ಒಟ್ಟು 796 ಕಡೆಗಳಲ್ಲಿ , 81 ದಾಸರು , 727 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೆರೆ ಬಾಗಿಲವ ಸುಗುಣೆ ಸುಂದರಿ ಮುಗಿವೆ ಕರವನುನಗಧರನ ಚರಣಕಮಲಯುಗಳ ನೋಳ್ಪೆನು ಪ ಪೇಳಿದವರು ಯಾರು ನಿನಗೆ ಕೀಲಿ ಹಾಕಲುಶೀಲಲಾಮನೊಬ್ಬನಾಜ್ಞೆ ಕೇಳಿ ನಡೆವಳು 1 ಹರಿಯು ಎಷ್ಟು ಸಾರೆ ನಿನಗೆ ತೆರೆಯ ಕೀಲಿಯೆಕರೆದು ಪೇಳಿದಾನೆ ಮಾತು ಸಿರಿಯೇ ಮರೆತೆಯಾ 2 ಬಾರೋ ಎಂದು ನೀನೆ ಎಷ್ಟು ಸಾರಿ ಕರೆದೆಯಾನಾರಿಮಣಿಯೆ ಬಂದರ್ಹೀಗೆ ತೋರ್ಪೆ ರೀತಿಯಾ 3 ಇಂದು ಹರಿಯ ದ್ವಾರದಲ್ಲಿ ಬಂದು ನಿಂತಿಹೆಮಂದಗಮನೆ ಕೀಲಿನೀನು ಬಂಧ ಮಾಳ್ಪರೆ 4 ಇಷ್ಟು ನೋಡಿ ಇಂದಿರೇಶನ ಭೆಟ್ಟಿ ಭರದಲಿಕೃಷ್ಣೆ ಬಂದು ತೆರೆಯೆ ಕೀಲಿ ದೃಷ್ಟಿಯಾಗಲು 5
--------------
ಇಂದಿರೇಶರು
ತೊರವಿ ನರಸಿಂಹ ಕರವ ಪಿಡಿಯೊ ತೊರವಿ ನರಹರೆಆಹಾ ತೊರವಿ ನರಹರೆ ಪ ಸ್ತಂಭಜಾತ ನಂಬಿ ನಿನ್ನ ಅಂಬುಜಾತನೆಬಿಂಬದಂತೆ ಪಾಲಿಸೆನ್ನ ಸಾಂಬವಿನುತನೆ 1 ಛಟಿಛಟೆಂದು ಒಡೆದು ಕಂಬ ಪುಟಿದು ಸಭೆಯೊಳುಕಟಿಯ ತಟದೊಳಿಟ್ಟು ರಿಪುವ ಒಡಲ ಬಗೆದೆಯೊ 2 ಇಂದಿರೇಶ ಎನ್ನ ಹೃದಯ ಮಂದಿರದೊಳು ಬಂದು ತೋರೆ ಮುಖವ ನಿನ್ನ ವಂದಿಸುವೆನು 3
--------------
ಇಂದಿರೇಶರು
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ತೊಳೆಯಲಿ ಬೇಕಿದನು ಮನುಜಪ ಭವಕೂಪದಿ ಬಿದ್ದು ತೊಳಲಿ ಬಳಲಿ ಬಳಲಿ ಮಲಿನವಾಗಿಹ ಮನ ಹರಿಧ್ಯಾನ ಜಲದಲಿ ಅ.ಪ ಕಾಮಕ್ರೋಧದಿಂದ ಜನಿಸಿದ ಲೋಭಮೋಹ ಲೋಭದಿಂದ ಮದಮತ್ಸರ ಷಡ್ವಿಧ ತಾಪಗಳಿಂದ ಹದಗೆಟ್ಟಿರೆ ಮನ ಮುದದಿ ಹರಿಧ್ಯಾನದಿ 1 ದುರ್ಜನ ಸಂಗದೊಳು ಸೇರುತ ಮನ ವರ್ಜಿಸಿ ಹರಿ ಚರಿತ ಅರ್ಜುನ ಸಖ ಸರ್ವೇಶನ ನಾಮವು ಲಜ್ಜೆಯಿಲ್ಲದೆ ಸ್ಮರಿಸುತ ನಲಿಯಲು ಮನ 2 ಜನನ ಮರಣ ಕ್ಲೇಶದಿ ದು:ಖದಿ ಮನ ಮರಳಿ ಮರಳಿ ಪಾಪದಿ ಎಣಿಕೆ ಇಲ್ಲದ ದೋಷದೊಳಗೆ ಮುಸುಕಿದ ಮನ ನಿತ್ಯ 3 ಇಂದಿರೇಶನ ಧ್ಯಾನವ ಮಾಡಲು ಮನ ವೃಂದವ ಕೂಡಿ ಮಂದೋರದ್ಧರ ಗೋ_ ವಿಂದನೆನ್ನಲು ಮನ 4 ನಿಚ್ಚ ಭಕುತಿಯಿಂದ ಶ್ರೀ ಹರಿಪಾದ ಅರ್ಜಿಸಿಮುದದಿಂದ ರುಕ್ಮಿಣಿಯರಸನ ಸತ್ಯಸಂಕಲ್ಪನ ಮೆಚ್ಚಿಸಿ ಮುಕುತಿಯ ನೈದಲು ಈಮನ 5 ಮಧ್ವಮತದಿ ಜನಿಸಿ ನಿರಂತರ ಮಧ್ವರಾಯರ ಭಜಿಸಿ ಸದ್ವೈಷ್ಣವರ ಸಂಗದೊಳಾಡುತ ಲಜ್ಜೆತೊರೆದು ಕಾಲಗೆಜ್ಜೆ ಕಟ್ಟಲುಮನ6 ಕಂಬು ಚಕ್ರಧಾರಿ ಶ್ರೀ ಶೌರಿ ನಂಬುವರಾಧಾರಿ ಶಂಬರಾರಿಪಿತ ನಂಬಿದೆ ನಿನ ಪಾದ ಶಂಭುವಂದಿತ ಪಾಲಿಸಿಂದು ಸ್ಮರಿಸಲು ಮನ 7 ತೊಳೆದು ತೊಳೆದು ವಿಷಯ ವಾಸನೆಯನ್ನು ಹಲವು ವಿಧದಿ ತೊಳೆದು ಕಲುಷದೂರನ ನಾಮ ಸ್ಮರಣೆಯ ಮಾಡಲು ಮರುತ ಮತದ ಸಂಗ ದೊರೆವುದು ತವಕದಿ8 ಕಳವಳಿಸದೆ ಮನವು ನಿಶ್ಚಲದಲಿ ಥಳ ಥಳ ಥಳ ಹೊಳೆಯೆ ಕಮಲನಾಭ ವಿಠ್ಠಲವಲಿದು ಪಾಲಿಸುವನುಹಲವು ಬಗೆಯಲಿ ಹಂಬಲಿಸದೆ ಮನ 9
--------------
ನಿಡಗುರುಕಿ ಜೀವೂಬಾಯಿ
ತೋರಿದ ನಿಜರೂಪ ಶ್ರೀಕೃಷ್ಣ ಆಹಾಗಾರ ಮಧ್ಯದಿ ವೃಜ ಚೋರ ಬಾಲಕನು ಪ ಪೆಟ್ಟಿಗೆಯೊಳು ಕರವಿಟ್ಟು ಬೆಣ್ಣೆಯ ತೆಗೆದಷ್ಟು ಇಷ್ಟನು ಮೆದ್ದು ಬೊಟ್ಟು ಚೀಪುವನು 1 ಜರದ ಕುಂಚಿಗಿ ಗೊಂಡ್ಯಾ ಶಿರದಿ ತೂಗುತಲೆನ್ನತಿರುಗಿ ತಿರುಗಿ ನೋಡಿ ಮುಚ್ಚದೆ ಪೋದನು 2 ಇಂದು ತಿನ್ನುತಲಿಹ ಶ್ರೀಕೃಷ್ಣಒಂದು ಎರಡು ವಯ ಇಂದಿರೇಶನ ಕಂಡು ನಂದ ಭೋಗಿಪೆನು 3
--------------
ಇಂದಿರೇಶರು
ತೋರೆನಗೆ ಶ್ರೀ ಕೃಷ್ಣ ತೋಯಜಾಂಬಕ ನಿನ್ನ ಶ್ರೀ ರಮೇಶನೆ ನಾನಾ ಗುಣನಾಮ ಮಾಲೆ ಪ. ವಾರಿಜಾಂಬಕನೆ ಶ್ರೀ ಗುರುಗಳ ರಚಿಸುತಲಿ ಹಾರಹಾಕಿಹರೊ ನಿನಗೆ ಹರಿಯೆ ಅ.ಪ. ಮೋಹನವಿಠ್ಠಲನೆಂಬಾ ಒದ್ದು ತಾಪತ್ರಯವನು ತಿದ್ದಿ ತಿಳಿಸುತಲಿ ಜ್ಞಾನ ಕರ್ಮ ತಿದ್ದಿ ತಿಳಿಸಿದ ಗುರುಗಳು ಇವರು 1 ಇಂದಿರಾಪತಿ ರಂಗನಾಥ ರಘುರಾಮ ಇಂದಿರೇಶ ದಯಾಪೂರ್ಣ ಸೀತಾಪತೇ ವೇದೇಶ ಯಾದವೇಂದ್ರ ಸ್ವಾಮಿ 2 ಇಂದಿರಾರಮಣ ಜಯ ಗೋಪಾಲನೆ ವರದೇಶ ಪ್ರಾಣನಾಥಾ ಪದ್ಮನಾಭ ಶ್ರೀನಾಥ ಜಗದೀಶನೆ ವರದ ಮೋಹನದೇವಾ 3 ಶ್ರೀಕಾಂತ ಪುರುಷೋತ್ತಮ ಪರಮಾನಂದ ಶ್ರೀ ಸುರೇಂದ್ರ ಕರುಣಾಕರ ವೆಂಕಟ ದಯಾಮಯನೆ ಭವತಾರಕ ಹರಿಯೆ 4 ವಸುದೇವ ಪಾರ್ಥಸಾರಥಿಯೆ ಪ್ರಾಣಪ್ರಿಯ ಪರಿಪೂರ್ಣ ಮಧ್ವವಲ್ಲಭಮುಕ್ತಿ ದಾಯಕ ಸತ್ಯೇಶನೆ ಪರಮಪಾವನ ರಮೇಶ ಕರುಣಾನಿಧೆ ಪುಂಡರೀಕಾಕ್ಷ ಸ್ವಾಮಿ 5 ಕಲ್ಯಾಣಗುಣಪೂರ್ಣ ಚಂದ್ರಹಾಸವರದ ಮಾಯಾಪತಿ ಉಪೇಂದ್ರ ಚಕ್ರಪಾಣಿ ಮುಕ್ತೇಶ ಬದರಿನಾಥಾ ಜಯಪ್ರದ ನಿರ್ಜರೇಶ ಜಾನಕೀಪತಿ ವಿಶ್ವನಾಥಾ ಸ್ವಾಮಿ 6 ಭುವನೇಶ ಗಜರಾಜವರದ ಜನಾರ್ಧನ ಮಧ್ವನಾಥ ಆನಂದ ಅರವಿಂದಾಕ್ಷ ಪುಂಡರೀಕವರದ ಶ್ರೀ ಕೃಷ್ಣಸ್ವಾಮಿ 7 ಮಾಧವ ಕಮಲಾನಾಥ ಕಮಲನಾಭ ಸದಮಲಾನಂದ ವೈಕುಂಠವಾಸ ಪದ್ಮೇಶ ಗುರು ಮಧ್ವೇಶ ಇಂದಿರಾಪತಿ ರಮೇಶ ಶ್ರೀಶÀ 8 ನಿಗಮ ಸಿರಿರಮಣ ಕಮಲಾಕಾಂತನೆ ಸರವ ಪೋಣಿಸಿ ಹಾಕುತ ಪರಮ ಪ್ರಿಯ ಶ್ರೀ ಗುರುಗಳು ಉಳಿದ ನಾಮಾ ಪೊರೆಯೋ 9
--------------
ಅಂಬಾಬಾಯಿ
ತೋರೋ ಮುಖವ ಕರುಣಿಸು ಸುಖವ ದುರುಳ ಜರಾಸುತನುರುತರ ಘನವನು ಪ. ತರಿದು ರುಕ್ಮಿಣಿಯ ವರಿಸಿದ ಧೀರ 1 ಸಾಂದೀಪಿನಿ ಗುರುವೆಂದ ನುಡಿಯ ಕೇ- ಳಂದು ಕಂಧರನ ತಂದ ಪರೇಶ್ವರ 2 ವರದ ಭುಜಗವರಗಿರಿಯ ಶಿಖರದಲಿ ಮೆರೆವನೆ ಮನದಲ್ಲಿರು ಸುಖಸಾರ 3
--------------
ತುಪಾಕಿ ವೆಂಕಟರಮಣಾಚಾರ್ಯ
ತ್ತಾತ್ವಿಕವಿವೇಚನೆ ಏಕ ಪಂಚಾಶದ್ವರ್ಣವಾಚ್ಯ ಶ್ರೀಕಳತÀ್ರನೆ ಸರ್ವಶಬ್ದಗೋಚರನಯ್ಯ ಪ ಕಾಯ ಕಾರ್ಯಕಾರಣವನನುಸರಿಸಿ ತ್ರಿಕರಣದೊಳಗಿದ್ದು ಕ್ರಿಯವ ನÀಡೆಸುವ ದೇವಅ.ಪ ಅಜಾನಂದೇಂದ್ರೇಶ ಶಿರ ಮುಖ ನೇತ್ರದೊಳು ನಿಜರೂಪ ಉಗ್ರ ಊರ್ಜ ಕರ್ಣದೊಳು ನಿಜ ಋತುಂಬರ ಋಘನಾಸದಲ್ಲಿ ಲೃಶಾ ಲೃಜ ವರ್ಣವಾಚ್ಯ ಗಂಡ ಸ್ಥಳದಲ್ಲಿಪ್ಪ 1 ಅನಂತಾರ್ಥಗರ್ಭನೆ ನೀ ವಾಚಿಯಲ್ಲಿ 2 ಕಪಿಲ ಖಪತಿ ಗರುಡ ಘರ್ಮ ದಕ್ಷಿಣಭುಜದೊಳ್ ಅಪರಿಚ್ಛಿನ್ನನೇ ನೀನು ಸಂಧಿಗಳಲಿ ಸುಫಲದಾತನೆ ಙಸಾರನಾಮದಲಿದ್ದು ಅಂಗುಲ್ಯಾಗ್ರದಲ್ಲಿ ನೀ ನಿರುತರಲಿ ನೆಲಸಿರ್ಪೆ 3 ಝೂಟಿತಾರ ವರ್ಣವಾಚ್ಯವ ಮಾಡಿ ನಿರುತದಲಿ ವಾಮಭುಜ ಸಂಧಿಗಳಲ್ಲಿರುವೆ ಬೆರಳ ಅಗ್ರದಿ ಞಮನಾಮದಲಿ ನೆಲೆಸಿರುವೆ 4 ಟಂಕ ಠಲಕ ಡರೌಕ ಢರಣಣಾಕ್ಮಕ ನೀ ನಾ ಟಂಕ ರಹಿತ ದಕ್ಷಿಣ ಪಾದದಲ್ಲಿ ಬಿಂಕವಿಲ್ಲದೆ ತಾರ ಥಪತಿ ದಂಡಿ ಧನ್ವೀ ನಮ್ಯನಾಮನೆ ವಾಮಪಾದ ಸಂಧಿಗಳಲ್ಲಿ 5 ಪರಫಲಿ ವರ್ಣವಾಚ್ಯ ದೇಹದಪಾಶ್ರ್ವ ಬಲಿ ಭಗನಾಮ ಪೃಷ್ಟ ಗುಹ್ಯದಲಿ ನಿರುತ ಮನ ವರ್ಣವಾಚ್ಯ ನೆನಿಸಿಹೆ ದೇವ ತುಂದಿ ಸ್ಥಾನದಲಿ ಎಂದೆಂದು ನಿಂದೆ6 ಯಜ್ಞ ಹೃದಯದಿ ರಾಮ ತ್ವಕ್‍ಲಕ್ಷ್ಮೀಪತಿ ರುಧಿರ ಶಾಂತಸಂವಿತ್ ಮಾಂಸದಲ್ಲಿ ಸುಜ್ಞ ಷಡ್ಗುಣ ಮಜ್ಜ ಸಾರತ್ಮ ಅಸ್ತಿಯು ಹಂಸ ಸ್ನಾಯುಳಾಳುಕ ನೀ ಪ್ರಾಣದಲ್ಲಿ 7 ಕ್ಷಕಾರವಾಚ್ಚ ಶ್ರೀ ಲಕ್ಷ್ಮೀ ನರಸಿಂಹ ಕ್ಷರ ಜೀವರಾ ದೇವ ಸರ್ವ ಸ್ಥಳದಲ್ಲಿಪ್ಪ ಶ್ರೀಕರಾರ್ಚಿತ ನಿನ್ನ ವಾಕ್ ಮನೋರೂಪಗಳು ಸಕಲ ಸಚ್ಛಾಸ್ತ್ರಾಗಮಗಳಾಗಿಹವೋ 8 ಸ್ವರವರ್ಣ ಸಂಯುಕ್ತ ಶಬ್ದವಾಕ್ಯದಿ ಸಕಲ ಪುರಾಣಾಗಮದಿ ಶಾಸ್ತ್ರ ಸರ್ವದಿ ನಿತ್ಯ ನಿರುತ ನಿನ್ನನುದಿನದಿ ಪೊಗಳುತಿಹವೋ 9 ಸ್ವಪ್ರಯೋಜನಕಾಗಿ ವರ್ಣ ಭೇದದಿ ವಾಕ್ಯ ಅಪ್ರಕೃತವಾಗೆಷ್ಟೋ ನಾನುಚ್ಚರಿಸಿದೆ ಸ್ವಪ್ರಯೋಜನ ರಹಿತ ಶ್ರೀವೇಂಕಟೇಶ ಶ್ರೀ ಉರಗಾದ್ರಿವಾಸ ವಿಠಲ ಜಗದೀಶ10
--------------
ಉರಗಾದ್ರಿವಾಸವಿಠಲದಾಸರು
ಥರವೆ ಪೋಗೋದು ನೀನು ಕರವೀರಪುರಕೆ ಹೀಗೆ ಪ ಲೋಲ ಲೋಚನೆ ಕೇಳೆ ಆಲದೆಲೆಯ ಮ್ಯಾಲೆಲೋಲಾಡುತ ಸುಕಲ್ಪದಿ ಮರೆತೀಗ ಅ.ಪ. ಮಂದಜಾಕ್ಷಿಯೆ ನಿನ್ನ ಮಂದಹಾಸಕೆ ಮೆಚ್ಚಿಸುಂದರ ವೈಕುಂಠ ಮಂದಿರ ಕಟ್ಟಿಸಿದ 1 ಹಿಂದೆ ಒಂದು ಮುನಿ ತಂದ ಕುಸುಮವನ್ನು ದಯ-ದಿಂದಲೆ ಮುಡಿಸಿದ ಇಂದಿರೇಶನ ಬಿಟ್ಟು 2
--------------
ಇಂದಿರೇಶರು
ದಣಿಯಾ ನೋಡಿದೆ ನಿನ್ನಾ ಪ. ಋಜಗಣದೊಡೆಯನೆ ಬಿಡುವಿಲ್ಲದೆ ನಿನ್ನ ಅಡಿಗಳಿಗೆ ವಂದಿಪೆ ಅ.ಪ. ಮಹದ್ವಾರ ಬಾಗಿಲಾದಲ್ಲಿ ಇರುತಿರುವೋರು ಜಯವಿಜಯರಿಲ್ಲಿ ವಾರವಾರಕ್ಕೆ ನಿನ್ನ ಬ್ರಹ್ಮಾದಿ ದ್ವಿಜರು ಹಾರೈಸಿ ಹರುಷದಿ ಪೂಜೆಗೊಂಬೊರೆ 1 ಯಡಬಲದಲ್ಲಿ ನಿನ್ನ ಮಡದಿಯರಿಂದ ಒಡಗೂಡಿ ಸಡಗರದಲ್ಲಿ ಇಂದಿರೇಶ ಗರುಡವಾಹನೆ ರಂಗಾ ಉರಗಾದ್ರಿನಿವಾಸ ಶೇಷಾಚಲವಾಸ ಶ್ರೀ ವೆಂಕಟೇಶಾ 2 ಸೃಷ್ಟ್ಯಾದಷ್ಟ ಕರ್ತಾ ಶ್ರೀವಿಠಲ ನಿನ್ನಾ ಗುಣಯೆಷ್ಟೆಂದು ವರ್ಣಿಪೆನಾ ಅಷ್ಟ ಮಹಿಷಿಯರ ಆಳದ ಮದವೆಷ್ಟೊ ಕಾಳಿಮರ್ದನಕೃಷ್ಣ ಬಲು ಜೋರಾ ದಿಟ್ಟಾ ಆನಂದ ಕೊಟ್ಟಾ3
--------------
ಕಳಸದ ಸುಂದರಮ್ಮ
ದಧಿವಾಮನ ವಿಠಲ ಉದ್ಧರಿಸೊ ಇವನ ಪ ಅಧಿ ಭೂತ ಅಧ್ಯಾತ್ಮ ಅಧಿದೈವಗತ ದೇವವಿಧಿ ಜನಕ ವಿಶ್ವಾತ್ಮ ಮಧು ಮಥನ ಹರಿಯೆ ಅ.ಪ. ವಿದ್ಯಾಯುಗಳನಿತ್ತು ಮಧ್ವಮತ ದೀಕ್ಷೆಯಲಿಶ್ರದ್ಧೆ ಬುದ್ಧಿಯ ನೀಯೊ ಮಧ್ವಾಂತರಾತ್ಮಾ |ಕೃದ್ಧಖಳರ್ಹಾವಳಿಯ ಒದ್ದು ಪೋಷಿಸುತಿಪನಶುದ್ಧಗೈವುದು ಮನವ ಸಿದ್ಧಜನ ವಂದ್ಯಾ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳವಾರ ವಾರಕೆ ತಿಳಿಸಿ ಪೊರೆಯಬೇಕೋ |ಸಾರತಮ ನಿನ್ಹೊರತು ಆರು ಕಾಯುವರಯ್ಯಪೋರಗಿಹ ದುರಿತಾಳಿ ಪಾರುಮಾಡೈದೇವ 2 ಕಾರಣಿಕ ಕರುಣಾಬ್ಧಿ ತಾರೇಶ ಶ್ರೀ ಹರಿಯೆನೀರ ಜಾಸನವಂದ್ಯ ನೀರಜಾಕ್ಷಾ |ತಾರಕನು ಕುಭವ ಕೂಪಾರ ದಾಟಿಸಲುಧೀರ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದರ್ಪಣದಲಿ ಮುಖ ನೋಡಿಕೊಂಡನೆ ಪ ಮಲ್ಲಿಗೆ ಮುಗುಳಿನ ತೆರದಲಿ ಶೋಭಿಪ ಪಲ್ಲುಗಳಲೆ ಸಿರಿಯುಗಲ್ಲವು ಭೂಪತಿಯಂದದಿ ಬೃಸ್ವರಾಬಿಲ್ಲಿನ ಸೌಭಗವು1 ಶರದುದಿತಾಮಲ ತರುಣಿಕರಾರ್ಚಿತ ಸರಸಿಜದಳನಯನಾಕರುಣಪೂರ್ಣ ಕಟಾಕ್ಷ ರಕ್ಷಣ ವರಪಲ್ಲವರರಸನು 2 ರತ್ನಕುಂಡಲದ್ವಯ ಸಂಶೋಭಿತ ಸ್ತೋತ್ರಯುಗಳ ನೇಮಮಸ್ತಕದಲಿ ಮಾಣಿಕ ಮುಕುಟ ಶ್ರೀ ಉತ್ತಮ ಮುಖಧಾಮ 3 ನಿತ್ಯಾನಂದ ಚಿದಾತ್ಮಕ ಶಕ್ತನು ಭಕ್ತಕಾಮಿತದಾತಎತ್ತುವೆ ಕರಯುಗ ತವ ಕಮಲಕೆ ಚಿತ್ರ ಚರಿತ್ರ ಗಾತ್ರಾ 4 ನಾಸಕ ಚಂಪಕ ಕೋಶವು ಬಿಂಬಾಧರ ಯುಗಳದೋಷರಹಿತ ಸುರಾಹ ಸರೋಜ ಇಂದಿರೇಶ ವದನ 5
--------------
ಇಂದಿರೇಶರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1 ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2 ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3
--------------
ಇಂದಿರೇಶರು