ಒಟ್ಟು 6410 ಕಡೆಗಳಲ್ಲಿ , 128 ದಾಸರು , 3576 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವದನದಲಿ ಮನವೇ ನೆನಿನಾಮ ಶ್ರಿಹರಿಯಾ | ಸದಮಲದಲಿ ಮರೆಯದೆ ಬಾವದಲಿ ಪ ದಾವನು ದಾಸರ ದಾಸರ ಪದರಾ | ಜೀವ ಯುಗಳ ದರುಶನದಲಿ | ತೀವಿಕೊಂಡಿಹ ಬಹುಜನ್ಮದು ಷ್ಕøತ | ಲಾವಡಗುತಿಹವು ನಿಮಿಷದಲಿ 1 ನಾಮದ ಮಹಿಮೆಯ ತಿಳಿಯಲು ಅರಸಲು | ಅಮಹಾನಿಗಮಾಗಮದಲಿ | ವ್ಯೋಮ ಕೇಶನಾರದಾಹನುಮರೆ ಬಲ್ಲ | ನಾಮದ ಸುಖವೆಂತೋ ಭುವನದಲಿ2 ಸರ್ವಧರ್ಮಾನ್ ಪರಿತ್ಯಜ್ಯಂಬ ವಾಕ್ಯವಾ | ಅರ್ವವ ಹಿಡದು ತ್ರಿಕರ್ಣದಲಿ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯ | ಮೆರ್ಪಪಾದುಕ ವಿಟ್ಟು ಹೃದಯದಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಂದನೆ ಗೈವೆನು ಗುರುವೆ ಚರಣಾರವಿಂದದ್ವಯಕೆ ಮಣಿವೆ ನೀನೇ ಕಾಯೋ ಎನ್ನ ಸದ್ಗುರುವೆ ಪ ಬಂದು ಸೇರಿದೆ ನಾನು ಕರುಣ ಸಿಂಧುವೆ ಪಾಲಿಸುನೀನು ಮಂದಮತಿಯು ಜಡಜೀವನು ನಾನು ವಸುಂ ಧರೆಯೊಳಗೆ ಸುಜ್ಞಾನಿಯು ನೀನು 1 ಕಾರಗತ್ತಲೆಯೊಳಗೆ ಏನೆಂದು ತೋರದೆ ತೊಳಲಿದ ಹಾಗೆ ದಾರಿ ಕಾಣದೆ ಕಂಗಾಣದವಗೆ ಕೃಪೆ ದೋರಿ ಸುಜ್ಞಾನ ದೀಪವ ತೋರೋ ಗುರುವೆ 2 ಸೊಕ್ಕಿನ ಮದದಿಂದ ಕಾಲವ ಪುಕ್ಕಟೆಕಳೆದೆ ಯೋಗೀಂದ್ರ ದುಃಖವೆನಿಪ ಸಂಸಾರ ಶರಧಿಯೊಳು ಸಿಕ್ಕಿದೆ ಕಾಯೋ ಸದ್ಗುರು ದಿಗಂಬರನೇ 3
--------------
ಕವಿ ಪರಮದೇವದಾಸರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಂದಿಪೆವು ತವಪಾದಪಂಕಜಕೆ ಶ್ರೀ ರಾಘವೇಂದ್ರ | ಇಂದು ಬಿನ್ನೈಸುವೆವು ನಿನ್ನಡಿಗೆ ಪ ಇಂದು ದಿನವಂಭತ್ತು ವದ್ಯದಿ | ವೆಂದು ತೋರುವ ಸುದಿನವೆಮಗೆಅ.ಪ ಕಾಲವನು ಬಣ್ಣಿಸಲು ಭಯವಹುದು | ಏನೆಂದು ಪೇಳಲಿ | ನಾಲಿಗೆಯು ಒಣಗುತ್ತಲಿಹುದು | ಮೇಲೆನಿಪ ಶಾಲ್ಯಾನ್ನವೀದಿನ | ಸಾಲದಾಯಿತು ಹಸಿವುತಾಳದೆ | ಕಾಲಪುರಕೈದುವೆವು ಗುರುವೇ 1 ಹಿಂದೆ ತಂಜಾಊರಿನಲಿ ಕ್ಷಾಮ | ವಂಜಿಸಲು ನಿನಬಳಿ | ಬಂದ ರಾಜನ ಮೊರೆಯ ಕೇಳುತಲಿ | “ಶ್ರೀ” ಬೀಜಮಂತ್ರವ ರಚಿಸಿ ಭಕುತರ | ದನ್ನ ವುಣಿಸಿದೆ ಜನಕೆ ಗುರುವೇ 2 ಧರ್ಮಮಾರ್ಗವೆ ಕಾಣದಂತಾಯ್ತು | ಎಲ್ಲೆಲ್ಲಿ ನೋಡಲ | ಧರ್ಮಕೃತಿಗಳೆ ಕಂಡುಬರುತಿಹವು | ಇಂದು ನಿರ್ಮಲಾತ್ಮಕ ನಿನ್ನ ಬಳಿಯಲಿ ಧರ್ಮಭಿಕ್ಷವ ಬೇಡುತಿಹರೈ3 ಅಖಿಲ ಸಜ್ಜನ ನಿಚಯ ಸಹಿತಾಗಿ ನೀನಿಲ್ಲೆ ನೆಲೆಸು | ಭಕುತರಿಷ್ಟಾರ್ಥವನು ನೀಡುತಲಿ | ಲಕುಮಿಯರಸನ ದಯದಿ ಶರಣರ | ಮುಕುತರಾಗುವ ತೆರದಿ ಹರಸೈ4 ದೇಶದೊಳು ಮಳೆಬೆಳೆಯು ಹುಲುಸಾಗಿ ಸೂಸಿಸಲಿನ್ನು | ದೇಶದೊಳು ಸುಖಶಾಂತಿ ಸ್ಥಾಪಿಸಲಿ | ಶ್ರೀಶಕೇಶವನಲ್ಲಿ ಭಕುತಿಯ | ಲೇಸೆನಿಪ ಧರ್ಮಾರ್ಥ ಮಾರ್ಗದಿ | ದಾಶೆಯಲಿ ಬಿನ್ನಹ ಗುರುವೇ 5
--------------
ಶ್ರೀಶ ಕೇಶವದಾಸರು
ವಂದಿಸಿ ಬೇಡುವೆ ನವಗ್ರಹರ ಕುಂದುಗಳೆಣಿಸದೆ ಬಂದು ರಕ್ಷಿಸಲೆಂದು ಪ ಭಾಸುರ ಸೂರ್ಯನು ಭಾಸಿಸಲಿ ತತ್ವವನು ಶ್ರೀ ಸಹೋದರ ಚಂದ್ರ ತೋಷವನು ಸೂಸಿ ಕೊಡಲಿ ಮಂಗಳವನು ಮಂಗಳ ಲೇಸಾದ ಪಾಂಡಿತ್ಯ ಪಂಡಿತನೀಯಲಿ 1 ಹಿಂಗದ ಗೌರವ ತುಂಗ ಶ್ರೀಗುರು ಕೊಡಲಿ ಕವಿ ಕೊಡಲಿ ಭಂಗವಿಲ್ಲದ ಸುಖಸಂಪತ್ತು ಶನಿ ಕೊಡಲಿ ಕಂಗೆಡಿಸುವ ರುಜೆ ರಾಹು ತಪ್ಪಿಸಲಿ 2 ಹಿಡಿದ ಕೆಲಸದಲ್ಲಿ ಹಿಡಿಸಲಿ ಜಯಧ್ವಜವ ಬಿಡದಲೆ ಧ್ವಜಿಯು ಸಡಗರದಿ ಕಡು ನವಗ್ರಹಗಳು ಪಿಡಿಗ್ರಹವಾಗಲಿ ಸಿರಿ ದೃಢದಿ ದಿನದಿನದಿ 3 ತರಣಿ ಕುಮಾರ ಮಣಿ ಹಾರ ದಾರಿದ್ರ್ಯದೂರ ಹರಿಸು ಅರಿಷ್ಟವ ಸುರಿಸು ಮನೇಷ್ಟವ ಎರಗುವೆ ಸಂಕಟಗೊಳಿಸದಿರುತ್ಕಟ 4 ಸಿರಿ ವಾದಿರಾಜರು ಒರೆದ ಗ್ರಹಸ್ತ್ರೋತ್ರವ ನಿರುತದಿ ಪಠಿಸಲು ಗ್ರಹ ಪೀಡೆಯು ಸರಿದು ತಾಂ ಪೋಪುದು ಅರಿಯ ನಿಗ್ರಹವಹುದು ತುರುಗಗ್ರೀವನ ದಯದಿ ಸರ್ವ ಸಂಪದಬಹುದು 5 ಗೀರ್ವಾಣ ಭಾಷೆಯಲಿರುವ ಈ ಸ್ತುತಿಯನ್ನು ಚಾರು ಕನ್ನಡ ಗೀತ ರೂಪದಿಂದ ಸಾರಿದ ಲಕ್ಷ್ಮೀನಾರಾಯಣ ಶರ್ಮನು ಕೋರುವ ಕೃಪೆಯನ್ನು ಸಾಧು ಸಜ್ಜನರನ್ನು 6 ನಮೋ ರವಿ ಸೋಮನೆ ನಮೋ ಕುಜಸೌಮ್ಯನೆ ನಮೋ ಗುರು ಭಾರ್ಗವ ನಮೋ ಶನೈಶ್ಚರನೇ ನಮೋ ರಾಹು ಕೇತುವೇ ನಮೋ ಮೃತ್ಯುದೈವವೇ ನಮೋ ಭೂತಗಣನಾಥ ನಮೋ ಲಕ್ಷ್ಮೀಕಾಂತ 7
--------------
ಲಕ್ಷ್ಮೀನಾರಯಣರಾಯರು
ವಂದಿಸು ಗುರು ಸತ್ಯಸಂಧ ಮುನಿಯಾ ವೃಂದಾವನಕೆ ಹರುಷದಿಂದ ಎಂದೆಂದು ಪ ಗಂಗಾ ಪ್ರಯಾಗ ಗಯಾ ಶ್ರೀಶೈಲಹೋಬಲ ಭು ಜಂಗಾದ್ರಿ ಮೊದಲಾದ ಕ್ಷೇತ್ರಗಳನು ಇಂಗಿತಜ್ಞರ ಸಹಿತ ಸಂಬಂಧ ಗೈಸಿ ವರಮಹಿಷ ತುಂಗಾತಟದಿ ವಾಸವಾಗಿಪ್ಪ ಯತಿವರಗೆ 1 ಭೂದೇವನುತ ಸತ್ಯಬೋಧ ಮುನಿವರ ಕರ ವೇದಿಕದೊಳುದ್ಭವಿಸಿದ ಕಲ್ಪವೃಕ್ಷ ಸಾಧುಜನರಿಗೆ ಬೇಡಿದಿಷ್ಟಾರ್ಥಗಳ ಮೋದದಿ ಕೊಡುವ ಮಹಿಮರ ಕಂಡು 2 ಶ್ರೀ ಮನೋರಮನ ಅತಿವಿಮಲತರ ಶಾಸ್ತ್ರ ನಾಮಾವಳಿಗೆ ಸುವ್ಯಾಖ್ಯಾನ ರಚಿಸಿ ಧೀಮಂತ ಜನರಿಗುಪದೇಶಿಸಿ ನಿರಂತರ ಧಾಮ ಜಗನ್ನಾಥ ವಿಠಲನ ಒಲುಮೆ ಪಡೆದವರಿಗೆ 3
--------------
ಜಗನ್ನಾಥದಾಸರು
ವಂದಿಸುವೆ ಗುರು ರಾಘವೇಂದ್ರಾರ್ಯರ ವೃಂದಾವನಕೆ ಪ್ರತಿ ಪ್ರತಿ ದಿನಗಳಲ್ಲಿ ಪ ಶ್ರಾವಣ ಪರ ದ್ವಿತೀಯ ಕವಿವಾರ ತುಂಗಭದ್ರಾ ತೀರದಾ ನವ ಸುಮಂತ್ರಾಲಯದಿ ದೇಹವನು ಬಿಟ್ಟು ಮಾ ಧವನ ಪುರವೈದಿದ ಮಹಾತ್ಮರಿವರಹುದೆಂದು 1 ಸ್ವಪದಾವಲಂಬಿಗಳಿಗುಪನಿಷತ್ ಖಂಡಾರ್ಥ ಉಪದೇಶಗೈದು ಕಾಶ್ಯಸುರರನಾ ಅಪವರ್ಗ ದಾಸರೊ ಳುಪಮರಿಲ್ಲೆಂದರುಪಿದುಪಕಾರಿಗಳ ಕಂಡು2 ದೇವತೆಗಳಿವರು ಸಂದೇಹ ಬಡಸಲ್ಲ ವೃಂ ದಾವನದೆ ರಚಿಸಿ ಪೂಜಿಪ ಭಕ್ತರ ಸೇವೆ ಕೈ ಕೊಂಡವರ ಮನೋರಥವ ಸಲಿ ಸುವರು ಜಗನ್ನಾಥ ವಿಠಲಗೆ ಪ್ರಿಯರೆಂದು 3
--------------
ಜಗನ್ನಾಥದಾಸರು
ವಂದಿಸುವೆ ಗುರು ರಾಘವೇಂದ್ರಾರ್ಯರಾವೃಂದಾವನದಿ 'ೀಣೆ ನುಡಿಸುತಲಿ ಕುಳಿತವರಾ ಪನಂದಗೋಪನಕಂದ ಗೋ'ಂದ ಗೋಪಾಲಇಂದಿರಾರಮಣ ಮುಚಕುಂದವರದಾ'ಂದರ್ಪಜನಕ ಇಂದೆನಗೆ ನಿನ್ನ ಪಾದಾರ-ವೆಂದವನು ತೋರಯ್ಯ ಎಂದು ಪಾಡುತಲಿಹರ 1ನರಹರಿ ಶ್ರೀಕೃಷ್ಣ ರಾಮ ವೇದವ್ಯಾಸಮೂರೊಂದು ಮೂರ್ತಿಗಳುಪಾಸನೆಯನುಚಾರು ವೃಂದಾವನದಿ ಕುಳಿತು ಸಂತತ ಮಾಳ್ವಧೀರ ಶ್ರೀ ವೇಣುಗೋಪಾಲನನು ಕುಣಿಸುವವರ 2'ೀಣೆಯನು ನುಡಿಸುತಲಿ ಗಾಯನವ ಮಾಡುತ್ತಆನಂದ ಬಾಷ್ಪಗಳ ಉದುರಿಸುತಲಿಆನಂದಕಂದ ಭೂಪತಿ-'ಠಲನ್ನ ಸದಾಕಣ್ಮುಂದೆ ನಿಂದಿರಿಸಿಕೊಂಡ ಗುರುಗಳ ಕಂಡು 3
--------------
ಭೂಪತಿ ವಿಠಲರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವಂದೇ ಮುಕುಂದ ನಮೊ | ನಂದ ಮೂರುತಿ ಪರಮಾನಂದ ನರಸಿಂಹಾ ಪ ಬಿಸಿಜಪೀಠನ ವರವ ಪಡೆದು ಮಹಾರಾಜೇಂದ್ರ | ವಸುಮತಿಗೆ ತಾನೆ ಸ್ವಾಮಿ ಎಂದು || ಹಸುಳೆಯನು ಬಾಧಿಸಲು ಮೊರೆಯಿಡಲಾಕ್ಷಣ | ಮಿಸಣಿಪ ಕಂಭದಿ ಬಂದ ಭಳಿರೆ ನರಸಿಂಹಾ 1 ರೋಷವನೆ ತಾಳಿ ನಿಟ್ಟುಸುರಗೈಸಿಕೊಳುತಾ | ಸೂಸಿ ಕಿಡಿಗಳನುದುರೆ ಕುಪ್ಪಳಿಸುತ ಕಮ || ಲಾಸನಾದ್ಯರ ಪಾಲಿಸಿದ ನರಸಿಂಹಾ 2 ಅಜವಾಣಿ ನೆಲೆಯಲ್ಲಿ ವಾಸವಾಗಿದ್ದ ನರ | ಗಜಪಗೀಯ ಮೊಗನೆ ಆನಂದ ಮಗನೇ || ಭಜಿಸುವನು ಗತಿ ಕೊಡುವ ಜನಮೇಜಯ ನೃಪವರದ | ವಿಜಯವಿಠ್ಠಲ ವರದಾತೀರ ನರಸಿಂಹ 3
--------------
ವಿಜಯದಾಸ
ವಂದೇ ವಂದೇ ವಂದೇ ನಾರಾಯಣ ಗುರುದೇವಾ ವಂದೇ ವಂದೇ ವಂದೇ ಪರಿಪೂರ್ಣ ಬ್ರಹ್ಮರೂಪ ಪರಮಾತ್ಮ ಜ್ಞಾನದೀಪ ತಾಪ ಪರಿಹರಿಪ ಜ್ಞಾನಿ ಭೂಪ ಶಿರವಿಡುವೆ ಚರಣಯುಗದೀ ಗುರುದೇವ ಎನ್ನಮನದಿ ಪರತತ್ವ ತಿಳಿವ ತೆರದಿ ಕರುಣಿಪುದು ನೀನೇ ಮುದದಿ ಜಾಗರಣ ಕನಸು ನಿದ್ರಾ ಆಗುಗಳನರಿಯುತಿರ್ದಾ ಈ ಗತಿಗಳೆಲ್ಲ ಮೀರ್ದಾ ಆ ಘನವೆ ನಿರ್ವಿಕಲ್ಪ ಅದೇ ನೀನು ಎಂದು ಪೇಳ್ದೀ ಇದು ಎಲ್ಲ ಮಿಥ್ಯವೆಂದಿ ಇದೊ ಮರಣಭಯವ ಕಳೆದಿ ನಿಜಬೋಧವಚನ ಬಲದಿ ಮರೆದಿರ್ದ ತತ್ವವಿದನು ಪರತತ್ವ ಶೋಧಕರನು ಬೊಧಿಸುತ ನೀ ನಿಜವನು ತೋರಿಸುತ ಕಾಯುವವನು ವರಜ್ಞಾನ ಜಗದಲೆಲ್ಲಾ ಮರೆದಾಡಿ ತಮವನೆಲ್ಲಾ ಪರಿಹರಿಸಲೆಂದು ನೀನೇ ಗುರುಶಂಕರನಿಗೆ ಪೇಳ್ದೀ ವಂದೇ ಶಂಕರಾ ಗುರುದೇವಾ ವಂದೇ ಶಂಕರ ಗುರುದೇವಾ ಪಾವನಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು
ವನಜಾಕ್ಷಿ ಕೇಳೆನ್ನ ಮನದನ್ನನಂದವನು ಮನನಲಿದು ಪೇಳುವೆನು ಮಹಿಮೆಯನ್ನು ತುಚ್ಛಮಾಗಿರುತಿರ್ಪ ಕಚ್ಛಪಾಕಾರದೊಳು ಇಚ್ಛೆಗೊಂಡವನಿವನೆ ಮಚ್ಚನಯನೆ ಹೆಡ್ಡತನದಲಿ ಬಂದು ದೊಡ್ಡ ಮಡುವೊಳು ನಿಂದು ಗುಡ್ಡವನು ಪೊತ್ತಿಹನೆ ದಡ್ಡನಿವನೆ ಸುರುಚಿರಾಂಗವನಿಂತು ಮರೆಗೈದು ಮುಸುಕಿನಿಂ ಪರಮಸಂಭ್ರಮವಾಂತು ಮೆರೆಯುತಿಹನೆ ಕ್ಷೋಣಿಯೊಳಗಿಂತಹರ ಕಾಣೆನಿನ್ನು ಪ್ರಾಣೇಶನಾಗಿನಾಂ ಪಡೆದೆನಿವನಂ ಏಣಾಕ್ಷಿ ನಡೆದುದಿನ್ನಾಡಲೇನು ಜಾಣ ಶೇಷಾದ್ರೀಶನಾಣ್ಮನಹನು
--------------
ನಂಜನಗೂಡು ತಿರುಮಲಾಂಬಾ
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ