ಒಟ್ಟು 2374 ಕಡೆಗಳಲ್ಲಿ , 123 ದಾಸರು , 1810 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆ ದೊರಕುವನೋ ಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನು ಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು 2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ- ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂದಿಗೆ ದೊರಕುವನೋಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನುಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ-ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎದುರ್ಯಾರೋ ಗುರುವೇ ಸಮರ್ಯಾರೋ ಪ ವಿಧಿ ಪದ ಅರ್ಹನೆ | ಮಧುಸೂದನ ಸುತ ||ಅ. ಪ|| ಕೇಸರಿಯ ಸತಿಯಲಿ ಉದಿಸಿದ ವೀರ | ರವಿಜಗೊಲಿದಧೀರದಾಶರಥಿ - ಚರಣಕೆ ಮಣಿದ ಗಂಭೀರ | ವಾಲಿಯ ಸಂಹಾರ ||ಸಾಸಿರ ದೈವತ್ತು | ಗಾವುದ ಸಾಗರಗೋಷ್ಪದ ಗೈಯುತ | ವಸುಧಿಜೆಗೆರಗಿದ 1 ಹರಿಯ - ಸೇವಕತನ ಮಾದರಿಯ | ತೋರಿದ ಹೊಸ ಪರಿಯಅರಿಯಾ - ಲಂಕೆಯ ದಹಿಸಿದ ಪರಿಯ | ಸೇತು ಬಂಧನ ದೊರೆಯಾ ||ಅರಿ ಕುಲ ಸವರಿ ಸಂ | ಜೀವನ ಗಿರಿ ತಂದುಧುರವ ಜಯಿಸಿ ಹರಿ | ಮಡದಿಯ ತಂದಗೆ 2 ಪ್ರಥಮಾಂಗನು ಕುಂತಿಯ ಸುತನೆನಿಸೀ | ದೃಪದಾತ್ಮಜೆ ವರಿಸೀಅತಿಖ್ಯಾತ ಜರೆಸುತನನ ವಧಿಸೀ | ಕೌರವರನು ಅಳಿಸೀ ||ತತುವ ಮತವ ಸಂ | ಸ್ಥಾಪಿಸುತವನಲಿವಿತತ ಮಹಿಮ ಹರಿ | ರತಿಯನೆ ಪಡೆದಗೆ 3 ಅರಿ ಉರವನೆ ಬಗಿದೂನಾರೀಯ - ತುರಬನು ಬಿಗಿದೂ | ನರ ಮೃಗನಂತೆಸೆದೊ ||ನೀರೊಳು ಅಡಗಿದ | ಕೌರವ ಮೇಲ್ಬರೆಊರು ತಾಡನದಿಂದ | ಮಾರಕನಾದಗೆ 4 ಕಲಿಯೂ ಹೆಚ್ಚಿದ ಕಲಿಯುಗದಲ್ಲಿ | ಮಣಿಮಾನನು ಇಲ್ಲಿಮಲಿನವ ಮಾಡಲು ಬಲು ವೇದದಲೀ | ಕಲುಷಿತ ತರ್ಕದಲೀ||ಅಲವ ಬೋಧರಾಗಿ | ಹುಲುಮತವಳಿಯುತಕಲುಷಹ ಗುರು ಗೋ | ವಿಂದನೆ ಪರನೆಂದೆ 5
--------------
ಗುರುಗೋವಿಂದವಿಠಲರು
ಎದ್ದುನಿಂತ ಬಂದು ನಿಂತ ಮುಂದೆ ನಿಂದಂಥಮಾರಾಂತರ್ಗೆ ಕೃತಾಂತ ನಿಶ್ಚಿಂತ ಹನುಮಂತಬಲವಂತ ಯೆದೆಗೊಂತ ತನಪಂಥ ಸಲಲೆನುತಸÀಂತರಿಗೆ ಸಂತತ ಶಾಂತ ನಿಂತ ಮಾರಾಂತ ಕೃತಾಂತ ಪ. ದುರುಳ ರಾವಣನ ವನದ ತರುವಿನ ಕೊನೆಯೇರಿದಕರಚರಣಗಳ ಘಾಯದಿ ಮರಂಗಳ ಮುರಿದಅರಿಗಜ ಗಂಡಭೇರುಂಡನೆಂಬ ತನ್ನ ಬಲುಬಿರುದಮೆರೆದು ಮಾರುತಿ ಪ್ರತಿಭಟರ ಶಿರಂಗಳ ತರಿದ 1 ಸೀತೆಗೆ ಉಂಗುರವನ್ನಿತ್ತು ಮತ್ತೆ ಕೈಗಳ ಮುಗಿದಪ್ರೀತಿಯಿಂ ಪೊನ್ನಕಚ್ಚುಟಕ್ಕಿಟ್ಟ ಗಂಟನು ಬಿಗಿದಖ್ಯಾತ ಮಂಡೋದರಿಕುವರನ ಬಸುರನು ಬಗಿದವಾತಸುತನು ವೈರಿಪುರವ ಸುಡಲು ತೊಡಗಿದ 2 ನಲಿದು ಲಂಘಿಸಿ ನಳನಳಿಸುವ ಬಾಲವನೆತ್ತಿಖಳರೆದೆ ಶೂಲ ಹುಬ್ಬುಗಳ ಗಂಟಿಕ್ಕಿ ನೋಡುವ ಅರ್ಥಿಆಳುತಲಿಹ ಅಬಲೆಯರ ಭಯಂಕರಮೂರ್ತಿಸುಳಿದನು ಕೇರಿಕೇರಿಯಲಸುರರ ನುಗ್ಗೊತ್ತಿ 3 ಲಂಕಾನಗರಿಯ ಪುಚ್ಚದ ಕಿಚ್ಚಿಂದ ಸುಟ್ಟಹುಂಕರಿಸುತ ಅಹಿತರ ಬೇಗ ತೆಗೆದೊಗದಿಟ್ಟಕಂಕಣ ಮಕುಟ ಹಾರಂಗಳಿಂದೊಪ್ಪುವ ಬಲುದಿಟ್ಟಶಂಕೆಯಿಲ್ಲದನಿಲಜ ಶತ್ರುಗಳಿಗಿಂತರ್ಥಿಯ ಕೊಟ್ಟ 4 ಹೋಗೆಲೊ ಕಪಿಯೆನೆ ಹೊಕ್ಕು ರಕ್ಕಸರನು ಬಿಗಿದಕಾಗೆಯ ಬಳಗಕೆ ಕಲ್ಲನಿಟ್ಟಂದದಿ ಮಾಡಿದಆಗಲೆ ಕಂಡ ದಶಮುಖನೆಂಬ ಕಳ್ಳನ ನೋಡಿದಬೇಗ ಜಾನಕಿಯನ್ನು ಬಿಡು ಬಿಡುಯೆನಲು ತೊಡಗಿದ 5 ಮೂರರದೊಂದು ಪಾಲು ಖಳರ ಜನಂಗಳ ಕೊಂದಮೀರಿದ ಸೇನೆ ನಮ್ಮ ರಘುಪತಿಗಿರಲೆಂದು ನಿಂದನೂರುಯೋಜನದ ವಾರಾಶಿಯ ತೀರಕೆ ಬಂದಹಾರಿದನು ಗಗನಕೆ ಹನುಮನು ಭರವಸದಿಂದ ನಿಂದ 6 ಕುಂಭಿನೀ ಸುತೆಯ ಕುರುಹಿನ ಸನ್ಮಣಿಯ ತಕ್ಕೊಂಡಅಂಬುಧಿಯನು ಬೇಗ ದಾಟಿ ಶ್ರೀರಾಮರ ಕಂಡತ್ರ್ಯಂಬಕ ಮೊದಲಾದ ಸುರರ ತಂಡದಲಿ ಪ್ರಚಂಡಕಂಬುಕಂಧರ ಹಯವದನನ ಭಕ್ತಿರಸಾಯನ ಉಂಡ 7
--------------
ವಾದಿರಾಜ
ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1 ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2 ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗೊಬ್ಬರು ಇಲ್ಲಾ ನೋಡಿ ಸಿರಿನಲ್ಲ ಪ ಮನದಿ ಯೋಚಿಸಲು ತಂದೆ ತಾಯಿಸತಿ ತನಯ ಸಹೋದರ ಮಿತ್ರರೆಂಬುವರು ಅ.ಪ ಒಬ್ಬರಾದರೂ ಇವರಲಿ ಇದ್ದರೆ ಹಬ್ಬವಾಗಿ ಸಂತೋಷ ಪುಟ್ಟುವುದು ತಬ್ಬಲಿಯಾದೆನು ಸಂಸ್ಮರಣವೆಂಬ ಹೆಬ್ಬುಲಿಯಕೈಗೆ ಸಿಕ್ಕಿರುವೆನು ನಾಂ1 ಯಾರಿಗೆ ಮೊರೆಯಿಡಲೀ ಕಷ್ಟ ಕಿವಿ- ಯಾರ ಕೇಳಿ ಪರಿಹರಿಸುವರಾರು 2 ರಾಯ ತಂದೆ ಧರ್ಮವೆ ಸೋದರರು ಸತಿ ನೋಯಿಸದಿರುವುದು ಮಿತ್ರನು ಇವರೊಳು 3 ಈ ಬಂಧುಗಳುಳ್ಳವಗೆ ನಿರುತವು ಮ- ಹಾಭಾಗ್ಯವುಯಿಹಪರ ಸೌಖ್ಯವು ನಾ ಭ್ರಾಂತಿಯೊಳೆಲ್ಲೆಲ್ಲಿ ತಿರುಗಿದರು ವೋ ಭಗವಂತ ಮಹಂತಾನಂತನೆ 4 ಹೊರಗಿನವರ ಬಾಲ್ಯದಿ ಕಾಣದೆ ಕರೆ ಗುರುರಾಮವಿಠಲ ಹೊರವೊಳಗೂನೀ ನಿರುವೆ ಕರುಣಿಸೈ ಸರ್ವವು ನೀನೆ 5
--------------
ಗುರುರಾಮವಿಠಲ
ಎನ್ನ ಸಲಹುದೋ ರಂಗಾ ಎನ್ನ ಸಲಹು| ನಿನ್ನ ಚರಣ ಕಮಲದೋರಿ| ಗಮನ ರಂಗಾ ಪ ನಷ್ಟ ಪರಮ ಪತಿತ ಗತಿಯ|ಗೆಟ್ಟು ಅಜಮಿಳ ತನ್ನ| ಕಷ್ಟ ಬಡುವ ಕಾಲದಲ್ಲಿ ಸುತನ ಪೆಸರನು| ಮುಟ್ಟಿ ಕರಿಯೇ ತೃಪ್ತನಾಗಿ|ಅಷ್ಟರಿಂದ ಅವಗ ನಿನ್ನ| ಪಟ್ಟಣಕ ನೀ ಅಟ್ಟಿ ಗತಿಯ|ಕೊಟ್ಟು ಸಲುಹಿದೆ ರಂಗಾ 1 ಸಂಧಿಸಿ ಮಧ್ಯರಾತ್ರಿಯೊಳಗ|ಬಂದು ದೂರ್ವಾಸನ್ನವ ಬೇಡ| ಲಂದು ದೃಪದ ನಂದನೆ|ನಿನ್ನೆ ಸ್ಮರಿಸೆ ತ್ವರಿತದಿ| ಬಂದು ನಿಂದು ಬೇಡಿದುದನು|ಛಂದದಿಂದಲಿತ್ತು ದ್ವಿಜರಾಜ| ನಂದ ಬಿಡಿಸಿ ಐವರ ಮಾನ ಕುಂದಂತೆ ಕಾಯ್ದೆ ರಂಗಾ 2 ಐದು ವರುಷ ಹಸುಮಗನಾ|ಬೈದು ಮಲತಾಯಿ ಪೊರಗೆ| ಹಾಕಲಾಗ ಧೃವನು ನಿನ್ನ ಕುರಿತು ಧ್ಯಾನವಾ| ಗೈಯ್ಯಲಾಗಿ ಅಚಲ ಪದಕ|ಒಯ್ದು ಇಟ್ಟು ನೀನು ಅವನ| ಕಾಯ್ದೆ ಮಹಿಪತಿ ನಂದನೊಡೆಯನಾದ ದೇವ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲೆ ಮನಸೆ ನಾಂ ಪೇಳ್ವ ಬುದ್ಧಿ ಮಾತುಗಳ ಕಲಿತು ಜಾಣನಾಗಿ ನಿಜಸುಖದಿ ಬಾಳು ಪ ಪರನಿಂದೆ ಬೆರೆಸದಿರು ನಿರುತರನು ಜರಿಯದಿರು ದುರಿತದೊಳಗುರುಳದಿರು ಪರಚಿಂತೆ ಮಾಡು ಗುರುಹಿರಿಯ್ಹರಳಿಯದಿರು ದುರುಳರೊಳಗಾಡದಿರು ಹರಿಯಶರಣರ ಸೇವೆ ಸ್ಥಿರವಾಗಿ ಮಾಡು 1 ಮರವೆ ಪರದೆಯ ಹರಿ ಅರಿವಿನಮೃತ ಸುರಿ ಸ್ಥಿರಜಾನ್ಞದೊಳು ಸೇರಿ ಹರಿಚರಿತ ಬರಿ ಹರಿದಾಟವನು ಮರಿ ಜರೆಮರಣದು:ಖ ತರಿ ಪರಮಹರುಷದಿ ಮರೆ ದುವ್ರ್ಯಸನ ತೂರಿ 2 ಕ್ರೋಧವನು ಕಡೆಮಾಡು ವಾದಬುದ್ಧಿಯ ದೂಡು ಸಾಧುಜನರೊಳಗಾಡು ಶೋಧನ ಮಾಡು ಖೇದವನು ಈಡ್ಯಾಡು ವೇದದರ್ಥವ ಮಾಡು ಪಾದಸೇವೆಯ ಮಾಡು ಮಾಧವನ ಕೂಡು 3 ಕಾಮಲೋಭವ ಕಡಿ ಭೂಮಿಮೋಹವ ತೊಡಿ ಭಾಮೆಯರ ಪ್ರೇಮ ಬಿಡಿ ಕ್ಷೇಮಪಥ ಪಿಡಿ ತಾಮಸದೂರಮಾಡಿ ಸಾವಧಾನದ್ಹಿಡಿ ಪಡಿ ನೇಮದ್ಹುಡುಕಾಡಿ 4 ಮೋಸಪಾಶವ ಗೆಲಿ ಕ್ಲೇಶಗುಣಗಳ ತುಳಿ ದಾಸಜನರೊಳು ನಲಿ ಶಾಶ್ವತವ ತಿಳಿ ಹೇಸಿಕ್ವಾಸನೆಯಳಿ ದೋಷರಾಸಿಯಿಂದುಳಿ ಶ್ರೀಶ ಶ್ರೀರಾಮನಲಿ ದಾಸನಾಗಿ ಸೆಳಿ 5
--------------
ರಾಮದಾಸರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಲ ದೇವರ ಗಂಡ | ಕೃಷ್ಣ ಚಿಲ್ಲರೆ ದೈವರ ಮಿಂಡ ಪ ಪಾದದಿ ನದಿಯನು ಪೆತ್ತ | ಅದನು ರುದ್ರನು ಶಿರದಲಿ ಪೊತ್ತ ಮಾಧವನ್ಹೊಕ್ಕಳ ಜಾತ | ಶತ ಮೋದನು ಲೋಕ ಪ್ರಖ್ಯಾತ 1 ಸೃಷ್ಟಿ ಸಂಹಾರಗೈದ | ಪರ ಮೇಷ್ಟಿ ರುದ್ರರನಾಳ್ದ ಯೆಟ್ಟ ದೈತ್ಯರ ಶಿರ ಮುರಿದ | ದುರಿತ- ದೃಷ್ಟಿಸಿ ನಾಶಗೈದ 2 ಬಂಟರ ಪಾಲಕನೀತ | ವೈ- ಕುಂಠದ ಒಡೆಯನು ದಾತ ತುಂಟರ ಮಡಹುವ ಸತತ | ನಮಗೆ ನಂಟನು ಗೋಕುಲನಾಥ 3 ಮನಸಿಗೆ ಬಂದುದು ಸಿದ್ಧ | ಪ್ರತಿ ಯೆಣಿಸುವ ಜೀವನೆ ಬದ್ಧ ನೆನೆಸುವರಲಿ ತಾನಿದ್ದ | ದಯ ವನಧಿಯು ಬೆಣ್ಣೆಯ | ಕದ್ದ 4 ಭಂಗ | ತಾ ನಿರುತ ಮಾಡುವ ರಂಗ ಜಯೇಶವಿಠಲ ತುಂಗ | ಮಹಿ ಮಾ ರಕ್ಷಿಸು ದಯಾಪಾಂಗ
--------------
ಜಯೇಶವಿಠಲ