ಒಟ್ಟು 4142 ಕಡೆಗಳಲ್ಲಿ , 122 ದಾಸರು , 2736 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಮಹಿಮೆಯನಾರು ಬಲ್ಲರುಚಿನ್ಮಯಾತ್ಮಕನಂತರೂಪನೆಮುನ್ನೆ ಕಮಲಜ ನಿನ್ನ ನಾಭಿಯೊಳುನ್ನತೋನ್ನತದಿಘನ್ನ ತಪವಂಗೈದು ಕಾಣನುಇನ್ನು ಶ್ರುತಿಸ್ಮøತಿ ಅರಸಿ ಅರಿಯವುಪನ್ನಗೇಂದ್ರನು ಪೊಗಳಲರಿಯ ಪ್ರಸನ್ವೆಂಕಟನೆ 1ಹರಿಯೆ ತ್ರಿದಶರ ದೊರೆಯೆ ಭಕುತರಸಿರಿಯೆ ದಿತಿಜರರಿಯೆಅನವರತಮರೆಯದಿಹ ಅಜಹರಯತೀಶ್ವರರರಿಯರಿನ್ನುಳಿದಇರವು ಮನುಜ ನಾನರಿಯಲಾಪೆನೆಪೊರೆಯೊ ಬಿಡದೆ ಪ್ರಸನ್ವೆಂಕಟಗಿರಿಯರಸ ಜಗದೆರೆಯ ಸುರವರವರಿಯ ಮಾಸಹನೆ 2ನಾಗರಿಪುಗಮನಾಗಭೃತಶುಭನಾಗಪಾಕ್ಷಘನಾಗಮನಿಗಮನಾಗಪತಿ ವದನೈಕಸ್ತುತ ಸುಗುಣ ಗುಣಾರ್ಣವನೆನಾಗಹರಸಖ ನಾಗಘನಮಣಿನಾಗಗ್ರಸಿತಭಾ ನಾಗದ್ವಿಟಮುಖನಾಗಧರನುತ ನಾಗಮದಹ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನಿನ್ನ ಸೇರಿದೆ ಮಹಾಲಿಂಗ ಎನ-ಗಿನ್ಯಾರುಗತಿಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗಪ.ನಿನ್ನಂತೆ ಕೊಡುವ ಉದಾರ ತ್ರಿಭು-ವನ್ನದೊಳಿಲ್ಲದಕ್ಯಾವ ವಿಚಾರಮುನ್ನ ಮಾರ್ಕಾಂಡೇಯ ಮುನಿಯ ಭಯವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1ಸರ್ವಾಪರಾಧವ ಕ್ಷಮಿಸು ಮಹಾ-ಗರ್ವಿತರಾಶ್ರಯಕ್ಕೊಲ್ಲದು ಮನಸುಶರ್ವರೀಶಭೂಷ ನಿನ್ನ ಹೊರ-ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2ಅಂತರಂಗದ ದಯದಿಂದ ಯುದ್ಧ-ಮಂ ತೊಡಗಿದೆ ಪಾರ್ಥನೊಳತಿಚಂದಪಂಥದ ನೆಲೆಯನ್ನು ತಿಳಿದು ಸರ್ವ-ಮಂತ್ರಾಸ್ತ್ರಗಳನಿತ್ತೆಯೊ ಭಕ್ತಗೊಲಿದುದೊಡ್ಡದು ನಿನ್ನ ಬಿರುದು 3ಸಿದ್ಧಿಸು ಸರ್ವಸಂಕಲ್ಪ ಅಡ್ಡ-ಬಿದ್ದು ಬೇಡುವೆ ನಿನಗ್ಯಾವದನಲ್ಪಬುದ್ಧಿಯ ನಿರ್ಮಲಮಾಡು ನಿನ್ನಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು 4ಅಂಜಿಕೆ ಬಿಡಿಸಯ್ಯ ಹರನೆ ಪಾ-ವಂಜಾಖ್ಯವರಸುಕ್ಷೇತ್ರಮಂದಿರನೆಸಂಜೀವನ ತ್ರಿಯಂಬಕನೆ ನವ-ಕಂಜಾಕ್ಷ ಲಕ್ಷುಮಿನಾರಾಯಣಸಖನೆಸಲಹೊ ಪಂಚಮುಖನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಿನ್ಹೊರತು ಪೊರೆವರಲಿಲ್ಲಹರಿಮುರಾರಿಪ.ಪೂರ್ಣಾತ್ಪೂರ್ಣ ಕ್ಷೀರಾರ್ಣವ ಶಯನ ವ-ರೇಣ್ಯ ಸ್ವತಂತ್ರವಿಹಾರಿ 1ಜೀವನಿಚಯಕೃತ ಸೇವೆಯ ಕೈಗೊಂಡುಪಾವನಗೈವೆಖರಾರಿ2ತಾಪತ್ರಯಹರ ಗೋಪಾಲ ವಿಠಲಆಪನ್ನಭಯನಿವಾರಿ 3ಪ್ರಾಣನಾಥ ಸರ್ವ ಪ್ರಾಣನಿಯಾಮಕಪ್ರಾಣದಾನಂತಾವತಾರಿ 4ಲಕ್ಷ್ಮೀನಾರಾಯಣ ಬ್ರಹ್ಮಾದಿ ವಿ-ಲಕ್ಷಣ ರಕ್ಷಣಕಾರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಿರ್ಭಯವಾಗಲಿಯೋಗಿಜಿತಭೋಗಿಪ.ಲಭ್ಯಸುಕೃತವಿರಭ್ಯುದಯವಾಗಿ ಅ.ಪ.ಸತ್ಯಜ್ಞಾನ ಸುವಿರಕ್ತಿ ಹರಿಭಕ್ತಿಚಿತ್ತದೊಳಿದ್ದರೆ ನಿತ್ಯಾಸಕ್ತಿ 1ಹೊದ್ದಿದನಿವನು ಬ್ರಾಹ್ಮಣನು ನಮ್ಮವನುಇದ್ದರೆ ಪುಣ್ಯವು ಶುದ್ಧಾಂತಃಕರಣನು 2ರಕ್ಷಿಸುವದು ನಿನ್ನಭಾರಸರ್ವಾಧಾರಲಕ್ಷ್ಮೀನಾರಾಯಣ ಲಕ್ಷ ನಮಸ್ಕಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೀ ಸಾಹೆಯಾಗು ಯಮಗನುಗಾಲ |ಶೇಷಾದೇವರೆ ರೋಹಿಣಿ ಬಾಲಾ ಪಮೂರುತಿಯಲ್ಲಿ ಪುಟ್ಟಿ | ನಾರಾಯಣನ್ನ ಕೂಡಿ ||ಚಾರುಬದರಿಯಲ್ಲಿ ತೋರುತಿಹನೆ 1ದಶರಥನ ಮಡದಿ | ಬಸುರೀಲಿ ಜನಿಸೀದಿ ||ಕುಸುಮನಾಭನರ್ಚನೆ ಎಸಗಿದಿಯೋ 2ಪ್ರದ್ಯುಮ್ನಪರಿಯಂಕ| ರುದ್ರಾನಲಂಕಾರ ||ಭದ್ರ ಪ್ರದಾಯಕ ಭಕ್ತ ಪೋಷಾ3ನೀಲಾಂಬರವನುಟ್ಟ | ತಾಳಾಂಕಬಿನ್ನಪ||ಲಾಲೀಸೊ ನಿನ್ನವನೆಂದ ನಿಶಾ4ಪ್ರಾಣೇಶ ವಿಠಲನ | ಧ್ಯಾನದೋಳಿರುವಂತೆ ||ನೀನೊಲಿವದು ದೂರು ನೋಡದಲೇ 5
--------------
ಪ್ರಾಣೇಶದಾಸರು
ನೀನಲ್ಲದೆನಗಾರಿಲ್ಲ ಗೋವಿಂದನೀನಲ್ಲದೆ ಇಹಪರವಿಲ್ಲ ಪಪರರ ಬೇಡಿ ಪಂಥವಾಡಿ ಹೋಯಿತಲ್ಲನರರ ಕೊಂಡಾಡಿ ನಾಲಗೆ ಬರಡಾಯಿತಲ್ಲ ||ಪರವಿಲ್ಲ ಇಹವಿಲ್ಲ ನರಜನ್ಮ ಸ್ಥಿರವಲ್ಲನರಗೆ ಪಾಮರಗೆ ಪಾತಕದ ಪಂಜರಗೆ 1ತನುವು ತನ್ನದಲ್ಲ ತನ್ನವರು ತನಗಿಲ್ಲಧನಧಾನ್ಯ ಸಂಪತ್ತು ಅವಗಿರದು ||ತನುವು ಹೋಗಿ ಇನ್ನು ಮಣ್ಣು ಕೂಡುವಾಗತನುಮನಕ್ಕೆ - ಇನ್ನಾರಯ್ಯ ಸ್ವಾಮಿ 2ಮಾತಾಪಿತರು ಗೋತ್ರಜರು ಮೊದಲಾಗಿಪ್ರೀತಿಯಿಂದ ಬಹಳ ಸತಿಸುತರು ||ಕೀರ್ತಿಗೆ ಅವರು ಸ್ವಾರ್ಥಕೆ ಇವರು ಸಂಗಾತಿಗಿನ್ನಾರಯ್ಯಪುರಂದರವಿಠಲ3
--------------
ಪುರಂದರದಾಸರು
ನೀನಾರವ ಪೇಳೆನ್ನ ಕಣ್ಣ ಮುಚ್ಚುವೆ |ಮೌನಗೊಂಡರಿಯದಂತಿಪ್ಪ ಮಗುವೆ ಪಅತಿ ಚೆಲುವಿಗೆ ರತಿಪತಿಪಿತನೊ-ನೀ |ಶ್ರುತಿಸಕಲಾನ್ವುಯ ಸನ್ನುತನೊ ||ಚತುರ್ದಶ ಭುವನವನಾಳಿದನೋ-ನೀ |ಶತತಪ್ಪುಗಳನೆಣಿಸಿದವನೊ?1ವರಗೋಕುಲಕೊಪ್ಪವ ದೊರೆಯೊ-ನೀ |ಕರಿವೈರಿಯ ಮದಪರಿಹಾರಿಯೊ ||ಗಿರಿಯನುದ್ಧರಿಸಿದ ನಖರುಚಿಯೊ-ನೀ |ಮುರದೈತ್ಯನ ಮಡುಹಿದ ಸಿರಿಯೊ? 2ಮಂಗಳ ಶೋಭನ ಮಣಿಖಣಿಯೊ-ನೀ |ಹಿಂಗದೆ ಸ್ತುತಿಪರ ಗತಿದಾನಿಯೊ-ಗೋ-||ಪಾಂಗನೆಯರ ಪ್ರಾಣದ ಧನಿಯೊ-ನೀ |ಸಿಂಗರ ಸೊಬಗಿನ ಶ್ರೀಪತಿಯೊ 3ಆಪತ್ತಿಗೆ ನೆನೆವರ ಗೋಚರನೊ-ನೀ |ಪಾಪಸಂಹಾರ ಪುರುಷೋತ್ತಮನೊ ||ಚಾಪದಿಂದಸುರರ ಗೆಲಿದವನೊ-ಸಾಂ-|ದೀಪನ ಮಗನ ತಂದಿತ್ತವನೊ? 4ಬೆಸಗೊಂಡಳುಗೋಪಿನಸುನಗುತ-ಆಗ |ಯಶೋದೆಗೆ ಚತುರ್ಭುಜ ತೋರಿಸುತ ||ಅಸುರಾರಿಯ ಕಂಡು ಮುದ್ದಿಸುತ ನೀ ||ಶಿಶುವಲ್ಲ ಪುರಂದರವಿಠಲೆನುತ 5
--------------
ಪುರಂದರದಾಸರು
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
--------------
ಪ್ರಸನ್ನವೆಂಕಟದಾಸರು
ನೀನೆ ದಯಾಸಂಪನ್ನನೊ - ಕಾವೇರಿ ರಂಗನೀನೆ ಬ್ರಹ್ಮಾದಿವಂದ್ಯನೊ ಪಬಂಧುಗಳೆಲ್ಲರ ಮುಂದಾ ದ್ರುಪದನನಂದನೆಯೆಳತಂದು ಸೀರೆಯ ಸೆಳೆಯಲು ||ನೊಂದು ಕೃಷ್ಣ ಸಲಹೆಂದರೆಅಕ್ಷಯಕುಂದದಲಿತ್ತ ಮುಕುಂದನು ನೀನೇ 1ನಿಂದಿತ ಕರ್ಮಗಳೊಂದು ಬಿಡದೆ ಬೇ-ಕೆಂದು ಮಾಡಿದನಂದಜಮಿಳನು ||ಕಂದಗೆ ನಾರಗನೆಂದರೆ ಮುಕುತಿಯಕುಂದದಲಿತ್ತ ಮುಕುಂದನು ನೀನೇ 2ಮತ್ತಗಜವನೆಗಳೊತ್ತಿ ಪಿಡಿಯೆ ಬಲುಒತ್ತಿ ರಭಸದಿ ಬಿತ್ತರಿಸಲುಗುಣ||ಭೃತ್ಯವರದ ಶ್ರೀ ಪುರಂದರವಿಠಲಹಸ್ತಿಗೊಲಿದ ಪರವಸ್ತುವು ನೀನೇ 3
--------------
ಪುರಂದರದಾಸರು
ನೀನೇಕೊ ನಿನ್ನ ಹಂಗೇಕೊ - ನಿನ್ನ -ನಾಮದ ಬಲವೆನಗಿದ್ದರೆ ಸಾಕೊ ಪ.ಆ ಮರ ಈ ಮರವೆಂದೆನ್ನುತಿರೆ ರಾಮ - |ನಾಮವೆ ವ್ಯಾಧನ ಮುನಿಪನ ಮಾಡಿತು 1ನಾರಾಯಣೆನ್ನದೆ ನಾರಗನೆನ್ನಲು |ಘೋರಪಾತಕಿಯನು ನಾಮವೆ ಕಾಯ್ದಿತೊ2ತಂದೆ ಪ್ರಹ್ಲಾದನ ಬಾಧೆಯ ಪಡಿಸೆ - ಗೋ |ವಿಂದನೆಂಬ ಸಿರಿನಾಮವೆ ಕಾಯ್ದಿತೊ 3ಉತ್ತರೆಯು ಗರ್ಭದಿ ಸುತ್ತಲಸ್ತ್ರವಿರೆ |ಚಿತ್ತಜಪಿತ ನಿನ್ನ ನಾಮವೆ ಕಾಯ್ದಿತೊ 4ಕರಿಮಕರಿಗೆ ಸಿಲ್ಕಿ ಮೊರೆ ಇಡುತಿರುವಾಗ |ಪರಮಪುರುಷ ಹರಿನಾಮವೆ ಕಾಯ್ದಿತೊ 5ನಾರಿಯನೆಳತಂದು ಸೀರೆ ಸೆಳೆಯುತಿರೆ |ದ್ವಾರಕಾಪತಿ ನಿನ್ನ ನಾಮವೆ ಕಾಯ್ದಿತೊ 6ಹಸುಳೆ ಧ್ರುವರಾಯನು ಅಡವಿಗೆ ಪೋಪಾಗ |ವಸುದೇವಸುತ ನಿನ್ನ ನಾಮವೆ ಕಾಯ್ದಿತೊ 7ನಿನ್ನ ನಾಮಕೆ ಸರಿಯಾವುದ ಕಾಣೆನೊಪನ್ನಗಶಯನ ಶ್ರೀ ಪುರಂದರವಿಠಲ 8
--------------
ಪುರಂದರದಾಸರು
ನೀಲಮೇಘಶ್ಯಾಮರಾಮನಿಖಿಳಲೋಕ ಕ್ಷೇಮಧಾಮ ಪ.ಪಾಲಿಸೊಲಿದು ಹನುಮಪ್ರೇಮಪಾವನಾತ್ಮ ಸೀತಾರಾಮ ಅ.ಪ.ಸತ್ಯಸಂಕಲ್ಪಾನುಸಾರಚಿತ್ತಚಿನ್ಮಯಾತ್ಮ ಶ್ರೀಧರನಿತ್ಯಮುಕ್ತ ಪುಣ್ಯನಾಮಪ್ರತ್ಯಗಾತ್ಮ ಪೂರ್ಣಕಾಮ 1ಕಮಲನಾಭ ರವಿಶತಾಭಸುಮನಸಾರ್ಚಿತಾಂಘ್ರಿಶೋಭಅಮಿತವಿಕ್ರಮ ಸಮರಭೀಮಶಮಲಶಮನ ಸಾರ್ವಭೌಮ 2ಶಾರದೇಂದುಸನ್ನಿಭಾನನಮಾರುತಿಹೃದಯೈಕಸದನಧೀರಲಕ್ಷ್ಮಿನಾರಾಯಣಸೂರಿಜನೋದ್ಧರಣನಿಪುಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನೆನೆ ಮನವೆ ದಾನವಾರಿಯಹಿತಕಾರಿಯಾಶ್ರಿತ ದೊರೆಯ ಪ.ಹೀನ ಪಾಪಾಖ್ಯ ವಿಪಿನದಾವಕೃಶಾನುಸನಾತನ ನಾರಾಯಣ ಶ್ರೀನಾಥನ 1ಘೋರನಿರಯವಿದೂರ ಕರುಣಾಪಾರವಾರಿಜಾಸನ ವಂದ್ಯ ಸುರಶ್ರೇಷ್ಠನ 2ತನ್ನವರಿಗೆ ಪ್ರಸನ್ನವೆಂಕಟಕೃಷ್ಣಮನ್ಯ ಸದ್ಭಕ್ತರಪಾವನ್ನನಾಮನ3
--------------
ಪ್ರಸನ್ನವೆಂಕಟದಾಸರು
ನೆಲೆಸೆನ್ನ ಹೃದಯ ಮಂದಿರದಿ - ಶ್ರೀ ಹರಿಯೆ ನೀ |ಸಲಿಸೆಮ್ಮ ಮನದಿಷ್ಟಅನುದಿನ ದಯದಿಪಸಿರಿಮಿಂಚಿ ಮರುತ್ಯುಪರ್ಣ ಪು - |ರಾರಿವಂದಿತಚರಣಸರಸಿಜ ||ಪರಮಭಕ್ತ ಪ್ರಹ್ಲಾದ ನಾರದ |ವರಪರಾಶರ ಮುಖಸುಸನ್ನುತ ಅ.ಪನಾರುವಿ ಭಾರವ ಪೊರುವಿ - ಬಲು - |ಬೇರುಗಳನೆ ಕಿತ್ತು ಮೇಲುವಿ -ಕರಿ - |ವೈರಿ ರೂಪಗೊಂಡ ಗರುವಿ - ಬ್ರಹ್ಮ - |ಚಾರಿ ಖಳರ ಕತ್ತರಿಸುವಿ |ವೀರದಶರಥಸುತ ಸುರಾರ್ಚಿತ |ಜಾರತನದಲಿ ವ್ರತವ ಕೆಡಿಸುತ |ತೋರಿ ಮೆರೆವನೆತರಳ ಬಲು ಗಂ - |ಭೀರ ಕುದುರೆಯನೇರಿ ಮೆರೆವನೆ 1ಅನಿಮಿಷ ಮಂದರೋದ್ಧರಣ - ನೀನಾ - |ವನಗಪಂಚಾನನವದನ - ವಾ - |ಮನ ದಾನವರ ಕೊಯ್ವಕದನ - ಹೀನ - |ದನುಜರಾವಣ ಸಂಹರಣ ||ಧೇನುಕಾಸುರ ಶಕಟಮರ್ದನ |ಜಾÕನದಾನ ವಿಡಂಬನಾನಕ |ಭಾನುಮಸ್ತಕ ನೀಲವರಕರ |ದೀನಜನಸಂತ್ರಾಣ ನಿಪುಣನೆ 2ಮಚ್ಛಕಚ್ಛಪ ಸ್ವಚ್ಛಕಿರನೆ - ಬಲು - |ಅಚ್ಚ ಶಿಶುಮೊರೆ ಕೇಳಿದವನೆ ||ಸ್ವೇಚ್ಛೆಯವಟು ಪರಶುಕರನೆ - ರಾಮ - |ವತ್ಸಾಸುರನ ವಧಿಸಿದವನೆ ||ತುಚ್ಛ ಜನರಿಗೆ ಕಪಟಕಾರಣ |ಹೆಚ್ಚಿನಶ್ವದ ಮೇಲೆ ಹೊಳೆವನೆ |ಮೆಚ್ಚಿಪುರಂದರ ವಿಠಲನಪರ - |ಮಾಚ್ಯುತದ ಪದವೀವ ದೇವನೆ 3
--------------
ಪುರಂದರದಾಸರು
ನೈವೇದ್ಯವ ಕೊಳ್ಳೊ ನಾರಾಯಣಸ್ವಾಮಿದಿವ್ಯ ಷಡುರಸಾನ್ನವನಿಟ್ಟೆನೊ ಪ.ಘಮಘಮಿಸುವ ಶಾಲ್ಯನ್ನ ಪಂಚಭಕ್ಷ್ಯಅಮೃತಕೂಡಿದ ದಿವ್ಯ ಪರಮಾನ್ನವು ||ರಮಾದೇವಿಯು ಸ್ವಹಸ್ತದಿ ಮಾಡಿದ ಪಾಕಭೂಮಿ ಮೊದಲಾದ ದೇವಿಯರ ಸಹಿತ ತಾನು 1ಅರವತ್ತು ಶಾಕ ಲವಣ ಶಾಕ ಮೊದಲಾದಸರಸ ಮೊಸರುಬುತ್ತಿ ಚಿತ್ರಾನ್ನವಪರಮ ಮಂಗಳ ಅಪ್ಪಾಲು ಅತಿರಸಗಳಹರುಷದಿಂದಲಿ ಇಟ್ಟ ಹೊಸ ತುಪ್ಪವ 2ವಡೆಯಂಬೋಡಿಯು ದಧಿವಡೆಯ ತಿಂಢಿಣಿಒಡೆಯಸೆ ಬಡಿಸಿದೆ ಅಧಿಕವಾಗಿ ||ದೃಢವಾದ ಪಡಿಪದಾರ್ಥವನೆಲ್ಲ ಇಡಿಸಿದೆಒಡೆಯ ಶ್ರೀ ಪುರಂದರವಿಠಲ ನೀನುಣ್ಣೊ 3
--------------
ಪುರಂದರದಾಸರು
ನೋಡಬಾರದೆ ಕೃಷ್ಣಾ ಕರುಣದಿನೋಡಬಾರದೆ ಕೃಷ್ಣಹಾಡಿ ಹರಸಿ ನಿನ್ನನೆ ಹೊಗಳುವಪರಿಮಾಡಬಾರದೆ ಹರಿಯೆ ಪ.ಹಾನಿ ಹಿತಗಳನರಿಯೆ ಸುಜ್ಞಾನ ಭಕುತಿಗಳರಿಯೆದೀನ ದೇಶಿಗನುದ್ಧರಿಸೆಲೆ ದೇವಸಾನುರಾಗದಿ ದೇವ 1ಏಸುಜನ್ಮದಿ ಬಂದೆ ನಾಘಾಸಿಯಾದೆನೊ ತಂದೆದಾಸರೊಳು ಆವಕಾಲಭಿಲಾಷೆಯುಳ್ಳ ಶ್ರೀಲೋಲ 2ಏನು ಹೇಳಲಿ ಮನವು ನಿನ್ನಧ್ಯಾನಕೊದಗದು ಕ್ಷಣವುತಾನೆ ಹರಿದಡೆ ಕೇಡು ಅದರಿಂದಪ್ರಾಣನಾಥ ಮುಕುಂದ 3ಕುಂಬಳವು ಕೈಗತ್ತಿ ಕರಾಂಬುಜಕೆ ನಿನಗಿತ್ತೆನಂಬಿದವಗಿನ್ನೇನಾರೆ ಮಾಡಯ್ಯಅಂಬುಜಜ ಸ್ಮರರಯ್ಯ 4ಕಿಂಕರೌಘದೊಳಿಡೊ ನಿಶ್ಶಂಕನೆ ದಯಮಾಡೊಪಂಕಜಾಕ್ಷ ಮುರಾರಿ ಪ್ರಸನ್ನವೆಂಕಟಾದ್ರಿಪಾವನ್ನ5
--------------
ಪ್ರಸನ್ನವೆಂಕಟದಾಸರು