ಒಟ್ಟು 460 ಕಡೆಗಳಲ್ಲಿ , 74 ದಾಸರು , 413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭಜರೆ ಮಾನಸ ದ್ವಿಜವರಗಮನಂ ಪ ದ್ವಿಜಕುಲ ತೋಷಣಂ ಗಜವರ ಪೋಷಣಂ ಅ.ಪ ವಿಜಯ ಸಾರಥಿಂ ಭಜಕೃಷ್ಣಮೂರುತಿಂ ಭಜಕಾಮರತರುಂ ಕುಜನಕುಠಾರಂ 1 ಹರಿಪದ ಸ್ಮರಣಂ ದುರಿತನಿವಾರಣಂ ಭವ ಮುಖಸುರನುತ ಚರಣಂ 2 ಜಲಧಿಜಾರಮಣಂ ಬಲಿಕೃತ ಕರುಣಂ ವಿಲಸತ್ಕಾರ್ಪರ ನಿಲಯ ನರಹರಿಂ 3
--------------
ಕಾರ್ಪರ ನರಹರಿದಾಸರು
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗೀರಥಿ ಭಾಗೀರಥೀ ದೇವಿ ಭಯ ನಿವಾರಣ ಗಂಗೆ ಸಾಗರ ನಿಜರಾಣಿ ಸಕಲ ಕಲ್ಯಾಣಿ ಪ ಒಮ್ಮೆ ಶ್ರೀವಿಷ್ಣು ಪಾದದಲಿ ಉದ್ಭವಿಸಿದೇ ಕರ ಪಾತ್ರೆಯಲ್ಲಿ ಬಂದೆ ಪಾದ ತೀರ್ಥವಾದಿ ಬ್ರಹ್ಮಾಂಡವೆಲ್ಲ ಪಾದನ್ನವೆಂದಿನಿಸಿದೆ 1 ದೇವಿ ನೀ ವಿಷ್ಣು ಪಾದದಲಿ ಉದ್ಭವಿಸಿದೆ ದೇವತೆಗಳೆಲ್ಲ ನಿಮ್ಮಾಧೀನವೊ ಆವ ಮಹಾದೇವನು ತಲೆಬಾಗಿರಲಾಗಿ ಮಹ ದೇವ ಶಿರಸಿನಲಿ ಉದ್ಭವಿಸಿದೆ ಜಗವರಿಯೆ 2 ದೃಷ್ಟಿಸಿ ನೋಡಲು ನೂರು ಜನ್ಮದ ಕೃತ್ಪಾಪ ಮುಟ್ಟಿದರೆ ಮುನ್ನೂರು ಜನ್ಮದ ಪಾಪವು ಮುಟ್ಟಿಮಾಡಲಿ ಬಂದು ಸ್ನಾನ ಮಾತ್ರದಿಂದ ಸುಟ್ಟುಹೋಗುವುದು ಸಹಸ್ರ ಜನ್ಮದ ಪಾಪ 3 ಜಹ್ನು ಋಷಿಯಿಂದಲಿ ಬಿದ್ದ ಕಾರಣದಿಂದ ಜಾಹ್ನವಿಯಂತೆಂದು ನೀ ಕರೆಸಿಕೊಂಡೇ ವನ್ನು ನೀ ಪಿಂತೆ ಪಾವನ ಮಾಡಬಂದೆ 4 ವಿಸ್ತಾರದಲಿ ಪೊಳಿವ ಮುತ್ತಿನಾ ಸರಗಳು ಮತ್ತೆ ರಂಗಮ್ಮ ಪವಡಿಸಿದ ನೋಡೀ ಮತ್ತೆ ಮಹಾಲಕ್ಷ್ಮಿಯೆ ಉರಸ್ಥಳದಲಿರಲಾಗಿ ಇತ್ತ ಶ್ರೀದವಿಠಲ ನನರಸಿ ಬಂದೆ 5
--------------
ಶ್ರೀದವಿಠಲರು
ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ. ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1 ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2 ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3 ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4 ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5
--------------
ಗಲಗಲಿಅವ್ವನವರು
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಮಂಗಲಂ ಜಯ ಶುಭಮಂಗಲಂ ಪ. ಶ್ರೀಗೌರೀಸುಕುಮಾರನಿಗೆ ಯೋಗಿವರೇಣ್ಯ ಶುಭಾಕರಗೆ ರಾಗ ಲೋಭ ರಹಿತಗೆ ರಜತೇಶಗೆ ಭಾಗೀರಥಿಸುತ ಭವಹರಗೆ 1 ಪಾಶಾಂಕುಶ ವಿವಿಧಾಯುಧಗೆ ಪಾಶದರಾರ್ಚಿತ ಪಾವನಗೆ ವಾಸರಮಣಿಶತಭಾಸಗೆ ಈಶಗೆ ಭಾಸುರ ತನಕ ವಿಭೂಷಣನಿಗೆ2 ಶೀಲ ಸುಗುಣಗಣ ವಾರಿಧಿಗೆ ನೀಲೇಂದೀವರಲೋಚನೆಗೆ ಲೋಲ ಲಕ್ಷ್ಮೀನಾರಾಯಣ ರೂಪಗೆ ಶಾಲಿ ಪುರೇಶ ಷಡಾನನಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳ ಮಣಿಮಲ ಲಂಘಿತಾಂಗಳ ಕಪಿಸಾಂಗ ವಂದಿತ ಭೂಷಿತಾಂಗ ಮಾರುತಿಗೆ ಪ ವ್ಯಾಳ್ಯದಂದದಿ ಪುಚ್ಛಮ್ಯಾಲೆ ತೂಗುತಲೆಂಕಿಲೆಂಕಿರಾಮಗ ಸೀತಾಲಂಕನಿತ್ತವಗೆ 1 ಹೂಂಕರಿಸುತ ಬಾಲ ಬೆಂಕಿಯಿಂದಲ್ಲೆ ಸುಟ್ಟಏಳುಚಿರಿಪ ಸಣ್ಣ ಬಾಲ ಹನುಮನಿಗೆ 2 ದಾಶರಥಿಯ ಮುಂದೆ ವಾಸಮಾಡುತ ಕೆಂಪುರುಷ ಬಾಡದಿ ಸಮ ಘೋಷನಿತ್ತವಗೆಇಂದಿರೇಶನರ್ಚಿಪಗೆ ದ್ರೌಪದೀಶ ವಂದಿತಗೆ 3
--------------
ಇಂದಿರೇಶರು
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಂಗಳಂ ಶ್ರೀ ಶ್ರೀನಿವಾಸಗೆ ಶೃಂಗಾರರೂಪಗೆ ಮಂಗಳಂ ಶ್ರೀ ಶ್ರೀನಿವಾಸಗೆ ಪ. ಪದ್ಮನಾಭ ಪದ್ಮ ಮುಖಗೆ ಪದ್ಮಪಾದಗೆ ಪದ್ಮವತಿಯ ವರಿಸಿದವಗೆ ಪದ್ಮೋದ್ಭವನ ಸೇವೆ ಕೊಂಬಗೆ 1 ಆರ್ತ ಜನರ ಪೊರೆಯುವನಿಗೆ ಪಾರ್ಥಸಾರಥಿಗೆ ಕೀರ್ತಿಸುವರ ಕಾಯ್ದೆನೆಂದು ಅರ್ಥಿಯಿಂದ ನಿಂತಿರುವಗೆ 2 ಯೋಗಿಗಳಿಗೆ ನಿಲುಕದವಗೆ ಭೋಗಿಶಯನಗೆ ಭಾಗವತರು ಸ್ತುತಿಸಲು ಅನು- ರಾಗದಿಂದ ಲಾಲಿಪನಿಗೆ 3 ಭಕ್ತ ಜನರ ಕಾಯುವನಿಗೆ ಮುಕ್ತಿದಾಯಕನಿಗೆ ನಿತ್ಯಮುಕ್ತ ನಿಗಮವೇದ್ಯ ಸತ್ಯಸಂಕಲ್ಪ ಹರಿಗೆ 4 ಭೂಪರೈವರ ಪೊರೆದವಗೆ ತಾಪಹರನಿಗೆ ಗೋಪಾಲಕೃಷ್ಣವಿಠ್ಠಲಗೆ ಶ್ರೀಪತಿ ಶ್ರೀ ಶ್ರೀನಿವಾಸಗೆ 5
--------------
ಅಂಬಾಬಾಯಿ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು