ಒಟ್ಟು 784 ಕಡೆಗಳಲ್ಲಿ , 89 ದಾಸರು , 635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದೇವ ದೇವತೆಗಳ ಸ್ತುತಿ ಆವ ಕಾರ್ಯಕೂ ಮುಂಚಿನ ಪೂಜೆ ನಿಮ್ಮತಾಯಿ ತಂದೆಯು ಕಲಿಸಿದ ಪೂಜೆ ಪ ಜಾತಕರ್ಮಕೆ ನಾಮಕರಣಕೆ ಚೌಲಕೆಸಾತಿಶಯಾಕ್ಷರ ಪ್ರಾರಂಭಕೆನೂತನ ವಿದ್ಯಾರಂಭಕೆ ಮುಂಜಿಗೆಯಾತಕೂ ಶ್ರೀ ಗಣಪತಿ ಜಯ ಜಯವೆಂದೂ 1 ಮದುವೆಗೆ ಋತುಶಾಂತಿಗೆ ಸೀಮಂತಕೆಮುದದಿಂದ ಜನನವ ಬರೆವುದಕೆಸದಮಲ ಯಜ್ಞಾರಂಭಕೆ ಸಮರಕೆಮೊದಲೇ ಶ್ರೀ ವಿಘ್ನೇಶ್ವರ ಜಯ ಜಯವೆಂದೂ2 ಪರ ಉಪಕಾರಕೆಜ್ಞಾನಮಾರ್ಗಕೆ ಗಾನಕೆ ಗೀತೆಗೆನಾನಾವಿಧ ಸುವ್ರತ ತೀರ್ಥಯಾತ್ರೆಗೆನೀನೆ ಗತಿ ಗಣಪತಿ ಜಯ ಜಯವೆಂದೂ 3 ಕೆರೆ ಕಾಲುವೆ ಕೂಪಗಳ ವಿಸ್ತಾರಕೆಸುರಗೃಹ ರಥ ಉತ್ಸವ ಪೂಜೆಗೆಸರಸ ಸರೋವರಗಳ ನಿರ್ಮಾಣಕೆಸಿರಿ ಗಣಪತಿ ಪಾವನಮೂರ್ತಿ ಜಯವೆಂದೂ 4 ಹರ ನಿಮ್ಮ ಪೂಜಿಸಿ ಪುರಮೂರ ಜಯಿಸಿದಗರುಡಗೆ ಅಮೃತವು ಸಿದ್ಧಿಸಿತುವರರಾಮಚಂದ್ರ ನಿಮ್ಮಡಿಯ ಪೂಜಿಸಿ ದಶಶಿರನ ಗೆಲಿದನೆನೆ ಗಣಪತಿ ಜಯವೆಂದೂ 5 ದ್ವಾಪರಯುಗದಲಿ ಧರ್ಮರಾಯನು ನಿಮ್ಮನೇ ಪೂಜಿಸಿ ಕೌರವರ ಗೆಲಿದಾಭೂಪರ ಜೈಸಿ ತುರಗವ ತಂದ ಸಾಂಬನುಶ್ರೀಪತಿನುತ ಗಣಪತಿ ಜಯ ಜಯವೆಂದೂ6 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮಮೋಹದ ಪುತ್ರ ಪಾವನತರಗಾತ್ರವರದ ಶ್ರೀ ಗಣಪತಿ ಜಯ ಜಯ ಜಯವೆಂದೂ 7
--------------
ಕೆಳದಿ ವೆಂಕಣ್ಣ ಕವಿ
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಧನವ ಗೆದ್ದವರುಂಟೆ ಜನರೊಳಗೆ ಶ್ರೀನಿವಾಸ ಪ ಕನಸಿಲಾದರು ಬಿಡದು ಕನಕದಾಶೆಯು ಈಶ ಅ.ಪ. ಹೆಂಡತಿಯ ಬಿಡಬಹುದು ಮಂಡೆಬೋಳಿಸಬಹುದು ಕಂಡ ಕಂಡವರೀಗೆ ದಂಡ ಬೀಳಲಿ ಬಹುದು ಪುಂಡರೀಕಾಕ್ಷನಿಗೆ ತೊಂಡನಾಗಲಿ ಬಹುದು ದುಡ್ಡು ಕಾಸುಗಳನ್ನು ನೀಡಲಾಗದು ಮನಸು 1 ನಾಮ ಹಾಕಲಿಬಹುದು ನೇಮಮಾಡಲಿಬಹುದು ಹೋಮಮಾಡುತಲಿ ಬಹು ಕರ್ಮಿಷ್ಟನೆನಿಸಬಹುದು ನಾಮ ಪಾಡಲಿಬಹುದು ಧರ್ಮಪೇಳಲಿ ಬಹುದು ಹೇಮದಾಶೆಯು ಬಿಡದೂ ಶ್ರೀ ಮನೋಹರನೇ 2 ಜಪಮಾಲೆಧರಿಸುತಲಿ ಉಪವಾಸ ಮಾಡಬಹುದು ತಾಪಸನು ಎನಿಸುತಲಿ ಪುರಾಣಗಳ ಪೇಳಲಿಬಹುದು ಶ್ರೀಪತಿಯ ಸೇವಿಸುತ ಜಪತಪವ ನಡೆಸಬಹುದು ರೂಪಾಯಿ ಮಮತೆ ತಾ ಮುಪ್ಪಿನಲು ತೊಲಗದೈಯ್ಯ 3 ಯಾತ್ರೆಮಾಡಲಿಬಹುದು ಸ್ತೋತ್ರ ಘಟ್ಯಾಗಿ ಹೇಳಬಹುದು ನೀತಿ ಪೇಳಲಿಬಹುದು ಪೂತನೆನಿಸಬಹುದು ಮಾತು ಮಾತಿಗೆವೇದ ಎತ್ತಿ ಪೇಳಲಿಬಹುದು ಪ್ರೀತಿ ತಪ್ಪದೂ ಯೆಂದೂ ಆಸ್ತಿ ಧನಕನಕದಲಿ 4 ಲಜ್ಜೆಬಿಡುತಲಿ ಬೇಗ ಗೆಜ್ಜೆಕಟ್ಟಲಿ ಬಹುದು ಸಜ್ಜನನುಯೆಂದೆನಿಸಿ ಮೂರ್ಜಗದಿ ಮೆರೆಯಬಹುದು ಮಜ್ಜನಕ ಜಯತೀರ್ಥ ವಾಯು ಹೃದಯದಲಿರ್ಪಜ ಗಜ್ಜನಕ “ಶ್ರೀಕೃಷ್ಣವಿಠಲ”ನೆ ನೀವಲಿವ ತನಕ 5
--------------
ಕೃಷ್ಣವಿಠಲದಾಸರು
ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ ಪ ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ ರಂಗ ಮಧ್ವನ ಸ್ಮರಣೆ ಮಾಡಿಕೊಳುತ ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ 1 ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ ನೋತ್ಸಾಹ ಮಾತ್ರ ಬಂದಾಗಲಿಲ್ಲಾ ವತ್ಸ ಕೇಳು ಉಪಸರ್ಗ ಕೂಡಿದ ನಾಭಿ ತತ್ಸಮಾನಾಯಿತೊ ಇಂದಿನಾರಭ್ಯವೂ2 ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ ಯಿಂದ ಹಿಂದಕೆ ಒಬ್ಬನಿಂದಂತೇವೆ ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು- ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ3 ಪರಿಣಾಮಕೆ ನಿನಗೆ ಸಾನುಕೂಲಾವಾಗಿ ಅನಿಲದೇವನು ಒಲಿದು ಹರಿಯ ಕೂಡಾ ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ- ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ 4 ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು ಬಿದಿಗೆಯಲಿ ಪ್ರವರ ಗೌತಮ ಸಂಗಮಾ ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ 5
--------------
ವಿಜಯದಾಸ
ಧನ್ಯರಿಗನ್ಯರ ಪರಿವ್ಯೇ ದೈನ್ಯಬಿಡುವರೆ ಅವರಿಗಿರುವುದೇ ಅರಿವು ಪ ಮೇಲು ಉಪ್ಪರಿಗೆಯ ಮಾಲಿನೊಳನುದಿನ ಶೀಲಸುಂದರಿಯರ ಲೋಲರಾಗಿರುವಂಥ 1 ನೀಲಕೌಸ್ತುಭಮಣಿ ಮಾಲಾಲಂಕೃತರಾಗಿ ಕಾಲಕಾಲದಿ ಮಹಲೀಲೆಯೊಳಿರುವಂಥ 2 ಮೂರ್ಹತ್ತು ಮೂರುಕೋಟಿ ವಾರಿಜಾಸನ ಸುರರಿಂ ಮೂರ್ಹೊತ್ತು ಬಿಡದಂತೆ ಸಾರಿ ಪೂಜೆಯಗೊಂಬ 3 ಎಂಟುಐಶ್ವರ್ಯಂಗಳಂಟಿಕೊಂಡು ಬಿಡದ್ವೊ ಯ್ಕುಂಠ ಪದವಿಯೊಳು ಬಂಟರಾಗಿರುವಂಥ 4 ಲೋಕೈಕ ಶ್ರೀರಾಮ ಲೋಕತ್ರಯಕೆ ತಾನೆ ಏಕದೇವನು ಎಂಬ ಯಾಕಿಂಥ ಮದವಯ್ಯ 5
--------------
ರಾಮದಾಸರು
ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಪ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು 1 ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ - ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ - ಇದುಕ್ಷಿತಿಯೊಳಗೆ ಸಿದ್ಧಾಂತ 2 ಶಿಶು ಹತ್ಯೆ ಗೈದವಗೆ ಕುಕ್ಷಿಶೂಲೆಪಶುಗಳನು ಮರ್ದಿಸಿದವಗೆ ಪ್ರಮೇಹವುಉಸಿರಲೇಕಿನ್ನು ಸ್ವಾಮಿದ್ರೋಹಿಗೆ ಬಹುಮೂತ್ರಪುಸಿಯನಾಡುವ ಪುರುಷಗೆ ರಕ್ತ ಕಾಳಿಹಸಿದವರಿಗನ್ನವಿಕ್ಕದವಗೆ ಆಮ್ಲಪಿತ್ತವೃಷಭವನು ಒದ್ದವಗೆ ಬಿಗರುವಾತಮುಸುಕುವುದು ವಿಶ್ವಾಸಘಾತಕಗೆ ನರರೋಗಪುಸಿಯಲ್ಲವಿದು ಕೇಳಿ ಜನರು 3 ಕೊಟ್ಟು ಭಾಷೆಯ ತಪ್ಪಿದವಗೆ ಉಪಜಿಹ್ವೆಕೊಟ್ಟು ತುಪ್ಪಿದವಗೆ ಕರಕಂಪನಕೊಟ್ಟರೂ ಕೊಡಲಿಲ್ಲವೆಂಬವಗೆ ಉದರರೋಗಕೊಟ್ಟವರಿಗೆರಡು ಬಗೆವಗೆ ಮೇಹರೋಗಅಷ್ಟಮದದಿಂದ ಮೆರೆವವಗೆ ಬೆರಗಿನ ರೋಗಬಟ್ಟೆಯೊಳು ಮುಳ್ಳು ಹರಡಿದವಗೆ ನೇತ್ರವ್ಯಾಧಿಹುಟ್ಟುವುದು ಕಂಕಣ ಕಂಟಕಗೆ ಕುಷ್ಠರೋಗಕಟ್ಟಿಟ್ಟ ಬುತ್ತಿ ಇದು4 ಕರ್ಮ ಬಲ್ಲವರಾರುಎಂದು ಮಂದಮತಿಗಳಾಗಿ ಕೆಟ್ಟಳಿಯದಿರೆಹಿಂದಣದೆಲ್ಲವೂ ಬಹದೆಂಬುದಕೆ ಸಾಕ್ಷಿಇಂದು ಕಣ್ಣೆದುರೆ ಜಗದೊಳಗೆ ತೋರುತಿಹುದಿಗೊಚಂದದಲಿ ತಾಯಿ ಮಗುವಿಗೆ ಮೊಲೆಯ ಹಾಲುಣಿಸುವಂದದಲಿ ಉಣಿಸಿದಲ್ಲದೆ ಬಿಡದು ಮರೆಯದಿರಿಕಂದರ್ಪಪಿತ ಸೊಂಡೆಕೊಪ್ಪದಾದಿಕೇಶವನಮುಂದರಿತು ಭಜಿಸಿ ಮುಕ್ತಿಯ ಪಡೆಯಿರಣ್ಣ5
--------------
ಕನಕದಾಸ
ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ನರಿತು ಅರ್ಚಿಸಲು ಲಿಂಗೈಕ್ಯಕೆ ಯೋಗ್ಯ ಪ ವೈರಿ ಸಂಸಾರ ಮಾಯಾ ವನಿತೆ ಇಕ್ಕಿದ ಮದ್ದು ದುಃಖದಾಕಾರಾ ಮನವೆ ಶುದ್ಧಾತ್ಮವಿಚಾರಾ ನೀನು ನೆನೆದು ಮರೆಯದಿರು ಗುರು ಉಪಕಾರಾ 1 ನಗಿಸಿ ಅಳಿಸುವುದು ಕುಂದು ಭಕ್ತ ರಘವ ನಿವಾರಿಸಿ ಸಲಹಬೇಕೆಂದು ಮೃಗಧರ ರೂಪಿಲಿ ಬಂದು ಸ್ವಾಮಿ ಸೊಗಸಾಗಿ ಶ್ರೀ ಗುರುಚಿತ್ತಕೆ ತಂದು 2 ಜೋಡಿಲ್ಲದೈಶ್ವರ್ಯದಿಂದಾ ಹೋ ಗಾಡಿಸೋ ಘೋರಸಂಸಾರದ ಬಂಧಾ ನೋಡೋ ನಿತ್ಯಾತ್ಮನ ಚಂದಾ ನಲಿ ದಾಡೋ ಎನ್ನನು ಗುರು ವಿಮಲಾನಂದಾ 3
--------------
ಭಟಕಳ ಅಪ್ಪಯ್ಯ
ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ