ಒಟ್ಟು 1184 ಕಡೆಗಳಲ್ಲಿ , 104 ದಾಸರು , 945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜಡಮತಿಗಡ ಕಡಿದೀಡ್ಯಾಡಿ ಪಡಿರೋ ಸನ್ಮಾರ್ಗವ ಹುಡುಕ್ಯಾಡಿ ಪ ಗಡಗಡಸದೃಢದಯಿಡುತೋಡೋಡಿ ಪಡಿರೋ ಕಡು ಅನಂದ್ವೊಯ್ಕುಂಠ ನೋಡಿ ಅ.ಪ ಚಿಂತೆ ಭ್ರಾಂತಿಗಳ ದೂರಮಾಡಿ ನಿ ಶ್ಚಿಂತರಾಗಿರೋ ಮನ ಮಡಿಮಾಡಿ ಶಾಂತಿತೈಲ್ಹೊಯ್ದು ಜ್ಞಾನಜ್ಯೋತಿಕುಡಿ ಚಾಚಿ ನಿಂತು ನೋಡಿರೋ ಹರಿಪುರದಕಡೆ ಅಂತ್ಯ ಪಾರಿಲ್ಲದಾತ್ಯಂತ ಪ್ರಕಾಶದಿಂ ನಿಂತು ಬೆಳಗುತಾರೋ ಆನಂತಸೂರ್ಯರು ಕೂಡಿ 1 ಬೋಧಾದಿಮಯ ಮಹದ್ವಾರಗಳು ಮತ್ತು ವೇದ ನಿರ್ಮಯ ಪುರಬೀದಿಗಳು ಆದಿಅಂತಿಲ್ಲದಷ್ಟ ಭೋಗಗಳು ವಿ ನೋದ ಮುಕ್ತಿ ಕಾಂತೇರಾಟಗಳು ವೇದವೇದಾಂತ ಅಹ್ಲಾದದಿಂ ಪೊಗಳುವ ಸುಜನ ಮಹದಾದಿಪದವಿಗಳು2 ಸೇವಿಪ ಸುರಮುನಿಗಣಗಳು ಕೋವಿದ ನಾರದಾದಿ ಗಾನಗಳು ರಂಭೆ ನಾಯಕಿಯರ ಮಹನರ್ತನಗಳು ಸಾವಿರಮುಖಪೀಠದ್ಹೊಳೆವ ಶ್ರೀರಾಮನ ಪಾವನಪಾದಕಂಡು ಸಾವ್ಹುಟ್ಟು ಗೆಲಿರೆಲೋ 3
--------------
ರಾಮದಾಸರು
ಜಯ ಜಯ ಮಂಗಳಜಯ ಮಂಗಳ ಸುಂದರಿ ಶಾಂಭವಿಗೆ ಪ ಕಮಲ ಮುಖಿಯಳೆಹೊಳೆವ ಮುತ್ತಿನ ವಾಲೆಯಳೇನಳಿನ ಮುಖಿಯರ ನಡುವೆ ಕುಳಿತುಥಳ ಥಳ ಹೊಳೆಯುವಳೇಒಳಹೊರಗೆ ತನ್ನ ಪ್ರಭೆಯನು ತೋರಿನೋಡಿ ಓಲಾಡಿ ತಾ ನಗುವವಳೇ 1 ಪಂಚರತ್ನದಾ ಪದಕವನಿಟ್ಟು ಪದ್ಮಾಸನದಲ್ಲಿ ಕುಳಿತಿಹಳೇಮಿಂಚುವ ಮೂಗುತಿ ಮೂಗಲಿ ಹೊಳೆಯುತಮಿಗಿಲಾದಾಭರಣವ ಧರಿಸಿಹಳೇಅಂಚು ರಂಗಿನ ಸೀರೆಯನುಟ್ಟುಅನಂತ ರೂಪವ ತೋರಿಹಳೇಅಂಚೆ ನಡೆಯಲಿ ನಡೆಯುತ ನಲಿಯುತಸದಾ ಮತ್ತಳಾಗಿರುವವಳೇ2 ರತ್ನದ ಉಡಿದಾರ ಚಿನ್ನದ ಚಿಂತಾಕಹೊನ್ನಿನ ಡಾಬನು ತೊಟ್ಟಿಹಳೇಎಡೆ ಎಡೆಗೆ ತಾ ಧರಿಸಿಹಳೇಸಣ್ಣ ಬಣ್ಣದ ಕುಪ್ಪಸ ತೊಟ್ಟುಮುಗುಳ್ನಗೆ ಬೀರುತ ಕುಳಿತಿಹಳೇಧನುರ್ಬಾಣ ಪಾಶವ ಕೈಯಲಿ ಅಂಕುಶಆಯುಧ ಪಿಡಿದಿಹಳೇ 3 ದುಂಡು ಕೈಯವಳೇ ಸುಂದರ ಕಾಯಳೇಚಂಡ ಮುಂಡ ಸಂಹಾರಕಳೇಮಾಂಡಲಿಕಳೇ ಮಹದ್ಭೂತಳೇಮಹಾಯೋಗಿ ವಿಲಾಸಳೇದಂಡಿ ಕಿರೀಟಳೇ ದಂಡೆಯ ಮುಡಿದಿಹಗೊಂಡೆಯಂದೊಲಿದಾ ಜಡೆಯವಳೇಹಿಂಡು ಹಿಂಡಾದ ದೈತ್ಯರನೆಲ್ಲರ ಖಂಡಿಸಿದೇವಿ ತಾ ಕೊಂದಿಹಳೇ 4 ಆದಿರಹಿತಳೇ ಅಧ್ವಯ ರೂಪಳೇಅನಂತ ಕೋಟಿ ಪ್ರಭಾರೂಪಳೆಶುದ್ಧ ಬುದ್ಧಳೇ ನಿತ್ಯಮುಕ್ತಳೇಚಿದಾನಂದ ರೂಪಳೇಸದ್ಯೋಜಾತಳೇ ಸರ್ವಾತೀತಳೆಸಿದ್ಧ ಪರ್ವತ ಬಗಳೇಶುದ್ಧಾದ್ವೈತಳೆ ಸುಷುಮ್ನನಾಳಳೆಸೂಕ್ಷ್ಮವೆನಿಸುವಳೇ 5
--------------
ಚಿದಾನಂದ ಅವಧೂತರು
ಜಯ ಜಯ ಶ್ರೀ ಸದ್ಗುರುನಾಥ ದಯಗುಣದಲಿ ನಿಸ್ಸೀಮ ನೀ ಪ್ರಖ್ಯಾತ ಧ್ರುವ ಸ್ವಯಂಭು ಸ್ವತಂತ್ರ ಸ್ವಪ್ರಕಾಶ ಸ್ವಯಂಜ್ಯೋತಿಸ್ವರೂಪ ಸ್ವವಿಕಾಸ ದ್ವೈತಾದ್ವೈತಕೆ ಸಹಿತ ಸ್ವವಿಲಾಸ ಶ್ರೇಯ ಸುಖದಾಯಕನಹುದೋ ನೀ ಪರೇಶ 1 ಸ್ವಭಾವ ಸ್ವಸಿದ್ಧ ಸರ್ವಾಧಾರ ಸ್ವಭಾಸ ಸ್ವತೇಜ ಸಹಜ ನಿರ್ಧಾರ ಸ್ವಬೋಧ ಸ್ವಬ್ರಹ್ಮ ಸಾಕ್ಷಾತಾರ ಸ್ವಭಕ್ತಜನರಿಗೆ ನೀನೆ ಸಹಕಾರ 2 ಸ್ವಾನಂದ ಸದೋದಿತ ಸ್ವಯಂ ಭಾನು ಸ್ವಾನಭವಲಾದಯ್ಯ ತಾನೆ ತಾನು ಅನುದಿನ ಭೋರ್ಗರೆವ ನೀ ಕಾಮಧೇನು ದೀನಮಹಿಪತಿ ಸ್ವಾಮಿ ನೀನೆ ನೀನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯದೇವಿ ಜಯದೇವಿ ಜಯ ಪಾವನಗಂಗೇ | ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ ಪ ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು | ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು | ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು | ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು 1 ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ | ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ | ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ | ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ 2 ಹರಿಹರ ದೇವರು ದ್ರವರೂಪದಿ ಹರಿವುತಲೀ | ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ | ದರುಶನ ಮಾತ್ರದಲಾದೆನು ಮುಕ್ತನು ಭವದಲಿ | ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ತನಯಗೆ ಮಂಗಳಂ ಶುಭ ಮಂಗಳಂ ಯುಗ ಯುಗದಿ ಪುಟ್ಟಿ | ಜಿಗಿದು ಗಗವ ಮೆಟ್ಟಿ ಹಗಲೊಡೆಯನ ಫಲ ಬಗೆಯ ಬಕ್ಷಿಸಿ ಮಿಗೆ ಭಕುತಿಲಿಂದ ರಘುಪನೊಲಿಸಿನಾ ಲ್ಮೊಗನ ಪದವಿ ಪಡೆದ ಸುಗುಣ ನಿಧಿಗೆ 1 ಪುನಃ ದ್ವಾಪರದಲ್ಲಿ ಇನಜನ ತನುಜಗೆ ಅನುಜನೆಂದೆನಿಸಿ ಹರಿಯಾಜ್ಞೆಯಿಂದಲಿ ಮಣಿಮಂತ ಮೊದಲಾದ ದನುಜರ ಗಣವೆಲ್ಲ ರಣದೊಳು ಹಣಿದಂಧ ಘವವೀರನೆ 2 ಬಂದು ಭೂಮಿಯಲ್ಲಿ ಮಧ್ಯಮಂದಿರ ನಂದನನಾಗಿ ಮಂದ ಮಾಯ್ಗಳ ಮತ ಖಂಡಿಸುತಲಿ ಶಿಂಧುತೀರದಿ ಮೆರೆವ ಇಂದುಕ್ಷೇತ್ರದಿ ಶಾಮ ಸುಂದರ ಸ್ಥಾಪಿಸಿದಾನಂದಮುನಿಗೆ 3
--------------
ಶಾಮಸುಂದರ ವಿಠಲ
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜೋ ಜೋ ಜೋ ಜೋ ಸಹ್ಲಾದರಾಜ ಜೋ ಜೋ ಜೋ ಜೋ ಪ್ರಹ್ಲಾದನನುಜ ಜೋ ಜೋ ಜೋ ಜೋ ಜಾತರೂಪ ಶಯ್ಯಜ ಜೋ ಜೋ ಜೋ ಜೋ ಭಕ್ತಸುರ ಕಲ್ಪಭೂಜ ಪ ಮನುಜ ಮೃಗಾರ್ಯರ ಸುತನೆನಿಸಿಸುತ ಅಣುಗ್ರಾಮ ಬ್ಯಾಗವಾಟದಿ ಜನಿಸುತ ಮುನಿ ವರದೇಂದ್ರತೀರ್ಥರ ಸೇವಿಸುತ ಅನಿಲ ಸುಶಾಸ್ತ್ರವನರಿತ ಸುದಾತ 1 ಗುರುಧೇನುಪಾಲ ದಾಸಾರ್ಯರ ಮಮತ ಪರಿಪೂರ್ಣದಿಂದ ನೀ ಪರಮ ಪುನೀತ ಸಿರಿಜಗನ್ನಾಥವಿಠಲಾಂಕಿತ ಶರಧಿಜ ಭಾಗದಿ ಪಡೆದ ಪ್ರಖ್ಯಾತ 2 ಸರಸಿಜ ತುಲಸಿ ಸುಮಾಲೆ ಶೋಭಿತ ವರದಿ ಸ್ವಾದಿ ರಾಜೇಂದ್ರಾರ್ಯರ ಪ್ರೀತ ಹರಿಕಥಾಮೃತ ಗ್ರಂಥ ವಿರಚಿತ ಪುರುಹೂತರಾರ್ಯರ ಪ್ರೇಮದ ಪೋತ 3 ಗುಣನಿಧಿ ದ್ವಾಪರದಲ್ಲಿ ಪುಟ್ಟುತ ಫಣಿವರ ಕೇತನ ಮೊರೆ ಲಾಲಿಸುತ ದಿನಮಣಿ ಜಾತನ ದಿವ್ಯ ವರೂಥ ಮಾನಿತ ಮಾನವಿ ಕ್ಷೇತ್ರ ನಿವಾಸ4 ಶ್ರೀ ನಿಧಿ ಶಾಮಸುಂದರ ದಾಸ ದುರಿತ ವಿನಾಶ ಹೀನ ಮತಾಖ್ಯ ಪನ್ನಗಕುಲವೀಶ 5
--------------
ಶಾಮಸುಂದರ ವಿಠಲ
ಜೋ ಜೋ ಶ್ರೀಗುರು ಪ್ರಹ್ಲಾದರಾಜ ಜೋಜೋ ಭಜಕರ ಕಲ್ಪಮ ಹೀಜ ಸ್ತಂಭ ದರ್ಶಿತ ನರಮೃಗರಾಜ ಜೋಜೋ ಭಂಗಾರಕÀಶಿಪುತನುಜ ಜೋ ಜೋ 1 ಚಂದ್ರಿಕಾದಿ ಸದ್ಗ್ರಂಥತ್ರಯದಿಂದಾ ನಂದಿತ ಭೂಮಿ ವೃಂದಾರಕ ವೃಂದಾ ವಂದಿಪರಘಕುಲ ಪನ್ನಗವೀಂದ್ರ ವಂದಿಸುವೆನು ಗುರು ವ್ಯಾಸಯತೀಂದ್ರ2 ಜೋ ಜೋ ಮಧ್ವಮತಾಂಬುಧಿ ಚಂದ್ರ ಜೋ ಜೋ ಮಾಯಿ ಮತ್ತೇಭ ಮೃಗೇಂದ್ರ ಜೋ ಜೋ ಜ್ಞಾನಾದಿ ಸದ್ಗುಣ ಸಾಂದ್ರ ರಾಜಾಧಿರಾಜ ಶ್ರೀ ಗುರು ರಾಘವೇಂದ್ರ 3 ಮಂತ್ರಮಂದಿರದಿ ನಿಂತು ಶೇವಕರ ಚಿಂತಿಪ ಫಲಗಳ ಕೊಡುವ ಉದಾರ ಎಂತು ತುತಿಸಲಿ ತನ್ಮಹಿಮೆ ಅಪಾರ ಮುಕ್ತಿ ಪಂಥವ ತೋರಿಸಿ ಮಾಡೊ ಉದ್ಧಾರ 4 ಶುಭ ಚರಿಯ ನಿರುತಸ್ಮರಿಪರಘ ತಿಮಿರಕೆ ಸೂರ್ಯ ಧರಿಸುರ ಶೇವಿತ ಪರಿಮಳಾಚಾರ್ಯ ಶಿರಿ ಕಾರ್ಪರನರಹರಿ ಗತಿ ಪ್ರಿಯ5
--------------
ಕಾರ್ಪರ ನರಹರಿದಾಸರು
ಡಂಕಿ ಹೊಯ್ಸಿದ ನಮ್ಮ ವೆಂಕಟರಾಯನು ಪಂಕಜಾಕ್ಷರ ಮುಯ್ಯ ತಿರುಗಿಸಿ ಅಸಂಖ್ಯ ರಾಜರು ಬರಬೇಕೆಂದುಪ. ಸುರರು ಮೊದಲೆ ತೀವ್ರದಿಂದ ಬರಬೇಕೆಂದುಭೇರಿನಾದವ ಮಾಡಿದ ಕೃಷ್ಣಬಾರೆ ಬಾರೆ ಭಾಗ್ಯನಿಧಿಯೆ1 ಬೊಮ್ಮಮೊದಲಾದ ಸುರರುತಮ್ಮ ತಮ್ಮ ಸತಿಯರಿಂದ ಝಮ್ಮನೆ ಮುಯ್ಯಕ್ಕೆ ಬರಬೇಕೆಂದುರಮ್ಯಕಾಳಿ ಹಿಡಿಸಿದ ಕೃಷ್ಣ2 ಇಂದ್ರ ಮೊದಲಾದ ಸುರರುಚಂದ್ರ ಸೂರ್ಯರೊಡಗೂಡಿತಂದೆ ರಾಮೇಶನರಮನೆಗೆಒಂದು ಕ್ಷಣದಿ ಬರಬೇಕೆಂದು3
--------------
ಗಲಗಲಿಅವ್ವನವರು
ಡೌಲಿನ ಡೌಲ್ಯಾಕೆ ಮಾಡ್ತೀ ಕಾಲತೀರದ ಮೇಲೇನೆಂದು ಹೇಳ್ತೀ ಪ ಹೊಯ್ಮಾಲಿತನದ್ಹೊಲೆಕೆಲಸ ಮಾಡಿಕೂತಿ ಸೈಮಾಡಿ ಬರಕೊಟ್ಟದೆಲ್ಲ ಮರೆತಿ ಅ.ಪ ಕಾಯವೆಂಬ ಹೊಲ ಕೌಲಿಗೆ ಹಿಡಿದಿ ಮಾಯ ಮರವೆಯೆಂಬ ಮುಳ್ಳು ಬೆಳೆಸಿದಿ ಹೇಯವಿಷಯವೆಂಬ ಸೆದೆಯ ಕೆಡವಿದಿ ಸಾವು ಹುಟ್ಟುಯೆಂಬ ಕೊರಡಗಿದ್ಹೋದಿ ಕಾವಲಾದೆಲೆ ಮೂಳಿ ನಿನ್ನ ಎಡಬಲದಿ ವಾಯಿದೆ ಸಮೀಪಬಂತು ಮುಂದೇನು ಹಾದಿ 1 ಕ್ರೋಧ ಎಂದೆಂಬ ಅಲಬು ಕಿತ್ತದೆ ಭೇದ ಎಂದೆಂಬುವ ಜೇಕು ತೋಡದೆ ವಾದವೆಂಬ ಬೋರೆ ಜಡ್ಡು ಕಡಿಯದೆ ಖೇದಯೆಂದೆಂಬ ಕರಿಕೆದಡ್ಡ ನಳಿಯದೆ ಶೋಧವಿನಿತಿಲ್ಲದೆ ಮುಸುಕಿಟ್ಟು ಮಲಗಿದಿ ಕಾದುವ ಒಡೆಯನಿಗೀಡೇನು ಮಾಡ್ದೀ 2 ಚಿತ್ತಶುದ್ಧಿಯೆಂಬ ಬದುವು ಕೆಡಿಸಿದಿ ನಿತ್ಯ ನಿರ್ಮಲತೆಯೆಂಬ ಬಾಂದು ಒಡೆಸಿದಿ ಸತ್ಯ ಸನ್ಮಾರ್ಗೆಂಬ ಸೀಮೆಯ ಮುರಿದಿ ತತ್ವ ವಿಚಾರವೆಂಬ ಒಡ್ಡ್ಹರೆಗಡಿದೀದಿ ಕರ್ತು ಶ್ರೀರಾಮನ ಅರ್ತು ಭಜಿಸಿದೆ ಯಮಗ್ವ್ಯೆರ್ಥ ತುತ್ತಾದಿ3
--------------
ರಾಮದಾಸರು
ತಂಗಿ ಕೇಳೆ ಅತಿಕೌತುಕ ಒಂದು ಸುದ್ಧಿಯ ಸಿಂಗನ ಮೋರೆ ಮಗುವು ಪುಟ್ಟಿ ಮಾಡಿದಾ ಚರ್ಯ ಪ. ತಂದೆ ತಾಯಿಗಳಿಲ್ಲಾದ್ಹಾಂಗೆ ಕಂದ ಪುಟ್ಟಿತು ಬಂಧು ಎತ್ತು ಕೊಂಬೇನೆಂದರೆ ಗುಡು ಗುಡುಗುಟ್ಟಿತೂ ಅಂದ ಛಂದವ ನೋಡೇನೆಂದರೆ ಘೊರಾಕೃತಿಯಾಯ್ತು ತಂದ ತೊಟ್ಟಿಲೊಳಿಟ್ಟೀನೆಂದರೆ ಹೊಸಲೊಳ್ ಕೂತೀತು 1 ತೊಡೆಯಲ್ಲಿಟ್ಟು ತಟ್ಟೀನೆಂದರೆ ಕಿಡಿ ಕಿಡಿ ಉಗುಳೀತು ಕಡುಪಾಪಿ ರಕ್ಕಸನ ತನ್ನ ತೊಡೆಯಲ್ಲಿಟ್ಟಿತೂ ಕಡು ಕೋಪದಿಂದಾಲಿ ಅವನ ಒಡಲ ಬಗೆದಿತು. ಎಡಬಲಕೊಬ್ಬರು ಬರದಂತೆ ಆರ್ಭಟಿಸುತಲಿದ್ದಿತು 2 ರುಧಿರ ಪಾನವ ಮಾಡಿತು ಮಾಲೆ ಹಾಕಿ ಮುದ್ದಿಪನೆನೆ ಕರುಳ್ಮಾಲೆ ಹಾಕೀತು ಮೇಲೆ ಕೇಶ ಕಟ್ಟೀನೆಂದರೆ ಕೆದರಿಕೊಂಡೀತೂ ಬಾಲಲೀಲೆ ನೋಡೇನೆಂದರೆ ಜಗವ ಬೆದರಿಸಿತು 3 ಸಿರಿಕಂಡೂ ಬೆರಗಾಗೆ ಮನವು ಕರಗದೆ ಕಲ್ಲಾಯ್ತು ತರಳನೊಬ್ಬನ ಕೂಡೆ ತಾನೂ ಆಟವನಾಡಿತು ಉರಿಮುಖ ಹುಬ್ಬೂ ಗಂಟೂ ಬಿಟ್ಟು ಕಿರುನಗೆ ನಕ್ಕೀತು 4 ಶ್ರೀಪತಿ ಎಂದು ತರಳನು ಪೊಗಳೇ ಸಿರಿಯ ಬೆರತೀತು ಆಪತ್ತನು ಪರಿಹರಿಪ ಲಕ್ಷ್ಮೀನರಹರಿ ಎನಿಸೀತು ದ್ವಾಪರದಲ್ಲಿ ಮತ್ತೆ ಪುಟ್ಟಿ ಮುದುವ ಬೇಡೀತು ಗೋಪಾಲಕೃಷ್ಣವಿಠ್ಠಲನೆನಿಸಿ ಗೋಪಿಯ ಮಗುವಾಯ್ತು 5
--------------
ಅಂಬಾಬಾಯಿ
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು