ಒಟ್ಟು 4435 ಕಡೆಗಳಲ್ಲಿ , 127 ದಾಸರು , 3028 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿ ಸುಖಿಸೊ ನರನೆ - ಗುರುರಾಯರನನುದಿನ ಪ ಶರಣು ಜನರ‌ಘ ತರಿದು ಕರುಣದಿ ಚರಣ ಸರಸಿಜ ಹರುಷದಿಂದಲಿ ಅ.ಪ ನಳಿನ ಬಾಂಧವ ಕುಲದಿ ಅವತಾರ ಮಾಡಿದೆ ಇಳಿಜರಮಣನಾಜ್ಞದಿ ಕಲಿಯುಗದಿ ದ್ವಿಜರನು ಸಲಹಲೋಸುಗ ಜಗದಿ ಜನಿಸಿ ಗುರುಗಳ || ವಲಿಮೆಯನು ತಾಪಡೆದು ಕೊರಳಲಿ ತುಲಸಿ ಮಾಲೆಯ ಧರಿಸಿ ಹರಿಯನು ವಲಿಸಿ ಥಳ ಥಳ ಪೊಳೆವವ ಸ್ತಂಬದಿ ಕುಳಿತ ಶ್ರೀರಂಗವಲಿದ ದಾಸರ 1 ಮಾನಿನಿಯಳ ಮಾನರಕ್ಷಿಸಿದೆ ಶ್ರೀ ಪವ ಮಾನನಯ್ಯನ ಕರುಣವನು ಪಡೆದು ಸ್ತುತಿಸಿದಿ ವನು ಪಾಲಿಸಿ ಗುರು ಭವ ಕಾನನಕೆ ಕೃಶಾನುವೆನಿಸಿದ ಮಾನವಿ ಪುರ ನಿಲಯರನು ಅನುಮಾನವಿಲ್ಲದೆ ಮಾನಸದಿನೀ 2 ಶ್ರೀಮಧ್ವಾಚಾರ್ಯ ಸುಮತ ಶರಧಿಗೆ ಹಿಮ ಧಾಮನೆನಿಸಿ ನಿರುತ ಸೇವಿಪರಿಗೆ ಕಾಮಿತಾರ್ಥಗಳಿಗೆ ತ್ವರಿತ ನೀಡಿ ಶಿರಿವರ ಶಾಮಸುಂದರ ಸ್ವಾಮಿ ಪರನೆಂಬೊ | ಪ್ರೇಮದಿಂದಲಿ ಹರಿಕಥಾಮೃತ ಈ ಮಹಾಸುಗ್ರಂಥ ರಚಿಸಿದ ಹೇಮ ಕಶ್ಯಪ ತನಯರನುಜರ 3
--------------
ಶಾಮಸುಂದರ ವಿಠಲ
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸು ಮನವೇ ನೀ ಪೂರ್ಣ ಕರುಣಾಸಾಗರ ದೇವನ್ನಾ ಪ ದಾವ ನಿಗಮಾಗಮ ಪೌರಣಿಕ ತಿಳಿಯದು ಮಹಿಮೆದಾವನ್ನ ಅವನ ನಖಕಾಂತಿಗೆ ಸರಿ ಪೊಲಿರು ಮಿತ್ರೆಂದು ಹವ್ಯವಾಹನ್ನಾ 1 ಭಕ್ತಿ ಭಾವಕ ಶಿಲ್ಕಅನುದಿನ ಬಲಿಬಾಗಿಲ ಕಾಯಿದಿಹನಾ| ಶಾಪದಿ ವಿರಹಿತ ಮಾಡಿದನಾ 2 ಹೋ ಹೋ ಎಂದು ಬಯಿವನಾ| ಎಣಿಕೆ ಇಲ್ಲದೆ ಪರಿಪರಿ ಯಿಂದಲಿ ಅಡಿಗಡಿಗೆ ರಕ್ಷಿಪನ್ನಾ 3 ಭಗದತ್ತನು ಗಜವೇರಿ ಬಾಣವ ಬಿಡಲಾಗಳೆ ಉರುವಾತನ್ನಾ | ಗೋಪಾಲರ ರಕ್ಷಿಸಲೋಸುಗ ಬೆರಳಲಿ ಗಿರಿ ಎತ್ತಿದನ್ನಾ 4 ಏಳದೆ ಗರ್ವದಿ ಕುಳಿತರೆ ದುರ್ಯೋಧನನ ಕೆಳಗೆಡಹಿದನ್ನಾ| ಶ್ರೀಲಲನೆಯ ಮನೋಭಾವನೆ ಪೂರಿತ ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸು ಸಂತತ ಹರಿಯನು ಮನವೇ ಪ ಸ್ಮರಿಸು ಸಂತತ ಹರಿಯ ಕರುಣಾಳುಗಳ ದೊರೆಯ ಸರಸಿಯೊಳಗಂದು ಕರಿಯ ನರನ ಸಂಗರದೊಳಗೆ ಕಾಯ್ದು ದೊರೆಯ ಜಗದೀಶ ಅ.ಪ. ಪರ ಸೌಖ್ಯ ದಾನಿಗಳರಸನೆಂದು ಸಾನುರಾಗದಿ ನಂಬಿದ ಜನಕೆ ಸುರ ಮೋದ ಸಲಿಸುವ ಶ್ರೀಮ ಪತಿ ಸಾಮ ಗಾನ ಲೋಲನ ಪ್ರಸಾದಾ ಪಾದಾ 1 ಎಲ್ಲೆಲ್ಲಿ ನೋಡೆ ಮತ್ತಲ್ಲಲ್ಲಿ ನೆಲೆಸಿಹನು ಬಲ್ಲಿದನು ಭಾಗ್ಯವಂತ ನಂಬಿದವರಿ ಗಲ್ಲದೆ ಒಲಿಯ ಭ್ರಾಂತಾ ದುಷ್ಟ ಜನ ರೊಲ್ಲ ನಿಶ್ಚಯ ಮಹಂತಾರೊಡೆಯ ಕೈ ವಲ್ಯದಾಯಕನ ಇಂಥಾ ಪಂಥಾ 2 ಅಣುವಿನೊಳಗಣುವಹನು ಘನಕೆ ಘನತರನಹನು ಅಣು ಮಹದ್ವಿಲಕ್ಷಣಾ ಕಲ್ಯಾಣ ಗುಣಜ್ಞಾನ ಘನಲಕ್ಷಣಾ ಸಂಪೂರ್ಣ ಮನ ಮುಟ್ಟಿ ಕರೆದಾಕ್ಷಣಾ ಬಂದೊದಗಿ ಕುಣಿವ ಲಕ್ಷ್ಮೀ ವಕ್ಷನಾ ಅನಪೇಕ್ಷನಾ 3 ಚೆಲುವರೊಳಗತಿ ಚೆಲುವ ಸುಲಭರೊಳಗತಿ ಸುಲಭ ಒಲಿವ ಸರಿ ಬಂದ ತೆರದಿ ಗುಣಕರ್ಮ ಕುಲಶೀಲಗಳನೆಣಿಸನರಿದೀ - ಭಕುತಿ ಫಲವ ಕೊಡೆ ತಾ ತವಕದಿ ಶಬರಿ ಎಂ ಶರಧಿ ಭರದೀ 4 ನೋಡಿ ನೋಡಿಸುತಿಹನು ಮಾಡಿ ಮಾಡಿಸುತಿಹನು ನೀಡಿ ನೀಡಿಸುವ ಪಿಡಿವಾ ಪಿಡಿಸುವನು ಬೇಡಿ ಬೇಡಿಸುವ ಬಡವರೊಡೆಯ ಕೊಂ ಡಾಡುವರ ಒಡನಾಡುವಾ ಈ ಮಹಿಮೆ ಗೀಡೆಂದು ಆವ ನುಡಿವಾ ಕೆಡುವಾ 5 ಕೋದರಾದ್ಯಮರ ವ್ರಾತಾ ಸಹಿತ ಮಹ ದಾದಿ ಪೃಥ್ವಂತ ಭೂತಾದೊಳು ನಿಲಿಸಿ ಕಾದುಕೊಂಡಿಹ ವಿಧಾತಾ ಅಂಡತ್ರಿದ ಶಾಧಿಪನ ಸೂತ ಸಚ್ಚರಿತಾ 6 ನಿಗಮ ಸಂಚಾರ ಶ್ರೀ ಜಗನ್ನಾಥವಿಠಲರೇಯಾ ತನ್ನ ಪಾ ದಗಳ ಧ್ಯಾನಿಪರ ನೋಯಾಗೊಡದಂತೆ ಮಾಯಾ ರಮಣ ನಮ್ಮ ನಗಲಿ ಸೈರಿಸನು ಪ್ರಿಯಾ ಧ್ಯೇಯಾ 7
--------------
ಜಗನ್ನಾಥದಾಸರು
ಸ್ಮರಿಸು ಸ್ಮರಿಸು ಮನವೇ ಗುರುರಾಯರ ಪ ಸ್ಮರಿಸು ಸ್ಮರಿಸು ಬಿಡದೆ ಸ್ಮರಿಸು ನೀ ಗುರು ಸತ್ಯ ಜ್ಞಾನತೀರ್ಥರ ಪದವ ಸಾರುವೆ ಬೇಡಿದ್ದು ಕೊಡುವೆನೆಂಬುವರನು ಅ.ಪ ಸಂಶಯ ಪಡಬ್ಯಾಡವೋ ಇದಕೆ ನಾ ನಿ ಸ್ಸಂಶಯದಿಂದ ಪೇಳುವೆ ಸಂಶಯಾತಕೆ ಋಷಿ ವಂಶೀಕ ರಾವಣನ ಧ್ವಂಸ ಮಾಡಿದ ರಾಮನ ಸಂಸೇವಿಪರÀ ನೀ 1 ಶಾಪಾನುಗ್ರಹ ಶಕ್ತರೂ ಇವರು ಕಾಮಕ್ರೋಧವ ಬಿಟ್ಟವರೂ ತಾಪತ್ರಯಗಳಳಿದು ಪಾಪಗಳೋಡಿಸಿ ಕಾಪಾಡುವೆನೆಂದು ಜಗದಿ ಮೆರೆದವರ 2 ಗುರುಕರುಣಾಬಲದಿ ಶ್ರೀಹರಿನಪರೋಕ್ಷಿಗೈಸಿದ ಧೀರರ ದುರ್ವಾದಿಗಳ ಮುರಿದು ಗುರು ಮಧ್ವರಾಯರ ಪರಮ ಪ್ರೀತಿಯ ಪಡೆದ ನರಹರಿ ಪ್ರಿಯರ 3
--------------
ಪ್ರದ್ಯುಮ್ನತೀರ್ಥರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸುವೊ ಜನರಿಗೆ ಸಲಹುವ ದೊರೆಗಳಿನ್ನುಂಟೇವೆಂಕಟೇಶಾ ಪ ಕರುಣಾನಿಧಿ ಮಹಾಮಹಿಮ ನೀನೆಂದು ನಾ ನಂಬಿದೆವೆಂಕಟೇಶಾ ಅ.ಪ. ಬರಿದು ದಂಡಿಸಿ ನಿನ್ನ ಪದ ಹೊಂದುವ ಬಗೆ ತೋರೋವೆಂಕಟೇಶಾ ಬಾಧೆಯ ತಾಳದೆ ಹಾದಿಯ ತಪ್ಪಿದೆ ವೆಂಕಟೇಶಾ 1 ಮಾರಿ ಮುಸುಕಿ ಎನ್ನ ಗಾರು ಮಾಡದೆ ವೆಂಕಟೇಶಾಘೋರ ಜಾರದ ವಾರಿಧಿಯಲಿ ನಾ ಮುಳುಗಿದೆ ವೆಂಕಟೇಶಾ 2 ಪಾರುಗಾಣದೆ ನಿನ್ನ ಮರೆಹೊಕ್ಕೆನೋ ವೆಂಕಟೇಶಾನಾನಾಗಿ ನಿನ್ನ ಗಣ್ಮ್ರತಗರಿಯೊ ವೆಂಕಟೇಶಾ 3 ಚೋರರ ಬಾಧೆಗೆ ಚೀರಿ ಚೀರುತಲಿಹೆನೊ ವೆಂಕಟೇಶಾದೂರ ನೋಡದಿರು ದಾಸರ ದೂತ ವೆಂಕಟೇಶಾ 4 ಹತ್ತು ಒಂಬತ್ತು ವತ್ಸರದಿಂದ ಕುಂಭಿಯೊಳಿದ್ದೆ ವೆಂಕಟೇಶಾಇನ್ನೆಂತು ಪೊಗಳಲಿ ನಿನ್ನ ಕರುಣವು ಬಾರದೆ ವೆಂಕಟೇಶಾ 5 ಕುಂಕುಮ ಅಂಕಿತ ಪದಪಂಕಜ ಶೋಭಿತ ವೆಂಕಟೇಶಾಕಂದನೆಂದು ಪೊರೆಯದಿರೆ ಬಿರಿದುಂಟೆ ವೆಂಕಟೇಶಾ 6 ಜ್ಞಾನದಿ ನಿನ್ನ ಧ್ಯಾನಿಪಲೊಲ್ಲೆ ವೆಂಕಟೇಶಾತೇಜ ತಂದೆವರದಗೋಪಾಲವಿಠಲ ವೆಂಕಟೇಶಾ 7
--------------
ತಂದೆವರದಗೋಪಾಲವಿಠಲರು
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು
ಸ್ಮಾರ್ತರ ನಿಂದನೆ ಮಾಡುವ ಕೆಟ್ಟ ಧೂರ್ತನ ಬಾಯ ಮೇಲೆ ಹೊಡೀ ಹೊಡೀ ಪ ಕರ್ತಾರ ಸ್ವರ ಸಮನೆನಿಸುವವರ ಪುರು- ಷಾರ್ಥಯುತ ಶೃತಿ ಶಾಸ್ತ್ರ ಪ್ರವರ್ತರ ಅ.ಪ ಪ್ರಮಾಣವನುಸರಿಸುವರ ವಿಹಿತವಾಗಿ ತಮ್ಮಂತೆ ಸರ್ವರನು ವಿಶೇಷದಿಂದರ್ಚಿಸುವವರ ಪ್ರಕಾಶಿಸುವವರ ಕರ್ಮ ಸಮ್ಯಜ್ಞಾನವಸಂಪಾದಿಸುವರ 1 ವೇದಾಭ್ಯಾಸದಿ ಕಾಲವ ಕಳೆಯುತ ವಿಹಿತರಿವರೆನಿಸಿಕೊಳ್ಳುವರ ಭೇದಾಭೇದಗಳರಿಯುತಲೀ ಬ್ರಹ್ಮವಾದದಲಿ ಸಂತೋಷಿಪರ ಪ್ರೀತಿಯ ಮಾಡುವರ ಹೃದ್ಗುಹೆಯಲಿ ನೋಳ್ಪರ 2 ನಂಬಿರುವವರ ವಿಧಿ ಪರೇಶನಲ್ಲಿಸಮನ್ವಯಿಸುವರ ಭಕ್ತಿಯಲಿ ಪೂಜಿಪರಾ ಸಂಪಾದಿಸೆ ಪಾತ್ರರಾದವರ 3
--------------
ಗುರುರಾಮವಿಠಲ
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಗತ ಸುಗುಣಗೆ ಸ್ವಾಗತ ಕರುಣಿಗೆ ಸ್ವಾಗತವು ನವಸಚಿವರಿಗೆ | ಸ್ವಾಗತ ಸ್ವಾರ್ಥ ವಿದೂರರಾದ ಜಗನ್ನಾಯಕ ನಾಮ ರಾಯರಿಗೆ || ತರಳತನದಿ ಇವರು ಸರಳ ಮನಸ್ಸಿನಲ್ಲಿ ಸರಸ್ವತಿದೇವಿಯನೊಲಿಸಿದರು | ಪರಮಪೂಜ್ಯ ಮಹತ್ವರ ತತ್ವ ತಿರುಳು ತಿಳಿದು ಆಚರಿಸಿದರು 1 ಪ್ರಾಂತದ ಬಡವರ ಚಿಂತೆಕಡಿಯಲು ಸ್ವಾಂತದಿ ಪಂಥವ ಗೈದವರೋ || ಕ್ರಾಂತಿಯ ಹೂಡುತ ಶಾಂತಿ ಸಂಗರದಿ ನಿಂತು ಹೋರಾಡಿದ ಯೋಧರು 2 ದುರುಳರಾಳಿಕೆಯಲಿ ಜರಿದು ಧಿಃಕರಿಸಿ ಸೆರೆಮನೆ ಕಷ್ಟವ ಸಹಿಸಿದರು | ದೊರೆಯ ಸ್ವತಂತ್ರವು ಬಹುಮತದಲಿ ಸ್ವೀಕರಿಸಿದರು ಮಂತ್ರಿಪದವಿಯನು 3 ಉಚ್ಚನೀಚವೆಂಬ ಕುತ್ಸಿತ ಭಾವವ | ಕೊಚ್ಚಿ ಬೀಸಾಡಿದ ಜಾಣರು | ಅಚ್ಚಗನ್ನಡದ ವೀರ ಜನನಿಗೆ ಅಚ್ಭದ ಪ್ರೀಯ ಸುಕುಮಾರರು 4 ಈ ಮಹಾಚತುರನ ಪಡೆದ ಚಂಡ್ರಿಕಿ ಗ್ರಾಮದೇವಿ ಬಹುಪುಣ್ಯವತಿ | ಪ್ರೇಮ ದಿಂದಿವರ ನೇಮವ ನಡೆಸುವ ಶಾಮಸುಂದರನು ದಿನಂಪ್ರತಿ5
--------------
ಶಾಮಸುಂದರ ವಿಠಲ