ಒಟ್ಟು 4311 ಕಡೆಗಳಲ್ಲಿ , 123 ದಾಸರು , 2721 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಪ್ಪವಡಿಸೆಲೆಲೆ ತಂದೆಸರ್ಪಗಿರಿವಾಸ ಶ್ರೀನಿವಾಸ ದಯದಿ ಪ.ಕಮಲಸಖಸೂರ್ಯಮೂಡದ ಮುನ್ನೆ ಮುನಿಜನರುತಮ ತಮಗೆ ನೀನೊಲಿದ ನಿನ್ನ ಪ್ರತಿಮೆಯ ಪದಕೆನಮಿಸುತೈದಾರೆ ಧ್ಯಾನಮೌನ ಜ್ಞಾನದೊಳವರುರಮೆಯರಸ ಯೋಗನಿದ್ರನೆ 1ಸುಳಿಗಾಳಿ ಸೌರಭಿಯ ಬಳಿವಿಡಿದು ಮಧುಪಕುಲಸುಲಲಿತ ಸ್ವನದಿ ಪಾಡುತಿರೆಸಾರಸಮಯೂರಗಿಳಿಕೋಕಿಲ ಮರಾಳ ಚಕ್ರವಾಕ ಶಕುಂತಬಳಗ ಬಲು ತುತಿಸುತಿವೆ ಕೋ 2ಪವಿತ್ರೆಯೆನಿಸುವ ದೇವನದಿ ಯಮುನೆ ಗೋದಾವರಿ ಸರಸ್ವತಿ ಶ್ರೀಕೃಷ್ಣ ಕಾಳಿಂದಿಕಾವೇರಿ ತುಂಗಭದ್ರೆ ಭೀಮಾದ್ಯರೈತರಲುಪಾವನಿಸುತೀರ್ಥಪದನೆ3ಹನುಮಸುರಋಷಿದೇವ ಗಂಧರ್ವ ಕಿಂಪುರಷರನುನಯದಿ ದಂಡಿಗೆ ಸುವೀಣೆಯಂ ಮುಟ್ಟಿ ನಿಜತನುವ ಮರೆದು ಉಗ್ಗಡಿಸುತಿರೆ ಸರಸಪ್ರಿಯಸನಕಾದಿ ವಂದ್ಯ ಕೃಷ್ಣ 4ತಮಜಾರಿ ಕೇಳುಮಂದರಪೊರೆಯಲೇಳೈ ವಸುಮತಿಲ್ಭಕ್ತ ಇಂದ್ರಾದಿಗಳ ಮೊರೆ ಕೇಳುಕುಮತಿಜನರಿಪುಭವಾಬ್ಧಿತ್ರಾತ ಸುಖಿಯೋಗಿಅಮಲಪ್ರಸನ್ನ ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಎಚ್ಚರಿಕೆ ಎಚ್ಚರಿಕೆ ಮನವೆ - ನಮ್ಮಅಚ್ಯುತನ ಪಾದಾರವಿಂದ ಧ್ಯಾನದಲಿ ಪ.ಆಶಾಪಾಶದೊಳಗೆ ಸಿಲುಕಿ - ಬಹುಕ್ಲೇಶಪಟ್ಟು ತುಟ್ಟ ಸುಖದ ಮರುಳಿಕ್ಕಿಹೇಸಿ ಸಂಸಾರದಲಿ ಸಿಲ್ಕಿ -ಮಾಯಾಕ್ಲೇಶಅಂಬರಕೇಳಾಗೆ ಮೈಮರೆತು ಸೊಕ್ಕಿ1ಹಣ - ಹೆಣ್ಣು - ಮಣ್ಣಾಸೆ ವ್ಯರ್ಥ - ಈತನುವಿಗೆ ಯಮಪುರ ಪಯಣವೇನಿತ್ಯಮೂರು ಶೃಂಗಾರಗಳುಮಿಥ್ಯ - ಅಂತಕನ ಯಾತನೆಗಳಿಗೆ ಹರಿನಾಮ ಪತ್ಯ 2ತೊಗಲ ಚೀಲ ಒಂಬತ್ತು ಹರುಕು -ನರಬಿಗಿದುಕಟ್ಟಿ ಒಳಗೆ ಎಲುವುಗಳ ಸಿಲುಕುಬಗೆರಕ್ತ - ಮಾಂಸದ ಹುಳುಕು - ಒಳಗೆ ಮಲ - ಕಫ -ವಾತ- ಪಿತ್ತದಸರಕು3ದುಷ್ಟರ ಸಹವಾಸ ಹೀನ - ಬಲುಇಷ್ಟ ಜನಸಂಗವು ಹರಕೆ ಬಹುಮಾನಎಷ್ಟು ಓದಿದರಷ್ಟು ಜ್ಞಾನ - ಆದರಲ್ಲಿಟ್ಟು ಭಕುತಿಯ ತಿಳಿಯಲೊ ಸಾವಧಾನ 4ನಾಲಿಗೆಯ ಹರಿಯ ಬೀಡಬೇಡ - ತಿಂಡಿವಾಳರ ರುಚಿವಾತಗಳನೊರಿಸಬೇಡಹಾಳು ಮಾತು ಗೊಡಬೇಡ -ಶ್ರೀಲೋಲ ಪುರಂದರವಿಠಲನ ಬಿಡಬೇಡ 5
--------------
ಪುರಂದರದಾಸರು
ಎಂತು ತುತಿಸಲಿ ಎನ್ನದೇವನ ಸಂತತ ನಮ್ಮ ಸಲಹೋನತಾನು ಮಾಡಿದ ಕರ್ಮಶೇಷವು ತಾನು ತಿಳುಹಿದ ಜ್ಞಾನಶೇಷವುಇವನ ಪ್ರೇರಣೆ ಹರಿಯ ಪ್ರೇರಣೆ ಇವನ ಸೇವೆಯು ಹರಿಯ ಸೇವೆಯುಜ್ಞಾನ ಭಕುತಿವೈರಾಗ್ಯಖಣಿಯು ದಾನವಾಂತಕ ಧರ್ಮಶೀಲ
--------------
ಗೋಪಾಲದಾಸರು
ಎತ್ತಾರೆ ಹಿಂದಿನ ಮಾತು |ಭಾರತೀಶನಿನ್ನಭೃತ್ಯರು ತಮ್ಮನುವರಿತು | ನೀ ಸಲಹದಿದ್ದರೆ ಹೀಗೆಂದು ಪಮೂಗು ಹಿಡಕೊಂಡು ಕುಳಿತಿದ್ದಿ ನೂರತೊಂಭತ್ತೆಂಟು ಕಲ್ಪ |ಆಗಲೊಬ್ಬರೂ ನಿನ್ನನಾರೆಂದು ಕೇಳಾರೋ ||ಈಗ ದೇವರ ದಯೆಯಿಂದ ಹದಿನಾಲ್ಕು ಲೋಕಕ್ಕೆ ಮಂತ್ರಿ |ಯಾಗಿ ಸಂತೋಷದಿಂದ ಮೇಲು ಮೆರೆವುದಕ್ಕೀ ಗರ್ವವೆಂದು 1ಊರ ಸೇರದಲೆ ಕಂಡ ಗಿಡದ ತೊಪ್ಪಲುಗಳ ತಿಂದು |ಅರಣ್ಯದೊಳು ಬಹುಕಾಲ ಬದುಕಿದ್ದು ಮತ್ತೂ ||ಶ್ರೀರಾಮನಾಳಾಗಿ ಶಿಲೆಯ ಪೊತ್ತುದು ಜಗವೆಲ್ಲಾ ಬಲ್ಲದು ಮುಂದೆ |ವಾರಿಜಾಸನ ಪದವಿಯಾಳೆಂದುಹರಿನುಡಿದುದಕೀಗರ್ವವೆಂದು 2ತಿರಿದುಂಡು ಹನ್ನೆರಡಬ್ದ ವನವಾಸ ಅಜ್ಞಾತವೊಂದು |ವರುಷ ಮತ್ಸ್ಯಾಧಿಪನಾಗಾರದಲಿ ಪಾಕ ಮಾಡಿ ||ತರುಣೀ ಮಾನಭಂಗವ ನೋಡಿ ಸುಮ್ಮನಿದ್ದೆಯಾಗ ಕೃಷ್ಣ |ತರಿದು ದುರ್ಯೋಧನರ ರಾಜ್ಯ ನಿಮಗಿತ್ತುದಕೀ ಗರ್ವವೆಂದು 3ಎಲ್ಲರೂ ಕಂಡದ್ದು ಹುರಳಿ ಗುಗ್ಗರಿ ತಿಂದು ಭಿಕ್ಷಾರ್ಥಿಯಾಗಿ |ಮುಳ್ಳು ಮರದಡಿಯಲ್ಲಿ ಕುಳಿತದ್ದು ಹಿರಿಬದರಿಯಲ್ಲಿ ||ಸುಳ್ಳಲ್ಲ ವೇದವ್ಯಾಸಾನಂತ ವೇದಾರ್ಥ ತಿಳಿಸಿ ಸಕಲ |ಬಲ್ಲವನೆಂದು ಪೆಸರೂ ಕೊಟ್ಟದೆವೇ ಈ ಗರ್ವವೆಂದು 4ಏನೆಂಬುವ ಸರ್ವರಲ್ಲಿ ಹೊಕ್ಕು ಬಳಕೆ ಮಾಡುತಿದ್ದಿ |ಹೀನರು ನಿನಗೀಸು ನೀರ ಹಾಕಂದುಕೇಳಿ||ಪ್ರಾಣೇಶ ವಿಠಲನ್ನ ಭಜಿಸಿ ಪೂರ್ಣ ದಯಕೆ ಪಾತ್ರನಾಗಿ |ಮೀನಾಂಕಾರಿ ಮುಖರಿಂದರ್ಚನೆಗೊಂಬಕ್ಕೀ ಗರ್ವವೆಂದು 5
--------------
ಪ್ರಾಣೇಶದಾಸರು
ಎಂಥ ಉಪಕಾರಿಗಳು ಸುಜನರು ಶ್ರೀಕಾಂತ ನಿನ್ನೊಲುಮೆಯ ಉಪಾಯದೋರುವರು ಪ.ಅಜ್ಞಾನ ಕತ್ತಲೆಯೊಳು ಎಡಹಿ ನಡೆಗೆಟ್ಟಡಿ ಯವÀ? ರಿಗೆಸುಜ್ಞಾನವೆಂಬ ಅಂಜನವನಿಟ್ಟುಪ್ರಜ್ಞಾಪೂರ್ಣರ ಶಾಸ್ತ್ರಪ್ರಭೆಯಲ್ಲಿ ಪಥವಿಡಿಸಿಯಜೆÕೀಶ ನಿನ್ನ ಬಳಗವ ಕೂಡಿಸುವರೊ 1ಭವತಾಪದಲಿ ಬಳಲಿ ಎದೆಯಾರಿದರಿಗೆ ಸನ್ನವಭಕ್ತಿಯಮೃತ ರಸವಾರಿನಿಧಿಯಸವಿದೋರಿ ಸ್ನಾನಪಾನವ ಕಲಿಸಿ ಸುಖವಿತ್ತುಸವಿಯದಾನಂದ ಉರದಲಿ ಪೊಯ್ದಿಡುವರು 2ವಿಷಮ ವಿಷಯ ಧ್ಯಾನ ದಾರಿದ್ರ್ಯ ಪೀಡಿತಮಾನುಷರ ಜಂಗುಳಿಗೆ ವೈರಾಗ್ಯವೆಂಬಅಸಮಭಾಗ್ಯವನಿತ್ತುಭವಬಿಡಿಸಿ ಸಲಹಿ ಅಕಲ್ಮಷ ಪ್ರಸನ್ನವೆಂಕಟಪತಿಯ ನಂಬಿಸಿದರು 3
--------------
ಪ್ರಸನ್ನವೆಂಕಟದಾಸರು
ಎಲೊ ರಮಾಪತಿ ಹಕ್ಕಿಗಳು ಬಾಯಿ ಬಿಡುವಂತೆಬಳಲುವೆವೊ ಈಗ ನಾವೆಲ್ಲ | (ನಾವೆಲ್ಲ) ಈ ಬ್ರಹ್ಮಕುಲದ ಅಭಿಮಾನ ನಿನದಲ್ಲೆ ಪಗೌಡ ಪ್ರಬಲಾಗೆ ತಲೆಗೂಡೆನಿಸಿತೆನಗೆ ನೋಡ ಮನೆಕಡೆಗೆ ಮಡಿವಾಳ | (ಮಡಿವಾಳ) ಮರ ಹಾಳುಮಾಡುವರು ದ್ವಿಜರೆಂಬನು ಜೀಯ 1ಗಡಿಗೆಗಳು ಒಂದನ್ನ ಕೊಡನು ಗ್ರಹಣಗಳು ಹನ್ನೆ-ರಡೂ ಆದರನ್ನಾ ಕುಂಬಾರ | (ಕುಂಬಾರ)ನಿದ ಸ್ಮರಿಸಿಅಡವಿಯೊಳು ಕುಳಿತು ಆ(ಅ ?)ಳಬೇಕು 2ಭಕ್ರಿಯೆಂಬುದು ತುಪ್ಪ ಸಕ್ರಿ ಮಾಡಿದ ಬಡಿಗಅಕ್ರೂರ ವರದ ದಯಾಸಿಂಧು | (ದಯಾಸಿಂಧು) ಎಂದು ಈಅಕ್ರಮವ ನಿನಗೇ ಉಸಿರುವೆ3ಕಾಲರಕ್ಷೆಯ ಹೊಲಿಯ ಧಾಳಾಯ ಕೊಡುಯೆಂದುಗೋಳಾಡಿಸುವನು ಅತಿಶೂದ್ರ | (ಅತಿಶೂದ್ರ) ಈ ದುಃಖಕೇಳುವರೇ ಇಲ್ಲೋ ಪರಮಾತ್ಮ 4ಯರಿಬೀಳು ಅದಕೂ ಮತ್ತೇರಿಸುವನೋ ಎಲ್ಲೋ ಎಂ-ದಿರುಳೆಲ್ಲ ನಿದ್ರಿಲ್ಲೋ ಮೇಲ್ಪøತ್ತಿ | (ಮೇಲ್ಪøತ್ತಿ)ಯೆಂಬುವದುಗುರುತಿಲ್ಲಧೋಯ್ತೋ ಗುರುವರ್ಯ 5ಇದ್ದ ಜ್ಞಾತಿಗಳಿಂದೆ ಮುದ್ದ್ಯಾಗಬೇಕೆಂಬಶ್ರದ್ಧೆಯನೇ ಬಿಟ್ಟು ಅವನನ್ನೇ | (ಅವನನ್ನೇ) ಕೊಂಡಾಡಿಹೊದ್ದಿ ದಿನಗಳದೂ ಬದುಕುವರು6ಈ ರೀತಿ ನೋಡಲ್ಕೆ ಮೂರನೆ ಕಾಲವೇಂತೋರುವದೊ ಯಮಗೆ ಪ್ರಾಣೇಶ | (ಪ್ರಾಣೇಶ) ವಿಠಲ ಉ-ದ್ಧಾರ ಮಾಡುವದು ನೀ ಬಲ್ಲೆ7
--------------
ಪ್ರಾಣೇಶದಾಸರು
ಎಲ್ಲರಾಡ್ಯೇನು ಭಾಗವತರಾವೆಂದುಬಲ್ಲವರೆ ಬಲ್ಲರು ಹರಿಯ ಊಳಿಗವ ಪ.ಸಟೆಯನ್ನೀಗಿದ ಭಕ್ತಿ ಮಿಶ್ರವಿಲ್ಲದ ಜ್ಞಾನಜಠರಾನುಕೂಲಕಲ್ಲದ ವಿರಕ್ತಿದಿಟವಾಗಿ ಮಾಡುವ ಮಹಿಮರಿಗಲ್ಲದೆಘಟಿಸದು ಒಣಮಾತಿನ ಕೋವಿದಂಗೆ 1ಡಂಬವಿಲ್ಲದ ದಾನ ಕಳವಳಿಸದ ಪೂಜೆಡೊಂಬಿಯಾಗದ ಜಪಧ್ಯಾನ ಮೌನಕುಂಭಿಣಿಯೊಳು ಮಾನುಭವಗಲ್ಲದೆಭವಸಂಭ್ರಮಕುಬ್ಬುವ ಸುಖಿಪುಂಸಂಗೇನು 2ಹೇಯವಿಲ್ಲದ ಕೀತ್ರ್ನೆ ಹೇವವಿಕ್ಕದವಿದ್ಯೆಬಾಹ್ಯ ತೋರದಹರಿಭೃತ್ಯವೃತ್ತಿದೇಹ ಚಿತ್ತವ ಕದಿಯದ ಧರ್ಮವ್ರತ ಕೃಷ್ಣಸ್ನೇಹಿತಗುಂಟು ಸಂಸಾರಿಗಗಾಧ 3ವಂಚಿಸದ ಬುಧಸೇವೆ ಠೌಳಿಸದ ಮಂತ್ರ ಪ್ರಪಂಚ ಕೂಡದ ತತ್ವ ಚರ್ಚಂಗಳುಮುಂಚುವ ಮುಕುತರಿಗಲ್ಲದೆ ಯಾತನೆಯಸಂಚಕಾರವಿಡಿದ ಸುಖಿ ಪುಂಸಂಗೇನು 4ಯಾಗವ ತಾ ನಿಯೋಗವ ತಾನಾತ್ಯಾಗವ ತಾನಾಗಿಹದು ಸುಲಭಭೋಗವತಿಯ ತಂದೆ ಪ್ರಸನ್ವೆಂಕಟೇಶನಭಾಗವತಾಂಘ್ರಿ ಪರಾಗ ದುರ್ಲಭವು 5
--------------
ಪ್ರಸನ್ನವೆಂಕಟದಾಸರು
ಎಲ್ಲವನು ಬಲ್ಲೆನೆನ್ನುವಿರಲ್ಲಸಲ್ಲದಗುಣಬಿಡಲಿಲ್ಲಪ.ಸೊಲ್ಲಿಗೆ ಶರಣರ ಕಥೆಗಳ ಪೇಳುತಅಲ್ಲದನುಡಿಗಳ ನುಡಿಯುವಿರಲ್ಲಅಪಕಾವಿಯನುಟ್ಟು ತಿರುಗುವಿರಲ್ಲಕಾಮವ ಬಿಡಲಿಲ್ಲನೇಮ - ನಿಷ್ಠೆಗಳ ಮಾಡವಿರಲ್ಲತಾಮಸ ಬಿಡಲಿಲ್ಲತಾವೊಂದರಿಯದೆ ಪರರಲಿ ತಿಳಿಯದೆಕೀವದ ಕುಳಿಯಲಿ ಬೀಳುವಿರಲ್ಲ 1ಗುರುಗಳ ಸೇವೆಯ ಮಾಡಿದಿರಲ್ಲಗುರುತಾಗಲೆ ಇಲ್ಲಪರಿಪರಿ ದೇಶವ ತಿರಿಗಿದಿರಲ್ಲಪೊರೆಯುವರಿನ್ನಿಲ್ಲಅರಿವೊಂದರಿಯದೆಆಗಮ ತಿಳಿಯದೆನರಕಕೂಪದಲಿ ಬೀಳುವಿರಲ್ಲ 2ಬ್ರಹ್ಮಜ್ಞಾನಿಗಳೆನಿಸುವಿರಲ್ಲಹಮ್ಮನು ಬಿಡಲಿಲ್ಲಸುಮ್ಮನೆ ಯಾಗವ ಮಾಡುವಿರಲ್ಲಹೆಮ್ಮೆಯ ಬಿಡಲಿಲ್ಲಗಮ್ಮನೆ ಪುರಂದರವಿಠಲನ ಪಾದಕೆಒಮ್ಮೆಯಾದರು ನೀವೆರಗಲೆ ಇಲ್ಲ 3
--------------
ಪುರಂದರದಾಸರು
ಎಲ್ಲೆಲ್ಲಿ ಭಾಗವತಾಂಶ ಮತ್ತೆಲ್ಲೆಲ್ಲಿ ಹರಿಸನ್ನಿವಾಸಎಲ್ಲೆಲ್ಲಿ ಕರೆದರೆ ದಾಸರಲ್ಲಲ್ಲಿಗೆಬಾಹರಮೇಶಪ.ಆವೆಡೆ ಲಕ್ಷವಂದನೆಯು ಆವಾವೆಡೆಗೆ ಭಕ್ತ ನರ್ತನೆಯುಆವೆಡೆ ಸುಪ್ರದಕ್ಷಿಣೆಯು ಆವಾವೆಡೆ ರಂಗನಾರಾಧನೆಯು 1ಎಂತು ದಂಡಿಗೆ ತಾಳ ಘೋಷ ಎಂತೆಂತು ಕಥಾಮೃತ ವರುಷಎಂತು ತತ್ವಾರ್ಥ ಜಿಜ್ಞಾಸ ಅಂತಂತೆ ಶ್ರೀಕಾಂತನ ಹರುಷ 2ಎಷ್ಟು ತಂತ್ರಸಾರಾರ್ಚನೆಯು ಎಷ್ಟೆಷ್ಟುಶ್ರುತಿಸೂತ್ರಗಳ ಧ್ವನಿಯುಎಷ್ಟು ತಾತ್ಪರ್ಯ ವರ್ಣನೆಯು ಅಷ್ಟಷ್ಟು ಕೃಷ್ಣನಕಂಠ ಮಣಿಯು 3ಏಸುಶ್ರೀಹರಿವ್ರತ ಮೌನ ಏಸೇಸು ಶ್ರೀ ಹರಿರೂಪಧ್ಯಾನಏಸುಸದ್ವ್ಯಾಖ್ಯಾನ ದಾನ ಆಸನ್ನ ಕೈವಲ್ಯನಿದಾನ4ಎನಿತು ಗುರುಪಾದಗಳ ಸ್ಮರಣೆ ಎನಿತೆನಿತು ಮಧ್ವಯತಿಗಳ ಸ್ಮರಣೆಎನಿತೇಕಾದಶಿಯ ಜಾಗರಣೆ ಅನಿತನಿತು ಸುಲಭ ಹರಿಸ್ಮರಣೆ 5ಆರು ಆರೂರು ಮೆಟ್ಟಿಹರು ಮತ್ತಾರೂರರಸರ ಕಟ್ಟಿಹರುಆರೀರ್ವರ ಪೊರಮಟ್ಟಿಹರು ಆರಾರಾಗಲಿ ಕೃಷ್ಣನವರು 6ಹೇಗೆ ಸಜ್ಜನರ ಉಲ್ಲಾಸ ಹಾಗ್ಹಾಗೆ ಮಹಾಮಹಿಮರಭಿಲಾಷಹೇಗೆ ಬುಧರ ಪರಿತೋಷ ಹಾಗಾಗುವುದು ಪ್ರಸನ್ವೆಂಕಟೇಶ 7
--------------
ಪ್ರಸನ್ನವೆಂಕಟದಾಸರು
ಎಷ್ಟು ಸುಕೃತದಿಂದ ಕಂಡಿಯೆಮನೋಭಿಷ್ಟಗಳನೆ ಪಡೆದುಕೊಂಡಿಯೆ ದೂತೆ ಪ.ಪಾದನೋಡಲು ಅತಿ ಪಾವನಹಾಂಗೆ ಮೋದಭರಿತಳು ನೀ ಆದೆನೆ ದೂತೆಸಾಧು ಜನರು ನಿನ್ನ ಸ್ವಾಧೀನನಮ್ಮಮಾಧವಅನುದಿನಅಧೀನ ದೂತೆ1ಕೆಂಚಿಹಸ್ತವ ನೀನು ಕಂಡಿಯೆ ಹ್ಯಾಂಗೆಸಂಚಿತಾಗಾಮಿ ಕಳಕೊಂಡೆಯೆದೂತೆ ಪಾಂಚಾಲಿದಯವ ಪಡಕೊಂಡಿಯೆನಿನ್ನ ವಾಂಚಿತಾರ್ಥವ ಕೈಕೊಂಡಿಯೆ ದೂತೆ 2ಮುಖವ ನೋಡಲು ನಿಜ ಮುಕ್ತಿಯ ಹಾಗೆಭಕ್ತಿ ಜ್ಞಾನವು ವಿರಕ್ತಿಯೆ ದೂತೆದಿವ್ಯ ಪ್ರಕೃತಿಯ ಗೆಲುವಂಥ ಶಕ್ತಿಯನಮ್ಮ ಲಕುಮಿ ರಾಮೇಶ ಒಲಿಯೆ ಮುಕ್ತಿಯೆ ದೂತೆ 3
--------------
ಗಲಗಲಿಅವ್ವನವರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಏನು ಇರದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ.ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯುಣಿಸಬೇಕುಹಸನಾದ ಭೂಮಿಯನು ಧಾರೆಯರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇಬೇಕು 1ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುಟಿಲ ನಡಿಸಲು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮಲಿರಬೇಡಬಾಳ್ವೆ ಸ್ಥಿರವೆಂದು ನೀನಂಬಿ ಕೆಡಬೇಡ 2ದೊರೆ ತನವು ಬಂದಾಗ ಕೆಟ್ಟ ನುಡಿಯಲು ಬೇಡಸಿರಿ ಬಂದ ಕಾಲಕ್ಕೆ ಮರೆಯಬೇಡಸಿರಿವಂತನಾದರೆ ಪುರಂದರವಿಠಲನಚರಣ ಕಮಲವ ಸೇರಿ ಸುಖಿಯಾಗು ಮನುಜ 3
--------------
ಪುರಂದರದಾಸರು
ಏನು ಕರುಣಾನಿಧಿ ರಂಗ ನನ್ನನ್ಯೂನತೆ ನೋಡುವರೆ ರಂಗನಾನೇನು ಅರಿಯೆನೊ ರಂಗ ನೀದಾನಿ ನೀನೆಗತಿರಂಗಪ.ಭಕ್ತಿಯುಂಟೆಂಬೆಯ ರಂಗ ಮಿಶ್ರಭಕ್ತಿಯೆ ತುಂಬಿದೆ ರಂಗಶಕ್ತಿಯ ನೋಡುವೆ ರಂಗ ವಿಷಯಾಸಕ್ತಿಯೆ ಶಕ್ತಿಯು ರಂಗ 1ಜ್ಞಾನ ಪರೀಕ್ಷಿಪೆ ರಂಗ ಅಜ್ಞಾನದಖಣಿಕಾಣೊ ರಂಗಏನಾರು ವಿರತ್ಯುಂಟೆ ರಂಗ ಜಠರಾನುಕೂಲವಿರತಿರಂಗ2ಪೂಜಿಸು ಇನ್ನೆಂಬೆ ರಂಗ ಹೊಲೆಭಾಜನಮನವಾಯ್ತು ರಂಗನಾ ಜಪವರಿಯೆನೊ ರಂಗ ಕಲ್ಪಭೂಜಪ್ರಸನ್ವೆಂಕಟ ರಂಗ3
--------------
ಪ್ರಸನ್ನವೆಂಕಟದಾಸರು
ಏನು ಗತಿಯೊ ಮುಂದೆನಗೆ ಗೋವಿಂದಶ್ರೀನಿವಾಸ ರಕ್ಷಿಸದಿರೆ ದಯದಿಂದ ಪ.ನಿಶಿದಿನ ಹಸಿವುತೃಷೆಸುಡುವ ಕುಮರಿಯುಮಸಿವರ್ಣ ಮಾಡಿ ಕೇರಿಡಿವ ಮೂರುರಿಯು 1ನಾಚಿಕಿಲ್ಲದ ವಿಷಯಾಸೆಯಸಹ್ಯನೀಚ ದುರುಕ್ತಿಯಸ್ತ್ತ್ರದ ಘನಗಾಯ 2ಮಾಯದ ಕಡಲೊಳು ಕಟ್ಟಿಹ ಕೊರಳುಆಯಾಸ ಬಡುತ ಬಡುತ ಬಿದ್ದಿತುರುಳು 3ಎಳ್ಳನಿತು ಜ್ಞಾನ ಅಹಂಕಾರ ಬಹಳಘಲ್ಲನೆ ತಗಲುವ ಜ್ಞಾನದಶೂಲ4ಮರಹುಮದಗಳೆಂಬ ಮುಸುಕಿದ ಮೆಳೆಯುಪರದಾರ ಪರನಿಂದೆಯಗ್ನಿಯ ಮಳೆಯು 5ಬೇಡಿದ ಬಯಕೆ ಸಾಧ್ಯಾಗದ ನೋವುಮೂಢತನದಿ ದಿನ ನೂಕುವ ಸಾವು 6ಇನ್ನಾರೆ ಸಜ್ಜನ ಸಂಗಕೌಷಧಮುನ್ನ ಕೊಡಿಸೊ ಪ್ರಸನ್ವೆಂಕಟ ಮುಕುಂದ 7
--------------
ಪ್ರಸನ್ನವೆಂಕಟದಾಸರು