ಒಟ್ಟು 2203 ಕಡೆಗಳಲ್ಲಿ , 110 ದಾಸರು , 1414 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕಾದಶಿ ನಿರ್ಣಯ ಅನಲು [ಸಮನೆ] ಮನೆಗೆ ಪೇಳಬಂದ ಅನಾಥಬಂಧು ಹಯವದನ ಗೋವಿಂದ ಪ. ತನ್ನ ನಂಬಿದವರ ತಾಪತ್ರಯವಳಿದು ಉನ್ನಂತ ಪದವೀವ ದಿನತ್ರಯವನ್ನು 1 ವೃದ್ಧಿಮಾತ್ರ ಅರುಣೋದಯದ ಕೆಳಗೆ [ಶುದ್ಧಿದಂ] ಘಳಿಗೆ ಸಾಕುಯೆಂದು 2 ಅತಿವೃದ್ಧಿ ಒಂದುಘಳಿಗೆಯ ಕೆಳಗೆ ವಿಂ ಶತಿ [ಫಣಫಲ] ದೊಳಗೆ [ಶುದ್ಧಿ] ಬೇಕೆಂದು 3 ತಿಥಿ ವೃದ್ಧಿಆದಾಗೆ ಹತ್ತು [ಫಣಪಲ] ತಿಥಿಕ್ಷಯದಲ್ಲಿ ಅದರೊಳು [ಶುದ್ಧಿ] ಬೇಕೆಂದು 4 ಇಂದು ದಶಮಿ ಶಾಖವ್ರತವ ಮಾಡಿ ನೀವು ಒಂದು ಬಾರಿ ಭೋಜನ ಮಾಡಿರೊಯೆಂದು 5 ತಾಂಬೂಲಚರ್ವಣ ಸಲ್ಲ ಸ್ತ್ರೀಸಂಗ ಹಂಬಲವನ್ನು ನೀವು ಬಿಡಿರಿಯೆಂದು 6 ನಾಳೆ ಏಕಾದಶೀ ಉಪವಾಸ ಜಾಗರ ಆಲಸ್ಯ ಮಾಡದೆ ಆಯತಾಕ್ಷಗೆಯೆಂದು 7 ಫಲಹಾರವು ಸಲ್ಲ ಭೋಜನವು ಸಲ್ಲದು ಜಲಪಾನ ಸಲ್ಲ ಮೆಲಸಲ್ಲದೆಂದು 8 ನಾಲ್ಕುಹೊತ್ತಿನ ಆಹಾರವ ಬಿಡುವುದು ಹದಿ ಜಾಗರ ಮಾಡಿರೊಯೆಂದು 9 ಪೇಳ ಅರ್ಧದ್ವಾದಶಿಬಂದಾಗ ನೀವೆಲ್ಲ ಒಲುಮೆಯಿಂದ ಪಾರಣೆಯ ಮಾಡಿರೊಯೆಂದು10 ಇಂತು ತಿಥಿತ್ರಯ ಮಾಡುವ ಜನರನ್ನು ಸಂತತ ಪೊರೆವ ಶ್ರೀಕಾಂತ ಹಯವದನ 11
--------------
ವಾದಿರಾಜ
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಣಾಕ್ಷಿ ಕೇಳೆನ್ನ ಪ್ರಾಣೇಶನೀತನಂ ಬಣ್ಣಿಪೆನದೆಂತುಟೊ ಕಾಣೆನಮ್ಮ ಕುಟಿಲವೇ ಭೂಷಣವು, ಸಟೆಯಿದುವೆ ಕುಲದೈವ ವಟುವೇಷಧರನಿವನುಅಹುದು ಚಲುವ ಕಪಟ ಗುಣಗಳ ಗಣಿಯು ಕೃಪೆಯೆಂಬುದೆಳ್ಳೆನಿತು ಕಾಣದವನು ನುಡಿದ ನುಡಿಯನು ಮತ್ತೆ ನಡಿಸಲಾರದವರನ ಪಡೆದೆ ಪೇಳುವೆನೇನು ನಡೆದ ಬಳಿಕ ಧರಣಿಯೊಳಗಿಂತಪ್ಪ ವರನ ಕಾಣೆ ತರುಣಿಮಣಿ ಕೇಳೆನ್ನ ಅರಸನಿವನೆ ತರುಣನೀತನ ಪಡೆದ ಧನ್ಯಳಾನೆ ವರಶೇಷಗಿರಿವರÀನೆ ಬಲ್ಲಹದನೆ
--------------
ನಂಜನಗೂಡು ತಿರುಮಲಾಂಬಾ
ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನಬೇಡಲೊ ಕೃಷ್ಣ ನಾಚಿಕಿಲ್ಲದೆ ಪ ಜ್ಞಾನಶೂನ್ಯನಾಗಿ ಬಹಳ ಹೀನ ಕಾರ್ಯ ಮಾಡಿ ನಾನು ಅ.ಪ. ಪರರ ವನಿತೆ ಧನಗಳಿಂಗೆ ಅರಿತು ಅರಿತು ಆಶೆಪಡುತ ದುರಿತಕೋಟಿಗಳನು ಮಾಡಿ ಪರಮ ನೀಚನೆನಿಸಿದವನು 1 ವನಗಳನು ಕಡಿಸಿ ಹಿರಿದು ಮನೆಗಳನ್ನು ರಚಿಸಿಕೊಂಡು ವನಿತೆ ಮಾತು ಕೇಳಿ ಜನನಿ ಜನಕರನ್ನು ತೊರೆದ ಪಾಪಿ 2 ಸತ್ಯ ಮತವನು ತುಚ್ಛಗೈದು ನಿತ್ಯಕರ್ಮಗಳನು ಬಿಟ್ಟು ಮತ್ತನಾಗಿ ತಿಂದು ಮಲಗಿ ಕತ್ತೆಯಂತೆ ಹೊರಳುವವನು 3 ಆರ್ತರಾದ ಜನರ ಸಲಹಿ ಕೀರ್ತಿಯನ್ನು ಹೊಂದಿ ದೇಹ ಸಾರ್ಥಕವನು ಮಾಡಿಕೊಳದೆ ಧೂರ್ತನೆನಿಸಿಕೊಳುವ ನರನು 4 ವಾಸುದೇವ ಸಕಲ ದೋಷ ರಾಸಿಗಳನು ದಹಿಸುವ ರಂ- ಗೇಶವಿಠಲರೇಯ ನಿನ್ನ ದಾಸನೆಂದು ಪೇಳದವನು 5
--------------
ರಂಗೇಶವಿಠಲದಾಸರು
ಏನಯ್ಯ ಧೊರೆಯೆ-ನಿನಗಾನಂದವೆ ಧೊರೆಯೇ ಪ ನುಡಿನೀನೊಲಿದಾಲಿಪುದುಅ.ಪ. ಜಾತಿಧರ್ಮವಿಲ್ಲಾ-ಶಾಸ್ತ್ರದರೀತಿನಡತೆಯಿಲ್ಲ ಮಾತಿದುಪುಸಿಯಲ್ಲಾ-ಮಾನದ-ಭೀತಿಯುಮೊದಲಿಲ್ಲಾ ನೀತಿಯನರಿಯದ-ಕೋತಿಗಳಂದವ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು-ದೋಷವಿ ವರ್ಜಿತರನ್ನು ಜರಿದು ಲಜ್ಜೆಯನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಿಗೆ ಕುಲಕಜ್ಜಳರವ ಮತಿ ಗುಜ್ಜುಗಿಸುತ್ತಿಹ 2 ಗಂಡನ ಬಿಟ್ಟಿಹರು-ಗರತಿಯ-ಕಂಡು ನಗುತ್ತಿಹರು ಮಿಂಡರ ಬೆರೆದಿಹರು-ಮೇಲತಿ-ದಿಂಡೆಯರಾಗಿಹರು ಚಂಡಿಸುತಿರ್ಪರೋ 3 ಕೇಳುಹಂದೆಯಾಳು-ಕ್ಲೇಶವ ಪೇಳಲು ಮತಿತಾಳು ಕೀಳು ಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಜನರೂಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀ ಪುಲಿ-ಗಿರಿಯೊಳು ನೆಲೆಯಾದ ಸಿರಿವರ ನಿಜಪಾದ-ಸೇವೆಯ-ಕರುಣಿಸು ಬಹುಮೋದ ಶರಣಾಭರಣ ನಿಜ ಕರುಣವ ತೋರಿಸು ವರದ ವಿಠಲಧೊರೆ ವರದದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಏನಿದು ಚಿತ್ರ ಎಲೋ ಕಂಜನೇತ್ರ ಪ ದೀನನು ನಾನೆಂದು ದಿನ ದಿನ ಮೊರೆಯಿಡೆ ನೀನು ಮಾಡಿದ ಕರ್ಮವೆಂದು ತಪ್ಪಿಸಿಕೊಂಬ ಅ.ಪ ಮಾನಸದಲಿ ಸಾಕ್ಷಿಯಾಗಿ ನೀನಿಲ್ಲವೇ 1 ಯುಕುತಿ ಮಾತು ಇದಲ್ಲ ವೇದಶಾಸ್ತ್ರ ಪ್ರಮಾಣ2 ಸತ್ಯ ಸಂಕಲ್ಪನೆಂದು ಪೇಳುವರೆಲ್ಲರು ಭೃತ್ಯರ ಸಲಹದ ಪ್ರಭುತ್ವವೇತಕೆ ನಿನಗೆ 3 ದೇವ ನಿನ್ನ ಚಿತ್ತವೋ ಎನ್ನ ಪುರಾಕೃತವೋ 4 ಕರಣಾಭಿಮಾನಿಗಳಿಗೊಡೆಯ ನೀನಲ್ಲವೇ 5 ಭಾವ ಕೊಡುವುದಕೆ ಬಡತನವೆ ನಿನಗೆ 6 ನೀನೆ ಸರ್ವ ಸ್ವತಂತ್ರ ಗುರುರಾಮ ವಿಠಲ 7
--------------
ಗುರುರಾಮವಿಠಲ
ಏನಿದೆತ್ತಣ ಬಯಕೆ ಎಲೊ ಮಂಕು ಜೀವನೀನು ಅರಿತರೆ ಪೇಳು ನಿಜವನೆನಗೆ ಪ ಎಂಟೆರಡು ಮಾರುತರು ಎಡೆಎಡೆಗೆ ಬರುತಿರಲುನಂಟರೈವರು ಕೂಡಿ ಆಕ್ರಮಿಸುತಿಹರುದಾಂಟುವುದು ಅಸದಳವೊ ಎರಡೊಂದು ಬಲೆಗಳಲಿಕಂಟಕದಿ ಬಲು ತಾಪದಿಂದ ಬಳಲುವರು 1 ಆರೆರಡು ದಂತಿಗಳು ದಾರಿಯೊಳು ನಿಂತಿಹವುಆರು ಮೂರು ತುರುಗಗಳು ದಾರಿಯನು ಕೊಡವುಮೂರೆರಡನೀಡಾಡಿ ತೋರುವುದು ಎನ್ನಾಣೆಸಾರಿ ಏನೇನಹುದು ಎಂಬುದನು ನೋಡು 2 ಪರರನು ನಿಂದಿಸದೆ ಪರಯೋಗ್ಯ ನೀನಾಗಿಪರರ ಪಾಪಗಳ ನೀ ಕಟ್ಟಿಕೊಳದೆಪರಮಾತ್ಮ ಕಾಗಿನೆಲೆಯಾದಿಕೇಶವರಾಯಪರಹಿತಕೆ ಸಖನೆಂದು ಭಜಿಸೆಲೊ ಮನುಜ 3
--------------
ಕನಕದಾಸ
ಏನಿದ್ದರೇನಯ್ಯ ಜ್ಞಾನವಿಲ್ಲದಿರೆ ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1 ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ ಪರಿಪರಿಯ ಭೋಗದಿಂ ಮರುಳಾದೆನಲ್ಲ 2 ಬಂದೇ ದಾನವಿರದ ಧನವೇಕೆ ಪೇಳು ತಿಂದುಂಡು ಮಲಗುವಾನರಜನ್ಮ ಹಾಳು3 ಕರ ಚರಣ ಮೊದಲಾದ ಕರಣಂಗಳಂ ಪಡೆದು ಹರಿಪದವ ಪೊಂದುವಾ ಪರಿಯುಂಟೆ ಪೇಳು 4 ಆನಂದ ಸಾಮ್ರಾಜ್ಯ ನಿನಗಹುದು ಕೇಳು 5
--------------
ನಂಜನಗೂಡು ತಿರುಮಲಾಂಬಾ
ಏನು ಕಾರಣ ಬಾಯಿ ತೆರೆದಿ - ಪೇಳೆಲೊದಾನವಾಂತಕ ಅಹೋಬಲ ನಾರಸಿಂಹನೆ ಪ ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ ಭೂ-ಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯಜಗವರಿಯೆ ಪೇರುರವಿರಿದ ಪ್ರಹ್ಲಾದವರದಅಹೋಬಲ ನಾರಸಿಂಹನೆ1 ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯಮರೆತು ಮಾವನ ಕೊಂದು ನಿಂದೆ - ಇಂಥಇಳಿಯ ಬಾರದ ಭೂಮಿಗಿಳಿದ ನಾರಸಿಂಹ2 ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯಮಾರಪಿತ ಕಾಗಿನೆಲೆಯಾದಿಕೇಶವ ರಂಗಧೀರ ಶ್ರೀನಾಥ ಭವನಾಶ ಪೇಳೋ ಪೇಳುಏತಕೆ ಅಹೋಬಲ ನಾರಸಿಂಹನೆ 3
--------------
ಕನಕದಾಸ
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ಗತಿ ಎನಗಿನ್ನು ಏನು ಗತಿಯೋ ನೀನು ಸಿರಿ ಕೃಷ್ಣ ಪ ಕಾಯ ಮೊದಲಾದ ಬದುಕುಗಳೆಲ್ಲ ಸ್ಥಿರತರಗಳಲ್ಲೆಂದು ತೋರಿಸಲು ಪರಮ ಭಕುತಿಯು ಪುಟ್ಟಿ ಮೊದಲೆ ನಾ ನಿನ್ನ ಪದ ಮರೆದು ಬಿಡುವೆನು ತಡಿಯದೇ ಕರುಣಿ 1 ಹೀಗೆ ತೋರದೆ ಪೋದರೆ ಎನಗೆ ಹಂಬಲವು ಆಗುವುದು ಸತ್ಯಲೋಕಗಳ ತನಕ ಭೋಗಗಳು ಕೊಟ್ಟರೆ ಮರೆವೆ ಅದರಿಂದ ನಾ ಕೂಗುವೆನು ಕೊಡದಿದ್ದರೆ 2 ಪಾಮರನ ಮಾಡಲೆನ್ನನು ತಿಳಿಯದಲೇವೆ ಸೀಮೆ ಇಲ್ಲದ ಪಾಪ ಮಾಡುವೆನೊ ಪ್ರೇಮದಲಿ ಪಾಂಡಿತ್ಯ ನೀಡಿದರೆ ಭಕುತ ಜನ ಸ್ತೋಮ ನಿಂದಿಸುವೆನಯ್ಯಾ 3 ಧನದಿಂದ ಹೀನನ್ನ ಮಾಡೆ ಲೋಕದಲಿನ್ನು ಜನರು ಕೊಡುವುದು ಎಲ್ಲ ಎನಗೆ ಕೊಡಲೆಂಬೆ ಧನವು ನೀ ಕೊಡಲು ಬಲು ಮದದಿಂದ ಕೆಟ್ಟು ಸ- ಜ್ಜನಕೆ ಕಾಸೊಂದು ಕೊಡಿನೊ 4 ಏಸು ಪರಿಯಲಿ ಪೇಳಿದರು ಕೇಳೆನ್ನ ನಿಜ ವಾಸನಿಯು ತನಗೆ ತಾನಿಟ್ಟಾಹದೈ ವಾಸುದೇವವಿಠಲ ನೀ ಎನ್ನಯ ಮನದಲ್ಲಿ ವಾಸವನು ಮಾಡಿ ಬೋದÉೈಸದನಕೆÀ5
--------------
ವ್ಯಾಸತತ್ವಜ್ಞದಾಸರು
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು 4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ದುಷ್ಕøತ ಫಲವೋ ಸ್ವಾಮಿ ಶ್ರೀನಿವಾಸನೆ ಪೇಳೋ ಪ. ಏನು ಕಾರಣ ಭವಕಾನನದೊಳು ಬಲು ಹಾನಿಯಾಗಿ ಅವಮಾನ ತೋರುವದಿದು ಅ.ಪ. ಹಂಬಲವೂ ಹಿರಿದಾಯ್ತು ಎನ್ನ ನಂಬಿಕೆಯೂ ಕಿರಿದಾಯ್ತು ಸಂಭ್ರಮವಲ್ಲ ಕುಟುಂಬಿಗೆರೆನ್ನಯ ಹಂಬಲಿಸರು ನಾನೆಂಬುವದೇನಿದು 1 ಹಣವಿಲ್ಲಾ ಕೈಯೊಳಗೆ ಸ- ದ್ಗುಣವಿಲ್ಲಾ ಮನದೊಳಗೆ ಜನಿತಾರಭ್ಯದಿ ತನುಸುಖವಿಲ್ಲೈ ಘನದಾಯಾಸವ ಅನುಭವಿಸುವದಾಯ್ತು 2 ಪೋದರೆಲ್ಲ್ಯಾದರು ಅಪ- ವಾದವ ಪೇಳ್ವರು ಜನರು ಆದರವಿಲ್ಲೈ ಶ್ರೀಧರ ತವ ಚರ- ಣಾಧಾರವೆ ಇನ್ನಾದರೂ ಕೃಪೆಯಿಡು 3 ಗೋಚರವಿಲ್ಲೆಲೊ ರಂಗ ಎನ್ನ ಪ್ರಾಚೀನದ ಪರಿಭಂಗ ನಾಚಿಕೆ ತೋರದ ಯಾಚಕತನವ- ನ್ನಾಚರಿಸುವ ಕಾಲೋಚಿತ ಬಂದುದು4 ಸೇರಿದೆನೆಲೊ ರಂಗ ಕೃಪೆ ದೋರೆನ್ನೊಳ್ ನರಸಿಂಗ ಭಾರವೆ ನಿನ್ನ ಮೈದೋರಿ ರಕ್ಷಿಸುವುದು ನಾರದನುತ ಲಕ್ಷ್ಮೀನಾರಾಯಣ ಗುರು5
--------------
ತುಪಾಕಿ ವೆಂಕಟರಮಣಾಚಾರ್ಯ