ಒಟ್ಟು 5051 ಕಡೆಗಳಲ್ಲಿ , 129 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾನುರಾಗ ಯತಮಾನಸ ಮೇರೆ ಪ ಹೃದಯಪರಿಪದ ಮಿಳನಾರೆ 1 ಜಪಕಾಮುಕರೋರೆ2 ದೇಹಗೇಹಧನ ಮೋಹನ ಲೇರೆ ಶ್ರೀಹರಿ ಸ್ಮರಣ ಕಾಂಹಿ ಚಲೇರೆ3 ಪುತ್ರ ಮಿತ್ರ ಬಹು ಶತ್ರುಕುಮಾರವೃತ್ರ ವೈರೀಸುತ ಮಿತ್ರನಗಾರೆ4 ನರಸಿಂಹ ಭಜೊರೆ 5 ಕಮಲಾಕ್ಷಕುಲಾರೆ 6 ವಾಸುದೇವ ನಿಜ ದಾಸಕು ಹೊರೆ 7 ಚಿದ್ರೂಪಕ ಹೋರೆ 8 ಪರಮ ಪುರುಷ ನರಹರಿ ಕರುಣೀರೆ- ವರದವಿಠಲ ಕರಿವರ ಧಣೀರೆ 9
--------------
ಸರಗೂರು ವೆಂಕಟವರದಾರ್ಯರು
ಸಾಮಗಾಯನ ಲೋಲ ವಿಠ್ಠಲನೆ ಸಲಹೋ ಪ ಕಾಮಿತಾರ್ಥಗಳಿವಗೆ ಪ್ರೇಮದಲಿ ಕೊಡುತಲಿಶ್ರೀ ಮನೋಹರ ಹರಿಯೆ ಕಾಪಾಡೊ ಇವನಾ ಅ.ಪ. ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನನಿರುತ ಕರುಣಿಸಿ ಅರಿಪು | ಮೂರೆರಡು ಭೇದಾಹರುಷ ಕ್ಷೇಶಾದಿಗಳು | ಹರಿಯಧೀನಗಳೆಂಬಅರಿವಿನಿಂದಲಿ ದ್ವಂದ್ವ | ಸಹನೆಗಳನೀಯೊ 1 ಲೌಕಿಕದಿ ನಿನ್ನಾನೇಕ ಬಗೆ ವ್ಯಾಪ್ತಿಗಳ ತೋಕನಿಗೆ ತಿಳಿಸುತ್ತ ಸಾಕಬೇಕಿವನಾಪ್ರಾಕ್ಕು ಕರ್ಮವ ಕಳೆದು ಗೋಕುಲಾನಂದ ಹರಿನೀಕೊಡು ಸತ್ಸಂಗ | ಏಕಾಂತಿಕರ ಪ್ರಿಯನೆ 2 ಎಲ್ಲ ಬಲ್ಲವಗಿನ್ನು ಸೊಲ್ಲುಂಟೆ ನಾಪೇಳಿಮಲ್ಲ ಮರ್ಧನ ದೇವ | ಪ್ರಹ್ಲಾದ ವರದಾಕ್ಷುಲ್ಲಕನ ಕರಪಿಡಿದು | ಬಲ್ಲಿದನ ಮಾಡೆಂದುಚೆಲ್ವ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ಸಾಮಜಾದ್ರಿ ನಿವಾಸ | ಮಮ ಹೃದಯ | ಸದ್ದಾಮದಲಿ ಆವಾಸ |ಸೌಮನಸ್ಯವ ಕಾಮಿಸುವೆ ಮನಕೀಶ | ನಾ ನಿಮ್ಮ ದಾಸಾ ಪ ಶ್ರೀ ಮನೋಹರನಂಘ್ರಿ ಕಮಲವ | ಯಾಮ ಯಾಮಕೆ ಭಜಿಸಿ ಹಿಗ್ಗುವ ಆಮಹಾತ್ಮರ ಚರಣ ರಜವನು | ಕಾಮಿಸುವೆ ಕರುಣಾಳು ಗುರುವರ ಅ.ಪ. ಘಾಸಿ ಪಡುತಲಿ ಬಂದ | ಪಾಪಾತ್ಮಯೆನ್ನಯಕ್ಲೇಶ ಹರಿಸಲು ಛಂದ | ಅಂಕಿತವನುಪದೇಷಿಸಿದೆ ನೀ ನಲವಿಂದ | ಕರುಣಾಳು ನಿನ್ನಯದಾಸ ಜನಗಳ ವೃಂದ | ಸೇವೆ ಕೊಡು ಆನಂದ || ವಿಷಯ ದಾಸೆಯ ಹರಿಸೊ ಗುರುವರ | ಬಿಸುರುಹಾಂಬಕನಂಘ್ರಿ ಕಮಲವ ಒಸೆದು ಸ್ಮರಿಸುವ ಮತಿಯನಿತ್ತು | ಎಸೆವ ಹರಿಯಪರೋಕ್ಷ ಪಾಲಿಸೊ 1 ವತ್ಸರ ಸುವಿಕ್ರಮವರ ನವಮಿ ಮಧ್ಯದಿನಂದೂ | ನಿಶ್ಚಯಿಸಿ ಮನದಲಿನರನಟನೆ ಉಪರಮಿಪೆನೆಂದೂ | ತನುವ ತ್ಯಜಿಸಿದೆ ಅಂದೂ ||ಸಾರ ಭಕುತರು ಸೇವೆ ಗೈಯಲು | ಕರಿಗಿರೀಯಲಿ ಒಂದು ಅಂಶದಿವರವ ಪಾಲಿಪುದಕ್ಕೆ ನೆಲೆಸಿದೆ | ಧೀರ ಕರುಣಾಪಾರ ಗುರುವೇ 2 ಚಾರು ಚರಣವ ತೋರು ಗುರುವೇ 3
--------------
ಗುರುಗೋವಿಂದವಿಠಲರು
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸಾರ ಬಂದೆ ಪ ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ ಅ ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭವಲ್ಲದ ದಿವಸದೊಳಿರಾ ನೋಡಿಇಲ್ಲದ ಬಯಲ ನಿಂದೆಯ ಪೊತ್ತು ಶುಕಾಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದುಮಡದಿಗೆ ರತ್ನ ತಂದುದರಿಂದ 1 ಮಡದಿಯ ಮನೆಯ ಅರ್ಭಕನಾಗಿ ಬಲುಗಡಿಯ ದಾನವನ ಕೊಂದನ ಸೂನುಬಡನಡುವಿನ ಠಾವಿಗೆ ಸಿಲ್ಕಿ ಸುಖಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ 2 ಮೂಲ ವೃಕ್ಷದಾಲಾರ ಮುಂದೆಯ ದಾನವರಿರ್ದಾಲಯ ದಹಿಪನೆಂಬುದಯ್ಯನಬಲಮಾಡಿ ಬಲಗೆ ಇಂದುರುಹಿದೆ ಕಾಗಿನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನಪ್ರಹ್ಲಾದಗೆ ಪ್ರಸನ್ನವಾದುದರಿಂದ 3
--------------
ಕನಕದಾಸ
ಸಾರಿ ಭಜಿಸಿರೋ | ವಿಜಯ ಗುರುಗಳೆಂಬರಾ ಪ ಚಾರು | ಚರಣ ತೊರ್ಪರಾ ಅ.ಪ. ಸತ್ರಯಾಗದೀ ಗಂಗೆ | ಕ್ಷೇತ್ರ ತೀರದಿಭ್ರಾತೃವರ್ಗವೂ ಅವರ ತುತಿಸಿ ಕಳುಹಲೂ 1 ಗಿರಿಜೆ ರಮಣನಾ ಪುರವ | ಸಾರಿ ಬೇಗನೇಮಾರ ಕೇಳಿಯಾ ನೋಡಿ | ಗಿರಿಯ ತ್ಯಜಿಸಿದಾ 2 ಚತುರವದನನಾ ದಿವ್ಯ | ಸತ್ಯಲೋಕವಾಚತುರ ಸೇರುತಾ ಅವನ | ಸ್ತುತಿಯ ಮಾಡಿದ 3 ವೇದ ಪಠಿಸುತಾ | ಬಧಿರನಂತಿರೇವದಗಿ ಸಾಗಿದಾ | ನಾರ್ದ ದೂತನೂ4 ಹರಿಯೆ ಕಾಣುವೆ ಎಂದು | ತ್ವರದಿ ಬಂದನೂಹರಿಯ ಮಾಯವಾ ಜಗದಿ | ಯಾರು ಅರಿವರು 5 ನಿದ್ರೆ ಬಂದವಾ | ನಂತೆ ಮಲಗಿಹಾಭದ್ರ ಮೂರ್ತಿಯಾ ತಾನು ಕಾಲಿಲೊದ್ದನು 6 ಪಾದ ಒತ್ತುತಾಮೋದ ಬಡಿಸಿದಾ ತಾನು | ಸಾಧು ಮುನಿಯನು 7 ಹರಿಯೆ ಪರನೆಲ್ಲಾ | ಹರಿಯ ಸರ್ವಜ್ಞಾಹರಿಗಿನ್ನಿಲ್ಲವೋ | ಸಮರು ಅಧಿಕರವಾ 8 ಎಂದು ಸ್ಥಾಪಿಸೀ | ತಾನು ಬಂದು ನಿಂತನುಛಂದದಿಂದಲಿ ಯಜ್ಞ | ಸಾಂಗಗೈಸಿದಾ 9 ಪದಸುಳ್ಹಾದಿಯಾ | ರಚಿಸಿ ಮೋದದಿಂದಲೀವೇದ ಸಾರವಾ | ಜನಕೆ ಬೋಧಿಸೀರುವಾ 10 ಪವನನಯ್ಯನಾ ಗುರು | ಗೋವಿಂದ ವಿಠಲನಾಸ್ತವನ ಮಾಡುತ ತಾನು | ಭವವ ಕಳದನಾ 11
--------------
ಗುರುಗೋವಿಂದವಿಠಲರು
ಸಾರಿ ಭಜಿಸಿರೋ ವಾದಿ ರಾಜ ಗುರುಗಳಾಘೋರ ಸಂಕಟದಿಂದಾ ಪಾರು ಮಾಳ್ಪರಾ ಪಭುಜಗುಣಸ್ಥರಾ ಅಜನ ಪದಕೆ ಅರ್ಹರಾಸುಜನವಂದ್ಯರಾ ವಾಜಿವದನ ದಾಸರಾ 1ವಕ್ರತರ್ಕದಾ ವಾದಿ ಸೊಕ್ಕು ಮುರಿದರಾಯುಕ್ತಮಲ್ಲಿಕಾ ರಚಿಸಿ ಮುಕ್ತಿ ತೋರ್ಪರಾ 2ಕುದುರೆ ಮೋರೆಯಾ ದೇವ ಮುದದಿ ಮೆಲುವನುಕಡಲೆ ಹೂರಣಾ ನೀವು ಕೊಡಲು ಅನುದಿನಾ3ಭೂತರಾಜನು ಸೋತ ದಾಸನಾದನುಅತಿ ಮಹತ್ವದಾ ಸೇವೆ ಸತತ ಮಾಳ್ವನು 4ಭಕ್ತಿುಂದಲಿ ಇವರ ಸ್ತುತಿಯ ಮಾಡಲುಭೂಪತಿ'ಠ್ಠಲಾ ಒಲಿದು ವರವಾ ಕೊಡುವನು 5'ಜುೀಂದ್ರರು
--------------
ಭೂಪತಿ ವಿಠಲರು
ಸಾರಿ ಹೇಳಿದೆ ಮೂರು ಬಾರಿ ಮನ ಬಾರದಿದ್ದವರು ದೂರಿದರೆನ್ನ ದೂರಿಪ ನರದೇಹವಿದು ನಂಬಬೇಡಿ ಭವ ಶರಧಿಯ ದಾಟಲುಪಾಯವ ಮಾಡಿ ಎರವಿನ ತನುವನು ನೋಡಿ ಶ್ರೀ ಗುರುವಿನ ಚರಣಕ್ಕೆ ಶೆರಗೊಡ್ಡಿ ಬೇಡಿ 1 ಗುರುವಿನಿಂದಧಿಕ ದೈವವಿಲ್ಲಾ ಇದ ನರಿಯದೆ ಕೆಡುವರು ಪ್ರಾಣಿಗಳೆಲ್ಲಾ ಅರಿತ ಸುಜ್ಞಾನಿಯೆ ಬಲ್ಲಾ ಉಪ ಕರಿಸಿ ಪೇಳುವೆನು ಕೇಳಿರೋ ಎನ್ನ ಸೊಲ್ಲಾ 2 ಸರಸಿಜೋದ್ಭವನ ಕೈಮಾಟಾ ಚೆಲ್ವ ಗಿರಿಜಾರಮಣನ ಸೂತ್ರದ ಗೊಂಬೆಯಾಟಾ ಬರಿದೆ ವಿಷ್ಣು ಮಾಯಾಕಾಟಾ ಶ್ರೀ ಗುರುವಿಮಲಾನಂದ ಹೇಳಿದ ಪಾಠಾ 3
--------------
ಭಟಕಳ ಅಪ್ಪಯ್ಯ
ಸಾರಿದ ಡಂಗುರ ಯಮನು ಪ ಅಘ ನಾರೇರ ಎಳತಂದು ನರಕದಲ್ಲಿಡಿರೆಂದು ಅ.ಪ. ಹೊತ್ತಾರೆ ಎದ್ದು ಪತಿಗೆ ಎರಗದವಳ ಮೃತ್ತಿಕೆ ಶೌಚ ಮಾಡದೆ ಇಪ್ಪಳಾ ಬೆತ್ತಲೆ ಕುಳಿತು ಮೈದೊಳೆವಳ ನಾದಿನಿ ಅತ್ತೆ ಮಾವನ ಬೈವವಳೆಳೆದು ತನ್ನೀರೆಂದು 1 ತಿಲಕಾಯುಧವ ಬಿಟ್ಟು ಕುಂಕುಮವಿಡುವಳ ಬೆಳಗಾದ ಕಾಲಕ್ಕೂ ಮಲಗಿಪ್ಪಳ ಮಲಿನ ವಸ್ತ್ರದಲಿ ಪತಿಯ ಬಳಿಗೆ ಪೋಗುವಳ ಕಲಹಕಾರಿಯ ಹಿಡಿದೆಳೆದು ತನ್ನಿರಿಯೆಂದು 2 ಉತ್ತಮ ಗುರುಹಿರಿಯರನು ನಿಂದಿಸುವಳ ಪೆತ್ತ ಮಕ್ಕಳ ಮಾರಿ ಬದುಕುವಳ ಪ್ರತ್ಯೇಕ ಶಯ್ಯದಿ ಮಲಗಿ ಇಪ್ಪಳ ಪಿಡಿ ದೆತ್ತ ಎಳೆದು ತಂದು ನರಕದಲ್ಲಿಡಿರೆಂದು 3 ಜಲ ಜಕ್ಕಿ ಸಾಳಿ ಕಂಬಳಿ ಬೋಳಿ ಬಕ್ಕಿ ಗೊಂ ಡಳಿ ಮೊದಲಾದವು ದೈವವೆಂದು ತಿಳಿದು ಪಿಶಾಚಿ ಎಂಜಲ ಉಂಡು ಹಿಗ್ಗುವ ಲಲನೇರಾ ಸೆಳೆದು ತನ್ನಿರೋ ಎಂದು 4 ನಾಗೇಂದ್ರ ಶಯನನ ದಿನದುಪವಾಸದ ಜಾಗರ ಮಾಡದೆ ಮಲಗಿಪ್ಪಳಾ ಭಾಗವತ ಸಚ್ಛಾಸ್ತ್ರ ಕೇಳದೆ ಉನ್ಮತ್ತ ಳಾಗಿರುವಳ ಎಳೆದು ತನ್ನಿರೆಂದು 5 ಗಂಡ ನಿರ್ಧನಿಕನೆಂದಪಮಾನ ಮಾಳ್ಪಳ ಉಂಡ ಶೇಷಾನ್ನುವನುಣಿಸುವಳಾ ಕೊಂಡೆ ಮಾತುಗಳಾಡಿ ಕಳವಳಗೊಳಿಪಳ ಮಂಡೆಗೊದಲು ಹಿಡಿದು ಎಳೆದು ತನ್ನಿರಿ ಎಂದು6 ಉಡಲಿಲ್ಲ ಉಣಲಿಲ್ಲ ಇಡಲಿಲ್ಲ ತೊಡಲಿಲ್ಲ ಸುಡಲಿಗಂಡನ ಒಗೆತನವೆನ್ನುತಾ ಹಡೆದವರನು ನುಡಿನುಡಿಗೆ ಬಯ್ಯುತಿಪ್ಪಂಥ ಕಡು ಪಾಪಿಗಳ ಹೆಡ ಮುಡಿಗಟ್ಟಿ ತನ್ನಿರಿ ಎಂದು7 ಸಾಲೆಡೆಯಲಿ ಭೇದ ಮಾಡಿ ಬಡಿಸುವಳ ನೀಲಾಂಬರವನುಟ್ಟು ಮಡಿಯೆಂಬಳ ಬಾಲಕರ ಬಡಿದಳಿಸುತಿಪ್ಪಳ ಹಿಂ ಗಾಲ ತೊಳೆಯದವಳ ಎಳೆದು ತನ್ನಿರೋ ಎಂದು8 ಪತಿಗೆ ಬೇಕಾದವರ ಅಪಮಾನ ಮಾಳ್ಪಳ ಮೃತವತ್ಸ ಗೋವಿನ ಪಾಲುಂಬಳಾ ಹುತವಾದ ಅಗ್ನಿ ತೊಳೆದು ನಂದಿಸುವಳ ಮತಿಗೇಡಿಯ ಬಿಡದೆಳೆದು ತನ್ನಿರೋ ಎಂದು 9 ಒಲಿವ ಔಷಧ ಮಾಡಿ ಪತಿಯ ಬಳಲಿಸುವಳ ಮಲಮಕ್ಕಳೊಳು ಮತ್ಸರಿಸುತಿಪ್ಪಳಾ ಕಳವಿಲಿ ಕಾಂತನ ಧನವ ವಂಚಿಸುವಳ ಗಳಕೆ ಪಾಶವ ಕಟ್ಟ ಎಳೆದು ತನ್ನಿರೋ ಎಂದು 10 ಮಿಥ್ಯಾವಾದಿಯ ಕೂಡ ಸ್ನೇಹ ಮಾಳ್ಪಳಾ ವೃತ್ತಿಲಿ ಬದುಕುವಳೆಳೆದು ತನ್ನಿರೋ ಎಂದು 11 ಲಶನು ವೃಂತಕಾದಿಗಳನು ಭಕ್ಷಿಸುವಳಾ ಸೊಸೆಯರೊಡನೆ ಮತ್ಸರಿಸುತಿಪ್ಪಳಾ ಹಸಿದು ಬಂದವರಿಗೆ ಅಶನವಿಲ್ಲೆಂಬಳಾ ಉಸಿರು ಬಿಡದಂತೆ ಎಳೆದು ತನ್ನಿರೊ ಎಂದು 12 ತುಲಸಿ ವೃಂದಾವನಕಭಿನಮಿಸದವಳ ಜಲವ ಸೋಸದೆ ಪಾನವ ಮಾಳ್ಪಳಾ ಫಲ ಧಾನ್ಯಾದಿಗಳ ನೋಡದೆ ಪಾಕ ಮಾಳ್ಪಳ ಮಳೆ ಗಾಳಿ ನಿಂದಿಪಳ ಎಳೆದು ತನ್ನಿರೋ ಎಂದ 13 ಮೀಸಲು ಮಡಿ ಎನ್ನದೆ ಭಕ್ಷಿಸುವಳ ಕೇಶಿಯೊಡನೆ ಗೆಳೆತನ ಮಾಳ್ಪಳ ದಾಸೆರಿಂದಲಿ ಪಾಕ ಪಾತ್ರೆ ಮುಟ್ಟಿಸುವಳ ನಾಸಿಕ ಬಂಧಿಸಿ ಎಳೆ ತನ್ನಿರೋ 14 ಬಾಲಕರನು ತೊಟ್ಟ್ಟಿಲೊಳಿಟ್ಟು ತೂಗುತ ಪಾಲೆರೆವುತ ಬೀಸುತ ಕಟ್ಟುತಾ ಆಲಯದೊಳು ಕೆಲಸಗಳ ಮಾಡುತ ಲಕ್ಷ್ಮೀ ಲೋಲನ ಗುಣವ ಪಾಡುವರ ಮುಟ್ಟದಿರೆಂದು15 ಅರಿಷಣ ಕುಂಕುಮ ಪುಷ್ಟಾಂಜನ ವಸ್ತ್ರಾ ಸರಸವಾಡುತ ಸುಖ ಹರಿಗೆ ಅರ್ಪಿತವೆಂಬ ಹರಿದ್ದೇರಿದೆಡೆಗೆ ಕೈಮುಗಿದು ಬನ್ನಿರಿ ಎಂದು16 ಅಗಣಿತ ಮಹಿಮ ಶ್ರೀ ಜಗನ್ನಾಥ ವಿಠಲನ್ನ ಬಗೆಬಗೆಯಿಂದ ಪಾಡುತಲೀ ಹೊಗಳುವ ದಾಸರ ಬಗೆಯ ನೇಮಿಸಿ ಕಾಯ್ವ ಸುಗುಣೇರಿದ್ದೆಡೆಗೆ ಕೈಮುಗಿದು ಬನ್ನಿರೆಂದು 17
--------------
ಜಗನ್ನಾಥದಾಸರು
ಸಾರಿದ ಭಕ್ತಸಂಸಾರಿ ಮಾಲಿಂಗ ಕ್ಷೀರ ಗ್ರಾಮದಿ ನಿಂತ ಧೀರ ಮಾಲಿಂಗ ಪ ಹರ ಹರ ಮಹಾದೇವ ಶಿವಮಾಲಿಂಗ ವರ ಶಂಭೊ ಗಿರಿವಾಸ ಶಂಕರ ಮಾಲಿಂಗ ಉರಗ ಭೂಷಣ ಗಂಗಾಧರನೆ ಮಾಲಿಂಗ ಪರದೈವ ಶಶಿಮೌಳಿ ಗರುವ ಮಾಲಿಂಗ 1 ಖಂಡಲಪತಿಯೆ ದೋರ್ದಂಡ ಮಾಲಿಂಗ ತಂಡದ ಸುರರೊಳ್ ನಂಜುಂಡ ಮಾಲಿಂಗ ರುಂಡಮಾಲೆಯ ಧರಿಸಿಕೊಂಡ ಮಾಲಿಂಗ ಕೆಂಡಾಕ್ಷತೇಜ ಮಾರ್ತಾಂಡ ಮಾಲಿಂಗ 2 ಮಾರಹರನೆ ಶ್ರುತಿಸಾರ ಮಾಲಿಂಗ ಧೀರ ಬಾಣನ ದ್ವಾರ ಸಾರಿ ಮಾಲಿಂಗ ಮೂರುಪುರ ವೀರ ಸಂಹಾರಿ ಮಾಲಿಂಗ ಘೋರ ಸಂಸಾರ ಭವದೂರ ಮಾಲಿಂಗ 3 ಬ್ರಹ್ಮಾದಿ ಸುರವಂದ್ಯ ಹರ್ಮಿ ಮಾಲಿಂಗ ನಿರ್ಮಲ ರೂಪಕ ಧರ್ಮಿ ಮಾಲಿಂಗ ಕರ್ಮಬಂಧದ ನರವರ್ಮಿ ಮಾಲಿಂಗ ಉರ್ವಿಯೊಳು ನೀ ಬಹಳ ಪೆರ್ಮಿ ಮಾಲಿಂಗ 4 ನೀಲಕಂಠನೆ ನಿಗಮಶೀಲ ಮಾಲಿಂಗ ಪಾಲ ಕರಶೂಲ ಕಪಾಲಿ ಮಾಲಿಂಗ ಕಾಲ ಕಲ್ಪಾಂತಕ ಜಾಲ ಮಾಲಿಂಗ ಲೋಲಾಸ್ಥಿಮಾಲ ಸುರಮೂಲ ಮಾಲಿಂಗ 5 ಪ್ರಣವ ರೂಪಕ ಪಾರ್ವತಿ ಮಾಲಿಂಗ ತ್ರಿಣಯ ಗಣಸೇವಪರ ಧಣುರೆ ಮಾಲಿಂಗ ಮಣಿ ಕರ್ಣಾಭರಣ ಮಾಲಿಂಗ ಅಣುಮಹಾರೂಪ ಗುಣನಿಧಿಯೆ ಮಾಲಿಂಗ 6 ಪಂಥ ಬೇಡೆನ್ನೊಳು ನಿಶ್ಚಿಂತ ಮಾಲಿಂಗ ಸಂತತ ಸಲಹೆನ್ನ ಕಾಂತ ಮಾಲಿಂಗ ಅಂತರಾತ್ಮಕನಾದ ಶಾಂತ ಮಾಲಿಂಗ ಚಿಂತಿತಾರ್ಥವ ತೋರುವಂಥ ಮಾಲಿಂಗ 7 ಬೇಡಿದ ವರಗಳ ನೀಡೊ ಮಾಲಿಂಗ ಮಾಡಿದ ಸೇವೆಯ ನೋಡೊ ಮಾಲಿಂಗ ಜೋಡಾಗಿ ನಿನ್ನೊಳು ಕೂಡೊ ಮಾಲಿಂಗ 8 ಭೂಮಿಗೆ ವರಾಹತಿಮ್ಮಪ್ಪನಂತೆ ಗ್ರಾಮ ಮಂದಿರದೊಳು ನೆಲಸಿಹನಂತೆ ಪ್ರೇಮದಿ ಅದನೆಲ್ಲ ಕಡಿದುಕೊಡುವಂತೆ ಈ ಮಹಾ ಮಾಲಿಂಗ ಸ್ವಾಮಿ ದಯವಂತೆ 9
--------------
ವರಹತಿಮ್ಮಪ್ಪ
ಸಾರಿದವರನು ಹೊÉರೆವ ಧೀರನಿವನಾgನೀರೆ ನಂಬು ಹಯವದನನುದಾರ ಶ್ರೀಮಂತೂರ ಹರಿಯ ಪ. ವಜ್ರ ವಧುಗಳಲ್ಲಿವಾಕ್ಯಕೆ ತನ್ನ ನಿಜವ ತೋರನೆ1 ಅಸುರ ಭಟರ ನಿಶಿತ ಶರಕೆಪೆಸರುಗೊಳ್ಳದ ಗೋಪಸತಿಯರಶಶಿಮುಖಿಯರ ನಖದ ಕೊನೆಗೆವಶವ ಮಾಡನೆ ರಸಿಕರರಸ 2 ಮಲ್ಲರ ಬಲುಭುಜದ ಕುಶಲದಲ್ಲಿ ಸಿಲುಕದದ್ಭುತಮಹಿಮಚೆಲ್ವ ಗೋಪಿಯರಪ್ಪಲು ಕರ-ಪಲ್ಲವದೊಳಾದುದಿಲ್ಲವೆ 3
--------------
ವಾದಿರಾಜ
ಸಾರಿದೆನೊ ನಿನ್ನ ವೆಂಕಟರನ್ನ ಪ. ನೀರಜನಯನನೆ ನಿರ್ಮಲಗುಣಪೂರ್ಣ ಅ.ಪ. ಅನಾಥನು ನಾನು ಎನಗೆ ಬಂಧು ನೀನುನಿನ್ನವನೆಂದು ನೋಡೊ ನೀನಾಗಿ ದಯಮಾಡೊ 1 ಎನ್ನ ಕುಂದುಗಳನ್ನು ಎಣಿಸಲಾಗದೊ ದೇವಪನ್ನಗಾದ್ರಿವಾಸ ನೀನೆ ನಿರ್ದೋಷ 2 ದೇಶದೇಶದವರ ಪೊರೆವಂತೆ ಪೊರೆಯೆನ್ನಶೇಷಾಚಲಘನ್ನ ಶ್ರೀಶ ಹಯವದನ 3
--------------
ವಾದಿರಾಜ
ಸಾವಧಾನವಾಗಿ ನೋಡಿ ನಿಜ ಭಾವಬಲಿದು ನೋಡಲಿಕ್ಯದೆ ವಸ್ತು ಸಹಜ ಧ್ರುವ ಹತ್ತಿಲಿದೆ ತಾ ಸರ್ವಕಾಲ ಚಿತ್ತೊಂದೆ ಮಾಡಿ ನೋಡು ಗುರುಪಾದ ಕಮಲ ನೆತ್ತಿಯೊಳಗದೆ ನಿಶ್ಚಲ ಉತ್ತಮೋತ್ತವಾದ ಸದ್ವಸ್ತು ಅನುಕೂಲ 1 ಅತ್ತಿತ್ತಲೆ ನೋಡಲಾಗದು ತುಂಬಿ ತುಳುಕುವದು ಸುತ್ತೆ ಸೂಸ್ಯಾಡುತಲಿಹುದು ಮತ್ತೆ ಉನ್ಮನವಾಗಿ ತನ್ನೊಳು ತಾ ನೋಡುವದು2 ಸಾರವೆ ಅದೆ ಸತ್ಯನೋಡಿ ಮಿಥ್ಯ ಭ್ರಾಂತನೆ ಈಡಾಡಿ ಗುರುಕೃಪೆಯಿಂದ ನಿಜಗೂಡಿ ತರಳ ಮಹಿಪತಿ ಹರುಷಗೈದ ಬೆರೆದಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಾತ ನಾನಲ್ಲಾ ಸಾವು ಮೊದಲೆನಗಿಲ್ಲಾ ಯೋಗಿ ತಾ ಬಲ್ಲಾ ಪ ಧರೆಯೆನಿಸಿ ದೊರೆಯಾಜÉ್ಞಯೊಳಾಳುತಿಹೆ ನಾನು ವರಮಂತ್ರಿಯಾಗಿ ವರ್ತಿಸುವವನೆ ನಾನು ಕರಣಿಕರ ತೆರದಿ ಲೆಕ್ಕವ ನೋಡುತಿಹೆ ನಾನು ಪರಿವಾರವಾಗಿ ಓಲೈಸುವವನೆ ನಾನು 1 ವಾಹನ ಹೊರುವಾತ ನಾನು ಹೊತ್ತಂತಿರುವೆ ನಾನು ಹರಿನಾಮ ಹರನಾನು ನರನಾನು ಸರ್ವವೀ ಪರಿಯೊಳಗೆ ಮೆರೆದು ವಿಸ್ತರಿಪೆ ನಾನು 2 ಅಣುರೇಣು ತೃಣಕಾಷ್ಠ ಭರಿತನಾಗಿಹೆ ನಾನು ಗಣನೆಯಿಲ್ಲದ ಗುಣವ ತೋರ್ಪೆ ನಾನು ಉಣಲಿಕ್ಕುವವ ನಾನು ಉಂಡು ತೃಪ್ತಿಪೆ ನಾನು ರಣನಾನು ರಣವ ಗೆಲುವಾತ ನಾನು 3 ಭೂಮಿಯಾಗಿಹೆ ನಾನು ಬೆಳೆವ ಬೆಳೆಯೇ ನಾನು ಸೋಮ ಸೂರ್ಯಾಗ್ನಿ ವಾಯುಗಳೆ ನಾನು ನಾಮರೂಪಾತೀತ ವಸ್ತುವಾಗಿಹೆ ನಾನು ಕಾಮಿನಿಯರಾಗಿ ಕಾಮಿಸುವವನೆ ನಾನು 4 ಒಲಿವಾತನೇ ನಾನು ಒಲಿದರಗಲೆ ನಾನು ಕೊಲಿಸಿಕೊಂಬುವೆ ನಾನು ಕೊಲುವಾತ ನಾನು ಸುಲಭದಿಂದಲಿ ಜ್ಞಾನ ಫಲವಿಕ್ಕುವವ ನಾನು ಚೆಲುವ ವಿಮಲಾನಂದ ಗುರುರಾಯ ನಾನು 5
--------------
ಭಟಕಳ ಅಪ್ಪಯ್ಯ
ಸಿಟ್ಟು ಮಾಡುವುದೆಂದಿಗು ಸಲ್ಲ ಪೂರ್ಣ ಸಿರಿನಲ್ಲ ಪ. ಮೋಹ ಪಾಶ ಮಿಕ್ಕು ಬಿಗಿದಿಹುದು ರಿಪು ವ್ಯೂಹ ಸುತ್ತಮುತ್ತ ನೆಗದಿಹುದು ದೇಹದಿ ದಿನದಿನ ಬಲಕುಂದಿ ಬಂತು ಚಿ- ದ್ದೇಹ ನೀನೊಲಿವ ಸನ್ನಹಗೊಳ್ವದೆಂತೊ 1 ಒಂದು ಸತ್ಕರ್ಮ ಸಾಧಿಸುವಲ್ಲಿ ಬೇಗ ಪಾತಕ ಝಲ್ಲಿ ಮಂದರಧರ ಮಧುಸೂದನ ಮನದಿ ನೀ ನಿಂದು ಸಾರ್ಥಕ ಮಾಳ್ಪ ತೆರವೆಲ್ಲ ಬಲ್ಲಿ 2 ಹಿಂದೆ ಮುಂದಿನ ಸರ್ವ ಕರ್ಮಫಲ ಎನ್ನ ತಂದೆ ಸ್ವೀಕರಿಸಿ ಮಾಡಿಸು ನಿರ್ಮಲ ಇಂದಿರೇಶ ವೆಂಕಟೇಶನೆ ತ್ವಚ್ಚರ- ಣೆಂದೀವರ ನೆರಳಿರಿಸನುಗಾಲ 3
--------------
ತುಪಾಕಿ ವೆಂಕಟರಮಣಾಚಾರ್ಯ