಮಧುರ ನಾದದಿ ಮಲಯ ಮಾರುತ ತಾ ತಲೆಯನಾಡುವ 3 ನಾದದ ಸುಧೆ ಸಾಗರದಲಿ ತೇಲುವಂತಿದೆ ಮಾಧವ ತಾ ಸುಧೆಯ ರಸವನೆರಚುವಂತಿದೆ ಬಾಧಿಸುತಿಹ ಭವದ ತಾಪವಡಗಿದಂತಿದೆ ಮಾದರಿಫಲ ರಾಸಕ್ರೀಡೆ ತೋರುವಂತಿದೆ 4 ಸಕಲ ಲೋಕನಾಥನೀತನೆಂದು ತಿಳಿಯಿತು ಸಕಲವನರ್ಪಿಸುವುದೊಂದೆ ಮಾರ್ಗ ಉಳಿಯಿತು ಲಕುಮಿ ಮುರುಳಿ ರೂಪದಲ್ಲಿ ಇಹುದು ಹೊಳೆಯಿತು ಭಕುತಿ ಹರಿದು ಎನ್ನ ವiನ ಪ್ರಸನ್ನವಾಯಿತು 5
--------------
ವಿದ್ಯಾಪ್ರಸನ್ನತೀರ್ಥರು
ಬಾರೈಯ್ಯಾ ಗೋವಿಂದಾ | ಕೀರ್ತನೆಗೆ ಮುಕುಂದಾ | ಬೀರುತ ನಿಮ್ಮ ಮಹಿಮೆ ಸ್ವಾನಂದ ಪುರದಿಂದಾ ಪ ಕೋಂಡಾಡುವಂತೆ ಕೀರ್ತಿ ನೀಡಬೇಕು ನಿಜಸ್ಪೂರ್ತಿ | ಮಂಡೀಸಿ ಭಕ್ತರಂಗಾ ಹೇಳುವೆ ನಿಮ್ಮ ವಾರ್ತೆ 1 ವೈಕುಂಠ ಯೋಗಿವರಿಯಾ ಸ್ಥಳಸುರ ಮುನಿರಾಯಾ | ನೀ ಕರಿಸಿ ಪಾಡುವಲ್ಲಿ ಇಹನೆಂದೆ ನಿಶ್ಚಯಾ 2 ಕಂದನ ತೊದಲು ಮಾತಾ ಕೇಳಿ ಹಿಗ್ಗುವಂತೆ ಮಾತಾ | ತಂದೆ ಮಹಿಪತಿ - ಸ್ವಾಮಿ ಬಲವಾಗೋ ಶ್ರೀ ಕಾಂತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಮೋಹನಾ | ಶ್ರೀದೇವಾ ಪ ವೃಷಭಾನು ಜಾನನ ಸರಸಿಜ ಬೃಂಗಾ | ಶಶಿಧರ ವಂಶಾಭರಣಾ1 ನಿರ್ಜರ ತುಂಗಾ | ದನು ಚಾವಳಿ ಮದಹರಣಾ2 ಮಹಿಪತಿ ಸುತ ಪ್ರಭು ಜಗದಂತರಂಗಾ | ಇಹಪರದಾಯಕ ಕರುಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ವಾರಿಜ ಚರಣಾ ಪ ಭೂರಿ ದುರಿತ ಹರಣಾ 1 ಕ ರುಣಾ 2 ದ್ವಿಜರಾಜ ಕುಲಾಭರಣಾ 3 ಸುರಪಾರಿ ನಂದನನ ಕಾಯಿದೇ ಹರಿಣಾ | ಸುರಪಾದಿ ಮುನಿ ಸ್ಪುರಣಾ 4 ಗುರು ಮಹಿಪತಿ ಸುತ ಪ್ರಭು ಕೇಯೂರಾಭರಣಾ | ಇಹಪರಾನಂದ ಪೂರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೆಳಗಾಯಿತು ಕೇಳಿ ಭ್ರೂಮಧ್ಯ ಮಂಟಪದೊಳಗೆಬೆಳಕು ಪಸರಿಸುತಿದೆಕೊ ಎತ್ತಿತ್ತ ನೋಡೆಮುಂಬೆಳಕು ಕಾಣಿಸುತ್ತ ರವಿಕೋಟಿಯಂ ಪಳಿಯುತಿದೆನಿರ್ಮಳ ನೋಡಲುಪ್ಪವಡಿಸ ಯತಿರಾಜ ಪ ಷೋಡಶಾಕಾರವಹ ಸೋಮ ಕಳೆಗುಂದಿಹುದುಖೋಡಿ ಜನನ ಮರಣ ಚಕ್ರ ತಾ ಕೊರಗಿದುದುಪಾಡಳಿದು ಜೀವಶಿವ ಶೈತ್ಯ ಬಿಟ್ಟಾಡಿದುದುಆರೂಢನೊಲಿದುಪ್ಪವಡಿಸ ಯತಿರಾಜ1 ತಾಪತ್ರಯಗಳೆಂಬ ರಾತ್ರಿ ತಾ ಜಗುಳಿದುದುಪಾಪಿ ಇಹಪರವೆಂಬ ಸುಳಿಗಾಳಿ ಜಾರಿದುದುಕೋಪಿ ಸಪ್ತವ್ಯಸನ ಗೂಗೆ ಕಣ್ಣುಡುಗಿದುದುನಿರ್ಲೇಪನುಪ್ಪವಡಿಸ ಯತಿರಾಜ2 ಅಷ್ಟ ಪ್ರಕೃತಿಗಳೆಂಬ ನಕ್ಷತ್ರವಡಗಿದವುದುಷ್ಟ ಪಂಚೇಂದ್ರಿಯದ ಕುಮುದಗಳು ಬಾಡಿದವುನಷ್ಟರಾರುವರೆಂಬ ಶಿವನಿಕರ ವೋಡಿದವುಶಿಷ್ಟ ನೀನೊಲಿದುಪ್ಪವಡಿಸ ಯತಿರಾಜ3 ಭ್ರಮರ ಕಮಲ ತಾನಿಲ್ಲಿ ಬಿರಿಯುತಿದೆನಿಶ್ಚಿಂತನೊಲಿದುಪ್ಪವಡಿಸ ಯತಿರಾಜ 4 ಮೂರ್ತಿ ಚಿದಾನಂದಗುರುನಾಥನುಪ್ಪವಡಿಸ ಯತಿರಾಜ 5
--------------
ಚಿದಾನಂದ ಅವಧೂತರು
ಬೇಕಿಲ್ಲ ಬೇಕಿಲ್ಲ ಇಹಲೋಕಾಡಂಬರವು ಸಾಕೀ ನಿನ್ನನು ಧ್ಯಾನಿಪ ಪರಲೋಕ ಜ್ಞಾನವನು ಪ. ಶ್ರೀಪ ಕರುಣಿಸಿ ನಿನ್ನ ಸ್ವಂತ ಜನರನ್ನೂ ಕಾಪಾಡೊ ದೊರೆಯೆ ಅ.ಪ. ನಿನ್ನ ಭಕ್ತರ ಸಂಗವನ್ನು ಕೃಪೆದೋರಿ ಸಲಹೊ ಚನ್ನ ಕೇಶÀವರಾಯ ಇನ್ನು ಕೃಪೆ ಮಾಡೊ 1 ಯನ್ನಪರಾಧಗಳನ್ನು ಎಣಿಸುವರೆ ದೇವ ಸನ್ನುತ ಚರಿತ ಭಕ್ತ ಸನ್ಮಾನಯುತ ನಿನ್ನ ಮಹಿಮೆಗಳನ್ನು ವರ್ಣಿಸಲಳವೆ ಮುನ್ನ ಶೇಷಾನಿಂದ ಸೇವ್ಯವಾಗಿರಲೂ ಯನ್ನಿಂದಾಡಿಶಿ ನೀನು ಸನ್ಮಾನಕೊಂಡು ನಿನ್ನಾ ಭಕ್ತಳೆಂದು ಸ್ತುತಿಗೊಂಡು ನಲಿನಲಿದೆ 2 ಯೆನ್ನಿಂದೇನಹುದೋ ಮನ್ಮನದೊಡೆಯ ಚನ್ನ ಶೇಷಾದ್ರಿನಿವಾಸ ಘನ್ನ ಶ್ರೀ ಶ್ರೀನಿವಾಸ ನೀನೇ ಆಡಿಸುತ ನೀನೇ ಮಾಡಿಸುತ ದಾಸಿ ನೀನಾಗಿರೆ ನಾನೇನ ಬಲ್ಲೆನೊ 3
--------------
ಸರಸ್ವತಿ ಬಾಯಿ
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭಕ್ತಿಯಲಿ ತನುಮನವು ಸತತ ಬಗ್ಗಿರಲಯ್ಯ ಭುಕ್ತಿಯೆ ಮಹಾಭಕ್ತಿ ನೀಡು ಎನಗೆ ಪ ಯುಕ್ತಿ ಶಕ್ತಿಗಳೆಲ್ಲ ಬಿಡದಿರಲಿ ತತ್ಪಾದ ಶಕ್ತಿಯನು ಎಂದೆಂದು ಗುಣಪೂರ್ಣ ನಿಧಿಯೆ ಅ.ಪ ಇಹಭೋಗ ಬಿಡಿಸಯ್ಯ ಮಹದಾದಿ ದೇವೇಶ ಗುಹಪಿತನಸಖ ನರನಸೂತ ಬಂಧು ಮುಹುರ್ಮುಹು ಪ್ರಾರ್ಥಿಸುವೆ ಮಹಿದಾಸ್ಯ ಹರಿದಾಸ್ಯ ಮಹಪದವಿ ಕರುಣಿಸಯ್ಯ ಮರುತ ಮಂದಿರ ವಿಭುವೆ 1 ಪಂಚಬೇಧ ಜ್ಞಾನ ಅನುಷ್ಠಾನದಿ ಇರಲಿ ಚಂಚಲಿಲ್ಲದ ಭಕ್ತಿ ಇತ್ತು ಮೆಚ್ಚಿ ವಂಚಿಸದೆ ಸಂಸಾರ ಯಾತ್ರೆಯಲಿ ಒಡನಾಡು ಪಂಚಾತ್ಮ ಜಯೇಶವಿಠಲನೆ ಮದ್ಬಿಂಬ 2
--------------
ಜಯೇಶವಿಠಲ
ಭವ ಎತ್ತಲಾರೆ ಚಿತ್ತಜಪಿತನೆ ನಿತ್ಯ ಮುಕ್ತಿಸುಖವ ನೀಡೊ ಪ ಮರ್ತು ಇಂದಿನತನಕ ನಿಮ್ಮ ನಿತ್ಯನಿರ್ಮಲಪಾದ ಎಂ ಬತ್ತುನಾಲ್ಕುಲಕ್ಷ ಜನುಮ ಗುರ್ತಿಲ್ಲದೆ ತಾಳಿದ್ದೆ ಸಾಕೊ 1 ಉತ್ತಮಸಂಗ ಮರೆದು ಮದೋ ನ್ಮತ್ತನಾಗಿ ಚರಿಸಿ ಮತ್ತೆ ಕತ್ತೆಯಂತೆ ಇಹ್ಯಕೆ ಪರಕೆ ಸುತ್ತಿ ಸುತ್ತಿ ಬೇಸತ್ತದ್ದೆ ಸಾಕೊ 2 ಚಿತ್ತಭ್ರಾಂತನಾಗಿ ಸತತ ಸತ್ಯಮಾರ್ಗದಪ್ಪಿ ಕೆಡುವ ಭಕ್ತನ ತಪ್ಪುಕ್ಷಮಿಸಿ ಕರುಣ ದೆತ್ತಿ ಸಲಹೊ ಸಿರಿಯರಾಮ 3
--------------
ರಾಮದಾಸರು