ಒಟ್ಟು 1457 ಕಡೆಗಳಲ್ಲಿ , 99 ದಾಸರು , 1157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮದೇವ ನೀನೆಂದು ನಂಬಿದೆ ಆವಾವುದೆನಗಾಗಬೇಕೊ ಕಾಣೆ ಪ ಈವುದೆಲ್ಲವಿತ್ತು ಪದವಿ ಪಾಲಿಸಯ್ಯ ಅ.ಪ ಶರಣೆನ್ನುವರ ದುರಿತಹರನೆ ಹರಿಯೆ ಹಸ್ತ ನೀಡಿ ಕಾಪಾಡುವೈ ಪರಮ ಕೃಪಾಳುವು ನೀನಲ್ಲವೆ ನರರ ಜಾಜಿಪಟ್ಟಣವಾಸ ಶ್ರೀನಿವಾಸ 1
--------------
ಶಾಮಶರ್ಮರು
ಕಾಮಿನಿಯರು ನೆರದೊಂದಾಗಿಪ್ರೇಮದಿ ಧವಳಾರವ ಪಾಡಲುಶ್ರೀ ಮಹಾಲಕ್ಷ್ಮಿ ಜಯವೆಂದುಜಯವೆಂದುಶ್ರೀಕೃಷ್ಣರಾಯಗೆಹೇಮದಾರತಿಯ ಬೆಳಗಿರೆ 1 ಸಿಂಧುರಗಮನೆಯರತಿ ಹರುಷದಲಿಚಂದದಿ ನಲಿದಾಡುತ ಪಾಡುತಇಂದಿರಾರಮಣ ಜಯವೆಂದುಜಯವೆಂದುಶ್ರೀ ಮಹಾಲಕ್ಷ್ಮಿಗೆಕುಂದಣದಾರತಿಯ ಬೆಳಗಿರೆ 2 ಕರದ ಕಂಕಣ ಝಣಝಣರೆನಲುಗುರುತು ಚವಲುಗಾಡಲು ಮುತ್ತಿನಕೊರಳಹಾರಗಳು ಹೊಳೆಯಲುಹೊಳೆಯಲುಶ್ರೀಕೃಷ್ಣರಾಯಗೆಕುರುಜಿನಾರತಿಯ ಬೆಳಗಿರಿ3 ಹಾರಪದಕ ಕಂಕಣದವರು ವೈ-ಯ್ಯಾರದ ಹೊಸ ಹರೆಯದಂಗನೆಯರುರಾರಾಜಿಪ ಚಂದ್ರಮುಖಿಯರುಮುಖಿಯರುಶ್ರೀ ಮಹಾಲಕ್ಷ್ಮಿಗೆಕುರುಜಿನಾರತಿಯ ಬೆಳಗಿರೆ 4 ಕಸ್ತೂರಿ ತಿಲಕದ ಸೊಬಗಿಯರು ಸು-ವೃತ್ತಸ್ತನತಟದ ಜವ್ವನೆಯರುಆರ್ತಿಯಿಂ ಪಾಡಿ ಪೊಗಳುತಪೊಗಳುತಶ್ರೀ ಕೃಷ್ಣರಾಯಗೆಮುತ್ತಿನಾರತಿಯ ಬೆಳಗಿರೆ5 ಬೆರಳುಂಗುರ ಥಳ ಥಳಥಳಿಸಿಸಿರಿಮೊಗದೊಳು ಕಿರಿಬೆಮರೊಗೆಯಲುಹರುಷದಿ ಪಾಡಿ ಪೊಗಳುತಪೊಗಳುತಲಿಶ್ರೀ ಮಹಾಲಕ್ಷ್ಮಿಗೇಸರಸಿಜದಾರರತಿಯ ಬೆಳಗಿರೆ 6 ಕನ್ನಡಿಗದಪಿನ ಚದುರೆಯರು ಚೊಕ್ಕಚಿನ್ನದ ಸರಪಣಿಯಿಟ್ಟಂಗನೆಯರುಚೆನ್ನಾಗಿ ಪಾಡಿ ಪೊಗಳುತಪೊಗಳುತಕೆಳದಿಯ ಶ್ರೀ ಕೃಷ್ಣಗೆರನ್ನದಾರತಿಯ ಬೆಳಗಿರೆ 7
--------------
ಕೆಳದಿ ವೆಂಕಣ್ಣ ಕವಿ
ಕಾಯ ಪಾದ ಪದುಮ ದಾಸ್ಯವನಿತ್ತು ಪ ಕಂಸಾರಿ ತವ ಪಾದಪಾಲಿಸುವನೆ ಶಿರದೊಳಗಸಂಶಯದಿ ಧರಿಸೀ |ವಿಂಶತಿಯ ಮತ್ತೊಂದು ಭಾಷ್ಯ ದೂಷಕ ಮರು-ತ್ತಂಶ ಸಂಭೂತ ಶ್ರೀ ಮಧ್ವ ಮತದವನಾ 1 ಆವ ಭವರೋಗ ಹ | ಭಾವ ಕ್ರಿಯ ದ್ರವ್ಯಾಖ್ಯಅದ್ವೈತ ತ್ರಯಗಳನು ಸಂಧಾನವಿತ್ತೂ |ದೇವ ದತ್ತದಿ ತೃಪ್ತಿ ಭಾವವನೆ ನೀನಿತ್ತುಭಾವದಲಿ ತವರೂಪ ಓವಿ ತೋರುವುದೂ 2 ಆಗಮಸುವೇದ್ಯ ಭವರೋಗ ವೈದ್ಯನೆ ದೇವನಾಗಾರಿ ವಾಹನನೆ | ಯೋಗಿಧ್ಯೇಯಾಆಗು ಹೋಗುಗಳೆರಡು | ನೀನಿತ್ತುದೆಂಬಂಥಜಾಗ್ರತೆಯ ನೀನಿತ್ತು ಕಾಪಾಡು ಹರಿಯೇ 3 ಕುಡುತೆ ಪಾಲನು ಭಕ್ತ ಕೊಡಲದನು ಕುಡಿಯುತ್ತಕಡಲಂತೆ ಹಾಯಿಸಿದೆ ಬಡವರಾಧಾರೀ |ಧೃಡಭಕ್ತಿ ಸುಜ್ಞಾನ ವೈರಾಗ್ಯ ಭಾಗ್ಯಗಳಕಡು ಕರಣಿ ನೀನಿತ್ತು ಕಡೆಹಾಯ್ಸು ಭವವಾ 4 ಸರ್ವಜ್ಞ ಸರ್ವೇಶ ಸರ್ವಾಂತರಾತ್ಮಕನೆದರ್ವಿಜೀವನ ಕಾಯೊ ದುರ್ವಿಭಾವ್ಯಾ |ಗುರ್ವಂತರಾತ್ಮ ಮತ್ಪ್ರಾರ್ಥನೆಯ ಸಲಿಸಯ್ಯಶರ್ವವಂದ್ಯನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಕಾಯ ಸತ್ಯ ಸತ್ಯ ಸರ್ವ ಜೀವರನಿಟ್ಟುಕೊಂಡು ವಿಸ್ತಾರವಾದೊಂದಾಲದೆಲೆಯಲ್ಲಿ ಮಲಗಿದ್ದು ಅ.ಪ. ಹರಿ ಹ್ಯಾಗೆ ನಿತ್ಯನೊ ಹಾಗೆ ಜೀವನು ನಿತ್ಯ ಹರಿಯೆಂಬೋ ಧಣಿಗೆ ಈ ಜೀವನು ಭೃತ್ಯ ಹರಿ ಜೀವರೊಳಗೆ ಹೀಗೆ ತಿಳಿದವನು ಧರೆಯೊಳಗೆಂದೆಂದಿಗು ಕೃತಕೃತ್ಯನು 1 ಹರಿಯೆಂಬೊ ರಾಜಗೆ ಗುರುಮೂರುತಿ ಮಂತ್ರಿ ಪರಿವಾರ ಇವರಯ್ಯ ಜೀವಂಗಳು ಅರಿತು ಈ ವಿಧದಲ್ಲಿ ನಿರುತ ಪಾಡುವರಿಗೆ ಪರಲೋಕದಲಿ ದಿವ್ಯಭೋಗಂಗಳು 2 ಭಿನ್ನ ಭಿನ್ನ ಜೀವ ಭಿನ್ನ ಭಿನ್ನ ಕರ್ಮ- ವೆನ್ನುವುದೆ ಘನ್ನತತ್ವಂಗಳು ಅನ್ಯಥಾನುಡಿಯಲ್ಲ ಇನ್ನು ಸಂಶಯವಿಲ್ಲ ಎನ್ನೊಡೆಯ ಹಯವದನ ಬಲ್ಲ 3
--------------
ವಾದಿರಾಜ
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾವಲಿರು ಕಮಲಾಕ್ಷ ಕರುಣಿ ನಿರಪೇಕ್ಷ ದೇವ ದೇವಾಧ್ಯಕ್ಷ ದುರಿತಾಳಿಶೀಕ್ಷ ಪ. ಪಾಂಡುಕುವರರ ಪರಮ ಪ್ರೇಮದಿಂದಲಿ ಕಾಯ್ದೆ ತೋಂಡಮಾನಗೆ ಚಕ್ರ ಶಂಖಗಳನಿತ್ತೆ ಪಂಡಿತಾಗ್ರಣಿ ಬಲಿಯ ಬಾಗಿಲೊಳು ಶಾಙ್ರ್ಞಕೋ- ದಂಡ ಶರಗಳ ಧರಿಸಿಕೊಂಡು ಕಾಪಾಡುವನೆ 1 ವಿತತರೂಪನೆ ನಿನ್ನೊಳಿಟ್ಟಹೆನು ಭರವಸವ ಸತತ ನೀ ಸಲಹುವುದು ಸರ್ವಸ್ವವ ಕ್ಷಿತಿಯನಾಳುವ ಜನರೊಳಂತರಾತ್ಮಕ ನೀನೆ ಗತಿಯೆಂದು ನಂಬಿದೆನು ಗರುಡಾಂಗಗಮನ 2 ಕಂಟಕವ ಪರಿಹರಿಸು ಕಂಠೀರವಾಸ್ಯ ವೈ- ಕುಂಠಗಿರಿಯರಸ ಮೂರೆಂಟು ತತ್ವೇಶ ಸ್ವಿಂಟನಾಭಿದನ ನಿಷ್ಕಂಟತನವನು ಬಿಡಿಸಿ ಬಂಟವಾಗಿಹರ ಮೇಲೆ ತಂಟೆ ಬರದಂದದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಳಿಂಗನಾ ಮೆಟ್ಟೆ ನಾಟ್ಯವಾಡಿದ ಕಂಜನಾಭ ಕೃಷ್ಣನು ಪ ಕಾಳಿಂಗನಾ ಮೆಟ್ಟಿ ಆಡಿದ ಭರದಲ್ಲಿಶ್ರೀವತ್ಸ ಉರದಲ್ಲಿ ಕೊರಳಲ್ಲಿ ವನಮಾಲೆತರಳತನದಲ್ಲಿ ಯಮುನೆಯ ಮಡುವಿನಲ್ಲಿಆಡುತ್ತ ಪಾಡುತ್ತ ಅ.ಪ. ಕಾಲಲಿ ಗೆಜ್ಜೆ ಘಲುಘಲು ಘಲುಕೆನ್ನೆಫಾಲದಿ ತಿಲಕವು ಹೊಳೆ ಹೊಳೆಯುತ್ತಜ್ವಲಿತ ಮಣಿಮಯ ಲಲಿತ ಪದಕಹಾರಜ್ವಲಿತ ಕಾಂತಿ ಬೆಳಗುತ ದಿಕ್ಕುಗಳಲ್ಲಿ 1 ಸುರರು ತಥ್ಥೈತಥ್ಥೈಯೆನ್ನಲುನಾರದ ತುಂಬುರ ಸಿದ್ಧರು ವಿದ್ಯಾ-ಧರರು ಅಂಬರದಲ್ಲಿ ಆಡುತ್ತ ಪಾಡಲು 2 ಯೋಗಿಗಳೆಲ್ಲ ಜಯ ಜಯ ಜಯಯೆನ್ನೆಭೋಗಿಗಳೆಲ್ಲ ಭಯಭಯ ಭಯವೆನ್ನೆನಾಗಕನ್ಯೆಯರು ಅಭಯ ಅಭಯವೆನ್ನೆನಾಗಶಯನ ಸಿರಿಕೃಷ್ಣ ಜನನಿಯ ಕಂಡುಬೇಗನೆ ಬಿಗಿದಪ್ಪಿ ಮುದ್ದನು ತೋರಿದ3
--------------
ವ್ಯಾಸರಾಯರು
ಕೀರ್ತಿಸಿ ಜನರೆಲ್ಲ ಹರಿಯ ಗುಣ ಪ ಕೀರ್ತಿಸಿ ಜನರು ಕೃತಾರ್ಥರಾಗಿರೊ ಅ.ಪ ಆವನು ವನದೊಳಗೆ ನಿತ್ಯದಿಬಾಹ ಜನರ ಬಡಿದುಜೀವನ ಮಾಳ್ಪ ಕಿರಾತನು ಕೀರ್ತಿಸೆತಾ ಒಲಿದಾತನ ಕೋವಿದನೆನಿಸಿದ 1 ಆವನ ಪಾದರಜ ಸೋಕಲುಆ ವನಿತೆಯ ಜಡಭಾವವ ತೊಲಗಿಸಿ ಆ ವನಿತೆಯನುಪಾವನ ಮಾಡಿದ ದೇವಾಧಿದೇವನ 2 ಅಂದು ಶಬರಿ ತಾನು ಪ್ರೇಮದಿತಿಂದ ಫಲವ ಕೊಡಲುಕುಂದು ನೋಡದೆ ಆನಂದದೆ ಗ್ರಹಿಸಿಕುಂದದ ಪದವಿಯನಂದು ಕೊಟ್ಟವನ3 ದÀುಷ್ಟ ರಾವಣ ತಾನು ಸುರರಿಗೆಕಷ್ಟಬಡಿಸುತಿರಲುಪುಟ್ಟಿ ಭವನದೊಳು ಕುಟ್ಟಿ ಖಳರ ಸುರ-ರಿಷ್ಟವ ಸಲಿಸಿದ ಸೃಷ್ಟಿಗೊಡೆಯನ 4 ತನ್ನ ನಂಬಿದ ಜನರ ಮತ್ತೆ ತಾ-ನನ್ಯರಿಗೊಪ್ಪಿಸದೆಮುನ್ನಿನಘವ ಕಳೆದಿನ್ನು ಕಾಪಾಡುವಘನ್ನ ಮಹಿಮ ಶ್ರೀರಂಗವಿಠಲನ 5
--------------
ಶ್ರೀಪಾದರಾಜರು
ಕುಟ್ಟಿ ಕೊಳ್ಳೊ ಮಾಣಿ ನಿನ್ನ ಹುಟ್ಟಿಸಿರುವ ದೈವಕೆ ಹೊಟ್ಟೆ ತುಂಬ ಬಾಯಿಗಾನು ಬಿಟ್ಟೆನೆಂದ್ರೆ ಕ್ಷೀರವಿಲ್ಲ ಪ ಕೊಟ್ಟು ಪಡೆಯಲಿಲ್ಲ ಮುನ್ನಹುಟ್ಟಿ ಪಡೆಯಲಿಲ್ಲ ಮುಂದೆ ಹಟ್ಟಿಯೊಳಗಣಾಕಳೆಲ್ಲ ನಷ್ಟವಾಯ್ತು ರೋಗದಿಂದ 1 ಅತ್ತು ಸಾಯ ಬೇಡ ನೀನು ಎತ್ತಿ ಕೊಂಬರೊಬ್ಬರಿಲ್ಲ ಭತ್ತವನ್ನು ಕುಟ್ಟಿ ನಾನು ತುತ್ತಮಾಡಿ ತಿನ್ನಿಸುವೆನು 2 ನೀರು ಕಾದು ಬಂತು ಬಿಸಿಯ ನೀರ ನೆರೆವೆನೀಗ ನಿನಗೆ ಸಾರಿ ಮೊಲೆಯ ನೂಡಿ ನನ್ನ ಸೀರೆ ಸೆರಗಹಾಸಿ ಕೊಡುವೆ 3 ದೊಡ್ಡ ಕೂಸ ಕಾಣೆಯವಳು ಗುಡ್ಡೆ ಬಸವಿಯಾದಳೀಗ ಚಡ್ಡೆಯಲ್ಲದೆ ಹೋಗುತಿಹಳು ಸಡ್ಡೆ ಮಾಡಳೆನ್ನಮಾತ 4 ಇಂತೆನುತ್ತ ಬಾಲಕನ್ನ ಸಂತವಿಟ್ಟು ನಾರಿ ಲಕ್ಷ್ಮೀ ಕಾಂತ ಮಾಡ್ದ ಲೀಲೆಗಳನು ನಿಂತು ಪಾಡಿಪೋದಳಾಕೆ 5
--------------
ಕವಿ ಪರಮದೇವದಾಸರು
ಕುಣಿಸೋ ನಾರದಾ ಎನ್ನ ಕುಣಿಸೋ ನಾರದಾ ಪ ಕುಣಿಸೋ ಎನ್ನ ಕಾಲಿಲಿಂದ ಕಣಕಣೆಂಭೊ ಗೆಜ್ಜೆಕಟ್ಟಿ ಅ.ಪ. ಮೋದ ವನವ ಚರಿಸುವಂತೆಮಾಡೋ 1 ವದನದಲ್ಲಿ ಹರಿಯ ಸ್ಮರಣೆ ಮುದದಿ ಪಾಡುತಾಲೆ ಕಥೆಯಗದಗದಾನೆ ರೋಮ ಉಬ್ಬಿ ಒದಗುವಂತೆ ಭಾಷ್ಯ ಮಾಡೋ 2 ಏಸು ಲೇಸು ವಿಷಯಗಳಲಿ ವಾಸಮಾಡದಂಥ ಇಂದಿರೇಶಸುಕಧಾರ್ಥಸಾರ ಲೇಶ ಬಂದು ಸತತ ಮಾಡೋ 3
--------------
ಇಂದಿರೇಶರು
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೃತಿ 5 ಇಂದು ಎನಗೆ ಗೋವಿಂದ ನಿನ್ನ ಪಾದಾರ ವಿಂದವ ತೋರೊ ಮುಕುಂದ ಪ ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧರ ಆನಂದ ಇಂದಿರಾ ರಮಣ ಅ.ಪ ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನು ಎಂದೆನ್ನ ಕುಂದುಗಳೆಣಿಸದೆ ಕಂದರ್ಪ ಜನಕನೆ 1 ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ 2 ಧಾರುಣಿಯೊಳು ಭೂಭಾರ ಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯ ಧೀರ ವೇಣುಗೋಪಾಲ ಪಾರಗಾಣಿಸೊ ಹರಿಯೆ 3
--------------
ವಿಜಯೀಂದ್ರತೀರ್ಥರು
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೃಷ್ಣನ ನೋಡಿರೈ ಭಕ್ತಿ ತುಷ್ಟನ ಪಾಡಿರೈ ಕೃಷ್ಣೆಗೆ ಬಲಿದತಿ ದುಷ್ಟ ರಾಯರನು ತರಿದಾ ಜಗದೊಳು ಮೆರೆದಾ ಪ ನಂದ ವ್ರಜದಲಿ ಕಂದನಾಗಿ ತಾ ಬೆಳೆದಾ ದೈತ್ಯನರಳಿದಾ ಕೂಡಿ ಪರಿಪರಿಯಾಡಿ ತೋರಿಸಿದಾ ಮೋಹ ಚರಿಸಿದ ಕಾವಾ ವರಗಳನೀವಾ 1 ಕದ್ದಾ ತೀವ್ರದಿ ಮೆದ್ದಾ ಗೋವಾ ಕಾಯ್ದನು ದೇವಾ ಪೊರೆದ ಗರ್ವವ ಮೆರೆದಾ ಸುರದಿಂದ ಮೆರೆದಾ 2 ಮಧುರ ಪಟ್ಟಣದಲಿ ಕದನ ಕರ್ಕಶರ ಕೊಂದಾ ಸಚ್ಚಿದಾನಂದಾ ಸದುಗುಣ ನಿಧಿಯ ಪಡೆದವಳ ಜನಕಗೆ ಪಟ್ಟಾ ಗಟ್ಟದ ದಿಟ್ಟಾ ಪುರದಿಂದಾ ಸುರಪಮ ತಂದ ಪದುಮಜಾಂಡಧರ ಜಗನ್ನಾಥ ವಿಠಲ ಗೀತಾ ತ್ರಿಗುಣಾತೀತಾ3
--------------
ಜಗನ್ನಾಥದಾಸರು
ಕೃಷ್ಣಮೂರುತಿ ಎನ್ನ ರಕ್ಷಿಸೈ ಕಾರುಣ್ಯನಿಧೆ ಸಿರಿ ಕೃಷ್ಣಮೂರುತಿ ಎನ್ನ ರಕ್ಷಿಸೈ ಪ ನಾಗೇಂದ್ರಶಯನನೆ ನಾಗೇಂದ್ರ ಮರ್ದನನೆ ನಾಗೇಂದ್ರಗೊಲಿದವನ್ಹಾಗೆ ನಾನಲ್ಲವೇನೊ 1 ತಾಪಸಸತಿ ಶಿಲಾರೂಪವ ಪೊಂದಿರಲು ಶಾಪ ಬಿಡಿಸಿ ಅವಳ ಕಾಪಾಡಲಿಲ್ಲವೇನೊ 2 ಆ ನೀಚನಿಂದ ಯಜ್ಞಸೇನೆಗೆ ಬಂದ ಮಾನ ಹಾನಿ ತಪ್ಪಿಸಿ ಅಭಿಮಾನಿಸಿ ರಕ್ಷಿಸಿದ 3 ಇಂದಿರೆಯರಸನೆ ವಂದಿಸಿ ಬೇಡುವೆನೊ ಎಂದಿಗು ಎನ್ನ ಹೃದಯಮಂದಿರ ಬಿಡದಿರೊ 4 ವರನಾಮಗಿರಿ ಸಿರಿನರಹರಿಮೂರುತಿಯ ಚರಣಸೇವಕನೆಂದು ಕರುಣ ಎನ್ನೊಳಗಿಟ್ಟು 5
--------------
ವಿದ್ಯಾರತ್ನಾಕರತೀರ್ಥರು