ಒಟ್ಟು 1533 ಕಡೆಗಳಲ್ಲಿ , 106 ದಾಸರು , 1047 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕನಸಿನಲಿ ಕಂಡೆನಾ-ಶ್ರೀನಿವಾಸನಾ ಕಾಣದಾತನ ||ಕನಸಿನಲಿ|| ಪ ಶರದಾಭಗಾತ್ರನ-ಶಂಪಾಭೋಜ್ವಲ ಕರಪೀತವಸ್ತ್ರನ ಸಾರಸಾಕ್ಷನ ಶರದಿಂದುವಕ್ತ್ರನ ಸಿರಿಯನುರದಿತಾನಿರಿಸಿಕರಗಳಿಂ ದರಚಕ್ರಗಳನು ಧರಿಸಿರ್ಪಾತನ 1 ಕಾಮನಂ ಪೆತ್ತನ ಕಾಕುಸ್ಥನಿಗೆ ಕಾಮಿತವಿತ್ತನ ಕೌಸ್ತುಭಮಣಿ-ಧಾಮವಂ ಪೊತ್ತನ ಹೇಮ ಸೂತ್ರಮಣಿ ದಾಮಭೂಷಣ ಸ್ತೋಮ ದಿವ್ಯಗುಣರಾಮಣೀಯನ ||ಕನಸಿನಲಿ || 2 ಸುರವೃಂದಾನಂದದಿ-ಸ್ತುತಿಸುತ್ತ ಬರುತಿರೆ ತೂರ್ಯಾರವದಿ ಸಿತಛತ್ರಾದ್ಯುರುತರ ರಾಜ ಚಿಹ್ನದಿ ಗರುಡನೇರಿ ನಿಜ ಶರಣರ ಪೊರೆಯುವ ವರದಪುಲಿಗಿರಿ ವರದವಿಠಲನ ||ಕನಸಿನಲಿ|| 3
--------------
ಸರಗೂರು ವೆಂಕಟವರದಾರ್ಯರು
ಕಮಲ ಭಜಿಸೋ ಮೈಲಾರ ಲಿಂಗನ ಪ ಪುರಹರ ಸ್ವರೂಪನೆ ಎಂದು ಧ್ಯಾನಿಸೋ ಪಾತಕ ತಿಮಿರ ಭಾಸ್ಕರನೆಂದು ನೀ ಸ್ಮರಿಸೋ ಶಿರಬಾಗಿ ನಮಿಸೋ ಅ.ಪ ತುರಗವಾಹನವೇರಿ ಬರುತಿಹನ ಧರೆಯೊಳಗೆ ಮೈಲಾಪುರ ಸುಮಂದಿರನೆಂದು ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದ ರ್ಚನೆಯ ಕೊಂಬುವನ ಶರಣರನ ಪೊರೆವನ 1 ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನು ಗಾಲಭಕುತರ ಮ್ಯಾಳವನು ಪಾಲಿಸಲು ಬಂದಿಹನ ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನ ಮಾಳಸಾಕಾಂತನ 2 ನಿಷ್ಠೆಯಿಂದಲಿ ಭಜಿಪ ಭಕುತರನ ರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನು ಕೊಳುತಿಹನ ಸಿರಿ ವಿಷ್ಣು ಭಕುತರ ಮನೆಗಳಲಿ ಪೂಜೆಯನು ಕೊಂಬುವನ ಇಷ್ಟ ಪ್ರದಾತನ3 ಸಂಚರಿಸುತಲಿ ದಿನಕರನು ಮಕರದಿ ಬರಲು ಸಂಕ್ರಮಣ ಉತ್ಸವದಿ ನೋಡಲು ನೆರೆದ ಬಹು ಜನ ರಿಂದ ಸೇವಿತನ ಗಿರಿಶಿಖರ ಗುಂಡಿನ ಮೇಲೆ ದೀಪೋತ್ಸವದಿ ರಾಜಿತನ ಮಹಿಮಾನ್ವಿತನ 4 ವಿನುತ ಶುಭಚರಣ ಸರೋಜ ಕಾರ್ಪರ ನಾರಸಿಂಹನ ಒಲಿಮೆ ಪಡೆ ದಿಹನಾ ರವಿವಾರ ವಾರದಿ ಮಾರ್ತಾಂಡದೇವನ5
--------------
ಕಾರ್ಪರ ನರಹರಿದಾಸರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಕರವೀರಪುರವ ಸೇರಿದಳು ಹದಿನಾರು ಸಾವಿರ ನಾರಿಯರ ಭಾಗ್ಯವ ನೋಡಿ ಸೇರಿದಳುಲಕುಮಿ ಜರಿದಾಳು ಪ. ಶ್ರೀವೈಕುಂಠಕ್ಕೆ ಸರಿಯೆಂದು ದ್ವಾರಕೆಹರಿ ಬ್ರಹ್ಮ ಕೇಳಿ ಹರುಷಾಗಿಹರಿ ಬ್ರಹ್ಮ ಕೇಳಿ ಹರುಷಾಗಿ ತಮ್ಮ ತಮ್ಮಪುರದಿಂದ ಇಳಿದು ಬರುತಾರೆ 1 ವೃಂದಾರಕರೆಲ್ಲ ಬಂದರು ದ್ವಾರಕೆಗೆ ಚಂದ್ರ ನೊಬ್ಬ ಬರಲಿಲ್ಲಚಂದ್ರ ತಾನೊಬ್ಬ ಬರಲಿಲ್ಲ ತನ್ನಕಾಂತಿ ಕುಂದೀತೆಂಬೊ ಭಯದಿಂದ2 ಸಾರು ದೇವತೆಗಳು ದ್ವಾರಕೆಗೆ ಬರಲುಸೂರ್ಯ ತಾನೊಬ್ಬ ಬರಲಿಲ್ಲಸೂರ್ಯ ತಾನೊಬ್ಬ ಬರಲಿಲ್ಲ ತನ್ನತೇಜ ಕುಂದೀತೆಂಬೊ ಭಯದಿಂದ 3 ಜಾಣ ನಾರದ ತಮ್ಮ ವೀಣೆ ನುಡಿಸುತ ವಾಣಿ ಮಾವನ ಸ್ತುತಿಸುತವಾಣಿ ಮಾವನ ಸ್ತುತಿಸುತ ತಾಒಂದು ಓಣಿಯ ಹಿಡಿದು ಬರುತಾನೆ4 ವಶಿಷ್ಠ ಮೊದಲಾದ ಮಹಾಶಿಷ್ಠರು ಮುನಿಗಳು ತಮ್ಮ ಕೃಷ್ಣ್ಣಾಜಿನ ಕಾಷ್ಠ ಸಹಿತಾಗಿಕೃಷ್ಣ್ಣಾಜಿನ ಕಾಷ್ಠ ಸಹಿತಾಗಿ ಬಂದರು ಧಿಟ್ಟ ರಾಮೇಶÀನರಮನೆಗೆ 5
--------------
ಗಲಗಲಿಅವ್ವನವರು
ಕರಿ ಕಮಲೇಶ ಪ ಗರುಡಾರೂಢನು ಗಜವರದ ವೈಕುಂಠ ಕೊಡುವ ಪಾಲಿಸಿ ಪಾಂಡವರ ಮನೆ ಭಂಟ1 ಪಕ್ಷಿವಾಹನ ರಾಕ್ಷಸಾರಿ ರಾವಣನ ಶಿಕ್ಷಿಸಿ ವಿಭೀಷಣನ ರಕ್ಷಿಸಿದ ರಾಮ 2 ವಿನತೆಸುತನ ಏರಿ ಘನತರುತ್ಸವದಿ ಸವರಿದಿ ಸುರವಂದ್ಯ ಸುಜನಕ್ಕಾನಂದ 3 ಹಕ್ಕಿಯ ಪಕ್ಕದಲ್ಲ್ಯರ್ಕಕೋಟಿತೇಜ ಜಾ- ನಕ್ಕಿ ಸಹಿತಯೋಧ್ಯನಾಳುವ ರಾಮ 4 ನಗಧರ ಖಗನ್ಹೆಗಲೇರಿ ಉಲ್ಲಾಸ ನಗುವ ಭೀಮೇಶ ಕೃಷ್ಣÀ ಬರುವ ಜಗದೀಶ5
--------------
ಹರಪನಹಳ್ಳಿಭೀಮವ್ವ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣ ಬರುವದೆಂದಿಗೂ ಶ್ರೀರಾಮಚಂದ್ರಾ ಪ ದುರಿತ ಶರಧಿಯೊನೊತ್ತರಿಸಿ ನಿನ್ನಯಾ ದಿವ್ಯ ಚರಣ ಸೇವೆಯೊಳಿರಿಸಿ ಪಾಲಿಸೋ ದೇವ1 ಮೋಸಗೊಳಿಸದಿರೊ ಶ್ರೀಶ ಶ್ರೀನಿವಾಸಾ 2 ಪರಮ ತತ್ವಾಧಿಕಾರಿ ಸುರಮುನಿಸುತಾ ಶೌರಿ ದೊರೆಯ ನಂಬಿದೆನೆಲ್ಲೋ ಕರುಣ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣದೆನ್ನ ಕರಪಿಡಿ ಕಾಯೋ ಪ ಸಿರಿನಾರಾಯಣ ಶರಣೆಂಬೆ ಅ.ಪ ಮೇಲ್ ಮೇಲ್ ಗುಣಗಾನವ ಮಾಡೆ ಬಾಲ್ಯಮೊದಲು ಮುದಿತನ ದೊಳಗುಂ ಸೌ ಶೀಲ್ಯ ಸ್ತುತಿಪೆ ಶುಕನುಡಿಯಂತೆ 1 ದಶರೂಪಗಳಂ ಧರಿಸುತ ಮರೆಸಲು ವಿಶ್ವವ್ಯಾಪಕಗುರು ತರವೇ ಕೃಷ್ಣನಾಮನಾವೆಯೊಳು ಬಹೇ 2 ವೈನತೇಯನನೊಡಗೊಂಡು ಬಹೆ ನಿನ್ನ ಸೆರಗ ಪಿಡಿಯುತ ಬರುವೆ3 ಸುಮನಸ ಪೂಜಿತ ನಮಿಸುವೆ ನಾಂ ಭ್ರಮೆಗಳ ಬಿಡಿಸುತ ಭವಭಯ ಹರ¸ ಕಮಲನಯನ ಹೆಜ್ಜಾಜೀಶ 4
--------------
ಶಾಮಶರ್ಮರು
ಕರುಣಿಸಯ್ಯಾ ಗುರುವರ್ಯ ಪರಮ ಸುಹೃದಯಾ | ನಿರುತ ನಿನ್ನವನೊ ನಾನು ಪುರಂದರರಾಯ ಯಿಂದು ಪ ಲೋಕದ ಜನರು ತಮ್ಮ ಸುಕುಮಾರರಿಗೆ ಪೆಸರು | ಯಾಕೆ ಯಿಡವರೊ ಜೀಯ್ಯಾ | ನೇಕ ಮಮತೆಯಲಿ || ಬೇಕೆ ಎನಗೆ ಯಿಂಥsÀ ಖ್ಯಾತಿ ನೀ ಕೊಟ್ಟ ಭಾಗ್ಯವೆಯಿರಲಿ | ವಾಕು ವ್ಯರ್ಥವಾಗದಂತೆ ಸಾಕುವದು ಬಿಡದೆ ಒಲಿದು 1 ಅಡವಿ ಹತ್ತಿ ಪೋಪ ನರನ ಒಡನೆ ಕೂಡಿಕೊಂಡು ಬಂದು | ಕಡು ಮಹೋತ್ಸವವ ಮಾಡಿ ವೇಗ ಪೊಡವಿಪತಿತನವು || ತೊಡರು ಕಳೆದು ಸರ್ವರೊಳಗೆ | ನಡತಿವಂತ ಮಾಡಿದಂತೆ ಬಡವನ್ನಾ ಉದ್ಧರಿಸು ಜ್ಞಾನಿ2 ಯಿರಲಾಗಿ ಪುತ್ರನೀಗೆ ಬರುವಾವೆ ಪಾಲಿಪದು ಎತ್ತಲಿದ್ದರೂ | ಸತ್ಯ ವಿಜಯವಿಠ್ಠಲನ್ನ | ತುತ್ತಿಸುವ ಮಹಾಮಹಿಮಾ 3
--------------
ವಿಜಯದಾಸ
ಕರುಣಿಸುವುದು ಎನ್ನಾ ಕರಿವರದ ಕೇಶವ ಕರಪಿಡಿದು ಸುಖಪೂರ್ಣಾ ನಿನ್ನಡಿಗಳಂಬುಜ ಸ್ಮರಿಪರಲ್ಲಿಡ ಮುನ್ನಾ ಪರಿಹರಿಸು ಬನ್ನಾ ಪ ಸರಸಿಜಾಪತಿ ಸರಸಿಜೋದ್ಭವ ಹರಸುರಾಧಿಪ ವಂದ್ಯ ನಿನ್ನಯ ಎರವು ಮಾಡದೆ ತ್ವರ್ಯ ಸೌಖ್ಯವುಗರದು ಕರುಣದಿ ಅ.ಪ. ಜನನಿ ಜಠರದಿಂದ ನಿನ್ನಾಜ್ಞದಲಿ ನಾ ಜನಸಿದೆನೊ ಗೋವಿಂದಾ ಬಾಲತ್ವ ಕೆಲದಿನ ಕಳೆದೆನೊ ಮುಕುಂದಾ ಯೌವ್ವನವು ಬರುತಲೆ ವನಿತೆ ಮುಖ ಅರವಿಂದಾ ನೋಡುತಲೆ ಬಲು ಛಂದಾ ಮನವು ನಿಲ್ಲದು ಮಮತೆ ವಿಷಯದಿ ಮುನಿದು ಸಜ್ಜನರ ಸೇವಿಸಿ ಕೊನೆಯಗಾಣದೆ ಮಣಿವೆ ಅಂಘ್ರಿಗೆ ವನದಿಗಳ ವಮ್ಮನೆ (?) ನಡಿಸು ವೆಂಕಟಾ ಘನತೆ ನಿನಗಿದು ತಿಳಿದು ವೇಗದಿ ಅನುದಿನದಲಿ ಸಲಹುತಿಪ್ಪನೆ ಅನಿಮಿಷರ ಆಧಾರ ಮೂರುತಿ 1 ಮೊರೆಯ ಲಾಲಿಸು ಜೀಯಾ ಅರೆ- ಮೊರೆಯ ಮಾಡಲು ಪೊರೆವರ್ಯಾರೆಲೊ ಕಾಯಾ ಅ- ನ್ಯರನು ಕಾಣದೆಯರಗಿದೆನು ಸುರ ಸಹಾಯ ಸುರಧೇನು ಮನೆಯೊಳಗಿರಲು ವಿಠ್ಠಲರೇಯಾ ಮಾಯಾ ಬಲ ತಡದು ನಿಕ್ರವ ತರಲು ಜನರೊಳು (?) ಯರಗಿರಲು ನಿನಗೆಂದಿಗಾದರು ಅರಿದು ಅಗ್ಗಕೆ ಪೊರೆದು ಮಾನವ ಕರಿಯು ಕರೆಯಲು ಬರುವುದುಂಟೇ ಕರುಣಾಸಾಗರನೆಂಬೊ ನಿನ್ನಯ ಬಿರುದು ಉಳ್ಳದಕೊಂಡು ಸಾಧನೆ ಧರೆಯ ದುಷ್ಟರ ಬಾಧೆ ತಪ್ಪಿಸಿ ಹರುಷವನು ಅತಿಗರೆದು ನಿರುತದಿ 2 ಬಿಡೆನೊ ಕಡಲೊಡಗಾಡಿ ಬಿಂಕದಲಿ ಅದ್ರಿಯ ನಿಡಲಿ ಬೆನ್ನಲಿ ನÉೂೀಡಿ ಪಾದಗಳ ಎಳೆಯುತ ನಡೆದು ಕೋಪವ ಮಾಡಿಬಿಡು ದೈನ್ಯದಲಿ ಪೊಡವಿ ದಾನವ ಬೇಡಿ ಬಿಡೆ ನೋಡಡವಿಯೊಳ್ ಕಾಡಿನ ಮಡುವಿನೊಳು ಗಿಡವೇರಿ ಧುಮುಕಲು ಅಂಬರ ಬಿಟ್ಟು ಖಡ್ಗವ ಪಿಡಿದು ವಾಜಿಯನೇರಿದನು ಜರ ಕಡಿಯಪೋಗಲು ಕಂಡು ನಿನ್ನನು ಬಿಡೆನೊ ನಿನಗೆಂದಿಗಾದರು ಪೊಡವಿಪತಿ ಶ್ರೀದವಿಠ್ಠಲ ವಡಿಯ ನೀನೆಂತೆಂದು ನಂಬಿದೆ 3 (ಈ ನುಡಿಯ ಅರ್ಥ ಸ್ಪಷ್ಟವಾಗುತ್ತಿಲ್ಲ-ಅಶುದ್ಧ ಪ್ರತಿಯ ಕಾರಣದಿಂದ.)
--------------
ಶ್ರೀದವಿಠಲರು