ಒಟ್ಟು 4871 ಕಡೆಗಳಲ್ಲಿ , 122 ದಾಸರು , 3096 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಇಂದು ಮುಂದಿಲ್ಲ ಪ ಶ್ರೀ ಮುಕುಂದಗೆ ಸಮರೆನಿಸುವರು ಲೋಕದೊಳು ಅ.ಪ. ವನಧಿ ಮಥನದಲ್ಲಿ ಅನಿಮಿಷರನ ಬಿಟ್ಟು ಜನನಿ ಲಕುಮಿ ನಾರಾಯಣನೊಲಿಸಿದಳಾ 1 ಪ್ರಪಿತಾಮಹನು ಲೋಕಾಧಿಪ ಬ್ರಹ್ಮಗೆ ತಪ ತಪವೆಂದು ಪೇಳಿದಗುಪಮೆ ಎನಿಸುವವರು 2 ಕೊಂದು ಶಿವನ ಕಾಯ್ದ ಇಂದಿರಾಪತಿಗೆಣೆ 3 ಮಂದರಾದ್ರಿಯನೆತ್ತಿ ಸಿಂಧುಮಥನ ಮಾಡಿ ವೃಂದಾರಕರಿಗೆ ಆನಂದವಿತ್ತು ಪರಿ4 ಭೃಗು ಮುನಿಪನು ಬ್ರಹ್ಮಾದಿಗಳ ಪರೀಕ್ಷಿಸಿ ಜಗನ್ನಾಥವಿಠಲ ತ್ರಿಗುಣವರ್ಜಿತನೆಂದು 5
--------------
ಜಗನ್ನಾಥದಾಸರು
ಇಂದು ಇಂದು ಇಲ್ಲಿ ಚಂದ್ರವದನೆ ಇಂದಿರಾದೇ'ಗಂಡುಗಲಿಯ ವೇಶತಾಳಿ ಗೆಂಡಾಸುರನ ಕೊಂದು ನಗುತಅ.ಪಜಗದೀಶನ ಮಡದಿಯಂತೆ ಮಗಗೆ ನಾಲ್ಕು ಮುಖಗಳಂತೆಮಗನ ಮಗ ಬೈರಾಗಿಯಂತೆ ಅಗಜೆ ಅವಗೆ ಒಲಿದಳಂತೆ 1ಹರಿಯ ಹೃದಯದಲ್ಲಿ ಸದಾ ಅಗಲದೆ ತಾ ಇರುಳಂತೆಆದಿಮಾಯಾ ಶಕ್ತಿಯಾಗಿ ಜಗದ ವ್ಯಾಪಾರ ಮಾಡುವಳಂತೆ 2ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರಸೇವೆಸಾಟಿಇಲ್ಲದೆ ಮೂಡಿ ಪೂರ್ಣ ನೋಟದಿಂದ ಸುಖಿಪಳಂತೆ 3ಛಕ್ರಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿನಿಂತುಚಿತ್ತಚರಿತನಾದ ಹರಿಯ ನಿತ್ಯ ಸೇವೆ ಮಾಡುವಳಂತೆ4ಗಂಡ ಹೆಂಡಿರ ಜಗಳವಂತೆ ಕೊಲ್ಹಾಪುರದಿ ಇರುವಳಂತೆಗಂಡ ವೈಕುಂಠ ಮಂದಿರಬಿಟ್ಟು ವೆಂಕಟಗಿರಿಯಲಿ ಇರುವನಂತೆ5'ೀರಪುರುಷ ವೇಷವಂತೆ ಕ್ರೂರ ದೈತ್ಯನ ಸೀಳಿದಳಂತೆಯಾರಿಗು ಗೊತ್ತಾಗದಂತೆ ರಾತ್ರಿ ಊರೊಳಗೆ ಬರುವಳಂತೆ 6ಭಾರತಹುಣ್ಣಿಮೆ ಜಾತ್ರಿಯಂತೆ ಭಾರಿಜನರು ಕೂಡುವರಂತೆಭಾರಿ ಡೊಳ್ಳು ಹೊಡಿವರಂತೆ ಭೂಪತಿ'ಠ್ಠಲ ನಗುವನಂತೆ 7ಹನುಮಂತದೇವರು
--------------
ಭೂಪತಿ ವಿಠಲರು
ಇದು ಕಲಿಗಾಲದ ಮಹಿಮೆಯ ಗುಟ್ಟು ಮುದಿತನ ಬಂದರೆ ಮಾಯದ ಪೆಟ್ಟು ಪ ವಿಧವೆಯಾದರೆ ತಲೆಯ ಮೇಲ್ಮೊಟ್ಟು ವಿಧುರನಾಗೆ ದುರ್ನೀತಿಯ ಕಟ್ಟು ಅ.ಪ ಕುರುಡನಾದರೆ ಅಣಕದ ಬಾಳು ಅರೆಕಿವುಡಗೆ ಬೈಗುಳ ಕೂಳು ನರಳಿದರೆ ಸಾಯಲಿಲ್ಲವೆಂಬ ಗೀಳು ಕೊರಗಿ ಕಣ್ಣೀರನು ಸುರಿಸುವ ಗೋಳು 1 ಇತ್ತಬಾರದಿರು ಎಂಬರು ಕೆಲರು ಅತ್ತಲೆ ಹೋಗು ಹೋಗೆಂಬರು ಕೆಲರು ಎತ್ತಹೋದರೂ ಬಂದುದೇಕೆಂಬರು ತುತ್ತೊಂದಾದರೂ ಸಿಗದೆಂಬುವರು 2 ಹದ್ದುಹದ್ದೆಂಬುವ ಬಿರುನುಡಿಯಿಂದ ಒದ್ದೋಡಿಸುವಳು ಸೊಸೆ ಮನೆಯಿಂದ ಕದ್ದೋಡುವನು ಮಗ ಭಯದಿಂದ ಮದ್ದುಕೊಡಯ್ಯ ಮಾಂಗಿರಿಯ ಗೋವಿಂದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇದು ಥರವೇ ಥರವೇ ದೇವಾ ಥರವೇ ನಿನ್ನವರ ವಂಚಿಸಿ ನೀ ಮರೆಯಲ್ಲಿ ಇರುವುದು ಥರವೆ ಪ. ಪರಿಪರಿಯಲಿ ಸ್ತುತಿಗೈಯುತಲಿ ನಿನ್ನ ಪರಮ ಮಂಗಳ ಪಾದಗಾಣದೆ ಮರುಗುತಿರುವಾ ವರ ಭಕುತರಿಗೆ ಕರುಣದೋರದೆ ಇರುವೆ ವೆಂಕಟ ಅ.ಪ. ಅಜಭವಾದಿಗಳು ಸ್ತುತಿಸಿ ಪೂಜಿಸಿದ ಪಾದ ತ್ರಿಜಗವಂದಿತ ಕೃಷ್ಣ ನಿನ್ನಪಾದ ಭಜನೆಯನು ಮಾಡುತ ನಿನ್ನ ತ್ಯಜಿಸದನುದಿನ ಸುಜನರೆಲ್ಲರು ಸ್ತುತಿಸಿ ಪಾಡುತಿರೇ ತ್ರಿಜಗ ಪೂಜಿತನಾಗಿ ಭಕುತರ ಭಜನೆ ನಿನಗರಿವಿಲ್ಲೇ ದೇವನೆ ಸ್ವಜನರನು ಪಾಲಿಸುವ ಬಿರುದನು ತ್ಯಜಿಸುವರೆ ಸಿರಿಯರಸ ವೆಂಕಟ 1 ಮಚ್ಛಕೂರ್ಮವರಾಹನಾಗಿ ದೈತ್ಯರ ಸ್ವಚ್ಛಭಕುತರ ಸಲಹೆ ಸಂಹರಿಸಿ ಅಚ್ಛಪ್ರಲ್ಹಾದನಿಗೊಲಿದ ನರಹರಿಯಾಗಿ ಅಚ್ಛವಾಮನನಾಗಿ ಬಲಿಯತಲೆಯತುಳಿದು ಸ್ವಚ್ಛಗಂಗೆಯ ಇಂಬಿಡದೇ ದುಷ್ಟ ರಾಜರನಳಿದ ಭಾರ್ಗವ ದುಷ್ಟ ತಾಟಕಿ ಸಂಹರಿಸಿದನೆ ಕೃಷ್ಣರೂಪದಿ ಗೋಪೆರಿಗ್ವಲಿದನೆ ಉತ್ಕøಷ್ಟ ಬೌದ್ಧ ಕಲ್ಕಿ ವೆಂಕಟ 2 ಪರಮಪುರುಷ ಬಾ ವರದ ಮೂರುತಿ ಬಾ ಪರಿಪರಿ ಸ್ತುತಿಸಿ ವಂದಿಪೆ ಸಿರಿವರದ ಬಾ ಶರಧಿಶಯನ ನಿನ್ನ ಚರಣ ಸ್ಮರಣೆಯೀಯೆ ಶರಣಾಗತ ರಕ್ಷಾಮಣಿ ಬೇಗ ಬಾ ಸಿರಿಗೆ ಪೇಳದೆ ಬಂದು ಕರಿಯ ಪೊರೆದ ದೊರೆ ಶ್ರೀ ಶ್ರೀನಿವಾಸ ಬಾ ಗರುಡ ಗಮನನೆ ಶರಣಜನರನು ಮರೆಯದಲಿ ನೀ ಕರುಣ ವೆಂಕಟ 3
--------------
ಸರಸ್ವತಿ ಬಾಯಿ
ಇಂದು ನೀ ಕರೆದು ತಾರೆ ಬೇಗನೆ ಪೋಗಿ ಚನ್ನವೆಂಕಟರಾಯನ ಮೊನ್ನೆ ಆಡಿದ ಮಾತು ಒಂದೂ ನಿಜವಲ್ಲಾ ರನ್ನೆ ಈಗಲೆಪೋಗಿ ssssssಸನ್ನೆ ಮಾಡಿಬಾರೆ ಪ. ಅಂಗಜನಯ್ಯನ ಕಾಣದೆ ನಾನು ಹಿಂಗಿರಲಾರೆ ನಮ್ಮಾ ಕಂಬುಕುಚದ ಬಾಲೆ ರಂಗನಾ ಕರತಾರೆ ರಂಗು ಮಾಣಿಕದಹರಳುಂಗುರ ಕೊಡುವೆನು 1 ಕಾಲಿಗೆ ಎರಗುವೆನೆ ಕೋಮಲಮುಖಿ ಆಲಸ್ಯ ಮಾಡದೆಲೆ ನೀಲಕುಂತಳನೀರೆ | ಲೋಲನ ಕರತಾರೆ ವಾಲೆಮೂಗುತಿ ಕಂಠಮಾಲೆಯ ಕೊಡುವೆನು 2 ಮರದಿರಲಾರೆನಮ್ಮಾ ಬೇಗನೆಪೋಗಿ ನೆರವಂತೆ ಮಾಡು ನೀನು ಯರವುತನವುಬ್ಯಾಡಾಮರೆಯಲಾರೆನೆ ನಿಮ್ಮಕರವಪಿಡಿವೆ ಹೆಳವನ ಕಟ್ಟೆರಂಗೈಯ್ಯನ3
--------------
ಹೆಳವನಕಟ್ಟೆ ಗಿರಿಯಮ್ಮ
ಇಂದು ನೋಡಿದೆ ಗೋವಿಂದನಾ ಸರ್ವ ಸುಂದರಸಾರ ವೆಂಕಟ ರಮಣನಾ ಪ ಭಾಗೀರಥಿಯ ಪೆತ್ತವನಾ ಭವ ರೋಗವ ಕಳೆವ ರಾಜೀವನೇತ್ರನಾ ಸಾಗರದೊಳಗೆ ಒಪ್ಪುವನಾ ಭಕ್ತ ಕೂಗಲು ನಿಲ್ಲದೆ ಒದಗಿ ಬರುವನಾ1 ನಿಲ್ಲದೆಳಿಪಿಗೆ ಪೊಳೆದನಾ ಗೋ ಪಾಲಕರಿಗೆ ವೈಕುಂಠ ತೋರಿದನಾ ನೀಲಾದೇವಿಗೆ ಬಲಿದವನಾ ಭೂ ಪಾಲಗೆ ಮೆಚ್ಚಿ ಸತ್ವರವನಿತ್ತವನಾ2 ವಿಶ್ವ ಮಂಗಳದಾಯಕನಾ ಅಹಿ ವಿಷ್ಟಕಸೇನರಿಂದ ಪೂಜೆಗೊಂಬುವನಾ ವಿಶ್ವರೂಪ ವಿಲಕ್ಷಣನಾ ಸರ್ವ ವಿಶ್ವ ಪರಿಪಾಲ ಪ್ರಣತಾರ್ತಿ ಹÀರನ3 ಸುರ ಶಿರೋಮಣಿ ಸದ್ಗುಣನಾ ಸು ದರಶನ ಶಂಖ ಭಜಕರಿಗೆ ಕೊಟ್ಟವನಾ ನಿರುತ ಆನಂದ ಭರಿತನಾ ದಿವ್ಯ ಮಿರುಗುವಾಭರಣದಿಂದಲಿ ನಿಂದಿಹನಾ 4 ಶಾಮವರ್ಣ ಚತುರ್ಭುಜನಾ ನಿಜ ಕಾಮಿನಿ ಸಂಗಡ ನಲಿದಾಡುವನಾ ಹೇಮ ಗಿರಿಯಲಿದ್ದವನಾ ದೇವ ಸ್ವಾಮಿ ತೀರ್ಥವಾಸ ವಿಜಯವಿಠ್ಠಲನಾ5
--------------
ವಿಜಯದಾಸ
ಇದು ಪರಬ್ರಹ್ಮದ ನೆಲೆಯು ಇಹಪರವೆಂಡನು ಗೆಲು ವದು ಗುರು ಕರುಣಾನಂದದ ಬೆಳಗಹುದÀಹುದು ಧ್ರುವ ಮಾತಿಗೆ ದೊರೆಯದಿದು ಅನುದಿನ ಭೇದಿಸದಲ್ಲದೆ ಕಾಣಿಸದು ಮುನ್ನಬಾರನು ಕಾಣಿಕಿಗೆಂದು ಅಳವಹುದೆ 1 ಸದ್ಗತಿಮೋಕ್ಷವು ಮಾರಗವು ಸಾಭ್ಯಸ್ತವಾಗದೆ ಸಾಕ್ಷಾತ್ಕಾರದಿ ಪ್ರತ್ಯಕ್ಷ ಪ್ರಮಾಣವಿವು ಇದು ಎಂದಿಗೆ ತಿಳಿಯದು ಭೇದಕನಲ್ಲದೆ ಸೋಹ್ಯ ಸೊನ್ನೆಯ ಮತಿಹೀನರಿಗಿದು ಅಳವಹುದೆ 2 ಲೋಲ್ಯಾಡುವ ನಿಜ ಮಂದಿರವು ಭೂಮಂಡಲದೊಡೆಯನ ಚರಣಕಮಲವಿದು ಒಡಿಯನ ಕೃಪಾದೃಷ್ಟಿಯಿದು ಕರವ ಮನದೊಳು ತ್ರಾಹಿ ತ್ರಾಹಿ ಎನುತಲಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಪರಮಾನಂದ|ನಮಗ ಮುಕುಂದನ ಕೃಪೆಯಿಂದಾ| ಕಮಲ ಮಕ| ಭ್ರಮರ ಸಂಗ ಛಂದದಲಾಯಿತು 1 ವೇಗದಿಂದಲಿ ನೋಡೀ|ಸಕಲರು|ಭಾಗವತರು ಕೂಡಿ| ಭಾಗಿರಥೀ ಪಡೆದ ನಾಗಶಾಯಿಯ| ನಿಗ ಮಾಗ ಮಯುಕ್ತದಿ|ಈಗ ಪಾಡಿದೆವೆಂದು 2 ಸಂದಿದ ದೋಷಾದಿಗಳು ಚೂಕಿ| ಕುಂದಿ ತೊಲಗಿದವು ತಂದೆ ಮಹಿಪತಿ| ನಂದನ ಪ್ರಿಯನಾನಂದ ಕರುಣದೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದು ಮುಖ್ಯಸಾರ ಮನುಜರಿಗೆ ಪ ಇದು ಮುಖ್ಯಸಾರವೆಂದೊದರುತಿಹುದು ವೇದ ಸದುಮಲಾತ್ಮಕನಾದ ಪದುಮಾಕ್ಷನಲಿ ಭಕ್ತಿ ಅ.ಪ ಕೇಳಿಪೇಳುತಮನದಿ ತಾಳಿ ಸೇವಿಸಿ ಪೂಜಿ- ಸೋಲಾಡುತೊಂದಿಸಿ ಕಾಲವ ಕಳೆಯುವ 1 ದಾಸ್ಯಸಖ್ಯಾತ್ಮನಿವೇದನಗಳಿಂದ ಆ- ಲಸ್ಯವಿಲ್ಲದೆ ಪರಮಾತ್ಮನ ತಿಳಿಯುವ 2 ತೃಟಿಕಾಲವಾದರು ನಟಿಸದೆ ಮಾಯದಿಹಟದಿ ಶ್ರೀಗುರುರಾಮವಿಠಲನ ಭಜಿಸುವ 3
--------------
ಗುರುರಾಮವಿಠಲ
ಇದು ರಕ್ಷಿಸುವಂಥ ಕಾಲ ಚಿಕ್ಕ ಮುದನೂರ ಗೋಪಾಲ ಮುನಿಜನಲೋಲ ಪ ನಿತ್ಯಾನಂದ ಭಕ್ತಮಂದಾರ ಮೊರೆಹೊಕ್ಕೆ ಸಲಹೆನ್ನ ಮುದದಿಂದ ನೀ ಕರುಣಾತೋರಿ ತ್ವರ ಕಾಯೋ ಗೋವಿಂದ 1 ಸರ್ವೋತ್ತಮ ವೆಂಕಟರಮಣ | ಭವ ನಿಃಶ್ಯಂಕ ನಿರಾಮಯ 2 ವಿಠಲ ಹರ್ಷದಿ ಬಂದು ಶರಣೆಂಬೆ ದೀನ ದಯಾಪರ ಮುರಹರ ಮುರಲೀಧರ ಅಗಣಿತಾವತಾರ 3
--------------
ಹೆನ್ನೆರಂಗದಾಸರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ಪ ಮುಂದಕೆ ನಿಮ್ಮ ಮನೆಗೆ ಬಾರನಮ್ಮಅ ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನುಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ ಮಕ್ಕಳಂತೆ 1 ಹಸುಮಗುವನು ಕಂಡು ಮುದ್ದಿಸಲೊಲ್ಲದೆಹುಸಿಗ ಕಳ್ಳನೆಂದು ಕಟ್ಟುವಿರಿವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮಹಸು ಮಗುವಿನಂತೆ ಭಾವಿಸಬಾರದೆ 2 ಎಷ್ಟು ಸಾರಿಯು ನಾ ಬೇಡವೆಂದರೆ ಕೇಳದುಷ್ಟ ಮಕ್ಕಳ ಕೂಡೆ ಒಡನಾಟವಕಟ್ಟಿದ ನೆಲುವಿನ ಬೆಣ್ಣೆಯನೀವೆನುಬಿಟ್ಟು ಕಳುಹಿರಮ್ಮ ಆದಿಕೇಶವನ 3
--------------
ಕನಕದಾಸ
ಇದು ಹೊಂದಿಕೆಯಲ್ಲಾ ಭಕುತಿಗೆ ಪ ಗುರುವೆಂದಾಡುತ ನೆರೆನರನಂಬಿ | ಪರಗತಿ ಮಾರ್ಗವ ಎಂತು ನೀ ಕಾಂಬಿ 1 ಕಲ್ಲಿನೊಳಗ ಹರಿಭಾವಿಸಿ ನುಡಿವೀ | ಇಲ್ಲಿ ನೋಡೆಂದರ ಸಂಶಯ ಹಿಡಿವೀ 2 ನುಡಿಯಾಪಸಾರ ಸಂಗಡಿಯೊಳು ಬೆರೆದು | ಧೃಡಗೊಳ್ಳಲಿಲ್ಲ ವಿವೇಕದ ಸಂದು 3 ಹಮ್ಮಿಲಿ ಕೇಳದೇ ಜ್ಞಾನದ ಗುಟ್ಟು | ಧರ್ಮ ಜರಿದು ಜನ ಹೋಯಿತು ಕೆಟ್ಟು 4 ತಂದೆ ಮಹಿಪತಿ ಕರುಣಿಸದನಕಾ | ಎಂದಿಗೆ ದೊರೆಯದು ಸ್ವಾತ್ಮದ ಸುಖಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು