ಒಟ್ಟು 761 ಕಡೆಗಳಲ್ಲಿ , 81 ದಾಸರು , 614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣನಮ್ಮ ಈತ ನಾರಿ ಒಳ್ಳೊಳ್ಳೆ[ಯ]ವರಿಗೆ ಮಾಡಿದ ಖ್ಯಾತ ಪ. ನಾನಾ ಬಗೆಯಿಂದ ಪೊಗಳುವೆನೀತ- ನ್ನಾನೆಂಬುವುದನ್ನು ಮುರಿದ ಪ್ರಖ್ಯಾತ ಅ.ಪ. ಕೈಕಾಲಿಲ್ಲದೆ ಆಟ ಆಡಿದ ಮೈಮ್ಯಾಲೆ ಹೊರೆಯ ಹೊತ್ತು ನೋಡಿದ ಕೋರೆಯ ಮಸೆದು ಹದ ಮಾಡಿದ ಕೋಯೆಂದು ಕೂಗಿ ಒದರುತೋಡಿದ ಇವ ಭಕ್ತರನ್ನ ಪಾತಾಳಕ್ಕೆ ದೂಡಿದ ಶಕ್ತಿ ಮಗನಾದ ಕ್ಷತ್ರಿಯರ ಕಾಡಿದ ಅಂಬು ತೆಗೆದು ಹೂಡಿದ ರಾಧಾನ್ಮನೆ ಪೊಕ್ಕು ಮೋಜು ಮಾಡಿದ ಇವ ದಿಗಂಬರನಾಗಿ ಅಶ್ವವೇರಿ ಓಡಿದ 1 ಕಲ್ಲು ಮಾಡಿಕೊಂಡು ಇರುವನು ನೆಳ್ಳ ಭೂಮಿ ನೆಗವಿ ಸುತ್ತಿ ಬಲ್ಲ ಬುದ್ಧಿವಂತ ಪ್ರಹ್ಲಾದಗೊಲಿದನಲ್ಲ ಇವ ಎರುಡುಪಾದ ಭೂಮಿ ದಾನ ಒಲ್ಲ ಇವನ ಕೊಡಲಿಬಾಯಿಗ್ಯಾರು ಇದಿರಿಲ್ಲ ಲಂಕೆಗೆ ಬೆಂಕಿಯನಲ್ಲ ಕೊಂಕಿ ಕೊಳಲನೂದುವನು ಗೊಲ್ಲ ಮೈಮೇಲೆ ಗೇಣು ಅರಿವ್ಯಿಲ್ಲ ಇವ ಮಾಮೇರೆಂಬೊ (?) ತೇಜಿ ಏರ್ಯಾನಲ್ಲ 2 ವೈರಿ ಕೊಂದ ಕಾಮಾತ್ಮರಿ[ಗಾ]ಗೋದೇನು ಛಂದ ದಾಡೆಯಿಂದ ದೂಡಿ ಭೂಮಿ ತಂದ ದಾಡೆಯಿಂದ ಕಂಬ ಒಡೆದು ಬಂದ ಇವ ಶುಕ್ರನ್ನ ಕಣ್ಣ ಮುರಿದೊಂದ ತಂದೆ ಮಾತಿಗೆ ತಾಯಿ ಮರಣಂದ ವನದ್ಹಿಂಡು ಕೂಡಿ ವನಕೆ ಕೇಡು ತಂದ ಒಮ್ಮೆ ಮೀಸಲ್ಬೆಣ್ಣೆ ಮೆದ್ದೇನಂದ ಇವ ಬತ್ತಲಾಗಿ ಹತ್ತು ಕುದುರಿದಂದ ತಂದೆ ಹೆಳವನಕಟ್ಟೆರಂಗ ಬಂದ 3
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣನಲ್ಲದಿಲ್ಲ ಜಗದಿ ಪ ನಾರಾಯಣನೆ ವಾರಿಶಾಯಿಯಾದ ಮೇಲೆ ವಾರಿಸಂಪರ್ಕವಿಲ್ಲದ ವಸ್ತುವುಂಟೆಅ.ಪ ತೃಣ ಲತೆ ತರು ವನಸ್ಪತಿ ಸಂತತಿಯೊಳೆಲ್ಲ ಗಣನೆಯಿಲ್ಲದ ಪ್ರಾಣಿವರ್ಗದೊಳೆಲ್ಲ ಅಣುಮಹತ್ತೆನಿಪ ಚರಾಚರಗಳೊಳೆಲ್ಲ ಅಣಗಿ ಪೋಷಿಪ ರಸ ವಾರಿಯಾದ ಮೇಲೆ 1 ಧರೆಯೊಳಗಡಗಿಹ ಧಾತುಜಾಲವ ಕರಗಿಸಿ ನೆರೆ ವನಸ್ಪತಿವರ್ಗಕೆ ಉಣಿಸನಿತ್ತು ಪರಿ ಧಾನ್ಯ ಫಲಂಗಳ ರಚಿಸುತ್ತ ಹರಹಿ ಲೋಕದೊಳೆಲ್ಲರನು ಪೋಷಿಪ ಪ್ರಭು 2 ಒಂದೇ ಸ್ಥಳದಲಿ ಮೊಳೆತು ಬೆಳೆವ ಬೀಜಕ್ಕೆಲ್ಲ ಒಂದೇ ವಾಸನೆ ಗುಣ ರುಚಿಗಳುಂಟೇ ಸಂದೇಹ ಬೇಡ ನಿರ್ಲಿಪ್ತ ತಾನವುಗಳ ಕುಂದಿಸದೆ ಗುಣ ಸ್ವಭಾವಗಳ ಪೋಷಿಸುವ 3 ಸರ್ವವಸ್ತುಗಳಲ್ಲು ಅಂತರ್ಯಾಮಿಯಾಗಿ ಸರ್ವ ಚರಾಚರಕೆ ನಿಯಾಮಕನಾಗಿ ಸರ್ವರೊಳಡಗಿ ಪೋಷಿಪ ಘನಪ್ರಭುವಾಗಿ ಸರ್ವರುತ್ಪತ್ತಿ ಸ್ಥಿತಿಗೆ ಕಾರಣನಹ 4 ಪರಮಪುರುಷ ತನ್ನನಂತ ಮಹಿಮೆಯೊಳು ಕಿರಿದೊಂದಂಶದಿ ವಾರಿರೂಪದೊಳಿಂತು ಸರುವ ಚರಾಚರದಿರುತಂತರ್ಗತನಾಗಿಪೊರೆವ ಜನವ ರಘುರಾಮವಿಠಲ ಪ್ರಭು 5
--------------
ರಘುರಾಮವಿಠಲದಾಸರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣನೆ ಈತ - ನಾರಿ ಒಳ್ಳೆಯವರಿಗೆ ಮಾಡ್ದ ವಿಘಾತ ಪ ಪರಿಪರಿಯಲಿ ಪೊಗಳುವ ಗೀತ - ನಾನೆಂದವರ ಮುರಿದ ಪ್ರಖ್ಯಾತ ಅ ಕೈಕಾಲಿಲ್ಲದೆ ಆಡ್ದಾಮೈಮೇಲ್ಭಾರವ ಪೊತ್ತು ನೋಡ್ದಾಕೋರೆಯಲಿ ತಿವಿದು ಹತ ಮಾಡ್ದಾತಾಕೊ ಎಂದು ಒದರಿ ಬಗೆದು ಬೀರ್ದಾಅರ್ತಿಯಿಂದ ಪಾತಾಳಕೆ ದೂಡ್ದಾಮುನಿಯ ಮಗನಾಗಿ ಕ್ಷತ್ರಿಯರ ಕಾಡ್ದಾರಾವಣಗಾಗಿ ಅಂಬುತೆಗೆದು ಹೂಡ್ದಾಆ ಜಮುನೆ ಪೊಕ್ಕು ಮೋಜು ಮಾಡ್ದಾದಿಗಂಬರ ವೇಷವ ತಾಳ್ದಾದಿಗಿದಿಗಿ ಎಂದು ಅಶ್ವವೇರ್ದಾ 1 ಪಾದ ಭೂಮಿ ತಾನೊಲ್ಲಇವನ ಕೊಡಲಿಬಾಯಿಗಿದಿರಿಲ್ಲಕೋ ಎಂದ ಲಂಕೆಗೆ ಬೆಂಕಿ ಮಲ್ಲಕೊಂಕಲಿ ಕೊಳಲನೂದಿ ಗೊಲ್ಲಮೈಮೇಲ್ ಗೇಣರಿವೆಯಿಲ್ಲಇವ ಮೇಲಾದ ತೇಜಿಯನೇರಬಲ್ಲ 2 ವೈರಿ ವನಕ್ಕೆ ಕೇಡು ತಂದಹಾಲ್ಮೊಸರ ಮೀಸಲು ಮುರಿದು ತಿಂದಬತ್ತಲೆ ನಿಂದು ಹತ್ತುವೆ ಕುದುರೆ ಎಂದಭರದಿ ಕಾಗಿನೆಲೆಯಾದಿಕೇಶವನೆಂದ3
--------------
ಕನಕದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಾಳಿಗಿಲ್ಲವೆಂದು ವ್ಯರ್ಥ ಬಳಲ ಬೇಡಿರೋ |ಕಾಲ ಬೆಳಗು ನೆಚ್ಚಿ ಕೇಡು | ತಿಳಿದು ನೋಡಿರೋ ಪ ಅಂದಿಗಿದ್ದವರಿಗೆ ಸಾವು | ಇಂದಿಗಿದ್ದವರಿಗೆ ಸಾವು |ಇಂದಿರೇಶನ ಭಕುತರೆಂದೆಂದಿಗೆ ಸಾಯರೋ 1 ಆರಿಗಾರು ಕೊಡುವರಲ್ಲ | ಮೋರೆ ನೋಡಿ ನಗುವರಲ್ಲ |ಹರಿಗೆ ನಂಬಿದವರೇ ಪರಮ ಧೀರ ಧೂರ್ತರೋ 2 ಹೆತ್ತ ತಾಯಿ ಗರ್ಭದಲ್ಲಿ | ಹತ್ತು ತಿಂಗಳನ್ನಪಾನ- |ವಿತ್ತ ರುಕ್ಮಭೂಷಗೇತಕ್ಕೆ ಮರೆತಿರೋ 3
--------------
ರುಕ್ಮಾಂಗದರು
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ವ್ಯಾಸತತ್ವಜ್ಞರಂಘ್ರಿ ಭಜಿಸೊ | ಕೃತ ಕೃತ್ಯನೆಂದೆನಿಸೊ | ಮಾನವ ಜನ್ಮ ಸಾರ್ಥಕೆನಿಸೊ | ಪುರುಷಾರ್ಥವಗಳಿಸೊ ಪ ಮೂರುವತಾರನ ಮತದೊಳು ಜನಿಸಿದರು ಮೂರನು ತ್ಯಜಿಸಿದರು ಮೂರು ಹತ್ತರಿಗೆ ಮುಖವಾಗಿರುತಿಹರು ಇವರಿಗೆ ಸಮರ್ಯಾರೊ 1 ಮಾನವ ಸ್ಮøತಿ ಮೊದಲಾದ ಗ್ರಂಥಗೈದ ದ್ವಿಜರಿಗೆ ಬೋಧಿಸಿದ || ಸಾನುರಾಗದಲಿ ಜ್ಞಾನಾಮೃತವೆರೆದ ದಶದಿಕ್ಕಿಲಿ ಮೆರೆದ | ಏನು ಪೇಳಲಿ | ಇವರ ದಿವ್ಯಪಾದ | ಮೋದ 2 ಶಾಮಸುಂದರನ ಕವನದಿ ಕೊಂಡಾಡಿ ಬಹಿರಂತರ ನೋಡಿ || ಸೋಮಪುರದಿ ದ್ವಿಜ ಸ್ತೋಮದಿಂದ ಕೂಡಿ ಇರುವರು ಮನೆ ಮಾಡಿ ಈ ಮಹಾತ್ಮರನು ನರನೆಂದವ ಖೋಡಿ ಸಂದೇಹ ಬ್ಯಾಡಿ3
--------------
ಶಾಮಸುಂದರ ವಿಠಲ
ನಿದ್ರೆಮಾಡಿದ ರಂಗ ನಿದ್ರೆಮಾಡಿದ ಭದ್ರಹಾಸಿಗೆ ಮೇಲೆ ಸಮುದ್ರರಾಜನ ಮಗಳ ಸಹಿತ ಪ. ವೇದಕದ್ದ ಅಸುರನಿಗಾಗಿ ಆ ಮತ್ಸ್ಯರೂಪವ ಧರಿಸಿ ಸಾಧಿಸಿ ಅಸುರನ ಕೊಂದ ವಾರಿಜಾಕ್ಷ ಬಳಲಿ ಬಂದು 1 ತರಳ ಹಿರಣ್ಯಕಶ್ಯಪನ ಕರುಳ ಬಗೆದು ಕೊರಳೊಳಿಟ್ಟು ನರಮೃಗ ರೂಪವ ತಾಳಿ ನರಸಿಂಹ ಬಳಲಿ ಬಂದು 2 ಬಲಿಯ ದಾನವನ್ನೆ ಬೇಡಿ ನೆಲನ ಮೂರಡಿ ಮಾಡಿ ಒಲಿದು ಬಾಗಿಲನ್ನೆ ಕಾಯ್ದ ವಾಮನನಾದ ಬಳಲಿ ಬಂದು 3 ತÀಂದೆಯ ಮಾತನ್ನೆ ಕೇಳಿ ತಾಯಿ ಶಿರವನ್ನೆ ಅಳಿದು ಏಳುಮೂರು ಬಾರಿ ನೀನು ಭೂಮಿಯ ಪ್ರದಕ್ಷಣೆಮಾಡಿ 4 ಸೀತೆಗಾಗಿ ಪಡೆಯ ಸವರಿ ಸೇತುಬಂಧನವ ಮಾಡಿ ದೂತರಾವಣನ್ನ ಕೊಂದು ಸೀತಾರಾಮ ಬಳಲಿ ಬಂದು 5 ಗೋಕುಲದಲ್ಲಿ ಹುಟ್ಟಿ ಗೋವುಗಳನ್ನೆಲ್ಲ ಕಾಯ್ದು ಗೋಪಸ್ತ್ರೀಯರ ಸೀರೆ ಸೆಳೆದು ಗೋಪಾಲಕೃಷ್ಣ ಬಳಲಿ ಬಂದು 6 ಬತ್ತಲೆ ಕುದುರೆಯನೇರಿ ಮತ್ತೆ ತೇಜಿಯನ್ನೆ ನಡೆಸಿ ಹತ್ತಾವತಾರವ ತಾಳಿ ಮತ್ತೆ ಕಲ್ಕಿರೂಪನಾÀಗಿ 7 ಧರೆಯೊಳತ್ಯಧಿಕವಾದ ಶ್ರೀರಂಗಪಟ್ಟಣದಿ ನೆಲೆಸಿ ಕರುಣದಿಂದ ಭಕ್ತರನ್ನು ಸಲಹಬೇಕು ಹಯವದನನೆ 8
--------------
ವಾದಿರಾಜ
ನಿನಗಿಂತ ಅಧಿಕರು ನಿನ್ನಯ ಭಕುತರು ಇದಕೆ ಅನುಮಾನಗೊಳಬೇಡ ಅಂಬುಧಿಶಯನ ಪ ಪದಿನಾಲ್ಕು ಲೋಕಗಳು ಪೊತ್ತೆನೆಂದೆನಬೇಡ ಅದುಸಹಿತ ನಿನ್ನನು ಹೃದಯದೊಳಗೆ ಹುದುಗಿಕೊಂಡಿಪ್ಪರೋ ಪದುಮನಾಭನೆ ಕೇಳೊ ಇದರಿಂದ ಸರಿಮಿಗಿಲು ಆರೊ ಜನದೊಳಗೆ 1 ವನಜಾಂಡಗಳೆಲ್ಲ ಪೊತ್ತೆನೆಂದೆನಬೇಡ ಕೊನೆಯ ನಾಲಿಗೆಯಲ್ಲಿ ನಿನ್ನ ನಿಲಿಸಿ ಭಾರ ಇಲ್ಲದಂತಿಪ್ಪರೊ ಘಣಿಶಯನ ಅಧಿಕಸಮರಾರೊ ಜಗದೊಳಗೆ 2 ಅಣುಮಹತ್ತು ಆದೆನೆಂದೆನೆಬೇಡವೊ ಗಣನೆ ಇಲ್ಲದೆ ನಿನ್ನ ಕರದಿ ಮುಚ್ಚಿ ಘಣಿ ಆಹಾರಗಾಮಿ ನಾ ವಿಜಯವಿಠ್ಠಲ ನಿನಗೆ ಮಣಿದು ಲೆಕ್ಕಿಸರೋ ನಿನ್ನನು ಮೆಚ್ಚಿದಾಳುಗಳು3
--------------
ವಿಜಯದಾಸ
ನಿನಗಿಂತ ಮಿಗಿಲಾಗಿ ಕರುಣ ನಿನ್ನದಿರೆ ನಿನಗೇನು ಶರಣೆಂಬೆ ಕರುಣಕ್ಕೆ ಹರಿಯೆ ಪ ನಿತ್ಯ ಮುಕ್ತ ಪೂರ್ಣ ಕಾಮ ಒಂದಕು ಸಿಲುಕದ ಮತ್ತೆ ಇದ್ದ ನಿನ್ನ ತನು ದೀನರ ತೋರಿ ಹತ್ತು ಜನುಮವ ಕೊಟ್ಟು ಭಕ್ತ ಜನರ ಬಲು ಕೃತ್ಯ ನಿಮಿತ್ಯ ಕೊಡಿಸ್ಯಾಡಿಸಿದನರಿಯ 1 ಒಂದಕೂ ಸಿಲುಕದಾ ನಿನ್ನ ವತ್ಸದ ದಾವು ಬಂಧದಿ ಬಿಗಿಸಿತೀ ಗೋಪಿಯ ಕೈಯ ವೃಂದಾರಕರ ಸ್ತುತಿಗೊಶವಲ್ಲದವನ ಗೋಪ ಮಂದಿಯ ದೂರಿನ ಪಾತ್ರನ್ನ ಮಾಡಿತು 2 ಪೇಳಿಕೊಂಬಿಯೊ ಲೋಕದೊಡೆಯನು ನಾನೆಂದು ಊಳಿಗತನ ನಿನ್ನ ಕೈಯ ಮಾಡಿಸಿತಯ್ಯ ಕೇಳೊ ಭಕುತರಿನ್ನು ಏನಾಡಿದರನ್ನ ತಾಳಬೇಕಾಯಿತೋ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ನಿನಗೇನು ಘನವೇನು ವನಜಾಕ್ಷ ವೆಂಕಟೇಶ ಮನಕೆ ಬೇಕಾದುದ ಇತ್ತು ರಕ್ಷಿಸುವರೆ ಪ ದೇಶ ನಿನ್ನದು ಬಹುಕೋಶ ನಿನ್ನದು ಜಗ ದೀಶ ನಿನ್ನನು ಭಾಗ್ಯಲಕುಮಿ ಸೇವಿಸುವಳು ಆಸೆಯಿಂದಲಿ ನಿನ್ನ ಚರಣವ ಮೊರೆಹೊಕ್ಕೆ ದೋಷವ ಕಳೆದು ಎನ್ನ ಲೇಸಿತ್ತು ಸಲಹಯ್ಯ 1 ಅಣುವಾಗಲೂ ಬಲ್ಲೆ ಮಹತ್ತಾಗಲೂ ಬಲ್ಲೆ ಅಣುಮಹತ್ತಿನೊಳಗೆ ಗುಣವ ತೋರಲು ಬಲ್ಲೆ ಕ್ಷಣಕೆ ಮುನಿಯ ಬಲ್ಲೆ ಆ ಕ್ಷಣಕೆ ರಕ್ಷಿಸಬಲ್ಲೆ ಗುಣಗಳವಗುಣಗಳ ನೋಡದೆ ಸಲಹಯ್ಯ 2 ಬಟ್ಟೆನು ಕೈಯ ಮುಟ್ಟಿ ರಕ್ಷಿಪರಿಲ್ಲ ಬೆಟ್ಟದೊಡೆಯ ಮನದಭೀಷ್ಟವೆಲ್ಲವನಿತ್ತು ದೃಷ್ಟಿಯಿಂದಲೆ ನೋಡಿ ಒಟ್ಟೈಸಿ ಸಲಹಯ್ಯ 3 ತಂದೆ ತಾಯಿಗಳಿಲ್ಲ ಬಂಧು ಬಾಂಧವರಿಲ್ಲ ಕುಂದು ಹೆಚ್ಚಿಯೆ ನಿರ್ಬಂಧ ಬಡಿಸುತಿದೆ ಮಂದರಾದ್ರಿಯ ಗೋವಿಂದ ನಿನ್ನಯ ಪಾದ ದ್ವಂದ್ವವ ತೋರಿಸಿ ಚಂದದಿ ಸಲಹಯ್ಯ 4 ಮನದ ಸಂಕಲ್ಪಕೆ ಅನುಗುಣವಾಗಿಯೆ ಘನವಿತ್ತು ಕರೆದೊಯ್ದು ವಿನಯದಿ ಮನ್ನಿಸಿ ಮನೆಗೆ ಕಳುಹು ನಮ್ಮ ವರಾಹತಿಮ್ಮಪ್ಪನೆ ತನು ಮನದೊಳಗನುದಿನದಿನ ಸಲಹಯ್ಯ 5
--------------
ವರಹತಿಮ್ಮಪ್ಪ
ನಿನ್ನ ದಯಾ ದೃಷ್ಟಿಯು ಎನ್ನ ಮೇಲಿರಬೇಕು ಪನ್ನಂಗಶಯನ ಭಕ್ತ ವಿಜಯವಿಠಲಯ್ಯ ಪ ಮುನ್ನ ಭಕ್ತನಿಗೊಲಿದು ಭಿನ್ನವಿಲ್ಲದೆ ಬಂದು ಮಣ್ಣಿನ್ಹೆಂಟೆಯ ಮೇಲೆ ಇನ್ನು ನಿಂತುದನು ಕಣ್ಣಿನಿಂದ ನಾ ಕಂಡು ಧನ್ಯನಾದೆನು ಜಗದಿ ಇನ್ಯಾಕೆ ಭವದಂಜು ತನು ನಿನ್ನದಯ್ಯ1 ಹೆತ್ತಮಕ್ಕಳ ತೆರದಿ ಅತ್ಯಧಿಕ ಪ್ರೀತಿಯಿಂ ಭಕ್ತರನು ಬಿಗಿದಪ್ಪಿ ಮುಕ್ತಿ ಸೋಪಾನ ಹತ್ತಿಸಿದ ನಿನ್ನಡಿ ಭಕ್ತಿಯಿಂ ಕಂಡೆ ಮತ್ತು ಮೃತ್ಯುವಿನ ಭೀತ್ಯಾಕೆ ಮನ ನಿನ್ನದಯ್ಯ 2 ಕಡಲನಿಲಯನೆ ನಿನ್ನ ಅಡಿ ನಂಬಿ ಮರೆಹೊಕ್ಕೆ ದೃಢಭಕುತಿ ನೀಡೆನ್ನ ನುಡಿಯೊಳಗೆ ನೆಲಸು ಎಡರು ತೊಡರನು ಕಡಿದು ದೃಢಕರನು ಬಿಡದಾಳ್ವ ಒಡೆಯ ಶ್ರೀರಾಮಯ್ಯ ಧನ ನಿನ್ನದಯ್ಯ 3
--------------
ರಾಮದಾಸರು