ಒಟ್ಟು 456 ಕಡೆಗಳಲ್ಲಿ , 74 ದಾಸರು , 319 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ವ್ರತವನಲ್ಲದೆ ಅನುವ್ರತ ಮಾಡಬಹುದೇಶತಮುಖ ಸ್ಥಿತನಾದ ದಿವಿಜಪತಿಯ ಪ ದಾನಶೀಲನೆನಿಸಿ ವಿಬುಧರಿಗೆ ಮೃಷ್ಟಾನ್ನಪಾನಗಳುಂಬೋ ಪಂಕ್ತಿಯಲ್ಲಿ ||ದೀನನೊಬ್ಬನು ಬರಲು ದೋಷಿಯಾದವನೆಂದು ಆನನವ ತಿರುಹುವನೇ ಅವನಿಯೊಳಗೇ 1 ಅನ್ನ ಕಾರಣವಾದ ಪರ್ಜನ್ಯದಿಂದಲಿ ಸಕಲಜನರನು ಪರಿತೋಷ ಬಡಿಸಿ ಕೃಪದಿ ||ಚೆನ್ನಿಗನೆ ಈ ಅಲ್ಪ ಪ್ರಾದೇಶಸ್ಥಿತರನ್ನುಬನ್ನ ಬಡಿಸುವರೇನೊ ಘನ್ನ ಮಹಿಮಾ 2 ಭಕ್ತವತ್ಸಲನೆಂಬೊ ಬಿರುದು ನಿನಗೆ ಉಂಟೆಸಖತನದಿ ಬಿನ್ನೈಪೆ ಸಾರ್ವಭೌಮ ||ಭಕುತ ಸುರಧೇನು ಗುರು ವಿಜಯ ವಿಠಲರೇಯಉಕುತಿ ಲಾಲಿಸಿ ವೃಷ್ಟಿಗರಿವುದು ಕರುಣದಲಿ 3
--------------
ಗುರುವಿಜಯವಿಠ್ಠಲರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಾಮಸುಂದರನೆ ನೀನು ಪ್ರೇಮಾದಿ ಕಾಯೊ ಪ ಧರೆಯೊಳು ನಾ ಬಂದು ಥರಥರದಲ್ಲಿ ನೊಂದು ಮರುಗಿದೆ ತೋರ್ನಿನ್ನ ಚರಣಕಮಲವಾ 1 ಅನ್ಯನೆಂದರಿಯದೆ ನಿನ್ನವನೆಂದೆನ್ನ ಬನ್ನ ಬಿಡಿಸು ಬಾರೋ 2 ಶ್ರೀವತ್ಸಾಂಕಿತ ನೀನು ಶರಣಾಗತ ನಾನು ಸರಸಿಜನಯನ ಬ್ಯಾಗ ಬಾರೊ ನಿನ್ನ 3
--------------
ಸಿರಿವತ್ಸಾಂಕಿತರು
ಶಿಖಾಮಣಿ | ದುರ್ಗುಣಿ ಪ ಶ್ರೀ ಕಳತ್ರನೆ ಜಗದೇಕ ನಾಯಕನೆಂದರಿಯದೆ ಅ.ಪ ಬನ್ನ ಬಿಡಿಸುವರೇನೊ ಮಾನವ ಕಡು ಮೂರ್ಖನೆ 1 ನಾನಾ ಪ್ರಯತ್ನಗಳ ಕಾಣುವುದಿಲ್ಲವೇಕೊ ಪ್ರಾಣಿಮಾತ್ರನು ನೀ ನಿಜವಿದು 2 ವರಿಗೆ ಬಿಡದೆ ಸರ್ವರೊಳಗೆ ನಿಂತಿಹ ಗುರುರಾಮ ವಿಠಲನೆಂದರಿಯದೆ 3
--------------
ಗುರುರಾಮವಿಠಲ
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು
ಶೋಭನವೆನ್ನಿರೋ ಶೋಭನ ಬನ್ನಿರೆ ಶೋಭನ ಬನ್ನಿ ಸವ್ಯದಿಂದ ಧ್ರುವ ಶೋಭಾನವೆಂಬೋದು ಸೋಹಂಭಾವಗುಣ ಅಹಂಭಾವಿಗಳು ಅರಿಯವು ಅಹಂಭಾವಿಗಳು ಅರಿಯುವು ಅನಂಗನ ಅಹಂಭ್ರಮೆಯು ವಿಪರೀತ 1 ಶೋಭನವೆನ್ನಿರೇ ಸಿದ್ಧಾಂತನುಭವಿಗಳು ಕಾಮಿ ಕಾಮಣ್ಣನ ಮದುವಿಗೆ ಪ್ರಾಣಿ ಮಾತ್ರಗಳೆಲ್ಲ ಬರಬೇಕು 2 ಶೋಭನವೆನ್ನಿರೇ ಮದೂಣಿಗಾನಂಗಗೆ ಕಾಮಿತದಳಗಿತ್ತಿ ಅರಸಗ ಕಾಮಿತದಳಗಿತ್ತಿ ಅರಸ ಮೋಹನ್ನಗೆ ನೆರೆಯಿತು ಲೋಕ ಧರೆಯೊಳು 3 ಶೋಭನವೆನ್ನಿರೇ ಕಾಮಿ ಕಾಮಣ್ಣಗೆ ಕಾಯದೊಳೀಹ್ಯ ಕರುಣಿಗೆ ಕಾಯದೊಳಿದ್ದು ಮೆರೆವ ಅನಂಗನು ಚರ್ಮದಬೊಂಬಿ ಗುರುತಾಗಿ 4 ಶೋಭನವೆನ್ನಿರೇ ಸಜ್ಜನ ಸಾವಿತ್ರೇರು ಆನಿ ಮೊದಲೆ ಇರುಹು ಕಡಿಗೆಲ್ಲ ಆನಿಮೊದಲೆ ಇರುಹು ಕಡಿಗೆಲ್ಲ ಮಹಿಪತಿ ಶೋಭಾನಯೆಂದ ಸಬೂದಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಗುರುವೇ ನೀ ತೋರಿಸೋ ದಯದಿಂದ ಲೆನಗೆ | ಬೇಗದಿ ಬಂದೆನ್ನ ದೇವನೀಗ ಪ ತೈಲ ಯಂತ್ರ ದೊಳಿಪ ಪಶುವಿನಂದದಿ ಜೀಯಾ | ಹಲವು ಜನ್ಮವ ತಾಳಿದೆನಯ್ಯಾ 1 ನಿನ್ನ ಸ್ಮರಣೆ ಮರೆದು ನಾನಾ ಉಪಾಸನೆ ವಿಡಿದು | ಬನ್ನ ಬಟ್ಟೆನೋ ಯಚ್ಚರ ಜರಿದು2 ಭವ ಬಂಧನ ಹರಿವಾ | ಸೂರೆಗೊಳಲಿಲ್ಲಾ ಭಕ್ತಿ ಸುಖವಾ3 ಸರ್ವಾಪರಾಧವಾ ಕ್ಷಮಿಸಿ ಯನ್ನುದ್ಧಾರವಾ | ಉರ್ವಿಲಿ ಮಾಡು ಪಿಡಿದು ಕರವಾ 4 ಇಹಪರ ಸಹಕಾರ ಕರುಣಾಬ್ದಿ ಪಾರಾವಾರಾ | ಮಹಿಪತಿ ಸುತ ಪ್ರಭು ಉದಾರಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಮೋಹನದಾಸರು ಇನ್ನಾದರು ಎನ್ನ ಪೊರೆಯೊ | ಮೋಹನರಾಯನಿನ್ನವನಲ್ಲವೇನೋ ಪ ಬನ್ನ ಬಡಿಪದುಚಿತವೇನೋಚೆನ್ನ ಶ್ರೀ ವಿಜಯ ದಾಸಾರ್ಯರ ಚಿಣ್ಣಾ ಅ.ಪ. ಎನ್ನ ಪಾಲಿಸಿದಂದದೀ | ಸಕಲ ಪ್ರಪನ್ನರ ಸಲಹುವುದೆಂದೂ ಬಿನ್ನಪಗೈದು ಮೋಹನ್ನ ವಿಠಲನೀಗೆ ಘನ್ನುಪಕಾರವ ಮಾಡಿದ ಧೀರಾ 1 ಮನ್ನವಚ ಕಾಯದಿ | ನಿನ್ನಯ ಚರಣ |ವನ್ನು ಪೂಜಿಪೆ ಮೋಹನ್ನ |ಮನ್ನಿಸಿಯೆನ್ನಯ ಅವಗುಣವೆಣಿಸದೆಕುನ್ನಿಯ ಕಾಯೊ ಸದ್ಗುರುವೆ ಪ್ರಸನ್ನ 2 ಸಾರ |ಭಕ್ತರಿಗರ್ಥಿಲಿ ಸ್ತವನ |ಮುಕ್ತಿದಾಯಕ ಗುರುಗೋವಿಂದ ವಿಠಲನವ್ಯಕ್ತಮಾಡಿಸೊ ಗುರು ಮೋಹನ್ನರಾಯಾ 3
--------------
ಗುರುಗೋವಿಂದವಿಠಲರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀ ವೇಣುಗೋಪಾಲ ಕೃಷ್ಣಾ ಕಾವುದೈ ಪರಿಹರಿಸಿ ನೀನೆನ್ನ ಕೃಷ್ಣಾ ಪ ಶ್ರೀ ವ್ಯಾಸರಾಯಾರ್ಜಿತ ಕರುಣಾ ದೇವಾದಿನುತಚರಣ ಗುಣಗಣಾಭರಣ ಅ.ಪ. ಭೂಮಿ ಆಕಾಶಾದಿ ಸಕಲವನು ವ್ಯಾಪಿಸಿದಪ್ರೇಮದಿಂ ನಿನ್ನಂಶವನು ಪೂರ್ಣಗೊಳಿಸಿದನೇಮದಿಂ ಜಾಂಬುವತಿ ಭಕುತಿಯಿಂ ಪೂಜಿಸಿದಭೀಮರಥಿಯಿಂ ಬಂದು ಶ್ರೀ ವ್ಯಾಸರಾಯಗೊಲಿದ 1 ಪುರಂದರ ಕಚ್ಚು ನೈವೇದ್ಯಕ್ಕೆಮೆಚ್ಚಿಯತಿ ವ್ಯಾಸರನು ಅಚ್ಚರಿಯಗೊಳಿಸಿದಹುಚ್ಚು ಕುರುಬಗೆ ಜಗನ್ನಾಥದಾಸರ ಜನುಮದಿಚ್ಛೆಯನು ವ್ಯಾಸರಿಂ ಪೂರೈಸಿ ಮೆರೆಯುತಿಹ 2 ಕನ್ನಡದ ರಾಜ್ಯವೆಂದೆನಿಸಿದ ವಿದ್ಯಾನಗರದುನ್ನತಿಯ ಗೈದ ಯತಿ ವ್ಯಾಸರನು ಪಟ್ಟದೊಳುಸನ್ನಹಿಸಿ ಘನ ಕೃಷ್ಣ ನರಪತಿಗೆ ಬಂದಿದ್ದಬನ್ನ ಕುಹುಯೋಗವ ಸಂಹರಿಸಿ ಪಾಲಿಸಿದ 3 ಪ್ರಾಣಯತಿ ಹರ ವ್ಯಾಸರಾಯಾದಿ ಹರಿದಾಸಜಾಣರನು ಕುಣಿಸಲಿಕೆ ನಾದವನು ಕೊಡಲೆಂದುವೇಣುವನು ಊದುತ್ತೆ ಮೋದಿಸುವನೆಂಬಂತೆಕಾಣಿಸುವ ರೀತಿಯಲಿ ನರ್ತಿಸುತ ನಿಂತಿರುವ 4 ವ್ಯಾಸರಂದದಿ ಧರ್ಮದುಪದೇಶ ಮಾಡುತ್ತೆದೇಶದೊಳು ಪಸರಿಸಲು ಲಕ್ಷ್ಮೀಶ ತೀರ್ಥರನುಶಾಸನವ ಗೈದುಪನ್ಯಾಸಕ್ಕೆ ನೇಮಿಸಿದಶ್ರೀಶ ಗದುಗಿನ ವೀರನಾರಾಯಣನು ಎಂಬ 5
--------------
ವೀರನಾರಾಯಣ
ಶ್ರೀ ಹರಿ ಸೇವೆಯ ಮಾಡುವ ಬನ್ನಿ ಮಹಾ ಮಹಿಮೆಯ ಕೊಂಡಾಡು ಬನ್ನಿ ಸಹಕಾರದ ಸುಖ ನೋಡುವ ಬನ್ನಿ ಪರದೊಳು ನಲಿದಾಡುವ ಬನ್ನಿ 1 ನೋಡುವ ಬನ್ನಿ ಸದ್ಗುರು ಪಾದ ಬೇಡುವ ಬನ್ನಿ ನಿಜ ಹಿತವಾದ ಕೂಡುವ ಬನ್ನಿ ನಿಜಬೋಧ ಮಾಡುವ ನಿಜ ಭಕ್ತಿಯು ನವವಿಧ 2 ಜಯ ಜಯಕಾರ ಮಾಡುವ ಬನ್ನಿ ಕೈಮುಗಿದು ವರ ಬೇಡುವ ಬನ್ನಿ ಮಹಿಪತಿಸ್ವಾಮಿಯ ನೋಡುವ ಬನ್ನಿ ದಯಾನಿಧಿಯ ಕೊಂಡಾಡುವ ಬನ್ನಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀನಿವಾಸನ ಸೇವೆ ಗೈಯುವ ಜಾಣರೆಲ್ಲರು ಬನ್ನಿರೈ ಪ ಧ್ಯಾನಲಭ್ಯನ ಕಾಣಲಿಚ್ಛಿಪ ಮಾನಿಪರ ಕರತನ್ನಿರೈಅ.ಪ. ಪರಮಪದ ದೊಳಗಿರದೆ- ವೆಂಕಟಗಿರಿಯೊಳಿದರ್Àನು ಪೂರ್ವದಿ ಭರದಿ ವಿಪ್ರಗೆ ವರವನಿತ್ತೀ ಗಿರಿಗೆ ಬಂದನು ಪ್ರೇಮದಿ 1 ದೂರವಲ್ಲ ವಿಚಾರಿಸಲು ಹರಿಣಾರಿ ಭೂಧರಮಿಲ್ಲಿಗೆ ಚಾರುಮೂರ್ತಿಯ ಚರಣಸೇವೆಗೆ ಸಾರುವೆವು ನಾವಲ್ಲಿಗೇ 2 ಚರಣ ಸೇವಕರನ್ನು ಮರೆಯದೆ ಪೊರೆಯು ವನು ಮೋದದಿ ಪರಮ ಪುಲಿಗಿರಿವಾಸ ವೆಂಕಟ ವರದವಿಠಲನೆಲೋಕದಿ 3
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸನ ಸೇವೆಗೈಯ್ಯುವ ಜಾಣರೆಲ್ಲರು ಬನ್ನಿರೈ ಧ್ಯಾನಲಭ್ಯನ ಕಾಣಲಿಚ್ಚಿಪ ಮಾನಿಸರ ಕರತನ್ನಿರೈ ಪ ಪರಮಪದದೊಳಗಿರದೆ ವೆಂಕಟಗಿರಿಯೊಳಿರ್ದನು ಪೂರ್ವದಿ ಭರದಿವಿಪ್ರಗೆ ವರವನಿತ್ರ್ತಿಗಿರಿಗೆ ಬಂದನು ಪ್ರೇಮದಿ 1 ದೂರವಲ್ಲ ವಿಚಾರಿಸಲು ಹರಿದಾಂ ಭೂಧರಮಿಲ್ಲಿಗೆ ಚಾರುಮೂರ್ತಿಯ ಚರಣಸೇವೆಗೆ ಸಾರುವೆವು ನಾವಲ್ಲಿಗೆ 2 ಚರಣಸೇವಕರನ್ನು ಮರೆಯದೆ ಪೊರೆಯುವನು ಮೋದದಿ ಪರಮಪುಲಿಗಿರಿವಸವೆಂಕಟ ವರದ ವಿಠಲನೆ ಲೋಕದಿ 3
--------------
ವೆಂಕಟವರದಾರ್ಯರು