ಒಟ್ಟು 1080 ಕಡೆಗಳಲ್ಲಿ , 104 ದಾಸರು , 883 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ಕೊರಡು ಎಂಬೆನು ಇಂಥವನ ಕಂಡು ಕೊರಡು ಎಂಬೆಹುಸಿಯದೆಕೊರಡು ಅಲ್ಲದೆ ಶಿವನಿರೆ ಜೀವನೆಂಬುವನ ಕೊರಡು ಎಂಬೆ ಪ ಹಿರಿಯರು ಬರಲು ಏಳದವನನು ಕಂಡು ಕೊರಡು ಎಂಬೆಮರೆತು ತನ್ನನು ಕಲ್ಲ ಪೂಜಿಪ ಕಂಡು ಕೊರಡು ಎಂಬೆಅರಿತು ತನ್ನನು ಅಹುದಲ್ಲವೋ ಎಂಬುವನ ಕೊರಡು ಎಂಬೆಗುರುಪಾದ ಹೊಂದಿ ತನ್ನನು ತಿಳಿಯದವನು ಕೊರಡು ಎಂಬೆ 1 ತನ್ನೊಳು ಪರಮಾತ್ಮನಿರಲು ಕಾಣದವನನು ಕೊರಡು ಎಂಬೆಅನ್ನವ ಬಿಟ್ಟು ತೊಪ್ಪಲ ತಿಂಬನ ಕಂಡು ಕೊರಡು ಎಂಬೆತಿನ್ನುವನಿರುಲು ಉಪವಾಸ ಬೀಳ್ವನ ಕಂಡು ಕೊರಡು ಎಂಬೆಚೆನ್ನಾಗಿ ಹಮ್ಮಳಿಯದೆ ಶ್ರೇಷ್ಠನೆಂಬುವನ ಕೊರಡು ಎಂಬೆ 2 ನೀನಾರು ಎಂಬುವನ ಅದಾರೆನ್ನದನ ಕಂಡು ಕೊರಡು ಎಂಬೆವೇದಶಿರವನೋದಿನರ ತನ್ನನೆಂಬನ ಕೊರಡು ಎಂಬೆವಾದಕ್ಕೆ ಠಾವಿಲ್ಲ ಖೇದ ಮಾಡುವನ ಕಂಡು ಕೊರಡು ಎಂಬೆಬೋಧ ಚಿದಾನಂದನಿರೆ ಕಾಣದವನನು ಕೊರಡು ಎಂಬೆ 3
--------------
ಚಿದಾನಂದ ಅವಧೂತರು
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ | ಕೋಲು ಸದ್ಗುರುವಿನಾ ಬಲಗೊಂಬೆ ಕೋಲೆ ಪ ಶರಣು ಶರಣು ಗುರುವೇ ಶರಣರ ಸುರತರುವೆ | ಶರಣರ ಹೃದಯದೊಳಗಿರುವೇ ಕೋಲೆ | ಅನುದಿನ | ಕರುಣದ ಮಳೆಯಾಗರೆವುತ ಕೋಲೆ 1 ಕರಣ ತೃಯದಿನಂಬಿ ಸ್ಮರಣೆಯ ಮಾಡಲು | ಧರಣಿಯಲಿಷ್ಟಾರ್ಥ ಕೊಡುತಿಹ ಕೋಲೆ | ಧರಣಿಯಲಿಷ್ಟಾರ್ಥ ಕೊಡುತಿಹ ಜನದಂತ ಕರಣದೊಳಗೆ ಬಯಕೆ ನಿಲದಂತೆ ಕೋಲೆ 2 ಚರಣ ಸರಸಿಜಕ ಶರಣ ಹೋಗಲು ಜನ್ಮ | ಮರಣದ ಭಯಕಂಜಿ ಜನರು ಕೋಲೆ | ಮರಣದ ಭಯಕಂಜಿ ಜನರು ಬರೆ ಕಂಡು | ಕರುಣಾ ಕಟಾಕ್ಷದಿ ನೋಡುವ ಕೋಲೆ 3 ಕರದಿಂದ ಪಿಡಿದವನ ತರಣೋಪಾಯದ ಬೋಧಾ | ಭರದಿಂದ ಬೀರುವೆ ಮನಸಿಗೆ ಕೋಲೆ | ಭರದಿಂದ ಬೀರುವೆ ಮನಸಿಗೆ ಭವದೊಳು | ಮರಳ್ಯವ ಸಿಕ್ಕದಂತೆ ಮಾಡುವೆ ಕೋಲೆ 4 ಜ್ಞಾನವೆಂಬಂಜನೆ ಸೂನಯನಕ ಊಡಿ | ಹೀನ ಅಜ್ಞಾನವ ಹರಿಸೂವ ಕೋಲೆ ಹೀನ ಅಜ್ಞಾನವ ಹರಿಸುವೆ ಬೇಗದಿ | ಸ್ವಾನುಭವದ ಸುಖ ಬೀರುವೆ ಕೋಲೆ 5 ನಾನಾ ಹಂಬಲವನ ಏನೆನುಳಿಯದ್ಹಾಂಗ | ತಾನಿದ್ದ ಬದಿಯಲಿ ಇಹಪರ ಕೋಲೆ | ತಾನಿದ್ದ ಬದಿಯಲಿ ಇಹಪರ ಸುಖಗಳ | ನೀನಿದಿರಿಡುತಿಹೆ ಸದಮಲ ಕೋಲೆ 6 ಎಂಟು ಸಿದ್ಧಿಗಳು ಉಂಟಾಗಿ ಬಂದರೆ | ವೆಂಟಣಿಸಿ ಅದರ ಕಡೆಗೇ ಕೋಲೆ | ವೆಂಟಣಿಸಿ ಅದರ ಕಡೆಗೇ ನೋಡ ನಿನ್ನ | ಬಂಟನೆಯ ಮಹಿಮೆಯ ಜಗದೊಳು ಕೋಲೆ 7 ನಿನ್ನ ಮಹಿಮೆಯನ್ನು ಇನ್ನು ನಾ ಪೊಗಳಲು | ಎನ್ನಳವಲ್ಲಾ ಜಗಕಲ್ಲಾ ಕೋಲೆ | ಎನ್ನಳವಲ್ಲಾ ಜಗಕಲ್ಲಾ ಸದ್ಗುರು | ನಿನ್ನ ಮಹಿಮೆ ಬಲ್ಲೆ ನೀನವೆ ಕೋಲೆ 8 ಮಹಿಗೆ ನೀ ಪತಿಯಾಗಿ ವಿಹರಿಸುತಿಹೆ ದೇವಾ | ಸಹಕಾರನಾಗಿ ಭಕ್ತರ್ಗೆ ಕೋಲೆ | ಸಹಕಾರನಾಗಿ ಭಕ್ತರ್ಗೆ ಅನವರತ | ಅಹಿತರವಂಡಣೆ ಮಾಡುತ ಕೋಲೆ 9 ಮುನ್ನಿನಪರಾಧವ ಇನ್ನೇನು ನೋಡದೇ | ಎನ್ನನುದ್ಧರಿಸು ದಯದಿಂದ ಕೋಲೆ | ಎನ್ನನುದ್ಧರಿಸು ದಯದಿಂದ ಮತಿಕೊಟ್ಟು | ನಿನ್ನ ಕೀರ್ತಿಯ ಕೊಂಡಾಡುವಂತೆ ಕೋಲೆ 10 ಎಂದೆಂದು ನಿಮ್ಮ ಪದ ಹೊಂದಿದ್ದವನು ನಾನು | ಕುಂದ ನೋಡದೇ ಸಲಹಯ್ಯಾ ಕೋಲೆ ಕುಂದ ನೋಡದೇ ಸಲಹಯ್ಯಾ ಮಹಿಪತಿ | ಕಂದನು ಮುಗ್ಧನೆಂದು ಬಿಡಬ್ಯಾಡಿ ಕೋಲೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗಜಮುಖ ಗಣನಾಥಾ | ಬೇಡುವೆಸುಜನರ ಪೊರೆ ಎಂದೂ ಪ ಅಜನಯ್ಯನು ಶ್ರೀರಾಮನು ನಿನ್ನನುಪೂಜಿಸಿ ಪ್ರಥಮದಿ ಜಗಕೆ ತೋರಿದನುಅ.ಪ. ದಶಮುಖ ರಾವಣನು ನಿನ್ನಹಸನಾಗಿ ಪೂಜಿಸದೇ |ವಶನಾದ ಮರಣಕೆ ರಣರಂಗದೊಳುಬಿಸಜ ಸಂಭವವರ ಬಹುವಾಗಿದ್ದರೂ 1 ಯಮಸುತ ಮೊದಲಾಗಿ ನಿನ್ನನಮಿಸಲು ಅಧ್ವರದೀ |ಅಮಮ ಪಾಪಾತ್ಮಕರ ಮಿತರಸವರುತಸ್ವಾಮಿ ಎನಿಸಿದನು ಅಪಾರ ರಾಜ್ಯಕೆ 2 ಗುರುಗೋವಿಂದ ವಿಠಲನಾ | ಕರುಣಭರಣವಮಿತ ಪಡೆದಾ |ವರದಾಯಕ ವಿಘ್ನವ ಕಳೆಯುತಅರವಿದೂರ ಪದರಜವನೆ ಕಾಣಿಸೋ 3
--------------
ಗುರುಗೋವಿಂದವಿಠಲರು
ಗಜಾನನಾ ಗಜಾನನಾ ಸ್ವಾಮಿ ನಿನ್ನವನಾ ಪಾರ್ವತಿ ನಂದನಪೂರ್ವ ಚರಿತ ಘನ ನಿರ್ವಿಘ್ನ ದಾಯಕ ಗಜಾನನಾ ಮೂಷಕವಾಹನ ದೋಷಕರಿಪುಕುಲ ನಾಶಿಕ ವಿಗ್ರಹಗಜಾನನಾ ಮದನಾರಿ ಮನೋಭವ ರದಸಾಮಲೇಕದಂತದಯ ಸದನಾ ಲಂಬೊದರ ಗಜಾನನಾ ಕರುಣಾಪೂರಿತ ಸರ್ವಾ ಭರಣಾ ಭೂಷಿತ ಭಯ ಹರಣಾ ತ್ರಿ ಜಗನುತ ಗಜಾನನಾ ಹೊಂದಿದ ಶರಣರಿಗೆಂದೆಂದು ವಿದ್ಯಗಳ ತಂದಿದಿರಿಡುತಿಹ ಗಜಾನನಾ ತಂದೆ ಮಹಿಪತಿ ನಂದÀನ ಸಾರಥಿ ಇಂದೆನ್ನನುದ್ಧರಿಸು ಗಜಾನನಾ.
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗಣೇಶ ವಂದಿಸುವೆ ಕರದ್ವಂದ್ವ ಜೋಡಿಸಿ ಪ ವಂದಿಸುವೆ ಒಂದೆ ಮನದಲಿ ನಂದಿವಾಹನ ಕಂದ ಗಣಪಗೆಬಂದ ಭಯಗಳ ಹಿಂದೆ ಮಾಡುತ ಸಿಂಧುಶಯನನ ತೋರಿಸೆಂದು ಅ.ಪ. ಅನುದಿನ ಪಾಶ ಅಂಕುಶದಾರನೇ 1 ವಾಕು ಲಾಲಿಸಬೇಕೊ ಪ್ರಭುವೇಕಾಕುಜನ ಸಹವಾಸದಿಂದಲಿ ನೂಕಿಸೆನ್ನನು ಏಕದಂತನೆಏಕಭಾವದಿ ಭಜಿಪ ಭಕುತರೋಳ್ಹಾತನೆನ್ನಗಜವದನನೆ ಬಾ ತೈಜ ವಿಶ್ವಭಾಜಕನೆ ತೋರೋ ಪಾದಭುಜ ಚತುಷ್ಟನೆ ತ್ರಿಜಗವಂದ್ಯನೆ ಭಜಿಪ ಭಕುತರ ಅಘವ ಕಳೆವನೆನಿಜೆ ಸುಜನರ ...ಭುಜಗ ಭೂಷಣ ಕಾಮನನುಜನೆ 2 ವಾರಿಬಂಧನ ಪೂರ್ವದಿ ಶ್ರೀ ರಾಮಚಂದ್ರನು ಪ್ರೀತಿಲಿ ಪೂಜಿಸಿದದುರುಳ ರಾವಣ ಮೆರೆದು ಕೆಟ್ಟನು ಧರೆಯಗೆದ್ದನುಜರಿದು ಚಂದ್ರನುವಿದ್ಯ ಪ್ರದಾಯಕನೆ ಮನ ತಿದ್ದು ಬೇಗನೆ ಬಿದ್ದು ಬೇಡುವೆ ಸಾಧುವಂದ್ಯನೆಮಧ್ವ ಮತದೊಳು ಶ್ರದ್ಧೆ ಪುಟ್ಟಿಸೊ ಮಧ್ವವಲ್ಲಭತಂದೆ ವರದ ವಿಠಲ ಪ್ರಿಯ ಸಿದ್ಧಿದಾಯಕ
--------------
ಸಿರಿಗುರುತಂದೆವರದವಿಠಲರು
ಗಣೇಶಸ್ತುತಿ ಕರುಣಿಸೋ ಗೌರೀಕರಜ ಪ ಕರುಣಾಳು ಕ್ಷಿಪ್ರ ಮನದ ಕಾಯ ಬೇಗದಿ ಅ.ಪ ಕಾಯ ಜಾತ ಅರಿವರ್ಗಗಳಿಗೆ ವಿಘ್ನವ ತ್ವರದಲ್ಲಿ ಇತ್ತು ಶುಭಕೆ ಮಾರ್ಗವ 1 ನರಭಾವದಿಂದ ನಿನ್ನ ಮರೆತರೆ ನೀನು ಎನ್ನನು ಜರಿದರೆ ಪೊರೆವೊರ್ಯಾರೊ ನಿರುತದಿ 2 ಮರುದಂಶ ಮಧ್ವಮುನಿಯ ವರಶಾಸ್ತ್ರ ಪೇಳ್ವ ಬುದ್ಧಿಯ ವರವಿತ್ತು ಬಂದ ವಿಘ್ನವ ಕಳೆಯುತ 3 ವರಪಾಶಪಾಣಿ ಎನ್ನ ದುರಿತಾಶಪಾಶ ಛೇದಿಸಿ ಹರಿ ಭಕ್ತಿ ಪಾಶದಿಂದ ಬಿಗಿಯುತ 4 ಕರಿವಕ್ತ್ರಶಂಕೆ ಎಂಬ ಕರಿಯನ್ನು ಅಂಕುಶದಲಿ ಮುರಿಬಿಂಕ ಶಂಕಿಸದೆ ವಿದ್ಯವ 5 ಸಿರಿ ವಾಣಿ ಚಂಡಿಕಾದ್ಯರು ನಿರುತದಿ ಇದ್ದು ವರವ ಬೀರ್ವರು 6 ನರವಾಹ ವಾಯುಜರಿಗೆ ಸರಿ ಎಂಬೋ ಜ್ಞಾನದಿ ಪಾದ ತೋರಿ ಬೇಗನೆ 7
--------------
ಪ್ರದ್ಯುಮ್ನತೀರ್ಥರು
ಗಮಿಸಿ ಜನರು ನಿಮ್ಮ ಗೃಹಗಳಿಗೆ ುೀಗರಮೆಯರಸಗೆ ನಿದ್ರೆ ರಾಜಿಪುದಾಗಿ ಪನಿಜರೂಪನಾಗಿದ್ದು ನಿಖಿಳವ ನಿರ್ಮಿಸಿರುಜುವಾಗಿ ಜೀವರ್ಗೆ ರಾಗವ ಸಲಿಸಿಭಜಿಸಲು ತನ್ನನು ಬಹು ರೂಪಗಳ ತಾಳಿಯಜನ ತೀರಲು ನಿದ್ರೆಗೈದುವನಾಗಿ 1ಸರಸಿಜೋದ್ಭವನಾಗಿ ಸ್ಟೃಸಿ ಲೋಕವಧರಿಸಿ ಸತ್ವವ ಹಾಗೆ ದೇವನು ಕಾಯ್ವಎರಗಿದವರಿಗಿಷ್ಟವೀಯುತ ಸರ್ವತ್ರಚರಿಸುವನೀ ಶ್ರಮಶಮವಾಗಲಿ 2ವರಿಸುವ ಜನರೀತಗೊಬ್ಬರಲ್ಲಮಿತವುನೆರೆದಿರೆ ವರಗಳ ನೀಡುವ ದಿಟವುವರದ ಶ್ರೀ ತಿರುಪತಿ ವೆಂಕಟಗಿರಿಪ್ರಭುವುವರಿಸಲಿ ನಿದ್ರೆಯ ಹರೆಯಲೋಲಗವು 3ಓಂ ಜಗದ್ಗುರವೇ ನಮಃ
--------------
ತಿಮ್ಮಪ್ಪದಾಸರು
ಗರುಡದೇವನೇ ಪೊರೆಯೊ ಎನ್ನನು ಹರಿಯ ವಾಹನನಾಗಿ ಮೆರೆಯುವ ಗರುಡದೇವನೇ ಪ ಮಾತೆಯ ಮಾನವನುಳಿಸಲೋಸುಗ | ಸುಧೆಯ ಕಲಶವ ಪೊತ್ತು ತಂದೆಯೋ 1 ಹರಿಯು ನಿನ್ನೊಳು ಪೇಮದಿಂದಲೀ ಧರಣಿಯೊಳವತರಿಸಲೊಲ್ಲನು 2 ರಾಕ್ಷಸಾರಿ ರಾಜೇಶ ಹಯಮುಖ ಪಕ್ಷಿರಾಜನೊಳಿಪ್ಪ ಭಾಗ್ಯವು 3
--------------
ವಿಶ್ವೇಂದ್ರತೀರ್ಥ
ಗರುಡನೇರಿ ಬಂದ ಸಿರಿರಮಣನು ತಾನು ಪ ಗರುಡನೇರಿ ಬಂದ ಸಿರಿರಮಣನು ತನ್ನ ಶರಣ ಕರುಣದಿ ಪೊರೆಯಲೋಸುಗ ಭರದಿ ಅ.ಪ. ಕರಿರಾಜನು ಅಂದು ಕ್ರೂರ ನಕ್ರಗೆ ಸಿಲ್ಕಿ ತೆರವಿಲ್ಲದೆ ಕೂಗುತ ಚೀರುತಿರಲು ಸುರರು ಮೊದಲಾಗಿ ಸತಿಸುತ ಬಾಂಧವರು ಅರಿತು ಅರಿಯದಂತೆ ತ್ರಾನದಿಂದ್ದಾಗ 1 ಉತ್ತಾನಪಾದನು ಚಿತ್ತದಿ ಮರುಗದೆ ಮತ್ತೆ ಬÁಲನ ಕರೆದು ಮನ್ನಿಸದೆ ಅತ್ತ ಸಾರೆಂದು ಸುರುಚಿ ನೂಕಿದ ಮೇಲೆ ಚಿತ್ತಜನಯ್ಯನ ಸ್ಮರಿಸಿದ ಮಾತ್ರದಿ 2 ನೀಚ ರುಕ್ಮನು ತನ್ನನುಜಾತೆಯನಂದು ಮಾಚಿಸಿ ಶಿಶುಪಾಲಗೀವೆನೆಂದು ಯೋಚಿಸಿ ಮನದೊಳು ಹರಿಯ ದೂರುತಲಿರೆ ತಾ ಚಿಂತೆ ತಾಳಿದ ರುಕ್ಮಿಣಿಯ ಕೈಪಿಡಿಯಲು 3 ಅಕ್ಷಯ ಪಾತ್ರೆಯ ತೊಳೆದು ಪಾಂಚಾಲೆ ಪಕ್ಷಿದೇರನ ಧ್ಯಾನದೊಳು ಕುಳಿತಿರಲು ಭಿಕ್ಷೆ ಬೇಡುತ ಬಂದು ದೂರ್ವಾಸ ಮುನಿಪನು ಶಿಕ್ಷಿಸೆನೆಂದಾಗ ಸತಿಗೆ ಮುಂದೋರದಂದು 4 ಗರುವ ಪಾರ್ಥನು ಅಂದು ಗಂಗಾ ಶಾಪದಲಿ ಅಸುವ ತೊರೆದು ರಣದೊಳು ಬಿದ್ದಿರಲು ಅರಿತು ಮನದೊಳು ಅನಿಲಜನೊಡಗೂಡಿ ಸಿರಿ ರಂಗೇಶವಿಠಲನು 5
--------------
ರಂಗೇಶವಿಠಲದಾಸರು
ಗರ್ವಿಸುವದು ತರವೆ ಗರ್ವಿಸುವದು ತರವಲ್ಲ ನೀವಿದ ಕೇಳಿ ಸರ್ವೇಶನೊಪ್ಪನೀ ನಡತೆಯ ಕಂಡರೆ ಪತೊಗರಿ :ಬೆಲ್ಲವೆ ಬಾ ನಾನು ತೊಗುರಿಬೇಳೆಯು ನನಗುಲ್ಲಾಸದಿಂದೊಂದು ಯೋಚನೆ ತೋರಿತುಎಲ್ಲರು ಒಬ್ಬಟ್ಟು ಒಳ್ಳಿತೆಂದೆಂಬರುಬಲ್ಲವರಾದರೆ ವಿವರಿಸದಿರುವರೆಸಲ್ಲದ ಮಾತನಾಡಲಿಬೇಡ ಸತ್ಯವನಿಲ್ಲಿ ನನ್ನೊಳು ಪೇಳು ಮತ್ತೆ ನಾಲುವರಿರುವಲ್ಲಿ ನ್ಯಾಯವ ತಿದ್ದಿಕೊಂಬ ನಾವಿಬ್ಬರುಇಲ್ಲದ ಬಳಿಕ ಗೋಧಿಯ ದೆಸೆುಂದೇನುಸಲ್ಲದ ತುಪ್ಪವನೇನ ಮಾಡಲಿಬೇಕುಒಳ್ಳೆಯತನ ನಿನ್ನೊಳು ಇರುವುದಿದನೆಲ್ಲವನೆನಗೆ ಪೇಳು ಸಟೆಯ ಪೇಳಬಲ್ಲೆನೆ ನಾ ನಿನ್ನೊಳು ನಿಮ್ಮೊಳು ನಾನೆಬಲ್ಲಿದನಲ್ಲವೆ ಕೇಳು ನನ್ನನೆ ಯೆಲ್ಲಾಕೊಳ್ಳುವರವನಿಯೊಳು ನೀನೂ ಸ್ವಲ್ಪವಲ್ಲವೆ ನಿಜ ನಮ್ಮೊಳು ಕೋಪಿಸಬೇಡಸಲ್ಲದ ವಸ್ತುಗಳು ಗೋಧಿಯು ಎಣ್ಣೆಯಲ್ಲವೆ ನಿತ್ಯದಲ್ಲೂ ತುಪ್ಪವ ಬಿಡುಪೊಳ್ಳುನುಡಿದರೆನ್ನ ಮಾತೆಲ್ಲ ಪಾಳು 1ಬೆಲ್ಲ :ಏನೆಲೆ ತೊಗುರಿಬೇಳೆಯೆ ನನ್ನ ಸ್ವಲ್ಪವೆಂದೇನು ಕಾರಣವನು ಕಂಡು ನನ್ನೊಡನೀಗನೀನುಸುರಿದೆ ಮಾತು ಹೆಚ್ಚಿ ಬರುತಲಿದೆುೀ ನಡೆ ನಿನ್ನಯ ಶ್ರೇಷ್ಠವದೆನಿಟಷ್ಟೂನಾನಿಲ್ಲದಿರಲು ಸೀಯಾಗುವದೆಂತುರೆನೀನು ಸುಮ್ಮನೆ ಹೇಳಿಕೊಂಬೆ ತನ್ನಯ ಸ್ತುತಿತಾನೆ ಮಾಡಿಕೊಂಬ ಮನುಜಗೆ ನರಕವೆಂಬೀನಿಗದಿಯನರಿತರೆ ಪರನಿಂದೆಯನೀನೆಚ್ಚರಂಗೆಟ್ಟು ಮಾಳ್ಪೆಯ ಇನ್ನಭಿಮಾನವನೀಗ ುರುಯೆನ್ನೆಡೆಯೊಳುನೀನಿರಬೇಡ ಸಾರು ಹೆಚ್ಚುಗೆ ನಿನ್ನದೇನದನೆನಗೆ ತೋರು ದುರ್ಜನರು ತಾವೀನುಡಿ ನಿಜವೆಂಬರು ಸತ್ಪುರುಷರುಮಾನಸದಲಿ ಒಪ್ಪರು ನಿನಗೆ ಅಭಿಮಾನ ಮೊದಲು ಇದ್ದರೂ ಹಾರು ಮುಂದುಜಾಣತನವೆಯಾದರೂ ಹೆದರದಿಪ್ಪೆಹೀನಾಯವೆ ಬಂದರೂ ನಾಲುವರೆನ್ನದೀನಡೆಯೆನ್ನುವರು ಎಂಬುದನೀಗನೀನರಿಯದೆ ಬಂದೆುದು ಪಾಪ ಬೇರು 2ಗೋಧಿ :ಹೋಗಲೆ ತೊಗುರಿ ಬೆಲ್ಲಗಳಿರ ನನ್ನನುಕೂಗಿ ಬೈವಿರಿ ಗೋಧಿ ಯೋಗ್ಯದ ವಸ್ತು ತಾನಾಗದು ಎಂದು ಕೊಬ್ಬಿದ ಮಾತನಾಡುತ ನೀಗಿಕೊಂಬಿರೆ ನಿಮ್ಮ ಮಾನವ ಸದರ ನಿಮಗಾಗಿದೆ ಕೊರಗಿಪರೆ ಮಾತಿನ ಪರಿಯೇಗುವುದೆನಿಸದಿರೆ ನಿಮ್ಮನು ತೃಣಕಾಗಿ ನಾ ಕಾಣುವರೆ ಕಾಣೆನು ಮಾನಹೇಗೆ ನಿಮ್ಮೊಳು ಹೋಗೆ ಯೆನಗೆ ಸಮನಾಗಲು ನೀವು ಬಲ್ಲಿರೆ ುೀ ಯಾಳೆಗೆಹೋಗಿ ನೀವು ಕೊಬ್ಬಿದರೆ ಈಶ್ವರ ಕೃಪೆಯಾಗುವದೆಂತೆನ್ನು ಮರೆಯೊಗಲೊಲ್ಲಿರೆ 3ಎಣ್ಣೆ :ಹರಟಿಕೊಂಬಿರೆ ನೀವೆ ನಿಮ್ಮೊಳು ನನ್ನನುಜರೆಯುತಲೆಣ್ಣೆುಂದೇನೆಂದು ನಾನಿಲ್ಲದಿರಲು ನೀವೆಂತೊಂದು ಗೂಡಿ ಬಾಳುವಿರಿದನರಿಯದೆ ಮುಂಗೆಟ್ಟು ನುಡಿದರೇನಾುತೀಪರಿಯಹಂಕಾರ ಲೇಸಲ್ಲ ಹೀನಾಯವುಬರುವದು ಪರರ ನಿಂದಿಸಿ ಜೀವಿಸುವುದುತರವಲ್ಲ ಸದ್ಗತಿಗೆಟ್ಟು ಕೊನೆಗೆ ಬರದಿರದು ನರಕ ಬೆಂಕಿುಂ ಮೂರುವೇಳೆ ನೀಕೊರಗುವೆ ಬೆಲ್ಲವೆ ಕೇಳು ತೊಗುರಿಯೆ ನೀನಿರದೆ ಸಾರಿಯೊಳು ಬೇಯುವೆ ಗೋಧಿಕೊರಗುವೆ ಕಲ್ಲಿನೊಳು ಚಚ್ಚಿಸಿಕೊಂಡುಇರುವದೆ ನಿಮ್ಮವೊಲು ಕಷ್ಟವದೆಂಬದರಿುರೆ ನೀವು ನನ್ನೊಳು ುಂಥಾ ನಡೆಬರುವುದೆ ಬಹು ಕೇಳಾ ಹೀನಾಯವುಬರದಿರದೀ ಬಾಳು ಯಾತಕೆ ಸುಖಕರ ಮಾರ್ಗ ತಾ ನಿಮ್ಮೊಳು ುಲ್ಲವು ುದನರಿಯದೆ ನಿಮ್ಮಳಲು ಬಿಡದು ನನ್ನಮರೆಯೊಕ್ಕು ಬದುಕುವದಿದು ಬಹುಮೇಲೂ 4ತುಪ್ಪ :ಜಗದೊಳು ನೀವೆ ಬಲ್ಲಿದರೆಂದು ನಿಮ್ಮೊಳುನಿಗದಿಯ ಮಾಡಿಕೊಂಬಿರಿ ಗರ್ವ ಹೆಚ್ಚಿತೆಸುಗುಣವಂತರು ನೀವಾದರೀಪರಿಯಲ್ಲಿಬಗುಳಿಕೊಂಬಿರೆ ತುಪ್ಪವಂ ಬಿಡುಯೆನ್ನುತಮಿಗೆ ಸುರತತಿ ಮೊದಲಾಗಿ ನನ್ನಿಂದಲಿಸೊಗಸಾಗಿ ಕೃಪೆವಡೆವರು ನಾನಿಲ್ಲದೆಮಿಗೆ ಶುದ್ಧರಾಗುವಿರೆಂತು ಬರಿದೆ ನಿಮ್ಮನಿಗದಿಯ ಪೇಳಿಸಿಶಾನಿಗೆ ನನ್ನ ನೀವಗಲಲು ರುಚಿಕರವೆಂತು ನಾನೊಪ್ಪೆನುನಿಗಮದ ಮಾತಿದುವೆ ಸಟೆಯ ಮಾಡಿಸೊಗಸಾಗಿ ಬಾಳಿ ನೀವೆ ಅನ್ಯಾಯಗಳಗಣಿತವಾಗಿುವೆ ನನ್ನಯ ನ್ಯಾಯನಿಗದಿಯಾದರೆ ಹೋಗುವೆ ತಪ್ಪಿದರೆ ಈಜಗದೊಳಗ್ನಿಯ ಪೊಗುವೆ ನಿಮಗೆ ಆಣೆಯಗಲಿದರಿಲ್ಲಿಂದವೆ ಪೋಟಾಟವೆಜಗದೊಳುತ್ತಮ ವಸ್ತುವೆ ನಾನೆಂಬರುಬಗೆುರೆನ್ನನು ನೀವೆ ಮೊಂಡರುಯೆಂದುಖಗವಾಹನಗೆ ಪೇಳುವೆ ಚಿಕ್ಕನಾಗನಗರಕೆ ನಡೆುರಿ ನ್ಯಾಯವ ತಿದ್ದುವೆ 5ಒಟ್ಟಾಗಿ :ದೇವ ಭಕ್ತಾವನ ಪಾವನ ಚರಿತ ಸುರಾವಳಿನುತಪಾದಭಾವಜ ಜನಕ ರಮಾವಲ್ಲಭಾನಂತ ಗೋವಿಂದ ಮಾಧವನೀವರಿಯದೆ ಪೋಗಲಾವಗತಿ ನಮಗೀ ವಸುಧೆಯೊಳ್ಮುನಿಭಾವಿತ ಚರಣನೆಸಾವಧಾನದೊಳು ಪರಾಮರಿಸಿುಂತಪ್ಪದಾವಲ್ಲಿುದ್ದಡಲ್ಲಿಗೆ ತಕ್ಕ ಶಿಕ್ಷೆಯನೇ ವಿರಚಿಸಿ ಗುಣವಿದ್ದಲ್ಲಿ ರಕ್ಷಿಪುದಾವ ಪರಿಯಲಾದರು ಜಗನ್ನಾಥನೆುೀವ್ಯವಹಾರವನು ನಿಗದಿಗೈದುನೀವೊಲಿದೆಮ್ಮುವನು ರಕ್ಷಿಸಬೇಕು ದೇವಾದಿದೇವ ನೀನು ಅನಾಥರ ಕಾವಲ್ಲಿ ದಯಾವಂತನುಸುಜನಪತಿ ಭಾವಿತ ಪಾದಪದ್ಮನು ನೀನೆ ಗತಿನಾವರಿದನ್ಯರನು ಬಾಳುವೆವೆಂತುರಾವಣಾರಿಯೆ ನೀನು ಕೈಪಿಡಿ ಗತಿುವರೆದಿಕ್ಕು ನೀನು ಮಾಡಿನ್ನೇನುಭಾವಿಸೆವನ್ಯರನು ನಮ್ಮಿಂದಲಿಸೇವೆಗೊಳುವ ನೀನಿರಲು ಭಜಿಸದೆ ನಾವು 6ಬರಿದೆ ಜಗಳವಾಡಬೇಡವೀಚೆಗೆ ಬನ್ನಿಒರೆಯುವೆ ಬುದ್ಧಿಯ ಕೇಳಲಿಚ್ಛಿಸಿದರೆತರುಣನಾಗಾಖ್ಯಪುರದ ವೆಂಕಟೇಶನುಗುರುವಾಸುದೇವಾವತಾರವ ತಾಳಿಯೆಕರುಣದಿಂ ತಿಮ್ಮದಾಸನ ಬಹುದೋಷವ ಪರಿದಾಳ್ದನೆಂಬ ಬಿರುದಪೊತ್ತು ನಾನೀಗಮೆರೆಯುವೆನೀವೆಲ್ಲ ಬರಿ ಮಾತ ಮಾಡದೆಶಿರದಲಿ ಹೊತ್ತು ನನ್ನಯ ನುಡಿಗೇಳಲುಬರುವುದು ಕೀರ್ತಿ ಮೂಜಗದೊಳಗದರಿಂದನೆರೆುೀಗ ನೀವೆಲ್ಲರೂ ಒಂದಾಗಿಯೆುರಲು ಸೌಖ್ಯವದೆಂಬರು ವಿಂಗಡದಿ ನೀವಿರಲು ಜನರು ಬೈವರು ಕೂಡಲು ನನ್ನಗುರುದಯ ಬಹುದೆಲ್ಲರು ಹಿಗ್ಗುವರು ಮತ್ತರಿತು ಸಾರವ ಕೊಂಬರು ಬಹಳ ಶ್ರೇಷ್ಠರುವದರಿಯದಿದ್ದರೂ ಹೊಣೆಯ ನೀವೆನೆರೆ ನಿಮ್ಮನೀ ಜನರು ಬೈಯದ ಹಾಗೆಉರು ಶಿಕ್ಷೆಯನೆ ಮಾಳ್ಪರು ಯಾರೆಂಬಿರೆಅರಿುರಿ ಗಂಗಪ್ಪ ಹೊಣೆ ಹೋಗಿನ್ನಾದರು7
--------------
ತಿಮ್ಮಪ್ಪದಾಸರು
ಗಾಡಿಪಂಥ ಮಾಡಬೇಡೆಲೈ ಪ. ಮಾರುತಿಸೇವ್ಯನೆ ಧೀರ ದಾತಾರನೆ ಕೋರಿ ಭಜಿಪೆ ಬೇಗ ಬಾರೈ ಸುಂದರ 1 ನಾರಿಯರ್ನಿನ್ನನು ಸಾರಿಕರೆವರೈ ಧಾರಣಿಜಾತೇಸಹ ಸಾರಿ ಬಾಬಾ ಬೇಗ 2 ಭವಭಯದೂರನೆ ಭಕ್ತಮಂದಾರನೆ ಭಾವಜ ಜನಕನೆ ದೇವಾದಿದೇವನೆ3 ಶೇಷಗಿರೀಶನೆ ದಾಸಜನಾಶ್ರಯನೆ ವಾಸವವಂದಿತನೆ ಶ್ರೀ ವಾಸುದೇವನೆ 4
--------------
ನಂಜನಗೂಡು ತಿರುಮಲಾಂಬಾ
ಗಾನ ವಿಲೋಲನ ನಾಮ ಸುಧಾರಸ ಪಾನಮಾಡು ಸತತ ಪ ಹೀನ ಮನವ ಬಿಟ್ಟು ಸಾನುರಾಗದಿಂದ ಜಾನಕಿ ವಲ್ಲಭ ಆನಂದಮಯನೆಂದ ಅ.ಪ ಉಡಿಗೆ ತೊಡುಗೆಗಳ ಸಡಗರವೆಲ್ಲವು ಕಡು ದು:ಖ ದೇಹವು ನಡುಗುವತನಕ ನಡುಗಲು ದೇಹವು ಮಡದಿ ಮಕ್ಕಳುಗಳು ಒಡೆಯನಾದರು ನಿನ್ನ ಸಿಡುಗುಟ್ಟುವರು 1 ಹಸಿವು ಬಾಯಾರಿಕೆ ಶಿಶು ಮೋಹಗಳಿಂದ ಪಶುಪಕ್ಷಿಗಳೆಲ್ಲ ನಿನಗೆ ಸಮ ವಸುಧೆಯೊಳಗೆ ನಿನಗೆ ಅಸಮ ವಿವೇಕವ ಬಿಸಜಾಕ್ಷನೀಯಲು ಸುಸಮಯವೆಂದರಿತು 2 ತನ್ನನು ನೆನೆಯಲು ಘನ್ನ ಮಹಿಮೆ ಪ್ರ ಸನ್ನ ಮೂರುತಿಯು ಎನ್ನವನೆಂದು ನಿನ್ನಪರಾಧವ ಮನ್ನಿಸಿ ಸಲಹುವ ಚಿನ್ಮಯ ಮೂರುತಿ ಬಿನ್ನೈಸುವೆನೆಂದು 3
--------------
ವಿದ್ಯಾಪ್ರಸನ್ನತೀರ್ಥರು
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗಿರಿಜೇಶಾ ಕರುಣಾ ಸಮುದ್ರ ಪರಿಪಾಲಿಸೆನ್ನನು ಓ ರುದ್ರ ಪ ಪುರಹರ ಉರುಗಭೂಷಾ ಶರಣತೋಷಾಭವ ಭೂತೇಶಾ ಅ.ಪ ಬಳಲುವೆನುಬೇಡಿಕೊಂಬೆನು ಪಾಲಿಸೊ ನೀನು 1 ಅನುದಿನದಿ ಶ್ರವಣ ಮನನವ ಮಾಡಿಸಿ ಘನಪಾಪವ ಖಂಡ್ರಿಸುದೇವ ಮೃತ್ಯುಂಜಯ ಶಿವ 2 ಕಾಮನಗೆಲಿದಾ ಮಹಾಮಹಿಮನೆ ಗುರು- ರಾಮವಿಠಲನ ಸಖನೆ ನಿನ್ನ ಪ್ರಾರ್ಥಿಸುವೆನಾ 3
--------------
ಗುರುರಾಮವಿಠಲ