ಒಟ್ಟು 294 ಕಡೆಗಳಲ್ಲಿ , 64 ದಾಸರು , 268 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು
ಕೊಟ್ಟುರಾಯ ಸಂತುಷ್ಟನಾದಕೃಷ್ಣನರಸಿಯರಿಗೆ ಶ್ರೇಷ್ಠದ ಉಚಿತವ ಪ.ನೀಲಮಾಣಿಕದೊಸ್ತ ಸಾಲದೆ ಹಿಡಿದೇಜಿಮೇಲು ಜರತಾರಿಪಟ್ಟಾವಳಿಮೇಲು ಜರತಾರಿಪಟ್ಟಾವಳಿಉಚಿತವನೀಲಾದೇವಿಗೆ ದೊರೆ ಕೊಟ್ಟ 1ಸಾರಾವಳಿಯ ಸೀರೆ ಥೋರ ಮುತ್ತಿನ ವಸ್ತಹಾರಭಾರಗಳು ಹಿಡಿದೇಜಿ ಮೊದಲಾಗಿಹಾರಭಾರಗಳು ಹಿಡಿದೇಜಿ ಚಾಮರವನಾರಿ ಭದ್ರಾಗೆ ದೊರೆಕೊಟ್ಟ 2ಮುತ್ತಿನ ಝಲ್ಲೆ ವಸ್ತ ಮತ್ತೆ ಕುದುರೆಯ ಸಾಲುಛsÀತ್ರಚಾಮರ ದಿವ್ಯಪಟ್ಟಾವಳಿಛsÀತ್ರಚಾಮರ ಉಚಿತವಮಿತ್ರವಿಂದಾಗೆ ದೊರೆ ಕೊಟ್ಟ 3ಬರಿಯ ಮಾಣಿಕದೊಸ್ತ ಜರದಪಟ್ಟಾವಳಿಸೀರೆತುರುಗ ತಂಬಟಿಯು ಮೊದಲಾಗಿತುರಗತಂಬಟಿಯು ಮೊದಲಾಗಿಹೆಗ್ಗಾಳೆಹರದಿಕಾಲಿಂದಿಗೆ ದೊರೆಕೊಟ್ಟ4ಲಕ್ಷ ಮಾಣಿಕದೊಸ್ತ ಪಕ್ಷಿಯಂತೆಹಾರುವಕುದುರೆಲಕ್ಷ ಸೂರ್ಯರ ಬೆಳಕಿಲೆಲಕ್ಷ ಸೂರ್ಯರ ಬೆಳಗುವ ಉಚಿತವಲಕ್ಷಣದೇವಿಗೆ ದೊರೆಕೊಟ್ಟ 5ಪಚ್ಚ ರತ್ನದವಸ್ತ ಅಚ್ಚ ಜರತಾರಿ ಸೀರೆಹೆಚ್ಚಿನ ಧನ ಕುದುರೆ ರಥಗಳುಹೆಚ್ಚಿನ ಧನ ಕುದುರೆ ರಥ ಜಾಂಬವಂತಿಅಚ್ಯುತನ ಮಡದಿಗೆ ದೊರೆಕೊಟ್ಟ 6ಹದಿನಾರು ಸಾವಿರ ಚದುರೆಯರುಅದ್ಭತ ವಸ್ತ ರಥಗಳುಅದ್ಭುತ ವಸ್ತ ರಥಗಳು ರಾಮೇಶನಸುದತೆಯರಿಗೆ ದೊರೆ ಕೊಟ್ಟ 7
--------------
ಗಲಗಲಿಅವ್ವನವರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಗರುಡಗಮನಬಂದನೋ-ನೋಡಿರೊ ಬೇಗಗರುಡಗಮನಬಂದನೋಪಗರುಡಗಮನಬಂದ ಧರಣಿಯಿಂದೊಪ್ಪುತಕರೆದು ಬಾರೆನ್ನುತ ವರಗಳ ಬೀರುತ ಅ.ಪಎನ್ನ ರಕ್ಷಿಪ ದೊರೆ ಇಲ್ಲಿಗೆ ತಾ ಬಂದಚಿನ್ನದೊಲ್ ಪೊಳೆವವಿಹಂಗರಥದಲಿ ||ಘನ್ನ ಮಹಿಮ ಬಂದsಚ್ಛಿನ್ನ ಮೂರುತಿ ಬಂದಸಣ್ಣ ಕೃಷ್ಣನು ಬಂದ ಬೆಣ್ಣೆಗಳ್ಳನು ಬಂದ 1ಪಕ್ಷಿವಾಹನ ಬಂದ ಲಕ್ಷ್ಮೀಪತಿಯು ಬಂದಕುಕ್ಷಿಯೊಳೀರೇಳು ಜಗವನಿಟ್ಟವ ಬಂದ ||ಸೂಕ್ಷ್ಮ-ಸ್ಥೂಲದೊಳಗಿರುವನು ತಾ ಬಂದಸಾಕ್ಷೀ ಭೂತನಾದ ಸರ್ವೇಶ್ವರ ಬಂದ 2ತಂದೆಪುರಂದರವಿಠಲರಾಯ ಬಂದಬಂದುನಿಂದುನಲಿದಾಡುತಿಹ ||ಅಂದು ಸಾಂದೀಪನ ನಂದನನ ತಂದಿತ್ತಸಿಂಧುಶಯನ ಆನಂದ ಮೂರುತಿ ಬಂದ3
--------------
ಪುರಂದರದಾಸರು
ತಲ್ಲಣಿಸದಿರು ಕಂಡ್ಯ ತಾಳು ಮನವೆ ಸ್ವಾಮಿನಿಲ್ಲದಲೆ ರಕ್ಷಿಸುವಸಂದೇಹಬೇಡಪಬೆಟ್ಟದ ತುದಿಯಲ್ಲಿ ಬೆಳೆದ ವೃಕ್ಷಂಗಳಿಗೆಕಟ್ಟೆ ಕಟ್ಟುತ ನೀರ ಹೊಯ್ವರಾರುಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದ ಮೇಲೆಕೊಟ್ಟು ರಕ್ಷಿಸುವನು ಇದಕೆಸಂದೇಹಬೇಡ1ಅಡವಿಯೊಳಗಾಡುವ ಮೃಗಜಾತಿ ಪಕ್ಷಿಗಳಿಗೆಅಡಿಗಡಿಗೆ ಆಹಾರವಿತ್ತವರದಾರುಪಡೆದ ಜನಿನಿಯಂತೆ ಸಾರಥಿಯಾಗಿ ತಾಬಿಡದೆ ರಕ್ಷಿಸುವನು ಇದಕೆ ಸಂದೇಹಬೇಡ 2ಕಲ್ಲೊಳಗೆ ಪುಟ್ಟಿ ಕೂಗುವ ಮಂಡೂಕಂಗಳಿಗೆಅಲ್ಲಿ ಹೋಗಿ ಆಹಾರವಿತ್ತವರದಾರುಬಲ್ಲಿದನು ಪುರಂದರವಿಠಲರಾಯನಿಲ್ಲದೇ ರಕ್ಷಿಪನು ಇದಕೆ ಸಂದೇಹಬೇಡ 3
--------------
ಪುರಂದರದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದೇವ ಬಂದ ನಮ್ಮ ಸ್ವಾಮಿ ಬಂದನೋದೇವರ ದೇವಶಿಖಾಮಣಿಬಂದನೋಪಉರಗಶಯನ ಬಂದ ಗರುಡಗಮನಬಂದನರಗೊಲಿದವ ಬಂದ ನಾರಾಯಣ ಬಂದ 1ಮಂದರೋದ್ಧಾರ ಬಂದಮಾಮನೋಹರಬಂದವೃಂದಾವನಪತಿಗೋವಿಂದ ಬಂದ2ನಕ್ರಹರನು ಬಂದ ಚಕ್ರಧರನು ಬಂದಅಕ್ರೂರಗೊಲಿದ ತ್ರಿವಿಕ್ರಮ ಬಂದ 3ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದಅಕ್ಷಯಫಲದ ಶ್ರೀ ಲಕ್ಷ್ಮೀ ರಮಣ ಬಂದ4ನಿಗಮಗೋಚರ ಬಂದನಿತ್ಯತೃಪ್ತನು ಬಂದನಗೆ ಮುಖಪುರಂದರವಿಠಲ ಬಂದನೋ5
--------------
ಪುರಂದರದಾಸರು
ದೇವದೇವೇಶ ಶ್ರೀ ಹರಿಯಲ್ಲದೆ ಪ.ಆವ ತಂದೆಯು ಸಲಹಿದನು ಪ್ರಹ್ಲಾದನಆವ ತಾಯಿ ಸಲಹಿದಳು ಧ್ರುವರಾಯನಆವ ಸುತ ಸಲಹಿದನು ಆ ಉಗ್ರಸೇನನಜೀವರಿಗೆ ಪೋಷಕನು ಹರಿಯಲ್ಲದೆ 1ಆವ ಬಂಧುವು ಸಲಹಿದನು ಗಜರಾಜನನುಆವಪತಿ ಕಾಯ್ದ ದ್ರೌಪದಿಯಮಾನ ||ಆವ ಸೋದರರು ಸಲುಹಿದರು ವಿಭೀಷಣನಜೀವರಿಗೆ ದಾತೃ ಶ್ರೀ ಹರಿಯಲ್ಲದೆ 2ಆವನಾಧಾರ ಅಡವಿಯೊಳಿಪ್ಪ ಮೃಗಗಳಿಗೆಆವ ರಕ್ಷಕ ಪಕ್ಷಿಜಾತಿಗಳಿಗೆಆವ ಪೊಷಕನು ಗರ್ಭದಲ್ಲಿದ್ದ ಶಿಶುಗಳಿಗೆದೇವ ಶ್ರೀ ಪುರಂದರವಿಠಲನಲ್ಲದಲೆ 3
--------------
ಪುರಂದರದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ನಂಬಿದೆ ನಾಗರಾಜ ಹರಿಯ ಪಾ-ದಾಂಭೋಜಭಕ್ತಿಭಾಜ ಪ.ಶಂಭುಶಕ್ರಾದ್ಯರು ಹಂಬಲಿಪರು ನಿನ್ನತುಂಬಿದ ಜೀವಕದಂಬಾಭಿಮಾನಿಯೆ ಅ.ಪ.ಸಾವಿರ ಜಿಹ್ವೆಯೊಳು ಹರಿಯ ಸ್ತುತಿಗೈವೆನಿರತಕೃಪಾಳುಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟುದೇವೇಶನಾದರು ಯಾವನು ಬಣ್ಣಿಪಶ್ರೀವಧೂವರನ ಕಮಲಪದ ರಾ-ಜೀವ ಸೌಂದರ್ಯವನು ತನ್ನಯಸಾವಿರಾಕ್ಷಿಗಳಿಂದ ಕಾಣುತಕೇವಲಾನಂದಾಬ್ಧಿ ಮಗ್ನನೆ 1ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆಧರಿಸಿದೆ ಸುಪ್ರಚಂಡವರರಘುರಾಮನಾವರಜ ಲಕ್ಷ್ಮಣನಾದೆಹರಿಕೃಷ್ಣರಾಯನ ಪಿರಿಯನಾಗಿ ಅವ-ತರಿಸಿ ಭೂಭಾರವನುರೆ ಸಂ-ಹರಿಸಿ ವೇದ ಪುರಾಣ ತತ್ತ್ವವಶರಣಜನರಿಗೆ ಬೋಧಿಸುವ ಮಹಾಕರುಣಿ ಕಮಲಾಕಾಂತನ ಭಕ್ತನೆ 2ಲಕ್ಷ್ಮೀನಾರಾಯಣನ ನಿದ್ರಾಸ್ಪದರಕ್ಷಿಸು ಕೃಪೆಯಿಂದೆನ್ನಸಾಕ್ಷಾದಚಲರೂಪ ನಿನ್ನೊಳು ನೆಲಸಿದಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸಮೋಕ್ಷ ಮಾರ್ಗಪ್ರದರ್ಶಿ ಸತತ ಮು-ಮುಕ್ಷು ಜನಮನಹರ್ಷ ನಿರ್ಜರ-ಪಕ್ಷ ಸುಫಲಪ್ರದ ಸದಾ ನಿರ-ಪೇಕ್ಷ ಗುರುವರ ರಾಕ್ಷಸಾಂತಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನವರತ್ನ ಖಚಿತ ಮಾಣಿಕ್ಯದ ಮಂಟಪದಿನವವಿಧದ ಹಂಸತೂಲಿಕ ತಲ್ಪದಲಿಭುವನಮೋಹನ ಶ್ರೀಹರಿಪವಡಿಸಿರಲುಕವಿಗಳು ಪೊಗಳಿ ಪಾಡುವರು ಶ್ರೀಹರಿಯೆಏಳಯ್ಯ ಬೆಳಗಾಯಿತು 1ನಾಗಶಯನನೆ ಏಳು ನಾಗಾರಿವಾಹನನೆನಾಗಸಂಪಿಗೆ ಪಾರಿಜಾತವರಳುತಿದೆಬೇಗದಲಿ ಭಾಗೀರಥಿ ಉದಕವನೆ ತಂದುನಾಗಕನ್ನಿಕೆಯರು ಕಾದು ನಿಂತಿಹರುಏಳಯ್ಯ ಬೆಳಗಾಯಿತು 2ಅತ್ರಿ ವಸಿಷ್ಠ ಭಾರದ್ವಾಜ ಗೌತಮರುಸುತ್ತೆಲ್ಲ ಋಷಿಗಳು ಸ್ತೋತ್ರವನೆ ಮಾಡುತ್ತಮಿತ್ರೆರುಕ್ಮಿಣಿ ಭಾಮೆರಿಂದ ಸೇವಿಪ ಹರಿಗೆಮುತ್ತಿನಾರತಿ ಪಿಡಿದು ನಿಂದಿಹರು ಹರಿಯೆಏಳಯ್ಯ ಬೆಳಗಾಯಿತು 3ಲಕ್ಷ್ಮಿರಮಣನೆ ಏಳು ಪಕ್ಷಿವಾಹನ ಏಳುಕುಕ್ಷಿಯೊಳು ಜಗವನಿಂಬಿಟ್ಟವನೆ ಏಳುರಕ್ಷ ಶಿಕ್ಷಕ ಜಗದ್ರಕ್ಷಕನೆ ನೀ ಏಳುಈಕ್ಷಿಸಿ ಭಜಕರನುದ್ದರಿಸಲೇಳುಏಳಯ್ಯ ಬೆಳಗಾಯಿತು 4ಕಮಲಮಲ್ಲಿಗೆ ಜಾಜಿಕುಸುಮಮಾಲೆಗಳನ್ನುಕಮಲಾಕ್ಷಿಗರ್ಪಿಸುತ ಹರುಷದಿಂದಕಮಲನಾಭ ವಿಠ್ಠಲ ಸಲಹು ಸಲಹೆಂದೆನುತಕಮಲಭವೇಂದ್ರಾದಿಗಳು ಸ್ತುತಿಸುವರು ಹರಿಯೆಏಳಯ್ಯ ಬೆಳಗಾಯಿತು 5ಏಳು ಧೃವವರರೂಪ ಏಳು ನರಹರಿರೂಪಏಳುನಗಧರರೂಪಏಳಯ್ಯ ಹರಿಯೆಏಳಯ್ಯ ಬೆಳಗಾಯಿತು
--------------
ನಿಡಗುರುಕಿ ಜೀವೂಬಾಯಿ
ನಳಿನಜಾಂಡತಲೆಯದೂಗೆ |ಇಳೆಯು ನಲಿದು ಮೋಹಿಸುತಿರಲು ||ಕೊಳಲ ಪಿಡಿದು ಬಾರಿಸಿದನು |ಚೆಲುವ ಕೃಷ್ಣರಾಯನು ಪಪೊಳೆವ ಪೊಂಬಟ್ಟೆಯ ದಟ್ಟಿ |ಅಳವಡಿಸಿ ನೆಗಹಿನಿಂದ ||ಹಲವು ರನ್ನದುಂಗುರವಿಟ್ಟ |ಚೆಲುವ ಬೆರಳ ನಟಿಸುತ |||ಲಲಿತವಾಮಭಾಗತೋಳ-|ಲೊಲಿದು ಓರೆನೋಟದಿಂದ ||ಬಲದಪಾದಎಡಕೆ ಚಾಚೆ |ನಳಿನಪದಗಳೊಪ್ಪುತಿರಲು 1ಸೆಳನಡುವಿನೊಳಗೆ ಕತ್ತರಿ |ಕಳೆಯ ಸಂಚಿ, ಗಜುಗು ಚೀಲ ||ಬಿಳಿಯ ಮಣಿಯು ಗುಳ್ಳೆಗಳಿರಲು |ಮಲಯಜಾನು ಲೇಪನ ||ಜಲಜನೇತ್ರ ಕೌಸ್ತುಬಾಧಿ-|ಗಳದಿ ಸ್ವರಗಳೊಪ್ಪುತಿರಲು ||ಲಲಿತವೇಣುಕಲ್ಪನೆಯಲಿ ಗೋ-|ವಳರೆಲ್ಲರು ಕುಣಿಯಲು 2ಮಾರವಿ ದೇಸಿ ಗುರ್ಜರಿ ಭೈರವಿ |ಗೌರಿನಾಟಿಸಾವೇರಿ ಆಹೇರಿ ||ಪೂರವಿ ಕಾಂಬೋದಿ ಪಾಡಿ ದೇಶಾಕ್ಷಿ ಶಂ-|ಶಕರಾಭರಣ ರಾಗದಿ ||ಪೂರವಿ ಕಲ್ಯಾಣಿ ವಸಂತ ತೋಡಿ |ವರಾಳಿ ಗುಂಡಕ್ರಿ ಸಾರಂಗ ಸಾಳಗ ||---------------------ಸೋರಟ ಭೂಪಾಳಿ ಶ್ರೀ ರಾಗದಿಂದಲಿ 3ಹರುಷದಿ ಬಾರಿಸುವ ರವಕೆ |ಪುರದ ಸ್ತ್ರೀ ಜನರು ಎಲ್ಲ ||ಮರೆದು ಮಕ್ಕಳ ಮನೆಯ ಕೆಲಸ |ಮರೆದು ಹರಿಯ ಬಳಸಲು ||ಕರಿಯು ಮೃಗವುಕೇಸರಿಶರಭ|ಹರಿಣ ನವಿಲುಉರಗಮೋಹಿಸಿ ||ನೆರೆದು ಮರೆದು ಜಾತಿವೈರವ |ಸ್ವರವ ಕೇಳುತಿರಲು 4ಕರಗೆ ಗಿರಿಯ ಕಲ್ಲು ತರುಗ-|ಳೆರಗಿ ಪಕ್ಷಿ ತತಿಗಳಿರಲು ||ಸುರರುಸುಮನ ಸುರಿಯುತಿರಲು |ಧರೆಯು ಮುದದಿ ಕುಣಿಯುತಿರಲು ||ಶರಧಿಉಕ್ಕಿಸರಿತುಸೊಕ್ಕಿ |ಪುರರಿಪುವಿಧಿಪೊಗಳುತಿರಲು ||ವಿರಚಿಸಿದ ಪುರಂದರವಿಠಲ |ಮುರಲಿಗಾನ ಮಾಡಿದ 5
--------------
ಪುರಂದರದಾಸರು
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು
ನಿನ್ನ ನೋಡಿ ಧನ್ಯನಾದೆನೊ - ಹೇ ಶ್ರೀನಿವಾಸ ಪನಿನ್ನ ನೋಡಿ ಧನ್ಯನಾದೆ ಎನ್ನ ಮನದಿ ನಿಂತು ಸುಪ್ರ-ಸನ್ನ ದಯಮಾಡಿ ನೀನು ಮುನ್ನಿನಂತೆ ಸಲಹ ಬೇಕೋ ಅ.ಪಲಕ್ಷ್ಮಿರಮಣ ಪಕ್ಷಿವಾಹನ ಲಕ್ಷ್ಮಿ ನಿನ್ನ ವಕ್ಷದಲ್ಲಿರಕ್ಷಣ ಶಿಕ್ಷಣ ದಕ್ಷ ಪಾಂಡವ ಪಕ್ಷ ಕಮಲಾಕ್ಷ ರಕ್ಷಿಸು 1ದೇಶದೇಶಗಳನು ತಿರುಗಿ ಆಶಾಬದ್ಧನಾದೆ ಸ್ವಾಮಿದಾಸನೆನಿಸಿ ಎನ್ನ ಜಗದೀಶ ಕಾಯೋ ವಾಸುದೇವ 2ಕಂತುಜನಕಕೊಟ್ಟು ಎನಗೆ ಅಂತರಂಗದ ಸೇವೆಯನ್ನುಅಂತರವಿಲ್ಲದೆ ಪಾಲಿಸಯ್ಯಹೊಂತಕಾರಿಪುರಂದರವಿಠಲ
--------------
ಪುರಂದರದಾಸರು
ನಿನ್ನನಾಶ್ರಯಿಸುವೆ - ನಿಗಮಗೋಚರನಿತ್ಯಬೆನ್ನ ಬಿಡದಲೆ ಕಾಯೊ ಮನದಿಷ್ಟವೀಯೋ ಪಕುಂದಣದ ಆಶ್ರಯವು ನವರತ್ನಗಳಿಗೆಲ್ಲಚಂದಿರನ ಆಶ್ರಯ ಚಕೋರಗಳಿಗೆ ||ಕಂದರ್ಪನಾಶ್ರಯ ವಸಂತ ಕಾಲಕ್ಕೆ ಗೋವಿಂದ ನಿನ್ನಾಶ್ರಯವು ಮರಣಕಾಲದೊಳು 1ಹಣ್ಣುಳ್ಳ ಮರಗಳು ಪಕ್ಷಿಗಳಿಗಾಶ್ರಯವುಪುಣ್ಯನದಿಗಳು ಋಷಿಗಳಿಂಗೆ ಆಶ್ರಯವು ||ಕಣ್ಣಿಲ್ಲದಾತನಿಗೆ ಕೈಗೋಲಿನಾಶ್ರಯವುಎನ್ನಿಷ್ಟ ಪಡೆಯುವರೆ ನಿನ್ನ ಆಶ್ರಯವು 2ಪತಿವ್ರತಾವನಿತೆಗೆ ಪತಿಯೊಂದೆ ಆಶ್ರಯವುಯತಿಗಳಿಗನುಶ್ರುತದಿ ಪ್ರಣವದಾಶ್ರಯವು ||ಮತಿವಂತನಿಗೆಹರಿಸ್ತುತಿಗಳೇ ಆಶ್ರಯವುಹಿತವಹುದು ಪುರಂದರವಿಠಲನಾಶ್ರಯವು 3
--------------
ಪುರಂದರದಾಸರು