ಒಟ್ಟು 526 ಕಡೆಗಳಲ್ಲಿ , 72 ದಾಸರು , 455 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ಬಂದ ವಾಯು ಪೆಸರಿನವ - ರಿಂದಅನಿಮಿತ್ತ ಬಂದು ವೆಂಕಟ ನಿಲಯ ಪ ಇಂದಿರೆ ಸುತನೆನೆ | ಸುಂದರನೂ ಮಮ | ಮಂದಿರ ಸೇರಲುನಂದದಿ ಬಂದನು | ಚಂದ್ರ ಭಾಗ ತಟ | ಸುಂದರ ವಿಠಲನುಮುಂದೆ ಬರುವ | ನೆಂದೆಂಬುದ ಸೂಚಿಸೆ ಅ.ಪ. ಮಕರ ಕೌಸ್ತುಭ ಬ್ರಹ್ಮಾ ಧಿಷ್ಠಿತವಾಗಿರೆ ಹೃತಮ ಕಳೆ ಹರಿ 1 ಸೋಮಕುಲ ಸುಭೂಷ ದಿವ್ಯ | ಧಾಮದಲ್ಲಿ ಶೋಭಮಾನ ||ಶ್ರೀ ಮಹಿಳೆಯು ಎಡ | ಪದ್ಮ ಹಸ್ತ ಬಲಭೂಮಾಂಬೆಯು ಬಲ | ಪದ್ಮ ಹಸ್ತ ಎಡಭೂಮಾರ್ಣವ ಗುಣ | ಸ್ತೋಮ ತುತಿಸುತಲಿಆ ಮಹ ದಿವಿಜರ | ಸ್ತೋಮ ನಿಚಯವಿರೆ2 ಮಾಸ ಸಿರಿ | ಶೇಷಗಿರೀಶನುಒಸೆದು ಹಸ್ತ ಎಡೆ | ಎಸೆವ ಕಟಯಲಿಟ್ಟುವಸುದೇವ ಸುತ ಬಲ | ಹಸ್ತ ಅಭಯ ತೋರಿಬಸುರಿಲಿ ಬೊಮ್ಮನ | ಪ್ರಸವಿಸಿರವ ಹರಿ 3 ಶರಧಿ | ಕಟಿಯ ಮಿತವು ಭಕುತಗೆಂದ ||ವಿಠಲಾಗಮನವು | ದಿಟವೆನೆ ಸೂಚಿಸಿಎಟ ಪಾದವು ಸುರ | ತಟನಿಗೆ ಕಾರಣಪಟುಭಟರೆನಿಸುವ | ನಿಟಿಲ ನಯನ ಸುರಕಟಕವ ಪಾಲಿಪ | ಧಿಟ ದೊರೆ ವೆಂಕಟ 4 ಅರಿ | ಹೊಳೆವ ಶಂಖ ಎಡ ನಿಲವು ಮಾಟವಿಗೆ | ಗೆಲವು ಸುರರಿಗೆನೆಕಳೆ ಕಳೆ ನಗು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬರುತಾದೋ ಪದ ಬರುತಾದೋ ಪ ಪದುಮನಾಭನ ದಿವ್ಯಸದಮಲಪಾದದ ವಿಧವಿಧ ಮಹಿಮೆಯಯ ಪೊಗಳಿ ಬಾಳುವ ಪದ ಅ.ಪ ಛಂದಸ್ಸು ಮೀಮಾಂಸೆ ಅಂದದ ಯತಿಗಣ ಒಂದು ನಾನರಿಯದೆ ಸಂದೇಹಮಿಲ್ಲದೆ ಮಂದರಧರನಡಿ ಒಂದೇ ತ್ರಿಭುವಿಗೆ ಮಿಗಿ ಲೆಂದು ಪಾಡುತಲಾನಂದ ಪಡೆಯುವ ಪದ 1 ಸಕಲರು ತೆಗೆದಿಟ್ಟ ಅಕತಪಚಟಯೆಂಬ ವಖಿಲಮಂ ಗಣಸದೆ ಪ್ರಕಟಮಿನಿತಿಲ್ಲದೆ ಅಕಟಕಟೆನ್ನುತ ನಿಖಿಲವ್ಯಾಪಕನಂಘ್ರಿ ಭಕುತಿಯಿಂ ಭಜಿಸುತ ಮುಕುತಿ ಪಡೆಯುವ ಪದ 2 ಅಳುಕದೆ ಲೌಕಿಕ ತಿಳೆಸುಖಕೆಳಸದೆ ಮಲಿನದಿ ಸಿಲ್ಕದೆ ಚಲನವಲನಿಲ್ಲದೆ ಜಲಜಾಕ್ಷ ಭಕ್ತರ ಸುಲಭ ಶ್ರೀರಾಮನಂ ಒಲಿಸಿ ಪ್ರಾರಬ್ಧವ ಗೆಲಿದು ನಲಿಯುವ ಪದ 3
--------------
ರಾಮದಾಸರು
ಬಾ ಬಾ ಬಾ ಗುಹನೇ ಪ ವಲ್ಲಭನುತರು ಮನಕುಲ್ಲಾಸದೋರುತ 1 ಬುರು ಆಯುಧಗಳ ಧರಿಸಿಹ ಷಣ್ಮುಖ | ಬಾ 2 ಪಟ್ಟಣಕಟ್ಟುವ ದಿಟ್ಟ ಕುಮಾರ ನೀ ಬಾ 3 ಕಂಬು ಕಂಧರ ಅಷ್ಟಮಿ ಚಂದ್ರಲಲಾಟನೆ ಬಾ 4 ಚರಣದ ದಾಸರ ನಿರತದಿ ಪೊರೆಯಲು ಬಾ 5
--------------
ಬೆಳ್ಳೆ ದಾಸಪ್ಪಯ್ಯ
ಬಾದರಾಯಣನ ಪಾದವ ನಂಬದೆ ಪ ತುಂಬಿ ತುಳುಕುತಿರೆ ವದನದಿ ಮಂತ್ರವ ಪಠಿಸಿ ಫಲವೇನು ಉದರ ಪೋಷಣೆಗಾಗಿಯೆ ಮಾಡುವ ಕರ್ಮ ನೋಡಿ ನಗುವರು 1 ಕಂಣನು ಮುಚ್ಚಿ ಮೌನದಿ ಕುಳಿತು ಪರ ಹೆಂಣಿನ ರೂಪವ ಮನದೊಳು ನೆನೆದು ಚಿಂಣತನದಿ ಅವಳ ಬೆರೆಯಲು ಯೋಚಿಸಿ ಹೊನ್ನು ಕೂಡಿಸುವ ಪರಿಯದಲ್ಲದೆ 2 ಗುಟ್ಟಲಿ ಪೂಜಿಪ ಗುರುತನು ಅರಿಯದೆ ಪಟ್ಟೆ ನಾಮವ ಹಚ್ಚಿ ಮಡಿಗಳನು ದಿಟ್ಟ ರಂಗೇಶವಿಠಲನ ಮರೆದು 3
--------------
ರಂಗೇಶವಿಠಲದಾಸರು
ಬಾರೈ ಬಾರೈ ಗುರು ಸಾರ್ವಭೌಮನೇ ಪ. ಉಟ್ಟವಸನವು ತೊಟ್ಟ ಆವಿಗೆ ಇಟ್ಟ ದ್ವಾದಶ ಊಧ್ರ್ವ ಪುಂಡ್ರವು ದಿಟ್ಟತನದಿ ಇಟ್ಟು ಕೊರಳೊಳು ಮಣಿ ಮನೋಭೀಷ್ಠವ ಸಲಿಸುತ 1 ದಂಡಕ ಮಂಡಲ ಕೈಯಲಿ ಪಿಡಿದು ಕಂಡ ಕಂಡದ ಪೂಜೆಗೊಂಬುವ ಕೊಂಡ ಜನರ ಪರಿಪಾಲಿಸುತಲಿ ಕಂಡ ಕಂಡವರ ಕಾಯುವ ಕರುಣೆ2 ಭೂತ ಪ್ರೇತ ಭಯ ನಾಶಗೊಳಿಸಿ ಭೀತಿಯ ಬಿಡಿಸಿ ಮಂತ್ರಾಲಯದಿ ಖ್ಯಾತಿವಂತ ರುಕ್ಮಿಣೀಶವಿಠಲನ ಕರುಣದಿ ಪ್ರೀತಿಪ ಜನರ ಮನೋಭೀಷ್ಠವೊಲಿದ 3
--------------
ಗುಂಡಮ್ಮ
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ ಪ. ವಿಠ್ಠಲನಾ ಪುಟ್ಟ ಚರಣ ಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತ ಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ ಅ.ಪ. ಭಕ್ತರಿಗೊಲಿಯುವ ಚರಣಾ | ವೇದ ಉಕ್ತಿಗೆ ನಿಲುಕದ ಚರಣಾ ಹತ್ತಿ ಪಾರ್ಥನ ರಥ ಮತ್ತೆ ಭೀಷ್ಮನಿಗೊಲಿದು ಹಸ್ತದಿ ಚಕ್ರವ ಪಿಡಿದು ಬಂದಾ ಚರಣ 1 ಬಲಿಯನ್ನು ತುಳಿದಂಥ ಚರಣಾ | ಮೂರು ಇಳೆಯನಳೆದ ಪುಟ್ಟ ಚರಣ ಕುಲಕೋಟಿ ಉದ್ಧಾರಗೈವಂಥ ಗಂಗೆಯ ಚಲುವ ಉಂಗುಟದಲ್ಲಿ ಪಡೆದ ಕೋಮಲ ಚರಣ 2 ಹಸ್ತಿ ಕರೆಯೆ ಬಂದ ಚರಣಾ | ಲಕ್ಷ್ಮಿ ವತ್ತುವೋ ಮೃದುತಳ ಚರಣಾ ಚಿತ್ತದೆ ಚಿಂತಿಪ ಭಕ್ತರ ಮನದೈವ ತೆತ್ತಿಗನಾಗಿ ಐವರ ಪೊರೆದಾ ಚರಣ3 ಭೀಮ ತೀರಾ ವಾಸ ಚರಣಾ | ಭಕ್ತ ರಾಮಯ ಹರಿಸುವ ಚರಣಾ ಕಾಮಜನಕ ಪಾಂಡುರಂಗವಿಠ್ಠಲನೆಂದು ಪ್ರೇಮದಿಂ ಭಜನೆಗೊಂಬುವ ಸ್ವಾಮಿ ಚರಣಾ 4 ಬಿಟ್ಟಿರಲಾರೆ ನೀ ಚರಣ | ಮನದಿ ಕಟ್ಟಿ ಹಾಕೂವೆ ನಾ ನೀ ಚರಣ ದಿಟ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಚರಣ ಇಟ್ಟು ಹೃತ್ಕಮಲದಿ ಪೂಜಿಪೆ ನೀ ಚರಣ 5
--------------
ಅಂಬಾಬಾಯಿ
ಬಿಡು ಬಿಡು ಮನುಜಾ ಜಡದಭಿಮಾನ ಪಡೆ ಗುರುವಿನಲಿ ಸ್ವಾತ್ಮದ ಜ್ಞಾನಾ ಪ ಈ ಸುಖದುಃಖದ ಬಡಿದಾಟದಲಿ ಗಾಸಿಯಾಗುತಲಿ ಸಾಯುವದೇ ದಿಟ ಕ್ಲೇಶವ ನೀಗುವಿ ನಿನ್ನ ನೀ ತಿಳಿವೊಡೆ 1 ಮರಳಿ ದೇಹ ಪಡೆಯದ ದಿವ್ಯ ಬೋಧ ಪರಮಶಾಂತಿ ದೊರಕಿಸುವ ಪ್ರಮೋದ ದುರುಳಸಂಸ್ಕøತಿಯ ಪಾಶದ ಛೇದ ಮರೆಯದೆ ಮಾಳ್ಪುದು ಸ್ವಾತ್ಮದ ಶೋಧ 2 ಘಟ ಮರಣಕೆ ಶಿಲುಕಿದಾದರೂ ಈ ಘಟದಲಿ ನೀ ಅಮರನೆ ಇರುವೀ ಬೇಗನೆ ಜೀವನ್ಮುಕುತಿಯ ಪಡೆಯೈ ಯೋಗಿ ಶಂಕರನ ಸದ್ಬೋಧದಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನಪ ಕೇಳಯ್ಯಾ ಬಡವನ ಮನ್ನಿಸು ಮಹರಾಯ ಪ ಎನ್ನ ಭವಗುಣಗಳನ್ನು ಕಳೆದು ಪೊರೆ ಸನ್ನುತಾಂಗ ಹರಿ ಉನ್ನತ ಮಹಿಮ ಅ.ಪ ತೊಳಲಿಬಳಲಿ ಬಂದೆ ಸಂಸಾರದ್ಹೊಲಸಿ ನೊಳಗೆ ನಿಂದೆ ಅಳಿಯುವ ದೇಹಕೆ ಕಳವಳಿಸುವ ಮನ ಮಲಿನತೊಳೆದು ನಿರ್ಮಲ ಮಾಡು ತಂದೆ 1 ಹುಟ್ಟಿ ನೀ ಸಾಯ್ವುದಕೆ ಬಂದಿಲ್ಲ ಗಟ್ಟ್ಯಾಗಿರಲಿಕ್ಕೆ ಸಠೆ ಈ ಲೋಕವು ದಿಟವಲ್ಲೆನಗೆ ಬಟ್ಟೆ ತಪ್ಪಿಸು ತಂದೆ 2 ಇಷ್ಟುದಿನವು ಕಳೆದು ತಿಳಿಯದೆ ಭ್ರಷ್ಟತನದಿ ಬಾಳ್ವೆ ಇಷ್ಟು ದಿನ ದಿನಗಳ್ವ್ಯರ್ಥ ಕೆಟ್ಟಿದ್ದೆ ಸಾಕಯ್ಯ ಶಿಷ್ಟಗುಣವಕೊಟ್ಟು ಸಲಹೊ ಶ್ರೀರಾಮ3
--------------
ರಾಮದಾಸರು
ಬೂದಿಯ ಹಚ್ಚಿರೊ ಶುದ್ಧ ವೈಷ್ಣವರಿದ- ರಾದಿಯ ತಿಳಿಯಲು ಕೇಳಿ ಬಲ್ಲವರು ಪ ಮೂಲಾಗ್ನಿಯಿಂದಲೆ ಸುಟ್ಟಿಹ ಬೂದಿ ಮೂಲ ಮಂತ್ರಂಗಳ ಜಪಿಸುವ ಬೂದಿ ಮೂಲಾಧಾರವ ತೋರುವ ಬೂದಿ ಕಾಲ ಕರ್ಮಂಗಳ ಕಡಿವಂಥ ಬೂದಿ 1 ಏಳು ಸುತ್ತಿನ ಒಳಗೆ ಇರುವಂಥ ಬೂದಿ ಏಳು ವೈರಗಳನ್ನು ಕಳೆವಂಥ ಬೂದಿ ಏಳು ಅಗಳ ದಾಟಿ ಹಾರುವ ಬೂದಿ ಬ- ಹಳ ಜ್ಞಾನಿಗಳೆಲ್ಲ ಧರಿಸುವ ಬೂದಿ 2 ಒಂಭತ್ತು ಕಡೆಯಿಂದ ಒಲಿದಿಟ್ಟ ಬೂದಿ ಕುಂಭಕದೊಳಗದ ಇರಿಸುವ ಬೂದಿ ಸಂಭ್ರಮದಿ ಅರಸನ ಗೆಲುವಂಥ ಬೂದಿ ಅಂಬರಕಾಗಿಯೆ ಲಂಬಿಪ ಬೂದಿ 3 ಪಂಚಾಗ್ನಿಯಿಂದಲೆ ಬೆಂದಿಹ ಬೂದಿ ಪಂಚತತ್ವಂಗಳನು ಗೆಲುವಂಥ ಬೂದಿ ಪಂಚ ಮೃತ್ಯುಗಳನ್ನು ಕಳೆವಂಥ ಬೂದಿ ವಂಚಿಸಿಕೊಳ್ಳದೆ ಧರಿಸುವ ಬೂದಿ 4 ಆರು ವೈರಿಗಳನ್ನು ತೂರುವ ಬೂದಿ ಆರು ಭಾವಗಳನ್ನು ಬೇರಿಟ್ಟ ಬೂದಿ ಆರು ಭ್ರಮೆಗಳನ್ನು ಕಡಿದಿಟ್ಟ ಬೂದಿ ಆರಿಗೂ ತೋರದೆ ಹಾರುವ ಬೂದಿ 5 ಅಷ್ಟಮದಂಗಳ ಕಟ್ಟುವ ಬೂದಿ ದುಷ್ಟಾತ್ಮರನ್ನು ಅಟ್ಟುವ ಬೂದಿ ಕುಟ್ಟೆ ಹಿಡಿವ ಬೀಜಕಿಟ್ಟಿಹ ಬೂದಿ ಭ್ರಷ್ಟಕರ್ಮಗಳನ್ನು ಸುಟ್ಟಂಥ ಬೂದಿ 6 ಸಕಲ ಋಷಿಗಳೆಲ್ಲ ಧರಿಸುವ ಬೂದಿ ತ್ರಿಕರ್ಣ ಶುದ್ಧದಿ ತುಂಬಿದ ಬೂದಿ ಮಕರಕುಂಡಲಧರ ಮರುಳಹ ಬೂದಿ ಸಖನಹ ವರಾಹತಿಮ್ಮಪ್ಪ ಬೂದಿ 7
--------------
ವರಹತಿಮ್ಮಪ್ಪ
ಬೇಡಿಕೊಂಬೆನು ನಿನ್ನ ಮನಬಿಚ್ಚಿ ತೋರಿಸುವೆ ಪ ಪಶುವಾದ ಎನ್ನ ಮನಸು ಪಿಸುಮಾತು ಹೇಳುತಿಹುದು ತುಸುಗುಣವಿಲ್ಲ ನಿನಗಂತೆ ಬಕುತಿಯೇಕಯ್ಯ ನಿನಗೆ ಅ.ಪ ಬದುಕು ತಪ್ಪಿಸಿ ನಿಲ್ಲು ನೀನಾಗಿ ಎನ್ನುತಿದೆ ಕದಿಮೋಸ ಮನವನು ನಂಬಿ ಬಾಳುವೆನೆಂತು ಬುದ್ಧಿ ಕಲಿಸಯ್ಯ ಮನಕೆ ಬೆಳಕು ತೋರಿಸು ನಿನ್ನ ಬದ್ಧಗೆಳೆಯನಾಗಿಸು ಅದನು ಬದುಕಿ ಬಾಳುವೆನಯ್ಯ 1 ಹಿಡಿಯಾಸೆ ಎನಗುಂಟು ಗಂಟುಕಟ್ಟಿ ನಿನ್ನೊಡನೆ ನಡೆವೆ ದಿಟ್ಟತನದಲಿ ಕಮಲಾಕ್ಷ ಲಾಲಿಸಯ್ಯ ಬಿಡಲಾರೆ ನಿನ್ನನೀಗ ಬೆಳಕು ಕಂಡಿತು ಎನಗೆ ಒಡೆಯ ಶೆಲ್ವರಾಯ ನನಸು ಕನಸಾಗಿ ಮಾಡದಿರು 2
--------------
ಸಂಪತ್ತಯ್ಯಂಗಾರ್