ಒಟ್ಟು 341 ಕಡೆಗಳಲ್ಲಿ , 75 ದಾಸರು , 317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ನೀನೆ ಧೊರೀ ಧೊರೀ ಪ ಸಂಕಟವೆಲ್ಲವ ಪರಿಹರಿಸುವಂಥ ಅ.ಪ. ಎತ್ತಿನ ಪೆಸರುಳ್ಳ ಮತ್ತ ರಕ್ಕಸನ್ನ ಕುತ್ತಿಗೆ ಕೊಡಲುತ್ತಮ ಪದವಿತ್ತೆ 1 ಅಂಜನೆಯೆಂಬೊ ಮಂಜುಕಿಸಾಲಿಯ [?] ಅಂಜದೆ ತಪಿಸಲು ಸಂಜೀವನವಿತ್ತೆ2 ಸಾಸಿರ ಮುಖವುಳ್ಳ ಶೇಷನಹಂಕಾರ ಸ್ವಸನನ ಕೈಯಿಂದ ನಾಶಮಾಡಿಸಿದಂಥ3 ಮಾಧವ ಮಾದಿಗ ಹಾದಿಯ ಮೆಟ್ಟಲು ಮಾಧವ ಅವನನ್ನು 4 ಶ್ರೀದವಿಠಲ ನಿನ್ನ ಪಾದಾಶ್ರಿತರ ಮೋದದಿ ಸಲಹೊ ಆದರಿಸೆನ್ನನು 5
--------------
ಶ್ರೀದವಿಠಲರು
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ವ್ಯಾಸಾರ್ಯಾ - ವ್ಯಾಸಾರ್ಯ ಪ ದೈಶಿಕಾರ್ಯ ಬ್ರಹ್ಮಣ್ಯರ ಕರಜನೆ ಅ.ಪ. ಭವ ಪರಿಹರಿಸುವೆ 1 ಭೀಕರವೆನೆ ನೃಪ | ಗಾಕುಹುಯೋಗವತಾಕುವ ಮುನ್ನವೆ | ನೀ ಕಳೆದೆಯೊ ಗುರು 2 ಪನ್ನಗ ನಗಪ ಪ್ರಪನ್ನ ಭಜಕ ನಿನ | ಗಿನ್ನುಂಟೇ ಸಮ 3 ಮಂದ ಜನರೋದ್ಧರ | ವೆಂದು ರಚಿಸಿದೇಚಂದ್ರಿಕಾದಿ ತ್ರಯ | ಸುಂದರ ಗ್ರಂಥ 4 ವ್ಯಾಸ ತ್ರಯಾಭಿಧ | ಲೇಸು ಗ್ರಂಥ ಸಂಕಾಶಿಸೆ ಬಹು ವಿಧ | ಆಸುರಿ ಮತ ಹನ5 ದಾಸ ಪಂಥ ಉಪ | ದೇಶಿಸೆ ಶ್ರೀನಿವಾಸ ನಾಯಕರ | ದಾಸರೆಂದೆನಿಸಿದೆ 6 ವಾಸವ ನಾಮಕ | ದಾಸರಿಂದ ದಿಗ್ದೇಶ ಪ್ರಸರ ಮಹಿ | ದಾಸನ ನಾಮವು 7 ಶ್ವಸನನ ಮತ ವಿ | ದ್ವೇಷಿವಾದ ಹರದೇಶ ದೇಶ ಹನು | ಮೇಶ ಪ್ರತಿಷ್ಠಿತ 8 ಸಾರ್ವ ಭೌಮ ಗುರು | ಗೋವಿಂದ ವಿಠಲನತೋರ್ವುದೆನ್ನ ಹೃದ | ಯಾ ಕಾಶದಲಿ 9
--------------
ಗುರುಗೋವಿಂದವಿಠಲರು
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ಶರಣು ಪ ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ. ವಾಸವಾದ್ಯಮರನುತ ವನಜಸಂಭವನ ಸುತ ನೀ ಸಲಹೊ ಕೈಲಾಸವಾಸ ಈಶ ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1 ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ ಶೋಕಕೊಡುವುದು ದೈತ್ಯಜನಕೆ ನಿತ್ಯ ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2 ಪವಮಾನತನಯ ನಿನ್ನವರಲ್ಲಿ ಕೊಡು ವಿನಯ ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ ಪವನ ದ್ವಿತಿಯರೂಪ ಸತತ ಎನ್ನಯಪಾಪ ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3 ಶೇಷನಂದನ ಶೇಷಭೂಷಣನೆ ನಿಶೇಷ ದೋಷರಹಿತನ ತೋರು ಕರುಣವನು ಬೀರು ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ ಶೋಷಿಸು ಭವಾಮಯವ ಬೇಡುವೆನು ದಯವ4 ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ ದುರ್ಗುಣಗಳೆಣಿಸದಲೆ ಜಗದೆ ಮೇಲೆ ನಿರ್ಗತಾಶನ ಜಗನ್ನಾಥ ವಿಠಲನ ಸ ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
--------------
ಜಗನ್ನಾಥದಾಸರು
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶಾಂತಿನಿಲಯ ಸುಖದ ಪ ಭ್ರಾಂತನಾದೆ ಪರಿಭವದ ತಂತು ತಿಳಿಯದಕಟ ಶ್ರೀ ಕಾಂತ ಕಾಯೊ ಪಿಡಿದು ಕರು ಣಾಂತರಂಗ ಕುಸುಮನಾಭ 1 ಉದಧಿಯಂದದುಕ್ಕಿಬರುವ ಅಧಮನಕೆ ಕಲ್ಪನೆಗಳು ಒದಗಿ ವಿಧ ವಿಧ ನೋಯಿಪು ದಿದನು ಬೇಗ ಪರಿಹರಿಸು 2 ನಂಬಿಭಜಿಪ ಭಕುತಜನರಿ ಗಿಂಬು ನೀನೆ ಅಂಬುಜಾಕ್ಷ ಇಂಬುಗೊಟ್ಟು ಸಲಹು ಸದಾ 3
--------------
ರಾಮದಾಸರು
ಶೂರತನವೇನೊ ಬಲು ನಾರಿ ಜನರು ನೀರೊಳಿರಲು ಪ ಸೀರೆಗಳ ಅಪಹರಿಸುತ ಬಲು ಶೌರಿ ಅ.ಪ ಸಾರಸವದನನೆ ಕಾರಣವಿಲ್ಲದೆ ನಾರಿಯರೆಮ್ಮನು ಸೇರಿ ಬಹಳ ಸರಸಗಳನ್ನು ತೋರಿ ಮಾನಸೂರೆಗೆಯ್ಯುವುದು ಭಾರಿ ನಡತೆ ಎಂದರಿತಿರುವಿಯೇನೊ 1 ಮುರಹರನೆ ಈ ಪರಿಯಲಿರುವ ಎಮ್ಮ ಕರಗಳ ಮುಗಿವುದು ತರವೇ ಬಹಳ ಮನ ಜರಿಯುವುದು ಸರಿಯೇ ಇಂತು ಕೋರುತಲಿರುವುದು ಮುರಳೀಧರನೆ ವಸನಗಳನು ಕೊಡೆಲೊ 2 ಬಿಸಜನಯನ ಇದು ಹೊಸ ಪರಿಯಲ್ಲವೆ ರಸಿಕ ಜನರು ಪರಿಹಾಸ ಮಾಡಿ ಮುಸಿ ಮುಸಿ ನಗುವರು ಶ್ರೀಶ ನಿನಗೆ ಪಸುಳೆ ಜನರ ಸಹ ವಾಸವೇ ಪ್ರಸನ್ನವದನ ಕೃಷ್ಣ 3
--------------
ವಿದ್ಯಾಪ್ರಸನ್ನತೀರ್ಥರು
ಶೂರ್ಪಾಲಯ ಕ್ಷೇತ್ರದ ನರಹರಿ ಸ್ತೋತ್ರ (ಕೃಷ್ಣಾತೀರ) ನರಹರೀ ಪಾಹಿ | ಮರನೂರ ನರಹರೀ ಪ ಪರಿ ಭವಣೆಯ | ಪರಿಹರಿಸುತ ಮುನ್ನವರ ವೈರಾಗ್ಯವನಿತ್ತು | ಕರುಣೀಸೊ ಸಂಪನ್ನ ಅ.ಪ. ಸತಿ | ಕೃಷ್ಣೆಗಕ್ಷಯ ವಸನಸೃಷ್ಟಿಗಿತ್ತವ ಹರಿ | ಕೃಷ್ಣನೆ ಸಲಹೆನ್ನ 1 ಬುದ್ಧ | ಆಘಹರ ಕಲ್ಕಿಯೆ 2 ಜನಿತ ಸುಖ ಜಲ ಕಣ್ಣ | ಬಿಂದುಯುಗಳವು ಬೀಳೆ ಪಾವನ್ನ | ವೃಕ್ಷಯುಗಳೋದಯವಾಯ್ತು ಮುನ್ನ | ಆಹಅಗಣಿತ ಮಹಿಮ | ಅಶ್ವತ್ಥ ಸನ್ನಿಹಿತನೆನಿಗಮ ವೇದ್ಯನೆ ಸರ್ವ | ಜಗದೀಶ ಸಲಹೆನ್ನ 3 ಶೂಲಿಯಿಂದೊಡಗೂಡಿ ರಾಮ | ಚಂದ್ರಪಾಲಿಸುತಿಹ ಸಾರ್ವಭೌಮ | ಸುಜನಾಳಿ ಪಾಪಾರಣ್ಯ ಧೂಮ | ಕೇತುಓಲೈಪ ಜನರಘ ಭಸ್ಮ | ಆಹಲೀಲೆಯಿಂದಲಿ ಗೈವ | ಆಲಯವಿದು ಶೂರಪಾಲೀಯ ಕ್ಷೇತ್ರದಿ | ಶ್ರೀಲೋಲ ನರಹರಿ 4 ನಡು ನದಿಯೋಳು ಕೋಟೇಶ | ಮತ್ತೆಪಡುವಲಯದೋಳು ಕಂಕೇಶ | ಇನ್ನುಬಡಗ ನರಹರಿ ಬಳಿ ಬೈಲೇಶ | ಆಹರೊಡಗೂಡಿ ನೆಲಸೀಹ | ಕಡು ಮುದ್ದು ರೂಪದಿದೃಢ ಭಕ್ತನೆನಿಸೀಹ | ಮೃಡನಿಂದ ಪೂಜಿತ 5 ಅಜಪಿತ ಪದಜಳು ಎನಿಪ | ಮತ್ತೆಅಜಾಂಡ ಕಟಹದಿಂ ಬರ್ಪ | ಇನ್ನುಅಜಸುತ ಶಿರದಲಿ ಧರಿಪ | ಸಗರಜರ ಪಾಪವನ್ನು ಹರಿಪ | ಆಹಮಝಬಾಪು ಗಂಗೆಯ | ನಿಜ ಪಾಪ ಕಳೆಯಲುಅಜಸುತ ನಾಜ್ಞೆಯಿಂ | ಬಿಜಯಿಸಿದಳು ಇಲ್ಲಿ 6 ಪರರಘಗಳ ಹೊತ್ತು ಗಂಗೆ | ಬಂದುಹರ ಪೇಳಿದಂಥ ದ್ವಿಜಂಗೆ | ಶೂರ್ಪವರ ವಾಯು ನ್ವಿತ್ತಳವಂಗೆ | ಪಾಪಹೊರದೂಡಿದಳು ಮಂಗಳಾಂಗೆ | ಆಹಗುರುಕನ್ಯಾಗತನಾಗೆ | ಸರಿದ್ವರ ಕೃಷ್ಣೇಲಿಬೆರೆಯುತ ಸುರ ನದಿ | ಹರಿಪಳು ಜನರಘ 7 ಮಧ್ವಾರ್ಯ ಸಂತತಿ ಜಾತ | ಗುರುವಿದ್ಯಾಧೀಶರು ಇಲ್ಲಿ ಖ್ಯಾತ | ದ್ವಾದಶಬ್ದ ಪರಿಯಂತನುಷ್ಠಾತ | ಪ್ರಾಣಮುದ್ದು ಪ್ರತಿಮೆ ಪ್ರತಿಷ್ಠೀತ | ಆಹಶುದ್ಧ ದ್ವಾದಶಿ ದಿನ | ಸದ್ವೈಷ್ಣ್ವ ಲಕ್ಷರ್ಗೆವಿಧ್ಯುಕ್ತ ಭೋಜನ | ಶ್ರದ್ಧೆಯಿಂದಲಿ ಗೈದರ್ 8 ಪರ ತತ್ವವೆನಿಸಿ | ಸ್ತುತಿಸ್ಕಂದೋಕ್ತ ಮಹಿಮೆಯ ಸ್ಮರಿಸಿ | ಆಹಇಂದುಪ ಗುರು ಗೋ | ವಿಂದ ವಿಠಲನಹೊಂದಿ ಭಜಿಪರ್ಗ | ಬಂಧನವೆಲ್ಲಿಹದೋ 9
--------------
ಗುರುಗೋವಿಂದವಿಠಲರು
ಶೇಷನುತ ಗೋಪ ವಿಠ್ಠಲ | ನೀ ಸಲಹೊ ಇವಳಾ ಪ ವಾಸದೇವನೆ ನಿನ್ನ | ಪ್ರಾರ್ಥಿಸುವೆ ಹರಿಯೇ ಅ.ಪ. ಕನ್ಯೆ ಬಹು ಭಾವುಕಳು | ನಿನ್ನೆಯಿಂ ಪ್ರಾರ್ಥಿಪಳುಘನ್ನ ಹರಿದಾಸ್ಯದಲಿ | ಮುನ್ನಮನವಿರಿಸೀ |ಇನ್ನು ತೈಜಸರೂಪ | ಚೆನ್ನ ಶೇಷನು ಆಗೆಮಾನ್ಯರೂ ಪರಮಗುರೂ | ವನ್ನೆ ಕಂಡಿಹಳೋ 1 ಗುರುತರೂಪಿ ತೈಜಸನು | ವ್ಯಾಸಪೀಠದ ಮುಂದೆಇರುತ ಗುರು ರಾಜರ | ಮಹಿಮೆ ಪೇಳುತಲೀ |ಹರಿಸುತಲಿ ಕನ್ಯೆಗೇ | ಫಲಪುಷ್ಪ ತಾಂಬೂಲದೊರಕಿಸಿಹ ಅದರಿಂದೆ | ಉಪದೇಶವಿತ್ತೇ 2 ಪತಿಸೇವೆ ದೊರಕಿಸುತ | ಕೃತ ಕಾರ್ಯಳೆಂದೆನಿಸೊಹಿತವಹಿತವೆರಡರಲಿ | ರತಿ ಇಡದೆ ಉಂಬಾ |ಮತಿಯನ್ನೇ ಕರುಣಿಸುತಾ | ಮತಿಮತಾಂವರರಂಘ್ರಿಶತಪತ್ರ ಸೇವೆಯಲಿ | ರತಳು ಎಂದೆನಿಸೊ 3 ಭವ | ಸಾಗರದ ಬತ್ತಿಪುದುಮರುತಾಂತರಾತ್ಮ ಹರಿ | ವೇಣುಗೋಪಾಲಾ 4 ಭಾವ ಮೈದುನಗೊಲಿದ | ಶ್ರೀವರನೆ ಮೈದೋರಿಭಾವುಕಳೆ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ |ಸಾರ್ವಭೌಮನೆ ಹರಿಯೆ | ಕೋವಿದೋತ್ತಂಸ ಗುರುಗೋವಿಂದ ವಿಠ್ಠಲನೆ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಬದರಿ ಬದರೀಯಾ | ಯಾತ್ರೆಯಾ ಮಾಡಿ | ಬದರೀಯಾ ಪ ಬದರಿಯ ಯಾತ್ರೆಯ ಮಾಡಿ | ನಿಮ್ಮಮುದ ಶಾಶ್ವತವನ್ನೆ ಬೇಡಿ | ಆಹಸದಮಲ ದೇಹದಾಲಯವೆ | ಸದಾಶ್ರಿತ್ಹಿಮಾಲಯಹೃದಯ ಮಧ್ಯದಲೀಹ | ಬದರೀನಾಥನ ನೋಡೀ ಅ.ಪ. ಶ್ವೇತ | ದ್ವೀಪಾದ್ಯಾಲಯಗಳಸುಪದ ತೀರ್ಥವು ಸ | ರಿತ್ಪ್ರವರಾದಿ ಚಿಂತಿಸಿ 1 ತನುಮನ ಧನಗಳಾಶೆಯ | ತೊರೆದುಮನ ಆದಿಕರಣಗಳ್ಹರಿಯ | ಪಾದವನಜದಲ್ಲಿಡೆ ಅದು ಅಭಯ | ಸುದತಿಮಣಿ ಸಹ ಪೋಗೋದೆ ಹೃದಯ | ಆಹವನ ಭುವನ ಚರಿಸಿ ಸತ್ಪಾ | ವನ ಕ್ಷೇತ್ರಗಳಮಣಿದು ಸರ್ವತೀರ್ಥ | ಸ್ನಾನಾದಿ ಗೈಯುತ 2 ಸಿಂಧು ಮಾಧವ ಸಿರಿ ಕೃಷ್ಣನ ನೆನೆದು 3 ಶೌರಿ ಪಾಂಡುರಂಗರಾರಾಧನೆಯ ಗೈದು | ತೋರುತ ಮುದವನು 4 ಶಾರದ ನಾಡೀಲಿ ಗಂಡಕೀ ಮತ್ತೆಚಾರು ಲಂಬುಶಿಖಿ ಗೋಮತಿ | ಆ ಗಾಂ-ಧಾರಿಯೊಳಗೆ ಮಾರುಧೃತಿ | ನೆನೆಚಾರು ಶಂಕಿನಿ ನಾಡಿ ತಪತೀ | ಆಹವೀರ ರಾಮಾ ಮಧು | ವೈರಿಯು ಶ್ರೀರಂಗನಾರಾಯಣನ ರೂಪ | ಸಾರುತ ತಪತೀಲಿ 5 ಸಿರಿ ಮಾಧವನ ನೆನೆಯೆಪರಿಹರಿಸುತ ಪಾಪ ಸರುವಾಭೀಷ್ಟವ ನೀವ 6 ಸ್ತವರನದಲೀಪರಿ ಮಿಂದು | ದೇಹಪವಿತರವಾಯಿತು ಎಂದು | ಕ್ಷೇತ್ರಸರ್ವವ ಸ್ತುತಿಸುತ ಮುಂದೆ | ಪೋಗೆಭವರಹಿತ ಹರಿದ್ವಾರ ಅಂದು | ಆಹಭುವನ ಪಾವನ ಗಂಗಾ | ಪ್ರವಹಮೀಯುತ ಮತ್ತೆಭವಹರ ಹರಿನಾಮ | ಶ್ರವಣ ಮನನಗೈದೂ 7 ಸೂರ್ಯ ಪ್ರಭೆ ನೇತ್ರಎಸೆವೊ ಲಲಾಟದಿ | ಹೃದಯ ದೋಳ್ವಿಕಾಲ 8 ಹೇಮ ಧಾಮ | ಕಂಡುನೀಗೊ ನೀ ದೇಹದ ಶ್ರಮ | ಓಡಿಪಂಚ ರೂಪಗಳನೆ ತಂದು | ಆಹಪಂಚ ನಾಡಿಯ ಮಧ್ಯ | ಮಿಂಚಿಪ ಗೃಹದಿ ವಿ-ರಂಚಿ ಪಿತನ ನೋಡಿ | ಸಂಚಿತಾದಿಯ ಕಳೆ 9 ಕಮಲ ಮಧ್ಯ | ಮುದದಲರ್ಚಿಸುತಲಿ 10
--------------
ಗುರುಗೋವಿಂದವಿಠಲರು
ಶ್ರೀ ರಾಘವೇಂದ್ರರು ಯೋಗಿ ಕುಲವರ ಮಕುಟ ಗುರು ಶ್ರೀರಾಘವೇಂದ್ರನ ಭಜಿಸಿರೋ ಪ ಮೋದತೀರ್ಥ ಪಯೋಧಿ ಚಂದಿರಸಾಧುಜನ ಸತ್ಕುಮುದಕೇಐದು ಆನನವಾಗಿಹನು ದು ರ್ವಾದಿ ಗಜಸಮುದಾಯರೇ 1 ದೂಷಿಸುವ ಜನರುಗಳ ಗರ್ವ ಅಶೇಷ ಪರಿಹಾರಗೈಸುವಾ 2 ದಿನಪನಂದದಿ ಕಾಂತಿಬೃಂದಾ ಬನದೊಳಿದ್ದು ಪ್ರಕಾಶವಾಅಣುಗರಿಗೆ ಸಂತೃಪ್ತಿ ಸುಖವನುಅನವರತ ಪೂರೈಸುವಾ 3 ವ್ಯಾಕ್ತರಾಗಿಹ ಅಖಿಳರಿಗೆ ಫಲಪ್ರಾಪ್ತಿಗೋಸುಗ ಚರಿಸುವಾ 4 ಆಪ್ತರಿಲ್ಲದೆ ಈತನೇಯೆನಗಾಪ್ತನನುದಿನವಾಗುವಾ 5 ಕೋಲ ತನಯೆಯ ತೀರದಲಿ ಹೊ-ನ್ನಾಳಿಯಲಿ ವಿಹರಿಸುವಾಶೀಲ ಗೋಪತಿವಿಠಲನ ಕೃಪೆಗಾಲಯನು ಯೆಂದೆನಿಸುವಾ6
--------------
ಗೋಪತಿವಿಠಲರು