ಒಟ್ಟು 1143 ಕಡೆಗಳಲ್ಲಿ , 97 ದಾಸರು , 719 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆ ಧನ್ವಂತ್ರಿ ನಿನ್ನ ಕರುಣಾಂಬುಧಿ ಚಿನ್ಮಯ ಪರಿಪಾಲಿಸೆನ್ನ ಪ. ದೇವಾಸುರರೆಲ್ಲ ಸೇರಿ ಏಕ ಭಾವದಿಂದಲಿ ತಮ್ಮ ಸಾಹಸವ ತೋರಿ ತಾವಾಗಿ ಕಡೆಯಲಂಬುಧಿಯ ಭವ ನಾವನ ಸಮಯದಿ ಬಂದಿಯನ್ನೊಡೆಯ 1 ಕುಲಿಶಧರಗೆ ಯುಕ್ತಿ ಕಲಿಸಿ ಬಲಿವಲ ಶಂಬರಾದಿ ದೈತ್ಯರ ಮೋಹಗೊಳಿಸಿ ಕಲಶಪೂರಿತ ದಿವ್ಯ ಸುಧೆಯ ದೇವ ಬಲಕಿತ್ತು ಸಲಿಸಿದ ಸಾಮ್ರಾಜ್ಯನಿಧಿಯ 2 ಪೂರ್ಣೇಂದು ಗಣಜಾಯಿ ಸುಮುಖಾ ಶ್ಯಾಮ ವರ್ಣ ಸುಬಾಲಕ ದುರ್ಜನ ವಿಮುಖಾ ಸ್ವರ್ಣಾವದಾತ ಸುವಾಸ ದಿವ್ಯ ಕರ್ಣಾಭರಣಾದಿ ಭೂಷ ಸುನಾಸಾ 3 ದೀರ್ಘಪೀವರ ದೋರ್ದಂಡ ಪಂಚ ಶುಭ ಶುಂಡಾ ಜನಿತ ಬ್ರಹ್ಮಾಂಡ ವ್ಯಾಧಿ ವರ್ಗವ ಓಡಿಸುವರೆ ಸುಪ್ರಚಂಡಾ 4 ಕಂಬುಗ್ರೀನ ಪರೇಶ ಅರು- ಣಾಂಬುಜಾಕ್ಷ ಸುಖ ಚಿದ್ಘನ ವೇಷಾ ನಂಬಿದವರ ಕಾವ ಶ್ರೀಶಯನ ನಿಂಬಾಗಿ ರಕ್ಷಿಸು ಶ್ರೀ ವೆಂಕಟೇಶಾ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ನರರೇನು ಬಲ್ಲರು ಪ ಘೋರದುರಿತ ಸಂಹಾರ ಕೇಶವಧೀರಾ ಮಾರಜನಕ ಸುಂದರ ಹೇ ವೀರಾ ಸುರಾಸುರಪವಂದ್ಯ ಸುಗುಣ ಶ್ರೀಗೋವಿಂದ ವೀರಾ ಶ್ರೀರಾಮಾವತಾರ ಎತ್ತಿದ ಧೀರಾ 1 ಆದಿಮೂಲ ಕರ್ತನೆಂದು ಅರಿತು ಮನದಿ ಶೋಧಿಸೆ ಸಕಲ ಸಾರವನು ಭೇದಾನರಿತು ಯದಾಯುಗ ಭಟಗಾಳಾರು ಮೋದದಿ ನವಯುಗದ ಮರ್ಮವ ನರಿತು 2 ಸಕಲ ಪ್ರಪಂಚವೆಂಬ ಸುಖವನ್ನೆ ಅತಿಗಳೆದು ಮುಕುತಿ ದಾಯಕ 'ಹೊನ್ನ ವಿಠ್ಠಲ’ ನೆಂದೆನ್ನು ಭಕುತಿಯಿಂದಲಿ ಸದಾಭಾವನೆಯ ನೀ ಬಿಡದೆ ಅಕಳಂಕ ಮಹಿಮನ ಅರಿತು ಸ್ತುತಿಸುವರಿಗಲ್ಲದೆ 3
--------------
ಹೆನ್ನೆರಂಗದಾಸರು
ನವ ಸುವರ್ಣದಾ ಪರಿಯ ಹೊಳೆವ ಕೆಂಜೆಡೆಯಲೀ ದಿವಿಜ ನದಿಯ ನಿರುತ ಧರಿಸೀ ಮುಂದಲಿಯ ಲೀ ತವ ಶೀತಾಂಶೂನಾ ಕಳೆಯ ತಿಲಕಾ ಮಾಡಿ ಮೆರೆವಾ ಭವ ಭಯ ನಿವಾರಿಸಿ ಹೊರೆವಾ 1 ಮದನ ನಳಿದಾ ಭಾಲನಯನಾ ಸುವಿಧ್ಯದಿ ಮೊರೆಹುಗಲು ವಲುವಾನಂದನಯನಾ ಫಣಿ ಭೂಷಣ ಮಾರಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 2 ಠವ ಠವಿಸುವ ಮುನಿಯ ಮನೋಹರ ಪಂಚ ವದನಾ ರವಿ ಕೋಟಿ ತೇಜದಿರುವಾಘನ ಕಾರುಣ್ಯ ಸದನಾ ಭವಾನೀ ಯಡದ ತೋಡಿಯಲಿರಿಸೀ ಕೊಂಡು ಮೆರೆವಾ ಭವ ಭಯ ನಿವಾರಿಸಿ ಹೊರೆವಾ 3 ಧವಲೀಸುತಿಹ ತನು ರೂಚಯ ಕರ್ಪೂರ ಪರಿಯಾ ತವಕದಿಂದುಟ್ಟಾ ಉಡುಗಿ ಹರನಾ ಚರ್ಮ ಕರಿಯಾ ಸವಿಭೂತಿಯ ಸುಧರಿಸಿ ತಪವೇಷದಿ ಮೆರೆ ವಾ ಭವ ಭಯ ನಿವಾರಿಸಿ ಹೊರೆವಾ 4 ಭುವನತೃಯದಾ ಸುರನರೋರಗ ಪೂಜಿಸುತಿಹಾ ಪಾದ ದ್ವಿತೀಯಾ ಅವಿನಾವಾ ದೇವರ ಜನಗಿರಿ ವಾಸವಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 5 ತ್ರಿವಿಧ ತಾಪವಾಹರಿಸುವದು ಹರಯಂದ ಭರವಿದೀ ಭವಯನ್ನ ಲಾಗಾ ಸುಖಗರೆವ ಸಾನಂದ ವರದೀ ಭವ ಭಯ ನಿವಾರಿಸಿ ಹೊರೆ ವಾ 6 ಸವಾರೀಧರನಾವರಣದಿರುವಾ ಕಪ್ಪುಗೋರಳಾ ತ್ರಿವಿಷ್ಟಾಪರಿಯಾ ಪದವ ಮುನಿವಾ ತ್ರಿಶೂಲ ಸರಳಾ ಕವಿಬೋಧಿಸುವಾ ಡುವರ ಸೂತ್ರದ ಕೈಯ್ಯಾ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 7 ಶಿವಷ್ಟಕವನು ಹೃದಯ ಪತ್ರ ಮ್ಯಾಲ ಬರವಾ ಅವನಿಷ್ಟಾರ್ಥವಾ ಕುಡುತ ದುಷ್ಕøತ ಮೂಲಹರಿವಾ ಅವಿದ್ಯೋಡಿ ಸುವಾ ಗುರು ಮಹಿಪತಿಯಾಗಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾಮ ಮುದ್ರೆಯ ಧರಿಸೋ ಶ್ರೀಹರಿಯ ದಿವ್ಯ ಪ ನಾಮ ಮುದ್ರೆಯ ಧರಿಸೆ ಆ ಯಮನಾಳುಗಳ ಭೀಮವಿಕ್ರಮದ ಭಯ ಲೇಶವಿಲ್ಲವೋ ಅ.ಪ ಚಕ್ರದೊಳು ಹೀಂಕಾರನಾಮಕನಾಗಿ ನಕ್ರವೈರಿಯ ಕಾಯ್ವ ತಮವನ್ನು ಹರಿಸಿ ವಿಕ್ರಮ ಕೃಧ್ಧೋಲ್ಕ ತಮಲೋಕದೊಳು ಇದ್ದು ಚಕ್ರಧರಿಸದ ಜೀವರ ಕ್ರೂರತನದಲಿ ಶಿಕ್ಷಿಪಾ 1 ಶಂಕಿಸುವವನ ಪಾಪಪಂಕದೊಳಿಟ್ಟು ಮಂಕುಕವಿಸಿ ಮಹೋಲ್ಕ ಶಿಕ್ಷಿಪನಯ್ಯ 2 ಗದೆಯೊಳು ನಿಧನನಾಮಕ ಹರಿಯು ತಾನಿದ್ದೂ ಮುದದಿ ಮರೆಯುವವರನಾ ವೀರೋಲ್ಕ ತಾ ನಿತ್ಯ 3 ಪದುಮನೊಳು ಪ್ರಸ್ತಾವನಾಮದಿ ಪದ್ಮರಹಿತ ಮಾನವರ ದ್ಯುಲ್ಕರೂಪದಿ ನಿತ್ಯ 4 ನಾರಾಯಣ ಮುದ್ರೆಯೊಳು ಉದ್ಗೀಥನು ಹರಿಭಕುತರ ಅಂಧತಾಮಿಶ್ರ ಕಳೆವನು ದುರುಳ ಕಲ್ಯಾದ್ಯರ ಸಹಸ್ರೋಲ್ಕ ರೂಪದಿ ಕ್ರೂರತನದಿ ಅಂಧಂತಮದೊಳಿಡುವನು 5 ನೇಮದಿ ದ್ವಾದಶ ಊಧ್ರ್ವಪುಂಡ್ರಗಳು ಕಮಲ ತುಲಸಿಮಣಿಮಾಲೆಗಳ ಕೊರಳೊಳು ಯಮನಾಳುಗಳ ಭಯ ಲೇಶವಿಲ್ಲೆಂದಿಗೂ 6 ಪಂಚ ಪಂಚ ಕರಣಗಳ ಕಾರ್ಯ ಒಪ್ಪಿಸೇ ಪಂಚನರಕಬಾಧೆ ಕಿಂಚಿತ್ತ್ತಾದರು ಇಲ್ಲ ಪಂಚಾನನನುತ ಶ್ರೀ ವೇಂಕಟೇಶನ ದಿವÀ್ಯ7
--------------
ಉರಗಾದ್ರಿವಾಸವಿಠಲದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1 ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2 ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
--------------
ಕನಕದಾಸ
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿಜವೆಂದು ತಿಳಿದು ಪೂಜಿಸೋ ಗುರುಚರಣ ಮಾಯಾ ಪ್ರಪಂಚದ ಸ್ಮರಣಾ ಪ ರಮಣೀಯರ್ಮೋಹವೆಂಬುದು ದೊಡ್ಡಶರಧಿ ಭ್ರಮಿಸಿ ನೀ ಮುಳುಗುತ್ತೇಳುವೆ ವ್ಯರ್ಥಭರದಿ ನಿಜ ಸತ್ತು ಹುಟ್ಟುವ ದೇಹ ಸಾಧ್ಯವ ಮಾಡಾ ಅ ನಿತ್ಯ ಪ್ರಪಂಚ ದೊಳ್ಕೆಡಬೇಡ ಮೂಢಾನಿಜ ನೀರ ಮೇಲಣ ಗುಳ್ಳೆಯಂತೆ ಶರೀರಾ ಬಾರಿಬಾರಿಗೆ ಸತ್ತು ಜನಿಪ ವಿಚಾರ ನಿಜ ಎಂದಿಗೂ ಮರಣತಪ್ಪದು ಕೇಳುಮರುಳೆ ಚಂದ್ರಶೇಖರನಾ ಧ್ಯಾನಿಸು ಹಗಲಿರುಳೆ ನಿಜ ಗುರುವಿಮಲಾನಂದ ಸ್ಮರಣೆಯ ಮಾಡೋ ಜನನ ಮರಣದ ಭಯವ ನೀಗಾಡೋ ನಿಜ
--------------
ಭಟಕಳ ಅಪ್ಪಯ್ಯ
ನಿತ್ಯ ಇಂದಿರಾಧವನೊಲಿಮೆ | ಸಂಧಿಸುವುದೂ ಪ ಪರಮ ಪ್ರಿಯ ಗುರುವರ್ಯ ನರಸಿಪುರ ದಾಸರಪರಮ ಮಂಗಳ ನಾಮ ಸುಸ್ತವನದೀ ||ಉರುತರದ ಸಂಚಿತವು ಮಿಂಚಿನಂದದಿ ಕರೆಗುಗರುವ ವೇತಕೊ ಮನುಜ ಭಜಿಸೊ ನಿತ್ಯಾ 1 ಪಥ ದೊರಕಿತೆನಗೆ2 ಶ್ರೀದಾಸಗುರುತಿಲಕ | ಮೋದತೀರ್ಥರ ಪ್ರೀಯಭೇದಾಗಮಜ್ಞಾನಿ ಪ್ರಾಜ್ಞ ಮೌಳೀ ||ಆದರಿಸಿ ಉದ್ಧರಿಸು | ಮೋದಮಯ ರತ್ನನೇವಾದಿಗಜ ಪಂಚಾಸ್ಯ | ಬುಧಜನರ ಪ್ರೀಯಾ 3 ಜ್ಞಾನ ಪ್ರಕಾಶನೇ | ಜ್ಞಾನ ಮಾರ್ಗವ ತೋರ್ವಪೂರ್ಣೇಂದು ಮತ್ತುದಯ | ಘನಗುಣಜ್ಞಾ ||ಮೌನಿವರ ಕರುಣಿಸಿ | ನಿನ್ನಕಾಂಬುವ ಹದನನೀನೆ ತಿಳಿಸಲಿ ಬೇಕು | ಆ ನಮಿಪೆ ನಿನ್ನ 4 ಮುದ್ದು ಮೋಹನ ದಾಸ ಪದಕಮಲ ಭೃಂಗನೇಸಿದ್ಧಜನ ಸನ್ಮೌಳಿ | ತಿದ್ದಿ ಮನ್ಮನವಾಮಧ್ವಾಂತರಾತ್ಮಗುರು | ಗೋವಿಂದ ವಿಠಲನಮದ್ಗುರುವೆ ಮನ್ನನದಿ | ಸಿದ್ಧಿಸೋ ಜೀಯಾ 5
--------------
ಗುರುಗೋವಿಂದವಿಠಲರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಸುಖವಿದೂ | ಚಿತ್ತದಲ್ಲಿ ಮಾಯ ಮೋಹ ಕತ್ತಲೆಯ ಕಾಣದಿಹುದು ಪ ತನುವು ತಾನಲ್ಲವೆಂದು | ಮನದಿ ಉನ್ಮನಸಿನಿಂದ | ಬಿನುಗು ವಿಷಯಗಳನೆ ಕೊಂದು | ಚಿನುಮಯಾತ್ಮನಾದೆ ಎನಲು 1 ಆಶೆಮೂಲವನ್ನು ಅಳಿದು | ಕೋಶ ಪಂಚಕಗಳ ಕಳೆದು | ಪಾಶವೆಂದು ತುಳಿದು ಲಕ್ಷ ಈಶನಲ್ಲಿ ಬೆರೆದ ಮೇಲೆ 2 ತಂದೆ ಭವತಾರಕನ | ಹೊಂದಿ ಪೂರ್ಣ ಬ್ರಹ್ಮನಾಗಿ | ಮುಂದೆ ಮೂರು ದೇಹ ಬಿಟ್ಟು | ಒಂದು ಗೂಡಿ ಬ್ರಹ್ಮನಲ್ಲಿ 3
--------------
ಭಾವತರಕರು