ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುನಿಕರÀ ಸಂಸೇವ್ಯ ಸತಿಪತಿಯ ಬಿಂಬ ಪ ಪರಮ ಪಾವನ ನಾಮ ಪಾಹಿ ಪಾಹೀ ಎನ್ನ ಅ.ಪ ಪತಿತಪಾವನ ಪರಮಗತಿ ನೀನು ಸರ್ವಸ್ವ ಸತತ ತತ್ವದ ಪಾಲಿಸು ಎನ್ನ ಶಿರದಿ ಹಿತದಿಂದ ನೆಲಸಿರಲಿ ಹರಿದಾಸ್ಯ ಕೊಟ್ಟೆನಗೆ ರತಿ ಬಿಡಿಸು ವಿಷಯದಲಿ ಮನ ನಿನ್ನ ಬಿಡದಿರಲಿ 1 ನಿನ್ನ ಕ್ರಿಯ ಗುಣರೂಪ ನಿನ್ನ ತಿಳಿಯದೆ ನಡೆದೆ ಘನ್ನಭಾವವ ನೀಡು ಪೂರ್ಣದಯದಿ ಅನ್ಯವೆಂದಿಗು ಒಲ್ಲೆ ಅನ್ನನೀಯನಗಾಗು ಪೂರ್ಣಪ್ರಜ್ಞರ ದೈವ ಪನ್ನಗಾದ್ರಿನಿಲಯ 2 ಲಕ್ಷ್ಮೀನಿಲಯ ಜಯೇಶವಿಠಲನೆ ವಿಧಿವಂದ್ಯ ಲಕ್ಷ್ಯನಿನ್ನಲಿ ನೆಲಸು ಸತತ ಬಿಡದೆ ಪೃಷ್ಯೇಶ ತವ ಕರುಣ ಬಂದು ಎನ್ನೊಳು ಬೀಳೆ ಭವ ಹಿಂಗಿ ಮೋಕ್ಷಸುಖ ಕರಗತವೊ 3
--------------
ಜಯೇಶವಿಠಲ
ಗುರುಪರಮ ಸ್ವರೂಪ ಧ್ರುವ ಇಡದು ತುಂಬೇದ ನೋಡಿ ಎಡಬಲ ಪೂರ್ಣ ಬಿಡದೆ ಸೂಸುತಲ್ಯದೆ ಜಡಿದು ನಿಧಾನ 1 ಸಂಧಿಸಿಹದು ನೋಡಿ ಹಿಂದೆಮುಂದೆಲ್ಲ ಒಂದು ಮನದಿ ನೋಡಿ ಬಂದು ನೀವೆಲ್ಲ 2 ಬೆಳದುಕೊಂಬುವಂತೆ ಹೊಳೆಯುತವಲ್ಲ ಸುಳುಹು ಶ್ರೀ ಕೃಷ್ಣನ ತಿಳುವವರಿಲ್ಲ 3 ಕಣ್ಣುಗೆಟ್ಟಿರಬ್ಯಾಡಿ ಕಾಣದೆ ಖೂನ ತ ನ್ನೊಳಗದೆ ನೋಡಿ ಸಾನ್ನಿಧ್ಯಪೂರ್ಣ 4 ಭಾಸುತಲ್ಯದೆ ಭಾಸ್ಕರಕೋಟಿ ತೇಜ ದಾಸ ಮಹಿಪತಿ ಪ್ರಾಣದೊಡಿಯ ಸಹಜ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಪಾದಕೆ ಮನಮಗ್ನವಾಗುವದೆ ಖೂನ ಧ್ರುವ ಗುರು ತನ್ನೊಳಗದೆ ಗುರ್ತು ನರದೇಹ್ಯದ ಭಾವನೆತಾಮರ್ತು ಅರಿಯಲಿಕ್ಕೆ ಘನ ಬೆರ್ತು ಧರೆಯೊಳು ನಿಜನಿರ್ತ 1 ಗುರುಶಿಷ್ಯತ್ವದ ನಿಜಖೂನ ಮರಜನಗಳಿದು ಬಲ್ಲವೇ£ À ವಿರಳಾಗತ ವಿಹ್ಯದೀ ಙÁ್ಞನ ಸುರಜನ ಪಾವನ 2 ಭಾವದೊಳ ನಿಜಗುರು ಸಧ್ಬಕ್ತಿ ಠಾವಿಲಿರಬೇಕಿದು ಸಂಗತಿ ನಿಚ್ಚ ಮಹಿಪತಿ ಭವಹರ ಗುರುಮೂರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಬೋಧ ಪರಮಸುಖಕಾರಿ ಬಾರಿ ಬಾರಿಗೂ ಕೇಳೈ ಭವರೋಗೀ ಪ ಬಿಡು ಬಾಳಿನ ಭ್ರಮೆಯ ಸಂಸಾರಿ ದುಃಖದ ಬಾಳಿದು ವಿನಾಶಕಾರಿ ಇದರೊಳು ಸಿಗುತಿಹ ಸುಖವು ವಿಕಾರಿ ತಿಳಿಯೈ ಮುಕ್ತನಾಗಲಿದು ದಾರಿ 1 ಆರಿ ನಿನ್ನಯ ನಿಜವಾ ಸುವಿಚಾರಿ ಅರಿವೇ ನಿನ್ನಯ ಈ ಭವತಾರಿ ಬೇರಾವುದು ನಿನಗಾಗದು ದಾರಿ ಈ ನುಡಿ ಪೇಳುತಿಹುದು ಶೃತಿಸಾರಿ 2 ಜಾಗರಾ ಕನಸು ನಿದ್ರೆಯ ಮೀರಿ ಅಮರವಾಗಿರುವ ಪದವನೆ ತೋರಿ ಅದೆ ನೀನೆನ್ನುತ ಪರಿಪರಿ ಸಾರಿ ಶಂಕರಭೋಧವಿದುವೆ ಭವಹಾರಿ3
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುಭಕ್ತನೆವೆ ಧನ್ಯನು ಬಲು ಮಾನ್ಯನು ಪ ಗುರುದಯ ಸಂಗಡಿಯನು ಹಿಡಿದಿಹನು | ತರಣೋಪಾಯವ ಕೂಡಿದಾ ನಲಿದಾಡಿದಾ 1 ಅನ್ಯ ಮಾರ್ಗವ ನೋಡನು ತಾ ಕೂಡನು | ತನ್ನ ನಿಷ್ಠೆಯೊಳಾಡುವಾ ಗತಿ ಬೇಡುವಾ 2 ಗುರು ಮಾತೇ ಮಂತ್ರ ವೆಂಬನು | ಸವಿ ದುಂಬನು | ಗುರು ಸೇವೆಯಲಿ ಬಾಳುವಾ ಅದೇ ಕೇಳುವಾ 3 ಪುಂಡಲೀಕನ ಭಕ್ತಿಯಾ | ಆಸಕ್ತಿಯಾ | ಕಂಡು ತಾನೆವೆ ಬಂದನು ಮುಕುಂದನು 4 ಸಾರಥಿ | ನೆರೆ ಭಕ್ತಿ ಕೀಲ ಬೋಧನಾ ಹೇಳಿದನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುಭಕ್ತಿ ಮನವೆ ನೀ ಮಾಡು ಸ್ಥಿರ ಗುರುತಿಟ್ಟು ಬಾಹುದು ಪರಾತ್ಪರ ಸರಿಗಾಣೆನೊ ಪುಣ್ಯಕೆ ನೋಡಿದರ ಕರಕೊಂಬುದಿದೆ ಸುಖ ಸಜ್ಜನರ 1 ಹಿಡಿಬೇಕು ಸದಾ ಗುರುಭಾವದೃಢ ಉಪಾಧಿ ಜಡ ಪಡಕೊಂಬುದು ಮಾಡಬಾರದು ತಡ ಒಡಲ ಹೊಕ್ಕರ ಸದ್ಗುರು ಕೈಯಬಿಡ 2 ಗುರುನಾಮ ನಿಧಾನ ನೆನಿಯೊ ಸದ ಸುರಲೋಕಕೆ ಪಾವನ ಮಾಡುವದ ಪರತತ್ವಕೆ ಪಾರನೆದೋರುವದ ಸ್ಮರಿಸಿನ್ನು ಮಹಿಪತಿ ಮುಖ್ಯವಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಮಾರ್ಗ ಧನ್ಯಧನ್ಯವೆನ್ನಿ ಕರುಮುಗಿದು ಅನ್ನಿ ಧ್ರುವ ಮರೆವ ಗರ್ವವ ಮುರಿವ ಹರಿವ ಮೂರೆರಡಂಕುರವ ತೋರುವ ದೋರುವ ಯರ್ಹ ಪಜರುವ ಹೊಡೆವ ಮರುವ್ಹ ಅರುವ ಗುರುವಿನ ಕರುವ್ಹ ಬೆರುವ ಪರಾತ್ಪರವ ಇರುವ ಹರುಷದಿ ಸ್ಥಿರುವ ಕರೆವ ಸಾರಾಯ ಸುರೆವ 1 ಕಾಯ ಕಳವಳವ ಅಳೆವ ಚಿತ್ತ ಚಂಚಲವ ಗಳುವ ಭಾವದುಶ್ಚಲವ ಉಳುವ ಉಪಾಯಲಳಿವ ನಲುವ ನೋಡಿ ನಿಶ್ಚಲವ ಬಲಿವ ಭಕ್ತಿ ಅಚಲವ ತಿಳುವ ಸದ್ವಸ್ತುದ ಹೊಳೆವ 2 ಕೆಡುವ ಬುದ್ದಿಯ ಬಿಡುವ ಕಡೆವ ಸಂದೇಹ ದೃಢವ ನುಡಿವ ಶ್ರುತಿಯಂತೆ ನಡುವ ಜಡೆವ ಸದ್ಬಕ್ತಿವಿಡುವ ತುಡುವ ವೈರಾಗ್ಯನೆ ಮುಡುವ ಸದ್ಗತಿ ಸದ್ಗುರುಗತಿಪಡೆವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಶರಣು ಹೊಕ್ಕೆನು ಪೊರೆಯಬೇಕೆನ್ನ ದೊರೆಯೆ ಪ. ವರ ತಂದೆ ಮುದ್ದುಮೋಹನ ದಾಸಾರ್ಯರೆ ಪರಿಪರಿಯಿಂದ ಭಕ್ತರನು ಪೊರೆಯುವರೆ ಪರಮಾರ್ಥ ಚಂದ್ರೋದಯದ ಪ್ರಕಾಶಕರೆ ಪರಿಮಳ ಸುನಾಮದಲಿ ಸರ್ವತ್ರವ್ಯಾಪಕರೆ 1 ತರತರದ ಸುಗುಣ ಮಣಿಮಾಲೆಯಿಂ ಶೋಭಿಪರೆ ವರಶಿಷ್ಯ ರತ್ನಪದಕಗಳಿಂದಲೊಪ್ಪಿಹರೆ ಸುರರಗಣ ಮಧ್ಯದಲಿ ಪರಿಶೋಭಿಸುತಲಿಹರೆ ಮೊರೆಹೊಕ್ಕವರ ಕಾಯ್ವ ಪರಮ ಕರುಣಾಕರರೆ 2 ಕನಸಿನಲಿ ಮನಸಿನಲಿ ಕಳವಳವ ಹರಿಸುವರೆ ಮನಸಿಜಪಿತನನ್ನು ಮನದಿ ನೆನೆಯುವರೆ ಇನಕೋಟಿತೇಜ ಶ್ರೀ ಶ್ರೀನಿವಾಸನ ಕೃಪೆಗೆ ಅನುಮಾನವಿಲ್ಲದೆಲೆ ಅರ್ಹತೆಯ ಕೊಡಿಸುವರೆ 3 ಭಕ್ತರನು ಪೊರೆಯುವ ಕಾರುಣ್ಯನಿಧಿ ಎಂದು ಪಾದ ನಂಬಿರುವೆ ಭಕ್ತವತ್ಸಲ ಶೇಷಶಯನನಾ ಸೇವೆಯನು ನಿತ್ಯ ಮಾಳ್ಪಂಥ ಸೌಭಾಗ್ಯ ನೀಡುವುದು 4 ಕವಿದಿರುವ ಅಜ್ಞಾನಪರೆಯನ್ನು ಛೇದಿಸುತ ಸವಿಯಾದ ಹರಿಯ ನಾಮಾಮೃತ ಉಣಿಸಿ ಪವನನಂತರ್ಯಮಿ ಗೋಪಾಲಕೃಷ್ಣವಿಠ್ಠಲ ತವಕದಿಂದಲಿ ಪೊಳೆವ ಸುಜ್ಞಾನ ನೀಡುವುದು 5
--------------
ಅಂಬಾಬಾಯಿ
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಗುರುರಾಜ ನಿನ್ನ ಹೊರತು ಪೊರೆವ ಧೊರೆಗಳ ಕಾಣೆ | ಶರಣಜನರಿಷ್ಟವನೆ ಸುರತರುವಿನಂತೀವೆ ಪ ತರಳಪ್ರಹ್ಲಾದನಾಗಿರಲು ವರಭಕುತಿಯಿಂ | ನರಹರಿಯ ಮೆಚ್ಚಿಸಿದೆ ಪರಮಕರುಣಾಸಿಂಧೊ 1 ವ್ಯಾಸಮುನಿಯು ನೀನೆ ವಾಸುದೇವನ ಭಜಿಸಿ | ಲೇಸಾದ ಚಂದ್ರಿಕೆಯ ಭೂಸುರರಿಗರುಹಿದೆ 2 ಶ್ರೀರಾಮಚಂದ್ರಪದಸರಸೀರುಹಾಭೃಂಗ | ಶ್ರೀ ರಾಘವೇಂದ್ರಯತಿ ಸುರುಚಿರಕೃಪಾಪಾಂಗ 3 ನರಹರಿ ಸಿರಿರಾಮ ಮುರವೈರಿ ಮುನಿವ್ಯಾಸ | ಇರುತಿಹರು ನಿನ್ನೊಳು ಧರೆಯ ಪಾಲಿಸೆ ಮುದದಿ 4 ಕರೆದಲ್ಲಿ ಬರುವೆನೆಂದೊರೆದ ವಚನವ ಸಲಿಸೆ | ಭರದಿ ನಾರಾಯಣಪುರಕೈದಿದಿಯೊ ಮುದದಿ 5 ಭೀಮಸೇತ್ವ್ಯಾಖ್ಯ ಮಠ ಸೋಮರಘುತಿಲಕರಿಂ | ದೇ ಮಹಾಸೇವೆಯ ಕೈಗೊಂಡೆಯೋ ಮುದದಿ 6 ದೋಷದೂರನೆ ಪ್ರಭುವೆ ಆಶೆಯಿಂ ಸೇವಿಪರ | ಕ್ಲೇಶವೆಲ್ಲವನಳಿದು ಶ್ರೀಶಕೇಶವನೊಲಿಸೊ 7
--------------
ಶ್ರೀಶ ಕೇಶವದಾಸರು
ಗುರುರಾಜ ನುತ ವಿಠಲ | ಪೊರೆಯ ಬೇಕಿವಳಾ ಪ ಕರುಣ ಪಯೋ ನಿಧಿಯೆ | ಶರಣು ಬಂದವಳಾ ಅ.ಪ. ಮರುತ ಮತದಲ್ಲಿದ್ದು ಗುರು ಹಿರಿಯರಾ ಸೇವೆನಿರುತ ಗೈಯುವ ಮನವ | ಉಳ್ಳವಳೊ ಈಕೇಕರುಣಾ ಪಯೋ ನಿಧಿಯೇ | ಮರುತಾಂತರಾತ್ಮಕನೆಕರಪಿಡಿದು ಪೊರೆಯೋ | ಪ್ರಾರ್ಥಿಸುವೆ ಹರಿಯೇ 1 ಕಂಸಾರಿ ತವನಾಮ | ಅಮೃತವನೆ ಉಣಿಸುತ್ತಸಂಸಾರ ಶರಧಿಗೆ | ಪ್ಲವವೆನಿಸೊ ದೇವಸಂಶಯವು ರಹಿತಾಗಿ | ಹರಿಯೆ ಸರ್ವೋತ್ತಮನೆಶಂಸನದಿ ಮತಿಕೊಟ್ಟು | ಕಾಯೊ ಕಮಲಾಕ್ಷ 2 ಕೋವಿದೋತ್ತಂಸ ಹರಿ | ಗೋವರ್ಧನೋದ್ಧರನೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾನೀವೊಲಿಯದಿನ್ನಿಲ್ಲ | ತ್ರೈಭುವನದಿ ದೇವಭಾವುಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು ವರ ಮಂತ್ರಾಲಯದೊಳಿರುವುದುಚಿತವೇನೋ ಪ ಬಡ ಭಕ್ತನನು ಕಷ್ಟ ಕಡಲೊಳಿರಿಸಿ ತುಂಗಾ ದಡದಿನಿಂತೆನ್ನ ಕೈ ಬಿಡುವುದುಚಿತವೇನೋ 1 ಅಡಿ ಸೇವಕನೊಳಿಂಥಾ ಕಡು ಕೋಪವ್ಯಾತಕೋ ನುಡಿ ನುಡಿಗೆನ್ನ ತಪ್ಪು ಹಿಡಿದು ಪೋಗುವರೇನೊ 2 ಒಡೆಯ ಶ್ರೀ ಹನುಮೇಶವಿಠಲನ ದಾಸನೇ ಬಡವನಿರುವೆನೆಂದು ನೋಡದಿರುವರೇನೊ 3
--------------
ಹನುಮೇಶವಿಠಲ