ಒಟ್ಟು 569 ಕಡೆಗಳಲ್ಲಿ , 74 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀಶ ಕಾಂತ ವಿಠಲ | ಪೊರೆಯ ಬೇಕಿವಳ |ಭೂರಿ ದೈವರ ಗಂಡ | ಮರುತಾಂತರಾತ್ಮಾ ಅ.ಪ. ಸುಕೃತ | ರಾಶಿ ಒದಗಲು ಈಗದಾಸ ಪಂಥಕೆ ಮನವ | ಆಶಿಸುತ್ತಿಹಳೋಆಶುಗತಿ ಮತ ಪೊಂದಿ | ದೋಷಗಳ ಕಳೆದಿಹಳಕೇಶವನೆ ಪೊರೆಯೆಂದು | ಲೇಸು ಬಿನ್ನವಿಪೇ 1 ಮೂರೆರಡು ಭೇದಗಳು | ತಾರತಮ್ಯವ ತಿಳುಹಿಆರು ಮೂರೂಭಕ್ತಿ | ವೈರಾಗ್ಯ ಭಾಗ್ಯಸಾರ ತತ್ವ ಜ್ಞಾನ | ದರಿವ ಇವಳಿಗೆ ಇತ್ತುಪಾರುಗೈ ಭವದ ಕೂ | ಪಾರ ಶ್ರೀ ಹರಿಯೇ 2 ಲೌಕಿಕ ಸುಸಖ್ಯ | ವೈದೀಕವೆಂದೆನಿಸುತ್ತಕಾಕು ಸಂಗವ ಕೊಡದೆ | ನೀ ಕೊಟ್ಟು ಸತ್ಸಂಗಪ್ರಾಕ್ಕು ಕರ್ಮವ ಕಳೆದು | ಸಾಕ ಬೇಕೆಂದಿವಳಮಾಕಳತ್ರನೆ ಹರಿಯೆ | ನಾಕೇಳ್ವೆ ವರವಾ 3 ಪತಿಯೆ ಪರದೈವ ವೆಂ | ಬತಿ ಶಯದ ಮನೆಯಿತ್ತುಹಿತದಿ ಹರಿ ಗುರು ಸೇವೆ | ಸತತ ಒದಗಿಸುತಗತಿಗೋತ್ರ ನೀನೆಂಬ | ಮತಿಯನೇ ಕರುಣಿಸುತಕ್ಷಿತಿಯೊಳಿವಳನು ಮೆರೆಸೊ | ಪತಿತ ಪಾವನ್ನಾ 4 ದೇವ ಹೂತಿಯ ಪೊರೆದ | ಆವ ಕಪಿಲಾತ್ಮಕನೆಭಾವದಲಿ ಮೈದೋರಿ | ನೀವೊಲಿಯಲೆಂದೂಭಾವದಲಿ ಬಿನ್ನವಿಪೆ | ಬಾವಜ್ಞ ಸಲಿಸುವುದುದೇವ ದೇವನೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಾಸುತ ಬಂದ ನೋಡಿ ಭಾಸ್ಕರಕೋಟಿ ತೇಜ ಲೇಸು ಲೇಸಾಯಿತೆನ್ನ ಮನದೊಳಗೆ ಧ್ರುವ ಹೊಳೆಯುತ ಸುಳಿಯುತ ಥಳಥಳಗುಡುತ ಒಲಿಯುತ ಬಂದ ನೋಡಿ ಎನ್ನೊಳಗೆ 1 ಕರುಣ ಕವಚವ ತೊಟ್ಟು ವರಮುನಿಗಳ ಪ್ರಾಣ ಹರುಷ ಬೀರುತ ಬಂದ ತ್ವರಿತಿಲ್ಲಿಗೆ 2 ದೀನ ದಯಾಳು ಎನ್ನ ಅನಾಥ ಬಂಧು ಸ್ವಾಮಿ ಸನಾಥ ಮಾಡಲಿ ಬಂದ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಾಸ್ಕರ ಗುರುವಿನ ಭಾಸನುದಿನವಿರೆ ಆಶಿನ್ನೊಬ್ಬರದ್ಯಾಕೆ ಲೇಸಾಗಿಹ್ಯ ಘನದಯದಾಸೈನಗಿರೆ ನಾಸ್ತ್ಯೆನಗೆಂಬುವದ್ಯಾಕೆ ಧ್ರುವ ಸೂಸುತ ನಿಜ ನಿಧಾನದ ರಾಶಿರೆ ಕಾಸಿನ ಕಳವಳಿಕ್ಯಾಕೆ ವಾಸವಾಗ್ಹೆಜ್ಜೆಜ್ಜಿಗೆ ಗುರುವಿನ ಆಶ್ರಿನ್ನೊಬ್ಬರದ್ಯಾಕೆ ಗ್ರಾಸಕೆದುರಿಡುತಿರೆ ಎನ್ನೊಡೆಯ ಸೋಸಿಲೆ ಬಯಸುವದ್ಯಾಕೆ 1 ಗುರುದೈವೇ ಗುರುತಾಗಿರಲು ತಾ ಪರದೈವಗಳಿನ್ಯಾಕೆ ಶಿಖಾಮಣಿ ಇರಲು ಶರಣು ಇನ್ನೊಬ್ಬರಿಗ್ಯಾಕೆ ಕರುಣಾಮೃತ ಸುರರಸ ಮಳೆಗರೆವುತಲಿರೆ ಪರರಂಡಲೆವದ್ಯಾಕೆ ಇರುಳ್ಹಗಲೆ ಗುರುದಯ ಕವಚೆನಗಿರೆ ದುರಿತಭವ ಭಯವ್ಯಾಕೆ 2 ಇಹ್ಯಪರಕೆ ಗುರು ನಾಮವೆನಗಿರಲು ಸಾಹ್ಯಮನುಜರದ್ಯಾಕೆ ಸಹಕಾರವೆ ಸದ್ಗುರು ಮೂರ್ತಿರಲು ಸಾಯಾಸವೆನಗ್ಯಾಕೆ ಮಹಿಪತಿಸ್ವಾಮಿ ಶ್ರೀಪತಿ ಸಮರ್ಥಿರೆ ದುರ್ಮತಿಗಳ ಹಂಗ್ಯಾಕೆ ಸಹಿತ ಗುರು ತಾಯಿತಂದೆನಗಿರೆ ಬಾಹ್ಯವಿಹಿತದವನ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಭೂವರಾಹ ವಿಠಲನೆ | ಸೇವಕನ ಪೊರೆಯೊ ಪ ಕಾವಕರುಣಿಗಳರಸ | ಭಾವಜಾನಯ್ಯ ಅ.ಪ. ಏಸೆಸೊ ಜನ್ಮಗಳ | ಸೂಸಿದನುಭವದಿಂದಲೇಸಾದ ಮಧ್ವಮತ | ಪೋಷಿಸುತ್ತಿಹನೊವಾಸವಾದ್ಯಮರನುತ | ಶೇಷಾದ್ರಿವಾಸಹರಿಪೋಷಿಸೊ ಬಿಡದಿವನ | ಆಶೆಪೂರಯಿಸಿ 1 ತಾರತಮ್ಯಜ್ಞಾನ | ಮೂರೆರಡು ಭೇಧಗಳವಾರವಾರಕೆ ತಿಳಿಸಿ | ಕಾರಣಾತ್ಮಕನೆಸಾರತಮ ನೀನೆಂಬ | ಚಾರುಮತಿಯನೆ ಕೊಟ್ಟುನೀರಜಾಸನ ವಂದ್ಯ | ಪಾರುಗೈಭವವ 2 ಅಧ್ಯಾತ್ಮ ಅಧಿಭೂತ | ಆದಿಭೌತಿಕತಾಪಭೋದಿಸುತ ಸಾಧನದ | ಹಾದಿಯಲ್ಲಿರಿಸೋಮಧ್ವಾಂತರಾತ್ಮಕನ | ಪಾದರತಿಯಲಿ ಶ್ರದ್ಧೆಉದ್ಧರಿಸು ಇವನಲ್ಲಿ | ಹದ್ದುವಾಹನನೇ 3 ಕಂಸಾರಿ ಪೊರೆಯೊಹಂಸ ವಾಹನನಾದಿ | ತೃಣಾಂತ ಚವರನಹಂಸರೂಪಿಹರಿಯ | ಆಧೀನ ತಿಳಿಸೋ 4 ಸರ್ವತ್ರ ವಾಪ್ತನಿಹ | ಸರ್ವ ದೋಷ ವಿದೂರಸರ್ವಂತಾರಾತ್ಮಕನೆ | ಸರ್ವೋತ್ತಮಸರ್ವಧಾತನ ಸ್ಮøತಿಯ | ದರ್ವಿ ಜೀವಿಗೆಯಿತ್ತುಪೊರೆಯೊ ಸುಂದರ ಗುರು | ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
ಮಗುಟ ವಿಶ್ವದೊಳೊಬ್ಬನೆ ಪ್ರಗಟ ಭಾಸ್ಕರ ಗುರು ದಯನೋಟ ರಸಕಾಯ ಸವಿದುಂಬೂಟ ಧ್ರುವ ಭಾಸ್ಕರ ಗುರು ನಿಜದಯ ಲೇಸುದೋರುವ ವಿಜಯ ಭಾಸ್ಕರ ಗುರು ಅಭಯ ಹಸನಾದ ಪುಣ್ಯೋದಯ 1 ಭಾಸ್ಕರ ಕರುಣಾಕಟಾಕ್ಷ ಭಾಸುದು ಘನಪ್ರತ್ಯಕ್ಷ ಭಾಸ್ಕರ ಗುರು ನಿಜ ಭಿಕ್ಷ ಹಸನಾಗಿ ಮಾಡುವಾ ಸಂರಕ್ಷ 2 ಭಾಸ್ಕರ ಗುರು ನಿಜಬೋಧ ಭಾಸುವ ಘನಸರ್ವದಾ ಭಾಸ್ಕರ ಗುರು ಪ್ರಸಾದ ಸ್ವಸುಖದೋರುವ ಸಂವಿಸ್ವಾದ(?) 3 ಭಾಸ್ಕರ ಗುರು ಉಪದೇಶ ಭಾಸಲು ಬಲು ಸಂತೋಷ ಭಾಸ್ಕರ ಗುರುವರೇಶ ಈಶನಹುದೊ ಸರ್ವೇಶ 4 ಭಾಸ್ಕರ ಗುರುಕೃಪೆ ಙÁ್ಞನ ಲೇಸಾಗಿ ತೋರುವದುನ್ಮನ ಭಾಸ್ಕರ ಗುರುದಯ ಕರುಣ ದಾಸ ಮಹಿಪತಿಗಾಭರಣ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಡಿಮಡಿಯೆಂದು ಹಾರ್ಯಾಡಿ ಸುಳ್ಳೆ ಮಡಿಯಬೇಡಿರೋ ಭವದುರಳ್ಯಾಡಿ ಪ ಜಡಮತಿ ಕಡಿದು ಬಿಡಲಾಸೆ ತೊಡೆದು ನಡಿರೋ ಸನ್ಮಾರ್ಗದದು ನಿಜಮಡಿ ಅ.ಪ ಬದ್ಧಗುಣದೊಳಿರೆ ಅದು ಶುದ್ಧಮಡಿ ಕದ್ದು ತಿನ್ನುವ ಕ್ಷುದ್ರಬುದ್ಧಿ ನೀಗಿ ಪರಿ ಶುದ್ಧರಾಗಲದು ನಿರ್ಧಾರ ಮಾಡಿ1 ಕ್ಲೇಶಕಳೆವುದದು ಲೇಸುಮಾಡಿ ದು ರ್ವಾಸನಳಿಯೆ ಅದು ಮೀಸಲು ಮಡಿ ಮೋಸಮರವೆ ನೀಗಿ ಈಶನ ನಾಮವ ಧ್ಯಾಸದಿರಲು ಅನುಮೇಷ ಮಡಿ 2 ಬಿಟ್ಟದ್ದು ಉಟ್ಟರದು ಯಾವ ಮಡಿ ಉಟ್ಟು ಮುಟ್ಟೆಂಬುದಿದಾವಮಡಿ ಕೆಟ್ಟ ಪದ್ಧತಿಗಳ ಬಿಟ್ಟು ಸದಾಚಾರ ನಿಷ್ಠಪರರಾಗಲದು ಶಿಷ್ಟಮಡಿ 3 ಅರಿವುಗೂಡುವುದೆ ಸ್ಥಿರಮಡಿ ಬಹ ಜರ ಮರಣಳಿವುದೆ ಪರಮಮಡಿ ದುರಿತ ಗೆಲಿದು ಹರಿಶರಣರೊಳಾಡ್ವುದು ತಿರುಗಿ ಮುಟ್ಟಿಲ್ಲದ ಪರಮಮಡಿ 4 ಮಡಿಯಾದಮೇಲೆ ಮೈಲಿಗೆಲ್ಲಿ ಖೋಡಿ ಜ್ಞಾನ ವಿಡಿದುನೋಡು ನಿಜ ಹುಡುಕ್ಯಾಡಿ ಮಡಿಮುಟ್ಟಿಲ್ಲದ ನಮ್ಮೊಡೆಯ ಶ್ರೀರಾಮ ನಡಿ ದೃಢದಿ ನಂಬಲಿದೇ ಮೂಲಮಡಿ 5
--------------
ರಾಮದಾಸರು
ಮಂಡೆ ತುರಿಸುವಭಂಡನಂತೆ ಉದ್ದಂಡನಾಗದಿರು ಪ. ಬಂಟ ಬಾಳನೆ ಕ-ಳಾಸವ ಕೊಂಡು ಸೂಳೆಉಣಳೆ ಈಸತಿ ಸಂತರ್ಗಾಗಿ ಕುಣಿಯದೆಕೇಶವ ಹೃಷಿಕೇಶ ಎನ್ನುಭಾಸುರ ಹರಿಮೂರ್ತಿಯ ನೆನೆಸಾಸಯೆಂದೆನಿಸಿಕೊಳ್ಳದೆಏಸುಬಂದರೈಸರೊಳಿರು 1 ಆಶೆಯೆಂಬ ಪಾಶವ ಬಿಡು ಈಸಂಸಾರವಾರಾಶಿಯನೆನೀಸಲಾರದೆ ಕಾಸಿಗಾಗಿವೇಷವ ತೋರಿ ಘಾಸಿಯಾಗದೆದಾಸರೊಳಾಡುವ ಸರ್ವೇಶ ನಿ-ರಾಶೆನಲ್ಲದೆ ಲೇಸ ಕೊಡನುರೋಷಬೇಡ ಸಂತೋಷದಲಿರುಆಸರು ಬೇಸರಿಗಂಜಬೇಡ 2 ಕ್ಲೇಶ ಉಂಬೆಭಾಸಕೆ ನೀನೊಳಗಾಗದೆಶೇಷಶಾಯಿ ಹಯವದನನ ನೆನೆ3
--------------
ವಾದಿರಾಜ
ಮಂತ್ರಾಲಯನಿವಾಸ ಉತ್ತಮ ಹಂಸ | ಸಂತಾಪ ಪರಿಹರಿಸ ಕೊಡು ಎನಗೆ ಲೇಸÀ ಪ ಯತಿಗಳ ಶಿರೋರನ್ನ ಯೋಗಸಂಪನ್ನ | ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ || ನುತಿಸುವೆ ಭಕ್ತಿಯಲಿ ಬಿಡದೆ | ಮುಕುತಿಯಲಿ ಸತತಾನಂದದಲಿಪ್ಪ 1 ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ | ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ || ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತÀರುವೆ 2 ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ | ಶಮೆದಮೆಯಲ್ಲಿ ಉಳ್ಳ ಮಹಿಮೆಯಾ || ನಮಗೆ ಪೇಳುವೆ ವೇದಬಲ್ಲ ವಿನೋದ | ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ 3 ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ | ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ || ಪೋಷಿಸುವೆ ಅವರ ಅಟ್ಟುವ ಮಹದುರ | ದೋಷವ ಕಳೆವಂಥ ವಿಮಲ ಶಾಂತ4 ವರಹಜ ತೀರದಲ್ಲಿದ್ದ ಸುಪ್ರಸಿದ್ದ | ಮರುತ ಮತಾಂಬುಧಿ ಸೋಮ ನಿಸ್ಸೀಮ || ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ | ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ 5
--------------
ವಿಜಯದಾಸ
ಮಧ್ವಮತವ ಪೊಂದದವನ ಭಕುತಿಯಾತಕೆ ಪ ಊಧ್ರ್ವಪುಂಡ್ರ ತಿದ್ದದವನ ಕರ್ಮವ್ಯಾತಕೆಅ.ಪ ದಾನವನ್ನು ಮಾಡದವನ ದ್ರವ್ಯವ್ಯಾತಕೆ | ಸ್ನಾನವನ್ನು ಮಾಡದವನ ಮೌನವ್ಯಾತಕೆ | ಮಾನಿನಿಯು ಇಲ್ಲದವನ ಬದುಕು ಯಾತಕೆ | ಧ್ಯಾನವನ್ನು ಅರಿಯದವನ ಪೂಜೆ ಯಾತಕೆ 1 ವಂಶವನ್ನುದ್ಧರಿಸದಂಥ ಮಗನು ಯಾತಕೆ | ಹಿಂಸೆಯನ್ನು ಪಡಿಸುವಂಥ ಅರಸು ಯಾತಕೆ || ಸಂಸಾರವನು ಒಲ್ಲದಂಥ ಸತಿಯು ಯಾತಕೆ | ಕಂಸಾರಿಯನು ತಿಳಿಯದಂಥ ಜ್ಞಾನವ್ಯಾತಕೆ 2 ಬಂಧು ಬಳಗ ಬಿಟ್ಟು ಉಂಬ ನೆಂಟರ್ಯಾತಕೆ | ಕಂದರನ್ನು ಮಾರುತಿಪ್ಪ ತಂದೆಯಾತಕೆ || ಬಂದ ಅತಿಥಿಗನ್ನವಿಕ್ಕದ ಸದನವ್ಯಾತಕೆ | ನಿಂದೆಗಳು ಮಾಡುತಿಹನಾಚಾರವ್ಯಾತಕೆ 3 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆ | ಹಿರಿಯರನ್ನು ಸಾಕದವನ ಪುಣ್ಯವ್ಯಾತಕೆ || ಚರಿಸಿ ತೀರ್ಥಯಾತ್ರೆ ಮಾಡದ ದೇಹವ್ಯಾತಕೆ | ವರ-ಪ್ರಸಾದವೀಯದಂಥ ದೇವರ್ಯಾತಕೆ4 ಏಕಾದಶಿಯ ಮಾಡದವನ ವ್ರತವು ಯಾತಕೆ | ಏಕಮನಸು ಇಲ್ಲದವನ ನಡತೆ ಯಾತಕೆ || ಸಾಕಿದವನ ಕೊಲ್ಲುವಂಥ ಭಂಟನ್ಯಾತಕೆ | ಲೋಕವಾರ್ತೆ ಬಿಡದವನ ಜಪವು ಯಾತಕೆ 5 ಭಾಷೆ ಬದ್ಧವಿಲ್ಲದವನ ಮಾತು ಯಾತಕೆ | ಕಾಸುವೀಸÀಕೆ ಬಡಿದಾಡುವ ಅನುಜರ್ಯಾತಕೆ || ಲೇಸು ಹೊಲ್ಲೆಹ ನೋಡದಂಥ ಗೆಳೆಯನ್ಯಾತಕೆ | ಆಸೆಯನ್ನು ಬಿಡದ ಸನ್ಯಾಸವ್ಯಾತಕೆ 6 ತಪ್ತ ಮುದ್ರೆಯಿಲ್ಲದವನ ಜನ್ಮವ್ಯಾತಕೆ | ಗುಪ್ತದಲ್ಲಿ ನಡೆಯದಿಪ್ಪ ದಾಸನ್ಯಾತಕೆ || ಆಪ್ತಬಂಧು ವಿಜಯವಿಠ್ಠಲನ ಶ್ರೀ ಚರಣದಿ | ಕ್ಲುಪ್ತ ಮೀರದೆ ನಡೆದ ಮೇಲೆ ನರಕವ್ಯಾತಕೆ 7
--------------
ವಿಜಯದಾಸ
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮನವೆ ಶ್ರೀಗುರು ಪಾದವ ನಂಬು ನಿನಗಲ್ಯಾಹುದು ಘನ ಸುಖದಿಂಬು 1 ಅನುದಿನ ನೋಡಾ ನಂಬದೆ ನಿಜವನು ನೀ ಕೆಡಬ್ಯಾಡ 2 ಬ್ಯಾಡೆಂಬುದು ಈ ಮಾತನೆ ಕೇಳು ಬೇಡದೆ ಬಯಸದೆ ನಿಜದಲಿ ಬಾಳು 3 ಬಾಳುವದೀಪರಿ ಜನದಲಿ ಲೇಸು ತಿಳಿಯದೆ ಬಯಸುವದ್ಯಾತಕೆ ಸೋಸು 4 ಸೋಸ್ಹಿಡಿದರ ಬೇಕಾಹುದು ಜನ್ಮ ಕರ್ಮ 5 ಭವ ಬಂಧ ಮರ್ಮವ ತಿಳಿಯದವನೆ ತಾ ಅಂಧ 6 ಅಂಧಗ ತಿಳಿಯದು ಆತ್ಮದ ಗೂಢ ಸಂಧಿಸಿ ಬೀಳಲು ವಿಷದಲಿ ಮೂಢ 7 ಮೂಢಗೆಲ್ಲಿಹ್ಯ ಆತ್ಮದ ವಿಚಾರ ನೋಡುವ ನೋಟವು ಇದು ಬಲುದೂರ 8 ದೂರಕೇ ನೀ ದೂರಾಗಿಬ್ಯಾಡ ಅರಿಯಲು ತನ್ನೊಳು ಸಾರವೆ ನೋಡಾ 9 ನೋಡುವುದಿದು ಗುರುಙÁ್ಞನದ ಗುಟ್ಟು ಆಡಿದ ಅನುಭವ ಮಾತಿಗೆ ಮುಟ್ಟು 10 ಮುಟ್ಟಿದ ಖೂನವು ಮಿಸುಕಲಿ ಬ್ಯಾಡ ಘಟ್ಯಾಗಿ ನಿಜಘನ ಬೆರೆ ಗಾಢಾ 11 ಗಾಢಾಗಿಹುದು ನಿಜಗುರು ಙÁ್ಞನ ಮಾಡುವ ಧ್ಯಾನಕೆ ಅನುಸಂಧಾನ 12 ಉನ್ಮನದಲಿ ತಿಳಿವುದು ಗುರುಮುಖ 13 ಗುರು ಮುಖದಲಿ ಬೆಳಗಾಹುದು ಪೂರ್ಣ ಬೀರುವ ಪ್ರಭೆ ಸದ್ಗುರು ಕರುಣ 14 ಕರುಣದ ಸಾಗರ ಗುರುವರ ಮೂರ್ತಿ ಇರುಳ್ಹಗಲೆ ಕೊಂಡಾಡುವೆ ಕೀರ್ತಿ 15 ಕೀರ್ತಿಯ ಕೊಂಡಾಡುವನೀ ಮಹಿಪತಿ ಸಾರ್ಥಕವಿದು ಅನುಭವ ಮನೆಮೂರ್ತಿ 16
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನ್ನಿಸಯ್ಯ ಮದನಜನಯ್ಯ ಘನ ಮುನ್ನೀರಶಯ್ಯ ಸ್ವಾಮಿ ಹಯವದನರಾಯಾ ಪ ಬಾರಿಬಾರಿಗೂ ಈತನ ಮಂದಿರದಲಿ ನಿನ್ನ ಚೆನ್ನಿಗ ರೂಪವ ತೋರೋ ನಿನ್ನ ಕರುಣದಿ ಅ.ಪ. ಈಶಾ ಭವಪಾಶಾ ಎಂಬೋ ಬೀಸಿದ ಬಲೆಯೊಳು ಗಾಸಿಗೆರೆದೆನೂ ರಂಗಾ ಕೃಪಾರಿಣ ವಾಸಿ ಪಂಥಗಳು ವಾಸುದೇವನೆ ಲೇಸ ಮಾರ್ಗವ ಕಾಣೆ ನಿನ್ನಾಣೆ ದಾಶರಥಿಯೇ ನಿನ್ನ ದಾಸರ ಕೂಡಿ ಸಂತೋಷಪಡುವ ಸಿರಿಯೆನಗಿತ್ತು ಸಲೆ ಮೀಸಲವ ಮಾಡೋ ದೇವರ ದಯಾಳೊ1 ಪಂಚಭೂತಗಳಲಿ ಪಂಚಾಗ್ನಿಗಳಲಿ ಪಂಚದ್ವಿಗುಣ ಪಂಚರಲಿ ಮತ್ತೆ ಪಂಚಪ್ರಾಣದಲಿ ಪಂಚವಿಂಶತಿ ಮಾರ್ಗ ತೋರೋ ಶ್ರೀಕಾಂತಾ ಪಂಚ ಹಿಡಿಸಿ ಪಂಚೊಂದೋಡಿಸಿ ಪಂಚನಾಲಕು ಭಕ್ತಿ ಕೊಂಚವಾಗದ ಹಾಗೆ ಸಂಚಿತಾಗಮಾ ಮುಂಚೆ ಓಡಿಸೋ ಶ್ರೀವತ್ಸಲಾಂಛನನೇ2 ಶ್ರೀನಿವಾಸನೇ ನಿನ್ನ ಧ್ಯಾನಮಾತ್ರದಿ ಬರುವೋ ಬಿಗನು ಅಘನಾಶÀನವೆಂದೊ ನಾನಿಂದೂ ಬೆಂಬಿದ್ದ ಅಬಲನ ಮನ್ನಿಸೋದಲ್ಲದೆ ಹೀಗೆ ಮುನಿಸೋರೇನೋ ಶ್ರೀಹರೆ ನಿನ್ನ ಸನ್ನಿಧಿಗೊಪ್ಪಿಸಿದೆನೊ ಮನ ಬಂದುದು ಮಾಡೊ ಘನತೆ ನಿನ್ನದು ದೇವಾ ದೀನ ದಯಾನಿಧೆ ಉರಗಾದ್ರಿವಾಸಾ 3
--------------
ಮಹಾನಿಥಿವಿಠಲ
ಮನ್ನಿಸೊ ಶ್ರೀ ವೆಂಕಟೇಶ ಮಂಜುಗುಣಿಪುರ ವಾಸ ಪ. ಸನ್ನುತ ಸದ್ಗುಣಪೂರ್ಣ ಸುಪ್ರಸನ್ನ ಹಯವದನ ಅ.ಪ. ದೇಶದೇಶದಿಂದ ಬಂದ ಜನರಿಗೆ ಮುದದಿಂದ ಲೇಸಿನ ವರನನೀವೆ ನಿರುತ ಕಾವೆ ಭಾಸುರ ಮೋಹನವೇಷ ಭಾನುಕೋಟಿಸುಪ್ರಕಾಶ ಶ್ರೀಸತಿಯ ಪ್ರಾಣೇಶ ಶ್ರೀ ಶ್ರೀನಿವಾಸ 1 ವಾರಿಧಿಯೊಳಗಾಡಿದೆ ಗಿರಿಯ ಬೆ[ನ್ನ] ಲೆತ್ತಿದೆ ಭಾರವಹ ಧರೆಯ ತಂದೆ ದೈತ್ಯನ ಕೊಂದೆ ದುರುಳ ಬಲಿಯನು ಮೆಟ್ಟಿ ದೈತ್ಯನೃಪರನೆ ಕುಟ್ಟಿ ತರುಣಿಗಭಯವನಿತ್ತೆ ತರುವ ಕಿತ್ತೆ 2 ಪುರದ ನಾರಿಯರನು ಪಂಥದಿ ಗೆಲಿದೆ ನೀನು ವರ ಕಲ್ಕಿಯಾಗಿ ತುರಗವನೇರಿ ಮೆರೆದೆ ವರದ ಪ್ರಸನ್ನ ಹಯವದನ ವೆಂಕಟರಾಯ ಪೊರೆಯೊ ಎಂದೆಂದೂ ಎನ್ನ ಪುರುಷರನ್ನ 3
--------------
ವಾದಿರಾಜ