ಒಟ್ಟು 288 ಕಡೆಗಳಲ್ಲಿ , 60 ದಾಸರು , 247 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀವ್ಯಾಸರಾಜರು105ಪಾಲಿಸೋ ಯತಿರಾಜ ಪಾಲಿಸೋಪಾಲಿಸೋ ಮುನಿ ವ್ಯಾಸ ರಾಜ | ಜಗ -ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |ಕಾಲಲ್ಲಿ ಶರಣಾದೆ ಶ್ರೀಲೋಲಪ್ರಿಯ ನಿನ್ನಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪದಿನಪ ಸುತೇಜ ಬ್ರಹ್ಮಣ್ಯ | ತೀರ್ಥಮುನಿಸಾರ್ವಭೌಮರ ದಿವ್ಯ |ಚಾರುವನರುಹಕರದಿಂದ ಉದಯ | ಇನ್ನುಏನೆಂಬೆ ನಿನ್ನ ಪ್ರಾಬಲ್ಯ | ಅಹ |ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನುಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1ಕರುಣಿ ಸುಶಾಂತ ಸುವರ್ಣ | ವರ್ಣತೀರುಥಕರ ಕಂಜೋತ್ಪನ್ನ | ಸುಸ್ಥಿರ ವರಭಕ್ತಿವಿಜ್ಞಾನ| ಸಂ-ಪನ್ನ ಶ್ರೀ ಪಾದಾರ್ಯರನ್ನ | ಅಹ |ಸೇರಿ ಸೇವಿಸಿ ವಾದಿಕರಿಪಂಚಾನನಾದಸೂರಿಸಜ್ಜನನುತ ವ್ಯಾಸ ಮುನೀಂದ್ರ2ಮಾಲೋಲ ಕೃಷ್ಣಸುಪ್ರಿಯರು |ನಿತ್ಯಕಾಳೀಶ ನಿಮ್ಮೋಳ್ ಪ್ರಚುರರು | ಮತ್ತುವ್ಯಾಳೇಶ ಅಂಶ ಸಂಯುತರು | ಎಂದುಹೇಳೋರು ಹೀಗೆ ವಿಬುಧರು | ಅಹ |ಕೀಳುವಿಷಯದಿ ಎನ್ ಮನ ಸೋಲದೇ ಹೊರಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3ದ್ವಾಸಪ್ತತಿ ಸºಸ್ರ | ನಾಡಿತತ್ರಸ್ಥರೂಪಸಮೀರ| ಅವನವಿಂಶತಿ ಮೇಲೇಳು ನೂರು | ಪ್ರತಿಮನೀ ಸ್ಥಾಪಿಸದಿಯೋ ಹೇ ಧೀರ | ಅಹಈ ಸಮಸ್ತ ಹನುಮರೂಪ ಒಂದೊಂದರೊಳ್ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4ಸಾತ್ಯವತೀಯ ವೇದಾರ್ಥ | ಅರಿತುಮಧ್ಯಗೇಹನು ವಿವರಿಸಿದ | ಆಗಜಯರಾಯ ತತ್ ಟೀಕೆ ಬರೆದ | ಈಗವ್ಯಾಸರಾಯನು ವಿವರಿಸಿದ | ಅಹಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿನಿತ್ಯಸುಖವನೀವ ತತ್ವ ಬೋಧಿಸಿದಿ5ಮಾರ್ತಾಂಡಕತ್ತಲೆ ಕಳೆವ | ತರ್ಕತಾಂಡವ ದುಸ್ತರ್ಕ ತರಿವ |ಬಂಡುಮಿಥ್ಯಾವಾದಿಗಳ ದುರ್ಮತವ | ತುಂಡುತುಂಡುಮಾಡಿದ ನ್ಯಾಯಾಮೃತವ | ಅಹಕೊಂಡಾಡಳಲವೇ ಚಂದ್ರಿಕಾಈವಆಹ್ಲಾದವಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6ಪ್ರಣವಮಂತ್ರದಿ ಲಕ್ಷ್ಮೀರಮಣ | ಎಂಟುವರ್ಣ ಮಂತ್ರದಿ ಶ್ರೀರಮಣ | ವಿಷ್ಣುಷಡ್ವರ್ಣದಲ್ಲಿ ಸತ್ಯಾರಮಣ ಹಾಗೂವರ್ಣ ಸರ್ವದಿ ರಮಾ ರಮಣ | ಅಹಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿದಾತಅನುತ್ತಮಹರಿರೂಪಗುಣಕ್ರಿಯಾ ಹಾಡಿದಿ7ಭೂಪನ ಹರಿಯಾಸನವ ನೀ ಏರ್ದಿ | ಏರಿನೃಪವರನಪಮೃತ್ಯು ತರಿದಿ | ಯತಿತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವವಿಭುದರಿಂದಲಿ ಪೂಜ್ಯನಾದಿ | ಅಹ |ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8ನರಸಿಂಹ ಗೋಪಾಲ ಕೃಷ್ಣ | ಯಜÕವರಾಹಪಟ್ಟಾಭಿರಾಮನ್ನ | ಬಹುಪರಾಶರ್ಯಾದಿ ರೂಪನ್ನ |ನಿತ್ಯನಿರುತ ಸಂಪೂಜಿಪ ಘನ್ನ | ಅಹವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆಜೀಯ9 ಪ|| ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಶ ಶ್ರೀಹಯವದನ ಮೂರ್ತಿಗೊಂದಿಸುವೆಸಾಸಿರ ನಾಮದ ಒಡೆಯನೀನೆಂದು ಪನಿನ್ನ ನೋಡುವ ಇಚ್ಛೆಯಿಂದ ನಿನ್ನದಾಸರುಇನ್ನು ಗಾವುದ ದೂರದಿಂದ ಬರುತಿಹರುನಿನ್ನ ಭಕ್ತರ ಕೂಡಿ ನಿನ್ನ ಸೇವೆಯ ಮಾಡಿನಿನ್ನ ದರುಶನದಿಂದ ಧನ್ಯರಾಗುವರು 1ಹರಿದಾಸರೆಲ್ಲರೂ ಪರಮಸಂಭ್ರಮದಿಂದಹರಿದಿನದಜಾಗರಹರಿಸ್ಮರಣೆಯಿಂದಪರಮವೈಭವದಿ ತನ್ನ ಸ್ಮರಿಸುತಿಹ ಸುಜನರನುಕರುಣದಿಂದಲಿಕಾವಸಿರಿರಮಣನೆಂತೆಂದು2ಆಪತ್ತು ತಾಪತ್ರಯಂಗಳೆಲ್ಲವುನೀಗಿಶ್ರೀಪತಿಯೆ ರಕ್ಷಿಸು ರಕ್ಷಿಸೆಂದೆನುತಗೋಪತೀ ಕೃಷ್ಣನ್ನಪಾಡಿ ಪೊಗಳುವರನ್ನುಕಾಪಾಡುವನು ಸಕಲಪಾಪಗಳ ಹರಿಸಿ 3ಸೋದೆಯಲಿ ನೆಲೆಸಿರುವ ವಾದಿರಾಜರಿಗೊಲಿದುಆದರದಿ ಅವರಿತ್ತ ಸೇವೆ ಕೈಗೊಂಡುಶೋಭ ಕೃತುನಾಮ ಸಂವತ್ಸರದಿ ಸುಜನರಿಗೆಶೋಭನಂಗಳನಿತ್ತು ನೀದಯದಿ ಪೊರೆವೆ 4ಕಡು ಹರುಷದಿಂದಿತ್ತ ಕಡಲೆ ಹೂರಣ ಸವಿದುದೃಢ ಭಕ್ತರನು ಪೊರೆದೆ ಕಡುಹರುಷದಿಮೃಡನಸಖನಿನ್ನಂಘ್ರಿ ಬಿಡದೆ ಧ್ಯಾನಿಪ ಭಾಗ್ಯತಡೆಯದಲೆ ಪಾಲಿಸೈ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಸಾಧನ ದೇಹವಿದು62-3ಸಾzನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
--------------
ಪ್ರಸನ್ನ ಶ್ರೀನಿವಾಸದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು