ಒಟ್ಟು 5968 ಕಡೆಗಳಲ್ಲಿ , 126 ದಾಸರು , 3550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು
ಶರಣುಹೊಕ್ಕೆನು ಕರುಣಾಂಬುಧಿಯೇ ಕಾಯೊ ಪ ಸುರಪುರ ನಿಲಯ ಲಕ್ಷ್ಮೀಪತಿಯೇ ಅ.ಪ ಪುಂಡುದಾನವರ ಶಿರವನೆ ಛೇದಿಸಿ ಮುಂ ದಿಂಡುದರಿದು ರಕ್ಕಸರ ಸಂಹರಿಸಿ ಖಂಡ ವಿಭೀಷಣಗುದ್ದಂಡಪದವಿಯ ಇತ್ತನೆಂದು 1 ಸುರಪನ ವರ ತನುಜನ ರಥದೊಳು ನಿಂದು ಕರುಣದಿಂದಲೆ ತುರಗವ ಪೊಡೆಯೆ ಕುರುಕುಲ ಚತುರ್ಬಲವ ಸಂಹರಿಸಿಯೆ ಉರಗಶರವು ಬರೆ ನರನ ಕಾಯ್ದನೆಂದು 2 ನರಮೃಗರೂಪಿನಲಿ ಹಿರಣ್ಯಕಶಿಪುವಿನ ಉರವ ಬಗೆದು ಶರಣನ ಪೊರೆಯೆ ಸುರಪುರವಾಸನೆ ಶ್ರೀಲಕ್ಷ್ಮೀ ಅರಸನೆ ದುರುಳ ನೆಗಳ ಕೊಂದು ಕರಿಯ ಕಾಯ್ದನೆಂದು 3
--------------
ಕವಿ ಲಕ್ಷ್ಮೀಶ
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಶಿವದನೇರೆಲ್ಲ ದಿವಸಿವ್ರತವ ಮಾಡಿರೇ ಶಶಿಧರನ ಮಡದಿಯಾ ಭಜಿಸಿ ಪಾಡಿರೇ ಪ ಕತ್ಲೆರಾಯನ ಪತ್ನಿಯೂ | ಸುಪುತ್ರನ್ನ ಪಡೆಯಲೂ ಇತ್ತಳು ವಸ್ತ್ರಗಳನ್ನು ಚೆಂದದಿ ದ್ವಿಜರಿಗೆ ಕೊಡಲೂ ಪಡೆದಳು ಪುತ್ರನಾ ಬುಧರು ಕಾಳಿಂಗ ನೆಂದು ಕರೆದರು ಪರಿ ಪರಿವಿಧದಿಂದ ರಾಜರು ಹರುಷಗರೆದರೂ 1 ಗಿರಿಕಾನನದಿ ಚಲಿಸಿ | ಮೃಗವ ಸಂಹರಿಸೀ ಬಾಲಕನೂ | ಬರುತಿರಲು ಬಾಲಕನು ವ್ಯಾಘ್ರದ ದನಿಕೇಳಿ ಮೂರ್ಛೆಗೈದು ಮೃತನಾದನು 2 ಮೃತನಾದ ಸುತಗೆ | ಸತಿಯ ಕೊಡಬೇಕೆಂದು ಸಾರಿಸಿದ ಸತತ ದ್ರವ್ಯ ಕೊಡುವೆನೆಂದು ಮಾತ ನಾಡಿದೆ ದ್ವಿಜನಸುತನ ಸತಿಯ ತ್ಯಜಿಸಿ ಹೋಗಿರಲು ನಿಜಸುತಗೆ ಭಗಿನಿಯ ಕೊಡುವೆನೆಂದು ನುಡಿದಾನು 3 ಬೆಳ್ಳಿ ಬಂಗಾರ ಸಹಿತ ನಮಗೆ ಇರುವೋದೂ ಕನ್ನಿಕೆಗೆ ಮಾಂಗಲ್ಯ ಬಂಧನ ಮಾಡಿಹೋದಾರು 4 ರಾಜನು ಹೋಗುವಾಗ | ಸೊಸಿಯಮನೆಗೇಳೆಂದನು ಪತಿಯ ಬಿಟ್ಟು ಹ್ಯಾಂಗೆ ಮನೆಗೆ ಬರುವೋದೆಂದಳು ಪತಿಯ ಬಿಟ್ಟು ಬಂದರೆ ಪತಿವ್ರತವು ಇರುವೋದೆ ಹಿತವು ಬಯಸಿ ಬಂದರೆ ಸದ್ಗತಿಯು ದೊರೆವುದೇ 5 ಒಂದು ದಿನ ಸುಂದರಿ ಬಂದವರ ಕೇಳಿದಳು ಇಂದು ದಿವಸಿ ವ್ರತವು ಅಂದರು ಹಿಂದೆ ಗೌರಿಪೂಜಿಸಿದೆ ಮುಂದೆ ವ್ರತವನು ಬಂಧು ಬಳಗೆ ಇಲ್ಲದಲೆ ಮಾಡುವುದೇನು 6 ನಾರುಬತ್ತಿ ನೀರು ಎಣ್ಣೆ ಗೌರಿಗೆ ಮಾಡಿದಳು ಅಪಾರ ಸದಿಗೆ ಮುರಿದುಗೌರಿ ಪೂಜಿಸಿದಳು ಹರತಾ ಭಂಡಾರ ಒಡೆದು ಹರುಷಗರೆದನು ವರ ಕಾಳಿಂಗ ಕ್ಷಣ ದೊಳೆದ್ದು ಮಾತಾಡಿದನು ಪತಿಯಸಹಿತಾಗಿ ತಮ್ಮ ಗೃಹಕೆ ಬಂದರು ಸತತ ನಾರಸಿಂಹನ ಸ್ಮರಣೆ ಮಾಡಿದರು 7
--------------
ಓರಬಾಯಿ ಲಕ್ಷ್ಮೀದೇವಮ್ಮ
ಶಾಮಸುಂದರನೆ ನೀನು ಪ್ರೇಮಾದಿ ಕಾಯೊ ಪ ಧರೆಯೊಳು ನಾ ಬಂದು ಥರಥರದಲ್ಲಿ ನೊಂದು ಮರುಗಿದೆ ತೋರ್ನಿನ್ನ ಚರಣಕಮಲವಾ 1 ಅನ್ಯನೆಂದರಿಯದೆ ನಿನ್ನವನೆಂದೆನ್ನ ಬನ್ನ ಬಿಡಿಸು ಬಾರೋ 2 ಶ್ರೀವತ್ಸಾಂಕಿತ ನೀನು ಶರಣಾಗತ ನಾನು ಸರಸಿಜನಯನ ಬ್ಯಾಗ ಬಾರೊ ನಿನ್ನ 3
--------------
ಸಿರಿವತ್ಸಾಂಕಿತರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿಖಾಮಣಿ | ದುರ್ಗುಣಿ ಪ ಶ್ರೀ ಕಳತ್ರನೆ ಜಗದೇಕ ನಾಯಕನೆಂದರಿಯದೆ ಅ.ಪ ಬನ್ನ ಬಿಡಿಸುವರೇನೊ ಮಾನವ ಕಡು ಮೂರ್ಖನೆ 1 ನಾನಾ ಪ್ರಯತ್ನಗಳ ಕಾಣುವುದಿಲ್ಲವೇಕೊ ಪ್ರಾಣಿಮಾತ್ರನು ನೀ ನಿಜವಿದು 2 ವರಿಗೆ ಬಿಡದೆ ಸರ್ವರೊಳಗೆ ನಿಂತಿಹ ಗುರುರಾಮ ವಿಠಲನೆಂದರಿಯದೆ 3
--------------
ಗುರುರಾಮವಿಠಲ
ಶಿರಬಾಗಿ ಬೇಡ್ವೆ ಎನ್ನನು ಪೊರೆಯೋ ಹರಿಯೇ ಶರಣ ರಕ್ಷಕನೆಂಬೊ ಬಿರುದುಳ್ಳ ದೊರೆಯೇ ಪ ಘನಮಹಿಮನೇ ನಿನ್ನ ಪಾವನ ಚರಣಕಮಲ ಎಂಬೋ ಮನವ ಆಕರ್ಷಿಸುವ ಪಂಜರದಲಿ ವನಜನಾಭನೆ ಎನ್ನ ಮನವೆಂಬ ರಾಜಹಂಸ ನನ್ನ ಲೋಲ್ಯಾಡಿಸೋ ಅನುದಿನದಲಿ 1 ಇಂದಿನ ದಿನವೇ ಸ್ಮøತಿಯಿಂದ ಇರುವಾಗ ಮು- ಕುಂದ ತವ ಸ್ಮರಿಸುವೆÉ ಕೊಡು ಮೋಕ್ಷವಾ ಮುಂದೆ ಅಂತ್ಯದಲಿ ಕಫ ಪಿತ್ತ ಶೀತಾದಿ ಕಂಠ ಗುಂದಿ ವಿಸ್ಮøತಿಯಾಗಿ ಸ್ಮರಣವಹುದೈಯ್ಯಾ 2 ಶ್ರೀಶ ಹನುಮೇಶವಿಠಲನೇ ನಿನ್ನಾಧೀನ ದಾಸನ ಮನದಪೇಕ್ಷವ ಪೂರಿಸೋ ಕೇಶವನೆ ಶಾಸಕನೆಂದು ಆಶಿಸಿ ಬಂದೆ ಬೇಸರ ಮಾಡದಲೆ ಪೋಷಿಸೈ ಸ್ವಾಮಿ 3
--------------
ಹನುಮೇಶವಿಠಲ
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿವ ಮಹದೇವಗೆ ಶರಣೆಂಬೆನಾ ಮಾಯಾ ಶಿರ ಮಾಲಾಧರನಿಗೆ ಶರಣೆಂಬೆ ನಾ ಪ ಪಾರ್ವತಿ ರಮಣಗೆ ಶರಣೆಂಬೆ ನಾ ಭವತಾಪ ಸಂಹಾರಗೆ ಶರಣೆಂಬೆನಾ ಸರ್ವಕಾಲ ಬಿಡದೆ ಶರಣೆಂಬೆನಾ ಸಾಧು ಸಜ್ಜನರ ಪೊರೆವಗೆ ಶರಣೆಂಬೆನಾ 1 ನಂದಿವಾಹನಗೆ ಶರಣೆಂಬೆನಾ ನಾಗ ಭೂಷಣಗೆ ಶರಣೆಂಬೆನಾ ಸುಂದರ ಮೂರ್ತಿಗೆ ಶರಣೆಂಬೆನಾ ಸುರಮುನಿ ವಂದ್ಯಗೆ ಶರಣೆಂಬೆನಾ 2 ಗಜಚರ್ಮಧಾರಿಗೆ ಶರಣೆಂಬೆನಾ ಕೈಲಾಸ ವಾಸಿಗೆ ಶರಣೆಂಬೆನಾ ಭಯನಾಶ ಮಾಡ್ವವಗೆ ಶರಣೆಂಬೆನಾ ಭಕ್ತಿಭಾವ ಮಾನಸನಿಗೆ ಶರಣೆಂಬೆ ನಾ 3 ಲಯಕರ್ತ ಮೂರ್ತಿಗೆ ಶರಣೆಂಬೆನಾ ಕೈಲಾಸವಾಸಿಗೆ ಶರಣೆಂಬೆನಾ ಭಯನಾಶಮಾಡ್ವವಗೆ ಶರಣೆಂಬೆನಾ ಭಕ್ತಿಭಾವ ಮಾನಸನಿಗೆ ಶರಣೆಂಬೆ ನಾ 4 ಆಕಾರಶೂನ್ಯ ಪರೇಶಗೆ ಶರಣೆಂಬೆನಾ ಅಖಿಲಾಕಾರ ತಾನೆಂಬಗೆ ಶರಣೆಂಬೆನಾ ಲೋಕದೋಳ್ ಭಕ್ತರ ಪೊರೆವಗೆ ಶರಣೆಂಬೆನಾ ಶ್ರೀಲೋಲ ಹೆನ್ನೆವಿಠ್ಠಲ ಪ್ರಿಯಗೆ ಶರಣೆಂಬೆನಾ 5
--------------
ಹೆನ್ನೆರಂಗದಾಸರು
ಶಿವ ಶಿವ ನಿಮ್ಮ ನಾಮ ಅಡಿಗಡಿಗೆ ಬೇಕು ಪರಿಯಂತ ತಾನೊಂದೆ ಸಾಕು ಪ ಜಗವೆಲ್ಲ ಶಿವ ಮಯವು ಎಂದು ಕಾಣಲು ಬೇಕು ನಿಗಮ ದೂರನ ಹೃದಯ ದೊಳಗರಸಬೇಕು ಬಗೆಯರಿತು ಮಾನಸದಿ ಶಿವನ ಪೂಜಿಸಬೇಕು ನಿಗಮಾಗಮಸ್ತುತನ ಅಡಿಗೆರಗಬೇಕು 1 ಅನವರತ ಶಿವಮಂತ್ರವನು ಜಪಿಸುತಿರಬೇಕು ತನುಮನವ ವಸ್ತುವಿನೊಳಗಿರಿಸಬೇಕು ಘನ ಪರಂಜ್ಯೋತಿ ಸ್ವರೂಪವ ನರಿಯ ಬೇಕು ತನುಮಯ ಚಿದಂಬರನ ಕೂಡಬೇಕು 2 ನಾನು ನಾನೆಂದೆಂಬ ಹಮ್ಮ ಬಿಡಬೇಕು ಜ್ಞಾನಾಗ್ನಿಯಿಂದ ಜ್ಞಾನವನು ಸುಡುಲುಬೇಕು ಪವಮಾನ ಸುತ ಕೋಣೆ ಲಕ್ಷ್ಮೀಪತಿಯ ಕಡುಮಿತ್ರನಾದ ವನ ಪಾದವನು ಕೊಡಬೇಕು 3
--------------
ಕವಿ ಪರಮದೇವದಾಸರು
ಶಿವ-ಪಾರ್ವತಿ ಅಗಜೆ ನಿನ್ನೊಗತನಕೆ ಜಗ ನಗುವುದೇ ನಗರಾಜ ಈ ಮನೆಯ ಹೊಗಿಸಿದನೆ ಅಕಟಕಟ ಪ ಹೊಟ್ಟೆಗಿಲ್ಲದೆ ಹೋಗಿ ಹಾಲಾಹಲವನುಂಡ ತೊಟ್ಟ ತೊಗಲುಡುಗೆ ತಲೆಯೋಡು ಕೈಯ ಭೂತೇಶ ಬಲು ಸಿಟ್ಟಿನವನಂಗಸಂಗ ಬಯಸಬಹುದೆ 1 ಆರುಮೊಗದವನೊಬ್ಬ ಆರ್ತಜನು ಮೊಲೆಪಾಲು ಕಾರಿ ಕಡುಮುನಿದು ಕಂಡರೆ ಸೇರರು ಊರಿಗುಪಕಾರಿ ಒಡಲಹರಕ ಗಜಮುಖನು ನಾರಿ ಮೇನಕೆ ಮಗಳು ಕಂಡು ಹಿಗ್ಗುವಳಯ್ಯ 2 ಶಿವಶಕ್ತಿ ನಿನ್ನಂಥ ಸೌಭಾಗ್ಯವಂತೆಯಳ ಭುವನದೊಳಗಾವಲ್ಲಿ ಕಾಣೆನಿನ್ನು ಕವಿಜನಗಳೇನೆಂದು ಬಣ್ಣಿಸಿದರೊ ತಿಳಿಯೆ ಭವದೂರ ಶ್ರೀದವಿಠಲರಾಯ ಬಲ್ಲ 3
--------------
ಶ್ರೀದವಿಠಲರು
ಶಿವಕನ್ಯೇ ಗುಣರನ್ನೇ ಪ ತವಪದ ಪದುಮವ | ಜವದಲೆ ತೋರಿಸುಅ.ಪ. ಕಾಲಕೆ ಮಾನಿಯೆ | ಓಲೈಸುವೆ ಪದಕೀಲಾಲಜವನು | ಪಾಲಿಸು ಎನಗೇ 1 ಪವನ ಮತಾನುಗ | ರವನೆಂದೆನಿಪಗೆಭವ ಪರಿಹಾರಿಕ | ನವ ಭಕುತಿಪ್ರದೆ 2 ಮುಕುತಿಗೆ ಮಾರ್ಗವ | ಭಕುತಿಗೆ ಆಕರೆವ್ಯಕುತಿಯಗೈ ಹರಿ | ಭಕುತಿಗಳೆನ್ನಲಿ 3 ಸ್ತವ ಪ್ರಿಯ ನರಹರಿ | ಸ್ತವನವ ಗೈಯ್ಯುವಹವಣೆಯ ತೋರಿಸು | ಭವನಿಗೆ ಜನನಿಯೆ 4 ಗೋವ ಕಾವ ಗುರು | ಗೋವಿಂದ ವಿಠಲನಭಾವದಿ ತೋರಿಸು | ನೀ ಒಲಿದೆನಗೆ 5
--------------
ಗುರುಗೋವಿಂದವಿಠಲರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು