ಒಟ್ಟು 1871 ಕಡೆಗಳಲ್ಲಿ , 107 ದಾಸರು , 1559 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓ ದೇವ ನೀನೆಂಥ ಕರುಣಾಳೊ ಮಾದೇವ ನೀನೆಂಥ ಕರುಣಾಳೊ ಪ ಕಾಲನ ಕಾಲಲೊದ್ದು ಬಾಲನಿಗಾಯುಷ್ಯ ಪಾಲಿಸಿದೆ ನೀನೆಂಥ ಕರುಣಾಳೊ 1 ಸುರೇಂದ್ರ ಪ್ರಮುಖರ ಪೊರೆಯಲು ಗರಳವ ಕೊರಳೊಳು ಧರಿಸಿದೆ ಕರುಣಾಳು 2 ಘೋರ ಭವಾಂಬುಧಿ ತಾರಣೋಪಾಯವ ಬೀರಿದೆ ಜಗಕೆಲ್ಲ ಕರುಣಾಳು 3 ಕ್ಷೀರವ ಬೇಡಲು ಕ್ಷೀರೋದಧಿಯನಿತ್ತೆ ಪೋರನಿಗೆ ಇನ್ನೆಂಥ ಕರುಣಾಳು 4 ಶ್ರೀಕಾಂತ ಹಿತ ಸಖ ಶ್ರೀಕಂಠ ನಿನ್ನಂಥ ನಾ ಕಾಣೆ ಧರೆಯೊಳು ಕರುಣಿಗಳ 5
--------------
ಲಕ್ಷ್ಮೀನಾರಯಣರಾಯರು
ಓಂಕಾರ ರೂಪಿಣಿ ಭದ್ರಾಣಿ ಕಲ್ಯಾಣಿ ಪಂಕೇಜದಳಲೋಚನೀ ಅಂಬಾ ಪ ಶಂಕರ ಪ್ರಿಯರಾಣಿ ಗೀರ್ವಾಣೆ ರುದ್ರಾಣಿ | ಸ ರ್ವ ಮಂಗಳವಾಣಿ | ಕರುಣಿ ಶುಶ್ರೋಣಿ ಅ.ಪ ಹೈಮವತೀ ಮಾತೆ | ಹಿಮಗಿರಿ ತನುಜಾತೆ ಭಾಮೆ ಸ್ವಯಂಜಾತೆ | ಸುರಮೌನಿಗೀತೆ ಪ್ರೇಮ ರಸಾನ್ವಿತೇ | ರಾಮಾಭಿನಂದಯುತೆ ಶ್ರೀಮಾಂಗಿರೀಶ | ರಂಗಸಹಜಾತೆ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಓಡಿ ಓಡಿ ಬಾ ಅಂಕದೊಳಾಡೋ ಕೂಸೇ ಬಾ ಪ ನೋಡುವೆ ನಿನ್ನ ರಾಮರ ಮುಖದಿ ಕೂಡಿ ಕರುಣಿಯೆ ಬಾ ಅ.ಪ. ಚೆಂಡು ಕೊಡುವೆನು ಬಾ ಗೋಲಿಗುಂಡು ಕೊಡುವೆನು ಬಾದುಂಡು ಕರದೊಳ್ ಗುಂಡು ಬಿಂದುಲಿ ಉಂಗುರನೀಡುವೆ ಬಾ 1 ಬೆಣ್ಣೆ ಕೊಡುವೆನು ಬಾ ಬಾಳೆಹಣ್ಣು ಕೊಡುವೆನು ಬಾಸಣ್ಣ ಸಣ್ಣ ಹೆಜ್ಜೆನಿಕ್ಕುತ ಮನ್ಮಥಪಿತನೆ ಬಾ 2 ನಾರಿವತ್ಸೆ ಬಾ ಮುತ್ತಿನ ಹಾರ ಹಾಕುವೆ ಬಾಪಾರಿಜಾತ ಮುಡಿಸಿದ ರುಕ್ಮಿಣಿಧೀರ ಕೃಷ್ಣನೆ ಬಾ 3 ಮುರಳೀಧರನೆ ಬಾ ಮುಂಗುರಗಳ ಭೂಷಿತ ಬಾಪರಿಪರಿವಸ್ತ್ರವನಿಟ್ಟು ನೋಡುವೆ ಮರಳಿ ಮರಳಿ ಬಾ 4 ನಂದನ ಕಂದನೆ ಬಾ ಮನಕಾನಂದಪಡಿಸುತ ಬಾನಿಂದಿರಲಾರೆ ನಿನ್ನನು ನೋಡದೆ ಇಂದಿರೇಶನೆ ಬಾ 5
--------------
ಇಂದಿರೇಶರು
ಕಂಗೆಡದಿರು ಮನವೆ ಕಂಗೆಡದಿರು ಒಡನೊಡನೆ ನೆರೆದು ಬಂದು ಪ ಜನಕೆ ಗ್ರಾಸವೆಂತಹುದೆಂದು ಅನುಮಾನ ಹಚ್ಚಿಕೊಂಡು ಬಡವಾಗದಿರೆಲೆ ಆಲೋಚನೆ ಮಾಡು ನಿನ್ನೊಳಗೆ ತಿಳಿದು ಮರಳಿ ಮರಳಿ ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ ಚಿನುಮಯ ಸತ್ಯಸಂಕಲ್ಪ ದೇವ| 1 ಇನಿತು ಜೀವಿಗಳಿಗೆ ಕಾಲಕಾಲಕೆ ಗ್ರಾಸ ಮಾಡಿಯಿಪ್ಪಾ ಕ್ಷಣಮಿರಗೊಡದೆ ಆವಲ್ಲಿಯಿದ್ದರೂ ವುಣಿಸುವ ಉಚಿತವನ್ನೆ ತಿಳಿದು ನೋಡಿ ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ ನಿರ್ಮಾಣ ಮಾಡಿದಂತೆ ಬೊಮ್ಮಾ2 ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ ಜನಿಸುವಾಗಲೆ ಅವರವರವಾಡಿಪನಾ ಕೊನೆಯ ಸೆರಗಿನಲಿ ಕಟ್ಟಿಹನೋ ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ ಗುಣಿಸಿ ನೋಡಿದರೆ ಕಾರುಣಿಕÀವಹುದೊ 3 ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ ಅನುಭವಕೆ ತಂದುಕೊಂಡು ಗ್ಲಾನಿಯಾಗೋ ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ ತನುವ ಶೋಷಿಸಿ ವಿರೋಧಾವಾಗಿ ಕೊಂಬೆ ಸಿರಿ ನಮ್ಮ ವಿಜಯವಿಠಲರೇಯಾ ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ
--------------
ವಿಜಯದಾಸ
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಪ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಅಮಿತ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3
--------------
ಕನಕದಾಸ
ಕದರಿ ನರಹರಿ ವಿಠಲ | ಮುದದಿ ಪೊರೆ ಇವಳಾ ಪ ಬೆದರಿ ಬೆಂಡಾಗಿ ತವ | ಪದಕೆ ಬಿದ್ದಿಹಳಾ ಅ.ಪ. ಬನ್ನ ಬವಣೆಗಳೇ ?ಇನ್ನು ಪೇಕ್ಷಿಸದೆ ಕಾ | ರುಣ್ಯ ವೀಕ್ಷಣ ತೋರೊಪನ್ನಂಗಶಯ್ಯ ಹರಿ | ಮನುಜ ಮೃಗವೇಷಾ 1 ಸ್ವಾಪದಲಿ ನೀ ತೋರ್ದ | ಆಸನಿಯ ಅಂಕಿತವ ಪ್ರಾಪಿಸಿಹೆ ಇವಳಿಗೆ | ಶ್ರೀಪತಿಯೆ ಕೇಳೋ |ನೀ ಪಾಲಿಸುತ್ತಿವಳ | ತಾಪತ್ರಯಗಳ ಕಳೆಯೆಹೇ ಪಯೋಜ ಭವನುತ | ಪಾಪಾತಿದೂರಾ 2 ಪಾದ | ಪದ್ಮಗಳ ಭಜಿಪಾಮುಗ್ದೆಯನು ಪೊರೆಯೆಂದು | ಮಧ್ವಾಂತರಾತ್ಮಕನೆಬುದ್ಧಿ ಪೂರ್ವಕ ಬೇಡ್ವೆ | ಶ್ರದ್ಧೆ ಪತಿಸುತನೇ 3 ಐಹಿಕಾಮುಷ್ಮಿಕದ | ಬಹು ಪರಿಯ ಸುಖ ಸೌಖ್ಯಶ್ರೀಹರಿಯೆ ಕರುಣಿಸುತ | ಕಾಪಾಡೊ ಇವಳಾಸ್ನೇಹ ಸತ್ಸಂಗದಲಿ | ಪಾಲಿಸುತ ನೀನಾಗಿಮೋಹ ಮಮತೆಯ ಕಳೆದು | ಸಾಧನವ ಗೈಸೋ 4 ತರಳ ಪ್ರಹ್ಲಾದನನ | ಪೊರೆಯಲಿಲ್ಲವೆ ಹರಿಯೆವರ ಧ್ರುವನನ ಪಾಂಚಾಲಿ | ಅಜಮಿಳರ ಪೊರೆದೆಮರುತಾಂತರಾತ್ಮ ಗುರು | ಗೋವಿಂದ ವಿಠ್ಠಲನೆಪೊರೆಯ ಬೇಕಿವಳ ಬಹು | ಕಾರುಣ್ಯದಲಿ ಹರಿಯೇ 5
--------------
ಗುರುಗೋವಿಂದವಿಠಲರು
ಕನ್ಯೆ ಕುವರಿ ಕರುಣಿಸೆಮ್ಮನೂ | ಕಮಲನಯನೆಅನ್ಯ ದೇವತೆಯನ್ನ ಭಜಿಸೆನೇ ಪ ಮನ್ಯು ಮಿಕ್ಕ ದೋಷ ಹರಿಸಿ | ನಿನ್ನ ಪತಿಯ ಚರಣ ಕಮಲವನ್ನೆ ಭಜಪ ಮತಿಯ ಕೊಟ್ಟು | ಘನ್ನ ಪದಕೆ ದಾರಿ ತೋರೆ ಅ.ಪ. ಇಂಬು ಡಿಂಬ ಪೋಗದವರವ ಪಡಿಯೆ 1 ಖುಲ್ಲ ಕಂಸ ತನ್ನ ಭಗಿನಿಯ | ಒಯ್ದ ಬೇಗನಲ್ಲನೊಡನೆ ಗೈದ ಖೈದಿಯ |ಅಲ್ಲಿ ಉದಿಸೆ ಚೆಲ್ವ ಕೃಷ್ಣ | ನಲ್ಲೇ ನೀನು ದುರ್ಗೆ ಎನಿಸೆವಲ್ಲದವರ ಬಿಡದೆ ನೀನು | ಕೊಲ್ವೆನೆಂದು ಹಾರಿ ಪೋದೆ 2 ಶರಧಿ | ನಿಂತೆ ಅಲ್ಲಿ ಕನ್ಯೆಯಾಗಿ 3 ಮದುವೆ ನಿನಗೆ ಮಾಳ್ಪ ಮನದೊಳೂ ವರುಣ ಬೇಡೆರುದ್ರ ಅಜರು ಬಂದು ನಿಲ್ಲಲೂ ||ಒದಗಿ ಕಲಿಯ ಯುಗವು ಆಗ | ವಿಧಿಯು ಹರರು ತಾವು ಬೇಗಸುಧಿಯ ಇಂದ್ರ ಪುರದಿ ನಿಲ್ಲೆ | ಮುದದಿ ನಿಂತೆ ಶರಧಿಯಲ್ಲೇ4 ಇಂದಿರೆ ತವ ಮಾತಿನಂತೆ ಬಂಧ ಹರಿಸಿ ಮುಕ್ತಿ ಸುಖವ | ಛಂದದಿಂದ ಕೊಟ್ಟು ಕಾಯ್ವ 5
--------------
ಗುರುಗೋವಿಂದವಿಠಲರು
ಕಂಬು ಕಂಧರ ಸತತ ಬಿಡದೆ ರಕ್ಷಿ ಸಂಬೋಜೋಧ್ಭವನ ತಾತ ಪ ಜಂಭಾರಿ ವೈರಿಕುಲಾಂಬುಧಿ ಕುಂಭಜ ಕುಂಭಿಣಿಸುರ ನಿಕÀರುಂಬ ಪೋಷಕದೇವ ಅ.ಪ ನಳಿನಾಕ್ಷ ನರಕೇಸರಿ ನಂಬಿದೆ ನಿನ್ನ | ಶೌರಿ || ಸಿರಿ | ನಿಲಯ ನಿತ್ಯಾನಂದ ಎಲರುಣಿ ವರಶಾಯಿ ಕಲುಷಸಂಹಾರಕ ಜಲದರಿಪುವಿನ ತನಯಾನನುಜನ ಕಲಹದೊಳು ಜೈನಿದನ ತಾತನ ಕುಲವಿರೋಧಿಯ ಧ್ವಜನ ಜನಕಗೆ ಒಲಿದು ಬೆಂಬಲನಾದ ಕೇಶವ 1 ನಿಗಮ ರಕ್ಷಕ ಕೂರ್ಮಕೀಟ ಮಾನವ ಮೃಗವಟು ಪರಶುರಾಮ ಅಗಜೇಶ ಶರಕಾಲ | ನಗಪತಿ ವರದನೆ ಅ(ಗ)ಗಜರಾಜನ ಮಗಳಿಗೋಸುಗ ನಗುತ ಮಡದಿಯನಗಲಿ ಬಂದು ಜಗದಿ ಪೊತ್ತನ ನಗದಿ ನೆಲಸಿದ ತ್ರಿಗುಣ ವರ್ಜಿತ ಖಗವರೂಧನೆ 2 ಮಂದರೋದ್ಧರ ವಿಶಾಲಮಹಿಮನಾದ ಸಿಂಧೂರ ಪರಿಪಾಲ | ಕಂದರ್ಪಪಿತ ಶಾಮಸುಂರವಿಠಲನೆ ವಂದಿಸುವೆನು ಎನ್ನ | ಬಂಧನ ಬಿಡಿಸಯ್ಯ ಫಣಿ ಪತಿ ಪತಿ ವಿರೋಧಿ | ಪು ರಂದರಾರ್ಯರ ವೃಂದ ವಂದಿತ ನಂದ ಸುತ ಗೋವಿಂದ ಗೋಪತಿ 3
--------------
ಶಾಮಸುಂದರ ವಿಠಲ
ಕಮಲ ಷಟ್ಚರಣನೆನಿಸೊ ಎನ್ನ ಪ ಪರಮಹಂಸಕುಲ ಸುಧಾಬ್ಧಿ ಸುಧಾಕರ ಸುಧೀಂದ್ರಯತಿಕರಜ ಅ.ಪ ಶ್ರೀವರ ಚರಣ ಸರೋರುಹ ಮಧುಕರ ಪೂತ | ಶುಭಮಚರಿತ ಭಾವಜಾದಿ ಷಡ್ವರ್ಗಸುನಿಗ್ರಹ ಶೀಲ ಕವಿಕುಲಲೋಲ ಕೋವಿದ ಕುಲ ಸಂಭಾವಿತ ಮಹಿಮ ಸ ದಾ ವಿನೋದಿ ಸತ್ಸೇವಕ ಜನ ಸಂ ಜೀವನ ಶುಭಕರ ಪಾವನರೂಪ ಪ ರಾವರೇಶ ಪದಸೇವಕ ಯತಿವರ 1 ಸಕಲ ಶಾಸ್ತ್ರ ಪಾರಂಗತ ಪರಿಣತ ಖ್ಯಾತ | ಗ್ರಂಥಪ್ರಣೀತ ಸಂವರ್ಧಕ ಧೀರ | ಸುಜನೋದ್ಧಾರ ಮುಕುತಿ ಸಾಧನೆಗೆ ಕುಟಿಲ ಮಾರ್ಗವ ನಿಖಿಲ ನಿಜಾಶ್ರಿತ ನಿಕರಕೆ ತೋರುತ ಭಕುತ ಕರೆವ ಕೋರಿಕೆಗಳ ನೀಡುತ ಸುಖವ ಕರೆವ ಸುಂದರ ಯತೀಂದ್ರ 2 ಗುಣಮಣಿ ಖಣಿಯೇ ಸುರವರನುತ ಶ್ರೀ ರಾಮಚಂದ್ರ ಚರಣಾಬ್ಜಾ | ರಾಧಿಕ ಸುಪೂಜ್ಯ ದುರಿತ ಕಳೆದು ಭವಶರಧಿಯ ದಾಟುವ ಸರಿಮಾರ್ಗವ ನಾನರಿಯೇನೋ ಗುರುವರ ಕರಿಗಿರೀಶ ಶ್ರೀ ನರಹರಿ ಚರಣವ ಪರಿ ಕರುಣಿಸು ಯತಿವರ 3
--------------
ವರಾವಾಣಿರಾಮರಾಯದಾಸರು
ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ಕಮಲಾ ರಮಣ ಹರಿ ವಿಠಲ | ಕಾಪಾಡೊ ಇವಳಾ ಪ ವಿಮಲ ಮತಿ ಕರುಣಿಸುತ ಮಮತೆಯನೆ ಕಳೆದೂ ಅ.ಪ. ಗುರುರೂಪಿ ತೈಜಸನೆ | ಪರಮನುಗ್ರಹ ಪೊಂದಿಗುರುವಿನಿಂದ ಶಿಷ್ಯನ | ಪಡೆಯುತಲಿ ಮತ್ತೇಪರ್ವತವ ಅಡಿಯಲ್ಲಿ | ಪರಮ ಗುರು ತದ್ಗುರುವವರ ಅಂಕಿತಗಳ ಕಂಡು | ಮರಮಾಶ್ಚರ್ಯ ಪೊಂದೀ1 ಹರ ವಿರಿಂಚಾದಿಗಳು | ಹರಿಯ ಸೇವಕರೆಂಬವರಮತಿಯ ಪೊಂದುತ್ತ | ಚರಾಚರಗಳಲ್ಲಿಹರಿಯಧಿಷ್ಠಿತನೆಂಬ | ವರ ಜ್ಞಾನದಿಂದಲ್ಲಿಹರುಷದಿಂ ಸೇವಿಸುವ | ಸಾಧನವ ಗೈಸೋ 2 ಹರಿ ಗುರೂ ಸದ್ಭಕ್ತಿ | ಹಿರಿಯರ ಸತ್ಸೇವೆಕರುಣಿಸುತಲೀ ಕಾಯೋ | ಕಮಲಾಕ್ಷ ಹರಿಯೇಕರುಣ ನಿಧಿ ನೀನೆಂದು | ಒರಲುತಿದೆ ವೇದಗಳುಪರಿಪಾಲಿಸಿವಳ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು