ಒಟ್ಟು 3720 ಕಡೆಗಳಲ್ಲಿ , 121 ದಾಸರು , 2734 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಂಥ ವಿಕ್ರಮಳೆ ನೀನುಎಂಥ ವಿಕ್ರಮಳೆ ನಿನಗೆಣೆ ಯಾರು ಶ್ರೀ ಲಕ್ಷ್ಮೀ-ಕಾಂತ ರೂಪದಿ ಕೊಂದೆ ಮಧುಕೈಟಭರ ದೇವಿಪಹರಿಕಿವಿಯಲಿ ಅವತರಿಸಿ ಮಧು ಕೈಟಭರ-ವರೆನಿಸಿ ಪಡೆಯೆ ವಿಧಿಯಿಂ ವರವಅರಿದುವಿಷ್ಣುವಿನಿಂದ ಮರಣ ಇವರಿಗೆಂದುಸ್ಮರಣೆಯ ಮಾಡಿದ ದೇವಿ ಪಾದಪಂಕಜಪರಮಮಂಗಳ ವಿಷ್ಣು ಎಬ್ಬಿಸು ಈ ಕ್ಷಣಹರಣವನೆ ಕಾಯಲಿ ಮೂರ್ವರು ನಿಮ್ಮಚರಣವ ನಂಬಿರಲಿ ಎತ್ತಿದಳಾಗಅರಳಿದವು ಕಣ್ಣು ಉಸಿರಾಡಿತು ಮೂಗಿನಲಿ1ಎದ್ದವನಚ್ಯುತ ಬ್ರಹ್ಮ ಏಳನೇ ಶರಧಿಯೊಳೆದ್ದ ಬಡಬನಂದದಲಿ ಮೃತ್ಯುವಗೆದ್ದ ಮೃತ್ಯುವಿನಂತಾಗಲು ಸಿಡಿಲಿನಮುದ್ದೆಯಂದದಿ ಕಣ್ಣ ಕಿಡಿಯುಕ್ಕೆ ಔಡಗಿ-ದೆದ್ದು ಚಕ್ರಕೆ ಕೈಯನಿಕ್ಕುತ ಹೊಯ್ದನುಅದ್ದಲು ಆ ಮಧುವ ಕೈಟಭನನ್ನುಒದ್ದು ಹಾಕಿದ ಶಿರವ ಇಬ್ಬರ ಕೂಡೆಬಿದ್ದರು ಮಹಾಹವ ಮೂರ್ವರ ಬಹು-ಯುದ್ಧವ ಹೇಳುವುದೇನು ಆ ಬಹು ರೌದ್ರವ2ಆದುದು ಪಂಚ ಸಹಸ್ರ ವರುಷ ಯುದ್ಧತೊಯ್ದರು ರಕ್ತದಿ ಕ್ರೋಧದುಬ್ಬಟ್ಟೆಯಿಂದಕಾದು ಕರಗಿದುದುಕವು ವಿಷ್ಣು ಬೇಸರ್ತ-ಮದ ಬೇಡಿರಿ ವರವನು ನೀಬೇಡೆನೆ ಕೊಟ್ಟ-ರಾದರೆ ಚಕ್ರದಿ ತಲೆ ಹರಿಯಲೆಂದುಛೇದಿಸಿದನು ಶಿರವ ಮೇಧಸು ಕೊಬ್ಬುಮೇದಿನಿಯಾದಿರವ ಹೊಗಳಿದ ಬ್ರಹ್ಮಮಾಧವನ ಸ್ತೋತ್ರವ ತಾನೆಯಾದಬೋಧಚಿದಾನಂದ ಬಗಳಾ ಚಾರಿತ್ರವ3
--------------
ಚಿದಾನಂದ ಅವಧೂತರು
ಎಂಥ ಶ್ರೀಮಂತಾನಂತನೆ ಶ್ರೀಕಾಂತೆಯ ಕಾಂತಎಂಥ ಶ್ರೀಮಂತಾನಂತನೆ ಪ.ಬೊಮ್ಮನು ಹೆಮ್ಮಗ ಮೊಮ್ಮ ಮೃಡಮ್ಮರಿಮೊಮ್ಮ ಶಚಿಮನೋರಮ್ಮ ಸ್ಮರಮ್ಮಗಅಮ್ಮರಸಮ್ಮೂಹ ನಿಮ್ಮನುಗಮ್ಯರುನಮ್ಮೊ ನಮ್ಮೊ ಪರಮ್ಮ ಮಹಿಮ್ಮ 1ಪನ್ನಗಾಪನ್ನ ಶಯನ್ನಕ್ಕೆ ಬೆನ್ನೀವಪನ್ನಗಾಶನ್ನ ವಾಹನ್ನ ರತುನ್ನ ಭವನ್ನ ಸುಖೋನ್ನತರನ್ನಾಗರ ನಿಜನಿನ್ನಿದಿರಿನ್ನಾರೆನ್ನೊಡೆಯನ್ನೆ 2ಬಲ್ಲ ಕೈವಲ್ಯಜÕರೊಲ್ಲಭ ಸುಲ್ಲಭಬಲ್ಲಿದಕ್ಷುಲ್ಲರದಲ್ಲಣನಲ್ಲವೆಹುಲ್ಲಲುಗಲಳವಲ್ಲ ನೀನಿಲ್ಲದೆಸಲ್ಲದು ಸೊಲ್ಲದು ನಿಲ್ಲದಿದೆಲ್ಲ 3ಅಂಗಕೆ ಹೆಂಗಳಾಲಿಂಗನಾಂತ ಗಡಮಂಗಳಾಪಾಂಗ ವಿಶ್ವಂಗಳ ಮಂಗಳಸಿಂಗರದುಂಗುಟ ಸಂಗದಗಂಗೆ ಜಗಂಗಳಘಂಗಳ ಹಿಂಗಿಪಳು ರಂಗ 4ಅಂಬರದಂಬುಗೆ ತುಂಬೆ ವಿಶ್ವಂ ಬಸುರಿಂಬಿಲಿ ಇಂಬಿಟ್ಟುಕೊಂಬ ಕೃಪಾಂಬುಧಿಡಿಂಬಕದಂಬದ ಬಿಂಬ ಪ್ರಸನ್ವೆಂಕಟನಂಬಿದರ್ಗಿಂಬೀವನೆಂಬ ಕುಟುಂಬಿ 5
--------------
ಪ್ರಸನ್ನವೆಂಕಟದಾಸರು
ಎಂಥ ಸುಖ ಎಂಥ ಸುಖ ಎಂಥ ಸುಖವಲಕ್ಷ್ಮಿಕಾಂತನ ಪೂಜಿಸಿ ಸಂತೋಷ ಪಡುವರುಕುಂತಿ ಮಕ್ಕಳುಕೆಲದಿಪ.ಜಾಳಿಗೆ ಮುತ್ತಿನ ಕವಚಭಾಳ ರತ್ನಗಳ ವಸ್ತಏಳು ಲೋಕಗಳ ಬೆಳಗುವಏಳು ಲೋಕಗಳ ಬೆಳಗುವ ಪೀತಾಂಬರವ್ಯಾಳಾಶಯನಗೆ ದೊರೆಕೊಟ್ಟ 1ಸರಮುತ್ತು ಹೆಣಿಸಿದ ಬರಿಯ ಮಾಣಿಕದ ವಸ್ತಧರೆಯೆಲ್ಲ ಬೆಳಗುವಪಟ್ಟಾವಳಿಧರೆಯೆಲ್ಲ ಬೆಳಗುವಪಟ್ಟಾವಳಿಕುಪ್ಪುಸನಾರಿ ರುಕ್ಮಿಣಿಗೆ ದೊರೆ ಕೊಟ್ಟ 2ಮುತ್ತು ಮಾಣಿಕ ರತ್ನ ತೆತ್ತಿಸಿದ ಆಭರಣಹತ್ತು ದಿಕ್ಕುಗಳ ಬೆಳಗುವಹತ್ತು ದಿಕ್ಕುಗಳ ಬೆಳಗುವ ಛsÀತ್ರ ಚಾಮರಸತ್ಯಭಾಮೆಗೆ ದೊರೆಕೊಟ್ಟ 3ಆನೆ ಕುದುರೆಯ ಸಾಲು ಎಷ್ಟೋ ರಥಗಳುಮಾನದ ಕಾಲಾಳು ಮೊದಲಾಗಿಮಾನದ ಕಾಲಾಳು ಮೊದಲಾಗಿ ಹರುಷದಿಶ್ರೀನಿವಾಸಗೆ ದೊರೆಕೊಟ್ಟ 4ಕುದುರೆ ಪಲ್ಲಕ್ಕಿ ರಥಸಾಲು ಬಿರುದಿನ ನೌಬತ್ತುಛsÀತ್ರ ಚಾಮರವು ಮೊದಲಾದಛsÀತ್ರ ಚಾಮರ ಮೊದಲಾದ ಉಚಿತವಮುದದಿ ರುಕ್ಮಿಣಿಗೆ ದೊರೆ ಕೊಟ್ಟ 5ಸಾವಿರ ಅಬುಜ ಕುದರಿ ಸಾಲಾದ ರಥಗಳುಮ್ಯಾಲೆ ಪಲ್ಲಕ್ಕಿ ಮೊದಲಾಗಿಮ್ಯಾಲೆ ಪಲ್ಲಕ್ಕಿ ಮೊದಲಾಗಿ ಛsÀತ್ರವಸತ್ಯಭಾಮೆಗೆ ದೊರೆಕೊಟ್ಟ 6ದೊರೆಯು ಧರ್ಮನು ಹರಿಗೆ ಬಿರುದು ಬಿನ್ನಾಣಗಳ ಕೊಟ್ಟಕರಗಳ ಮುಗಿದು ಶಿರಬಾಗಿಕರಗಳ ಮುಗಿದು ಶಿರಬಾಗಿ ರಾಮೇಶನಪರಮಪ್ರೀತಿ ಇರಲೆಂದು7
--------------
ಗಲಗಲಿಅವ್ವನವರು
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
--------------
ನಿಡಗುರುಕಿ ಜೀವೂಬಾಯಿ
ಎಂದಿಗಾದರು ನಿನ್ನ ನಂಬಿದೆ - ಚೆಲ್ವ - |ಮಂದರಧರ ಮದನಜನಕ |ವೃಂದಾವನಪತಿ ಗೋವಿಂದ ಪತರುಣಿಯ ಮಾನವನು ಕಾಯ್ದೆ - ಅಂದು - |ದುರುಳ ತನ್ನ ಸುತನ ಕೊಲಲು ಒದಗಿ ಕಂಬದಿ ಬಂದೆ ||ಕರುಣದಿ ಶಿಲೆಯನುದ್ಧರಿಸಿದೆ ತನ್ನ - |ಮರಣಕಾಲಕೆ ನಾಗರನೆಂದರೆ ಮುದದಿಮುಂದೆ ನಿಂದೆ ಗೋವಿಂದ 1ಧ್ರುವ - ವಿಭೀಷಣ - ರುಕ್ಮಾಂಗದರು ನಿನ್ನ ವರಿಸಲು |ಆ ವ್ಯಾಸ ನಾರದಬಲಿ ಮುಖ್ಯ ಕಲಿಪಾರ್ಥನು ||ಪವನಸುತನು ಅಂಬರೀಷನು - ತ್ರೈ - |ಭುವನವರಿಯೆ ನಿನ್ನ ನೆನೆಯೆ ಪದವನಿತ್ತೆ ಗೋವಿಂದ 2ದುರಿತ ವಿನಾಶ ದೋಷದೂರನೆ - ಜಗದ್ - |ಭರಿತ ದೈತ್ಯದಳಸಂಹಾರ ಶರಣು ಚಾರುಚರಿತ್ರ ||ಕರಿವರದ ಪುರಂದರವಿಠಲ ಕಾಯೊ |ಶರಣಹೃದಯಸರಸಿಜ ಪರಮಪಾವನ ಗೋವಿಂದ3
--------------
ಪುರಂದರದಾಸರು
ಎಂದಿಗೆ ಬಹನೆ ಕೃಷ್ಣ ಮಂದಸ್ಮಿತಾನನೆ |ಅಂದದಿಂದಿರುವ ತನ್ನಯ ವೃಂದಾವನ ಬಿಟ್ಟಿಲ್ಲಿಗೆ ತವಕದಿ ಪತರುಣೀ, ಗೋಕುಲದೊಳಗಿಹ ಸಖಿಯರು ಎಂಥಾ ಧನ್ಯರೆ |ಪರಮಾತ್ಮನ ಪೊಂದಿ ಇತರ ಕರಕರಿ ಅರಿಯಳೆ ||ಹರಿಯಿಂತೊಲಿದಿರಲವರೇನು ಸುರಲೋಕದ ಸ್ತ್ರೀಯರೇ |ಪರಿಪರಿ ಸುಖ ಸಾಗರದೊಳಗಿರುವರುಜರಿದುಮಧುರೆಯಲ್ಲಿಹದೆಂದು 1ಅಮ್ಮೆಏನೊಳ್ಳೆವರವರಾಳ್ವರು ಸಮ್ಮಾತಾಂತಲ್ಲವೆ |ನಮ್ಮನೆಯವರವರಂತೆ ಸುಮ್ಮನೆ ಇರುವರೆ ||ಬೊಮ್ಮನ ಜನಕೆಮೊಲಿಸಿದರೆ ಒಮ್ಮೆಗೆ ಪೇಳಿರೆ |ಸಮ್ಮಸಿ ಕೊಳ್ಳಲು ಮನದಿ ಸುಕರ್ಮದ ಪ್ರಬಲಿಗೆ ಘಮ್ಮನೆ ಬಹಸಖಿ 2ಅಲ್ಲೀ ಸ್ತ್ರೀಯರಕಿಂತಿತಿಶಯ ಚಲ್ವೆರ್ನಾವಲ್ಲವೆ |ಸುಳ್ಳಲ್ಲಿಂತಾಭರಣಾಂಬರವೆಲ್ಲಿ ಕಂಡಿಹರೆ ||ಗೊಲ್ಲಿತಿಯರು ನಮ್ಮಂದದಿ ಸೊಲ್ಲಿಸಬಲ್ಲರೆ |ಮಲ್ಲಮರ್ದನ ಪ್ರಾಣೇಶ ವಿಠಲೆಮ್ಮನು ಬಿಟ್ಟೆಲ್ಲಿ ಪೋಗನು 3
--------------
ಪ್ರಾಣೇಶದಾಸರು
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಲೊ ರಮಾಪತಿ ಹಕ್ಕಿಗಳು ಬಾಯಿ ಬಿಡುವಂತೆಬಳಲುವೆವೊ ಈಗ ನಾವೆಲ್ಲ | (ನಾವೆಲ್ಲ) ಈ ಬ್ರಹ್ಮಕುಲದ ಅಭಿಮಾನ ನಿನದಲ್ಲೆ ಪಗೌಡ ಪ್ರಬಲಾಗೆ ತಲೆಗೂಡೆನಿಸಿತೆನಗೆ ನೋಡ ಮನೆಕಡೆಗೆ ಮಡಿವಾಳ | (ಮಡಿವಾಳ) ಮರ ಹಾಳುಮಾಡುವರು ದ್ವಿಜರೆಂಬನು ಜೀಯ 1ಗಡಿಗೆಗಳು ಒಂದನ್ನ ಕೊಡನು ಗ್ರಹಣಗಳು ಹನ್ನೆ-ರಡೂ ಆದರನ್ನಾ ಕುಂಬಾರ | (ಕುಂಬಾರ)ನಿದ ಸ್ಮರಿಸಿಅಡವಿಯೊಳು ಕುಳಿತು ಆ(ಅ ?)ಳಬೇಕು 2ಭಕ್ರಿಯೆಂಬುದು ತುಪ್ಪ ಸಕ್ರಿ ಮಾಡಿದ ಬಡಿಗಅಕ್ರೂರ ವರದ ದಯಾಸಿಂಧು | (ದಯಾಸಿಂಧು) ಎಂದು ಈಅಕ್ರಮವ ನಿನಗೇ ಉಸಿರುವೆ3ಕಾಲರಕ್ಷೆಯ ಹೊಲಿಯ ಧಾಳಾಯ ಕೊಡುಯೆಂದುಗೋಳಾಡಿಸುವನು ಅತಿಶೂದ್ರ | (ಅತಿಶೂದ್ರ) ಈ ದುಃಖಕೇಳುವರೇ ಇಲ್ಲೋ ಪರಮಾತ್ಮ 4ಯರಿಬೀಳು ಅದಕೂ ಮತ್ತೇರಿಸುವನೋ ಎಲ್ಲೋ ಎಂ-ದಿರುಳೆಲ್ಲ ನಿದ್ರಿಲ್ಲೋ ಮೇಲ್ಪøತ್ತಿ | (ಮೇಲ್ಪøತ್ತಿ)ಯೆಂಬುವದುಗುರುತಿಲ್ಲಧೋಯ್ತೋ ಗುರುವರ್ಯ 5ಇದ್ದ ಜ್ಞಾತಿಗಳಿಂದೆ ಮುದ್ದ್ಯಾಗಬೇಕೆಂಬಶ್ರದ್ಧೆಯನೇ ಬಿಟ್ಟು ಅವನನ್ನೇ | (ಅವನನ್ನೇ) ಕೊಂಡಾಡಿಹೊದ್ದಿ ದಿನಗಳದೂ ಬದುಕುವರು6ಈ ರೀತಿ ನೋಡಲ್ಕೆ ಮೂರನೆ ಕಾಲವೇಂತೋರುವದೊ ಯಮಗೆ ಪ್ರಾಣೇಶ | (ಪ್ರಾಣೇಶ) ವಿಠಲ ಉ-ದ್ಧಾರ ಮಾಡುವದು ನೀ ಬಲ್ಲೆ7
--------------
ಪ್ರಾಣೇಶದಾಸರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು