ಒಟ್ಟು 459 ಕಡೆಗಳಲ್ಲಿ , 81 ದಾಸರು , 401 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಯಶ್ಚಿತ್ತವು ಎನಗೆ ಇಲ್ಲವಯ್ಯಾ ಪ ನಾಯಿಯಂತೆ ಕಂಡ ಕಂಡಲ್ಲಿ ತಿಂಬುವಗೆ ಅ.ಪ ಮಾನಸದಿ ತ-ದೇಕ ಧ್ಯಾನದಲ್ಲೇ ಕುಳಿತು ಜ್ಞಾನಿಗಳ ಸಹವಾಸ ಮಾಡದಲೆ ಹೀನರಾಶ್ರೈಸೆ ನಾಲಿಗ್ಯೆ ಹಿತವನೆ ಬಯಸಿ ಮೀನು ಗಾಣಕೆ ಬಿದ್ದು ಮಿಡುಕುವಂದದಲಿ 1 ಸರಸರನೆ ಕಂಠವನು ಗರಗಸದಿ ಕೊಯ್ದರೂ ತರಹರಿಸದೇ ಪರರ ಮನೆಯನ್ನವನ್ನು ಕರದಲಿ ಸ್ಪರ್ಶ ಸಲ್ಲದು ಎಂದು ಪೇಳುತಿರೆ ಹಿರಿದಾಗಿ ಕುಳಿತು ಭುಂಜಿಸುವ ಪಾತಕಿಗೆ2 ಪರರಿತ್ತ ಕೂಳಿನಲಿ ಅವರ ಕುಲಕೋಟಿ ಸಾ- ವಿರ ಜನುಮದಲಿ ಅರ್ಜಿಸಿದ ಪಾಪ ಬೆರೆತಿಹುದು ಎಂದ್ಹೇಳಿ ಕೇಳಿ ಕೇಳಿ ನಗುತ ಹರುಷದಿಂ ಕುಳಿತು ವಿಷವುಂಬ ಪಾತಕಿಗೆ 3 ಯಾತ್ರೆಯ ಪೋಪಲ್ಲಿ ತಿಥಿ ಮತಿ ಹವ್ಯದಲಿ ಮತ್ತೆ ಕುಲಹೀನದಲಿ ಅನ್ನ ತಿಂದು ನಿತ್ಯ ಹಿಂಗದಲೆ ಈ ನೀಚ ಒಡಲನು ಹೊರೆವ ತೊತ್ತು ಬಡುಕಗೆ ಪುಣ್ಯವೆತ್ತ ದೊರಕುವುದೊ 4 ಕ್ಷಿಪ್ರ ಪ್ರಾಯಶ್ಚಿತ್ತ ಪೊಂದಿಹುದು ಕೇಳಯ್ಯಾ ಈ ಪೃಥ್ವಿಯೊಳಗೆಲ್ಲ ನಿನ್ನ ನಾಮ ಕಾಯ ವಿಜಯವಿಠ್ಠಲರೇಯ ಸುಪ್ರಸಾದವನಿತ್ತು ಶುದ್ಧಾತ್ಮನನು ಮಾಡು 5
--------------
ವಿಜಯದಾಸ
ಬಂತವ್ವಾ ತಂಗಿ ಬಂತವ್ವಾ ಈ ಗೊಂದು ಮಾತು ನೆನಪು ಬಂತವ್ವಾ ಪ ಅಂತರಂಗದೊಳು ಕಂತುಜನಕ ತನ್ನ ಚಿಂತಿಪರ್ಹಂತೆಲಿ ನಿಂತಿಹ್ಯನಂತೆ ಅ.ಪ ಮರುಳು ಬುದ್ಧಿಯನು ನೀಗವ್ವ ಬರೆ ತಿರುತಿರುಗಿ ಮರುಗಬೇಡವ್ವ ಕರಿರಾಜ ದ್ವರದನು ತರುಣಿಯ ಪೊರೆದನು ಸರಸದಿ ಪಾಂಡವರ ನೆರಳಾಗಿ ನಿಂತನು 1 ಹಂಚಿಕೆ ಪೇಳುವೆ ನಿನಗವ್ವ ನಿನ್ನ ವಾಂಛಲ್ಯ ಗುಣವೊಂದು ಕಳೆಯವ್ವ ಕಿಂಚಿತ್ತು ಮನದೊಳು ವಂಚನಿಲ್ಲದೆ ವಿ ರಂಚಿಪಿತನ ನಂಬಿ ಭಜಿಸವ್ವ 2 ಸುಳ್ಳೆ ಕಳವಳಿಸುವುದ್ಯಾಕವ್ವ ತಿಳಿ ನಳಿನಾಕ್ಷನ ಘನ ಮಹಿಮ್ಯವ್ವ ಹೊಲಸು ದೇಹದಾಸೆ ನೀಗಿದ ಭಕ್ತಗೆ ಸುಲಭನು ಶ್ರೀರಾಮ ಕೇಳವ್ವ 3
--------------
ರಾಮದಾಸರು
ಬಂದಾ ಸುಂದರವದನ ಮಂದಹಾಸದಿ ರಘು ನಂದನ ಧನು ಬಳಿಗೆ ಪ ವಂದಿಸಿ ಕೌಶಿಕಗೆ ತಂದೆಯ ನೆನೆದು ಆ ನಂದ ಮನದಲಿ ಮುಂದೆ ಮುಂದಕೆ ನಡೆದು ಚಂದದಿ ಬರುತಿಹ ಅಂದನೋಡಿ ಮುನಿ ವೃಂದ ಮನದೊಳಾನಂದವ ಪೊಂದುತ ಇಂದಿರೇಶನಿವನೆಂದು ತಿಳಿದು ಭೂ ನಂದನೆ ಇವನವಳೆವಂದು ಪೇಳುತಿರೆ ಅ.ಪ. ಸಿಂಧುಶಯನ ಭಜಕ ಮಂದಾರ ಮುನಿಜನ ವೃಂದ ಕುಮುದ ಚಂದ್ರ ಮಂದಜಾಸನ ವಂದ್ಯ ಸಿಂಧುಸುತಾಲೋಲ ಸಿಂಧೂರ ಪರಿಪಾಲ ಸಿಂಧೂರ ಗಮನದಿ ಸಿಂಧೂ ಗಂಭೀರ ಬರೆ ಇಂದುವದನೆಯರು ಚಂದವ ನೋಡುತ ಇಂದೀವಗೇ ಜಯವೆಂದು ನುಡಿಯುತಿರೆ ಇಂದುಧರನ ಧನು ಬಂಧನ ಮಾಡಲು ಇಂದಿರೇಶ ಶ್ರೀ ಕರಿಗಿರಿ ಮಂದಿರ 1
--------------
ವರಾವಾಣಿರಾಮರಾಯದಾಸರು
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಂದು ನಿಲ್ಲೋ ದಯಾನಿಧೇ ಬಂದು ನಿಲ್ಲೋ ಪ ಬಂದು ನಿಲ್ಲೋ ನಿನಗೊಂದಿಸುವೆನು ಗೋ ವಿಂದ ಗೋವಳರಾಯ ಸಂದೇಹಗೊಳಿಸದೆ ಅ.ಪ ಸದೋಷಕ ನಾನು ಸದಾ ನಿರ್ಮಲ ನೀನು ಪದೆಪದೆಗೆ ಪೇಳುವುದುಚಿತವಲ್ಲ 1 ಮನದೊಳು ಪೊಳದು ಚಿಂತನೆಗೆ ನೆಲೆಯಾಗಿ ಘನಮಹಿಮನೆ ಮಧ್ವಮುನಿ ಮನ ಮಂದಿರ 2 ಕಡೆಗೋಲು ನೇಣಪಿಡಿದ ಪರಮಾನಂದ ಉಡುಪಿಯ ಶ್ರೀ ಕೃಷ್ಣ ವಿಜಯವಿಠ್ಠಲರೇಯ3
--------------
ವಿಜಯದಾಸ
ಬನ್ನಿ ಮಹಂಕಾಳಿ ಜಯವ ನೀಡಮ್ಮ ಮನ್ನಿಸಿ ಬಾಲಗೆ ಪ ನಿನ್ನ ನಂಬಿಕೊಂಡು ಕೆನ್ನೆಯೋಳ್ಮುಡಿವರ ಬನ್ನ ಕಳೆದು ಜಯವನ್ನು ಕೊಟ್ಟು ನೀ ಭಿನ್ನವಿಲ್ಲದೆ ಮನ್ನಿಸಿ ಸಲಹು ಪನ್ನಂಗವೇಣಿಯೆ ಉನ್ನತ ಕರುಣಿ 1 ಪರಮ ಪವಿತ್ರಳೆಂದು ಪರಮ ಪ್ರೀತಿಯಿಂದ ಹರನು ಬಿಡದೆ ನಿನ್ನ ಶಿರದಿ ಧರಿಸಿಕೊಂಬ ಪರಮಮಹಿಮ ನಿನ್ನನರಿನು ಪೇಳುವೆನಾ ತರಳನ ಮೊರೆ ಕೇಳೆ ಕರುಣಿ ಶುಭಕರಿ2 ನೇಮದಿ ಭಜಿಪೆ ನಿಸ್ಸೀಮೆ ನಿರಾಮಯೆ ಕ್ಷೇಮಶರಧಿ ತ್ರಿಭೂಮಿಜಯಂಕಾರಿ ಈ ಮಹಭವನಿಧಿ ಕ್ಷೇಮದಿ ಗೆಲಿಸು ಶ್ರೀ ರಾಮನಾಮ ಪ್ರಿಯೆ ಕೋಮಲಹೃದಯೆ 3
--------------
ರಾಮದಾಸರು
ಬರಿದೆ ಕಾಲವ ಕಳೆದೆ ನರಹರಿಯ ಧ್ಯಾನಿಸದೆ ಪ. ಪರಿಪರಿಯ ಮೋದದಲಿ ಮರುಳನಂದದಿ ಮೆರೆದೇ ಅ.ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಹಿರಿಯರೊಲಿವಂತುಪಚರಿಸಲಿಲ್ಲ | ಪರಮ ಭಾಗವತರ ಚರಣಕ್ಕೆ ನಾನೊಮ್ಮೆ | ಶಿರಬಾಗಿ ನಮಿಸಿ ಪರಿಚರಿಸಲಿಲ್ಲವಲ್ಲಾ 1 ಇನ್ನೆನಗೆ ಗತಿಯಾರು - ಮನ್ನಿಸುವರದಾರು ಇನ್ನದಾರಲ್ಲಿ ಪೇಳುವೆನೆನ್ನ ದೂರು ನಿನ್ನನೇ ಮೊರೆಹೊಕ್ಕು ನೀನೆ ಗತಿಯೆಂದಿರುವ ಎನ್ನ ಮನ್ನಿಸಲುಬೇಕು ಪನ್ನಶೇಷಗಿರೀಶ 2
--------------
ನಂಜನಗೂಡು ತಿರುಮಲಾಂಬಾ
ಬರಿದೆ ಬಿಡದೆನ್ನ ಹರುಬೆಂಬೆಯೋತೆರಹುಗೊಡದು ಹರಿಸ್ಮರಣೆಗೆಂಬೆಯೊ ಪಒಲ್ಲೆನೆಂದರೆ ನಿನ್ನ ಕೊಲ್ಲುವುದೆ ಬರಿದುಸೊಲ್ಲಿಸದಿರೆ ನಿನ್ನನೀಯುವದೆತಲ್ಲಣಗೊಳದಿರೆ ವಟಯನೊಡೆಯುವದೆಬಲ್ಲೆನೆನ್ನಲಿದಾರಲು ಬಾಯಬಡಿವದೇನೊ 1ಪರರೊಳಿಪ್ಪುದೊ ನಿನ್ನ ಕರಣದೊಳಿಪ್ಪುದೊಹರುಬುತಿಂ ಬೀದಿಯಲಿರುತಿಪ್ಪುದೊತಿರುಗುತಿಪ್ಪುದೊ ಬೆಂಬಿಡದೆ ಸಾಲವಕೊಂಡಿಹುದೊಬರಿದೆ ಪತ್ರವೊ ಪೇಳು ಮರುಳೆ 2ಪರರು ನುಡಿಯುತಿರೆ ಮರುನುಡಿಯುವೆ ನೀನೆಕರೆಯದಿದ್ದರು ಪೋಗಿ ಬೆರೆಯುತಿಹೆತೊರೆದು ಬಿಡುವ ಬುದ್ಧಿ ಬರದಾದ ಕಾರಣಾಉರುಳಿಗೆ ಸಿಕ್ಕಿದುರುಗನಂತೆ ಹೊರಳುವೆ 3ಆಶಾ ಪಿಶಾಚಿ 'ಡಿದ ಕಾರಣ ನೀನುಮೋಸ ಹೋಗಿಯೆ ನೀನೆ ಮುಂಬರಿದುಹೇಸದೆ 'ೀನಾಯಗೆ ಮೈಗೊಡುವೆ ಬಪ್ಪನಾಶವನರಿಯೆ 'ರತಿುರುವುದಾ 4ಬೆರೆದು ಸಂಸಾರದೊಳಿರುವಂತೆ ಚಿಕ್ಕನಾಗಪುರವಾಸಿ ಗುರುವಾಸುದೇವಾರ್ಯನಾಚರಣ ಸೇವೆಯೊಳ್ಮನ'ರಿಸಿ ಬಾಳ್ದರೆ ಸುಖಶರಧಿಯಾಗುವೆ ದುಃಖವರುಗಸಿರದು ನಿನ್ನ 5
--------------
ವೆಂಕಟದಾಸರು
ಬಾ ಬಾ ಬಾರೈಯ್ಯಾ ಶ್ರೀ ಗಿರಿದೊರೆಯೆ ಸಿರಿ ಹರಿಯೆ ಚಿ ಪ ನೀ ಬರುವೆಂದಬುಜಾಭವಾದೀ ಸುರರು ಕಾದೂಕೊಂಡಿಹರು ಶ್ರೀ ಭೂಮಿ ಸಹಿತದಿ ಶ್ರೀ ಗಿರಿಯಿಳಿದು ಈ ಭವನವನು ನೀ ಪಾವನ ಮಾಡಲು ಅ.ಪ ಕರೆದರೆ ಬರೆ ಯಾಕೊ ಬಡವರೊಳೀಪರಿಯ ಪಂಥವು ಸಾಕೊ ಸುಲಭನಾಗಿರಬೇಕೊ ಕೊಡುವ ದೊರೆಯೆಂದು ದೃಢದಿ ತಿಳಿದು ನಿ ನ್ನಡಿ ಬಿಡದೆ ಬಲು ಕಾಡದೆ ಬಿಡುವರೆ 1 ಭವ ಶರಧಿಗೆ ನಾವೆ ಬಡವರಾದರೀಯೂ ನೀನಲ್ಲವೆ ಕೊಡೆನಗೆ ನಿನಸೇವೆ ಒಡೆಯ ನೀನಲ್ಲದೆ ಬಡದೇವತೆಗಳು ಕೊಡಬಲ್ಲವೆ ಪೇಳು ತಡಮಾಡದೆ ನೀ 2 ಹದಿನಾಲ್ಕು ಲೋಕದೊರೆಯು ನೀನು ಎನುತ ತಿಳಿದು ನಾನು ಪದುಳದಿ ನಿನ್ನ ಸೇವಿಸ ಬಂದೆನು ಕೇಳಯ್ಯಾ ಇನ್ನು ಪದುಮನಾಭನೆ ನೀ ಸದಯದಿ ನೋಡಿ ಇದನೆ ಕರುಣಿಸು ನಿನ್ನ ಪದಸೇವೆಯನು 3 ಸಿರಿ ಧರೆ ನಾರಿಯರ ನಾ ಕೇಳಲಿಲ್ಲಾ ಕೊಟ್ಟರು ಬೇಕಿಲ್ಲ ದೊರೆತನ ಬಯಸಿ ನಾ ಬೇಡ ಬಂದಿಲ್ಲ ಕೇಳೆನ್ನೆಯ ಸೊಲ್ಲ ಪರಿ ಬೇಡುವೆ ನಿನ್ನ ಪದಸೇವಕರ ಪರಿಚಾರಕರನೆನಿಸೊ ಪರಮ ದಯಾಳೊ 4 ಮಾತಿದು ಪುಸಿಯಲ್ಲ ನೀರಜ ಭವಾಂಡದಿ ನಿನಗೆದುರ್ಯಾರಿಲ್ಲ ರಂಗೇಶವಿಠಲ ದೂರ ನೋಡುತಲಿ ಘೋರಪಾತಕರೊಳು ಸೇರಿಸದೆನ್ನನು ಪಾರುಮಾಡಲು ಬೇಗ5
--------------
ರಂಗೇಶವಿಠಲದಾಸರು
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗಿಲು ತೆಗೆಯಲೆ ಭಾಮತಿ ರನ್ನಳೆ ಈಗ ನಾ ಬಂದೆನು ಇಂದುಮುಖಿ ಪ ನಾಗವೇಣಿಯೆ ನಿನ್ನೀಗಲೆ ನೋಡಲು ಬೇಗನೆ ಬಂದೆನು ತೆಗಿ ಕದವಾ ಅ.ಪ ಯಾರದು ಈ ಸಮರಾತ್ರಿಯ ವೇಳದಿ ಬಾಗಿಲು ತೆಗೆ ಎಂದೆನುತಿಹರು ತೋರದು ಎನಗೊಂದಾಲೋಚನೆ ನಿಮ್ಮ ನಾಮವು ಪೇಳಲು ತೆಗೆಯುವೆನು 1 ನೀಲವೇಣಿಯೆ ಕೇಳೆನ್ನ ಮಾತನು ಬಹಳ ಚಿಂತೆಯಾತಕೆ ಮನದಿ ನೀಲಕಂಠನೆಂದೆನ್ನನು ಕರೆವರು ಕೇಳು ಮನಸು ಚಂಚಲ ಬಿಟ್ಟು 2 ನೀಲಕಂಠನೆಂದರೆ ನೆನಪಾಯಿತು ನವಿಲಿನ ಮರಿ ಬಂದಿಹುದೆಂದು ನಾರಿಯರೆಲ್ಲರು ಹಾಸ್ಯವ ಮಾಳ್ಪರು ಸಾರುತ ವನಗಳ ಚರಿಸೆಂದು 3 ಬೆದರದೆ ತೆರೆ ಕದ ಸುದತಿಮಣಿಯೆ ನಾ ಬದಲೊಂದು ನಾಮವ ಪೇಳುವೆನು ಬುಧ ಜನರೆಲ್ಲರು ಭಕುತಿಲಿ ಸ್ಥಾಣು- ವೆನ್ನುತ ನಾಮವ ಕೊಂಡಾಡುವರು4 ಬೂಟಾಟಿಕೆ ಮಾತುಗಳನ್ನ ಏತಕೆ ಸಾಟಿಯಾರು ಜಗದೊಳಗಿನ್ನು ಮೋಟುಮರಕೆ ಸ್ಥಾಣುವೆನ್ನುತ ಕರೆವರು ಈ ಪೃಥ್ವಿಯ ಮೇಲಿನ ಜನರು 5 ಬಿಸುಜಮುಖಿಯೆ ಇನ್ನೊಂದು ಪೆಸರು ಕೇಳೆ ಪಶುಪತಿಯೆಂದು ಕರೆವರೆನ್ನ ವಸುಧೆಯ ಮೇಲಿನ ಪೆಸರುಗಳಿಗೆ ನೀ ಪ್ರತಿಯಾಗರ್ಥವ ಕಲ್ಪಿಸುವಿ 6 ವೃಷಭರಾಜ ನೀನಾದರೆ ಮುಂದಕೆ ಪಶುಗಳ ಮಂದೆಗೆ ತೆರಳುವದು ಕುಸುಮಗಂಧಿಯರ ಸದನದಿ ಕಾರ್ಯವು ವೃಷಭರಾಜಗಿಲ್ಲವು ಕೇಳೌ 7 ಶೀಲವಾಣಿಯೆ ಸುಶೀಲೆಯೆ ಎನ್ನಯ ವಾಣಿ ಕೇಳಿ ಕದವನು ತೆಗಿಯೆ ಪೇಳುವೆ ಮತ್ತೊಂದು ನಾಮವ ಎನ್ನನು ಶೂಲಿ ಎಂದು ಕರೆವರು ಜನರು 8 ಶೂಲಿಯಾದರೆ ನಿನ್ನ ಬಾಧೆಯ ಕಳೆಯಲು ಯಾರಿಗೆ ಸಾಧ್ಯವು ಜಗದೊಳಗೆ ನಾರಿಯರಿಗೆ ಹೇಳದೆ ಮುಂದಕೆ ನಡೆ ಶೂರರಾದ ವೈದ್ಯರ ಬಳಿಗೆ 9 ಕರಿಯ ಮುಖನ ಮಾತೆಯೆ ತಡಮಾಡದೆ ಕನಕಮಯದ ಕದ ತೆರೆ ಬೇಗ ಕಮಲನಾಭ ವಿಠ್ಠಲನನು ಪಾಡುತ ಶಿವನ ನಮಿಸಿ ತೆಗೆದಳು ಕದವ 10
--------------
ನಿಡಗುರುಕಿ ಜೀವೂಬಾಯಿ
ಬಾದರಾಯಣರು ಬಾರೋ ಬೇಗನೆ ಬಾದರಾಯಣ ನಿನ್ನಸಾರುವೆ ಸಂತತ ಪ ಗ್ರಂಥಗಳನು ತೋರಿಸು ತವ ಸುಸ್ಮಿತ ವದನದೇಹಗಾರದೊಳಗೆ ತಪ್ಪಿಸಭಿಮಾನ ಅ.ಪ. ಬಾದರಿ ಸುಖ ವಲಜೆ ಮುನಿತವ ಪೂರ್ಣ-ಬೋಧ ವೈಶಂಪಾಯನ ಮುನಿಸಾಧು ಸಂಸೇವಿತ ಪದಾಂಭೋಜಿನೀ ಯೆಮಗ-ಗಾಧ ಮಹಿಮೆ ತೋರಿಸೋ 1 ವೃಂದ ಚಕೂತ ಮುನಿಗಳಿಗೆ ಸುಖಸಂದೋಹದಾರ್ಥ ಪೇಳುತಿರಲುಬಂದ ಸಂಶಯ ಹರಿಸುತ ಬೇಗ ಮಹಾ-ನಂದ ನೀಡಿದಿ ಕೇಳಿದವರಿಗೆ 2 ಸತ್ಯವತಿಯ ಸುಕುಮಾರನೆಧಾತ್ರಿಯೊಳಗೆ ಪುಣ್ಯಚರಿತನೆಸುತ್ತಮುತ್ತಲೂ ಶೇಷಶಯ್ಯನೆ ಎನ್ನನೇತ್ರಕ್ಕೆ ಪೊಳಿ ಇಂದಿರೇಶನೆ 3
--------------
ಇಂದಿರೇಶರು
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು
ಬಾರೆ ಪಾರ್ವತಿ ಸಾರೆ ಸುಖವ ತೋರೆ ನಿನ ದಯವ ಪ ಬಾರಿ ಬಾರಿಗು ಪ್ರಾರ್ಥಿಸುವೆನೆ ಸಾರಸಾಕ್ಷಿಯೆ ಸರ್ಪವೇಣಿಯೆ ಅ.ಪ ದಕ್ಷಕುವರಿಯೆ ಈಕ್ಷಿಸೆನ್ನನು- ಪೇಕ್ಷೆ ಮಾಡದಲೆ ಅಕ್ಷಿತ್ರಯನ ಸತಿಯೆ ಭಕ್ತರ ಕಷ್ಟ ಬಡಿಸುತಲಿ ಸೂಕ್ಷ್ಮ ಮತಿಯನಿತ್ತು ಕೃಷ್ಣನ ಸ್ತೋತ್ರಗಾನದಲಿ ಅ- ಪೇಕ್ಷೆಯೊದಗುವ ಮನವ ಪಾಲಿಸು ರಕ್ಷಿಸೀಗಲೆ ಭಕ್ತವತ್ಸಲೆ 1 ಮಂದಗಮನೆ ಮತ್ತೊಂದು ಪೇಳುವೆ ನಂದಿವಾಹನನಾ ಮುಂದೆ ಸ್ತುತಿಪ ಭಕ್ತವೃಂದ ವಿ- ದೆಂದು ಪೇಳಿದೆ ನಾ ಸುಂದರ ಶ್ರೀ ಹರಿಯ ಸೇವೆಗೆ ಪೊಂದಿಸೆನ್ನ ಮನ ಚಂದದಿಂದ ಪ್ರಾರ್ಥಿಸುವೆನೆ ಸುಂದರಾಂಗಿಯೆ ನಿನ್ನನನುದಿನ 2 ಕಮಲನೇತ್ರೆಯೆ ವಿಮಲ ಸದ್ಗುಣಗುಣಿಯೆ ಪಾರ್ವತಿ ಕಮಲಸಂಭವ ಭವಸುರಾರ್ಚಿತನ ಸ್ಮರಿಸುವ ಮತಿ ಹೃ- ತ್ಕಮಲದೊಳಗೆ ನಿಲಿಸುವಂತೆ ಮಾಡು ಸದ್ಗತಿ ಕಮಲನಾಭ ವಿಠ್ಠಲ ಕೊಡುವ ನೆನುತ ಕೀರುತಿ 3
--------------
ನಿಡಗುರುಕಿ ಜೀವೂಬಾಯಿ
ಬಾರೋ ನಮ್ಮನಿಯೊಳಗೆ ಭಾರತಿಪತಿ ಪ ಬಾರೋ ನಮ್ಮನಿಗೀಗ ನೀರಜಾಕ್ಷನು ನಿನ್ನಸೇರಿದ ಜನರೊಳು ಭಾಳ ಬಹಳೇ ಪ್ರೀತಿಯ ಮಾಳ್ಪ ಅ.ಪ. ಹರಿಯ ಮಂಟಪದೊಳು ಸರಸಿಜಾಕ್ಷನ ಮುಂದೆಇರಿಸಿ ನಿನ್ನನು ನಿತ್ಯಾ ಸ್ಮರಿಸಿ ಪೂಜಿಪೆ ಸ್ವಾಮಿ 1 ನಿನ್ನ ಸೇರಿದ ಕಪಿಯನ್ನು ಪೊರೆದ ಹರಿನಿನ್ನ ಸೇರದ ವಾಲಿಯನ್ನು ಘಾತಿಸಿದಾ 2 ನಂತ ತೀರ್ಥರೆ ದಯದಿಂದ ನಮ್ಮೊಳು ಭವ-ಬಂಧನ ಬಿಡಿಸೆಂದು ಇಂದಿರೇಶಗೆ ಪೇಳು 3
--------------
ಇಂದಿರೇಶರು