ಒಟ್ಟು 4717 ಕಡೆಗಳಲ್ಲಿ , 123 ದಾಸರು , 3118 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮಂತ ಬಲವಂತ ಅತಿ ಗುಣವಂತಾ | ಇನ ಶಶಿ ಶಿಖಿನೇತ್ರ ರೂಪ ಚರಿತ್ರ | ವನಚರ ಪುಂಗವ ಸನಕ ಸನಂದನ | ವಿನುತ ಹರಿಚರಣನನುದಿನ ಜಪಿತಾ ಪ ಗಜ ಕಂಠೀರಾ | ರಾಯ ಕಪಿಗೆ ಹರಿಯಾ | ತೋರಿದ ಸಿರಿಯಾ | ಶ್ರೀಯರಸನ ನಾಮ ಸವಿದ ನಿಸ್ಸೀಮ | ಪ್ರಿಯ್ಯಾದಿಕೊಂಡು ಗುರುತು ಸಾಗರನರಿತು | ಮಾಯಾಛಾಯಾ ಗ್ರೀಯಾ ನೋಯ | ಸಾಯಬಡದ ಸೀತೆಯ ಮುಂದೆ ನಿಂದು | ಕೊಂಡ ಸ | ಮಾಯದ ಲಂಕಿಯ ನ್ಯಾಯವುರಹಿದ ಧೇಯಾಂಜನೇಯಾ 1 ವರ ಕುಂತಿನಂದನಾ ಕಲಿಯ ಭಂಜನಾ | ಉರಗ ಭಂಜನಾ | ಉರಿತಾಪ ಪರಿಹಾರ | ಕರುಣ ಸಾಗರಾ | ದುರುಳ ಕೀಚಕರ ಹಿಡಂಬಕಾಂತಕ | ಕೌರವಾ ಪಾರಾವಾರಾ ಉರಹಿದ ಬಲುಧೀರ ಶರ ಗದಾಧಾರಾ | ಗುರುವರ ಸುತದಿನ | ಕರಜನುವರದೊಳು | ಪರಿ ಪರಿಹರಿಸಿದೆ ಸಮರಾ 2 ಆನಂದತೀರ್ಥನಾಗಿ ಅತಿ ಹರುಷಯೋಗಿ ಕಾನನ ಪರಮತಾ ದಹಿಸಿದ ಖ್ಯಾತಾ | ಭಾನುಕುಲ ಸಾಂದ್ರಾ ಎನಿಸುವ ಚಂದ್ರಾ | ಧ್ಯಾನಾಮೃತ ಪಾನಾ | ಮುಕ್ತಿ ಸೋಪಾನಾ | ಜ್ಞಾನಾಹೀನಾ ದೀನಾ ಜನಾ | ಮಾನಿಸಫಲದಾನಾ ನಿರತ ನಿಧಾನಾ | ಶ್ರೀನಿಧಿ ವಿಜಯವಿಠ್ಠಲ | ಶ್ರೀನಿವಾಸನ ಮಾನಸ ಪೂಜಿಪೆ ಗಾನನ ಮುನಿಗಳ ಆನನಮಣಿ ಪವಮಾನಸೂನು 3
--------------
ವಿಜಯದಾಸ
ಹನುಮಂತದೇವರ ಸ್ತೋತ್ರ ಬಿಡುವೇನೇನಯ್ಯಾ ಹನುಮ ನಿನ್ನಬಿಡುವೇನೇನಯ್ಯಾ ಪ ಬಿಡುವೆನೇನೋ ಹನುಮ ನಿನ್ನಅಡಿಗಳಿಗೆ ಶಿರವ ಕಟ್ಟಿ (ಎರಗುವೆ ನಾನು)ದೃಢ ಭಕ್ತಿ ಸುಜ್ಞಾನವನ್ನುತಡಮಾಡದಲೆ ಕೊಡುವೋ ತನಕ ಅ.ಪ ಹಸ್ತವ ಮ್ಯಾಲಕೆ ಎತ್ತಿದರೇನುಹಾರಗಾಲ ಹಾಕಿದರೇನುಭೃತ್ಯನು ನಿನ್ನವನು ನಾನುಹಸ್ತಿ ವರದನ ತೋರೋ ತನಕ 1 ಹಲ್ಲು ಮುಡಿಯ ಕಟ್ಟಿದರೇನು ಗುಲ್ಲು ಮಾಡಿದರಂಜುವನಲ್ಲಫುಲ್ಲನಾಭ ಲಕುಮೀಲೋಲನಇಲ್ಲಿಗೆ ತಂದು ತೋರುವ ತನಕ 2 ಡೊಂಕು ಮೋರೆ ಬಾಲವ ತಿದ್ದಿಹುಂಕರಿಸಿದರೆ ಅಂಜುವನಲ್ಲಕಿಂಕರನು ನಿನ್ನವನೋ ನಾನುವೆಂಕಟವಿಠಲನ ತೋರುವ ತನಕ 3
--------------
ವೆಂಕಟೇಶವಿಟ್ಠಲ
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
ಹನುಮನ ಮನೆಯವರು ನಾವೆಲ್ಲರು ಹನುಮನ ಮನೆಯವರು ಪ ಅನುಮಾನಪಡದೆಲೆ ಸ್ಥಳವ ಕೊಡಿರಿ ಎಮಗೆ ಅ.ಪ ಊಧ್ರ್ವ ಪುಂಡ್ರವ ನೋಡಿ ಶ್ರದ್ಧೆ ಭಕುತಿ ನೋಡಿ ಹೃದ್ಗತವಾದೆಮ್ಮ ತತ್ವಗಳನೆ ನೋಡಿ ಇದ್ದುದನಿಲ್ಲೆಂಬ ಅಬದ್ಧ ನುಡಿವರಲ್ಲಾ ಮಧ್ವಮುನಿಯು ನಮ್ಮ ತಿದ್ದಿರುವುದ ನೋಡಿ 1 ಸತ್ಯ ಮಿಥ್ಯಗಳಿಗೆ ಅಂತರ ಬಲ್ಲೆವು ಉತ್ತಮ ನೀಚರೆಂಬುವ ಭೇದ ಬಲ್ಲೆವು ಸುತ್ತಲು ಕಂಡು ಕಾಣದೆ ಇಹ ಎಲ್ಲಕೂ ಉತ್ತಮನೊಬ್ಬನೇ ಹರಿಯೆಂದು ಬಲ್ಲೆವು 2 ಹಲವು ಲೋಕಗಳುಂಟೆಂಬುದ ಬಲ್ಲೆವು ಹಲವು ಯೋನಿಗಳಲ್ಲಿ ಜನ್ಮಗಳೊಲ್ಲೆವು ಅಲವಭೋಧರು ನಮ್ಮ ಕಳುಹಿದರಿಲ್ಲಿಗೆ ತಿಳಿಸಿ ಪ್ರಸನ್ನ ಶ್ರೀ ಹರಿಗೆ ವಿಚಾರವ 3
--------------
ವಿದ್ಯಾಪ್ರಸನ್ನತೀರ್ಥರು
ಹಂಬಲ ಮರೆವುದುಂಟೆ ಪ ಬೆಂಬಲವಾಗಿಯೆ ಇಂಬುದೋರದ ನೀನು ಡೊಂಬಿಗಾರರ ಮುಂದೆ ಕಂಬದಂದದಿ ನಿಂದೆ ಅ.ಪ ತೃಣವಾದ ಕಾಯಗಳು ಮನದೊಳಗೆ ಘನವಾಗಿ ತೋರುತಿದೆ ಗುಣವಿಲ್ಲ ಬದುಕಿನೊಳು ಅಣಿತಪ್ಪಿ ಹೋಯಿತು ಪ್ರಣವರೂಪನೆ ಕೇಳು ಕ್ಷಣ ಜೀವ ನಿಲ್ಲದು 1 ಆಯ ತಪ್ಪಿದ ಮಾತನು ಆಡುತ ಎನ್ನ ಬಾಯನು ಹೊಯ್ಪವರ ಸಾಯ ಬಡಿದು ಮುಂದೆ ನ್ಯಾಯ ತೋರದ ಹಾಗೆ ಕಾಯಬೇಕೆನ್ನ ಉಪಾಯದಿಂದಲೆ ಜೀಯ 2 ಎರವು ಮಾಡಿದ ಕಾಲದೊಳಗೆ ಸೂರೆಗೊಂಡವರನೆಲ್ಲ ವಾರಿಜಾಕ್ಷನೆ ನೀ ವಿಚಾರವ ಮಾಡದೆ ದೂರುಗಳೆಲ್ಲವ ಪಾರು ಮಾಡಿದೆ ನಿನ್ನ 3 ಹಸ್ತ ಬಲಿದ ಕಾಲದಿ ಮಸ್ತಕದೊಳು ಹಸ್ತಿಯಂದದಿ ಹೊತ್ತೆನು ಸ್ವಸ್ಥವಿಲ್ಲದ ನರನಸ್ಥಿ ಚರ್ಮದ ಮೇಲೆ ಕಷ್ಟಾಗಿ ಕರುಣವ ನಾಸ್ತಿ ಮಾಳ್ಪೆಯ ಎನ್ನ 4 ಎನ್ನ ಸರ್ವಸ್ವವನು ತಿಂದವರೀಗ ಇನ್ನೇನು ಸುಕೃತಿಗಳೊ ನಿನ್ನ ಮನಸಿಗದು ಚನ್ನವಾದರೆ ಮೇಲೆ ಇನ್ನಾರು ಕೇಳ್ವರು ವರಾಹತಿಮ್ಮಪ್ಪ ನಿನ್ನ 5
--------------
ವರಹತಿಮ್ಮಪ್ಪ
ಹಯಾನನ ವಿಠಲಾ ನೀ ದಯದಿ ಸಲಹೊ ಇವಳಾ |ದಯಾಪಯೋನಿಧಿ ಎಂದು ನಿನಗೆ ಭಿನ್ನೈಪೇ ಪ ಕುಕ್ಷಿಯೊಳು ಜಗಧರಿಪ ಪಕ್ಷಿವಾಹನದೇವಲಕ್ಷಿಸದಲೇ ದೋಷ | ಲಕ್ಷವನು ಇವಳಾಈಕ್ಷಿಪುದು ಕರುಣಾಕಟಾಕ್ಷದಲ್ಲೆಂದೆನುತಲಕ್ಷ್ಮೀರಮಣನೆ ಹರಿಯೆ ಪ್ರಾರ್ಥಿಸುವೆ ನಿನಗೇ 1 ವಿನುತ | ಬಾಗಿ ಬೇಡುವೆನೋ |ಜಾಗುಮಾಡದೆಲೆ ವೈ | ರಾಗ್ಯ ಭಕ್ತಿಜ್ಞಾನಯೋಗ ಕೊಟ್ಟುದ್ದರಿಸು | ಸಾಗರಜೆ ರಮಣಾ 2 ವಾಚಾಮ ಗೋಚರನೆ | ನೀಚೋಚ್ಚಕ್ರಮ ತಿಳಿಸಿಮೋಚ ಕೇಚ್ಛೆಯ ಮಾಡೊ | ಪಾಚಕಸುವಂದ್ಯಾಪ್ರಾಚೀನ ಕರ್ಮಾಳಿ ಯೋಚಿಸಲು ಅಳವಲ್ಲಆಚರಿತ ಸಂಚಿತವ | ಮೋಚಿಸಾಗಾಮೀ 3 ಸಿರಿ | ನಲ್ಲ ನಿನಗೀಪರಿಯಸೊಲ್ಲ ಪೇಳುವುದುಚಿತೆ | ಚೆಲ್ವ ಹಯವದನಾಬಲ್ಲಿದನೆ ನೀನಾಗಿ | ಚೆಲ್ವ ರೂಪವ ತೋರೆಸಲ್ಲಲಿತ ಅಂಕಿತವ | ಸಲ್ಲಿಸಿಹೆ ದೇವಾ 4 ಭಾವುಕಾರ್ಜುನ ಬಂಡಿ | ಬೋವನಾಗುತ್ತ ಭವನೋವಕಳೆವೋಪಾಯ | ನೀವಲಿದು ಪೇಳೀತಾವಕರ ಪೊರೆದಂತೆ | ಭಾವುಕರ ಪೊರೆ ಬೇಡ್ವೆಗೋವುಗಳ ಪಾಲ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಹರನ ಪಟ್ಟದ ರಾಣಿ ಪರಮ ಕಲ್ಯಾಣಿಕರುಣದಲಿ ಕರ್ಣೇರದು ನೋಡು ಪನ್ನಗವೇಣಿ ಪಮತಿಪ್ರೇರಕಳು ನೀನು ಪತಿಯ ಮನದ ಅಭಿಮಾನಿಸುತರು ಷಣ್ಮುಖನು ಗಜಮುಖ ಈರ್ವರುಪತಿಯು ನೆತ್ತಿಯಮೇಲೆ ಗಂಗೆಯನ್ನು ಹೊತ್ತಿಹನುಅತಿ 'ಚಿತ್ರವು ನಿನ್ನ ಸಂಸಾರಸೊಬಗು 1ತಂದೆಯ ಅಪಮಾನಹೊಂದಿ ಸ'ಸದೆ ಯಜ್ಞಕುಂಡದೊಳಗೆ ಹಾರಿ ನೀ ದೇಹಬಿಟ್ಟೆಗಂಡನಿಗೆ ಈ ಸುದ್ದಿ ಮುಟ್ಟಿದಾಕ್ಷಣ ನಿನ್ನತಂದೆಯ ರುಂಡವನು ಚೆಂಡಾಡಿದನು ಶಿವನು 2ಶಿವಶಂಕರನು ಅವನು ಬನಶಂಕರಿಯು ನೀನುಭಸಿತ ಭೂತನವನು ಶಶಿಮುಖಿಯು ನೀನುರಾಮಭಕ್ತನು ಅವನು ಪೇಮಪುತ್ಪಳಿ ನೀನುಕಮಲಾಕ್ಷಿ ಭೂಪತಿ 'ಠ್ಠಲಗೆ ಅತಿಪ್ರಿಯರು ನೀವು 3ಶ್ರೀ ದತ್ತಾತ್ರೇಯ
--------------
ಭೂಪತಿ ವಿಠಲರು
ಹರಿ ಎನ್ನು ಹರಿ ಎನ್ನು ಹರಿ ಎನ್ನು ಮನವೆ ಪ. ನಿರುತದಿ ಪೊರೆವನ ಮರೆವರೆ ಮನವೆ ಅ.ಪ. ಸರಿಯುವುದು ಆಯುಷ್ಯ ಸಂಪತ್ತು ನೋಡು ಬರುತಿದೆ ಮೃತ್ಯುವು ಕರೆಯಲು ನೋಡು ಹರಿನಾಮ ಯಮದಂಡ ಕಡಿವುದು ನೋಡು ಪರಮಪುರುಷನ ನೀ ಬಿಡದೆ ಕೊಂಡಾಡು 1 ಹರಿಯ ನಾಮಾಮೃತ ಸುಜನಕೆ ನೀಡು ಹರಿಯ ಜ್ಞಾನಾನಂದಾಂಬುಧಿಯೊಳೊಲ್ಯಾಡು ಹರಿಯ ಮೂರುತಿಯನ್ನು ಮನದಲ್ಲಿ ನೋಡು ಹರಿಭಕ್ತಿ ಮದವೇರಿ ಕುಣಿ ಕುಣಿದಾಡು 2 ಹರಿಗುರು ಸ್ಮರಣೆಯ ನಿರುತದಿ ಮಾಡು ಹರಿಭಕ್ತಿ ಲಾಂಛನ ಮೈಯಲ್ಲಿ ಮೂಡು ಹರಿದಾಸ ಸಂಪತ್ತಿನೊಳಗೆ ಓಲಾಡು ಹರಿಯ ಮನದಿ ಕಂಡು ನಲಿನಲಿದಾಡು 3 ಕಾಮಕ್ರೋಧಗಳನ್ನು ಖಂಡಿಸೀಡ್ಯಾಡು ನೇಮ ಶ್ರೀ ಗುರು ಆಜ್ಞೆಯಂದದಿ ಮಾಡು ಯಾಮ ಯಾಮಕೆ ಹರಿನಾಮವ ಪಾಡು ಶ್ರೀಮದಾನಂದತೀರ್ಥರ ಮತ ನೋಡು 4 ಶ್ರೀ ಪರಮಾತ್ಮನ ಗುಣವ ಕೊಂಡಾಡು ಶ್ರೀಪತಿ ಭಕ್ತರ ಸಂಗದಿ ಕೂಡು ಭವ ಹರ ಸ್ತುತಿ ಮಾಡು ಗೋಪಾಲಕೃಷ್ಣವಿಠ್ಠಲನ ದಯ ಬೇಡು 5
--------------
ಅಂಬಾಬಾಯಿ
ಹರಿ ಗೋಪಾಲ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ತರಳೆ ದ್ರೌಪದಿ ವರದ | ಮರಳ್ಯಹಲ್ಯಯ ಪೊರೆದತರಳ ಪ್ರಹ್ಲಾದನನ | ಪೊರೆದ ನರಹರಿಯೇ |ವರುಷ ಐದರ ಧೃವಗೆ | ವರದನಾಗೀ | ತೋರ್ದೆಕರುಣಾಳು ನಿನ್ಹೊರತು | ಬೇರನ್ಯಕಾಣೇ 1 ಕಂಸಾರಿ ನಿನ್ನ ಪದಪಾಂಸುವನೆ ಶಿರದಿ ನಿ | ಸ್ಸಂಶಯದಿ ಧರಿಸೀಶಂಸಿಸಲು ಮಹಿಮೆ ತವ | ದಾಸ್ಯ ಪಾಲಿಸುತಿನ್ನುಹಂಸವಾಹನ ಪಿತನೆ | ವಂಶ ಉದ್ಧರಿಸೋ 2 ಕರ್ಮ ಪ್ರಾಚೀನಗಳ | ಮರ್ಮ ತಿಳಿದವರ್ಯಾರೊಕರ್ಮನಾಮಕನೆ ದು | ಷ್ಕರ್ಮ ಪರಿಹರಿಸೀ |ಪೇರ್ಮೆಯಿಂದಿವಳ ಪೊರೆ | ನಿರ್ಮಲಾತ್ಮಕ ದೇವಧರ್ಮ ಗೋಪ್ತ ಸ್ವಾಮಿ | ಬ್ರಹ್ಮಾಂಡದೊಡೆಯಾ 3 ಮಧ್ವಮತ ಸಿದ್ಧಾಂತ | ಪದ್ಧತಿಗಳರುಹೃತ್ತಶುದ್ಧಸಾಧನ ಗೈಸೊ | ಮಧ್ವಾಂತರಾತ್ಮಾಅಧ್ವಯನು ನೀನೆಂಬ | ಶುದ್ಧ ಬುದ್ಧಿಯನಿತ್ತುಉದ್ಧರಿಸೊ ಈಕೆಯನು | ಪ್ರದ್ಯುಮ್ನ ದೇವಾ 4 ಸರ್ವಜ್ಞ ಸರ್ವೇಶ | ನಿರ್ವಿಕಾರನೆ ದೇವಸರ್ವದ ತವನಾಮ | ಸ್ಮರಿಪ ಸುಖವಿತ್ತುದುರ್ವಿ ಭಾವ್ಯನೆ ದೇವ | ಅಸ್ವತಂತ್ರಳ ಕಾಯೊಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿ ನಿಮ್ಮ ಮಹಿಮೆ ಅರಿಯರಾರಾರು ನರ ಮನುಜರ ಪಾಡೇ ಸುರಮುನಿಗಳೆ ನಿನ್ನರಸಿ ಕೊಂಡಾಡಲು ದೊರೆಯದಿರುವಿ ಘನ ಪರತರಮಹಿಮ ಪ ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆಯುತ ಸೃಷ್ಟಿಗೊಳಿಸುತಿರುವಿ ಇಷ್ಟಭಕುತರ ಕಷ್ಟ ನಿವಾರಿಸಿ ಇಷ್ಟಪೂರೈಸುತಿರುವಿ ನಿಷ್ಠೆಯಿಂದ ಮನಮುಟ್ಟಿಭಜಿಪರನು ಬಿಟ್ಟಗಲದೆ ದೃಷ್ಟಿಯಿಂ ನೋಡುವಿ 1 ಲಾಷೆಯ ನೀಡುತಲಿ ಘಾಸಿ ಮಾಡದೆ ದೋಷರಾಶಿಯ ಕಳೆಯುತಲಿ ಪೋಷಿಸಿ ತ್ರಿಜಗದೀಶನೆ ಈ ಭವ ಪಾದವ ಖಂಡಿಸಿ ವಾಸುಕಿಶಯನ 2 ಮನಸಿಜಾರಿಯಂ ಘನಸಂಕಟದಿಂದ ಕನಿಕರದಿಂ ಕಾಯ್ದಿ ದನುಜಕುಲವನು ಹಣಿದು ಸುರರಿಗೆ ಘನಸೌಖ್ಯವನ್ನಿತ್ತಿ ತನುಮನ ಧನದಿಂ ನೆನೆಯುವ ಭಕುತರ ನೆನವಿಗೆ ಸಿಲುಕದಿ ಚಿನುಮಯ ರಾಮ 3
--------------
ರಾಮದಾಸರು
ಹರಿ ನೀ ನೋಡದಿರೆ ಬಾಳಬಹುದೆ ಪ ಸರುವ ಮೂಲನೆ ದೇವ ಪರಮಪಾವನ ಮಹಿಮ ಅ.ಪ. ಜ್ಞಾನಮಯ ವಿಜ್ಞಾನ ಮಾನಿಗಳ ಹೆದ್ದೈವ ದಿವಿಜ ಪ್ರಾಣಾಧಾರಿ ದೀನ ಬಾಂಧವ ಹೃದಯ ವನಜ ಮಂದಿರ ಪೂರ್ಣಾ ನಿನೊಹಿಸಿ ಮದ್ಧರ್ಮ ಕಾಣಿಸೊ ಕರುಣಾಬ್ಧಿ 1 ಘೋರ ಕಲಿಮಲ ವ್ಯಾಪ್ತಿ ಮೀರಿಹುದು ಸಜ್ಜನರ ಶ್ರೀರಮಣ ಶ್ರುತಿಧರ್ಮ ಜಗವೆಲ್ಲಿದೆಯಯ್ಯ ಭಾರಕರ್ತನೆ ನಿನ್ನ ಆರಾಧಿಸದೆ ಜನರು ಸ್ವಾರಾಧ್ಯರಾಗಿಹರು ಗತಿಯೇನೊ ಸುಜನಕೆ 2 ಕಾಲ ಸರ್ವಾತ್ಮ ಮರುದಾತ್ಮ ಜಯೇಶವಿಠಲ ಗಮನ ಗೀರ್ವಾಣ ಮುನಿ ವಂದ್ಯ ಶೌರಿ ರುಜುಮನವ ಕೊಡೆನಗೆ 3
--------------
ಜಯೇಶವಿಠಲ
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ವಲಿಯಾ ನಮ್ಮ ಹರಿವಲಿಯಾ ಪ ಮರುತನ ಪೊಂದದ ಅಸುರರಿಗೆಂದಿಗು ಅ.ಪ. ಹರಿಕಥೆ ಕೇಳದೆ ಹರಟೆಗಳಾಡುತ ಸಿರಿಮದ ವಿಷಯದಿ ಮೆರೆಯುವ ನರರಿಗೆ 1 ಮಾನಿನಿ ಮನೆಯಭಿಮಾನವ ತೊರೆಯದೆ ಜ್ಞಾನವ ಘಳಿಸದ ಶ್ವಾನನಿಗೆಂದಿಗು 2 ತಾನುಡಿ ವಂದದಿ ತಾನೇ ನಡೆಯದ ಜ್ಞಾನಿಯ ತೆರದಿಹ ಹೀನನಿ ಗೆಂದಿಗು 3 ನಾನೇ ಕರ್ತನು ನಾನೇ ಭೋಕ್ತನು ನಾನೇ ಯೆಂಬೀ ದನುಜರಿಗೆಂದಿಗು 4 ದೋಷವಿವರ್ಜಿತ ಶ್ರೀಶನೆದೊರೆ ಸರಿ ದಾಸನು ನಾನಿಹೆ ಪೋಷಿಸುಯೆನ್ನದೆ 5 ಗುರುಗಳ ಪಿಡಿಯದೆ ಹರಿಯಡಿ ಬೀಳದೆ ತರಿಯದವಿದ್ಯೆಯ ಅರಿಯದೆ ವಿದ್ಯೆಯ 6 ವೇದವ ನೊಡದೆ ಸಾಧುಗಳ್ಪಡಿಯದೆ 7 ನನ್ನದು ನಿನ್ನದು ನಿನ್ನದೆ ಸಕಲವು ನೀನೇ ಧನಗತಿ ನನಗೈಯನ್ನದೆ 8 ಸಿರಿಕೃಷ್ಣವಿಠಲನೆ ವರಪುರುಷೋತ್ತಮ ಉರುತರ ಭಕ್ತಿಲಿ ಪೊರೆಯನ್ನದೆ 9
--------------
ಕೃಷ್ಣವಿಠಲದಾಸರು
ಹರಿ ವಿಮುಖನಾದ ಮನುಜಶ್ವಪಚ ಶ್ರೇಷ್ಠನು | ಹರಿವಲುಮೆ ಕಂಡ ನರನು ಪರಮ ಶಿಷ್ಠನು ಪ ಹರಿಯ ಕಾಣದ ಕಣ್ಣು ನೌಲಗರಿಯಾ ಕಣ್ಣವು | ಹರಿಯ ಕಥೆ ಕೇಳದ ಶ್ರವಣಾ ಬಧಿರ ಶ್ರವಣವು | ಹರಿಯ ನಿರ್ಮಾಲ್ಯ ಕೊಳದ ಘ್ರಾಣ ಲೆತ್ತಿ ಘ್ರಾಣವು | ಹರಿಗೆರಗದಂಗ ತ್ರಾಣ ಬೆಚ್ಚಿನ ತ್ರಾಣವು 1 ಹರಿಯನ್ನದ ಮುಖವು ರಾಜ ಬಿರದ ಮುಖಗಳು | ಹರಿಸೇವೆ ಮಾಡದ ಕೈಯ್ಯಾ ಕೀಲಿ ಕೈಗಳು | ಹರಿಯಾತ್ರೆ ಇಲ್ಲದ ಕಾಲು ಹೊರಸಿನ ಕಾಲ್ಗಳು | ಹರಿ ವಿಷಯ ವಿಲ್ಲದ ವಿದ್ಯೆದೊಂಬನ ವಿದ್ಯಗಳು 2 ಹರಿಗರ್ಪಣೆ ಅಲ್ಲದಯಜ್ಞ ವೇಷಿಕ ಕರ್ಮವು | ಬರುದೇ ಮೌನ ವೃತಗಳೆಲ್ಲ ಬಕನ ಧರ್ಮವು | ಹರಿಭಕ್ತಿರಹಿತ ತಪದಿ ಬಿಡದು ಜನ್ಮವು | ಗುರು ಮಹಿಪತಿಸ್ವಾಮಿ ಭೋಧಿಸಿದನು ಮರ್ಮವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಹರಿಯೆನ್ನಿ ಹರಿಯ ನೆನವಿಗೊಮ್ಮೆ ತನ್ನಿ ಧ್ರುವ ಹಿಡಿದು ನಿಜ ಒಂದು ¥ಥ ಪಡೆಯಬೇಕು ಸ್ವಹಿತ ನೋಡಿ ಗೂಢಿನೂಳು ಗುರುತ ಕೊಡುವ ನೋಡಿ ಗುರುನಾಥ ಒಡಯನಹುದಯ್ಯನೀತ ಪೊಡವಿಯೊಳು ಶ್ರೀನಾಥ ಮಾಡಿ ಭಕ್ತಿ ಏಕಚಿತ್ತ ಕೂಡಿ ಜ್ಞಾನಸನ್ಮತ 1 ಹಿಡಿದು ನೀವು ಗುರುಪಾದ ಮಾಡಬ್ಯಾಡಿ ಭೇದ ಕಡಿಯಬೇಕು ಕಾಮಕ್ರೋಧ ಕೂಡಿ ನಿಜಸುಭೋದ ಬೋಧ ಗೂಢಗುಪ್ತವಾಗಿಹ್ಯದ ಕೊಂಡಾಡುತಿಹ್ಯ ವೇದ ಬಿಡದೆ ಮಹಿಮೆ ನಿರ್ಗುಣದ 2 ನಾವು ನೀವುವೆಂಬ ನುಡಿ ಗೋವಿಸುವದೀಡ್ಯಾಡಿ ಹ್ಯಾವ ಹೆಮ್ಮೆಹಿಡಿಯಬ್ಯಾಡಿ ಭಾವ ಬಲಿದು ಪೂರ್ಣ ನೋಡಿ ಕಾವ ಕರುಣನ ಕೂಡಿ ಭವಬಂಧನ ನೀಗಿ ಬಿಡಿ ಪಾವನ್ನವಾದ ನೋಡಿ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು