ಒಟ್ಟು 5751 ಕಡೆಗಳಲ್ಲಿ , 125 ದಾಸರು , 4114 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೆಲ್ಲನೇಳಯ್ಯ ಮಣಿವೆ ಪ ನಲ್ಲುಲಿಗಳಿಂದ ಶುಕಪಿಕಗಳೆಚ್ಚರಿಸುತಿವೆ ಅ.ಪ ಅರುಣ ವರ್ಣದ ಗಗನಯೆಂಬ ಹರಿವಾಣವನು ಕರದಿ ಪಿಡಿದೆತ್ತೆ ನಿನಗಾರತಿಯ ಗೈಯಲು ತರಣಿ ನಿಂದಿರ್ಪ ತುಂಬುರು ನಾರದರು ಮುದದಿ ಪರಮಾತ್ಮ ಸುಪ್ರಭಾತಗಳ ಪೇಳುವರು 1 ಭೃತ್ಯ ದಿಕ್ಪಾಲಕರು ಅತ್ಯಧಿಕ ಭಕ್ತಿಯಿಂ ಕರವೆತ್ತಿ ಮುಗಿದು ನಿತ್ಯಕಾರುಣ್ಯ ಪರಿಪೂರ್ಣ ಸದ್ಭಕ್ತಗಣ ನುತ್ಯ ನೀನೇಳೆಂದು ನುತಿಸುತಿಹರು 2 ನಿನ್ನ ನಾಮವ ಭಜಿಸಿ ಪಾದಪೂಜೆಯ ಗೈದು ನಿನ್ನ ಕಾರುಣ್ಯ ದರ್ಶನಕೆ ಕಾದಿರುವಾ ಪನ್ನರೆಲ್ಲರ್ಗೆ ದರ್ಶನವ ನೀನೀಯಲು ಇನ್ನೇಕೆ ತಡ ಏಳು ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಮೈಹೋಳು ನೀ ಬಂದು ಮೈಯ ಮರಿಯ ಬ್ಯಾಡವೋ ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ಧ್ರುವ ಮಾಯಾ ಮೋಹದೊಳು ಸಿಲ್ಕಿ ದೇಹ್ಯ ಭ್ರಮೆಯಗೊಂಡು ಕಾಯ ಸೌಖ್ಯಕೆ ಬಾಯಿದೆರಿಯಬ್ಯಾಡವೋ 1 ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಪರಿಯಲಿನ್ನು ಕಣ್ಣು ಗೆಟ್ಟು ಕರುಡನಂತೆ ದಣಿಯಬ್ಯಾಡವೋ 2 ನಾನು ನೀನು ಎಂಬ ಭಾವ ಮಹಿಪತಿಗಳೆದು ಭಾನುಕೋಟಿತೇಜನಂಘ್ರಿ ಬೆರೆದು ಮನಕೂಡವೂ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮೊಚ್ಚೆ ಮೊಚ್ಚೆಲಿ ಹೊಡೆಯಿರಿ ಇವನ | ನೆಚ್ಚಿದೆತನುವಿದನೆಂಬುವನ || ಹುಚ್ಚ ನಾಯಿಯೋಲ್‍ಎಚ್ಚರವಿಲ್ಲದೆ | ಅರ್ಚಕ ಜನರನು ಬೊಗಳುವನ ಪ ಪರ ಉಪಕಾರಿಲ್ಲದ | ಮಾನುಷನಾಗಿಬಾಳುವನ || ತಾ ಅಜ್ಞಾನ ಮಾರ್ಗದಿ ನಡೆದು |ಜ್ಞಾನವ ಪರರಿಗೆ ಹೇಳುವನ 1 ಸತಿಸುತರತಿಶಯ ಹಿತವರು ಎನುತಲಿ | ಸತತವು ಅವರೊಳುಮರಗುವನ | ಮಿತಿಯಿಲ್ಲದೆ ಧನಧಾನ್ಯವ ಬೇಡುತ |ಕ್ಷಿತಿಯ ಮೇಲೆ ತಿರುಗುವನ2 ಕರುಣವ ಪಡೆಯದೆ ಭವತಾರಕನ | ನರ ತನುಗಳನುಸ್ತುತಿಸುವನ | ಪರಿಪರಿ ಸಂಸಾರದ ವಿಷಯದಲಿ |ನಿರುತದಿ ಮನವನು ಮಥಿಸುವನ 3
--------------
ಭಾವತರಕರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊದಲಿಂದ ನೀ ಕೆಟ್ಟೆ ಮನುಜ ಪ ಬುಧರಾಡುತಿಹ ನುಡಿಯನು ಕೇಳದೆ ಅ.ಪ ಹಗಲಿರುಳು ದುರ್ವಿಷಯದಲಿ ಬಿದ್ದು ಮಿಗೆ ದುರಿತಗಳ ಗಳಿಸಿ ಮುಂದೆ ಯ- ಮಗೆ ನಿರುತ್ತರನಾದೆಯಲೊ 1 ಹೆಣ್ಣು ಹೊನ್ನು ಮಣ್ಣುಗಳ ಬಯ ಸಿನ್ನು ದುರ್ಜನ ಸೇವೆಯಿಂ ಜನ್ಮವ ನಿರರ್ಥಕವ ಗೈಯುತಾ ರಣ್ಯದೊಳಿಹ ಪಿಶಾಚದೋಲ್ 2 ನಿರತವು ಸಜ್ಜನರಡಿಯ ಕಿಂ- ಕರನೆನಿಸಿ ನೀ ಬಾಳೆಲೊ ಕರುಣದಲಿ ಗುರುರಾಮ ವಿಠ್ಠಲ ಕಾಯುವನು ಸಂದೇಹ ಬಿಡು 3
--------------
ಗುರುರಾಮವಿಠಲ
ಮೊರೆ ಕೇಳು ನೀನೆನ್ನ ಕರುಣದಿ ತವಪಾದ ಪರಮಭಕ್ತಗಗೊಲಿಸದಿರು ದೇವ ಚರಣದಾಸರ ಕಾವ ಸಿರಿಯ ಸಖಜೀವ ಪ ಕ್ಷಿತಿಯೊಳು ಸತಿಸುತರತಿ ಮೋಹರತಿಯೊಳು ಮತಿಶೂನ್ಯನೆನಿಸಧೋಗತಿಗೆಳೆಸದೆ ಪತಿತಪಾವನ ನಿಮ್ಮ ಶ್ರುತಿಭೋದ್ವ್ಯಾಕ್ಯದಭಿ ರತಿಯನೆನ್ನೊಡಲೊಳು ನೆಲೆಸೀಶಾ ಹತಕಂಸ ಸುರತೋಷಾದ್ವಿತಿ ಪಂಚಶಿರ ನಾಶ 1 ವಿಷಯ ವಾಸನದೇಳಸ್ವಿಷಮ ಸಂಸಾರವೆಂಬ ಮುಸುಕಿದ ಮಡುವಿನೊಳ್ಮುಳುಗಿಸಿದೆ ವಸುಧೆಯೊಳಸೆವ ಆ ಅಸಮಹಿಮನ ಪಾದ ದಾಸರ ಸಂಗ ನೀಡ್ವಿಮಲಾಂಗ ಭಂಗ ಕುಸುಮಾಕ್ಷ ಕೃಪಾಂಗ 2 ಮದನಕದನದಿ ಮುದಸುಖವಿಧಿಸಗ ಲ್ಹೋದ ಸುದತಿಯಳ ನೆನೆವಂತೆ ಪಾದ ಸದುಭಕ್ತಿ ಹಂಬಲ ಅಗ ಲದಿರಿಸು ರಘುಕುಲಸೋಮ ಸದುಭಕ್ತರ ಪ್ರೇಮ ಸುದಯನೆ ಶ್ರೀರಾಮ3
--------------
ರಾಮದಾಸರು
ಮೊರೆ ಕೇಳು ಭಕುತಬಂಧು ಮರೀಬೇಡ ಕರುಣಾಸಿಂಧು ಪ ಮರೆಯಬಿದ್ದು ಸೆರಗನೊಡ್ಡಿ ನಿರುತ ನಿಮ್ಮ ಚರಣ ಭಜಿಪೆ ಶರಣಾಗತರ ವರಪ್ರದಾತ ನಿರುತ ಪರಿಪಾಲಿಸಭವ 1 ಶುದ್ಧ ನಿಮ್ಮ ಭಕ್ತನೆನಿಸೊ ಬದ್ಧನೆನಿಸಿಬೇಡ ದೇವ ಬಿದ್ದು ಬೇಡ್ವೆ ನಿಮ್ಮ ಪದಕೆ ತಿದ್ದಿಕಾಯೋ ಎನ್ನ ತಪ್ಪ 2 ತರಳನ್ಹೊರೆದಿ ಭರದಿ ಬಂದು ನರನ ಕಾಯ್ದಿ ಧುರದಿ ನಿಂದು ಪರಮಸಿದ್ಧಿ ನೀಡು ಈಗ ಚರಣದಾಸಗೆ ವರ ಶ್ರೀರಾಮ 3
--------------
ರಾಮದಾಸರು
ಮೊರೆಯ ಲಾಲಿಸಬೇಕು ಮರುಗಿ ದಮ್ಮಯ್ಯಾವರದ ಸದ್ಗುರುರಾಯ ವಾಸುದೇವಾರ್ಯ ಪ *ಜನನೀಯ ಜಠರಾದಿ ಜಪಿಸಿದ ಸ್ಥಿತಿಯಾನೆನೆಯಾದೆ ಮರೆತಂಥ ನೀಚಾ ನಾನಯ್ಯಾಸನಿಹವನ ಸೇರಾದೆ ಸುಜ್ಞಾನರಡಿಯಾಕಣುಗೆಟ್ಟು ದಾರಿಯಕಾಣೆ ಗುರುರಾಯಾ 1ಕಾಮಾದಿ ರಿಪುಗಾಳ ಕೂಟದಿ ನಿಂದುಪ್ರೇಮಪಾಶದ ಕಟ್ಟು ಬಿಗಿಯಾಗಿ ಬಂದುಭೀಮಸಂಸಾರದಿ ಬಿದ್ದನಿವನೆಂದುನೀ ಮನಕೆಚ್ಚರ'ತ್ತು ಸೆಳಕೊಂಡು 2ಕೊಳಚೆಯೊಳಿಪ್ಪಾ ಸೂಕರ ವಾಸನೆಯುತೊಲಗಿ ಪೋಗಲಿಯೆಂದು ತೋರ್ಪುದೆ ಮತಿಯುಹೊಲೆದೇಹ ನಾನೆಂಬ ಹಳೆಯ ಸಂಗತಿಯುಬಲಿತಿದೆ ನೀನಿದ ಬಿಡಿಸಿ ಸನ್ಮತಿಯ 3ಸಾಲವ ತಂದು ಸ' ಸ'ಯಾಗಿ ತಿಂದೂಬಾಳುತಿರೇ ಕೊಟ್ಟವ ಬಡ್ಡಿ ಬೇಕೆಂದುಕೇಳಿ ಬಾಧಿಸಲೇತಕೆ ಕಡಗೈದೆನೆಂದುಆಲೋಚಿಪಂತೆಚ್ಚರಾುತೆನಗಿಂದು 4ಬರುವುದು ಸುಖವೆಂದು ಬಲುಯತ್ನಗೈದುಸೊರಗಿದೆನಲ್ಲದೆ ಸುಖಗಾಣೆ ನೊಂದುಕರಣಕೆಚ್ಚರವೊ ಕರುಣಿಸಲ್ಪ'ದುಕರಪಿಡಿದುಳುಹೆಂದು ಕೂಗಿದೆನಿಂದು 5ುೀ ದಯಾರಸಕೆ ನಾನೀವೆನೇನುವನುಪಾದಪದ್ಮವ ನಂಬಿ ಪಾಲಿಸೆಂಬುವನುಆದರಿಸುತ ಭಕ್ತಿಯಾನಂದವನ್ನುವೇದವೇದ್ಯನೆ ಕೊಟ್ಟು ಸಲಹು ನೀನಿನ್ನು 6ಪುಟ್ಟಿದಂದಿನಿಂದಾ ಮಡಿ ಮಡಿಯಾಗಿ ದುಡಿದುಘಟ್ಟಿಗತನವನು ಗಳಿಸಬೇಕೆಂದುಹೊಟ್ಟೆ ಹೊರಕರೊಳಾಡಿ ಹುಸಿಯನೆ ನುಡಿದುಕೆಟ್ಟು ಸುಖಗಾಣದೆ ಕೂಗಿದೆನಿಂದು 7ಸಾಕಾುತಯ್ಯಾ ಸಂಸಾರ ಕೋಟಲೆಯುನಾ ಕಾಣೆ ಸುಖವನು ನಿ'ುಷವಾದರೆಯುನೀಕರಿಸುವರಿಂದ ನಿರ್ವೇದ ಗತಿಯುಸೋಕಲು ನಿನ್ನೊಳು ಸಿಕ್ಕಿತು ಮತಿಯು 8ಧರೆಯೊಳಜ್ಞರ ನೋಡಿ ದಯದಿಂದ ಮುದದಿನರದೇಹದಾಳಿ ಚಿಕನಾಗಪುರವರದಿಒರೆದು ವೇದಾಂತರ್ಥವನು 'ಸ್ತರದಿ 1ಉದ್ಧರಿಸಿದೆ1 ವಾಸುದೇವಾರ್ಯ ಸುಖ ಪಥದಿ 9(ಈ) ಸಾಮಾಜಿಕ ಕೃತಿಗಳು
--------------
ವೆಂಕಟದಾಸರು
ಮೊಸರ್ಬೇಕ್ ಮೊಸರು ಧೇಂಡಿಯ ಮೊಸರು ಪ ಕರಣೆಯೆಂದ್ಹೆಸರು ಕೇಳ್ಬೇಡಿ ಕೊಸರು ಅ.ಪ ಗೋಕುಲದಲಿ ಶ್ರೀಕೃಷ್ಣನು ತಾನೆ ಆಕಳಮಂದೆಯ ಹೊಂದಿರುತಾನೆ ಆ ಕರುಣಾನಿಧಿ ಕಳಿಸಿರುತಾನೆ ಬೇಕಾದರೆ ಬನ್ನಿ ನಾ ಇಕ್ಕುತ್ತೇನೆ 1 ಎಳಗಂದಿಯಲ್ಲವು ತಿಳಿಗಟ್ಟುವುದಿಲ್ಲ ಕೊಳೆಯಿಲ್ಲವು ಈ ಬಿಳಿಮೊಸರಿನಲಿ ತಿಳಿಯ ವೈರಾಗ್ಯ ಭಕ್ತಿಗಳುಳ್ಳ ಜನಕೆ ಗೆಳೆಯ ಶ್ರೀ ಕೃಷ್ಣನು ಕಳಸಿದನಮ್ಮ 2 ಬಿಂದು ಮಾತ್ರದಿ ನಿಜಾನಂದವ ಕೊಡುವುದು ಬಿಂದಿಗೆ ತಂಬಿಗೆ ತರಬೇಡಿರಮ್ಮ ಮಂದ ಜನರು ತಾವರಿಯರು ಇದನು ತಂದೆ ಪ್ರಸನ್ನನ ಪರಮ ಪ್ರಸಾದವ 3
--------------
ವಿದ್ಯಾಪ್ರಸನ್ನತೀರ್ಥರು
ಮೋಕ್ಷ ಪುಣ್ಯ ಫಲಾ ಮದನ ಗೋವಿಂದನ ಕರುಣವು ಪ ಆಕಾರಾಮೊದಲಾ ದಕ್ಷರದಲಿ ನೇಕಾ ಪರಿಯಲಿ ಕರೆದು ಸುವರ್ತಡದನಿಂದಾದಾ ಆದಿಮುನಿ ಗಣಸಹಿತಾ ಶ್ರೀ ಕರದಿಂದಾಲಾಶ್ರಿತ ಜನ ಪೋಷಕನ ನೀ ಕಾಮನಾದಿ ಪೂಜಿಸಿ ನಿಜಭಕುತಿ ಆಕಾಲದಲ್ಲಿ ಮಾಡಿದವರಿಗೆ ಎಲ್ಲಾ ಮುಕುತಿ ಲೋಕನಾಯಕನನುಗ್ರಹದಿಂದಲೇ 1 ನಾಯಕ ಪೂಜಿತನಾ ಸಾಸಿರನಾಮದ ಸರ್ವೇಶನ ದಾಸೋತ್ತುಮರಾದ ವರಿಗೆಲ್ಲಾ ವಾಸುದೇವಾನು ತನ್ನವರು ಎಂದು ಪಾಲಿಸಿ ಈಸು ಜನರಿಗಿತ್ತಾ ಇಹಪರವು 2 ಅಂದು ಚಂದ್ರಗೆ ಬಂದ ಶಾಪವು ಕಳೆದಾ ಅಜಮಿಳನಂತ್ಯ ಕಾಲಕೆ ಕಾಯ್ದ ಕಂದಾ ಕೂಗಲು ನೇರ ಕಂಭದೊಳಗೆ ಬಂದಾ ಮುಂದಾ ದನುಜನ ಸೀಳಿ ಮಗನಕಾಯ್ದ ಸಿಂಧುಶಯನ ತನ್ನ ಹೊಂದಿದವರನೆಲ್ಲಾ ಬಂಧು ಬಳಗ ಆಗಿಪೊರೆವಂಥಾ ಸ್ಮರಿಸುವ ಶರಣರಿಗೆ 3
--------------
ಹೆನ್ನೆರಂಗದಾಸರು
ಮೋತಂಪಲ್ಲಿ ಪ್ರಾಣದೇವರ ಸ್ತೋತ್ರ ಏನು ಕರುಣವೊ ನಿನಗೆ ಮೋತಪಲ್ಲಿಶಾ ||ದೀನ ದ್ವಿಜಗೊಲಿದು ಬಂದಿಲ್ಲಿ ನಿಂತೇ ಪ ವಿಪ್ರವರ ತಪಗೈಯ್ಯೆ | ನೀನೊಲಿದು ಅವನಿಗೆಕ್ಷಿಪ್ರದಿಂ ಕಿಂಪುರುಷ | ಖಂಡದಿಂಧ್ಹೊರಟೂ |ಅಪ್ರತಕ್ರ್ಯೊರು ಸ | ದ್ಗುಣ ಪೂರ್ಣ ಹರಿದೂತಸುಪ್ರಸನ್ನನು ಆಗಿ ಬಂದಿಲ್ಲಿ ನಿಂತೇ 1 ಸುಜನ ಜನರಂದೂ 2 ಪಾದ | ಪದ್ಮಯುಗವಾ ||ದ್ವಿಜಗುರೂ ಪ್ರಾಣಪತಿ | ತೈಜಸನು ತಾನಾಗಿ |ಭಜಕರಿಗೆ ಪೇಳಿದನು | ಸ್ವಪ್ನ ಸೂಚಿಸುತಾ 3 ಭಿನ್ನವಾಗಿದ್ದಂಥ | ಅಂಗಗಳ ಜೋಡಿಸುತನನ್ನೆಯಿಂ ತೈಲವನು | ಪೂಸೆನ್ನುತಾ |ತನ್ನ ಸದನದ ಕದವ | ನಾಲ್ವತ್ತು ಮತ್ತೊಂದುದಿನ್ನ ತೆಗೆಯದೆ ಲವಣ | ವ್ರತ ಮಾಳ್ಪುದೆಂದಾ 4 ಸದನ | ಕದ ತೆಗೆಯುತಿರಲೂ |ನೇಮ ಮೀರಿದ ಫಲವು | ತೋರುವನೊ ಎಂಬಂತೆಕೀಮು ರಕ್ತವ ಸ್ರವಿಸೆ | ವಕ್ಷದಲಿ ಕಂಗಳಲೀ 5 ತಪ್ಪು ತಪ್ಪೆಂದವನು | ದವಡೆಯನೆ ತಟ್ಟುತ್ತಅರ್ಪಿಸಲು ತನುಮನವ | ಭಕುತಿಯಿಂದಾ |ವಪ್ಪಿಕೊಳ್ಳುತ ಹನುಮ | ಸ್ವಪ್ನದಲಿ ಪೇಳಿದನುಅರ್ಪಿಸುವುದಲ್ಲಿಲಿ | ಶಾಲಿಗ್ರಾಮಗಳಾ6 ಹರಿಮಹಿಮೆ ಕೊಂಡಾಡಿ | ಬರದಂತೆ ತಾವ್ ಮಾಡಿನರಸಿಂಹ ವಸುದೇವ | ಸುತ ಶಾಲಿಗ್ರಾಮಗಳಾ |ಸ್ಥಿರಪಡಿಸಲಲ್ಲಿಲಿ | ಕರುಣದಿಂದಲಿ ದಿವ್ಯವರ ರೂಪದಿಂ ನಿಂತೆ | ಗುರು ಮಾರುತೀಶಾ 7 ಮಾಸ | ಎಂಟೈದನೇ ದಿನದಿನೆಂಟರೆಲ್ಲರು ಸೇರಿ | ಬಹು ಉತ್ಸವಗಳಾ |ಭಂಟರಾಮರ ನಿನಗೆ ಉಂಟು ಮಾಡಲು ಭಕ್ತಕಂಟಂಕಗಳ ನೀಗಿ | ವಾಂಛಿತವ ನೀನೇ 8 ಗುರುಗೋವಿಂದ ವಿಠಲ | ಪರಮ ಸೇವಕ ಹನುಮಪರಿ ಪರೀಯಲಿ ನಿನ್ನ | ಚರಣ ಯುಗ್ಮಗಳಾ |ಪರಮ ಭಕ್ತಿಲಿ ಸೇವೆ | ನೆರೆ ಮಾಳ್ಪ ಸುಖವಿತ್ತುಪರಮ ಪುರುಷನ ಕಾಂಬ | ವರ ಮಾರ್ಗ ತೋರೋ 9
--------------
ಗುರುಗೋವಿಂದವಿಠಲರು
ಮೋದ ವಿಠಲ | ಪೊರೆ ಇವಳಾ ಪ ದಾನವಾಂತಕ ಕೃಷ್ಣ | ದೀನರುದ್ಧಾರೀ ಅ.ಪ. ದುರಿತಗಳ ಅಟ್ಟಳಿಯ | ಪರಿಹರಿಸಿ ಸಲಹಯ್ಯಕರುಣಾಳು ನರಹರಿಯೆ | ಮರು ತಂತರಾತ್ಮಶರಣಜನ ವತ್ಸಲನೆ | ಅರಿಗಳನೆ ಪರಿಹರಿಸಿಪೊರೆಯ ಬೇಕೀ ಶಿಶುವೆ | ಕಾರುಣ್ಯ ನಿಧಿಯೇ 1 ಪತಿ ಪ್ರಿಯ ಹರಿಯೆಹದ್ದುವಾಹನದೇವ | ಮಧ್ವಾಂತರಾತ್ಮ 2 ಭಾವಶುದ್ದದಿ ನಾಮ | ಓವಿಭಜಿಸುವಂಥಭಾವಭಕ್ತಿಯನಿತ್ತು | ಕಾಯೊ ಶ್ರೀ ಹರಿಯೇಶ್ರೀ ವರನೆ ಸರ್ವತ್ರ | ತವಸ್ಮರಣೆ ಇತ್ತಿವಳನೀವೊಲಿಯ ಬೇಕಯ್ಯ | ದೇವ ಹಯವದನಾ 3 ಬೋಧ ಮೋದ ಮೋದ ನರಹರಿಯೇ 4 ಭಾರ ನಿನದಿಹುದಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋದ ಪ್ರದ ನರಹರಿ | ವಿಠಲ ಪೊರೆ ಇವಳಾ ಪ ಪಾದ್ಯ ಪ್ರ | ಹ್ಲಾದ ರಕ್ಷಕನೇ ಅ.ಪ. ನೀನೇವೆ ಗತಿಯೆಂದು | ಆನೇಕ ವಿಧ ನಿನ್ನಸಾನುರಾಗದಿ ಪೊಗಳ್ವ | ಮಾನುನೀ ಮಣಿಗೇಜ್ಞಾನೋದಯವ ಗೈದು | ಕಾಣಿಸೋ ಸದ್ಗತಿಯಮಾನ ಮಾನ್ಯದ ಹರಿಯೆ | ಆನತೇಷ್ಟದನೇ 1 ಜೀವ ಅಸ್ವಾಂತಂತ್ರ | ದೇವ ನಿಜ ಸ್ವಾತಂತ್ರಈ ವಿಧದ ಸುಜ್ಞಾನ | ಓದಿ ಪಾಲಿಸುತಾ |ಕೇವಲಾನಂದ ಮಯ | ದೇವ ತವ ಸೇವೆಯನುಭಾವ ಭಕ್ತಿಯಲಿಂದ | ಗೈದ ಮನನೀಯೋ2 ನೆರೆಹೊರೆಯ ಜನರೇನು | ಮರಳಿ ಬಹು ಬಾಂಧವರುಹರಿ ನಿನ್ನ ಪರಿವಾರ | ಸರಿಯೆಂಬ ಮತಿಯಾಕರುಣಿಸುತ ತರಳೆಗೇ | ಪರುಷಾರ್ಥ ಸಾಧನದಪರಿಯನರುಹುತ ಪೊರೆಯೊ | ವರಲಕ್ಷ್ಮಿ ಪತಿಯೇ 3 ಸಾಧನ ಸುಜೀವಿಗಳ | ಕಾದು ಬಾಯ್ದೆರೆಯುತಿರೆಮೋದ ಬಡಿಸುವುದು ಚಿತ್ | ಸಾಧು ಜನವಂದ್ಯಾಮೋದ ಮುನಿ ಪಾದಾಬ್ಜ | ಆದರದಿ ವಂದಿಪಳೋಹೇ ದಯಾಂಬುಧೆ ಮನದಿ | ಮೈದೊರೊ ಹರಿಯೇ 4 ಬೋವ ನೀನಾದೇನೀ ವೊಲಿಯಲಿನ್ನೇನು | ಆವುದಾಸಾಧ್ಯವೋಪೂವಿಲ್ಲನಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋದದಲಿರಬೇಕಮ್ಮ | ಸುಮ್ಮನೆ ನೀನು ಮೋದದಲಿರಬೇಕಮ್ಮ ಪ. ಮೋದ ಶ್ರೀ ಗುರುಗಳ ಚರಣ ಕಮಲವನ್ನು ಮೋದದಿಂದಾಶ್ರಯಿಸಿ ಸುಖದಲಿರಲಿಬೇಕು ಲೋಕದ ಜನಗಳ ನುಡಿಗಳ ಲೆಕ್ಕಿಸದೆ ಲೋಕವಂದ್ಯನ ಚರಣ ಕಮಲವ ಸ್ಮರಿಸುತ ಅ.ಪ. ಪರಮಾತ್ಮನ ಕೃಪೆಗೆ ಕಾರಣವಿದು ಗುರುಕರುಣದ ಬಲವು ಅರಿಯದ ಮನುಜರ ಬಿರುನುಡಿಗೆ ಮನ ಕೊರಗಿಸದಂದದಿ ಹರುಷಪಡಲಿಬೇಕು 1 ಎಚ್ಚತ್ತು ನಡಿಯಬೇಕು | ಶ್ರೀ ಗುರುಸೇವೆ ಇಚ್ಛೆಯಿಂ ಮಾಡಬೇಕು ತುಚ್ಛ ಮಾತುಗಳಿಗೆ ಮನಕೊಡದೆ ಹರಿ ಮೆಚ್ಚುವಂದದಿ ಗುರು ಇಚ್ಛೆಯನರಿತು ನಡೆದು 2 ವಂದನೆ ನಿಂದ್ಯಗಳ | ಮೋಕ್ಷಾರ್ಥಿಯು ಒಂದಾಗಿ ಭಾವಿಸುತ ಮಂದರೋದ್ಧರನ ಮಾಯಕೆ ಮನದಿ ಮೋದಿಸುತ ಮಂದರಂದದಿ ಮನುಜರಿಗೆ ತೋರುತಲಿದ್ದು 3 ಮಾನವ ಜನ್ಮ ಸಾಧನ ಜನ್ಮವಮ್ಮ ಸಾಧಾರಣವಲ್ಲ ಸಾಧು ಸಜ್ಜನಸಂಗ ಸಾಧಿಸಿ ದುಷ್ಕರ್ಮ ಛೇದಿಸಬೇಕಮ್ಮ 4 ಚಿಂತೆಯನಳಿಯಬೇಕು | ಶ್ರೀ ಗುರು ಕರುಣ ಅಂತರ ತಿಳಿಯಬೇಕು ಸಂತತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ಭಜಿಸಿ ಮುಕ್ತಿ ಸಾಧಿಸಬೇಕು 5
--------------
ಅಂಬಾಬಾಯಿ