ಒಟ್ಟು 778 ಕಡೆಗಳಲ್ಲಿ , 86 ದಾಸರು , 670 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸಾರ್ಯರ ದಾಸರ ದಾಸ ನಾನು - ಬಾಡದೀಶ ಕಾಯ್ದುಕೊಳ್ಳೊ ಪ ಮಾಧವ ಮನ್ನಿಸೊ ಎನ್ನ 1 ನೀಲಮೇಘಶ್ಯಾಮ ನಿನ್ನ2 ಘೋರ ಸಂಸಾರವೆಂಬ ವಾರಿಧಿಯೊಳಗೆ ಬಿದ್ದುಪಾರಗಾಣದವನಾದೆನಲ್ಲಯ್ಯಧೀರಕರ್ತನಾದ ಬಾಡದಾದಿಕೇಶವೇಶ ಸರ್ವಸಾರಿದೆ ಸಲಹೊ ಎನ್ನುದ್ಧಾರಿ ಮುದ್ದುಕೃಷ್ಣ ನಿನ್ನ 3
--------------
ಕನಕದಾಸ
ದಿನದಿನದೊಳು ಬಿಡದೊನಜಾಕ್ಷ ಪಾದ ಭಜಿಸಿ ನೀ ಸುಖಿಯಾಗೊ ಮನವೆ ಪ ನಂಬುಗೆ ಕಾರಣ ಅಂಬುಜಾಕ್ಷನ ಶ್ರೀಪಾ ದಾಂಬುಜ ಒಲಿಸಲು ಕುಂಭಿಣಿಯೊಳಗೆ ನಂಬಿ ಪ್ರಹ್ಲಾದ ಕರೆಯೆ ಕಂಬದಿಂ ಬಂದವನ ಬೆಂಬಿಡದಲೆ ಕಾಯ್ದನೆಂಬೋಕ್ತಿ ಕೇಳಿ ತಿಳಿದು 1 ದುರಿತದ ತವರಿದು ನರಕಕ್ಕೆ ಬೇರೆಲೊ ಮರವೆಸಂಸಾರ ಮಹಸರಸಿನಸರೋವರ ಸುರಸಿನೊಳ್ ಸಿಲ್ಕಲು ತಿರುಗರೆಂಬುವ ಹರಿಶರಣರ್ವಾಕ್ಯಗಳು ಸ್ಥಿರನಂಬೀ ಅರಿತು 2 ಕಿರಿಕಿರಿ ಸಂಸಾರ ಪರಿಪರಿಬಾಧಿಪ ಉರಿಕಿನ ತಿಂಡಿಯಿದು ನೆರೆನಂಬಬೇಡ ಜರಸುಖವಿಲ್ಲದ ಎರವಿನ ಕಾಯಕ್ಕೆ ಹಿರಿಹಿರಿ ಹಿಗ್ಗಿ ಕೆಡದಿರು ವಿವರಿಸಿನೋಡಿ 3 ಸತಿಸುತರಿವರೆಲ್ಲ ಅತಿಭಾಗ್ಯ ಇರುವನಕ ಸತತ ನಿನ್ನಯ ಸೇವೆ ಹಿತದಿಂ ಮಾಳ್ಪರು ಗತಿಸಿ ಪೋಗಲು ಭಾಗ್ಯ ಸತಿಸುತರೆ ನಿನ ಗತಿವೈರಿಗಳು ಕಾಣೊ ಮತಿಹೀನ ಮನಸೆ 4 ಇರುಳು ಹಲವು ಪಕ್ಷಿ ನೆರೆದುಂಡು ವೃಕ್ಷದಿ ತಿರುಗಿ ಉದಯದೊಳು ಹಾರಿಹೋಗ್ವ ತೆರದಿ ಸರುವ ಅಸ್ಥಿರವೆಂದು ಅರಿತು ವಿಚಾರಿಸಿ ಸ್ಥಿರಸುಖವನು ಪಡೆಯೊ ಶ್ರೀರಾಮನಡಿಗ್ಹೊಂದಿ 5
--------------
ರಾಮದಾಸರು
ದಿವನಿಶಿ ತವಪಾದ ದಿವ್ಯಧ್ಯಾನವನಿತ್ತು ಪ ವಿಷಯಲಂಟಪನಾಗಿ ವ್ಯಸನ ಕೂಪದಿ ಬಿದ್ದು ಮಸಣ ಬುದ್ಧಿಯಿಂ ಕೆಡುವ ಶಿಶುವನುಲಕ್ಷಿಸಿ 1 ಪುಸಿಯ ಸಂಸಾರವ ವಿಷಮವೆಂದರಿಯದೆ ದೆಸೆಗೆಟ್ಟು ಬಳಲುವ ದಾಸನೋಳ್ದಯವಿಟ್ಟು2 ಸುಜನರೊಲುಮೆಯಿತ್ತು ಗಜಿಬಿಜಿ ತೊಲಗಿಸಿ ನಿಜಜ್ಞಾನ ದಯಮಾಡು ಸುಜನಾರ್ಯ ಶ್ರೀರಾಮ3
--------------
ರಾಮದಾಸರು
ದೀನ ದಯಾಳು ಹರೀ ಕೃಪಾನಿಧಿ ಪ ಜಲಚರ ಬಾಧೆಗೆ ನೆನೆಯಲು ನಾಮಾ| ಸಲಹಿದೆ ರಾಜ ಕರಿ|ಕೃಪಾನಿಧಿ 1 ನೊಂದು ಸಂಸಾರದಿ ಬರಲು ಸುದಾಮಾ ಸಿರಿ ಕೃಪಾನಿಧಿ2 ಮಹಿಪತಿ ಪ್ರಭು ಕೈರವ ಶಾಮಾ| ಇಹಪರನೀವ ದೊರೆ ಕೃಪಾನಿಧಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುಃಖವನೆಷ್ಟೆಂದು ಹೇಳಲಿ ಸಂಸಾರ ಶರಧಿಯಿದುದುಃಖದ ಶರಧಿಯಿಂದ ಪರಮಾತ್ಮನ ಸ್ಮರಣೆಗೆ ವಿಘ್ನವಹುದು ಪ ಮಗ ಬುದ್ಧಿವಂತನಾಗಲಿಲ್ಲವೆಂದೆಂಬಮಗಳಿಗೊದಗಲಿಲ್ಲ ಅಳಿಯ ಎಂದೆಂಬಹಗರಣವಾಯಿತು ಮನೆಯೀಗ ಎಂದೆಂಬ ದುಃಖವೊಂದುಜಗಳಗಂಟಿಯು ಎನ್ನ ಹಿರಿಯ ಸೊಸೆ ಎಂದೆಂಬ ದುಃಖವೊಂದು1 ಹೆಂಡತಿ ವ್ಯಭಿಚಾರಿಯಾದಳು ಎಂದೆಂಬ ದುಃಖವೊಂದುಉಂಡೆನೆಂದರೆ ಅನ್ನವಿಲ್ಲ ಎಂದೆಂಬ ದುಃಖವೊಂದುಕಂಡಕಡೆಗೆ ಹೋಗೆ ಕೈ ಹತ್ತದೆಂದೆಂಬ ದುಃಖವೊಂದುಮುಂಡೆಯಾದಳು ಎನ್ನ ಮೊಮ್ಮಗಳು ಎಂದೆಂಬ ದುಃಖವೊಂದು 2 ನೆಂಟರಿಗೆ ಮಾಡಲೆನ್ನೊಳಿಲ್ಲವೆಂದೆಂಬ ದುಃಖವೊಂದುಒಂಟಿ ಬಯಲಿನ ಹೊಲವು ಬೆಳೆಯದು ಎಂದೆಂಬ ದುಃಖವೊಂದುಕಂಟಕಿ ನಾದಿನಿ ಹಡೆಯಲಾರಳು ಎಂದೆಂಬ ದುಃಖವೊಂದುಎಂಟು ವರಹ ಎಮ್ಮೆ ಸತ್ತಿತು ಎಂದೆಂಬ ದುಃಖವೊಂದು3 ಎದೆ ಮೇಲೆ ಕುಳಿತಿಹರು ದಾಯಾದಿಗಳೆಂದೆಂಬ ದುಃಖವೊಂದುಮುದುಕಿಗೆ ಗೆಲುವು ತಾನಿಲ್ಲವೆಂದೆಂಬ ದುಃಖವೊಂದು ಮದುವೆಗೆ ಹಾದಿಲ್ಲ ಹಾವಳಿ ಎಂದೆಂಬ ದುಃಖವೊಂದುಸದನ ಒಳ್ಳೇದಲ್ಲ ಏಳು ಮಕ್ಕಳ ತಾಯಿ ಎಂಬ ದುಃಖವೊಂದು 4 ಜೋಡಿಪೆ ಧೈರ್ಯವೆಂದರೆ ನಿಶ್ಚಯಾಗಲಿಕೆ ಕೊಡದು ಒಂದುನೋಡುವೆ ಚಿಂತಿಸಿ ಎನೆ ಚಿಂತೆ ಹರಿಯಲು ಕೊಡದು ಒಂದುಮಾಡುವೆ ಮಂತ್ರ ಪೂಜನ ಪೂಜೆ ಮಾಡಲು ಕೊಡದು ಒಂದುಕೊಡುವೆ ಗುರು ಚಿದಾನಂದನೆನೆ ಕೂಡಗೊಡದು ಎಂದು 5
--------------
ಚಿದಾನಂದ ಅವಧೂತರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದೂತನಾ ಮನೆಗೆ ಬಂದ ಕಾರಣ ಪೇಳೋ ದಾತಾ ಪ ಪಾತಕವ ಪರಿಹರಿಸಿ ಪರಿಪಾಲಿಸುವುದಲ್ಲದೇ ಮತ್ತಾವಕಾರಣ ಅ.ಪ. ಸಂಸಾರಿಗೆ ಇನ್ನು ಘೋರ ದುರಿತಕೊಳಗಾಗಿರುವ ಶರಣರಿಘರುಷ ವರ್ಷಗರೆಯುವುದಲ್ಲದೇ 1 ತವ ಚರಣದಲಿ ಕುಳಿತು ನೀರು ಕುಡುವೆನೆಂದರೆ ದಾರಿಗಾಣೆಯೋ ರಾಯಾ 2 ಸುಮನಸರ ಪ್ರೀಯಶ್ವಾಸ ಜಾಪಕ ಪ್ರಾಶ ವಿಷನನುಜ ತಂದೆವರದಗೋಪಾಲವಿಠಲನ ದಾಸಾ 3
--------------
ತಂದೆವರದಗೋಪಾಲವಿಠಲರು
ದೂರ ನೋಡದಿರೆಲೊ ರಂಗಯ್ಯಾ ಪ. ಭವ ಮಡುವಿನೊಳಗಿರುವೆನೋ ಪಿಡಿಯೆನ್ನ ಕೈಯ ತಡಮಾಡ ಬ್ಯಾಡಯ್ಯ ಅ.ಪ. ಹಿಂದೇಸು ಜನ್ಮಂಗಳು ಬಂದು ಪೋದಾವಯ್ಯ ಮುಂದಿನಾಗತಿಯು ತೋರದಯ್ಯಾ ತಂದೆ ತಾಯಿ ಸರ್ವ ಬಂಧು ಬಾಂದವಾ ಕಂದರ್ಪ ಪಿತನೆ1 ಆರು ಕಾಯುವರಿಲ್ಲಾ ಮುರಾರಿ ನಿನಗೆ ಸಾರಿದೆನಲ್ಲಾ ಸೇರಿಸೋ ಸಾಧು ಜನರ ಸಹವಾಸಾ ಹರಿ ನಿನ್ನಲ್ಲಿ ಮನಸು ನಿಲ್ಲಿಸು ಶ್ರೀಶಾ ಶ್ರೀನಿವಾಸಾ 2 ಯೆಷ್ಟು ಹೇಳಲಿ ಯನ್ನ ಕಷ್ಟ ಕೇಳುವರಿಲ್ಲ ಅರಿಷ್ಟ ಸಂಸಾರದೊಳೂ ಕೆಟ್ಟು ಪೋಗುವೆನು ದೃಷ್ಟಿಯಿಂದಲಿ ನೋಡೆನ್ನ ಕಾಳಿಮರ್ಧನಕೃಷ್ಣವಾ 3
--------------
ಕಳಸದ ಸುಂದರಮ್ಮ
ದೂರ ನೋಡುವರೆ ರಂಗಯ್ಯ ಎನ್ನ ಪ ದೂರ ನೋಡುವರೇನೋ ಸಂಸಾರ ಶರಧಿಯೊಳಗೆ ಮುಳುಗಿ ದಾರಿಗಾಣದೆ ನೀನೆ ಗತಿ ಮು-ರಾರಿಯೆಂದು ಸಾರಿದ ಮೇಲೆ ಅ.ಪ ಆಸೆ ಬಿಡದೆಲೊ ಕಾಸುವೀಸಕೆ-ಕ್ಲೇಶ ಘನ್ನವೆಲೊ ಈಶ ಯಾರಿಗೆ ಪೇಳಲೊಶವೆಲೊ-ಶ್ರೀಶ ಎನ್ನ ಮನಸಿನಲ್ಲಿ ಬಹಳ ಘಾಸಿಪಟ್ಟೆನೊ-ದಾಶರಥಿ 1 ಭಕುತಿಯಿಲ್ಲವೊ ಅದರ ಹೊರತು-ಮುಕುತಿಯಿಲ್ಲವೊ ಯುಕುತಿಯಿಂದಲಿ ವಲಿವನಲ್ಲವೊ- ಮುಕುತಿದಾಯಕ ನಿನ್ನ ಕಾಣದೆ ಭಕುತಿಗೋಸುಗ ಪರರ ತುತಿಸಿ, ಕಕುಲಾತಿಯಿಂದಲೆನ್ನ- ಶಕುತಿಯೆಲ್ಲ ನಷ್ಟವಾಯಿತು 2 ಪೊರೆಯದಿರುವರೆ ಕರುಣಾಳುಯೆಂಬ-ಬಿರುದ ಬಿಡುವರೆ ಹರಿಯೆ ಯೆನ್ನ ಮರೆತು ಬಿಡುವರೆ- ಕರಿಯು ಹರಿಯೇ ಎಂದು ಕರೆಯೆ ಸಿರಿಗೆ ಪೇಳದೆ ಭರದಿ ಬಂದು, ಪೊರೆದೆಯೆಂಬ ವಾರ್ತೆಕೇಳಿ -ಮರೆಯ ಹೊಕ್ಕೆನೊ ವಿಜಯವಿಠ್ಠಲ 3
--------------
ವಿಜಯದಾಸ
ದೇವರಾಗಬಾರದೇನೆಲೇ ದೆವ್ವಿನಂಥ....... ದೇವರಾಗಬಾರದೇನೆಲೇ ಪ ದೇವರಾಗಬಾರದೇಕೋದೇವನ ಪಾದವನಂಬಿ ಕಾವುಮೀರಿ ಹೋದಮೇಲೆ ಬಾಯಬಿಟ್ಟರೆ ಬರುವುದೇನೆಲೆ ಅ.ಪ ತಂದ ಬುತ್ತಿ ಚೆನ್ನಾಗುಣ್ಣೆಲೆ ನೀನದನು ಒಲ್ಲೆ ನೆಂದರೆ ಬಿಟ್ಟ್ಹೋಗ್ವುದೇನೆಲೆ ಹೇ ಪಾಪಿ ನೀನು ಬಂದಹಾದಿ ನೋಡಿಕೊಳ್ಳೆಲೆ ಮುಂದಿದರಿಯೆಲೆ ಬಿಂದುಮಾತ್ರಸುಖಕೆ ಮೋಹಿಸಿ ಪರ್ವತಾಕಾರ ಪಾಪಹೊತ್ತು ಬಂಧಕ್ಕೀಡಾಗುವುದಿದೇನೆಲೆ 1 ನಾಶನಾಗಿ ಹೋಗುತಾದೆಲೇ ಈ ಜಗವು ಒಂದಿನ ಆಸೆಯೆಂಬ ಕುಳಿ ಧುಮುಕ ಬೇಡೆಲೆ ಮಹನೀತಿವಿಡಿದು ನಾಶವಾಗದಪದವಿ ಗಳಿಸೆಲೇ ಸೋಸಿನೋಡೆಲೆ ಮೋಸಮರವೆಯಿಂ ನಾಶವಾಗದೆ ಹೇಸಿಸಂಸಾರ ನಾಮ ಭಜಿಸಿ 2 ಉಟ್ಟ ಸೀರೆಬಿಟ್ಟು ಹೋಗಿದ್ದ್ಯಂತೆ ಹೇ ಹುಚ್ಚು....... ಎಷ್ಟೋಸಾರಿ ಹುಟ್ಟ್ಹುಟ್ಟಿದರಂತೆ ಈ ಕಾಯಧರಿಸಿ ಬಿಟ್ಟುಹೋಗೇದಸ್ತಿ ಪರ್ವತ್ಹೋಲ್ವಂತೆ ಕೆಟ್ಟು ಬಿದ್ದೈತೆ ದುಷ್ಟಭ್ರಷ್ಟತೆಗಳನ್ನು ಬಿಟ್ಟು ಶಿಷ್ಟಸಂಗಕೆ ಮನವಗೊಟ್ಟು ಸೃಷ್ಟಿ ಗೀರೇಳು ಸೂತ್ರನಾದ ದಿಟ್ಟ ಶ್ರೀರಾಮನಡಿಗೆ ಪೊಂದಿ 3
--------------
ರಾಮದಾಸರು
ದೈವ ಭಕ್ತಿ ಸಂಸಾರದೊಳಿಲ್ಲ ಪ ಜೀವಗಭಿಮಾನವು ಬಿಡದಲ್ಲ ಅ.ಪ ವನಜಲೋಚನನ ಅರ್ಚನೆಗೆ ಆಲಸ್ಯ 1 ದಾನಕ್ಕೆ ದಾರಿದ್ರ್ಯ ತನಗೋಸುಗ ಸಾಲ ಮಾನವ ಜನಕೆ 2 ಮಕ್ಕಳ ಮದುವೆಗೆ ರೊಕ್ಕಸಾವಿರ ಹೊನ್ನು ಪಕ್ಕಿವಾಹನಗೆ ದೊರೆಯದೊಂದು ಕಾಸು 3 ಮತ್ತೆ ತನ್ನ ಹೆಂಡತಿಗೆ ಹತ್ತುವರಹದ ಸೀರೆ ಮುತ್ತೈದೆಗೀವರೆ ಮೂರಾಣೆಯ ಕುಬಸ 4 ಮದುವೆ ಮುಂಜಿಗೆ ಸಾಲ ಮಾಡದಿದ್ದರೆ ಹ್ಯಾಂಗೆ ಬುಧರು ಯಾಚಿಸಿದರೆಯಿಲ್ಲ ಎಂಬುವುದೇ? 5 ಎಷ್ಟು ಬಂದರು ಸಂಸಾರಕ್ಕೆ ಸಾಲದು ಭ್ರಷ್ಟ ಯಾಚಕರಿಗೇತಕೆ ಕೊಡಬೇಕು 6 ಸತಿಸುತನು ನಾವು ಸಲಹಿದರೆ ಸಾಕು ಅತಿಶಯದಾನ ಧರ್ಮಂಗಳು ಬೇಡ 7 ದಾಕ್ಷಿಣ್ಯಗಾರರಿಗೆ ಭಕ್ಷ್ಯ ಭೋಜ್ಯಗಳ ಊಟ ಕುಕ್ಷಿಂಭರರು ಕೇಳೆ ಭಕ್ಷ್ಯವೂ ಇಲ್ಲ 8 ಶ್ರೀನಿಧಿ ಗುರುರಾಮ ವಿಠಲ ವಲಿವನೆ? 9
--------------
ಗುರುರಾಮವಿಠಲ
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧ್ರುವತಾಳ ಹಿಂದಿನ ಜನ್ಮಜನ್ಮಾಂತರದಿ ಮಾಡಿದಘವ ನಿವಾರಿಸುವರು ನಿನ್ನ ದಾಸರು ದುರಿತ ದುರ್ಜಯ ದುಃಖವ ದೂರ ಮಾಡುವರು ನಿನ್ನ ದಾಸರು ಮುಂದಣ ಅಪಾರ ಆನಂದ ಸುಖವ ಅನವರತ ಈವರು ನಿನ್ನ ದಾಸರು ಯೆಂದು ಇಲ್ಲದಿರೆ ಬ್ಯಾರೆಗತಿಯುಂಟೆ ನಿನ್ನನರಿವ ಬಗೆ ಮತ್ತುಂಟೆ ಎಲೆದೇವ ನಂದನಂದನ ನಿನ್ನವರೆ ಜೀವನ ಅಚಲಾನಂದವಿಠಲರೇಯ ಬ್ಯಾರೆಗತಿ ಮತ್ತುಂಟೆ 1 ಮಠ್ಯತಾಳ ಭೂತದಯಾಪರ ನರನಾಥ ದೇವತೆಯೆಂಬರು ಭೂತವಿರೋಧ ಮಾಡಿ ಕೈಯ್ಯಾತು ಬೇಡುವ ದೈವವ ಸಾತ್ವಿಕವೆಂದು ಬಗೆವರು ಜನರು ಈ ರೀತಿಯೇನೆಂಬೆ ಅಜಾತ ಸಕಲದೇವರ ದಾತನೆ ಅಚಲಾನಂದವಿಠಲ ನೀನಿರೆ ಸಾತ್ವಿಕವೆಂದು ಅನ್ಯದೈವವ ಈ ಭೂತಳದ ಜನರು ಬಗೆವರು ಪ್ರತಿದಿನ 2 ತ್ರಿಪುಟತಾಳ ಮಾನವನೆ ಕೇಳು ಕಬ್ಬಿಣ ಸೋಸಿ ಕಾಸಿ ಬಡಿಯಲು ತಾನು ಪರುಷ ಸೋಕದೆ ಸುವರ್ಣ ಅಪ್ಪುದೇ ಅನಾದಿ ಅವಿದ್ಯ ತಾಪದಿಂದ ಬೆಂದು ತಾನು ನೀರೊಳು ಮಿಂದರೇ ಹೋಹುದೇನೊ ಅನಾದಿದೈವ ಅಚಲಾನಂದವಿಠಲನ ಧ್ಯಾನಮಾಳ್ಪರ ಪಾದಪರುಷ ಸೋಕದನಕ 3 ಅಟ್ಟತಾಳ ಎನ್ನ ಹಳಿಯಲಿ ಉಗುಳಲಿ ಬಂಧುಗಳೆನ್ನ ಮನ ರಂಗ ನಿನ್ನನೆ ನೆಚ್ಚಿಹ್ಯದೆನ್ನಮನ ಕೃಷ್ಣ ನಿನ್ನನೆ ನಂಬಿಹ್ಯದೆನ್ನ ಮನ ಅಚಲಾನಂದವಿಠಲರೇಯ ನಿನ್ನವರೊಲುಮೆಯ ಸಾರಿತೆನ್ನ ಮನ 4 ಆದಿತಾಳ ಹಲವು ಮಾತೇನು ಹಲಧರನನುಜನ ಚೆಲುವಿಕೆಯನೆ ಕಂಡು ಮನಸೋತೆನವ್ವ ಕೆಲಬಲದಾ ಕುಲದವರೆನ್ನ ಹಳಿಯಲಿ ಚಲಿಸದು ಚಿತ್ತ ಚಂಚಲವಾಗದೆನ್ನ ಮನ ಕೆಲಚಿತಿ ವೆಂಣೆಲ್ಲ (?) ತಾನೊಲಿವಂತೆ ಮಾಡಿದ ನಿಲುಕುವನಚಲಾನಂದವಿಠಲರೇಯ ಕ್ಯಲಬಲದ ಕುಲದವರೆನ್ನ ಹಳಿಯಲಿ 5 ಜತೆ ಬೆಂದ ಸಂಸಾರದಿ ಬಂದು ಬಂದು ಹೋದೆನೊ
--------------
ಅಚಲಾನಂದದಾಸ