ಒಟ್ಟು 11213 ಕಡೆಗಳಲ್ಲಿ , 138 ದಾಸರು , 6168 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ತಂದೆ ನಾಕಂದನಯ್ಯ ರಂಗಯ್ಯ ಪ ಪಾತಕಿಯು ನಾನೆಂದೆ ಘಾತಕನು ನಾನೆಂದೆ ನೀತಿಗಳ ಕಲಿಸೆಂದೆನೈ ತಂದೆ ನಿನ್ನ ಹಿಂದೆ ಅ.ಪ ತಂದೆ ನೀ ಕರೆತಂದೆ ಎಂದು ನಂಬುತೆ ಬಂದೆ ತಂದೆ ನೀ ಕೈಬಿಟ್ಟು ಹಿಂದೆ ನಿಂದೆ ನಿಂದೆಯಲಿ ನಾನೊಂದೆ ಬಂದೆ ಭವದಲ್ಲಿ ಮಂದರೋದ್ಧಾರ ಗೋಪಾಲ ತಾಪವತಂದೆ 1 ಹಿಂದೆ ಜನ್ಮಂಗಳಲಿ ಬೆಂದು ಬಳಲಿದೆನಯ್ಯ ಇಂದು ನರಜನ್ಮದಲಿ ಬಂದೆನಯ್ಯ ಬಂಧು ಬಳಗವಕಾಣೆ ಕಂದು ಕುಂದಿದೆನಯ್ಯ ಇಂದೀವರಾಕ್ಷ ಸಾನಂದ ಭೈರವೀಪ್ರಿಯಾ2 ಮುಂದಿನಾ ಪಥವಾವುದೆಂದರಿಯೆ ಮದನಾಂಗ ಮಂದಮತಿಯನು ನೀಗಿಸೆಂದೆನುವೆ ರಂಗ ಬಂದ ಸುಖದು:ಖಗಳನೊಂದೆಣಿಸು ನೀಲಾಂಗ ಕರವ ಪಿಡಿ ಮೋಹನಾಂಗ 3 ಎಂದು ತವಪಾದಾರವಿಂದವನು ಸೇರಿಸುವೆ ಅಂದು ಜನ್ಮವು ಸಫಲವೆಂದು ನಂಬಿರುವೆ ಮುಂದೆ ಜನ್ಮಗಳಿಲ್ಲ ಎಂದು ನಾನಂಬಿರುವೆ ಸಂದೇಹವೇತಕೆ ನಿನ್ನ ಸೂತ್ರದೋಲ್ ಮೆರೆದೆ 4 ಮಂದಾಕಿನೀಜನಕ ನಂದಗೋಪನ ಕಂದ ಇಂದೀವರಾಕ್ಷ ಮುಚುಕುಂದವರದಾ ಎಂದೆಂದು ವಂದನೆಯ ಮಾಳ್ಪುದೆನಗಾನಂದ ಇಂದದನು ಕರುಣಿಸೈ ಮಾಂಗಿರಿಯ ಗೋವಿಂದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀ ಮನದೊಳು ಜಪಿಸೆಲೊ ಮನುಜ ಪ ಸಾರದ ಪದವಿಯ ಸೇರಿರುತಿರುವರೆ ಅ.ಪ ಸಂಚರಿಸದೆ ನಿಶ್ಚಿಂತೆಯೊಳಿರುವರೆ 1 ಪೃಥಿವಿಯ ಭೋಗವಸ್ಥಿರವೆನುತ 2 ನಿಲ್ಲಿಸಿ ಭಾವಿಸಲಲ್ಲಿರುತಿಹನು 3 ಹೊಂದುತೆಲ್ಲ ಗೋವಿಂದನಿಚ್ಛೆಯೊಳು 4 ನಿರತಾನಂದದೊಳಿರು ನೀ ನಿಜದೊಳು 5
--------------
ಸದಾನಂದರು
ನೀ ಯಾಕ ಮನವೇ ಚಿಂತಿಸಿ ಬಳಲುವೆ ಬರಿದೇ | ಶ್ರೀಯರಸನ ಮೊರೆ ಹೋಗದೇ ಪ ಸಾಧುರಾ ಸಂಗ ಜರಿದು ಕುಜನರ ನೆರೆವಿಡಿದು | ಮೇದಿನಿಯೊಳು ನಿನ್ನ ನೀ ಮರೆದು 1 ಇರಲು ಮುಳ್ಳಿನಾಗ್ರದಲಿ ಹೀನ ಕೀಟಕಾವಳಿ | ಪೊರೆವಾನಿತ್ತು ಆಹಾರದಯಲೀ 2 ಮನುಜರಿಗೆ ತಲೆವಾಗಿ ಗೇಣು ವಡಕಲಾಗಿ | ಮನಸಾ ಹಿಡಿವರೇ ಪರರು ಹೋಗಿ 3 ಹುಟ್ಟಿಸಿದಾ ದೇವನು ಹುಲ್ಲು ಮೇಯಿಸುವನೇನು | ಅಷ್ಟಾಸಾಯಸ ಬಡದಿರು ನೀನು 4 ಅನುದಿನ ಗುರುಮಹಿಪತಿ ಚರಣಾ | ತಂದಿದಿರುಡುವ ನಿಧಾನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀ ಸುಮಂಲಿ ವರಗುಣಶೀಲೆ ನೀ ಸುಮಂಗಲಿ ಪ ಸತತ ಮಾತಾ ಪಿತರ ವಚನ ಹಿತದಿ ನೀನು ಆಲಿಸುತ | ಪತಿಯು ಪರದೈವವೆಂದು ನೇಮದಿ ತಿಳಿದು ನೀ ಮಾಡುವುದು ವ್ರತ 1 ನಿರುತ ಗೋವು ಭೂಸುರರ ಸೇವಾ ಹರುಷದಲಿ ಶ್ರೀ ಗೌರಿ ಪೂಜಾ ತರುಣಿ ಗೈದು ಜಗದಿ ನೀನು ಪಾದ ಸುಕುಮಾರ ಪಿತನಪಾದ ಭಜಿಸೆ 2 ಕೋಮಲಾಂಗಿ ಸೋಮವದನೆ ಆ ಮಹಾತ್ಮ ಶೀಲೆ ರಾಧಾ ಭಾಮೆ ತಾರಾಸೀತೆಯಂತೆ ಶಿರಿಶಾಮಸುಂದರ ದಯ ಪಡೆಯೆ ನೀ 3
--------------
ಶಾಮಸುಂದರ ವಿಠಲ
ನೀಚಕೃತ್ಯದ ಮನಸೇ ನಿನಗೆ ತುಸು ನಾಚಿಕಿಲ್ಲಲೆ ಹೊಲಸೆ ಪ ಪ್ರಾಚೀನಹಿರಿಯರ ಯೋಚಿಸಿನೋಡದೆ ನೀಚತನದ ಆಲೋಚನೆಯೊಳು ಬಿದ್ದು ಅ.ಪ ಕುಂತಿಸುತನ ರಥವ ನಡೆಸಿದನು ಅ ತ್ಯಂತ ಕೃಪೆಯಿಂದ ಹರಿಯು ಕಂತುಜನಕ ಭಕ್ತ ಚಿಂತಾಯಕನೆಂದು ಅಂತರಂಗದಿ ಭಜಿಸಿ ಸಂತಸ ಪಡುವಲ್ಲಿ 1 ಅಂಬರೀಷನೆಂಬುವ ನೃಪಗೆ ಮುನಿ ಡೊಂಬೆಯಿಂಬ (?) ಶಾಪಿಸಲು ಅಂಬುಜಾಸನ ಬಂದು ಬೆಂಬಲಿಸಿ ನೃಪನನ್ನು ಇಂಬಿಟ್ಟು ಪೊರೆದದ್ದು ನಂಬಿ ಭಜಿಸವಲ್ಲಿ 2 ಭೂಮಿಪ ಬಲಿಚಕ್ರನ ಬಾಗಿಲ ಕಾಯ್ದ ಪ್ರೇಮದಿಂ ರಮೆಯರಸನು ಪ್ರೇಮದಿಂ ಭಕುತರ ಕಾಮಿತವೀಯಲು ಕಾಮಧೇನೀತನೆಂದು ನೇಮದಿಂದರವಲ್ಲಿ 3 ಗೌತಮ ಮುನಿಸತಿಯು ಪಾಷಾಣವಾಗಿ ಕ್ಷಿತಿಮೇಲೆ ಎರಗಿರಲು ಕ್ಷಿತಿಜಾತೆಪತಿ ತಾನು ಅತಿಹಿತದ ಕೃಪೆಯಿಂದ ಪತಿತಗೈದವನೆಂದು ಸ್ತುತಿಸಿ ಒಲಿಸವಲ್ಲಿ 4 ಹನುಮಂತನೊಡೆಯನಾದ ಜನಕಜೆಪತಿ ವನಜಾಕ್ಷ ಶ್ರೀರಾಮನ ಘನತರಮಹಿಮೆಯ ಅನುದಿನಕೊಂಡಾಡು ಘನಮುಕ್ತಿ ಸಾಮ್ರಾಜ್ಯ ಕನಿಕರದಿಂ ಕೊಡುವ 5
--------------
ರಾಮದಾಸರು
ನೀಚನಲ್ಲವೇ ಇವನು ನೀಚನಲ್ಲವೇ ಪ ಕೀಚಕಾರಿಪ್ರಿಯನ ಗುಣವ ಯೋಚಿಸದಲೆ ಯಾಚಿಸುವÀನು ಅ.ಪ. ಶ್ರೀಕಳತ್ರನಂಘ್ರಿ ಕಮಲವೇಕಚಿತ್ತದಲ್ಲಿ ಮನೋ ವ್ಯಾಕುಲಗಳ ಬಿಟ್ಟು ಸುಖೋದ್ರೇಕದಿಂದ ಭಜಿಸದವನು 1 ಲೋಕವಾರ್ತೆಗಳಲಿ ಏಡ ಮೂಕರೆನಿಸಿ ವಿಷಯಗಳವ ಲೋಕಿಸದಲೆ ಶ್ರೀಶಗಿವು ಪ್ರತೀಕವೆಂದು ತಿಳಿಯದವನು 2 ಜನನಿ ಜನಕರಂತೆ ಜನಾರ್ದನನು ಸಲಹುತಿರಲು ಬಿಟ್ಟು ಧನಿಕರ ಮನೆಮನೆಗಳರಸಿ ಶುನಕನಂತೆ ತಿರುಗುವವನು 3 ಹರಿಕಥಾಮೃತವ ಬಿಟ್ಟು ನರ ಚರಿತ್ರೆಯಿಂದ ದ ರ್ದುರಗಳಂತೆ ಹರಟೆ ದಿವಸ ಬರಿದೆ ಕಳೆಯುತಿಪ್ಪ ಮನುಜ4 ಕರ್ಮ ತೊರೆದು ಪರರ ಗೃಹಗಳಲ್ಲಿ ಸಂಚರಿಸುತ ನಿಂದಿಸುವ ಮನುಜ5 ಬಹಳ ದ್ರವ್ಯದಿಂದ ಗರುಡ ವಾಹನನಂಘ್ರಿ ಭಜಿಸಿ ಅನು ಗ್ರಹವ ಮಾಡು ಎಂದು ಬೇಡಿ ಐಹಿಕಸುಖವ ಬಯಸುವವನು 6 ಕರಣ ಜನ್ಯ ಪುಣ್ಯಪಾಪವೆರಡು ಹರಿಯಧೀನವೆಂದು ಸ್ಮರಿಸುತಲತಿ ಭಕುತಿಯಿಂದ ಹರುಷಪಡದಲಿಪ್ಪ ಮನುಜ 7 ಜೀವನ ಕರ್ತೃತ್ವ ಬಿಟ್ಟು ದೇವನೊಬ್ಬ ಕರ್ತೃ ರಮಾ ದೇವಿ ಮೊದಲುಗೊಂಡು ಹರಿಯ ಸೇವಕರೆಂದರಿಯದವನು 8 ವಾತಜನಕನೆನಿಪ ಜಗನ್ನಾಥವಿಠ್ಠಲನ ಪದಾಬ್ಜ ಭವ ವೈತರಣಿಯ ದಾಟದವನು 9
--------------
ಜಗನ್ನಾಥದಾಸರು
ನೀಚಮನಸೆ ನೀ ಯೋಚಿಸಿ ಕೆಡಬೇಡ ಬರಿದೆ ಪ ಸಾರವಿಲ್ಲದ ನಿಸ್ಸಾರ ಸಂಸಾರವೆಂಬುದು ಮಾಯಾಬಜಾರ ತೋರಿ ಅಡಗುತಿಹ್ಯದು ನಿಮಿಷ ನೀರಮೇಲಿನ ಗುರುಳೆತೆರದಿ ಪರಿ ಸ್ಥಿರವಲ್ಲದನರಿದು ನೋಡೋ 1 ಕಾರಣಲ್ಲದ ಕಾಯವಿದು ಮೂರುದಿನದಸುಖವ ಬಯಸಿ ಮೀರಿಸಿ ಗುರುಹಿರಿಯರ್ವಚನ ಪಾರಮಾರ್ಥವಿಚಾರ ಮರೆಸಿ ಸೂರೆಗೈದು ಸ್ವರ್ಗಭೋಗ ಘೋರನರಕಕೆಳಸುತಿಹ್ಯದು 2 ಆಶಾಬದ್ಧನಾಗಿ ಭವಪಾಶದೊಳಗೆ ಸಿಲುಕಬೇಡೆಲೊ ವಾಸನಳಿದು ಐಹಿಕಸುಖದ ಕ್ಲೇಶನೀಗಿ ಸುಶೀಲನಾಗಿ ಬೇಸರಿಲ್ಲದೆ ಶ್ರೀಶಜಗದೀಶ ಶ್ರೀರಾಮನಂಘ್ರಿ ಭಜಿಸು 3
--------------
ರಾಮದಾಸರು
ನೀಡೆಲೋ ಶ್ರೀರಂಗಾ ನಿನ್ನ ದಾಸರ ಸಂಗಾ ಪ ಕೂಡಿಸಿ ತವ ಚರಿತಾಮರ ಗಂಗಾ | ಮಾಡುವದು ಭವಭಂಗಾ1 ಮೂಡಲುದಯದಲಿ ಜ್ಞಾನಪತಂಗಾ | ಓಡುದು ತಮ ಅಂತರಂಗಾ 2 ಸುಗಮದಿ ಗುರುಮಹಿಪತಿ ಪ್ರಭು | ಕಂಗಳಿಗೆ ದೋರುವುದು ಸುಖದಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀದಯಮಾಡಿ ಸಲಹೊ ಎನ್ನ ಪರಮಾತ್ಮ ಭವ ತೊಡರು ಬಿಡಿಸೊ ಪರಮಾತ್ಮ ಪ -----ಸಂಖ್ಯಾನೂರು ಬಳಲುತಿರೆ ಪರಮಾತ್ಮ ಇವರ ಸಂಚಿತವು ಏನೋ ಕಾಣೆನು ಪರಮಾತ್ಮ ಕೋಟಿ ಉದ್ಯೋಗದವರು ---- ಪರಮಾತ್ಮ ಪ್ರಪಂಚಕ್ಕೆ ಸರಿ ಕಾಣಲಿಲ್ಲ ಪರಮಾತ್ಮ 1 ನಾನಾ ಪರಿಯಿಂದ ನಡೆದೆ ಕಷ್ಟದಿಂದ ಪರಮಾತ್ಮ ನಿಮ್ಮ ಧ್ಯಾನವು ಎನ್ನ ಮನಕೆ ನಿಲಕದು ಪರಮಾತ್ಮ ------- ಜೀವಕೆ ಇನ್ನು ಪರಮಾತ್ಮ ಸುಜ್ಞಾನಿಗಳಿಗೆ ಜೀವನ ನೀನು ಪರಮಾತ್ಮ 2 ಸಾರಜಗವ ರಕ್ಷಿಸುವಂಥ ಪರಮಾತ್ಮ ನಿ- ಸ್ಸಾರ ಮಾಡುವರೆ ಎನ್ನ ಪರಮಾತ್ಮ ವೀರ ' ಹೊನ್ನ ವಿಠ್ಠಲಾ’ ಶ್ರೀ ಪರಮಾತ್ಮ ಗುಣ ಗಂಭೀರ ಪುಣ್ಯಪರುಷ ಕೇಳೊ ಪರಮಾತ್ಮ 3
--------------
ಹೆನ್ನೆರಂಗದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನಹುದೋ ಶ್ರೀ ಹರಿ ಮುನಿಜನರ ಸಹಕಾರಿ ಅನಾಥÀರಿಗಾಧಾರಿ ನೀನೆವೆ ಪರೋಪರಿ ಧ್ರುವ ಪತಿತ ಪಾವನ ಪೂರ್ಣ ಅತಿಶಯಾನಂದ ಸುಗುಣ ಸತತ ಸುಪಥ ನಿಧಾನ ಯತಿ ಜನರ ಭೂಷಣ1 ಬಡವರ ನೀ ಸೌಭಾಗ್ಯ ಪಡೆದವರಿಗೆ ನಿಜ ಶ್ಲಾಘ್ಯ ದೃಢ ಭಕ್ತರಿಗೆ ಯೋಗ್ಯ ಕುಡುವದೇ ಸುವೈರಾಗ್ಯ 2 ಭಾಸ್ಕರ ಕೋಟಿ ಲಾವಣ್ಯ ಭಾಸುತಿಹ್ಯ ತಾರ್ಕಣ್ಯ ದಾಸ ಮಹಿಪತಿ ಜನ್ಮ ಧನ್ಯ ಲೇಸುಗೈಸಿದಿ ನಿನ್ನ ಪುಣ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನಾಗಿ ನಿನ್ನೊಳಗಿರುತಿರುವನ ಧ್ಯಾನಿಸುತಿರು ಜೀವಾ ಎಲ್ಲ ಅವನ ಸೇವಾ ಪ ಜ್ಞಾನಿಗಳೊಡನಾಡದೆ ಸಂಸಾರದಿ ನಾನೆಕರ್ತನೆಂದು ನರಕ ಪೊಂದುವೆ ಯಾಕೆ ಅ.ಪ ಜಾಗುಮಾಡದೆ ನಿರತಾ ನಾಗಶಯನ ವಿಶ್ವತೈಜ ಪ್ರಾಜ್ಞ ನಾಗಿನಿನಗೆ ಕೊಡುವನು ಎಂದರಿಯೊ 1 ಬಿಂಬನವನು ಪ್ರತಿಬಿಂಬನು ನೀನೆಂದು ಹಂಬಲಿಸುವುದುಚಿತಾ ಅಂಬುಜಾಕ್ಷಗರ್ಪಿಸಿ ಸುಖಿಯಾಗೊ2 ಸ್ವಾಭಾವ್ಯದಿ ಸತತಾ ವಿಭೇದ ಲ- ಕ್ಷ್ಮೀಭೂರಮಣ ಶ್ರೀಗುರುರಾಮವಿಠಲನು 3
--------------
ಗುರುರಾಮವಿಠಲ
ನೀನಿಲ್ಲದ ಜಗವಿನಿತಿಲ್ಲ ನೀನಲ್ಲದೆ ಎನಗಾರಿಲ್ಲ ಪ ನೀನೆ ನೀನೆಯಾಗಿ ಕಾಣಿಸಿ ಜಗ ಮಾಯಮಾಣಿಸುವಿ ನಿಜ ಸುಳ್ಳಲ್ಲ ಅ.ಪ ಹೊತ್ತುಗೊತ್ತು ಎಲ್ಲ ನಿನ್ನಿಂದೇ ನಿತ್ಯ ಅನಿತ್ಯವೆಲ್ಲ ನಿನ್ನಿಂದೇ ಸತುಚಿತುಚಿದ್ವಸ್ತು ತತ್ವಸರ್ವತ್ರಸೂತ್ರವೆಲ್ಲ ನಿನ್ನಿಂದೇ 1 ಸೃಷ್ಟಿ ಕ್ಷೇತ್ರ ತೀರ್ಥ ನಿನ್ನಿಂದೇ ಅಷ್ಟಸ ಭುವಗಳ್ನಿನ್ನಿಂದೇ ಹುಟ್ಟುಸಾವು ಎಲ್ಲ ಸ್ಪಷ್ಟದಿ ನೋಡಲು ಸೃಷ್ಟಿ ಪ್ರಳಯವಷ್ಟು ನಿನ್ನಿಂದೇ 2 ನಿಖಿಲ ವೇದ ನಿನ್ನಿಂದೇ ಅಖಿಲದೇವರೆಲ್ಲ ನಿನ್ನಿಂದೇ ಸಕಲಮಂತ್ರಮೂಲ ಭಕುತಾಭಿ ಶ್ರೀರಾಮ ಮುಕುತಿಸಂಪದ ಸಿದ್ಧಿ ನಿನ್ನಿಂದೇ 3
--------------
ರಾಮದಾಸರು