ಒಟ್ಟು 4717 ಕಡೆಗಳಲ್ಲಿ , 123 ದಾಸರು , 3118 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಸ್ವಾಮಿಯ ನೆನೆಯೋ ಪಾಮರ ಮನಸೆ ನೀ ತಾಮಸವನು ನೀಗಿ ಪ ಕಾಮಾದಿಗಳ ಜೈಸಾಮಹಿಮ ಸತ್ಯ ಭಾಮೇಶಗತಿಯೆಂದು ನೇಮವಹಿಸಿ ಬಿಡದೆ ನಾಮ ಪೊಗಳುವರ ಕಾಮಿತಗಳನಿತ್ತು ಪ್ರೇಮದಿಂ ಕಾಯ್ವಂಥ 1 ಗೋಪ ಗೋಪತಿ ನಮಿತ ಗೋಪಿಯ ಪ್ರಿಯಬಾಲ ಪಾಪನಿವಾರಣ ಆ ಪರಬ್ರಹ್ಮನ ಶ್ರೀಪಾದ ಪೊಗಳಲು ತಾಪತ್ರಯಂಗಳ ಲೋಪಮಾಡುವಂಥ 2 ಪರಮ ಶ್ರೀಗುರು ಎಂದು ಪರಮಾತ್ಮ ಶ್ರೀರಾಮ ಚರಣಸಾನ್ನಿಧ್ಯಕ್ಹೊಂದು ನರಕಯಾತನೆ ಗೆಲಿಸಿ ಬರುತಿರ್ಪ ಕಷ್ಟಗಳ ಪರಿಹರಿಸಿ ಕರಪಿಡಿದು ಕರುಣದಿ ಸಲಹುವ 3
--------------
ರಾಮದಾಸರು
ಸ್ವೀಕರಿಸೈ ಲೋಕನಾಥನೆ ಪ್ರಖ್ಯಾತಪ್ರಿಯನೆ ತಾಂಬೂಲವ ಪ ನೀಲವೇಣಿಯು ಜಾಲಮಾಡದೆ ಶೀಲದಿಂ ಈ ವೀಳ್ಯವ ವೇಳೆಯರಿತು ತಂದಿಹೆನು ಗೋಪಾಲಬಾಲ ತಾಂಬೂಲವ 1 ಕಮಲ ನಯನೆ ಕಮಲವದನೆ ವಿಮಲ ಮನದಲಿ ವೀಳ್ಯವ ತಾಂಬೂಲವ 2 ಗಾನಲೋಲನೆ ದೀನಪಾಲನೆ ಪ್ರಾಣನಾಥವಿಠಲನೆ ಸಾನುರಾಗದಿ ತಂದ ವೀಳ್ಯವ ಪ್ರಾಣನಾಥನೆ ಕರುಣದಿಂ3
--------------
ಬಾಗೇಪಲ್ಲಿ ಶೇಷದಾಸರು
ಸ್ವೀಕರಿಸೈ ವೀಳ್ಯಮಿದನು ಶ್ರೀಕರಾಬ್ಜಪಾಣಿಯಿಂ ಪ. ಲೋಕನಾಥ ಪಾಲಿಸೆನ್ನ ಶ್ರೀಕಟಾಕ್ಷದಿಂದಲೆ ಅ.ಪ. ಪಚ್ಚಕರ್ಪೂರಯಾಲದಿಂದ ಹೆಚ್ಚು ವಾಸನೆಯನುತಳೆದ ಅಚ್ಯುತನೆ ವೀಳ್ಯಮಿದನು ಮೆಚ್ಚಿ ನೀಡುತಿರುವೆನು 1 ತಟ್ಟೆಯನ್ನು ಪಿಡಿದು ಎನ್ನ ರಟ್ಟೆಗಳಿದು ನೊಂದವೈ ಸಿಟ್ಟುಮಾಡದೀಗ ದಯದಿ ದಿಟ್ಟಿಸೈ ಮದೀಶನೇ 2 ಲಲಿತಗಾತ್ರ ಎನ್ನೊಳಿಂತು ಚಲಮಿದೊಳ್ಳಿತೇನೆಲೈ ಜಲಜನೇತ್ರ ಶೇಷಶೈಲನಿಲಯ ನಿನ್ನ ನಮಿಪೆನೈ 3
--------------
ನಂಜನಗೂಡು ತಿರುಮಲಾಂಬಾ
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹಟವ ಮಾಡದಿರು ಕೇಳೆಲೊ ಮೂಢ ಪ ಕುಟಿಲವ ಬಿಡು ನೀ ಗಾಢ ಅ.ಪ. ಹರಿ ಸರ್ವೋತ್ತಮ ವಾಯು ಜೀವೋತ್ತಮ ಹರ ವೈಷ್ಣವೋತ್ತಮನೆನ್ನೊ 1 ಮಧ್ವ ಸಿದ್ಧಾಂತದ ಪದ್ಧತಿ ಬಿಡದಲೆ ಶುದ್ಧ ವೈಷ್ಣವರೊಳಾಡೊ 2 ಹರಿ ಶರಣರ ಚರಣ ಕಮಲಂಗಳಿಗೆ ಗರುವಪಡದೆ ನೀ ಬೀಳೊ 3 ಸಂತತದಲಿ ಶ್ರೀಕಾಂತನ ಗುಣಗಳ ಚಿಂತನೆ ಮಾಡುತ ಬಾಳೊ 4 ಮಂಗಳಾಂಗ ತ್ರಿಜಗಂಗಳ ಪೊರೆವವ ರಂಗೇಶವಿಠಲನೆನ್ನೊ 5 ನೆಲವಿತ್ತ ದಯವಂತ ಶ್ರೀಕಾಂತ 3
--------------
ರಂಗೇಶವಿಠಲದಾಸರು
ಹಣ್ಣ ಸವಿಯ ಬಾರದೇ ಪ ಹಣ್ಣನ್ನು ತಿಂದರೆ ಕೇಶವನೊಲಿಯುವಾ ಚನ್ನಕೇಶವ ಸ್ವಾಮಿ ಬಿಡದೆ ಪಾಲಿಸುವಾ ಅ.ಪ. ಪ್ರೀತಿಯೆನ್ನುವಂಥ ಬೀಜವನ್ನೇ ಬಿತ್ತಿ ಭೂತ ದಯೆಯೆಂಬುವ ವೃಕ್ಷವ ಬೆಳೆಸೀ ಆತುರದಲ್ಲಿ ಪರೋಪಕಾರವೆಂಬ ನೀತಿಯ ನೀರನ್ನು ನೇಮದೊಳೆರೆದೂ 1 ಅನುದಿನ ದಾನಧರ್ಮಗಳ ಟೊಂಗೆಗಳೇರಿ ತನುಮನ ಧನದಿಂದ ದೈನ್ಯರ ಸಲಹಿ ಘನತರ ಸ್ವಾರ್ಥ ತ್ಯಾಗವುಯೆಂಬ ಪರ್ಣವ ನೆನೆದು ಕೃತಜ್ಞತೆ ಕುಸುಮವ ಪಡೆದೂ 2 ವರತರ ದೇವಾಂಶ ಗುಣದಿಂದ ಬೆಳೆದಿರ್ಪ ಹರಿಭಕ್ತಿಯೆನ್ನುವ ಫಲವನ್ನೇ ಕೊಯ್ದು ಸರಸದಿ ಕೀರ್ತನೆ ಭಜನೆ ಸೂತ್ರಗಳಿಂದ ಪರಮ ಭಕ್ತೀಯೆಂಬ ಹಣ್ಣನು ತಿಂದೂ 3 ಧರೆಯಲ್ಲಿ ಸಿಗುವಂಥ ಹಣ್ಣನು ಸವಿದರೆ ನಿರುತ ತೃಪ್ತಿಯು ಆಗಲಾರದು ದೇವಾ ಅಮೃತ ಹರುಷದಿ ತಿನ್ನಲು ಘನಮುಕ್ತಿ ದಿಟವು 4
--------------
ಕರ್ಕಿ ಕೇಶವದಾಸ
ಹತ್ತಿಲಿಹÀ ವಸ್ತುನೋಡೊ ಮನವೆ ನಿತ್ಯ ನಿಜನಿರ್ಗುಣವ ಕೂಡೊ ಮನವೆ ಧ್ರುವ ಅತ್ತಲಿತ್ತಲಾಗದಿರು ಮನವೆ ಚಿತ್ತ ಚಂಚಲ ಮಾಡದಿರೆನ್ನ ಮನವೆ ಉತ್ತುಮ ಸುಪಥ ನೋಡು ಮನವೆ ನೆತ್ತಿಯೊಳಿಹ ಸುವಸ್ತು ಕೂಡೊ ಮನವೆ 1 ಹೋಕಹೋಗದಂತೆ ಎನ್ನ ಮನವೆ ಏಕರಸವಾಗಿ ಕೂಡೊ ಎನ್ನ ಮನವೆ ನಾಲ್ಕು ಶೂನ್ಯವ ಮೆಟ್ಟಿ ನೋಡು ಮನವೆ ಜೋಕೆಯಿಂದ ಜ್ಯೋತಿರ್ಮಯ ಕೂಡೊ ಮನವೆ 2 ಧನ್ಯವಿದು ರಾಜಯೋಗಮನವೆ ಭಿನ್ನವಿಲ್ಲದೆ ಬೆರೆದು ಕೂಡೊ ಮನವೆ ಚೆನ್ನಾಗಿ ಚಿನ್ಮಯ ನೋಡು ಮನವೆ ಅನ್ಯಪಥವಿನ್ಯಾತಕ ನೋಡು ಮನವೆ 3 ಗರ್ವಗುಣ ಹಿಡಿಯದಿರು ಮನವೆ ನಿರ್ವಿಕಲ್ಪನ ತಿಳಿದು ನೋಡು ಮನವೆ ಪೂರ್ವಪುಣ್ಯಹಾದಿ ಇದು ಮನವೆ ಸರ್ವರೊಳು ವಸ್ತುಮಯ ಒಂದೆ ಮನವೆ 4 ದೃಷ್ಟಿಸಿ ಆತ್ಮನ ನೋಡು ಮನವೆ ಪುಷ್ಟವಾಗಿ ಘನದೋರುವದು ಮನವೆ ಭ್ರಷ್ಟವಾಗಿ ಬಾಳಬ್ಯಾಡ ಮನವೆ ನಿಷ್ಠನಾಗಿ ನಿಜನೆಲೆಯಗೊಳ್ಳ ಮನವೆ 5 ಏರಿ ಆರುಚಕ್ರ ನೋಡು ಮನವೆ ಪರಮಾನಂದ ಸುಪಥ ಕೂಡೊ ಮನವೆ ಆರು ಅರಿಯದ ಹಾದಿ ಮನವೆ ತೋರಿಕೊಡುವ ಸದ್ಗುರು ಎನ್ನ ಮನವೆ 6 ಹರಿಭಕ್ತಿಯೊಳಗಿರು ಮನವೆ ಸಿರಿ ಸದ್ಗತಿ ಸುಖವ ಕೂಡೊ ಮನವೆ ಗುರುವಾಕ್ಯ ನಂಬಿ ನಡೆ ಮನವೆ ಪರಲೋಕಕ್ಕೆ ಸೋಪಾನವಿದು ಮನವೆ 7 ಪರದ್ರವ್ಯಗಲ್ಪದಿರು ಮನವೆ ಪರಸತಿಯ ನೋಡದಿರೆನ್ನ ಮನವೆ ಪರರ ನಿಂದ್ಯ ಮಾಡದಿರು ಮನವೆ ದಾರಿ ಹೋಗದಿರು ದುಷ್ಟರ ನೀ ಮನವೆ 8 ಸಜ್ಜನರ ಸಂಗ ಮಾಡೊ ಮನವೆ ಹೆಜ್ಜೆವಿಡಿದು ಪರಲೋಕ ಕೂಡೊ ಮನವೆ ಭೆಜ್ಜರಿಕೆ ಹಿಡಿಯೊ ಎನ್ನ ಮನವೆ ದುರ್ಜನರ ಸಂಗ ಮಾಡಬ್ಯಾಡೊ ಮನವೆ 9 ಕಂಗಳ ತೆರೆದು ನೋಡು ಮನವೆ ಮಂಗಳಾತ್ಮನ ಶ್ರೀಪಾದ ಕೂಡೊ ಮನವೆ ಹಿಂಗದಂತೆ ಕೂಡೊ ಬ್ಯಾಗೆ ಮನವೆ ಗಂಗೆಯೊಳು ಜಲಬೆರೆದಂತೆ ಮನವೆ 10 ಭೇದ ಬುದ್ಧಿಯ ಮಾಡಬ್ಯಾಡ ಮನವೆ ಸಾಧುಸಂತರ ಸುಬೋಧ ಕೇಳು ಮನವೆ ಭೇದಿಸಿ ತಿಳಿದುನೋಡು ಮನವೆ ಸದಮಲ ಬ್ರಹ್ಮ ಸೂಸುತಿದೆ ಮನವೆ 11 ಯುಕ್ತಿ ನಿನಗಿದು ನೋಡು ಮನವೆ ಭಕ್ತವತ್ಸಲ ಸ್ಮರಿಸು ಮನವೆ ಮುಕ್ತಿಯಿಂದಧಿಕಸುಖ ಮನವೆ ಭಕ್ತಿರಸದೊಳು ಮುಳಗ್ಯಾಡು ಮನವೆ 12 ಲೇಸು ಲೇಸು ಮಹಿಪತಿ ಸು ಮನವೆ ದಾಸನಾಗಿರುವ ವಾಸುದೇವನ ಮನವೆ ಭಾಸಿ ಪಾಲಿಪನ ಕೂಡೊ ಎನ್ನ ಮನವೆ ಭಾಸ್ಕರ ಮೂರ್ತಿಯ ನೋಡು ಮನವೆ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮ ಅಣಿಯಾರೊ ನಿನಗೆ ಈ ತ್ರಿಭುವನದೊಳಗೆಹಣಮಂತ ಗುಣವಂತ ಮಣಿಯುವೆನೊ ನಿನಗೆ ಪ ಗಡ್ ಗಡ್‍ಗಡನೆ ರಾಮನ ಪಾದಾಂಬುಜಕೆ ವಂದಿಸುತಖಡ್ ಖಡ್ ಖಡನೆ ಸಿಡಿಲಂತೆ ನಭದೊಳಗೆ ಗರ್ಜಿಸುತಧಡ್ ಧಡ್ ಧಡನೆ ಕಡಲನ್ನೆ ಜಿಗಿಯುತ್ತ ಭಡ್ ಭಡ್ ಭಡನೆ ಸೀತೆಯನು ಶೋಧಿಸುತ ಬಂದಿಯೋ 1 ಬರಬರನೆ ಬಿಂಕದಲಿ ಉರಿಯುತಿಹ ರಕ್ಕಸರದರ್ ದರ್ ದರನೆ ರಣರಂಗಕೊಬ್ಬನೇ ಎಳೆತಂದುಕರ್ ಕರ್ ಕರನೆ ಹಲ್ಗಿಡಿದು ತರಿಯುತ್ತ ಧರೆಯೊಳಗೆಭರ್ ಭರನೆ ಸಿರಿವರನ ಇಚ್ಛೆಯನು ಪೂರ್ತಿಸಿದಿ 2 ಖುದ್ ಖುದ್ ಖುದನೆ ನಗುತ ರಘುರಾಮನನು ಹೃದಯದೊಳುಖುದ್ ಖುದ್ ಖುದನೆ ಬಿಡದೇಳ್ವ ಭಕುತಿಯಲಿ ಸೇವಿಸುತಗದ್ ಗದ್ ಗದುಗಿನೊಳು ವೀರನಾರಾಯಣನಮುದ್ ಮುದ್ ವಂದಿಸಿ ಪರಬ್ರಹ್ಮನ ಪದವಿಯನೆ ಪಡೆಯೊ3
--------------
ವೀರನಾರಾಯಣ
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹನುಮ ಭೀಮಾನಂದ ಮುನಿವರೇಣ್ಯ ತಾಪ ಕಳೆದನುದಿನದಿ ಪಾಲಿಪುದು ಪ ಪ್ರಾಣಪಂಚಕ ಸುಪರ್ವಾಣ ಗುರುವರ ಜಗ ತ್ರಾಣ ತ್ರಯೀಮಯಿ ಪುರಾಣವೇದ್ಯಾ ಮಾಣದೆನ್ನಯ ಹೃದಯ ತಾಣದೊಳಗರಿ ಶಂಖ ಪಾಣಿರೂಪನ ಬಿಡದೆ ಕಾಣಿಸು ಕೃಪಾಸಿಂಧು 1 ಸೂತ್ರನಾಮಕನೆ ತಾಪತ್ರಯಗಳಿಂದ್ಹಗಲು ರಾತ್ರಿಯಲಿ ಬಳುಲುತಿಹ ನಿತ್ರಾಣನ ಗಾತ್ರದೊಳು ನೆಲೆಸಿ ಸರ್ವತ್ರದಲಿ ಸುಖವಿತ್ತು ಶತ್ರುತಾಪಕನಾಗು ಸ್ತೋತ್ರವನೆ ಕೈಕೊಂಡು 2 ಅಸುನಾಥ ಶರಣಂಗೆ ವಶವಾಗು ಅನುದಿನದಿ ಅಸುರಭಂಜನ ಜ್ಞಾನ ಸುಸುಖ್ಮಾತನೇ ಬಿಸರುಹಾಂಬಕ ಜಗನ್ನಾಥವಿಠಲನ ಕೈ ವಶಮಾಡಿ ಕೊಡುತಿಪ್ಪ ಶ್ವಸನಾವತಾರಿ3
--------------
ಜಗನ್ನಾಥದಾಸರು
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹನುಮಂತ ದೇವನ ನೋಡಿ ಘನ ವಿಜ್ಞಾನ ಧನವನ್ನು ಬೇಡಿ ಪ ಅನುಮಾನ ಸಲ್ಲ ಸುರಧೇನುವೆನಿಸುವನು ತನ್ನ ನೆನೆವರಿಗೆ ಅ.ಪ. ಅಂಜನದೇವಿಯೊಳ್ ಪುಟ್ಟಿ | ಪ್ರ- ಭಂಜನ ಸುತ ಜಗಜಟ್ಟಿ | ಶ್ರೀ ಕಂಜನಾಭನನು ಕಂಡು ಭಜಿಸುತಲಿ ತಾನು ರಂಜಿಪನು 1 ಪಾಥೋದಿಯನು ನೆರೆದಾಟಿ | ರಘು - ನಾಥನ ಮಡದಿಗೆ ಭೇಟಿ | ಇತ್ತು ಖ್ಯಾತ ಲಂಕೆಯನು ವೀತಿ- ಹೋತ್ರನಿಗೆ ಕೊಟ್ಟ ಬಲುದಿಟ್ಟ 2 ಸಂಜೀವನಾದ್ರಿಯ ತಂದು | ಕಪಿ ಪುಂಜವನೆಬ್ಬಿಸಿ ನಿಂದು | ತುಸ ಅಂಜಕಿಲ್ಲದಲೆ ಅಸುರರನು ಭಂಜಿಸಿ ನಿಂತ ಜಯವಂತ 3 ಶ್ರೀರಾಮಚಂದ್ರನು ಒಲಿದು | ಮಹ ಪಾರಮೇಷ್ಠ್ಯವನೀಯೆ ನಲಿದು | ಮುಕ್ತಾ ಹಾರ ಪಡೆದ ಗಂಭೀರ ಶೂರ ರಣಧೀರ ಉದಾರ 4 ಎಂತೆಂತು ಸೇವಿಪ ಜಂತು | ಗಳಿ ಗಂತಂತೆ ಫಲವೀವನಿಂತು | ಶ್ರೀ - ಕಾಂತ ನಾಮವನು ಆಂತು ಭಜಿಪರಲಿ ಪ್ರೇಮ ಬಹುನೇಮ 5
--------------
ಲಕ್ಷ್ಮೀನಾರಯಣರಾಯರು
ಹನುಮಂತ ಪಾಹಿ ಗುರು ಮನುಮಂತ ಪ ಹನುಮಂತ ಅನಿಮಿತ್ತ ಬಂಧು | ಶಿರ ಸಿಂಧು ಆಹಾ ಅನುದಿನ ಎನ್ನವಗುಣ ಎಣಿಸದೆ ಕಾಯೊ ಪತಿ ಸುರಮುನಿಗಣ ಸೇವಿಪ ಅ.ಪ ಸಂಜೀವನ ಗಿರಿಧಾರ | ಹೇ ಧ ನಂಜಯ ನಾಗ್ರಜ ಧೀರ | ಖಳ ಭಂಜನ ಕರುಣ ಸಾಗರ ಭಾವಿ ಕಂಜಜ ಭಕ್ತ ಮಂದಾರ ಆಹಾ ಅಂಜನೆಯಳ ತನು ಸಂಜಾತ ಸಲಹಯ್ಯ ಸಂಜೆ ಚರಾರಿ ಪ್ರಭಂಜನ ಮೂರುತಿ 1 ಕಾಳಿವಲ್ಲಭ ಕಪಿವರನೆ | ಕರು ಣಾಳು ನಂಬಿದೆ ಯತಿವರನೆ | ಖಳ ಕಾಲ ಪಾಲಿಸು ವೃಕೋದರನೆ | ಛಳಿ ಶೈಲಜೆ ಕಾಂತ ವಂದಿತನೆ | ಆಹಾ ಕೇಳಿ ಮಡದಿ ಮೊರೆ ತಾಳಿ ಸ್ತ್ರೀವೇಷರೂಪ ಖೂಳ ಕೀಚಕನುದರ ಸೀಳಿದ ಗುರುವೆರ 2 ಪೊಂದಿದೆ ಪಾಲಿಸು ಸತತ | ಕುಂತಿ ವಿನುತ | ಶಾಮ ಸುಂದರ ವಿಠಲನ ದೂತ | ಆಹಾ ಇಂದು ಕುಲಜವಿಲ್ಲ | ಒಂದೆಂಬವರ ಜೈಸಿ ಪತಿ ಪರನೆಂದು ಸ್ಥಾಪಿಸಿದೆ 3
--------------
ಶಾಮಸುಂದರ ವಿಠಲ