ಒಟ್ಟು 385 ಕಡೆಗಳಲ್ಲಿ , 74 ದಾಸರು , 353 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈಕುಂಠನಾಯಕನೂ ಈ ಮಹಾತ್ಮನು ವೈಕುಂಠನಾಯಕನು ಪ. ಪಾಕಶಾಸನತ, ನಾಕಪಾಲಕ ಸರ್ವಲೋಕನಾಯಕ ಭಕ್ತರಕ್ಷಕ ಶ್ರೀಕಳತ್ರ ಸುಪವಿತ್ರನೀತನು ಅ.ಪ. ವೆಂಕಟಗಿರಿಯಿಂದ ಅಂಕನಶೆಟ್ಟಿಪುರಕೆ ಬಿಂಕದಿಂದೈತಂದ ಕಾಂಕ್ಷಿತಾರ್ಥವನೀವನು ಭಕ್ತರಮನಶಂಕೆಯ ಕಳೆಯುವನು ಕಂಕಣಕರ ಬದ್ಧನಾಗಿಹ ಪಂಕಜಾಸನ ಜನಕ ಲಕ್ಷ್ಮೀಕಾಂತ ಸರ್ವಾಂತರ್ಯಾಮಿಯಾಗಿಹ 1 ಬಂದವರೆಲ್ಲ ತಾವು ಬಂದಂತೆ ಮನನೊಂದು ಹಿಂದಿರುಗಿ ಪೋಗುವರೆಂಬ ಮಾತಿಲ್ಲ ಬಂದು ಬಂದವರಿಗೆಲ್ಲ ಬೇಡಿದುದಿತ್ತಾನಂದ ದಿಂದವರೀಯುವ ಕಾಣಿಕೆಗಳ ಚೆಂದದಿಂ ಸುರೇಂದ್ರ ವಂದ್ಯ ಕರೀಂದ್ರಪೂಜಿತ ನಂದ ಕಂದ ಮುಚುಕುಂದ ವರದನು 2 ಅಂಗವಿಹೀನರಿಗಂಗವ ಸರಿಗೈದು ಇಂಗದ ಭೋಗಭಾಗ್ಯಂಗಳ ನೀವನು ಕಂಗೆಟ್ಟಿಹರಕಾಯ್ವನು - ಬೇಡುತ್ತಿಹ ಬಂಜೆಗೆ ಮಕ್ಕಳನು ನೀಡುವನು ತನ್ನ ನಂಬಿದವರ ಕೈಬಿಡನು ಸತ್ಯಾತ್ಮನು ಮಂಗಳಾಂಗ ಯದುಪುಂಗವ ಸದಯಾಪಾಂಗ ಶ್ರೀ ರಂಗ ತುಂಗವಿಕ್ರಮ ಶೇಷಗಿರಿವರ 3
--------------
ನಂಜನಗೂಡು ತಿರುಮಲಾಂಬಾ
ವ್ಯರ್ಥ ದೂರುವರೀಶನಾ ವ್ಯರ್ಥದೂರುವರೈಯ್ಯಾ ಮರ್ತು ತಮ್ಮವಗುಣ ಮರ್ತ್ಯಲಾಭಾ ಲಾಭಾ ಕರ್ತ ಮಾಡುವೆನೆಂದು ಪ ಕಣ್ಣು ಕಿವಿ ನಾಲಿಗಿನ್ನು ನಾಶಿಕಕೊಟ್ಟು ಸನ್ನುತ ಹರಿಕಥೆ ಕೇಳು ಯನ್ನಸ್ತುತಿ ಸುನಿರ್ಮಾಲ್ಲ್ಯುನ್ನತ ತುಳಸಿ ವಾಸನಾಘ್ರಾಣಿಸೆಂದು ಮುನ್ನೆಂದನಲ್ಲದೇ ಆನ್ಯದೈವ ನೋಡೆಂದನೇ ಪಿಶುನರ ಅನ್ಯಾಯವ ಕೇಳೆಂದನೇ ಉದರಕಾಗಿ ಮಾನವ ಹೊಗಳೆಂದನೇ ಭೋಗದ ತನ್ನಗೋಸುಗ ದ್ರವ್ಯ ಆಘ್ರಾಣಿಸೆಂದನೆ 1 ಮಂಡಿತ ಸಿರಸದೋರ್ದಂಡ ಕರಚರಣ ಚಂಡ ಮನಗಳಿಂದಾ ಖಂಡ ನಮಿಸಿ ಸೇವೆ ಪುಂಡಲೀಕದ ಪರಿಗಂಡು ನೃತ್ಯಾದಿಯ ಬೋಧ ಮನನ ಪಂಡುಂಡ ಮಾಡೆಂದ ಮಂಡಿ ಬಿಗಿದರೆಂದನೇ ಜನರಿಗು ದ್ವಂದದಿ ಹೊಡಿಯಂದನೇ ಧನಿಕರ ಕಂಡು ಭ್ರಾಂತಿಗೆ ಬಿದ್ದು ಚಿಂತಿಸುಯಂದನೆ 2 ನಿತ್ಯ ವರಿತು ಸತ್ಯಜ್ಞಾನೌಷದ ಉತ್ತಮ ರಸಾಯನ ಅತ್ತಿತ್ತಲಾಗದೇ ಕೊಂಡು ಇತ್ತ ಭವರೋಗ ವಿಪತ್ತದ ಕಳೆಯೆಂದ ಮತ್ತ ಮಹಿಪತಿ ಸುತ ಹೃತ್ತಾಪಹಾರಿ ಕು ಚಿತ್ತ ನೀನಾಗೆಂದನೇ ಸತ್ಸಂಗ ನಿತ್ಯ ಮಾಡಿರೆಂದನೇ ಬರಿದೆನೀ ಮೃತ್ಯು ದೇವತೆ ಬಾಯ ತುತ್ತಾಗುಯಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಂಕರ ಭಗವತ್ ಪರಭಾವ ಪ ಪುರಹರ ಕವಿಜನ ವಂದಿತ ರಾಗದೆ ರತಿಯನು ಜಾಗು ಮಾಡದೆ ಕೊಡು 1 ಮನಕಭಿಮಾನಿಯು ನೀನು ಮನ್ಮ ಅನುದಿನದಿ ಶ್ರವಣ ಮನನ ನಿಧಿ ಧ್ಯಾ ಸನ ಮೊದಲಾದ ಸಾಧನೆಯನು ಮಾಡಿಸು 2 ಸುರಪತಿ ಮೊದಲಾದವರೆಲ್ಲ ನಿನ್ನ ಚರಣವ ಧ್ಯಾನಿಪರೆಲ್ಲ ಧರಣಿಜಾರಮಣ ಗುರುರಾಮ ವಿಠಲನ ಮರೆಯದಿರುವ ಮಹತ್ತರ ಭಾಗ್ಯವ ಕೊಡು3
--------------
ಗುರುರಾಮವಿಠಲ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ
ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶರಣು ಶಿರೀಶ ಹರೇ ಪ ಭುವನದಲಿ ಶೃತಿ-ಯಡಗೇ| ಯವಿಗಳಾಡಿಸದೇ| ಜವದಲಿ ಬಂದು ನೀ ತಮನನು ಕೊಂದೇ| ಕಾವೋದೋ ಎನ್ನಾ ಮತ್ಸ್ಯರೂಪಾ 1 ಸುರಸುರರು ಕೊಡಿ| ಶರಧಿಯ ಮಥಿಸುದಕಿ| ಕರುಣದಿ ಬೆನ್ನವನಿತ್ತೆ ನೀನಗತಿ| ಕಾವೋದು ಎನ್ನ ಕಮಠೆ ರೂಪಾ 2 ಹಿರಣ್ಯಾಕ್ಷನ ಕೊಂದು| ಧರೆಯನು ದಂತದಲೆ| ಧರಿಸಿದೆ ನೀ ಅನವರತಗಳಿಂದಲೇ| ಕಾವುದೋ ಎನ್ನ ವರಹಾ ರೂಪ 3 ಛಲದಿ ಪ್ರಹ್ಲಾದ ಕರಿಯೇ| ಕುಲಿಶ ಸಮುಗುರುದಲೆ| ಮೆಳೆತನ ಸೀಳಿದೆ ಕರಳ್ಳೊನಮಾಲೆ| ಕಾವುದೋ ಎನ್ನ|ನರಹರಿ ರೂಪ 4 ಚಂಡ ಬಲಿವವರದನೇ| ದಂಡ ಕಾಷ್ಟಕರನೇ| ಕುಂಡಲ ಸುಕಮಂಡಲ ಭೂಷಿತನೇ| ಕಾವುದೋ ಎನ್ನ ವಾಮನ ರೂಪ 5 ಸುಜನರ ಪ್ರತಿ-ಪಾಲಾ ರಾಜಾಕುಲಾಂತಕನೇ| ರಾಜಿಸುತಿಹ ವರ ಪರಶುಧರನೇ| ಕಾವುದೋ ಎನ್ನಾ ಭಾರ್ಗವರೂಪಾ6 ಋಷಿಯ ಮಖ ಕಾಯಿದು ಶಶಿಧರಧನು ಮುರಿದೇ| ದಶಮುಖ ಕುಂಭಕರ್ಣರ ಮರ್ದಿಸಿದೆ| ಕಾವುದೋ ಎನ್ನಾ ರಾಘವ ರೂಪ7 ಎಣೆಗಾಣದ ಮಡುವಿನಲಿ| ಫಣಿವರ ಫಣಿಮ್ಯಾಲ| ಕುಣಿದೆ ಆನಂದದಿ ಕೊಳಲನೂದುತ್ತಲೇ| ಕಾವುದೋ ಎನ್ನಾ ಯಾದವ ರೂಪ8 ಮೂರೆನಿಪ ಪುರದಲಿ| ನಾರೇಶ ದೃತವಳಿದೇ| ಭೂರಿ ಸಜ್ಜನ ಹೃದ್ವ ನಜ್ಜದೊಳಾಡಿದೇ| ಕಾವುದೋ ಎನ್ನಾ ಬೌದ್ದ ಸ್ವರೂಪಾ9 ಸಲಹಬೇಕೆಂದು ಜಗವಾ| ಇಳೆಯಾ ಭಾರರ ತರಿದೇ| ಸುಲಲಿತ ಕುದುರೆಯ ಏರಿ ಮೆರೆದೆ| ಕಾವಿದೋ ಎನ್ನ ಕಲ್ಕಿಸ್ವರೂಪ 10 ಸಹಕಾರಿ ಭಕ್ತರಿಗೇ| ಮಹಿಮೆ ದೋರಿದೆ ಹೀಗೆ| ಮಹಿಪತಿ ಸುತ ಪ್ರಭು ಸಲಹು ನೀಯೆನಗೆ| ಕಾವುದೋ ಎನ್ನಾ ಅನಂತರೂಪ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಧಿಸುತೆ ಮಾತೆ ಶರಧಿಸುತೆ ಮಾತೆ ಪ ಪೊರೆಯೇ ಜಗನ್ಮಾತೆ ಅ.ಪ ಸರಸಿಜಭವ ಶಿವ ಗರುಡ ಶೇಷ ಮುಖ ಸುಮನಸ ವಂದಿತ ಪದಯುಗಳೆ ಮನಸಿಜ ಜನಕನ ಕೋಮಲತಮ ಹೃತ್ಕಮಲದೊಳು ಸದಾ ನೆಲಸಿದ ಶುಭಗೆ 1 ವಂದಿಪೆ ನಿನ್ನಯ ಚರಣ ಕಮಲ ಎನಗೊಂದುಪಕಾರವ ದಯಮಾಡೆ ಒಂದನು ಅರಿಯದ ಭಕುತರೊಳಗೆ ಇವ ನೊಂದು ಎಂದು ಗೋವಿಂದನಿಗರುಹೆ 2 ತುಂಗಮಹಿಮನನು ಎಡಬಿಡದೆಲೆ ಅವ ನಿಂಗಿತವನು ನೀನರಿತಿರುವೆ ಮಂಗಳದೇವತೆ ಅದನರುಹಿ ಕೃಪಾ ಪಾಂಗವ ಬೀರೆ ಪ್ರಸನ್ನ ಸುವದನೇ 3
--------------
ವಿದ್ಯಾಪ್ರಸನ್ನತೀರ್ಥರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶುಕ್ರವಾರ ಕೇಶವನ ಭಜನೆ ಮಾಡಬೇಕೊ ನಮ್ಮ ಚಕ್ರಧಾರಿಯನ್ನು ಬಿಡದೆ ನೋಡಬೇಕೊ ಪ ಚಕ್ರಧಾರಿಯಾಗಿ ಸಕಲ ಚಕ್ರವರ್ತಿಗಳನು ಗೆದ್ದ ಆ ಕ್ರುರಗೆ ತಾ ವರನಿತ್ತು ನಿತ್ಯಾನಂದ ತ್ರಿವಿಕ್ರಮನನ್ನು ಅ.ಪ ಅಪ್ರಾಕೃತಮಾದ ವೈಕುಂಠನಾಥ ರಂಗಾ ಜಯ ಜಯ ಕ್ಷಿಪ್ರದಿಂದಾ ಭಕ್ತರಿಗೊಲಿಯುವಡೋಪಪತ್ರಂಗಾ ಅಪ್ರಮೇಯ ಅಚಲನಾನು ಆರೂಢರಿಗಾಧೀನವಿದಹುದೊ ನಿತ್ಯಾನಂದನೆ ಮುರಳೀಧರ ಗೋಪಾಲ ಜನಾರ್ದನ ಸತ್ಯಬ್ರಹ್ಮವೋ 1 ದಾಸದಾಸರಿಗೆ ದಾಸನಾಗಬೇಕೊ ಕೆಟ್ಟ ವೇಷ ಭಾಷೆ ದುರ್ದೋಷಗಳು ವೋಗಬೇಕೊ ಬ್ಯಾಸರಾಂತಕಮಾದ ಶ್ರೀಮದ್ದೇಶಿಕಾ ಶ್ರೀತುಲಸಿರಾಮಾ ನಾಸಿಕಾಗ್ರನಿವಾಸನೆಂದು ನಂಬಿ ನಾರಾಯಣನಂ ಬಿಡದೆ 2
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಬದರಿ ಬದರೀಯಾ | ಯಾತ್ರೆಯಾ ಮಾಡಿ | ಬದರೀಯಾ ಪ ಬದರಿಯ ಯಾತ್ರೆಯ ಮಾಡಿ | ನಿಮ್ಮಮುದ ಶಾಶ್ವತವನ್ನೆ ಬೇಡಿ | ಆಹಸದಮಲ ದೇಹದಾಲಯವೆ | ಸದಾಶ್ರಿತ್ಹಿಮಾಲಯಹೃದಯ ಮಧ್ಯದಲೀಹ | ಬದರೀನಾಥನ ನೋಡೀ ಅ.ಪ. ಶ್ವೇತ | ದ್ವೀಪಾದ್ಯಾಲಯಗಳಸುಪದ ತೀರ್ಥವು ಸ | ರಿತ್ಪ್ರವರಾದಿ ಚಿಂತಿಸಿ 1 ತನುಮನ ಧನಗಳಾಶೆಯ | ತೊರೆದುಮನ ಆದಿಕರಣಗಳ್ಹರಿಯ | ಪಾದವನಜದಲ್ಲಿಡೆ ಅದು ಅಭಯ | ಸುದತಿಮಣಿ ಸಹ ಪೋಗೋದೆ ಹೃದಯ | ಆಹವನ ಭುವನ ಚರಿಸಿ ಸತ್ಪಾ | ವನ ಕ್ಷೇತ್ರಗಳಮಣಿದು ಸರ್ವತೀರ್ಥ | ಸ್ನಾನಾದಿ ಗೈಯುತ 2 ಸಿಂಧು ಮಾಧವ ಸಿರಿ ಕೃಷ್ಣನ ನೆನೆದು 3 ಶೌರಿ ಪಾಂಡುರಂಗರಾರಾಧನೆಯ ಗೈದು | ತೋರುತ ಮುದವನು 4 ಶಾರದ ನಾಡೀಲಿ ಗಂಡಕೀ ಮತ್ತೆಚಾರು ಲಂಬುಶಿಖಿ ಗೋಮತಿ | ಆ ಗಾಂ-ಧಾರಿಯೊಳಗೆ ಮಾರುಧೃತಿ | ನೆನೆಚಾರು ಶಂಕಿನಿ ನಾಡಿ ತಪತೀ | ಆಹವೀರ ರಾಮಾ ಮಧು | ವೈರಿಯು ಶ್ರೀರಂಗನಾರಾಯಣನ ರೂಪ | ಸಾರುತ ತಪತೀಲಿ 5 ಸಿರಿ ಮಾಧವನ ನೆನೆಯೆಪರಿಹರಿಸುತ ಪಾಪ ಸರುವಾಭೀಷ್ಟವ ನೀವ 6 ಸ್ತವರನದಲೀಪರಿ ಮಿಂದು | ದೇಹಪವಿತರವಾಯಿತು ಎಂದು | ಕ್ಷೇತ್ರಸರ್ವವ ಸ್ತುತಿಸುತ ಮುಂದೆ | ಪೋಗೆಭವರಹಿತ ಹರಿದ್ವಾರ ಅಂದು | ಆಹಭುವನ ಪಾವನ ಗಂಗಾ | ಪ್ರವಹಮೀಯುತ ಮತ್ತೆಭವಹರ ಹರಿನಾಮ | ಶ್ರವಣ ಮನನಗೈದೂ 7 ಸೂರ್ಯ ಪ್ರಭೆ ನೇತ್ರಎಸೆವೊ ಲಲಾಟದಿ | ಹೃದಯ ದೋಳ್ವಿಕಾಲ 8 ಹೇಮ ಧಾಮ | ಕಂಡುನೀಗೊ ನೀ ದೇಹದ ಶ್ರಮ | ಓಡಿಪಂಚ ರೂಪಗಳನೆ ತಂದು | ಆಹಪಂಚ ನಾಡಿಯ ಮಧ್ಯ | ಮಿಂಚಿಪ ಗೃಹದಿ ವಿ-ರಂಚಿ ಪಿತನ ನೋಡಿ | ಸಂಚಿತಾದಿಯ ಕಳೆ 9 ಕಮಲ ಮಧ್ಯ | ಮುದದಲರ್ಚಿಸುತಲಿ 10
--------------
ಗುರುಗೋವಿಂದವಿಠಲರು
ಶ್ರೀ ಯುವನಾಮ ಸಂವತ್ಸರ ಸ್ತೋತ್ರ 152 ಉಗ್ರಂ ವೀರಂ ಮಹಾ ವಿಷ್ಣು ಅನುಪಮ ಮಹಾಜಾಜ್ವಲ್ಯ ಸರ್ವತೋಮುಖ ಭೀಷಣ ಭದ್ರ ಮೃತ್ಯು ನರಸಿಂಹ ದೇವ ದೇವ ದೇವೋತ್ತಮನಲಿ ಶರಣಾದೆ ಯುವನಾಮ ಸಂವತ್ಸರ ಅಸಮ ನಿಯಾಮಕನಲ್ಲಿ ಪ. ಬಾಲಿಶತನ ಕಳಿದು ಪ್ರೌಢಿಮೆಯಲಿ ಬರುವ ಯುವಕ ಯುವತಿಯರು ಸಾರ ಅಸಾರ ವಿವೇಕದಿ ಇಹಪರ ಸಾರ್ಥಕ ಆಗುವ ಜೀವನ ಕ್ರಮದಿ ಚರಿಸಲು ಯೋಗ್ಯವಾಗಿರುವದು ಈ ಯುವನಾಮ ವರ್ಷ 1 ಹರಿರೇವ ಪರೋ ಹರಿರೇವ ಗುರುರ್ ಹರಿರೇವ ಜಗತ್ಪಿತೃ ಮಾತೃಗತಿಃಯೆಂಬ ಪರಮೋತ್ತಮ ಬಲು ಆಪ್ತ ವಾಕ್ಯವ ಪ್ರತಿಕ್ಷಣ ಸಂಸ್ಮರಿಸಿದರೆ ಇಷ್ಟ ಸಿದ್ಧಿ ಅನಿಷ್ಟ ನಿವಾರಣ ದಿನ ದಿನ ವಿಹಿತ ಸಾಧು ಕರ್ಮ ಆಚರಿಪರಿಗೆ 2 ವಿಷ್ಣು ಪುರಾಣದಿ ಪರಾಶರ ಮಹರ್ಷಿ ಉಪದೇಶಿಸಿದಂತೆ ಪಾಷಂಡಿಗಳಲ್ಲಿ ಪಾಷಂಡ ಮತ ಪ್ರವರ್ತಕರಲಿ ಮೋಹ ಕೂಡದು ಸಾತ್ವಿಕ ಪುರಾಣಧಿಕ್ಕರಿಸುವ ಸ್ತ್ರೀ ಪುರುಷರ ಕ್ರೌರ್ಯಕ್ಕೆ ಬಾಗಿ ಸ್ನೇಹಿಸುವ ಜನರು ವಿಪತ್ತಿಗೆ ಗುರಿ ಜನ್ಮ ಜನ್ಮಕ್ಕೂ 3 ಯುವ ವರ್ಷ ರಾಜನು ಸಾಧು ಸಜ್ಜನಪ್ರಿಯ ಶನಿಮಹಾರಾಜನು ಹರಿಭಕ್ತರು ಸಜ್ಜನರುಗಳಿಗೆ ಸಹಾಯಕನು ಗೋಚಾರದಿ ಸ್ವಕ್ಷೇತ್ರಿ ಮೂಲ ತ್ರಿಕೋಣದೆ ಚಾರ ಶ್ರೀಹರಿ ನಿಯಮನದಿ ಮಂತ್ರಿ ಶುಕ್ರಚಾರ್ಯರು ಗೋಜನ ಪ್ರಿಯರು ಲೋಕ ಹಿತಕರರು 4 ಶನೈಶ್ಚರ ಕೃತ ಲಕ್ಷ್ಮಿ ಭೋಮ ನರಸಿಂಹ ಸ್ತೋತ್ರ ಅವಶ್ಯಪಠನೀಯ ಧಶರಥ ಕೃತ ಮತ್ತು ಪ್ರಸನ್ನ ಶ್ರೀನಿವಾಸೀಯ ಶನಿ ಸ್ತೋತ್ರ ಈ ನುಡಿಗಳು ಸಂವತ್ಸರ ಸ್ತೋತ್ರ ಯತಿವರ್ಯರು ಪಂಡಿತರು ಮತ್ತೆಲ್ಲರಿಂಪಠನೀಯ ಭಕ್ತಿ ಪೂರ್ವದಿ ಪಠಿಸಿ ಮನನ ಮಾಳ್ಪರಿಗೆ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ ರಕ್ಷಿಸುವ ಪ್ರತಿಕ್ಷಣದಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಮಾದೇವಿ ಅಂಬೋನಿಧಿ ಹೃದಂಬರ ವಾಸಿನಿ ಅಂಬಾ ಬಾ ಬಾ ಅಂಬುಧಿಜಾ ನಮೋ ಪ ಅಂಬುಜನಾಭನ ನಿಜಸತಿ ಶ್ರೀ ಭೂ ರಥಾಂಗ ಪೂ ಕಂಬು ಮಾಲಾದಿ ಸುರೂಪದಿ ಹರಿಗೆ ನೀ ಸಮ್ಮುದದಿಂದೆ ಸುಸೇವೆಯ ಮಾಳ್ಪಳೆ ಅ ಪ ಮಂದರಗಿರಿಯಿಂದ ಸಿಂಧುವ ಮಥಿಸಲು ನಿಂದು ಪ್ರಕಟವಾದೆ ಇಂದಿರಾದೇವಿಯೆ ಕುಂದೇನಿಲ್ಲದ ಸುಂದರಗುಣನಿಧಿ ಬಂಧಮೋಚಕ ಆನಂದಸುಪೂರ್ಣ ಗೋ ವಿಂದ ಶ್ರೀ ಅಜಿತಭೂಮನನ್ನೆ ವರಿಸಿದೆ ಮಂದಜಭವ ಶಿವ ವೃಂದಾರಕನುತ 1 ಹರನ ಚಾಪವ ಶ್ರೀರಾಮನು ಮುರಿಯಲು ವರ ವನಮಾಲೆಯ ಅರ್ಪಿಸಿ ನಿಂದೆ ಸುರಮುನಿರಾಜರು ಪುರಜನರೆಲ್ಲರು ಸುರಿಯಲು ಪೂಮಳೆ ಸಂಭ್ರಮದಿಂದಲಿ ಸರಿಪರರಿಲ್ಲದ ಶ್ರೀ ರಘುರಾಮನು ಸಿರಿಜನಕಜೆ ನಿನ್ನ ಕರವನು ಗ್ರಹಿಸಿದ 2 ಭೈಷ್ಮಿ ರುಕ್ಮಿಣಿ ಸತ್ಯಭಾಮಾ ಶ್ರೀ ಭೂದೇವಿ ವಾಮಚಿನ್ಮಯೆ ಶ್ರೀ ಸ್ವಾಮಿ ಕೃಷ್ಣನ ರಾಣಿ ಹೇಮಗರ್ಭಾದಿ ಸಮಸ್ತ ಸುಜನರಿಗೆ ರಮೆ ನಿನ್ನಯ ಸುಮಂದ ಕಟಾಕ್ಷವು ಕಾಮಿತ ಫಲದವು ಮೋಕ್ಷಹೇತುವೆ ದೇವಿ ಸತಿ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಾಮನ ತ್ರಿವಿಕ್ರಮ ಜಯತು ವಾಮನನಿಗೆ ಜಯತು ತ್ರಿವಿಕ್ರಮಗೆ | ಜಯತು ಕಂಚೀವಾಸ ವಿಭು ರಮಾಪತಿಗೆ || ಪ. ಭೂಮಿ ದಾನವ ಕೇಳ್ದ ಬ್ರಹ್ಮಾಂಡ ದೊಡೆಯಗೆ ಅಮಲೋರು ಗುಣಧಾಮ ಮಂಗಳಾತ್ಮ ಶರಣು 1 ಪಾದ ಸುಂದರ ನಮೋ ರಮೆಯರಸ ಮಂತವ್ಯ ತ್ರಿವಿಕ್ರಮ ವಿಶ್ವರೂಪ 2 ವಿಧಿ ತಾತನೇ ಶಿವ ಶಿವದ ಶ್ರೀ ಪ್ರಸನ್ನ ಶ್ರೀನಿವಾಸ ಶರಣು 3
--------------
ಪ್ರಸನ್ನ ಶ್ರೀನಿವಾಸದಾಸರು