ಒಟ್ಟು 4759 ಕಡೆಗಳಲ್ಲಿ , 126 ದಾಸರು , 3131 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯೆತ್ತಿದರೆ ಕೇಶವ ನಾರಾಯಣಗೆ ಪ. ಶಾಶ್ವತವೀವ ಮಾಧವ ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ ಅ.ಪ. ದ್ವಾಪರ ರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ1 ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ 2 ದÁಮೋದರ ವಾಲುಳ್ಳವಗೆ(?) ಪ್ರೇಮದಿ ಸಂಕರ್ಷಣಗೆ ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ 3 ಅನಿರುದ್ಧ ಪುರುಷೋತ್ತಮಗೆ ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ 4 ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ 5 ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ 6 ಚತುರವಿಂಶತಿಮೂರುತಿಗಳಾ ಅತಿಶಯ ಧವಳವ ಪಾಡೆ ಸಿರಿ ಹಯವದನ 7
--------------
ವಾದಿರಾಜ
ಆರತಿಯೆತ್ತುವೆ ಆತ್ಮೇಶ್ವರಗೆ ಪ ಮಾರ ಕೋಟಿ ಲಾವಣ್ಯ ಮತ್ಪ್ರಿಯ ಸ್ವಾಮಿಗೆ ಅ.ಪ ಮನಕೊಡೆಯನೆನ್ನಿಸಿ ಮಮತೆಯ ವಿಸ್ತರಿಸಿ ಅನುದಿನ ಬೇಡಿದಿಷ್ಟಾರ್ಥವನೀವಗೆ 1 ಶುಭದಾಯಕನಾಗಿ ಶೋಭಿಸುತಿರ್ಪಗೆ2 ಗುರುರಾಮವಿಠ್ಠಲ ಕರುಣಾನಿಧಿಗೇ 3
--------------
ಗುರುರಾಮವಿಠಲ
ಆರಿಗಾರೋ ಕೃಷ್ಣ ಶೂರಕುಮಾರನೆಪ. ಆರಿಗಾರೋ ನಿನ್ನ ಹೊರತು ಪೊರೆವರೆನ್ನಶೂರ ಮಾರಜನಕ ಅಕ್ರೂರವರದ ದೊರೆಯೆಅ.ಪ. ಸತಿಸುತರು ಹಿತರೇನೊ ಮತಿಭ್ರಾಂತಿಬಡಿಸುವರುಗತಿ ಯಾರೊ ಮುಂದೆ ಗರುಡವಾಹನ ದೇವ1 ಆಶಪಾಶದಿ ಸಿಲುಕಿ ಘಾಸಿಪಟ್ಟೆನೊ ಬಹಳವಾಸುದೇವನೆ ನಿನ್ನ ದಾಸನೆಂದೆನಿಸಯ್ಯ 2 ಕಾಯ ಉ-ಪಾಯ ಯಾವುದೊ ಮುಂದೆ ರಾಯ ಹಯವದನ 3
--------------
ವಾದಿರಾಜ
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರುತಿಯ ತಾರೆ ಸಖಿ | ನೀರಜಾಕ್ಷಿ ವಾರುಣೀಶನಿಗೆ ಪ ವಾರಿಚರಗಿರಿಧಾರ ಹರಿ ಗೋಚರ ಹರಿ | ನರಸಿಂಹಗೆ ಮೂರಡಿ ಧಾರುಣಿ ದಾನವ ಬೇಡಿದವಗೆ 1 ದಾಶರಥಿದಾಸ ಹರಿಕೃಷ್ಣಗೆ ವಸನವರ್ಜಿತ ಕಲ್ಕಿಗೆ ಶ್ರೀಶನಿಗೆ ಸರ್ವೇಶನಿಗೆ ವಾಸುಕಿಗಿರಿ ವಾಸನಿಗೆ 2 ಸಾಮಗಾನ ವಿಲೋಲಗೆ ಶಾಮಸುಂದರವಿಠಲಗೆ | ರಾಮಗೆ ನಿಸ್ಸೀಮಗೆ | ಕಾಮಿತಾರ್ಥಪ್ರದಾತಗೆ 3
--------------
ಶಾಮಸುಂದರ ವಿಠಲ
ಆರೋಗಣೆ ಮಾಡೊ ಆನಂದಮೂರುತಿ ಪ. ರÀನ್ನದ ತಳಿಗೆಯನ್ನು ಶೋಭನವಾದ ಪೊನ್ನ ಬಟ್ಟಲುಗಳ ನೆರವಿ ಶ್ರೀಹರಿಗೆ ನಿನ್ನರಸಿ ಆ ಲಕ್ಷ್ಮಿ ಸೊಸೆಯರ ಕೂಡಿ ಶಾ- ಲ್ಯನ್ನ ಸವಿಶಾಕಗಳ ನೀಡಿದ ಕೈಯಿಂದ 1 ತುಪ್ಪ ಮಧು ಚಿತ್ರಾನ್ನ ಪಾಯಸ ಕರಿಗಳ ಸಾರಸ ಭಕ್ಷ್ಯಗಳ ದಧಿ ಪಕ್ವಫಲಂಗಳು ಆ ಪದ್ಮಮುಖಿ ಬಡಿಸಿದಳು ಲೇಹ್ಯಪೇಹ್ಯವ 2 ಎನ್ನ ಕುಂದುಗಳಾಮುನಿಗೆ ದಿವ್ಯ ಅನ್ನವೊ ಮನ್ನಿಸಿ ಕರೆದು ನಿನ್ನ ಕರಕಂಜದಿಂದ ಪೂರ್ಣವಮಾಡು ಭುಜಿಸೊ ಹಯವದನ ಕೃ- ಪಾಳು ಸಕಲಲೋಕಪಾಲ ಸುರರೊಡೆಯನೆ 3
--------------
ವಾದಿರಾಜ
ಆರ್ತನಾಭೀಷ್ಟವನು | ಪೂರ್ತಿಗೊಳಿಸೊ ಪ ಕಾರ್ತಸ್ವರ ಮೊದಲಾದ | ವಾರ್ತೆ ನಾನೊಲ್ಲೇ ಅ.ಪ. ಫಲ ಗಿಡೆಲೆ ಮರ ಬಳ್ಳಿ | ಜಲ ಬಿಂದು ನವ ನದಿಯುಜಲ ನಿಧಿಯು ವನಗಿರಿಯು | ಜಲ ಚರಾಚರಧೀ ||ಒಳ ಹೊರಗೆ ಸಂವ್ಯಾಪ್ತ | ಚಲಿಪೆ ನೆಲೆಯಿಲ್ಲದಲೆತಿಳಿಸೊ ತವ ಮಹಿಮೆಗಳ | ಅಲವ ಭೋದಾತ್ಮಾ 1 ಕಂಡ ನೀರೊಳು ಮುಳುಗಿ | ಅಂಡಲೆದು ಬೆಂಡಾದೆಪುಂಡರೀಕಾಕ್ಷ ಪದ | ಬಂಡುಣಿ ಎನಿಸದೇ ||ಹಿಂಡು ತೀರದ ಗತ | ಪಾಂಡುರಂಗನ ರೂಪಕಂಡು ಹಿಗ್ಗುವುದೆಂದೊ | ಕುಂಡಲಿಯ ಶಯನಾ 2 ಜ್ಞಾನಾಯು ರೂಪಕನೂ | ಪ್ರಾಣಾಂತರಾತ್ಮ ನಿನಜ್ಞಾನ ಕೊಟ್ಟು ಧರಿಸೊ | ಗಾನ ಪ್ರಿಯನೇ ||ಪ್ರಾಣನಿಗೆ ಪ್ರಾಣ ಗುರು | ಗೋವಿಂದ ವಿಠ್ಠಲನೆನೀನಾಗಿ ಒಲಿಯದಲೆ | ಅನ್ಯಗತಿ ಕಾಣೇ3
--------------
ಗುರುಗೋವಿಂದವಿಠಲರು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆಲಿಸು ಮನುಜಾ ಮಾಯಾಕಾರ್ಯಕೆ ಮೋಸಹೋಗಲು ಬೇಡಾ ವಿಚಾರಿಸು ತೋರಿಕೆಯು ಪುಸಿಯಹುದು ಈ ಪ ಜಗದೊಳು ತೋರುವ ಅಘಟಿತಘಟನೆ ಮಿಗಿಲೆನಿಸುತಲಿಹುದೋ ಗಡಾ ಅಘಟಿತಘಟನೆಯೆ ಜ್ಞಾನವದೆಂದು ಬಗೆಯುತ ನೀ ಕೆಡಬೇಡ 1 ಸಿದ್ಧಿಯ ಫಲವದು ಅಘಟಿತಘಟನೆ ಬುದ್ಧಿವಂತನೆ ತಿಳಿ ನೀ ಶುದ್ಧ ಚೈತನ್ಯದಿ ಮಾಯೆಯದಿಲ್ಲೈ ಸಿಧ್ದಿ ಮಾಯೆಯ ಮಗಳು 2 ಜ್ಞಾನಸಿದ್ಧಿಗಳ ಭೇದವನರಿಯುತ ಜ್ಞಾನಿಯಾಗೆಲೊ ಮನುಜಾ ನಾನಾಪರಿಯಿಂ ಪೇಳಿದನಿದನಾ ಜ್ಞಾನಿ ಶಂಕರಗುರುರಾಯಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಆವ ಕರ್ಮವಿಲ್ಲ ಆವ ಧರ್ಮವಿಲ್ಲವೋ |ಕೇವಲಾನಂದಭಾವ ಬೋಧದಲ್ಲಿ ಬೆರೆಯಲು ಪ ತನುವು ಬೇರೆ ಮನವು ಬೇರೆ | ಮನದ ಒಳಗೆ ನೆನಹು ಬೇರೆ | ತನುವು ಮನವು ನೆನವಿಗಿನ್ನು | ಸಾಕ್ಷಿಯಾಗಿಹ | ಚಿನುಮಯಾತ್ಮ ತಾನೆ ತನಗೆ | ಜನನ ಮರಣ ಎಂಬುದೆಲ್ಲ | ಮನದ ಆಟವೆಂದು ತಿಳಿದು | ಉನ್ಮನದಿ ಘನದಿ ನಲಿವಗೆ 1 ಸತ್ಯ ಶರಣರಡಿಯ ಪಿಡಿದು | ತತ್ತ್ವ ಶಾಸ್ತ್ರವನ್ನು ತಿಳಿದು |ನಿತ್ಯಾನಿತ್ಯವನು ವಿವರಿಸುತಲಿ | ಭಕ್ತಿಯಿಂದಲಿ ||ನಿತ್ಯ ಪೂರ್ಣ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು |ಚಿತ್ತದಲ್ಲಿ ತಿಳಿದುಕೊಂಡು | ಮಿಥ್ಯವೆಲ್ಲ ಕಳೆದಗೆ 2 ಹಿಂದಾದುದ ನೆನಿಸಲಿಲ್ಲ | ಮುಂದೆ ಒಂದು ಬಯಸಲಿಲ್ಲ |ಬಂದುದೆಲ್ಲ ಸುಖವು ಎಂದು ಶಾಂತದಿಂದಲಿ ||ತಂದೆ ಭವತಾರಕನ | ಹೊಂದಿ ಪೂರ್ಣ ವಸ್ತುವಾಗಿ |ಬಂಧನವನು ಕಡಿದು ಕೊಂಡು | ಆನಂದದಲಿರುವವಗೆ 3
--------------
ಭಾವತರಕರು
ಆವ ಕುಲವಾದರೇನು ಶ್ರೀ ವಾಸು-ದೇವನೆಂದವನೆ ಧನ್ಯಾ ಪ ವಿಪ್ರ ಮಾ-ದಿಗಗಿಂತ ನಿಕೃಷ್ಟನೋ 1 ಊಧ್ರ್ವ ಪುಂಡ್ರಗಳ ಧರಿಸೀ ಶಿರದಲ್ಲಿಪದ್ಮಾಕ್ಷಿ ತುಲಸಿ ಮಾಲೆ ಹಾಕಿಮಧ್ವ ವಲ್ಲಭನೆನ್ನದಾ ಆ ವಿಪ್ರಶುದ್ಧ ಚಾಂಡಾಲನೆನ್ನೋ 2 ಪಂಚ ಮುದ್ರೆಗಳ ಧರಿಸೀ ಲೋಕ ಪ್ರ-ಪಂಚಕ್ಕೆ ದಾಸನೆನಿಸೀಪಂಚ ಭೇದವು ತಿಳಿಯದಾ ಆ ವಿಪ್ರಪಂಚ ಮಹಾ ಪಾತಕಿಯೋ3 ನಾರದಾನೆಂಬವನನೂ ಕುಲದಲ್ಲಿಆರೆಂದು ತಿಳಿಯೊ ನೀನು ನಮ್ಮನಾರಾಯಣನ ಸ್ಮರಿಸಲು ನೀಚ್ಯೋನಿಮೀರಿ ಸುರಮುನಿಯಾದನೋ 4 ವಿದುರ ವಾಲ್ಮೀಕರ ನೋಡು ಅವರ ತುದಿಮೊದಲು ನೀ ತಿಳಿದು ನೋಡು ನಮ್ಮಮದನನಯ್ಯನ ಭಜಿಸಲು ಅವರೆಲ್ಲಸದಮಲಾರಾದುದರಿಯಾ 5 ಜಾತಿ ಕಾರಣವಲ್ಲವೋ ಶ್ರೀ ಹರಿಗೆಭೂತಿ ಕಾರಣವಲ್ಲವೋ ||ಸ್ವಾತಂತ್ರ್ಯವನ್ನು ಮರೆದು ಶ್ರೀ ಹರಿಯಪ್ರೀತ್ಯಾಗಲೆನ್ನಬೇಕೋ 6 ಅನ್ಯ ಕರ್ತೃತ್ವ ಮರೆದು ಶ್ರೀ ಹರಿಗೆನಿನ್ನ ನಿನ್ನವನೆಂದಡೇತನ್ನ ದಾಸ್ಯವನೆ ಇತ್ತು ನಮ್ಮ ಮೋ-ಹನ್ನ ವಿಠ್ಠಲ ಸಲಹುವಾ 7
--------------
ಮೋಹನದಾಸರು
ಆವ ಜನುಮ ಸಖನೇ ನಮ್ಮಯ್ಯಾ ಪ ಅವಿದ್ಯ ಬಲಿಯೊಳು ಸಿಲುಕಿ ಬಳಲುವನ | ಸುವಿದ್ಯ ನೋಟದ ಕರುಣವ ಬೀರಿದನಾ1 ಏನರಿಯದಲಿರೆ ವಿಷಯ ಮದಾಂಧದಿ | ಜ್ಞಾನಾಂಜನವ ಮಾಡಿ ಕಂಗಳದೆರಿಸಿದನಾ 2 ಹೃದಯ ಭೂಮಿಗೆ ಹರಿ ನಾಮಬೀಜವ ಬಿತ್ತಿ | ಸದಮಲ ಭಕುತಿಯ ಬೆಳೆಗಳ ನುಣಿಸಿದನಾ 3 ಕೇಳದ ನುಡಿಗಳ ಹೇಳುತ ಕಿವಿಯೊಳು | ಕಾಲ ಕಾಲಕ ಎನ್ನ ಹಿತವನೆ ಯೋಜಿಪನಾ4 ತಂದೆ ಮಹಿಪತಿ ಕಂದನೆನಿಸಿತ್ತ ನಾ | ಪರ ಭಾಗ್ಯವ ನೀಡಿದನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ನ್ಯಾಯವೋ ಭಾವಜರಿಪುವಿನುತ ನಿಂದು ದಾವ ನ್ಯಾಯವೊ ಪ ಆವ ನ್ಯಾಯವೋ ದೇವ ದೇವ ಮಾವಕಂಸಜೀವಘಾತಕ ಅ.ಪ ಕಪ್ಪು ವರ್ಣನು ಭಕ್ತಜನರ ಲ್ಲಿರ್ಪೆ ಸದಾ ನೀನು ನಿ ನ್ನ ಪಾದದಿ ತಪ್ಪು ಎಲ್ಲನು ಒಪ್ಪಿಬಂದಿಹ್ಯ ಭಕ್ತಜನರ ತಪ್ಪು ಒಪ್ಪಿ ಕ್ಷಮಿಸಿ ದಯದಿ ದುರಿತ ನಿವೃತ್ತಿಗೈದು ಅಪ್ಪಿಕೊಂಡು ಸಲಹದಿರುವಿ 1 ತಂದೆ ತಾಯಿ ನೀನು ಎಂದು ನಂಬಿ ಬಂದು ಬಿದ್ದೆನು ನಿನ್ನ ಪಾದಕೆ ಮಂದಭಾಗ್ಯನು ನೊಂದು ಬೆಂದು ಸಂಸಾರವೆಂಬ ಸಿಂಧುವಿನೊಳು ತಾಪಬಡುತ ಬಂದು ಮೊರೆಯಬಿದ್ದ ಕಂದನ ಮಂದರಮಂದಿರ ಸಲಹದಿರುವಿ 2 ನಿನ್ನನರಿಯದ ಅಜಮಿಳನು ಬಿನುಗನೆನಿಸಿದ ಪಾಪಗೈದವ ಗಣನೆಯಿಲ್ಲದ ಕನಿಕರದಿಂದ ವನಿಗೊಲಿದು ಘನಪದವನಿತ್ತು ಪೊರೆದೆ ಚಿನುಮಯಾತ್ಮ ಸಿರಿಯರಾಮ 3
--------------
ರಾಮದಾಸರು
ಆವ ಭಯವಿಲ್ಲ ಪರಾವರೇಶನ ಸಕಲ ಪ ಭಾವಜ್ಞ ಜನರಿಗಿನ್ನು ಅ.ಪ. ದೇಶಕಾಲೋಚಿತ ಧರ್ಮ ಗಿರ್ಮಗಳು ಸ ನ್ಯಾಸ ಮೊದಲಾದಾಶ್ರಮೋಚಿತ ಸುಕರ್ಮಗಳು ಮಾಸೋಪವಾಸ ವ್ರತ ನೇಮ ಗೀಮಗಳು ಸದ್ ಪ್ರದೋಷನ ಧ್ಯಾಯಗೀಯ ಶ್ವಾಸ ಬಂಧನ ಉಪನ್ಯಾಸ ತೀರ್ಥಾಟನೆ ರ ಮೇಶನ ಗುಣಗಳಟ್ಟಹಾಸದಲಿ ನೆನೆವುತ ನಿ ರಾಶೆಯಿಂದಿಪ್ಪ ಹರಿದಾಸ ದಾಸರಿಗೆ 1 ಸ್ನಾನ ಜಪ ದೇವತಾರ್ಚನೆ ವೈಶ್ಯದೇವ ಬಲಿ ವಿಧಿ ನಿಷೇಧಗಳು ವಿ ಸಂಹನನ ವೈರಾಗ್ಯ ಶಕ್ತಿ ಶ್ರೀನಿವಾಸನ ಪರಮ ವಿಮಲ ಲೋಕೈಕ ಕ ಲ್ಯಾಣ ಗುಣ ರೂಪ ಕ್ರಿಯೆಗಳನು ಜಡ ಚೇತನದಿ ಧೇನಿಸುತ ಮನದಿ ಹಿಗ್ಗುತ ತುತಿಸಿ ನಲಿವ ಸುಮ ಹಾನು ಭಾವರಿಗೆ ಈರೇಳು ಲೋಕದೊಳು ಇನ್ನು2 ಮಲಿನರಾಗಿಹರು ನೋಳ್ಪರಿಗೆ ಪ್ರತಿ ದಿನದಲ್ಲಿ ಸುಲಭರಂತಿಹರು ದುರ್ಗಮರಾಗಿ ತೋರುವರು ಅಳುವರೊಮ್ಮೊಮ್ಮೆ ಪರವಶರಾಗಿ ಮೈ ಮರೆದು ನಲಿವರೊಮ್ಮೊಮ್ಮೆ ನಗುತಾ ಜಲಜಾಕ್ಷನಮಲ ಮಂಗಳ ಗುಣವ ಕೇಳಿ ಗಂ ಟಲ ಶಿರಗಳುಬ್ಬಿ ಚಪ್ಪಳೆಗಳಂ ಬಾರಿಸುತ ಮುಳುಗಿ ಸುಖ ವನಧಿಯೊಳು ತನು ಪುಳಕೋತ್ಪವದಿ ಇಳೆಯೊಳಗೆ ಸಂಚರಿಪ ಕಲುಷವರ್ಜಿತಂಗೆ 3 ನೋಡುವುದೆ ಹರಿಮೂರ್ತಿ ಕೇಳುವುದೆ ಹರಿಕೀರ್ತಿ ಆಡುವುದೆ ಹರಿವಾರ್ತೆ ಮಾಡುವುದೆ ಹರಿಪೂಜೆ ನೀಡುವುದೆ ಅವಧಾನ ಬೇಡುವುದೆ ಪುರುಷಾರ್ಥ ಕೂಡುವುದೆ ಸಾಯುಜ್ಯವು ದಾಡಿಯಿಂದಲಿ ದನುಜರಳಿದು ಧರಣಿಯನು ತಂದ ಕ್ರೋಢರೂಪನೆ ಲೋಕಕ್ಕೆಲ್ಲ ಆನಂದ ನಾಡಾಡ ದೈವದಂತಿವನಲ್ಲವೆಂದು ಕೊಂ ಡಾಡುತವನಿಯೊಳು ಸಂಚರಿಸುವ ವಿಪಶ್ಚಿತರಿಗೆ 4 ಕುಟಿಲರಹಿತನು ಧರ್ಮಾರ್ಥ ಮುಕುತಿ ಸಂ ಸುರನದಿ ಮುಖ್ಯ ತೀರ್ಥ ವೆಂ ಕಟ ಶೈಲ ಮೊದಲಾದ ಕ್ಷೇತ್ರದಲಿ ಸತ್ಕರ್ಮ ಹಟದಿಂದ ಮಾಳ್ಪರೆಲ್ಲಾ ವಟ ಪತ್ರಶಯನನೊಲುಮೆಯನೆ ಬಯಸುವ ಜಾಂಡ ಕಟಹದ್ಭಹಿವ್ರ್ಯಾಪ್ತನಾದ ಶ್ರೀ ಜಗನ್ನಾಥ ವಿಠಲನಾವ ದೇಶದಿ ಕಾಲದಲ್ಲಿ ಪಾ ಸಟೆಯಿಲ್ಲವೆನುತ ಲಾಲಿಸುತಿಪ್ಪರಿಗೆ5
--------------
ಜಗನ್ನಾಥದಾಸರು