ಒಟ್ಟು 2477 ಕಡೆಗಳಲ್ಲಿ , 108 ದಾಸರು , 1764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎಂಥ ಕೌತುಕವೆ ನಿಮ್ಮಿಬ್ಬರದೆಂಥ ಕೌತುಕವೆಎಂಥ ಕೌತುಕ ಚಿಂತಾಮಣಿಯ ನೋಡಿಸಂತೋಷ ವಾಗದೆ ಕಾಂತೆಯರುಕಾದುವ ಎಂಥ ಕೌತುಕವೆ ಪ. ನಾರಿಯರಿಬ್ಬರ ಬಿಟ್ಟು ನೀರೊಳಡಗಿದಮಾರಿ ತೋರದಲೆ ನೆಲವನೆ ಮಾರಿ ತೋರದಲೆ ನೆಲವನೆ ಬಗಿದುಅತಿ ಕ್ರೂರನಾದರೂ ಬಿಡರೆಲೆ ಸಖಿಯೆ1 ತಿರಕ ತಾಯಿಯಸುದ್ದಿ ಅರಿತವನಲ್ಲದೆದೊರೆತನ ಬಿಟ್ಟು ದನವನೆ ಕಾಯ್ದುದೊರೆತನ ಬಿಟ್ಟು ದನವ ಕಾಯ್ದರುನಿಮ್ಮ ಕರಕರೆ ಒಂದು ಬಿಡರೆಲೆ ಸಖಿಯೆ2 ಬತ್ತಲಾಗಿ ಎನ್ನ ಹತ್ತಿಲೆ ನಿಲ್ಲೆಂದುಎತ್ತ ಓಡಲೆನುತÀ ಕುದುರೆಯಎತ್ತ ಓಡಲೆನುತ ಕುದುರೆ ಜಳಕಿಸಿಬೆನ್ಹತ್ತಿ ಕೊಂಡವನ ಬಿಡರೆಲೆ ಸಖಿಯೆ3 ಕಾಲ ನಳಿನಾಕ್ಷಿ ಆಗ ನೆರವಾದಿನಳಿನಾಕ್ಷಿ ಆಗ ನೆರವಾದಿ ಉಪಕಾರ ಒಲಿದುಶ್ರೀಕೃಷ್ಣ ಮದುವ್ಯಾದ ಸಖಿಯೆ 4 ಕುಂದುಗುಣಗಳೆಲ್ಲ ಮುಂದಕ್ಕೆ ತಾರದೆ ಹಿಂದಿನ ಉಪಕಾರ ಸ್ಮರಿಸುತ ಹಿಂದಿನ ಉಪಕಾರ ಸ್ಮರಿಸುತ ಅವಳು ಮುಂದೆ ಬೇಕೆಂದು ಮನಸೋತ ಸಖಿಯೆ5 ಭಾವೆ ರುಕ್ಮಿಣಿ ನಿಮ್ಮ ಹೀನಗುಣನೋಡದೆಕಾಮನ ಪಿತನು ಕೈ ಹಿಡಿದ ಕಾಮನ ಪಿತನು ಕೈ ಹಿಡಿದ ಕಾರಣಭೂಮಂಡಲವೆಲ್ಲ ನಮಿಸಿತು ಸಖಿಯೆ 6 ಅಷ್ಟು ಜನರೊಳು ಧಿಟ್ಟತನವ ಮಾಡಿಗಟ್ಯಾಗಿ ನೀನು ರಥವೇರಿಗಟ್ಯಾಗಿ ನೀನು ರಥವೇರಿ ಧೈರ್ಯದಿಕೃಷ್ಣನ ಬೆರೆದು ತೆರಳಿದಿ ಸಖಿಯೆ 7 ಮುದ್ದು ರಾಮೇಶಗೆÀ ಕದ್ದು ಓಲೆಯ ಬರಿಯೆಹದ್ದು ವಾಹನನು ಎರಗಿದಹದ್ದು ವಾಹನನು ಎರಗಿದ ಕಾರಣವಿದ್ವಜ್ಜನರೆಲ್ಲ ನಮಿಸಿತು ಸಖಿಯೆ8
--------------
ಗಲಗಲಿಅವ್ವನವರು
ಎಂಥ ಗರವು ನೋಡಮ್ಮಯ್ಯರುಕ್ಮಿಣಿಗೆಂಥ ಗರವು ನೋಡಮ್ಮಯ್ಯಕಂತುನಯ್ಯನ ಎನಗಂತ್ರವ ಮಾಡಿದ ಮಂತ್ರವ ಮಾಡಿದಳಮ್ಮಯ್ಯ ಪ. ಹಿಡಿದ ವೀಳ್ಯವ ನಾನು ಕೊಡುವೊ ಸಮಯದಿಬಂದು ಕಿಡಿ ಹಾಕಿದಳು ನೋಡಮ್ಮಯ್ಯಭಾವೆ ಕಿಡಿಯ ಹಾಕಿದಳು ನೋಡಮ್ಮಯ್ಯ ಹುಡುಗೆ ವೀಳ್ಯಕೆ ಮುಖಕೊಡಬಹುದುಕೃಷ್ಣನು ಬಿಡನು ಇವಳದೇನಮ್ಮಯ್ಯಇಂಥ ಭಿಡೆಯು ಇವಳದೇನಮ್ಮಯ್ಯ 1 ಮೋದ ಇಟ್ಟವಳಿಗೆಆದರವಿಲ್ಲ ನೋಡಮ್ಮಯ್ಯಏನೂ ಆದರವಿಲ್ಲ ನೋಡಮ್ಮಯ್ಯ ಕಾಡುತ ಕೊಟ್ಟ ವೀಳ್ಯವ ಮಾಧವಗೆಕೊಟ್ಟರೆ ಹೋದೀತು ಬುದ್ದಿ ನೋಡಮ್ಮಯ್ಯರುಕ್ಮಿಣಿಯಲ್ಲೆ ಹೋದೀತು ಬುದ್ಧಿ ನೋಡಮ್ಮಯ್ಯ 2 ಥಾಟು ಥೀಟಿನ ಭಾವೆ ಮಾಟ ಮಾಡಿದಳೇನಮ್ಮಯ್ಯಬೂಟಕತನ ನೋಡಮ್ಮಯ್ಯಬೂಟಕಗುಣದವಳ ಕೂಟಕೆ ಮೆಚ್ಚಿದಹರಿಯ ಆಟವÀ ನೋಡಮ್ಮಯ್ಯಮರುಳಾಟವ ಹರಿಯ ನೋಡಮ್ಮಯ್ಯ3 ಸೃಷ್ಟ್ಯಾದಿಕರ್ತಗೆ ಇಟ್ಟಳು ಮದ್ದಾನೆ ಧಿಟ್ಟತನವ ನೋಡಮ್ಮಯ್ಯರುಕ್ಮಿಣಿಯ ದಿಟ್ಟತನವ ನೋಡಮ್ಮಯ್ಯಎಷ್ಟು ಧೈರ್ಯವೆಂದು ಕೃಷ್ಣತಾ ಬೆರಗಾಗಿ ಬಿಟ್ಟನುವೀಳ್ಯವ ನೋಡಮ್ಮಯ್ಯ4 ವಟಪತ್ರ ಶಾಯಿಗೆ ಕುಟಿಲ ಮಂತ್ರವಮಾಡೊ ಚಟುಲತನ ನೋಡಮ್ಮಯ್ಯ ಭಾವೆಯ ಚಟುಲತನವ ನೋಡಮ್ಮಯ್ಯಸಟಿಯಲ್ಲ ಇವಳೆದೆ ಕಠಿಣತಿಶÀಯವೆಂದು ಮಿಟಿಮಿಟಿ ನೋಡಿದನಮ್ಮಯ್ಯಕೃಷ್ಣ ಮಿಟಿಮಿಟ ನೋಡಿದನಮ್ಮಯ್ಯ 5 ಭಾಳೆ ದಯಾಳು ಎಂದು ಹೇಳುವ ಶೃತಿಗಳುಕೇಳಿ ಆಟವು ನೋಡಮ್ಮಯ್ಯಹರಿಯ ಕೇಳಿ ಆಟವು ನೋಡಮ್ಮಯ್ಯಕಾಳ ಕೂಟವ ಕೈತಾಳವ ಹಿಡಿದಂತೆಆಳುವನಿವಳ ನೋಡಮ್ಮಯ್ಯಕೃಷ್ಣ ಆಳುವನಿವಳ ನೋಡಮ್ಮಯ್ಯ6 ಸರ್ವದಾ ತನ್ನ ಕೂಡ ಇರಬೇಕೆಂದೆನುತಲಿಎರೆದಳು ತೈಲವ ನೋಡಮ್ಮಯ್ಯಹರಿಗೆ ಎರೆದಳು ತೈಲವಮ್ಮಯ್ಯಭರದಿ ಕೋಪಿಸಿ ಕಣ್ಣು ತೆರೆದು ನೋಡುವರೆನ್ನಧರಿಸಲಿನ್ನೆಷ್ಟು ನೋಡಮ್ಮಯ್ಯನಾ ಧರಿಸಲಿನ್ನೆಷ್ಟು ನೋಡಮ್ಮಯ್ಯ 7 ಪುಂಡರೀಕಾಕ್ಷನ ಕೊಂಡಾಡಿ ಸುಖಿಸುವಹೆಂಡಿರು ಕಡಿಮೆಯೇನಮ್ಮಯ್ಯಹರಿಗೆ ಹೆಂಡಿರು ಕಡಿಮೆಯೇನಮ್ಮಯ್ಯಕೆಂಡವ ತುಂಬಿದ ಮಂಡಿ ತೋರಿಸಿದಂತೆಚಂಡಿಯನಾಳುವ ನಮ್ಮಯ್ಯಕೃಷ್ಣ ಚಂಡಿಯನಾಳುವ ನಮ್ಮಯ್ಯ8 ಧಿಟ್ಟಿಯರಿಬ್ಬರು ಕೋಪ ಬಿಟ್ಟರೆ ಇವರಿಗೆಎಷ್ಟು ಒಲುಮೆ ನೋಡಮ್ಮಯ್ಯನಾ ಎಷ್ಟು ಒಲುಮೆ ನೋಡಮ್ಮಯ್ಯಧಿಟ್ಟ ರಾಮೇಶನಲೆ ಇಟ್ಟರೆ ಇವರಿಗೆಎಷ್ಟರೆ ಗರ್ವ ನೋಡಮ್ಮಯ್ಯಬೇಡಿದ್ದು ಎಷ್ಟರೆ ಗರ್ವ ನೋಡಮ್ಮಯ್ಯ 9
--------------
ಗಲಗಲಿಅವ್ವನವರು
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು
ಎಂದಿಗಾದರೂ ನಾನು ಮರೆಯೆ ಗುರುವಿನತಂದು ಪೂಜಿಸು ತ್ರಿನಯನ ಪ್ರಾಣದೊಡೆಯನ ಪ ಅಂಬು ಹೂಡಿದ |ತಾಮಸದ ಗುಣಗಳನು ಕಡೆಗೆ ಮಾಡಿದರಾಮ ರಾಮ ಎಂಬ ಬೀಜ ಮಂತ್ರ ನೀಡಿದ 1 ಕಾಣ ಬಂತು ಜಗವು ಎನಗೆ ರಾಮರೂಪವುತಾನು ತಾನೆ ಉದಯವಾಯ್ತು ಜ್ಞಾನದೀಪವು |ಏನು ಪೇಳಲಿ ಕರಗಿ ಹೋಯ್ತು ಮನದ ತಾಪವುಸ್ವಾನುಭಾವದಲಿ ನಾಸ್ತಿ ಪುಣ್ಯಪಾಪವು 2 ಎರಡು ಪಕ್ಷ ಮೀರಿಹ ಗುಣಾತೀತನಪರಬ್ರಹ್ಮ ಪರಂ ಜ್ಯೋತಿ ಸದೋದಿತನ |ಕರುಣಸಿಂಧು ತಂದ ಜ್ಞಾನಬೋಧ ತಾತನಹರುಷ ಪೂರ್ಣವಾಗಿ ಸುಖವ ಕೊಡುವ ದಾತನ 3
--------------
ಜ್ಞಾನಬೋದಕರು
ಎಂದಿಗೆ ನಿಮ್ಮ ಪದ ಕಾಂಬೆನೊ | ಗುರು ಎಂದಿಗೆ ನಿಮ್ಮ ಪದ ಕಾಂಬೆನೊ ಪ. ಎಂದಿಗೆ ನಿಮ್ಮ ಕಾಂಬೆ ಅಂದಿಗೆ ಮುಕ್ತಳಹೆ ಅ.ಪ. ಸಕಲ ಶಾಸ್ತ್ರಗಳನೆ ಶೋಧಿಸಿ | ಬಹು ಅಕಳಂಕ ತತ್ವವ ಸಾಧಿಸಿ | ಬೇಗ ಮುಕುತಿ ಯೋಗ್ಯರಿಗೆಲ್ಲ ಸುಖವ ತೋರುವ ಗುರು 1 ಮನದಿ ನೆಲಸಿ ಲೀಲೆ ತೋರುತ | ದೃಢ ಮನದಿ ಮನಸಿಜನ ಗೆಲ್ಲುತ | ದೇವ ಮನಸಿಜನಯ್ಯನ ಮನಸಿನೊಳ್ ತೋರುತ 2 ಕಷ್ಟಪಡುವುದು ಕಾಣುತ | ಬಹು ತುಷ್ಟರಾಗಿ ಅಭಯ ನೀಡುತ | ಮನ ಮುಟ್ಟಿ ರಕ್ಷಿಪೆನೆಂದು ಇಷ್ಟು ಸಲಿಪ ಗುರು 3 ನರಹರಿ ಧ್ಯಾನಿಪ ಶ್ರೀ ಗುರು | ಬಹು ಕರುಣಾಳುವೆ ದೇವತರು | ನಿಮ್ಮ ಅರಘಳಿಗೆ ಬಿಟ್ಟು ಇರಲಾರೆ ಧರೆಯೊಳು 4 ಮುಕ್ತಿ ಸೌಭಾಗ್ಯವ ನೀಡುವ | ಬಹು ಶಕ್ತರಹುದು ನಿಮ್ಮ ಭಾವವ | ನಾನು ಎತ್ತ ಯೋಚಿಸೆ ಕಾಣೆ ಸತ್ಯವಚನವಿದು 5 ಆನಂದಪಡಿಸುವ ಶ್ರೀ ಗುರು | ನಿಮ್ಮ ಏನೆಂದು ಸ್ತುತಿಹಲಿ ಪಾಮರರು | ನಿಮ್ಮ ಕಾಣರು ಜಗದಲಿ ಏನೆಂಬೆ ಮಹಿಮೆಯ 6 ಗೋಪಾಲಕೃಷ್ಣವಿಠ್ಠಲನ | ಶುಭ ರೂಪವ ತೋರುವ ಕಾರುಣ್ಯ | ದೇವ ಪರಿ ನಿಮ್ಮ ಸ್ತುತಿಸಿ ನಾ ಪಾರು ಕಾಂಬೆನು 7
--------------
ಅಂಬಾಬಾಯಿ
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಎದ್ದು ನಿಂತ ಖಳರ ಕೃತಾಂತಹೊದ್ದಿದವರ ಪೊರೆವ ಧವಳಗಂಗೆ ಹನುಮಂತಪ. ಕಪಟ ದಶಮುಖನ ಮದಭಂಜನ ಮಾಳ್ಪೆನೆಂದೆದ್ದು ನಿಂತಸಂಜೀವನವ ತಂದು ಕಪಿಗಳ ಕಾಯ್ದಆಂಜನೆಯ ತನಯ ತಾನೆದ್ದು ನಿಂತ 1 ಗುದ್ದ್ದಿ ರಾವಣನ ಧರೆಯೊಳು ಕೆಡಹಿ ಅರಿಕಟಕಮರ್ದನ ಮಹಾಮಹಿಮನೆದ್ದು ನಿಂತಯುದ್ಧದಲಿ ರಘುಪತಿಯ ಹೊತ್ತು ಭಕುತಿಯ ತೋರ್ದಶುದ್ಧಸ್ವಭಾವ ತಾನೆದ್ದು ನಿಂತ2 ರಾಗಗಳ ಮೇಳೈಸಿ ಹಯವದನನೊಲಿಸಿಯೋಗಿಗಳನುದ್ಧರಿಸಲೆಂದೆದ್ದು ನಿಂತಈಗ ಧರೆಯೊಳು ಸುಜನರ ಮನೋಭೀಷ್ಟಗಳವೇಗದಲಿ ಕೊಡುವೆನೆಂದೆದ್ದು ನಿಂತ3
--------------
ವಾದಿರಾಜ
ಎನೊ ಎಂತೊ ತಿಳಿಯದು ತಿಳಿಯದು ಸ್ವಾನಂದದ ಸುಖದಾಟ ಧ್ರುವ ಒಳಗೊ ಹೊರಗೊ ಬೈಗೊ ಬೆಳಗೊ ಕಾಳೊ ಬೆಳದಿಂಗಳವೊ ಮಳಿಯೊ ಮಿಂಚೊ ಹೊಳವೊ ಸಳವೊ ತಿಳಿಯದ ಕಳೆಕಾಂತಿಗಳು 1 ಉದಿಯೊ ಅಸ್ತೊ ಆದ್ಯೊ ಅಂತ್ಯೊ ಮಧ್ಯೋ ತಾ ತಿಳಿಯದು ತುದಿಮೊದಲಿಲ್ಲದೆ ಸದಮಲ ಬ್ರಹ್ಮವು ಉದಿಯವಾಗಿಹ್ಯದು ನೊಡಿ 2 ಜೀವೋ ಭಾವೋ ಶಿವೊ ಶಕ್ತೋ ಆವದು ತಾ ತಿಳಿಯದು ಘವಘವಿಸುವ ಅವಿನಾಶನ ಪ್ರಭೆಯಿದು ಮಹಿಪತಿ ವಸ್ತುಮಯವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಪಾಲಿಸುವುದಾನಂತ ಶಯನ | ಚನ್ನ ಗರುಡವಾಹನಾ | ಮುನಿಗೊಲಿದನಂತ ಗುಣಾರ್ಣವಾ ಪ ದೇವಾ ನಂಬಿದವರ ನೋವ ಕಳೆದು ಬಿಡದೆ | ಕಾವ ಬೇಡಿದ ವರವ ನೀವ ಮೂರು | ಭುವನ ಜೀವ ವಿಮಲರಾ | ಜೀವ ನಯನ ವಸುದೇವ ದೇವಕಿತನು | ಭವನೆ ಭವದೂರ ದುರ್ಜನ ಸಂಹಾರ | ದೇವತಾ ವರ ಸಂಜೀವಾ ಪ್ರಭಾವಾ1 ಸೂರ್ಯಕೋಟಿ ಪ್ರಕಾಶಾ | ಚಾರ್ಯನಾ ನಾಯಕಾಧೀಶಾ | ಧೈರ್ಯವುಳ್ಳ ಸರ್ವೇಶಾ | ಕಾರ್ಯರೊಳು ವಿಶೇಷಾ | ಕಾರ್ಯವಂತನೆ ಈಶಾ | ತುರ್ಯಮಹಿಮಾ ಸುರ ಮರ್ಯಾದಿಯಲಿ ಬಲು | ವೀರ್ಯದಲಿ ಮತಿ | ಧಾರ್ಯನ ಮಾಡೋದು | ನಿರ್ಯಾಣ ಸಮಯಕ್ಕೆ 2 ಬಂದು ಮತ್ಸ್ಯಾದಿ ತೀರ್ಥ | ಬಂದು ಬಲು ಸಮರ್ಥ | ಇಂದು ಕರುಣಿಸು ಕರ್ತಾ | ಬೆಂದು ಪೋಗಲಾರ್ಥ | ಮುಂದುಣಿಸು ಸುಧಾರ್ಥ | ತಂದು ನೀನೆ ಮುಕ್ತ್ತಾರ್ಥ | ಬಂದು ವೈತಿರುವಾ ನಂದು ರೂಪವನೆ | ಸಿಂಧುಶಯನ ಆ ನಂದ ವಿಜಯವಿಠ್ಠಲೆನ್ನ ಪಾಲಿಸೋ3
--------------
ವಿಜಯದಾಸ
ಎನ್ನ ಮೋಹನ ತುಪಾಕಿಯನು ಪಿಡಿದು ಹಸ್ತದಲಿ ಚೆನ್ನಾಗಿ ಶೃಂಗರಿಸುವೆ ಪ ಭಿನ್ನಭಾವನೆಯ ಕಳಿದುಳಿದು ಕೋವಿಗೆ ಮತ್ತೆ ಇನ್ನು ಜೋಡಿಲ್ಲವೆಂದು ಇಂದುಅ.ಪ. ಪ್ರೇಮರಸವೆಂಬ ಜಲದಲಿ ತೊಳೆದು ಶುಚಿಮಾಡಿ ನೇಮವೆಂದೆಂಬ ನಿರ್ಮಲವಾಗಿಹ ಆಮಹಾಕನಕ ರಜತದ ಭೂಷಣವ ತೊಡಿಸಿ ಕಾಮವನು ಸುಟ್ಟು ಮಸಿಮಾಡಿ ತುಂಬುವೆನದಕೆ ಎನ್ನೆ 1 ಹಮ್ಮಮತೆಯೆಂಬ ಗುಂಡನು ಅದರಮೇಲಿರಿಸಿ ಒಮ್ಮನಸು ಎಂಬ ಗಜದಿಂದ ಜಡಿದು ಒಮ್ಮೆ ಗುರುವಾಕ್ಯರಂಜಿಕೆಯ ಕಿವಿಯೊಳಗರದು ಬಿಮ್ಮನೇ ಬಿಗಿದು ಈಕ್ಷಿಸಿ ನೋಡುವೆ ಎನ್ನ 2 ಮೆರೆವ ಸುಜ್ಞಾನ ಜ್ಯೋತಿಯ ಬತ್ತಿಯನು ಕೊಳಿಸಿ ಭರದಿ ಬರುತಿಹ ಅಷ್ಟಮದ ಕರಿಗಳಾ ತರಿದಾರು ವೈರಿವರ್ಗಕೆ ಕೆಡಹಿ ಗುರಿಯಿಂದ ಗುರುವಿಮಲಾನಂದ ರಸಭರಿತನಾಗಿರುವಂಥ 3
--------------
ಭಟಕಳ ಅಪ್ಪಯ್ಯ
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಲೆ ಮನವೆ ಸಲೆ ನಿನ್ನ ಮರೆವದು ಗುಣವೇ ಪ ಹರಿಯೋ ಮರವಿನ ಮುಸುಕಿದೆ ಮರೆಯೋ | ಸಿರಿ ಸೌಖ್ಯ ಮೃಗಜಳ ಪರಿಯೋ | ಚರವೆಂಬ ಹಂಬಲ ಮರಿಯೋ | ಪರಿ ವಾಸನೆಯ ಜರಿಯೋ | ಪ್ರಾರಬ್ಧ ನಿಜ ವೆಂದರಿಯೋ | ತಾಪ ಮೊನೆ ಮುರಿಯೋ | ಅರವಿನ ನಯನವದೆರಿಯೋ | ಪಾದ ಪದ್ಮಕ ಬೆರೆಯೋ 1 ತಿಳಿಯೋ ಇಳಿಯೊಳು ಸತ್ಪಥ ನೆಲಿಯೋ | ಕಳೇವರ ಸ್ಥಿರ ಬೊಬ್ಬುಳಿಯೋ | ನಲವಾರು ಅರಿಗಳ ನಳಿಯೋ | ಬಲಿತಿಹ ಹಮ್ಮಲ ಕಳಿಯೋ | ಬಳಲಿಪಾಗುಣ ಮಲ ತೊಳಿಯೋ | ಬಲು ಶಾಂತಿ ಹೃದಯದಲಿ ತಳೆಯೋ | ಒಲುವಂತೆ ಗುರುನಡಿ ಕಲಿಯೋ | ಸಲಹುವಾಗರದು ದಯ ಮಳಿಯೋ 2 ಜಡಿಯೋದೃಢ ಭಾವನೆಯನು ಹಿಡಿಯೋ | ಕೆಡುವ ಭಾವ ಮೂಲವ ಕಡಿಯೋ | ತಡಿಯದೆ ಮಹಿಪತಿ ದಯ ಪಡಿಯೋ | ಅಡಿಗಳಾಶ್ರಯವನು ಹಿಡಿಯೋ | ಒಡೆಯನಾಜ್ಞೆಯಂದದಿ ನಡೆಯೋ | ಕಡು ಪ್ರೀತಿಲಿ ಸ್ತುತಿ ನುಡಿಯೋ | ಮಡಿದ್ಹುಟ್ಟುವ ಜನ್ಮದ ಮುಡಿಯೋ | ಒಡನ ಹಾದಿದರಿಂದ ಕಡಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು