ಒಟ್ಟು 560 ಕಡೆಗಳಲ್ಲಿ , 76 ದಾಸರು , 482 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನಮೋಹಮಂದಿರಾ ಶ್ರೀವರ ಘನಮಣಿ ತಾ ಹಾರಾ ಪ ಮಾಂಗಿರಿಧಾಮಾ ಮಂಗಳನಾಮಾ ಶರಣಾಗತ ಪ್ರೇಮಾ ಅ.ಪ ದಿವಿಜನಿಕರ ಪರಿವಾರಾ ದಯಾಪೂರಾ ಭುವನೇಶ್ವರ ಶೂರಾ ಆನಂದಲೀಲಾ ಆಗಮಮೂಲಾ ತುಳಸೀದಳ ವನಮಾಲಾ 1 ಭಾಗವತಪ್ರಿಯ ಸಾಗರತನಯಾ ಮನರಂಜನ ಸದಯಾ ಮುರಳೀಧೃತಕರ ಕುಂಜವಿಹಾರಾ ರಾಧಾಮನ ಮಣಿಹಾರಾ 2 ನಂದನ ಕಂದಾ ಜಗದಾನಂದ ಬೃಂದಾವನಾನಂದ ಗೋಪಿಕಾ ಜಾಲ | ಪ್ರೇಮಿತ ಬಾಲಾ ಬೃಂದಾವನ ಲೋಲಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆವಾರೇನೋ ನಿನ್ನ ನೀನು ಗುರುತಾ ನೆಲೆ ಮಾಡದೆ | ಸಿರಿಯರಸನಸಿರಿ ಚರಣವ ಸ್ಮರಿಸದೇ | ನರದೇಹ ಬರಡವ ಮಾಡುವರೆ ಜಾಣಾ ಪ ಹಲವು ಪುಣ್ಯದಿಂದಲ್ಲದೇ ಸುಲಭದಲ್ಲಿ ಜನ್ಮವು | ಇಳೆಯೊಳಗುದಯಿಸಿ ತಿಳಿಯದೆ ಸ್ವಹಿತದ | ಬಳಿಕೆಯ ನೆರೆಭವ ಬಲಿಯೊಳು ಸಿಲುಕಿ | ತೊಳಲುತ ನಿಶಿದಿನ ಬಳಲುವೆ ಜಾಣಾ 1 ಅವಗತಿಯೋ ಎನಗೆ ಮುಂದಾ | ಆವ ಜನಮ ವಿಹುದೋ | ವಿವೇಕದಿಂದ ವಿಚಾರಿಸಿ ಮನದೊಳು | ಭಾವಿಸಿ ಗುರುವಿನ ಪಾವನ ಪಾದಾ | ಭಾವಭಕುತಿಯಲಿ ಸಾವಧನನಾಗದೆ | ಹ್ಯಾವಹೆಮ್ಮೆಲೆ ದಿನಗಳೆದೇ ಜಾಣಾ 2 ಬದಿಯಲ್ಲಿದ್ದಾ ವಸ್ತುವನು | ಸದಗಾನಾದ್ಯೋ ಕಾಣದೆ | ಸಾಧುರ ಕೈಯಲಿ ಹಾದಿಯ ಕೇಳೆಲೋ | ಸಾದರದಲಿ ನಿಜ ಸಾಧನ ಬಲಿದು | ಭೇದಿಸು ಮಹಿಪತಿನಂದನ ಸಾರಿದಾ | ಗಾದಿಯನ್ನದೆ ಗತಿ ಸಾಧಿಸೋ ಜಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಹಾಬಲಿಪುರ ಮಹಾಬಲೇಶ್ವರ ಮಾವಳಿಪುರ ಮಿಹಿರಾ ಸುರುಚಿರ ಪರಾತ್ಪರಾ ಪ ಮಹೀಸುರಾರ್ಚಿತ ಸದಾಕೃಪಾಕರ ವಿಹಂಗವಾಹನ ಪೀತಾಂಬರ ಅ.ಪ ಮಧುಸೂದನ ತವಪಾದುಕಾ ಸಾರದ ಮಾಧವಿ ಸುಮದಲಿ ಪೂದತ್ತರುದಿಸಿ ಮೇದಿನಿಯೊಳು ತವಾರಾಧನ ತತ್ವವ ಬೋಧಿಸುವಂತೆ ನೀಗೈದೆ ಕೃಪಾನಿಧೆ 1 ಶ್ರೀಮದನಂತ ದಿವ್ಯಾಸನಮಂಡಿತ ಶ್ರೀಮಹೀಸಂಯುತ ಲೋಕವಿಖ್ಯಾತಾ ಪ್ರೇಮಸುಧಾನ್ವಿತ ಕಾಮಿತದಾತಾ ಶ್ರೀ ಮಾಂಗಿರಿಪತಿ ಶರಣಸಂಪ್ರೀತಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಂ ಪಾಲಯಾಶು ಗಂಗಾಧರ ಚಂದ್ರಶೇಖರ ಗೌರೀವರ ಪ ನೀಲಾಂಬರ ಕೇಶಪಾಶಹರ ಶಿವಶಂಕರ ಕರುಣಾಕರ ಅ.ಪ ಚರ್ಮಾಂಬರ ಪರಮೇಶ್ವರಾ ದಾನವೇಶ್ವರಕುಲಕುಠಾರ ಧೀರ ದಿವಿಜೋಪಕಾರ ಶರಚಾಪಧರ ಮನಸಿಜಸಂಹಾರ ಮಾಂಗಿರೀ ವಿಹಾರಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಧವ ಕೇಶವಾ ಪ ವರದ ವೆಂಕಟೇಶ್ವರ ಚಿತ್ಸ ್ವಭಾವ ಅ.ಪ ಶರಣಾರ್ತಿ ಭಂಜನಸುಪ್ರಭಾವ 1 ಪದುಮಾವತೀ ಹೃದಯಾಬ್ಜಮಿತ್ರ ಸದಸದ್ವಿಹಾರ ಸನ್ಮಾನಿಸ್ತೋತ್ರ2 ಧರಣಿಯೊಳ್ ಕಲ್ಯಾಣ ತಿರುಪತಿನಿಲಯ3
--------------
ಗುರುರಾಮವಿಠಲ
ಮಾಮನೋಹರಾ ಮುರಾರಿ ಬಾರೋ ಪ ಕರಿವರದಾಯಕ ಮರಚಮುಸ್ಥಾಪನ | ಶರಣಾಗತ ಸಹಕಾರಿ ಬಾರೋ | ಸರಸಿಜಾಸನ ವಂದಿತಾಂಘ್ರಿ | ದುರಿ | ತಾಚಲ ವಜ್ರಧಾರಿ ಬಾರೋ 1 ಮನೋಜನಿತ ಜನಕರವಿಂದ ಲೋಚನ | ಮುನಿಜನ ಹೃದಯ ವಿಹಾರಿ ಬಾರೊ| ಘನಮಹಿಮ ಸುದಾಮ ರಕ್ಷಕಕ | ದನುಜಾವಳಿ ಮದಹಾರಿ ಬಾರೋ 2 ಕಾಲ ಪಯೋಧರ | ಮಂದರೋದ್ಧಾರಿ ಬಾರೋ | ನಂದನಾತ್ಮಜ ದೇವ ಮಹಿಪತಿ | ನಂದನ ಪ್ರಭು ಉದಾರಿ ಬಾರೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮೀನಾಕ್ಷಿದೇವಿ ಮಾಮಮ ಮಧುರ ಪ ಸದಾ ನಿನ್ನ ಆನತರಿಗೆ ಡಿಂಗರಿಗನು ನಾನಮ್ಮ ಅ.ಪ ಬಹು ಜನ್ಮದಿಂದ ಮಾಡಿದ ಪುಣ್ಯ ವಿಹಿತ ಫಲದಿಂದ ತವಪದ ಪಂಕೇ ರುಹವ ಕಂಡೆನು ಇಂದಿಗಹಹ ಧನ್ಯನು ನಾನು 1 ಕಲುಷವಿರಹಿತೆ ಕರಪಿಡಿದೀ ಜಲಜಾಕ್ಷನಡಿದಾವರೆಗಳ ತೋರಮ್ಮ 2 ದಾಸರ ದಾಸ್ಯವನು ಕರುಣಿಸಿ ಲೇಸುಪಾಲಿಸೆ ಸುಂದರೇಶನರ್ಧಾಂಗಿಯೆ 3 ಹಿರಿಯರಿಗೆಲ್ಲಾ ವರಗಳ ಕೊಟ್ಟು ಪೊರೆದುದನೆಲ್ಲ ಕೇಳಿ ನಿನ್ನ ಚರಣವ ನಂಬಿದೆ ಸ್ಥಿರ ಮನವನು ಕೊಡೆ 4 ತಾಮಸನರನು ಬಾಲಕನೆಂದು ಪ್ರೇಮದಿ ನೋಡೆ ಗುರುರಾಮ ವಿಠಲನ ತಂಗಿ5
--------------
ಗುರುರಾಮವಿಠಲ
ಮೀರಲುಬಹುದೆ ದೈವ ಸಂಕಲ್ಪವ ಪ ಮಾರಮಣನ ಘನ ಮನಕೆ ಬಂದುದನು ನಿ ವಾರಿಸಿ ನಡೆಯಲಾ ಆರಿಗೆ ಸಾಧ್ಯವು ಅ.ಪ. ಪುತ್ರರÀ ಬಯಸಲು ಮತ್ತೆ ವಂದ್ಯಳು ಸತಿ ವಿತ್ತ ಬಯಸೆ ಶುಕ್ಲ ವೃತ್ತಿಯೆ ಗತಿಯು 1 ಆಲಯದೊಳು ಜನನ ಆಗಬೇಕೆಂದರೆ ಕಾಲನಾಮಕನಿಚ್ಛೆ ಅನ್ಯತ್ರವಿಹುದು 2 ಜನನ ಮರಣಗಳು ಜಗದೀಶನಾಧೀನ ವನಜನಯನ ಶ್ರೀ ಕರಿಗಿರೀಶನ ಚಿತ್ತ 3
--------------
ವರಾವಾಣಿರಾಮರಾಯದಾಸರು
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು
ಮುರಳೀ ವಿಹಾರಿ ವಿಠಲ | ಪೊರೆಯ ಬೇಕಿವಳಾ ಪ ಕರುಣಿ ಕಂಜಾಕ್ಷ ಹರಿ | ಮೊರೆ ಇಡುವೆ ನಿನಗೇ ಅ.ಪ. ಸ್ವಾಪದಲಿ ಗುರುದರ್ಶ | ಸುಫಲ ಮಂತ್ರಾಕ್ಷತೆಯನೀ ಪಾಲಿಸಿಹೆ ದೇವ | ಹೇ ಪರಮಾತ್ಮನೇಆ ಪಯೋಜ ಭವನುತ | ಗೋಪಾಲ ಕೃಷ್ಣನೇಈ ಪರಿಯ ಕಾರುಣ್ಯ | ನಾ ಪೊಗಳಲಳವೇ 1 ಕನ್ಯೆ ಬಹು ಭಕ್ತಿಯುತೆ | ಮಾನ್ಯ ಮಾಡುತ ಅವಳಸನ್ಮನೋಭೀಷ್ಟಗಳ | ವಕ್ಷಿಸೋ ಹರಿಯೇಅನ್ಯಳಲ್ಲವೊ ಅವಳು | ನಿನ್ನ ದಾಸಿಯೆ ಇಹಳುಮಾನ್ಯ ಮಾನದ ಹರಿಯೆ | ಚೆನ್ನಾಗಿ ಸಲಹೋ 2 ಸಿರಿ ವತ್ಸ ಲಾಂಛನ 3 ಕರ್ಮ ನಾಮಕನೇಭರ್ಮಗರ್ಭನ ಪಿತನೆ | ನಂಬಿ ಬಂದಿಹಳೀಕೆಹಮ್ರ್ಸದಲಿ ನಿನಕಾಂಬ | ಸಾಧನವ ಗೈಸೋ 4 ಪಾವಮಾನಿಯ ಪ್ರೀಯ | ಕೋವಿದೋತ್ತಂಸ ಹರಿನೀ ವೊಲಿಯದಿನ್ನಿಲ್ಲ | ಭಾವ ಜಾನಯ್ಯಾದೇವ ದೇವೇಶ ಗುರು | ಗೋವಿಂದ ವಿಠ್ಠಲನೆಗೋವತ್ಸದನಿಗಾವು | ಧಾವಿಸಿ ಪೊರೆವಂತೆ 5
--------------
ಗುರುಗೋವಿಂದವಿಠಲರು
ಮೆರೆದೆ ಮಹಿಮೆ ಉದಾರ ನಮ್ಮಗುರು ಭೀಮಸೇನ ಸುಧೀರ ಪ. ಮಂಗಳ ಮಹಿಮ ವಿಹಾರ ಮಾಯವಾದಿಗಳಿಗತಿ ಕ್ರೂರ ಅ.ಪ. ಹರಿಯ[ನಿರೂಪ] ವ ಧರಿಸಿ ಮರುತ ಕುಂತಿಯೊಳವತರಿಸಿಹರನೊಳು ವಾದಿಸಿ ಜೈಸಿ ಹರಿಸರ್ವೋತ್ತಮನೆಂದೆನಿಸಿ 1 ಬಕ ಹಿಡಿಂಬಕ ಕೀಚಕ ಜರಾಸುತರ ಮಣಿಮಂತ ಕೀಚಕ ದುರ್ಜನರಸಕಲ ಕೌರವ ಅತಿರಥರ ಕೊಂದು ಸುಖಪಡಿಸಿದೆ ಸಹೋದರರ 2 ಜ್ಞಾನಭಕುತಿಸಂಪನ್ನ ಅಜ್ಞಾನಾರಣ್ಯಛೇದನ ಮುದ್ದುಜ್ಞಾನೇಂದ್ರ ಹಯವದನನ್ನ ಧ್ಯಾನದೊಳಿರಿಸು ಪ್ರಸನ್ನ 3
--------------
ವಾದಿರಾಜ