ಒಟ್ಟು 559 ಕಡೆಗಳಲ್ಲಿ , 78 ದಾಸರು , 496 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರೀತಿಪಾತ್ರ ಬುಧೇಂದ್ರ ಪ ಸತ್ಯಪ್ರಿಯರ ಕುವರಾ ನಿಜ ಭೃತ್ಯರ ಪಾಲಿಪ ಚತುರಾ ಭಯವ ಕಳೆವುತ್ತ ಪೊರೆದೆ 1 ವಿಷವನುಂಡರಗಿಸಿಕೊಂಡ ಧೀರಾ ವೃಷಕೇತು ಪಿತ ಭಕ್ತ ಶೌಂಡಾ ಉಸಿರೆತ್ತಗೊಡದೆ ಸಾಧಿಸಿದೆ ಮಧ್ವಶಾಸ್ತ್ರ 2 ಚರಣಕ್ಕೆ ಶರಣೆಂಬೆನಯ್ಯ ಎನ್ನ ಕರುಣದಿ ಪಾಲಿಸು ಜೀಯಾ ಪಾದ ಭೃತ್ಯರ ಚರಣ ಕಿಂಕರನ ಕಿಂಕರನೆನಿಸುವದೆನ್ನ 3
--------------
ಹನುಮೇಶವಿಠಲ
ಬಂತವ್ವಾ ತಂಗಿ ಬಂತವ್ವಾ ಈ ಗೊಂದು ಮಾತು ನೆನಪು ಬಂತವ್ವಾ ಪ ಅಂತರಂಗದೊಳು ಕಂತುಜನಕ ತನ್ನ ಚಿಂತಿಪರ್ಹಂತೆಲಿ ನಿಂತಿಹ್ಯನಂತೆ ಅ.ಪ ಮರುಳು ಬುದ್ಧಿಯನು ನೀಗವ್ವ ಬರೆ ತಿರುತಿರುಗಿ ಮರುಗಬೇಡವ್ವ ಕರಿರಾಜ ದ್ವರದನು ತರುಣಿಯ ಪೊರೆದನು ಸರಸದಿ ಪಾಂಡವರ ನೆರಳಾಗಿ ನಿಂತನು 1 ಹಂಚಿಕೆ ಪೇಳುವೆ ನಿನಗವ್ವ ನಿನ್ನ ವಾಂಛಲ್ಯ ಗುಣವೊಂದು ಕಳೆಯವ್ವ ಕಿಂಚಿತ್ತು ಮನದೊಳು ವಂಚನಿಲ್ಲದೆ ವಿ ರಂಚಿಪಿತನ ನಂಬಿ ಭಜಿಸವ್ವ 2 ಸುಳ್ಳೆ ಕಳವಳಿಸುವುದ್ಯಾಕವ್ವ ತಿಳಿ ನಳಿನಾಕ್ಷನ ಘನ ಮಹಿಮ್ಯವ್ವ ಹೊಲಸು ದೇಹದಾಸೆ ನೀಗಿದ ಭಕ್ತಗೆ ಸುಲಭನು ಶ್ರೀರಾಮ ಕೇಳವ್ವ 3
--------------
ರಾಮದಾಸರು
ಬಂದ-ಬಂದ _ ಇಂದಿರೇಶ ನಂದನಂದನಾ ನಿಖಿಳ ಜನಕ ಕಂಧರಾಶ್ರಯಾ ಪ ಬಂದ ಬಂದ ಭಜಕ ಬಂಧು ಮಂದರಾದ್ರಿಧರ ಅರ- ವಿಂದನಯನ ಸುಂದರಾಂಗ ಸಿಂಧುಶಯನ ನಳಿನನಾಭ ಅ.ಪ. ನೀಲಮೇಘ ಶ್ಯಾಮಸುಂದರಾತನಿಗೆ ಮೇಲುಸಮರು ಇಲ್ಲವೆನಿಸಿದ ಲೀಲೆಯಿಂದ ಜಗವ ಸೃಜಿಸಿ ಪಾಲಿಸುತ್ತ ಮತ್ತೆ ಅಳಿಸಿ ಆಲದೆಲೆಯಮೇಲೆ ಸಿರಿ ಲೋಲನಾಗಿ ಮೆರೆವ ಕೃಷ್ಣ 1 ಐದು ರೂಪದಿಂದ ಕ್ರೀಡಿಪಾ ಪ್ರಕೃತಿ ಬೋಧ್ಯ ಸಿರಿಗುನಾಥ ನಾಯಕಾ ಆದಿಮಧ್ಯ ಅಂತ್ಯ ಶೂನ್ಯ ಮೋದಪೂರ್ಣ ಜ್ಞಾನಕಾಯ ಮೋದ ಮುನಿಯ ಹೃದಯಸದನ ಗೋಧರಾತಪತ್ರ ಶ್ರೀಪ 2 ಆದಾನಾದಿ ಕರ್ತ ಬ್ರಹ್ಮನೂ ದಿವಿಜ ಸಾಧುಸಂಘ ಸೇವೆ ಗೊಂಬನೂ ವೇದವೇದ್ಯ ವೇದ ವಿನುತ ವೇದ ಭಾಗಗೈದು ಪೊರೆದ ಛೇದ ಭೇದರಹಿತ ಗಾತ್ರ ಸಾಧು ಪ್ರಾಪ್ಯ ಬಾದರಾಯಣ 3 ದಾಸಜನಕೆ ಮುಕ್ತಿನೀಡುವ ಮಹಿ- ದಾಸಕಪಿಲ ಪೂರ್ಣ ಕಾಮನೂ ದೋಷ ದೂರ ನಾಶರಹಿತ ವಾಸುದೇವ ಕ್ಲೇಶವಿದೂರ ಈಶವಿಧಿಗಳನ್ನು ಕುಣಿಪ ಕೇಶವಾದ್ಯನಂತ ರೂಪ4 ಮೊತ್ತಜಗಕೆ ಸತ್ತೆನೀಡುವಾ ನಿಖಿಳ ಸತ್ಯ ಜಗದ ಚೇಷ್ಟೆನಡೆಸುವಾ ಮೊತ್ತಶಬ್ದ ಘೋಷವರ್ಣ ಮತ್ತೆ ಪ್ರಣವ ಮಂತ್ರಗಣದಿ ನಿಖಿಳ ಯಜ್ಞ ಭೋಕ್ತನಾಥ ಅಂಗಭೂತ 5 ಜಿಷ್ಣುಸೂತ ಕೃಷ್ಣೆಕಾಯ್ದವಾ ಸ್ವರತ ವಿಷ್ಣು ಪುರುಷಸೂಕ್ತ ಸುಮೇಯಾ ವಿಶ್ವಕರ್ತ ವಿಶ್ವಭೋಕ್ತ ವಿಶ್ವರೂಪ ವಿಶ್ವಭಿನ್ನ ವಿಶ್ವವ್ಯಾಪ್ತ ಶಶ್ವದೇಕ ತೈಜಸ ಪ್ರಾಜ್ಞತುರ್ಯ 6 ಸತ್ಯಧರ್ಮಗಳನು ಕಾಯುವಾ ದುಷ್ಟ ದೈತ್ಯತತಿಯ ದಮನಗೈಯ್ಯುವಾ ಮತ್ಸ್ಯಕೂರ್ಮ ಕೋಲ ಚರಿತ ಭೃತ್ಯಭಾಗ್ಯ ನಾರಸಿಂಹ ಸತ್ಯಶೀಲ ಬಲಿಯವರದ ಕ್ಷಿತಿಪದಮನ ಕ್ಷಾತ್ರವೈರಿ ಪರಶುಧಾರಿ7 ವಿಶ್ವ ಬಿಂಬನು ರಾ ಜೀವಪೀಠನನ್ನು ಪಡೆದನೂ ರಾವಣಾರಿ ಕೃಷ್ಣ ಬುದ್ಧ ಭಾವಿಕಲ್ಕಿ ನಿತ್ಯಮಹಿಮ ಭಾವಜಾರಿ ಪ್ರೀಯ ಸಖನು 8 ಹಯಗ್ರೀವ ದತ್ತ ಋಷಭನೂ ಅಪ್ರ- ಮೇಯ ಹಂಸ ಶಿಂಶುಮಾರನು ಜಯಮುನೀಂದ್ರ ವಾಯುಹೃಸ್ಥ ಜಯೆಯ ರಮಣ ಕೃಷ್ಣವಿಠಲ ದಯದಿ ಪೊರೆಯಲೆಮ್ಮನೀಗ ಜಯವು ಎನುತ ನಲಿದು ನಲಿದು 9
--------------
ಕೃಷ್ಣವಿಠಲದಾಸರು
ಬಂದನೊ ಸುಜನರ ಸಂದಣಿಯೊಳಗತಿಸುಂದರ ರಥವೇರಿ ಗುರುವರ ಬಂದನೊ ಪ ಬಂದಿ ಜನರು ಮುದದಿಂದ ಬಹುಪರಾಕೆಂದು ನುಡಿಯಲಾನಂದ ಬೀರುತ ಬಂದನೊ ಅ.ಪ. ಕ್ಷಿತಿ ಸುರಪತಿ ಶುಭಮತಿ ಬಲ್ಮತದವರೊಯತಿ ಪರರತಿಶಯ ದಶಮತಿ ಸಂ-ಸ್ಕøತ ಭಾಷಣದವರೊ ಭಯಹರಣನೆಂಬೊ ವಾ-ರುತಿಯ ಕೀರುತಿಯ ಪೂರುತಿಯ ಕೇ-ಳುತ ಮಹಿಮಾಂಗಣಕಥಿಸುತ ಗ್ರಂಥಿಸುತ ತುತಿಶುತನುತಿಸಿ ಯತಿ ಶಿರೋಮಣಿಗೆರತುನ ಖಚಿತವಾದಾರುತಿಯ ಬೆಳಗಿರೆ 1 ಸುರತರು ಶುಭ ಧೊರೆಯೋ ವಾಗ್ಝರಿಯೋಸರಸಾರ್ತಿ ಜನಗಳ ನೆರೆಸುತಾದರಿಸುತಾಬಲು ಸುಖ ಸುರಿಸುತಾ ದರಿದ್ರವ ತರಿದುಪೊರೆದೂ ಕರೆದವರಿಗೆ ಕೈ-ಶರೆಯಾಗುವೆನೆಂಧರುಷದಿ ಗುರುವರ ಬಂದನೊ 2 ವಾಲಗ ಘೊರ್ಮಿಡೆ ಭಟರುಗಳ ಹೆಗಲ ಮ್ಯಾಲೆಝಗ ಝಗಿಸುವ ಛಡಿಗಳೊ ಕುಣಿಕುಣಿದಾಡುವವರಹಿ ವೇಣಿಗಳೋ ವಾಣಿಗಳು ಶ್ರೀಣಿಗಳು ಶೋಭಿಸೆಸುಜನರು ಕೈ ಮುಗಿವರು ನಗುವರುಸಂಭ್ರಮದಿಂದ ಬಿಗಿವರು ದೃಗಾರೋಢನದಿಜಿಗಿದು ಅಘದೂರೊಗೆದ ಜನರೊಳುವೆಗ್ಗಳದಲಿಂದಿರೇಶನ ಭಕುತಾಗ್ರಣಿ ಬಂದನೊ 3 ಇಲ್ಲಿ ವರ್ಣಿತವಾದ ಯತಿಗಳು ಯಾರೆಂದು ತಿಳಿಯದು.
--------------
ಇಂದಿರೇಶರು
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಾ ಬಾ ಬಾರೈ ಬಾ ಬಾ ಬಾ ಬಾರೈ ಬಾ ಬೇಗ ಬಾರೆಂದು ಭಕುತರು ಕರೆಯಲು ಹರಿ ಪ. ಶ್ರೀಸತಿಯಪ್ಪಿಕೊಂಡಿಪ್ಪನೆ ಬಾ ಶೇಷಶಯನ ಎನ್ನಪ್ಪನೆ ಬಾ 1 ಮತ್ಸ್ಯನಾಗಿ ಜಲದೊಳಾಡಿದವನೆ ಬಾ ಕಚ್ಛಪವತಾರವ ಮಾಳ್ದನೆ ಬಾ 2 ಧsÀರೆಗಾಗಿ ಜಲದೊಳಗಿಳಿದನೆ ಬಾ ಹಿರಣ್ಯಕನುದರವ ಸೀಳ್ದನೆ ಬಾ 3 ಶಕ್ರನ ಪೊರೆದ ಶ್ರೀ ವಾಮನನೆ ಬಾ ವಕ್ರನೃಪಾಲಕುಲಶಮನನೆ ಬಾ 4 ರಾವಣಾಂತಕ ರಘುರಾಮನೆ ಬಾ ದೇವಕಿ ನಿಜಸುತ ಪ್ರೇಮನೆ ಬಾ 5 ಸತಿಯರ ವ್ರತವ ಕೆಡಿಸಿದನೆ ಬಾ ಚತುರ ಕಲಿಯನೋಡಿಸಿದನೆ ಬಾ 6 ಹಯವದನಾಶ್ರಿತ ಶರಣನೆ ಬಾ ಪ್ರಿಯಸುರ ಸೇವಿತ ಚರಣನೆ ಬಾ 7
--------------
ವಾದಿರಾಜ
ಬಾ ಬಾ ರಾಘವ ಬಾ ವೀರ ರಾಘವ ಪ ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1 ಕೂರ್ಮರೂಪನಾಗಿ ಅಮರರಿಗೊಲಿದು ನೀ ಕಾಮಜನಕ ಸುಪ್ರೇಮಾವನಿತ್ಯಂತೆ4 2 ವರಹರೂಪನಾಗಿ ಧರಣಿಯ ಚೋರನ ಶಿರವ ತಂದು ನೀ ಜಗವ ಪೊರೆದ್ಯಂತೆ 3 ದುರುಳ ರಕ್ಕಸನ ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4 ಚೆಲುವತನದಿ ಪೋಗಿ ಬಲಿಯದಾನವ ಬೇಡಿ ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5 ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ ಗಡು ಮುರಿದು ನೀ ಸಡಗರ ಪಟ್ಯಂತೆ 6 ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7 ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8 ಚಿತ್ತಜಪಿತ ನೀನು ಬತ್ತಲೆಯೊಳು ಬಂದು ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9 ಸುಂದರ ವಾಜಿಯ ಚೆಂದಾದಿಂದೇರುತ ಮಂದಗಮನೆಯರ ನಂದವಳಿದ್ಯಂತೆ 10 ದೋಷರಹಿತ ನಮ್ಮ ಶೇಷವಿಠ್ಠಲನೆ ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
--------------
ಬಾಗೇಪಲ್ಲಿ ಶೇಷದಾಸರು
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾರದ್ಯಾಕೊ ಕೃಪಾಧರ ದೇವ ನಿನಗೆನ್ನೊಳ್ಕರುಣಾ ಪ. ಸರಸಿಯೊಳಂದು ಬೆದರಿದ ಕರಿರಾಜನನು ಪೊರೆದ ಬಿರುದ ನೀ ಮರೆವುದು ನೀತಿಯೇನೊ ವರದ 1 ತಾಳಲಾರದಂಥ ವೇದನೆ ಇನ್ನು ಪೇಳಲೇನು ಕಂಸಸೂದನ ಇಳೆಯ ಮ್ಯಾಲೇಳಲಾರದಂತಾಯ್ತೆನ್ನ ಹದನ2 ಸಂಕಟಾಬ್ಧಿ ಪರಿಶೋಷಣಾ ಶ್ರೀ ವೆಂಕಟೇಶ ಚಕ್ರಭೂಷಣ ಕಿಂಕರರಾತಂಕವನ್ನು ದೂರಿಸುತಿಹದಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೊ ಬಾರೊ ಬಾರೊ ಶ್ರೀಹರಿ ಭಕ್ತರಾಧಾರಿ ಪ ನಿಗಮವನ್ನು ಅಜಗಿತ್ತೆ ನಗವ ಬೆನ್ನಲಿ ಪೊತ್ತೆ ನೆಗಹಿ ಧರಣಿಯನು ಇತ್ತೆ ಮಗುವ ಪೊರೆದೆ ಸುಗುಣ ಹರಿಯೆ 1 ಪದದಿ ಗಂಗೆಯನ್ನು ಪಡೆದೆ ಬುಧರಿಗೊಲಿದು ಕೊಡಲಿ ಪಿಡಿದೆ ಸುದತಿ ನೆವದಿ ಖಳರ ಬಡಿದೆ ಒದಗಿ ಅಕ್ಷಯವಿತ್ತೆ ಹರಿಯೆ 2 ದುರಳ ತ್ರಿಪುರರನ್ನು ಗೆಲಿದೆ ಭರದಿ ಯವನ ಬಲವ ಮುರಿದೆ ಗರುಡಾಚಲದಿ ನಿಂತು ಭಕ್ತರ ಪೊರೆವ ಲಕ್ಷ್ಮೀಕಾಂತ ಹರಿಯೆ 3
--------------
ಲಕ್ಷ್ಮೀನಾರಯಣರಾಯರು
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು
ಬಾರೋ ನಮ್ಮನಿಯೊಳಗೆ ಭಾರತಿಪತಿ ಪ ಬಾರೋ ನಮ್ಮನಿಗೀಗ ನೀರಜಾಕ್ಷನು ನಿನ್ನಸೇರಿದ ಜನರೊಳು ಭಾಳ ಬಹಳೇ ಪ್ರೀತಿಯ ಮಾಳ್ಪ ಅ.ಪ. ಹರಿಯ ಮಂಟಪದೊಳು ಸರಸಿಜಾಕ್ಷನ ಮುಂದೆಇರಿಸಿ ನಿನ್ನನು ನಿತ್ಯಾ ಸ್ಮರಿಸಿ ಪೂಜಿಪೆ ಸ್ವಾಮಿ 1 ನಿನ್ನ ಸೇರಿದ ಕಪಿಯನ್ನು ಪೊರೆದ ಹರಿನಿನ್ನ ಸೇರದ ವಾಲಿಯನ್ನು ಘಾತಿಸಿದಾ 2 ನಂತ ತೀರ್ಥರೆ ದಯದಿಂದ ನಮ್ಮೊಳು ಭವ-ಬಂಧನ ಬಿಡಿಸೆಂದು ಇಂದಿರೇಶಗೆ ಪೇಳು 3
--------------
ಇಂದಿರೇಶರು
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ