ಒಟ್ಟು 474 ಕಡೆಗಳಲ್ಲಿ , 87 ದಾಸರು , 418 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಾರತಿಯೆತ್ತಿ ಪಾಡಿರೆ ರಂಗನಾಥನ ನೋಡಿರೇ ಪ. ಅಂಗನಾಮಣಿಯನ್ನು ಸಲಹಿದ ಪಾಂಡುರಂಗನ ಭಜಿಸಿರೆ ಅ.ಪ. ನೆರೆದಸಭೆಯೊಳು ಸೆರಗನೆಳೆಯಲು ತರಳೆಭೀತಿಯ ತಾಳಲು ದುರುಳನೆರಿಗೆಯ ಸೆಳೆಯಲು ಶರಣು ನೀನೇ ವರದನೆನ್ನಲು ವರವನಿತ್ತಗೆ ಭರದೊಳು ಕರಣವಾರ್ಧಿಗೆ ಮುದದೊಳು 1 ಅಕ್ಷಯಾತ್ಮಕ ರಕ್ಷಿಸೈ ಶ್ರೀವತ್ಸ ದೀನಳ ಮಾನಮಂ ಕಮ ಲಾಕ್ಷ ಬೇಡುವೆ ದೈನ್ಯದಿಂ ರಕ್ಷನೀನೆನೆ ಚಪಲಾಕ್ಷಿ ಆಕ್ಷಣಂ ರಕ್ಷಿಸಿದೈ ಕರುಣದಿಂ ಅಕ್ಷಯಪ್ರದಾನದಿಂ 2 ನಿತ್ಯನಿರ್ಮಲ ನಿರ್ವಿಕಲ್ಪ ನಿತ್ಯತೃಪ್ತನ ಭಜಿಸಿರೆ ಭಕ್ತ್ಯಧೀನನ ಬೇಡಿರೆ ಸತ್ಯವಿಕ್ರಮ ಶೇಷಶೈಲ ನಿಕೇತಗೆ ಜಯವೆನ್ನಿರೇ ಚಿತ್ತಶುದ್ಧಿಯ ಪಡೆಯಿರೇ 3
--------------
ನಂಜನಗೂಡು ತಿರುಮಲಾಂಬಾ
ಮತವೆ ಒಳ್ಳೆಯದು ಭಾಗವತವು - ನಮ್ಮಯತಿ ರಾಮಾನುಜಯೆಂಬ ಬೇರೆ ಮನಸಿನ ಮತವೆ ಒಳ್ಳೆಯದು ಪ ಹರಿದಾಸ ಸರ್ವೇಶತೆಗೆ ನಿಮ್ಮ ವೇಷತೊರೆಯಿರಿ ನಿಮ್ಮ ದೋಷವರ ತೀರ್ಥ ಪ್ರಸಾದವೇಪರಗತಿ ಎಂಬ ದಾಸ1 ಕಣಿಯೇ ಶಿಕ್ಷಾ ರ-ಮಣಿಯೇ ಮೋಕ್ಷದರಗಿಣಿಯೇ ನಿಮ್ಮ ಶ್ರೀಮಣಿ ತಿರುಮಂತ್ರವೇ ಗತಿ ಎಂಬ ದಾಸ2 ಹರಿದಾರಿ ತಿರುಕಾವಳೂರಿನಪರಮ ಪದವಿಯೆಂಬ ಪಟ್ಟಣಸೇರಿ ನಮ್ಮ ನೆಲೆಯಾದಿಕೇಶವಸಿರಿ ರಂಗ ಪರರುಪಕಾರಿ 3
--------------
ಕನಕದಾಸ
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮಧ್ವಾಚಾರ್ಯರು ಮಧ್ವಮುನಿರಾಯ ಭಕ್ತೋದ್ಧಾರನೆ ಪ ಶುದ್ಧಮೂರ್ತಿಯಾದ ಕೃಷ್ಣ ದ್ವೈಪಾಯನರ ಶಿಷ್ಯ ಅ.ಪ ತಾಮಸರ ಮುರಿದು ಚೂ ಡಾಮಣಿಯ ಸ್ವಾಮಿಗಿತ್ತೆ 1 ಭೂಮಿ ಆಶೆಯುಳ್ಳ ದುರ್ಯೋಧನಾದ್ಯರ ನಿರ್- ನಾಮವ ಹೊಂದಿಸಿ ಕೃಷ್ಣನ ಪ್ರೇಮಕೆ ನೀ ಪಾತ್ರನಾದೆ 2 ಇಪ್ಪತ್ತೊಂದು ಭಾಷ್ಯಗಳಾ ಖಂಡಿಸೀ ಸರ್ಪಶಯನ ಸರ್ವೋತ್ತಮನೆಂದು ಸಾರಿಸಿ ಅಪ್ಪ ಗುರುರಾಮ ವಿಠಲನ ತಪ್ಪಾದೆ ಪೂಜಿಸುತಿರ್ಪ 3
--------------
ಗುರುರಾಮವಿಠಲ
ಮನಸಿಜ ಪಿತ ವಿಠಲ | ನೀನಿವನ ಸಲಹೋ ಪ ಅನುಮಾನ ವಿನ್ನಿಲ್ಲ | ಅಣುಗ ನಿನ್ನವನೋ ಅ.ಪ. ಸಿಂಧು ಮೂರುತಿಯೇ 1 ಸ್ವಪ್ನ ಸೂಚನೆಯಂತೆ | ಒಪ್ಪಿದಂಕಿತವಿತ್ತುಅರ್ಪಿಸಿಹೆ ನಿನ್ನಡಿಗೆ | ಸರ್ಪ ಶಯನಾ |ಒಪ್ಪಿಡಿಯ ಅವಲಿಗ್ಯೆ | ಅಪ್ಪಾರವಿತ್ತಿರುವೆಇಪ್ಪರಿಯ ಮಹಿಮೆಗಳು | ಇನ್ನಾರಿಗುಂಟೋ 2 ವಿಷ ಅಮೃತವಾದಂತೆ | ದುಷ್ಕರ್ಮ ಫಲರಹಿತಎಸೆಗುತ್ತ ಸಂತಾಪ | ನಶಿಸುವಂತೆಸಗೋಅಸಮ ಮಹಿಮನೆ ಭಕ್ತಿ | ಪಾಶಕ್ಕಾವಶನಾಗಿಮಿಸುಣಿ ಮೇಲ್ಮಣಿಯಂತೆ | ಭಾಸಿಸೋ ಹರಿಯೇ 3 ಮೋದ ಮೋದ ದ್ವಂದ್ವ | ಬುದ್ಧಿ ಸಮವೆನಿಸೋ 4 ಆವದೇಶವು ಇರಲಿ | ಆವಕಾಲವು ಇರಲಿನೀವೊದಗೊ ಸ್ಮøತಿ ಪಥಕೆ | ಕೋವಿದರ ಒಡೆಯಾಕಾವ ಕೊಲ್ಲುವ ಗುರೂ | ಗೋವಿಂದ ವಿಠ್ಠಲನೆಭಾವದಲಿ ಮೈದೋರೇ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಮನೋದಣಿಯಾ ಕುಲಮಣಿಯಾ ಪ ಎಳೆಬಿಸಿಲೊಳು ಥಳ ಥಳಿಸುವಾ ಬೆಳಗಿನಾ| ಬಳದ ಒಬ್ಬುಳಿಯಂತೆ ದಿನಮಣಿಯಾ| ಕಳೆಶತ ಮಡಿಯೊಳು ಹೊಳೆವ ರನ್ನಮುಕುಟಾ| ಝಳ ಝಳಿಸುವ ರಳ ಕಾವಳಿ ದೋರಣಿಯಾ 1 ಚಲಾಚಲ ಭೂತಾವಳಿಗಳ ಸಲಹುವ ಭ್ರೂಲಲಿತ ಮೃಗಮದಾಂಕಿತದ ಫಣಿಯಾ| ವಿಮಲತರ ಕಮಲದೆಸಳ ಸುಗಂಗಳ| ನಾಸಿಕ ಸಂಪಿಗಿ ನೆನಿಯಾ 2 ಎಳೆನಗೆ ಚುಬುಕಾಗ್ರ ಚೆಲುವಾ ಕುಂದರದನಾ| ಇಳೆಯೊಳು ಕಾಣೆ ಕುಂಡಲಕ ಎಣಿಯಾ| ಕದಪು ವದನ ಮೋಹನಾರಾಯ| ಒಲಿವ ಮಹಿಪತಿ ಜನ ಪ್ರಭು ಗುಣಖಣಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ನಿಸು ಅಪರಾಧ ಮನ್ಮಥ ಜನಕನೆ ಪ ಸನ್ನುತ ಗುಣಸಂಪನ್ನ ಮಹಿಮ ತಾ ರುಣ್ಯ ಪಯೋನಿಧಿ ಬಿನ್ನಪ ಲಾಲಿಸಿ ಅ.ಪ ಅಮರ ಶಿರೋಮಣಿ | ಆಶ್ರಿತ ರಕ್ಷಾಮಣಿ ರಮಣಿ ರುಕ್ಮಿಣಿ ಮುಖಕಮಲ ಗಗನಮಣಿ ನಮಿಪೆ ಭಕ್ತರ ಚಿಂತಾಮಣಿ ತವ ಚರಣಕೆ ಮಣಿಯದೆ ಮೂಢ ಶಿಖಾಮಣಿಯಾದೆನು 1 ಕಾಮಜನಕ ಪರಿಪೂರ್ಣ ಕಾಮ | ಭಕ್ತ ಕಾಮಧೇನು ಕೋಟಿಕಾಮ ಲಾವಣ್ಯನೆ ಶ್ರೀ ಮನೋಹರ ಕೌಸ್ತುಭಮಣಿಹಾರ ನಿ ಮಣಿ ಅಧಿಕವೆ 2 ಶರಣ ಶರಣ್ಯನೆ ಶಾಶ್ವತ ಸುಖದನೆ ಪರಮ ಪುರುಷನೆ ಪಾವನಚರಿತ ಕರಿಗಿರೀಶನೆ ಕರುಣಾಭರಣನೆ ಕರಿವರದನೆ ಕರುಣವ ತೋರಿಸಿ 3
--------------
ವರಾವಾಣಿರಾಮರಾಯದಾಸರು
ಮರತ್ಯಾಕೊ ಹರಿಯೆ ಮರಗುವೆನಾ ಕರುಣ ಬಾರದೆ ಪ ಸಿರಿಗೆ ಭ್ರಮಿಸಿ ಸರಸ ಸುಖದಿ ಮರೆತು ಇರುವೆಯಾ ಬರುವ ಮುಡುಪಿನ್ಹಣವನೆಣಿಸಿ ದಣಿದು ಮರತಿಯಾ 1 ತ್ರಾಣ ಕಳದಿ ಹಣವ ಸೆಳದಿ ಮನವ ದಣಿಸಿದಿ ಕಣ್ಣೀರಲಿ ಕೈ ತೊಳೆಸಿದಿ ಗುಣ ಗಣ ಮಣಿಯೇ2 ನಿನಗೆ ಆಟ ಎನಗೆ ಹರಿಯೇ ಪ್ರಾಣ ಸಂಕಟಾ ಅನುಭವಿಸಲಾರೆನಕಟಾ ಪಾಹಿ ವೆಂಕಟಾ 3 ಹರಿಯೆ ನೀನು ಗಿರಿಯೊಳು ನಿಂತಿರುವದ್ಯಾತಕೊ ಸ್ಮರಿಸುವವರ ಪೊರೆವುದಕೊ ಧನ ಸೆಳೆವುದಕೊ 4 ಇಟ್ಟರಿಡು ನೀ ಘಟ್ಟಿ ಭಕುತಿ ಕೊಟ್ಟ ನಿನ್ನೋಳು ಧಿಟ್ಟ ಶ್ರೀ ಹನುಮೇಶವಿಠಲ ಥಟ್ಟನೇ ದಯದಿ 5
--------------
ಹನುಮೇಶವಿಠಲ
ಮರೆತು ಬಿಡುವರೇ ಸ್ವಾಮಿ ಪ ಕರಪಿಡಿದೆನ್ನನು ಕಾಯೊ ಮಾರುತಿಅ.ಪ. ಸೀತೆಗೋಸುಗ ಪೋಗೀ ಶಿರಧಿಯದಾಟಿ ನೀ ಮೋದ ಪಾತಕಿ ರಾವಣನಾ ಪುರದ ದಹಿಸಿ ಬಂದು ಚೂಡಾಮಣಿಯ ತಂದು ಶ್ರೀ ರಾಮರಿ ಗರ್ಪಿಸಿದೇ 1 ಪರಮಾತ್ಮಾ ಶ್ರೀ ಕೃಷ್ಣಗರ್ಪಣೆ ಮಾಡಿದೆ 2 ಮಧ್ವರಾಯರೆಂಬೊ ಪೆಸರಿನಿಂದಾ ಅದ್ವೈತವಾದಿಗಳ ಖಂಡಿಸಿ ಮೆರೆದೇ ಅದ್ಭುತ ಮಹಿಮ ವೇಂಕಟವಿಠಲನ ಪಾದ ಪದ್ಮಂಗಳ ನಿರುತ ಸೇವಿಸುತಿರಾ 3
--------------
ರಾಧಾಬಾಯಿ
ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು
ಮಲಗು ಮಲಗೆಲೊ ಸುಮ್ಮನೆ ಸುಕುಮಾರ ಚೆಲುವ ಜೋಗುಳವ ಪಾಡುವೆ ಗೋಪಾಲ ಪ ಲಲನಾಮಣಿಯರು ಸುಲಭದಿ ನಿನ್ನನು ಕಲಭಾಷಣದಿಂದ ಸೆಳೆಯ ಬಯಸುತಿಹರೋ ಅ.ಪ ಭೋಗಿಶಯನ ಹರಿ ಈ ಜಗದೊಳಗೆ ಈಗ ಬಂದಿರುವ ಜಾಗವನರಿಯದೆ ಯೋಗಿ ಜನರು ಅನುರಾಗದಿಂದ ನಿನ್ನ ಸಾಗಿಸಲಿರುವರೊ ಕೂಗದೆ ಸುಖದಲಿ 1 ದುರುಳ ಶಕಟನನು ಮುರಿದ ಕೋಮಲದ ಚರಣ ಕಮಲಗಳು ಉರಿಯುತಲಿದ್ದರು ಮರೆಯಲದನು ಸುವಿನೋದವೀಯುವ ಸರಸಪದಗಳನು ಪರಿಪರಿಯರುಹುವೆನೊ 2 ಎನ್ನಯ ಕರಗಳು ನೋಯುತಲಿರುವುವು ಚಿನ್ಮಯ ರೂಪನೆ ನಿದ್ರೆಯ ಮಾಡೊ ದಧಿ ಪಯ ಬೆಣ್ಣೆಯ ಕೊಡುವೆ ಪ್ರಸನ್ನ ಸುಹೃದಯದಲಿ 3
--------------
ವಿದ್ಯಾಪ್ರಸನ್ನತೀರ್ಥರು
ಮಾಧವ ಮುರಾರಿ ಶ್ರೀಹರಿ ರತಿಪತಿಪಿತ ಪೊರಿ ಪ ಸನಕನಂದನ ಮನುಮುನಿವಂದಿತ ತನುಮನಧವನು ನಿನಗಿತ್ತು ಮಣಿಯುವೆ 1 ಪರಮಕರುಣಾಕರ ಪರಮಾತ್ಮನೆ ಎನ್ನ ಪರಿತರ ದುರಿತವ ಪರಿಹರಿಸಭವ 2 ಹರಿಶರಣರ ಸಂಗ ಕರುಣಿಸು ಮುದದಿ ವರಶರಣದೊಳೆನ್ನ ಪೊರೆಯೊ ಶ್ರೀರಾಮನೆ3
--------------
ರಾಮದಾಸರು
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾನಿನಿ ಕಾಂತೆ ಪ. ಕಾಂತ ಕೃಷ್ಣರಾಯ ನಮಗೆ ಚಿಂತಾಮಣಿಯಂತೆ ಕೊಡುವ ಚಿಂತಾಮಣಿಯಂತೆ ಅನಂತ ಸುಖವಿತ್ತುಭಕ್ತರ ಸಂತೈಸುವನಂತೆ1 ಅಕ್ಷಯ ಸುಖವಿತ್ತು ಭಕ್ತರ ಸಂತೈಸುವನಂತೆ2 ಮುಂದು ಸಂಚಿತಗಾಮಿಯುಹಿಂದಾದುವಂತೆನಮಗೆ ಹಿಂದಾದುವಂತೆ ತಂದೆ ರಾಮೇಶನ ಪಾದಕ್ಕೆ ಹೊಂದಿವೆÉಯಂತೆ3
--------------
ಗಲಗಲಿಅವ್ವನವರು