ಒಟ್ಟು 325 ಕಡೆಗಳಲ್ಲಿ , 70 ದಾಸರು , 293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದಂ ಮಹದಾನಂದಂಹರಿಯ ಭಜನ ಬ್ರಹ್ಮಾನಂದಂ ಪಸತ್ಯ ನುಡಿಯುವುದೆ ಆನಂದಂ ತನ್ನಗುರ್ತ ತಿಳಿಯುವುದೆ ಆನಂದಂನಿತ್ಯನಿರ್ಮಲನ ಸತ್ಯ ಗುಣಂಗಳನುಭಕ್ತಿಯಿಂ ಭಜಿಸೆ ನಿತ್ಯಾನಂದಂಸತ್ಯ ಸತ್ಯ ಸರ್ವೋತ್ತಮ ಹರಿಯೆಂದುಅರ್ತಿಯಿಂ ಭಜಿಸೆ ಅತ್ಯಾನಂದಂ 1ಆಶ ನೀಗುವುದೆ ಆನಂದಂಭವಪಾಶಗೆಲಿಯುವುದೆ ಆನಂದಂಶ್ರೀಶ ಕೇಶವನ ಸಾಸಿರ ನಾಮದಧ್ಯಾಸದಿರುವುದೆ ಲೇಸಾನಂದಂದೋಷದೂರ ಭವಪಾಶಹರನ ಅನುಮೇಷ ಪÀಠಿಸೆ ಸ್ಥಿರದಾನಂದಂ 2ಹಮ್ಮನಳಿವುದೇ ಆನಂದಂ ತಾಸುಮ್ಮನಿರುವುದೆ ಆನಂದಂಕರ್ಮರಹಿತನಾಗಿ ಬ್ರಹ್ಮಪಿತನಪಾದಒಮ್ಮನದೊಳಗಸಮಾನಂದಂಧರ್ಮವಿಡಿದು ಪರಬ್ರಹ್ಮ ಶ್ರೀರಾಮನಮರ್ಮ ತಿಳಿಯೆ ನಿರ್ಮಲಾನಂದಂ 3
--------------
ರಾಮದಾಸರು
ಆರ ಮಕ್ಕಳಾರ ರಾಣಿ ಆರ ಸಂಪದವಾರಿಜಾಕ್ಷನಿಟ್ಟ ತೆರದಿ ಇರು ಎಲೆಲೆ ಆತ್ಮಾ ಪ.ಬೇಡಿದರೆ ಕೊಡ ದೇವ ಬೇಡದಿದ್ದರೀವ ದೇವನೋಡುತಿಹ ಸುಮ್ಮನೆ ತಾನಾಡಿಪ ಜಗವರೂಢಿಯಲ್ಲಿ ಎಳೆ ಮಕ್ಕಳಾಡುವಂತೆ ಕೊಟ್ಟು ಕಳೆದುಓಡಿಸಾಡುತಿಹ ಯಂತ್ರಾರೂಢನ ಬಳಗಿದೆಲ್ಲ 1ಕಂದನ್ನಿಟ್ಟು ತಂದೆ ತಾಯಿ ತಂದೆ ತಾಯಿ ಮುಂದೆ ಕಂದನಹಿಂದೆ ಮುಂದೊಯ್ಯುವನ್ಯಮ ಸಂಬಂಧರಿಗ್ಹೇಳಿಚಂದದಿ ಜಗಜ್ಜೀವರು ದಂದುಗದಿ ತೊಳಲೆ ಕಂಡುಮಂದಸ್ಮಿತದೊಳಿಪ್ಪ ಮುಕುಂದನ ಮಾಯವಲ್ಲದೆ 2ಹಾವು ಹಾರವಕ್ಕು ಮೃತ ಜೀವರು ಸಂಜೀವರಕ್ಕುಪಾವಕತಂಪಕ್ಕು ವಿಷ ಪೀಯೂಷಮಕ್ಕುಆವಕಾಲದಿ ಶ್ರೀ ಪ್ರಸನ್ವೆಂಕಟೇಶನಂಘ್ರಿಯಭಾವದೊಳರ್ಚಿಸು ಕ್ಷುದ್ರ ಜೀವಿಗಳಾಸೆ ಸಲ್ಲ 3
--------------
ಪ್ರಸನ್ನವೆಂಕಟದಾಸರು
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಚ್ಚರ ಮನವೇ ಯದುಪತಿಯನೆಚ್ಚದಿರು ಚೋಹದನಿಕೆ ತನುವ ಪ.ವೇಳ ವೇಳಾಯು ವೃಥಾ ಹೋಯಿತೆಚ್ಚರಕಾಲಪಮೃತಿ ವೃಕ ಕೊಲುವೆಚ್ಚರಕೋಳು ಹೋಗುತದಲ್ಪ ಕೃತ ಪುಣ್ಯವೆಚ್ಚರನಾಲಿಗೆಯಲಿ ಸಿರಿನಾಥನೆಚ್ಚರ 1ಸತಿಸದನಾತ್ಮಜಸ್ಥಿರವ್ಯರ ವೆಚ್ಚರತಿಥಿ ಪೂಜೆಗಳಲಿ ಸತ್ವರ ಎಚ್ಚರಪ್ರತಿದಿನ ತತ್ವದಿ ಪ್ರವೀಣನಾಗೆಚ್ಚರಾಹಿತಲ್ಪನ ಕೀರುತಿ ಹೊಗಳೆಚ್ಚರ 2ಹರಿಭಟರೌಘದಿ ಹಿಂಗದಿರೆಚ್ಚರದುರಿತಭಯ ದಂದುಗದೆಚ್ಚರಪರಾಪರದ ವಚನವಟ್ಟಿಸದಿರೆಚ್ಚರಪರಿಪರಿ ಸದ್ವ್ವ್ರತ ಪಿಡಿದೆಚ್ಚರ 3ಸಂತವರಿಯರನುಸರಣಿಗಳೆಚ್ಚರೇಕಾಂತ ಬೀರುವ ಗುರುಕೃಪೆಯೆಚ್ಚರಸಂತ್ಯಿರಲಾಗಿ ಶಾಂತಸರಕುಕೊಳ್ಳೆಚ್ಚರಕಂತುಪಿತನ ನಾಮ ಕಡೆಗೆಚ್ಚರ 4ವಿಷಯಗತೇಂದ್ರಿಯವಿಡಿದಾಳುವೆಚ್ಚರಮೀಸಲು ವೈರಾಗ್ಯ ಮುರಿಯದೆಚ್ಚರಬಿಸಜನಾಭನ ಭಕ್ತಿ ಬಲಿದಿರುವೆಚ್ಚರಪ್ರಸನ್ನವೆಂಕಟಪತಿ ಪದದೆಚ್ಚರ 5
--------------
ಪ್ರಸನ್ನವೆಂಕಟದಾಸರು
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
--------------
ನಿಡಗುರುಕಿ ಜೀವೂಬಾಯಿ
ಎಂದಿಗೆ ಬಿಡಿಸುವೆದಂದುಗಗೋವಿಂದ ದಣಿಸುತಿದೆದಂದುಗಪ.ಸುಳ್ಳನಾಡಿಸುತಿದೆದಂದುಗನೇಮಗಳ್ಳನ ಮಾಡಿತುದಂದುಗಎಲ್ಲೆಂಜಲುಣಿಸಿತುದಂದುಗಕೈವಲ್ಯವ ಮರೆಸಿತುದಂದುಗ1ಹರಿಸೇವೆ ಬಿಡಿಸಿತುದಂದುಗಗುರುಹಿರಿಯರನ್ವಂಚಿಪದಂದುಗಸರಕುಮಾಡಿತು ಎನ್ನದಂದುಗಯಮಪುರದಾರಿವಿಡಿಸ್ಯದೆದಂದುಗ2ನೀಚಗಂಚಿಸುತಿದೆದಂದುಗಕ್ಷುದ್ರಯಾಚನೆವಿಡಿಸ್ಯ್ಕದೆದಂದುಗಆಚಾರ ಚರಿಸಿತುದಂದುಗದುಷ್ಟ್ಯೋಚನೆ ತ್ಯಜಿಸದುದಂದುಗ3ಕಾಂಚನದಾಸೇಲಿದಂದುಗಕೆಟ್ಟಹಂಚಿಗ್ಹಲ್ದೆರೆಸಿತುದಂದುಗಪಂಚಗಂಗೆಯ ಬಿಟ್ಟುದಂದುಗಜೊಂಡುಬೆಂಬಿಲಿ ಮೀಯಿಸಿತುದಂದುಗ4ನಿನ್ನೊಲುಮ್ಯೊದರಿದಂದುಗಕಾಡಿಎನ್ನಾಳೋದುಂಟೇನೊದಂದುಗಪ್ರಸನ್ವೆಂಕಟೇಶ ನಾಮಜಿಹ್ವೆಪೂರ್ಣಗಲ್ಲಾದ್ಯಂತದಂದುಗ5
--------------
ಪ್ರಸನ್ನವೆಂಕಟದಾಸರು
ಎಂದಿಗೆಂದಿಗೆ ತೀರದು ನಮ್ಮಪ್ಪನ ಮಹಿಮಿನ್ನೆಂದಿಗೆಂದಿಗೂ ತೀರದು ಪ.ಎಂದೆಂದಂದದಿ ಸಂಧಿಸಿ ಪೊಂದಿದಾಇಂದಿರೆಸುಂದರೆ ಬಂದಾನೆಂದೆಂತೆಂದಳುವೃಂದಾರಕಾರವಿಂದಜಾಹೀಂದ್ರರು ನಿಂದರೂತಂದೆ ಮುಕುಂದ ಆನಂದನಂದನ ಮಹಿಮೆ 1ನಿಗಮಗಳು ಗುರುತ ಪೊಗಳಲು ಮಿಗೆ ತಪಸಿಗಳೆಣಿಕೆಗೆ ಮೈಯಗೊಡದೆ ನಗುವನಖಗಧ್ವಜ ಮೃಗಮುಖ ತ್ರಿಗೇಹ್ಯ ಪನ್ನಗಶಾಯಿಅಘದೂರ ಸುಗುಣಗಣನ ಮಹಿಮೆ 2ಉನ್ನತಕುನ್ನತ ಇನ್ನಣುಗಿನ್ನಣುಘನ್ನಕೆ ಘನ್ನ ಜಗನ್ನುತ ಸನ್ನಿದತನ್ನವನೆನ್ನಲು ಮನ್ನಿಪ ಚಿನ್ಮಯಚೆನ್ನ ಪ್ರಸನ್ವೆಂಕಟನಾಥನ ಮಹಿಮೆ 3
--------------
ಪ್ರಸನ್ನವೆಂಕಟದಾಸರು
ಒಂದೇ ನಾಮವು ಸಾಲದೆ - ಶ್ರೀಹರಿಯೆಂಬಒಂದೇ ನಾಮವು ಸಾಲದೆ ಪಒಂದೇ ನಾಮವು ಭವಬಂಧನ ಬಿಡಿಸುವು |ದೆಂದು ವೇದಂಗಳಾನಂದದಿ ಸ್ತುತಿಸುವ ಅ.ಪಉಭಯರಾಯರು ಸೇರಿ ಮುದದಿ ಲೆತ್ತವನಾಡಿ |ಸಭೆಯೊಳು ಧರ್ಮಜ ಸತಿಯ ಸೋಲೆ ||ನಭಕೆ ಕೈಯೆತ್ತಿ ದ್ರೌಪದಿ ಕೃಷ್ಣಾ ಎನ್ನಲು |ಇಭರಾಜಗ ಮನೆಗಕ್ಷಯವಸ್ತ್ರವನಿತ್ತ 1ಹಿಂದೊಬ್ಬ ಋಷಿಪುತ್ರನಂದು ದಾಸಿಯ ಕೂಡೆ |ಸಂದೇಹವಿಲ್ಲದೆ ಹಲವುಕಾಲ||ದಂದುಗದೊಳು ಸಿಲುಕಿ ನಿಂದಂತ್ಯ ಕಾಲದಿ |ಕಂದನಾರಗನೆಂದು ಕರೆಯಲಭಯವಿತ್ತ 2ಕಾಶಿಯ ಪುರದೊಳು ಈಶ ಭಕುತಿಯಿಂದ |ಸಾಸಿರನಾಮದ ರಾಮನೆಂಬ ||ಶ್ರೀಶನನಾಮದ ಉಪದೇಶ ಸತಿಗಿತ್ತ |ವಾಸುದೇವಶ್ರೀಪುರಂದರ ವಿಠಲನ 3
--------------
ಪುರಂದರದಾಸರು
ಕರವಮುಗಿವೇ ಕಮಲನಯನಕರುಣದಿಂದಲಿ ಪಾಲಿಸೊಕರಿವರದ ಶ್ರೀ ಕಮಲನಾಭಕರೆದು ಎನ್ನನು ಮನ್ನಿಸೊ 1ಸ್ಮರಿಸಲರಿಯೇ ಸಿರಿಯ ರಮಣಪರಮಪಾವನ ಪಾದವಾಸ್ಮರನಜನಕಶರಧಿಶಯನಇರಿಸು ಎನ್ನೊಳು ಮೋಹವಾ 2ಬಂಧು ಬಳಗ ಭಾಗ್ಯ ಭೋಗ್ಯ-ದಿಂದ ಸುಖವ ಕಾಣೆನೇದಂದಶೋಕ ಶಮನನೇ ಗೊೀವಿಂದದಾಸನ ಪ್ರಾಣನೇ 3
--------------
ಗೋವಿಂದದಾಸ
ಕಾಯೋ ಕೃಷ್ಣಭವತೋಯದಿ ಮುಳುಗಿ ಉ- |ಪಾಯವ ಕಾಣದೆ ಬಾಯ ಬಿಡುವೆನೋ ಕಾಯೋ ಕಾಯೋ ಪಭಾಗವತರ ಪ್ರಿಯ ನಾಗಭೂಷಣಸಖ|ನೀಗಿಭಯವಕರಬೇಗನೆ ಪಿಡಿಯೊ 1ಇಂದಿರೆಯರಸ ಮುಕುಂದ ಯಶೋದೆಯ |ನಂದನ ಕರುಣಿಸೊ ಇಂದೀವರಾಕ್ಷ2ಸಿಂಧುಶಯನ ಪೊರೆಯೆಂದು ಕರೆಯಕರಿ|ಬಂದು ಸಲಹಿದೆಯೋಮಂದದಯಾಳು3ಕುರುಪ ಪಿಡಿಯಲುದ್ಧರಿಸಿದೆ ತರುಣಿಯ |ನರಕಹ ನಿನಗೆ ನಾ ಪರಕೀಯನಲ್ಲೋ 4ಜಾನಕೀವಲ್ಲಭನೀನೇ ಮರೆದುಬಿಡೆ |ಕಾಣೆನೊ ಒಬ್ಬರ ನಾನವನಿಯೊಳು5ಭಕುತರಿಗೋಸುಗ ಹತ್ತವತಾರವ |ಅರ್ತಿಂದಲಿ ಕೊಂಡುತ್ತಮ ಶ್ಲೋಕ6ದ್ವೇಷಿಗಳೆನ್ನನು ಘಾಸಿಸದಂದದಿ |ಪೋಷಿಸುವುದು ಪ್ರಾಣೇಶ ವಿಠ್ಠಲನೇ 7
--------------
ಪ್ರಾಣೇಶದಾಸರು
ಕೆಡಗೊಡದಿರು ಎನ್ನ ಚಿತ್ತಗತಿಯ ಸುರರೊಡೆಯ ತವಾಂಘ್ರಿ ಹೊಂದಿದ ಮತಿಯ ಪ.ಒಂದು ಗುರಿಗಿಟ್ಟರೆ ತಪ್ಪುತಿದೆ ಮತ್ತೊಂದಕಿಡದೆ ತಾ ತಗಲುತಿದೆಹೊಂದಲೊಲ್ಲದು ತ್ವನಿಷ್ಠೆಯನು ಒಣದಂದುಗಗೊಳುತಿದೆಹರಿನೀನು1ಮುಂದಿಟ್ಟ ಷಡ್ರಸಾನ್ನವನುಣ್ಣದು ದೂರಿಂದ ನಿಸ್ಸಾರಕ್ಹೆಣಗುವುದುನಂದಿಸಲೊಲ್ಲದು ನೆಳಲ್ವಿಡಿದು ಕಿಚ್ಚೆಂದಂಜದೋಡಿ ಧುಮುಕುತದಿದು 2ಪ್ರದೇಶ ಅಂಗುಟ ಮಾತ್ರವ ಕಾಣದೆ ತಾಭೂದಿವಿ ಪಾತಾಳಕೈದುತಿದೆಮಾಧವಪ್ರಸನ್ನವೆಂಕಟ ದಯಾಳು ನಿನ್ನಪಾದದಲ್ಲಿಡು ಇದರುಲುಹು ಬಲು 3
--------------
ಪ್ರಸನ್ನವೆಂಕಟದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಚಿಹಿಹಳಿ- ಥೂಖೋಡಿಪಾಪಿ ಮನವೇ ಇಂಥ-|ಕುಹಕಬುದ್ಧಿಯ ನೀ ಬಿಡು ಕಾಣೋ ಮನವೇಪಬಣ್ಣದ ಬೀಸಣಿಕೆಯಂತೆ ಹೆಣ್ಣು ತಿರುಗುವುದು ಕಂಡು |ಕಣ್ಣ ಸನ್ನೆಮಾಡಿ ಕೈಯ ಹೊನ್ನ ತೋರಿಸಿ ||ತಣ್ಣೀರು ಹೊಯ್ದ ಹೊಸ ಸುಣ್ಣದಂದದಿ ಕುದಿದು ಕುದಿದು |ಕಣ್ಣಿನೊಳು ಮಣ್ಣ ಚೆಲ್ಲಿ ಕೊಂಬರೇ ಮನವೆ 1ಪಗಡೆ ಚದುರಂಗ ಲೆತ್ತವನಾಡೆ ಕರೆದರೆ |ನಿಗುರಿದುವು ಕರ್ಣಗಳು ಮೊಚ್ಚೆಯಂತೆ ||ಜಗದೀಶ್ವರನ ದಿನದಿ ಜಾಗರಕೆ ಕರೆದರೆ |ಮುಗಿಲ ಹರಿದು ಧರೆಗಿಳಿದಂತೆ ಮನವೇ 2ವಾಸುದೇವನ ಪೂಜೆ ಒಮ್ಮೆ ಮಾಡೆಂದರೆ |ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ||ಆ ಸಮಯದಲೊಬ್ಬ ಕಾಸು ಕೊಡಲು ಅವನ |ದಾಸಿಯ ಮಗನಂತೆ ಬೆಂಬಿಡದೆ ಮನವೇ 3ನೆರೆಮನೆ ಹೊರಮನೆ ಪ್ರಸ್ತವಾದರೆ ಅವರು |ಕರೆಯದ ಮುನ್ನವೆ ಹೊರೆಹೊರಟೆ ||ಬರಿಗಂಟು ಬರಿಮಾತು ಸುಳ್ಳುಸುದ್ದಿಯ ಹೇಳಿ |ಹಿರಿಯ ಮಗನಂತೊಡಲ ಹೊರಕೊಂಬೆ ಮನವೆ 4ಬಿಂದು ಮಾತ್ರವೆ ಸುಖ-ದುಃಖ ಪರ್ವತದಷ್ಟು |ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ||ಎಂದೆಂದಿಗೂ ನಮ್ಮ ಪುರಂದರವಿಠಲನ |ಹೊಂದಿಹೊಂದಿ ನೀ ಸುಖಬಾಳೊ ಮನವೆ 5
--------------
ಪುರಂದರದಾಸರು
ತುಂಬಿಕೊಂಡಿರುತಿಹನೊಬ್ಬ ಜಗವಿಂಬಿಲ್ಲದೆಲ್ಲವ ಸಕಲವೆಲ್ಲವತುಂಬಿಪಆರರೊಳಗೆತುಂಬಿಅತ್ತತ್ತಲುತುಂಬಿಮೂರು ಠಾವಲಿತುಂಬಿಮೂರುಮನೆತುಂಬಿಬೇರೆ ಮೇಲಕೆತುಂಬಿಬೆಳಗಿನೊಳಗೆತುಂಬಿಸಾರಾಮೃತದಿತುಂಬಿಸಾಕ್ಷಾತ್ಕಾರದಲಿತುಂಬಿ1ಮನಸಿನೊಳಗೆತುಂಬಿಮನವರ್ತನದಿತುಂಬಿತನುವಿನಲ್ಲಿಯೆತುಂಬಿಸರ್ವಾಯವತುಂಬಿತನುತ್ರಯದಲಿತುಂಬಿತನುವಿನಲ್ಲಿಯೆತುಂಬಿಘನಸುಖದಿತುಂಬಿ2ಇಳೆಯ ಒಳಗೆತುಂಬಿಇಹಜಂಗಮದಿತುಂಬಿಬಲು ಸ್ಥಾವರದಿತುಂಬಿಬಯಲಿನಲ್ಲಿಯೆತುಂಬಿಕೆಳಗೆ ನಡುವೆತುಂಬಿಕೇವಲ ಕೊನೆಯತುಂಬಿಚಲಿಸದಂದದಿತುಂಬಿಚಿದಾನಂದನೇತುಂಬಿ3
--------------
ಚಿದಾನಂದ ಅವಧೂತರು