ಒಟ್ಟು 905 ಕಡೆಗಳಲ್ಲಿ , 62 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡ ಜಗಳವೇ ಲೇಸು ಪ.ಡಂಭಕರ ಮನೆಯಪಮಾನದೂಟಕ್ಕಿಂತತುಂಬಿದ ಪಟ್ಟಣದಿ ತಿರಿದುಂಬುವುದೆ ಲೇಸು |ಹಂಬಲಿಸಿ ಹಾಳು ಹರಟೆ ಹೊಡೆವುದಕಿಂತನಂಬಿ ಹರಿದಾಸರೊಳಾಡುವುದೆ ಲೇಸು 1ಒಡಲ ಹಂಗಿಸುವರ ಮನೆಯ ಓಗರಕಿಂತಕುಡಿನೀರ ಕುಡಿದುಕೊಂಡಿಹುದೆ ಲೇಸು |ಬಿಡದೆ ಕಡಿದಾಡುವರ ನೆರೆಯಲಿಹುದಕಿಂತಅಡವಿಯೊಳಜ್ಞಾತವಾಸವೇ ಲೇಸು 2ಮಸೆದು ಮತ್ಸರಿಸುವನ ಬಳಿಯಲಿಹುದಕಿಂತಹಸನಾದ ಹಾಳುಗುಡಿಗಳೆ ಲೇಸು |ಬಿಸಜಾಕ್ಷ ಪುರಂದರವಿಠಲನ ನೆನೆನೆನೆದುವಸುಧೆಯೊಳು ಚಿರಕಾಲವಿರುವುದೆ ಲೇಸು 3
--------------
ಪುರಂದರದಾಸರು
ಅಂತಕನ ದೂತರಿಗೆ ಕೃಪೆಯಿಲ್ಲವದರಿಂದ |ಚಿಂತೆಯನು ಬಿಟ್ಟು ಶ್ರೀ ಹರಿಯೆ ನೆನೆ ಮನವೆ ಪ.ದಿವರಾತ್ರಿಯೆನ್ನದೇ ತಿರುಗಿ ಲಂಪಟನಾಗಿ |ಸವಿಗಂಡ ಊಟಗಳ ಉಣಲರಿಯದೆ |ಅವನ ಕೊಂದು ಇವನ ಕೊಂದು ಅರ್ಥವನು ಗಳಿಸಿಕೊಂಡು |ಜವನ ದೂತರು ಬಂದು ಎಳೆವ ಹೊತ್ತರಿಯೆ 1ಮೊನ್ನೆ ಮದುವೆಯಾದೆ ಕರೆವುವು ಒಂದೆರಡಮ್ಮೆ |ನಿನ್ನೆ ಕೊಂಡೆನು ಕ್ಷೇತ್ರ ಫಲಬಾಹೊದು ||ಹೊನ್ನು ಹಣವುಂಟೆನಗೆ ಸಾಯಲಾರೆನು ಎನಲಾ |ತನ್ನ ದೂತರು ಬಂದು ಎಳೆವ ಹೊತ್ತರಿಯೆ 2ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |ಬಸಿರೆ ಹೆಂಡತಿ ಮಗನ ಮದುವೆಯು ನಾಳೆ ||ಹಸನವಾಗಿದೆ ಬದುಕು ಸಾಯಲಾರೆನು ಎನಲು |ವಿಷಮ ದೂತರು ಬಂದು ಎಳೆವ ಹೊತ್ತರಿಯೆ 3ಪುತ್ರ ಹುಟ್ಟಿದ ದಿವಸ ಹಾಲು ಊಟದ ಹಬ್ಬಮತ್ತೊಬ್ಬ ಮಗನ ಉಪನಯನ ನಾಳೆ ||ಅರ್ಥಿಯಾಗದೆ ಬದುಕು ಸಾಯಲಾರೆನು ಎನಲು |ಮೃತ್ಯು ಹೆಡತಲೆಯಲಿ ನಗುತಿಹುದರಿಯೆ 4ಅಟ್ಟಡಿಗೆ ಉಣಲಿಲ್ಲ ಇಟ್ಟ ನೀರ್ಮೀಯಲಿಲ್ಲ |ಕೊಟ್ಟ ಸಾಲವ ಕೇಳ್ವ ಹೊತ್ತ ಕಾಣೆ ||ಕಟ್ಟಕಡೆಯ ದಿವಸ ತಂಬಿದ ಬಳಿಕಿರಲಿಲ್ಲ |ಇಷ್ಟರೊಳು ಪುರಂದರವಿಠಲನ ನೆನೆಮನೆವೆ 5
--------------
ಪುರಂದರದಾಸರು
ಅಂತರಂಗದಲಿ ಹರಿಯ ಕಾಣದವ ತಾ ಹುಟ್ಟುಗುರುಡನೊಸಂತತ ಶ್ರೀ ಕೃಷ್ಣಚರಿತೆ ಕೇಳದವ ಜಡಮತಿಯೆ ಕಿವುಡನೊ ಎಂದೆಂದಿಗೂ ಪ.ಹರುಷದಿಂದಲಿ ಮುರಹರನ ಪೂಜೆಯ ಮಾಡದವನೆ ಕೈ ಮುರಿದವನೊಕುರುವೀರ ಸೂತನ ಮುಂದೆ ಕೃಷ್ಣ ಎಂದುಕುಣಿಯದವನೆ ಕುಂಟನೊ ||ನರಹರಿ ಪಾದೋದಕ ಧರಿಸದ ಶಿರ ನಾಯುಂಡ ಹಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರಭೋಜನವೋ1ಅಮರೇಶ ಕೃಷ್ಣಗರ್ಪಿತವಲ್ಲದಕರ್ಮ ಅಸತಿಯ ವ್ರತನೇಮವೊರಮೆಯರಸಗೆ ಪ್ರೀತಿಯಿಲ್ಲದ ವಿತ್ತವು ರಂಡೆ ಕೊರಳಸೂತ್ರಕಮಲನಾಭನ ಪೊಗಳದಸಾರ ಸಂಗೀತ ಗಾರ್ದಭರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರ ಮಾಡದವನೆ ಮೃಗವೊ 2ಜರೆ ಹುಟ್ಟು ಮರಣವ ತಡೆವ ಸುದ್ದಿಯ ಬಿಟ್ಟುಸುರೆಯ ಸುರಿಯ ಬೇಡವೊಸುರಧೇನು ಇರಲಾಗಿ ಶ್ವಾನನ ಮೊಲೆಹಾಲಕರೆದು ಕುಡಿಯಬೇಡವೊಕರಿ ರಥ ತುರಗವೇರಲು ಇದ್ದು ಕೆಡಹುವ ಕತ್ತೆ ಏರಲಿಬೇಡವೊಪರಮ ಪುರುಷ ಪುರಂದರವಿಠಲನಿರಲು ನರರ ಭಜಿಸಬೇಡವೊ 3
--------------
ಪುರಂದರದಾಸರು
ಅಂದಿಂದ ನಾ ನಿನ್ನನೆರೆನಂಬಿದೆನೊ ಕೃಷ್ಣತಂದೆ ಗೋವಿಂದ ಮುಕುಂದ ನಂದನ ಕಂದ ಪಬಲವಂತ ಉತ್ತಾನಪಾದರಾಯನ ಕಂದಮಲತಾಯಿ ನೂಕಲು ಅಡವಿಯೊಳು ||ಜಲಜಾಕ್ಷ ನಿನ್ನ ಧ್ಯಾನದಿ ತಪವಿರಲಾಗಿಒಲಿದು ಧ್ರುವಗೆ ಪಟ್ಟಕಟ್ಟಿದ್ದಕೇಳಿ1ನಕ್ರರಿಗೆ ಗಜರಾಜ ಸಿಕ್ಕಿ ಸರಸಿಯೊಳುದುಕ್ಖದಿ ಶ್ರೀಹರಿ ಸಲಹೆನ್ನಲು ||ಚಕ್ರದಿ ನೆಗಳ ಕಂಠವ ತರಿದು ಭಕ್ತನಅಕ್ಕಸಪರಿದಾದಿಮೂಲನೆಂಬುದಕೇಳಿ2ದ್ರುಪದನ ಸುತೆಯ ದುಃಶ್ಯಾಸನ ಸಭೆಯೊಳುಕಪಟದಿ ಸೀರೆಯ ಸೆಳೆಯುತಿರೆ ||ಸುಪರ್ಣವಾಹನ ಕೃಷ್ಣ ಸಲಹೆಂಬಬಲೆಯನುಅಪಮಾನದಿಂದ ಕಾಯ್ದ ಹರಿಯೆಂಬುದನುಕೇಳಿ3ಹರಿನಾರಾಯಣನೆಂದು ಪ್ರಹ್ಲಾದ ಬರೆಯಲುದುರುಳದಾನವ ಅವನಿಗೆ ಮುನಿದು ||ಕರೆ ನಿನ್ನ ಒಡೆಯನ ಎಂದು ಗರ್ಜಿಸೆನರಹರಿಬಂದು ಒಡನೆಯೆ ಕಾಯ್ದನೆಂಬುದಕೇಳಿ4ಅಂಬರೀಷಗೆದೂರ್ವಾಸಶಾಪವ ಕೊಡೆಅಂಬುಜಲೋಚನ ಚಕ್ರದಿಂದ ||ಬೆಂಬತ್ತಿ ಮುನಿಯ ಶಾಪವ ಪರಿಹರಿಸಿದಕಂಬುಚಕ್ರಧರಹರಿಯೆಂಬುದಕೇಳಿ5ಛಲಬೇಡ ರಾಮನ ಲಲನೆಯ ಬಿಡು ಎಂದುತಲೆಹತ್ತರವಗೆ ಪೇಳಲು ತಮ್ಮನ ||ಬಳಲಿಸಿ ಹೊರಡಿಸೆ ಅವ ನಿನ್ನ ಮೊರೆಹೊಗಲುಸಲೆ ವಿಭೀಷಣಗೆ ಲಂಕೆಯನಿತ್ತುದನುಕೇಳಿ6ಸುರ-ನರ-ನಾಗಲೋಕದ ಭಕ್ತ ಜನರನುಪೊರೆಯಲೋಸುಗ ವೈಕುಂಠದಿಂದ ||ಸಿರಿಸಹಿತದಿ ಬಂದು ಶೇಷಾಚಲದಿ ನಿಂತಪುರಂದರವಿಠಲ ನಿನ್ನಯ ಚರಣವ ಕಂಡು 7
--------------
ಪುರಂದರದಾಸರು
ಅಂದೆ ನಿರ್ಣಯಸಿದರು ಕಾಣೋ |ಇಂದಿರಾಪತಿ ಪರದೈವತವೆಂಬುದ ಪಅಂದು ಚತುರ್ಮುಖ ನಾರದನಿಗೆ ತನ್ನ |ತಂದೆ ಶ್ರೀಹರಿ ಪರದೈವವೆಂದು ||ಸಂದೇಹಗಳ ಪರಿಹರಿಸಿಹ ದ್ವಿತೀಯದಸ್ಕಂಧದೊಳಯ್ದನೆಯ ಅಧ್ಯಾಯದಲಿ 1ಅಂದು ಕಪಿಲದೇವ ದೇವಹೊಲೆಗೆ ತಾನು |ಚೆಂದದ ತತ್ತ್ವವನೆಲ್ಲ ಬೋಧಿಸಿದ ||ಅಂದದಲರ್ಜುನ - ಉದ್ದವರಿಗೆ ಅಂದಾ - |ನಂದದಿ ಗೀತಾಶಾಸ್ತ್ರವನೊರೆದನೆಂದು 2ವೇದೈಶ್ಚ ಸರ್ವೋರಹಮೇವ ವೇದ್ಯಃ |ವೇದವಿಧಾಯಕ ನಾಮದವನು ||ವೇದಾಕ್ಷರಗಳು ಹರಿನಾಮಗಳೆಂದು |ವೇದಾಂತ ಸಿದ್ಧಾಂತಗಳಲಿ ಪೇಳಿದರೆಂದು 3ರಾಜಸ -ತಾಮಸ ಪೌರಾಣಗಳಿವು |ರಾಜಸ -ತಾಮಸ ಜೀವರಿಗೆ ||ರಾಜಸ -ತಾಮಸ ಗತಿಗೋಸ್ಕರ ಮುನಿ - |ರಾಜ ವ್ಯಾಸನು ಮೋಹಕವೆಂದು ಪೇಳಿದ 4ಬಿಡು ಪಾಷಂಡಮತದ ದುರ್ಬುದ್ಧಿಯ |ಬಿಡದೆಮಾಡು ವೈಷ್ಣವಸಂಗವ ||ಧೃಡಭಕ್ತಿಯಿಂದ ಶ್ರೀಹರಿಯ ಪೂಜಿಸಿದರೆ |ಮೃಡಪ್ರಿಯ ಪುರಂದರವಿಠಲನೊಲಿವನೆಂದು 5
--------------
ಪುರಂದರದಾಸರು
ಅನುಗಾಲವು ಚಿಂತೆ ಮನುಜಗೆ |ಮನಹೋಗಿ ಮಾಧವನ ಒಡಗೂಡುವನಕ ಪ.ಹೆಂಡಿರಿದ್ದರು ಚಿಂತೆ ಹೆಂಡಿರಿಲ್ಲದ ಚಿಂತೆ |ಕೊಂಡು ಕುರೂಪಿಯಾದರು ಚಿಂತೆಯು ||ತೊಂಡನಾಗಿ ತಿರುಗಿ ತುತ್ತ ತರುವ ಚಿಂತೆ |ಮಂಡೆ ಬೀಳುವ ತನಕ ಚಿಂತೆ ಕಾಣಣ್ಣಾ 1ಬಡವನಾದರು ಚಿಂತೆ ಬಲ್ಲಿದನಾದರು ಚಿಂತೆ |ಕೊಡಧನ ಕೈಯೊಳಿದ್ದರು ಚಿಂತೆಯು |ಬಡವನಾಗಿ ತಿರುಗಿ ತುತ್ತ ತರುವ ಚಿಂತೆ |ಪೊಡವಿಯೊಳಿಲ್ಲದ ಚಿಂತೆ ಕಾಣಣ್ಣಾ 2ಮನೆಯಿದ್ದರೂ ಚಿಂತೆ ಮನೆಯಿಲ್ಲದ ಚಿಂತೆ |ಮನೆ ಭಾರವತಿಯಾದರೂ ಚಿಂತೆಯು |ಮನಸಿಜನಯ್ಯ ಶ್ರೀ ಪುರಂದರವಿಠಲನ |ನೆನೆದರೆ ಚಿಂತೆಯೆ ಇಲ್ಲ ಕಾಣಣ್ಣಾ 3
--------------
ಪುರಂದರದಾಸರು
ಅಪಮಾನವಾದರೆ ಒಳಿತು |ಅಪರೂಪ ಹರಿನಾಮ ಜಪಿಸುವ ಮನುಜಗೆ ಪಮಾನದಿಂದಲಿ ಅಭಿಮಾನ ಪುಟ್ಟವುದು |ಮಾನದಿಂದಲಿ ತಪ ಹಾನಿಯಾಯಿತು ಹಾನಿಯಾಗುವುದು ||ಮಾನಿ ಕೌರವನಿಗೆ ಹಾನಿಯಾಯಿತು-ಅನು-|ಮಾನವಿಲ್ಲವು ಮಾನ-ಅಪಮಾನ ಸಮರಿಗೆ 1ಅಪಮಾನದಿಂದಲಿ ತಪವೃದ್ಧಿಯಾಹುದು |ಅಪಮಾನದಿಂ ಪುಣ್ಯ ಸಫಲವಾಗುವುದು ||ಅಪಮಾನದಿಂದಲಿನೃಪಧ್ರುವರಾಯಗೆ |ಕಪಟನಾಟಕ ಕೃಷ್ಣ ಅಪರೋಕ್ಷನಾದನು2ನಾನೇನ ಮಾಡಲಿ ಆರಲ್ಲಿ ಪೋಗಲಿ |ಕಾನನಚರರಾರಾಧ್ಯ ನೀನಿರಲು ||ದೀನರಕ್ಷಕ ನಮ್ಮ ಪುರಂದರವಿಠಲನೆ |ಏನು ಬೇಡೆನಗಪಮಾನವೆ ಇರಲಿ 3
--------------
ಪುರಂದರದಾಸರು
ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ |ಕಪಟನಾಟಕ ಸೂತ್ರಧಾರಿ ನೀನೆಪನೀನು ಆಡಿಸಲು ಜಡವೊನಕೆ ಅಭಿನಯಬೊಂಬೆಏನು ಬಲ್ಲದು ಬೇರೆ ಕೃತಿಯನೊಂದ ||ನೀನಿಟ್ಟ ಸೂತ್ರದಿಂದಲುಗೆ ಕೈಕಾಲುಗಳು |ನೀನೆ ಮಗ್ಗಿಸಲು ಮಗ್ಗುವ ದೇಹ ತಾನಾಗೆ 1ಒಂದೆಂಟು ಬಾಗಿಲುಗಳುಳ್ಳ ಪಟ್ಟಣಕೆ ತನ-ಗೆಂದು ಇಪ್ಪತ್ತಾರು ಮನೆಯಾಳ್ಗಳ ||ತಂದು ಕಾವಲುನಿಲಿಸಿ ಎನ್ನ ನೀನೊಳಗಿಟ್ಟುಮುಂದೆ ಭವಭವದಿ ದಣಿಪುದು ನಿನ್ನದನ್ಯಾಯ 2ಯಂತ್ರವಾಹಕನೀನೆ ಒಳಗೆ ಇದ್ದೂ ಎನ್ನ-ಸ್ವತಂತ್ರನೆಂದೆನಿಸಿ ಕೊಲಿಸುವರೆ ಹೇಳೊ ||ಕಂತುಪಿತ ಲಕ್ಷ್ಮೀಶ ಎಂತಾದಡಂತಹುದನಂತ ಮೂರುತಿ ನಮ್ಮಪುರಂದರವಿಠಲ3
--------------
ಪುರಂದರದಾಸರು
ಅಂಬಿಗ ನಾ ನಿನ್ನ ನಂಬಿದೆ - ಜಗದಂಬಾರಮಣ ನಿನ್ನ ಹೊಂದಿದೆ ಪತುಂಬಿದ ಹರಿಗೋಲಂಬಿಗ - ಅದಕೊಂಬತ್ತು ಛಿಧ್ರಗಳಂಬಿಗ ||ಸಂಭ್ರಮದಿಂದಲಿಅಂಬಿಗ ಅದರಿಂಬನರಿತು ನಡೆಸಂಬಿಗ 1ಹೊಳೆಯ ಅಬ್ಬರ ನೋಡಂಬಿಗ ಅಲ್ಲಿಸೆಳವು ಬಹಳ ಕಾಣೋಅಂಬಿಗ ||ಸುಳಿಗೊಳಗಾದೆನುಅಂಬಿಗ - ಎನ್ನಸೆಳೆದುಕೊಂಡು ಒಯ್ಯೋಅಂಬಿಗ 2ಹತ್ತು ಬೆಂಬಡಿಗರು ಅಂಬಿಗರು - ಅಲ್ಲಿಒತ್ತಿ ಬರುತಲಿಹರಂಬಿಗಹತ್ತುವರೆತ್ತಲುಅಂಬಿಗ ಎನ್ನಎತ್ತಿಕೊಂಡು ಒಯ್ಯೋಅಂಬಿಗ 3ಆರು ತೆರೆಯ ನೋಡಂಬಿಗ ಸುತ್ತಿಮೀರಿ ಬರುತಲಿವೆಅಂಬಿಗ ||ಆರೆನೆಂತಿಂತುಅಂಬಿಗ ಮುಂದೆದಾರಿಯ ತೋರಿಸುಅಂಬಿಗ 4ಸತ್ಯವೆಂಬುವ ಹುಟ್ಟುಅಂಬಿಗ ಓದುಭಕ್ತಿಯೆಂಬುವ ಪಾತ್ರಅಂಬಿಗ ||ನಿತ್ಯಮುಕ್ತ ನಮ್ಮ ಪುರಂದರವಿಠಲನಮುಕ್ತಿಮಂಟಪಕೆ ಒಯ್ಯೋ 5
--------------
ಪುರಂದರದಾಸರು
ಅಂಬೆಗಾಲಿಕ್ಕುತಲಿ ಬಂದ ಗೋವಿಂದ |ಅಂಬುಜನಾಭ ದಯದಿಂದೆನ್ನ ಮನೆಗೆ ಪಜಲಚರಜಲವಾಸ ಧರಣೀಧರ ಮೃಗರೂಪ |ನೆಲನಳೆದೀರಡಿ ಮಾಡಿ ಬಂದ ||ಕುಲನಾಶಿ ವನವಾಸಿ ನವನೀತಚೋರನಿವ |ಲಲನೆಯರ ವ್ರತಭಂಗ ವಾಹನತುರಂಗ 1ಕಣ್ಣ ಬಿಡುವನು ಮುಖ ತಗ್ಗಿಸಿ ನೆಲವಗಿದು |ಅಣಕಿಸುವ ಬಾಯ್ದೆರೆದು ಬಾಲತನದಿ ||ಪ್ರಾಣಘಾತಕನುಣಲೊಲ್ಲ ಬೆಣ್ಣಿಯ ಮೆಲುವ |ಮಾನವ ಬಿಟ್ಟು ಕುದುರೆಯನೇರಿ ಮೆರೆವ2ನೀರ ಪೊಕ್ಕನು ಗಿರಿಯ ನೆಗಹಿ ಧಾರಿಣಿ ತಂದ |ನರಮೃಗ ಬಲಿಬಂಧ ಕೊರಳಗೊಯ್ಕ ||ಶರಮುರಿದೊರಳೆಳೆದು ಬತ್ತಲೆ ಹಯವನೇರಿ |ಪುರಂದರವಿಠಲ ನಮ್ಮ ಮನೆಗೆ ಹರುಷದಲಿ 3
--------------
ಪುರಂದರದಾಸರು
ಅರಿಯಧಮನ ಸಂಗ ಕರಗಿದ್ದ ಹಿತ್ತಾಳೆಒರೆದು ನೋಡಲು ಬಣ್ಣ ಬರುವುದೇ ಹೇಳಿ ಪ.ಮಂಜುನೀರನೆ ತಂದು ತಂದನವ ಹದಮಾಡಿಒಂದಾಗಿ ಕೂಡಿ ಪರಿಮಳವ ಬೇಗಹಂದಿಯನು ಕರೆದು ಸೆಲೆ - ಪೊಸಲು ಅದು ತನ್ನಗಂಜಲವ ನೆನೆನೆನೆದು ಹೋಹಂತೆ ರಮಣಿ 1ಚೀನಿಕೋಲನೆ ತಂದು ಕೊರೆದು ತುಂಡನೆ ಮಾಡಿಶ್ವಾನನನು ಕರೆದು ಬಾಯೊಳಗಿರಿಸಲುತಾನದನು ಸವಿಸವಿದು ನೋಡಲರಿಯದ ತನ್ನದನದ ಮೂಳೆಯ ನೆನೆದು ಹೋಹಂತೆ ರಮಣಿ 2ಅಂತರವನರಿಯದಲೆ ಮಿಯಾ ಹೋಗುವುದರಿಂದಅಂತೆ ಇರುವುದೇ ಲೇಸು ಬಹು ಪ್ರೌಢರುಚಿಂತಿತಾರ್ಥವನೀವ ಸುಗುಣ ಪುರಂದರವಿಠಲನೆಂತೆಂತು ಭಜಿಸಿದರೆ ಅಂತಂತೊಲಿವನಲ್ಲರೆ 3
--------------
ಪುರಂದರದಾಸರು
ಅರಿಯರು ಮನುಜರು ಅರಿತೂ ಅರಿಯರುಧರೆಗೆ ಒಡೆಯ ಶ್ರೀ ಹರಿಯಲ್ಲದಿಲ್ಲವೆಂದು ಪಶಿವಬಲ್ಲ ಧ್ರುವಬಲ್ಲ ದ್ರೌಪದಿ ಬಲ್ಲಳುಅವನಿ ಪಾಲಿಪ ಜನಕನೃಪ ಬಲ್ಲನು ||ಯುವತಿಗೆ ಶಾಪವಿತ್ತ ಗೌತಮ ಬಲ್ಲನುಭವರೋಗ ವೈದ್ಯ ಶ್ರೀಹರಿಯಲ್ಲದಿಲ್ಲವೆಂದು 1ನಾರದ ಮುನಿ ಬಲ್ಲವಾರಿಜೋದ್ಭವ ಬಲ್ಲಪಾರಾಶರನು ಬಲ್ಲ ಮನು ಬಲ್ಲನು ||ಧೀರ ಭೀಷ್ಮನು ಬಲ್ಲ ಪಾರ್ವತಿ ಬಲ್ಲಳುಕಾರಣಕರ್ತ ಶ್ರೀಹರಿಯಲ್ಲದಿಲ್ಲವೆಂದು 2ದಿಟ್ಟ ಪ್ರಹ್ಲಾದ ಮೊರೆಯಿಟ್ಟ ಗಜೇಂದ್ರ ಬಲ್ಲದೃಷ್ಟಾಂತ ಕಂಡ ಭೃಗುಮುನಿ ಬಲ್ಲನು ||ಕೊಟ್ಟ ಬಲಿಯು ಬಲ್ಲ ಕೆಟ್ಟಜಾಮಿಳ ಬಲ್ಲಸೃಷ್ಟಿಗೆ ಪುರಂದರವಿಠಲನಲ್ಲದಿಲ್ಲವೆಂದು 3
--------------
ಪುರಂದರದಾಸರು
ಆ ರಣಾಗ್ರದಿ ಭೀಮಗಡ್ಡಯಿಪರಾರು? |ವಾರಿಧಿಮೇರೆದಪ್ಪಲು ನಿಲ್ಲಿಸುವವರಾರು?ಪನಾನಾ ದೇಶದ ಭೂನಾಯಕರಿದ್ದರಲ್ಲವೆತಾನು ದುಶ್ಯಾಸನನ ತತ್ತರಿವಾಗ ||ಮೌನಗೊಂಡರಲ್ಲದೆ ಮುಂಕೊಂಡು ಬಿಡಿಸಿದರೆಆನೆಯ ಕೈಯ ಕಬ್ಬಿಗೆ ಅಂಗಯಿಸುವರಾರು? 1ಘುಡುಘುಡಿಸುತ ರಾಯ ಕುರುಪತಿಯನು ಕೆಡಹಿತೊಡೆಗಳನು ಗದೆಯಿಂದ ತುಂಡಿಸುವಾಗ ||ಕಡುಕೋಪದವ ಹಲಧರನೇನ ಮಾಡಿದ?ಬಡವನ ಕೋಪ ದವಡೆಗೆ ಮೃತ್ಯುವಲ್ಲವೆ? 2ಸಂದಿಗೆ ಸಾವಿರ ಸಿಂಹಸತ್ತ್ವದ ಕೀಚಕನಕೊಂದು ಬಿಸುಡುವಾಗ ಮುಂಕೊಂಡರುಂಟೆ? ||ಚೆಂದದಿಪುರಂದರವಿಠಲದಾಸರು ಮನದಂದಕೆ ಬಂದಂತೆ ನಡೆದುದೆಮಾರ್ಗ3
--------------
ಪುರಂದರದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಗಲೆ ಕಾಯಬೇಕು ಅಂಬುಜಾಕ್ಷನೆ ಎನ್ನ |ಈಗ ನೀ ಕಾಯ್ದರೇನು ಕಾಯದಿದ್ದರೇನು ಪಹೊನ್ನು ಹಣ ಎನಗುಂಟು ಹೆಸರಾದ ಮನೆಯುಂಟು |ಚಿನ್ನ-ಚೀನಾಂಬರವುಂಟು ಚೆಲುವುಪ್ಪರಿಗೆಯುಂಟು ||ಮೊನ್ನೆ ಹುಟ್ಟಿದ ಗಂಡು ಮಗು ಒಂದು ಎನಗುಂಟು |ಸನ್ನೆ ಶಕ್ತಿಗುಂದಿದಾಗ ಸಂಗಡಲೊಬ್ಬರ ಕಾಣೆ 1ನಂಟರಿಷ್ಟರು ಉಂಟು ನೆರೆ-ಹೊರೆ ಎನಗುಂಟು |ಎಂಟು ಭಾಗ್ಯಗಳುಂಟು ಬಂದು ಹೋಗುವರುಂಟು ||ಕಂಠಕೆ ಹೊದ್ದಿದ ಕಾಂತೆಯರೆನಗುಂಟು |ಒಂಟಿಯಾಗಿ ಹೋಗುವಾಗ ಸಂಗಡೊಬ್ಬರನು ಕಾಣೆ 2ಒಂದು ಕ್ಷಣ ಮೊದಲಾದವಾತಘಾತಗಳಿಂದ |ಅಂದಿನ ವ್ಯಾಧಿಗಳು ಬಾಧಿಸುತಿರಲು ||ಇಂದಿರೇಶನೆ ನಿನ್ನ ಸಂಗವೆಲ್ಲವೆ ಬಿಟ್ಟೆ |ಬಂದಿನ್ನು ಕಾಯಬೇಕೊ ಪುರಂದರವಿಠಲ 3
--------------
ಪುರಂದರದಾಸರು