ಒಟ್ಟು 775 ಕಡೆಗಳಲ್ಲಿ , 86 ದಾಸರು , 660 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವ ಸುವರ್ಣದಾ ಪರಿಯ ಹೊಳೆವ ಕೆಂಜೆಡೆಯಲೀ ದಿವಿಜ ನದಿಯ ನಿರುತ ಧರಿಸೀ ಮುಂದಲಿಯ ಲೀ ತವ ಶೀತಾಂಶೂನಾ ಕಳೆಯ ತಿಲಕಾ ಮಾಡಿ ಮೆರೆವಾ ಭವ ಭಯ ನಿವಾರಿಸಿ ಹೊರೆವಾ 1 ಮದನ ನಳಿದಾ ಭಾಲನಯನಾ ಸುವಿಧ್ಯದಿ ಮೊರೆಹುಗಲು ವಲುವಾನಂದನಯನಾ ಫಣಿ ಭೂಷಣ ಮಾರಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 2 ಠವ ಠವಿಸುವ ಮುನಿಯ ಮನೋಹರ ಪಂಚ ವದನಾ ರವಿ ಕೋಟಿ ತೇಜದಿರುವಾಘನ ಕಾರುಣ್ಯ ಸದನಾ ಭವಾನೀ ಯಡದ ತೋಡಿಯಲಿರಿಸೀ ಕೊಂಡು ಮೆರೆವಾ ಭವ ಭಯ ನಿವಾರಿಸಿ ಹೊರೆವಾ 3 ಧವಲೀಸುತಿಹ ತನು ರೂಚಯ ಕರ್ಪೂರ ಪರಿಯಾ ತವಕದಿಂದುಟ್ಟಾ ಉಡುಗಿ ಹರನಾ ಚರ್ಮ ಕರಿಯಾ ಸವಿಭೂತಿಯ ಸುಧರಿಸಿ ತಪವೇಷದಿ ಮೆರೆ ವಾ ಭವ ಭಯ ನಿವಾರಿಸಿ ಹೊರೆವಾ 4 ಭುವನತೃಯದಾ ಸುರನರೋರಗ ಪೂಜಿಸುತಿಹಾ ಪಾದ ದ್ವಿತೀಯಾ ಅವಿನಾವಾ ದೇವರ ಜನಗಿರಿ ವಾಸವಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 5 ತ್ರಿವಿಧ ತಾಪವಾಹರಿಸುವದು ಹರಯಂದ ಭರವಿದೀ ಭವಯನ್ನ ಲಾಗಾ ಸುಖಗರೆವ ಸಾನಂದ ವರದೀ ಭವ ಭಯ ನಿವಾರಿಸಿ ಹೊರೆ ವಾ 6 ಸವಾರೀಧರನಾವರಣದಿರುವಾ ಕಪ್ಪುಗೋರಳಾ ತ್ರಿವಿಷ್ಟಾಪರಿಯಾ ಪದವ ಮುನಿವಾ ತ್ರಿಶೂಲ ಸರಳಾ ಕವಿಬೋಧಿಸುವಾ ಡುವರ ಸೂತ್ರದ ಕೈಯ್ಯಾ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 7 ಶಿವಷ್ಟಕವನು ಹೃದಯ ಪತ್ರ ಮ್ಯಾಲ ಬರವಾ ಅವನಿಷ್ಟಾರ್ಥವಾ ಕುಡುತ ದುಷ್ಕøತ ಮೂಲಹರಿವಾ ಅವಿದ್ಯೋಡಿ ಸುವಾ ಗುರು ಮಹಿಪತಿಯಾಗಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ. ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1 ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2 ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3 ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4 ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
--------------
ಗಲಗಲಿಅವ್ವನವರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಮಂದನಾದರು ಸರಿ ಗುರುಗಳ ಕೃಪೆಯಿಂದ ನಾ ಎಂಬುದ ಮರೆತು ಅರಿತಷ್ಟು ಪೇಳುವೆನು ಕಾಮನಯ್ಯ ಕೇಶವನ್ನ ಸ್ಮರಿಸು ಲಲಾಟದಲ್ಲಿ ಒಮ್ಮನಸಿನಿಂದ ಮೂಲವನ್ನು ಉದರ ಮಧ್ಯದಲಿ ಸಾನುವಂದಿತಾದ ಮೇಶನನ್ನು ಹೃದಯದಿ ಉ ಪಮೇರಹಿತನಾದ ಗೋವಿಂದನನ್ನು ಕಂಠ ಮಧ್ಯದಿ ಪತಿ ಶ್ರೀ ವಿಷ್ಣುವಿನನ್ನುದಷೋದರದಿ ಶೂನ್ಯ ಮಧುರಿಪುವಿನ ದಕ್ಷಭುಜದಿ ವಾಮ ಪ್ರತಿಕಂಠದಿ ತ್ರಿವಿಕ್ರಮನನ್ನು ವಾಮನ ಉದರದಿ ವಾಮನ ಮೂರ್ತಿಯನ್ನು ವಾಮ ಭುಜಕಂಠದಿ ಶ್ರೀಧರ ಹೃಷಿಕೇಶರನ್ನು ಸ್ವಾಮಿಯಾಗದಿ ಪದ್ಮನಾಭನನ್ನು ಪುಷ್ಟಭಾಗದಿ ನಿಮ್ಮ ಮಹಿಮ ಗುರು ಕಾಳೀಮರ್ಧಕೃಷ್ಣ ಭಿನ್ನ ದಾಮೋದರನನ್ನು ಶಿರೋ ಭಾಗದಿ ನೆನೆಯೊ 1 ಉದರ ಮಧ್ಯದಲಿ ಐದು ಚಕ್ರಂಗಳು ಹೃದಯಾಕಾಶದಲ್ಲಿ ಮೂರು ಚಕ್ರಂಗಳು ಹೃದಯ ಮೇಲಿನ ಕಂಠದಲ್ಲಿ ಒಂದು ಉದರದಕ್ಷ ಕುಕ್ಷಿಯಲ್ಲಿ ಎರಡು ಮಧುಸೂದÀನ ಸ್ಥಳದಿ ಮೇಲೆ ಎರಡು ಅಧರ ಭಾಗದಿ ವಾಮ ಬಾಹುವಿನಲ್ಲಿ ಒಂದು ಅದಲ್ಲದೆ ವಾಮಕಂಠದಿ ತಾ ಒಂದು ಎದೆಯ ಬಲಪಕ್ಷ ಕಪೋಲದಿ ಮೂರು ಒಂದು ಇದೇ ಇದೇ ತಿಳಿದು ಚಕ್ರಂಗಳ ಧರಿಸುವರು ಸದಮಲಗುರು ಕಾಳೀಮರ್ಧನಕೃಷ್ಣನ ಕೊಂಡರು ದಕ್ಷ ಬಾಹು ಕಂಠದಲ್ಲಿ ಕೆಳಗೆ ಒಂದು ಒಂದರಂತೆ ಕುಕ್ಷಿವಾಮದಲ್ಲಿ ಭಂಧದಿಕೊಂದು ಪರಂಗಳ ಪಕ್ಷಿವಾಹನನಾದ ಶ್ರೀಧರಸ್ಥಾನದ ಮೇಲೆ ಎರಡು ಕಪೋಲ ಒಂದು ಮೂರರಂತೆ ಕ್ರಮದಿ ದಕ್ಷನಾಗಿ ಧರಿಸಿ ಗುರು ಕಾಳೀಮರ್ಧನ ಕೃಷ್ಣನನೆಯೆ 3
--------------
ಕಳಸದ ಸುಂದರಮ್ಮ
ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1 ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2 ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3 ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4 ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5
--------------
ಚಿದಾನಂದ ಅವಧೂತರು
ನಾನೇನು ಬೇಡಿದೆನೋ ರಂಗಯ್ಯ ನೀನೆನ್ನ ನೋಡವಲ್ಲ್ಯಾಕೋ ಪ ಹಾನಿ ಮಾಡೆ ಮಹಹೀನಭವಸಾಗರ ಮಾನದಿಂ ಗೆಲಿಸೆಂದು ನಾನಿಷ್ಟೇ ಬೇಡುವೆ ಅ.ಪ ನಿಗ್ರಹಿಸಿ ಸ್ಥಿರಪದನುಗ್ರಹಿಸಿ ಪೊರೆಯೆಂದೆನೆ ಸುಗ್ರೀವನಂತೆನ್ನ ಆಗ್ರಜನ ಕೊಂದು ಕಪಿ ದುರ್ಗಕ್ಕಧಿಪತಿಯೆನಿಸೆಂದಾಗ್ರಬಟ್ಟೆನೊ ನಿನಗೆ 1 ಕುಲವ ನಿರ್ಮೂಲ ಮಾಡಿ ಇಳೆ ಪಟ್ಟಕ್ಕೆ ಸ್ಥಿರವಾಗಿ ನಿಲಿಸು ಎನಗೆಯೆಂದು ಸುಲಭದಿಂ ಬೇಡಿದೆನೆ ಒಲಿದು ಸಾರಥಿಯಾಗಿ ಕುಲದವರ ಸವರೆಂದು ನಳಿನಾಕ್ಷ ತವಪಾದದೊಳು ಬೇಡಿದೆನೇನೋ 2 ಚಿತ್ತಜಪಿತ ನಿನ್ನ ಸತ್ಯ ಬಿರುದುಗಳು ನಿತ್ಯ ನಿತ್ಯದಿ ಬಿಡದೆ ಶಕ್ತಿಯಿಂ ಪೊಗಳುವೆ ಭಕ್ತಿದಾಯಕ ನಿನ್ನ ಯುಕ್ತ್ಯಾರುಬಲ್ಲರು ಮುಕ್ತಿ ದಯಮಾಡೆಂದು ಪ್ರಾರ್ಥಿಪೆ ಶ್ರೀರಾಮ 3
--------------
ರಾಮದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣನೆಂಬ ನಾಮವೇ ಮೂಲಮಂತ್ರಓರಂತೆ ಜಪಿಸುವೆನು ಶ್ರೀಹರಿ ಹರಿ ಪ. ಆರ ಬಿಡುವೆನು ಮತ್ತಾರ ಕೂಡುವೆನುಆರಾರಿಗೊಡಲನೀವೆಆರಂಘ್ರಿಗೆರಗುವೆ ಆರಾರ ಮನ್ನಿಸುವೆಆರಿಂದ ಉದರ ಪೂರ್ತಿ 1 ಆರಿದ್ದರೇನುಫಲ ಆರು ಬಗೆಯನರಿತುಆರುಸಾವಿರವನೋದಿನೂರ ನೀರೊಳಗಿಟ್ಟು ಆರೆಂಟ ನೆನೆದು ಹದಿ-ನಾರನಾದರು ಕೊಟ್ಟನೆ 2 ಇಬ್ಬರೊಳಗೆ ಎನಗೊಬ್ಬನೆ ಸಾಕು ಕಣ್ಗೆಹಬ್ಬವಾವನ ಕಂಡರೆಒಬ್ಬನಿಗೋಸುಗ ಮತ್ತೊಬ್ಬನ ಭಜಿಸುವೆಅಬ್ಜಾಕ್ಷ ಹಯವದನ3
--------------
ವಾದಿರಾಜ
ನಾರಾಯಣಾ ಕರುಣಾ ಘನಚರಣಕ್ಕೆರಗುವೇ ಸ್ಮರಣೆಯೊಳಗೆ ಮನ ಒಲಿಯಿಸಿ ಪ್ರೇರಣೆ ಮಾಡುವಾ ಪ ನನ್ನ ನಿಜವನರಿಯದೆ ನಾ ಅನ್ಯ ಯೋನಿಯೊಳಗೆ ತಿರುಗಿ ಬನ್ನ ಬಡುವುದನ್ನು ತಿಳಿದು ನಿನ್ನ ಬಿಡೆನೆನ್ನೆ 1 ಭಾವಭಕ್ತಿಯಿಂದ ಪಿಡಿದು ನೋಯದಂತರದೊಳಗಿಳಿದು ಸಾವಧಾನದಿ ಸೇವೆಮಾಳ್ಪೆ ಭಾವ ಬಲಿದು ನಾ 2 ಎಲ್ಲಿಯೂ ಪರಿಪೂರ್ಣ ನೀನೆ ಸೊಲ್ಪಗೊಡಲಶಕ್ಯ ನಾನೈ ಬಲ್ಲಿದವರಿಂದೆಲ್ಲಾ ಅರಿಶ ಘುಲ್ಲನಾಭನೇ 3 ನಾದದ ಮೊದಲಿನ ಮೂಲದಿ ಭೇದಭಾವವೆಲ್ಲ ಅಳಿದು ಆದಿಶಾಂತಿ ಸುಖವನೀವ ನಾದಿ ಶ್ರೀಗುರು 4
--------------
ಶಾಂತಿಬಾಯಿ
ನಾರ್ಯೆಂಬ ಮಾರಿಯನು ಆರು ನಿರ್ಮಿಸಿದರೋ ಸೂರೆಗೊಂಡು ಮೂಲೋಕ ಘೋರಿಸುವುದುದಕಟ ಪ ಹರಿಯ ಧರೆಗಿಳಿಸಿತು ಹರನಕಾಡಿಗೆಳೆಸಿತು ಶಿರವೊಂದನೆಗರಿತುವರಬ್ರಹ್ಮನಕಟ1 ರಂಧ್ರಗೊಳಿಸಿತು ದೇವೇಂದ್ರನಂಗಾಂಗವನು ಚಂದ್ರನ ಮುಖಪ್ರಭೆಗೆ ಕುಂದಿಟ್ಟಿತಕಟ 2 ಅಸಮ ವಾಲಿಯ ಬಲಕೆ ಮಸಿ ಮಣ್ಣು ಹಾಕಿಸಿತು ದಶಶಿರನ ವರವಖಿಲ ಪುಸಿಯೆನಿಸಿತಕಟ 3 ಹಾರಿಸಿತು ಕೀಚಕನ ಕೌರವನ ಮನೆಮುರಿಯಿತು ಧೀರಪಾಂಡವರನು ತಿರಿದುಣಿಸಿತಕಟ 4 ನರಕಕ್ಕೆ ತವರಿದನು ಸ್ಮರಿಸಲಳವಲ್ಲೆನೆಗೆ ಹರಿದರಭಯ ತ್ವರಿತ ವರದ ಶ್ರೀರಾಮ 5
--------------
ರಾಮದಾಸರು
ನಿತ್ಯ ಶುಭಮಂಗಳಂ | ಪ್ರಿಯಕರಾನಂದ ಶ್ರೀ ತುಲಸಿ ಮಾತೆ ಪ ದಿನಕರನು ಉದಯಿಸಲಾಕ್ಷಣದಿ ಭಕ್ತರು ನಿನ್ನ | ನೆನೆದು ಭಕುತಿಯಲಿ ಜೀವನ ನೀಡುತಾ | ಪಣೆಗೆ ಮೃತ್ತಿಗೆ ತೀಡಿ ಪ್ರಣೀತರಾಗುತ ಪ್ರದ ಕ್ಷಣೆ ಮಾಡಿದವರ ಫಲವೆಣೆಸಲಳವೇ 1 ಹರಿಯನಾಗ್ರದಿ ತ್ರಿಪುರಹರನು ಮಧ್ಯದಿ ಬ್ರಹ್ಮ | ನಿರುವ ಮೂಲದಿನಾಕಚರರು ಮುದದೀ | ನಿರುತ ಶಾಖಂಗಳಲಿ ಚರಿಸುತ್ತಲಿಹರೆಂದು | ಧರಣಿ ಸುರರರ್ಚಿಪರು ಹರುಷದಿಂದಾ2 ಕಾರ್ತಿಕಶುದ್ಧ ಸುಮುಹೂರ್ತ ದ್ವಾದಶಿಯಲ್ಲಿ | ಅರ್ತಿಯಿಂದಲಿ ಸುಜನರರ್ತುತ್ವರದೀ | ನರ್ತನದಿ ತವನಾಮ ಕೀರ್ತನೆಯ ಪಾಡುತಲಿ | ಬೆರ್ತುನಿಂದವರ್ಗೆ ನೀ ಸಾರ್ಥಿ ಎನಿಪೆ 3 ಕಾಂತೆ ನಿನ್ನ ನುದಿನವನಂತ ಜನ ವಂದಿಸುತ | ಅಂತರಂಗದಿ ನಲಿದು ನಿಂತರವರಾ | ಚಿಂತೆಪರಿಪರಿಪೆ ಅಳಕಾಂತೆ ದುರಿತಘನಿಚಯ | ಪಾವಕ ಸುಸಂತ ವಿನುತೆ 4 ಅದಿಗಿಂದಿಗೆ ನೀನು ವೃಂದಾವನದಿ ಮಹಿಮೆ | ನಿಂದು ತೋರಿದೆ ಯೋಗಿವೃಂದ ವಂದ್ಯೆ | ತಂದೆ ಶ್ರೀ ಗಿರಿಧರನ ಕಂದನನುದಿನ ಸಲಹು | ಮಂದರೋದ್ಧಾರ ಪ್ರೀಯ ಕುಂದವದನೆ 5 ಅಂಕಿತ-ಗಿರಿಧರಕಂದ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿತ್ಯ ಸುಖವಿದೂ | ಚಿತ್ತದಲ್ಲಿ ಮಾಯ ಮೋಹ ಕತ್ತಲೆಯ ಕಾಣದಿಹುದು ಪ ತನುವು ತಾನಲ್ಲವೆಂದು | ಮನದಿ ಉನ್ಮನಸಿನಿಂದ | ಬಿನುಗು ವಿಷಯಗಳನೆ ಕೊಂದು | ಚಿನುಮಯಾತ್ಮನಾದೆ ಎನಲು 1 ಆಶೆಮೂಲವನ್ನು ಅಳಿದು | ಕೋಶ ಪಂಚಕಗಳ ಕಳೆದು | ಪಾಶವೆಂದು ತುಳಿದು ಲಕ್ಷ ಈಶನಲ್ಲಿ ಬೆರೆದ ಮೇಲೆ 2 ತಂದೆ ಭವತಾರಕನ | ಹೊಂದಿ ಪೂರ್ಣ ಬ್ರಹ್ಮನಾಗಿ | ಮುಂದೆ ಮೂರು ದೇಹ ಬಿಟ್ಟು | ಒಂದು ಗೂಡಿ ಬ್ರಹ್ಮನಲ್ಲಿ 3
--------------
ಭಾವತರಕರು
ನಿತ್ಯ ಶುಭ ಮಂಗಳಂ ಮಹಾ ಮಂಗಳಂ ಪ ನತ ಧೇನುಗೆಮೌನಿಗೆ ಶಬ್ದ ಮೌನಿಗೆದಾನಿಗೆ ಮುಕ್ತಿ ದಾನಿಗೆ 1 ಭವ ಕಾಲಗೆಶೀಲಗೆ ಭಕ್ತ ಶೀಲಗೆಮೂಲಗೆ ಸರ್ವ ಮೂಲಗೆ 2 ಬಂಧಗೆ ಹರ ಬಂಧಗೆನಂದಗೆ ಆನಂದಗೆಸಿಂಧುಗೆ ಜ್ಞಾನ ಸಿಂಧುಗೆಚೆಂದಗೆ ಚಿದಾನಂದಗೆ 3
--------------
ಚಿದಾನಂದ ಅವಧೂತರು
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು