ಒಟ್ಟು 7546 ಕಡೆಗಳಲ್ಲಿ , 133 ದಾಸರು , 4390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಮರೆವಾರೇನೋ ನಿನ್ನ ನೀನು ಗುರುತಾ ನೆಲೆ ಮಾಡದೆ | ಸಿರಿಯರಸನಸಿರಿ ಚರಣವ ಸ್ಮರಿಸದೇ | ನರದೇಹ ಬರಡವ ಮಾಡುವರೆ ಜಾಣಾ ಪ ಹಲವು ಪುಣ್ಯದಿಂದಲ್ಲದೇ ಸುಲಭದಲ್ಲಿ ಜನ್ಮವು | ಇಳೆಯೊಳಗುದಯಿಸಿ ತಿಳಿಯದೆ ಸ್ವಹಿತದ | ಬಳಿಕೆಯ ನೆರೆಭವ ಬಲಿಯೊಳು ಸಿಲುಕಿ | ತೊಳಲುತ ನಿಶಿದಿನ ಬಳಲುವೆ ಜಾಣಾ 1 ಅವಗತಿಯೋ ಎನಗೆ ಮುಂದಾ | ಆವ ಜನಮ ವಿಹುದೋ | ವಿವೇಕದಿಂದ ವಿಚಾರಿಸಿ ಮನದೊಳು | ಭಾವಿಸಿ ಗುರುವಿನ ಪಾವನ ಪಾದಾ | ಭಾವಭಕುತಿಯಲಿ ಸಾವಧನನಾಗದೆ | ಹ್ಯಾವಹೆಮ್ಮೆಲೆ ದಿನಗಳೆದೇ ಜಾಣಾ 2 ಬದಿಯಲ್ಲಿದ್ದಾ ವಸ್ತುವನು | ಸದಗಾನಾದ್ಯೋ ಕಾಣದೆ | ಸಾಧುರ ಕೈಯಲಿ ಹಾದಿಯ ಕೇಳೆಲೋ | ಸಾದರದಲಿ ನಿಜ ಸಾಧನ ಬಲಿದು | ಭೇದಿಸು ಮಹಿಪತಿನಂದನ ಸಾರಿದಾ | ಗಾದಿಯನ್ನದೆ ಗತಿ ಸಾಧಿಸೋ ಜಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆವುದುಚಿತವೆ ರಂಗ ದಾರಿ ತೋರಿ ಪ ಯೆನ್ನ ಕಾವರನ್ಯರಿಲ್ಲ ನೀಲಾಂಗ ಅ.ಪ ಧರೆಯ ವೈಭವ ನಿತ್ಯವೆಂದು ಪರರ ಸಿರಿಯ ಹರಣಗೈದು ನಿರುತ ದುರಿತಕಾರ್ಯಗೈದು ಪರಮ ಪಾಪಿಯಾದೆನೆಂದು 1 ಕರುಣಶರಧಿ ನೀನೆಯೆಂದು ಸ್ಮರಿಸುವವರ ಪೊರೆವನೆಂದು ಶರಣಜನರು ಬಳಿಗೆ ಬಂದು ಕರೆಯದಿಹರೆ ದೀನಬಂಧು 2 ಅಂಗದಿಂದ ಗೈದ ಪಾಪ ಕಂಗಳಿಂದ ಗೈದ ಪಾಪ ಭಂಗಗೈವರಿಲ್ಲ ಭೂಪ ಮಾಂಗಿರೀಶ ಜ್ಞಾನದೀಪ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆವುದೆಂತು ನಿನ್ನ ಪರಮ ದಯವ ಕರುಣಾವಾರಿಧೇ ಪ ಅರಿಯದ ಅಜ್ಞಾನಿ ಎನ್ನ ಹಿರಿಯನೆನಿಸಿ ಪೊರೆದ ಬಗೆಯ ಅ.ಪ ಜ್ಞಾನಿಗೆ ಲಭ್ಯನೆಂದು ನಿನ್ನ ಮಾನತತಿಯು ಪೊಗಳುತಿರಲು ಜ್ಞಾನವೀಯದಿರಲು ನಿನ್ನ ಜ್ಞಾನಿಜನಗಳೇನೆನುವರೋ 1 ರಾಗ ದ್ವೇಷದಿಂದ ಶಿರವ ಬಾಗದಿದ್ದ ಎನ್ನ ದುರಿತ ನೀಗಿ ದಿವ್ಯಯೋಗವೀಯಲು ತ್ಯಾಗ ನಿನ್ನದು ಯೋಗವೆನ್ನದು 2 ಮಡುವಿನಲ್ಲಿ ಬಿದ್ದು ಸುಳಿಯ ಹೊಡೆತದಿಂದ ಮುಳುಗುತಿರಲು ದಡಕೆ ತಂದು ರಕ್ಷಿಸಿದ ಎನ್ನೊಡೆಯ ವರ ಪ್ರಸನ್ನ ಮೂರುತೆ 3
--------------
ವಿದ್ಯಾಪ್ರಸನ್ನತೀರ್ಥರು
ಮರ್ದಳವನಿದ ಮನ್ನಿಸು ಮಾರಮಣವರ್ಧಿಸುವದಾನಂದವಸಿದ್ಧವಹ ಶಬ್ದಗಳನು ಸೂಚಿಸುತಲಿದ್ದು ಪ್ರೇರಿಪುದರ್ಥವ ಪಉಭಯ ಮುಖದಿಂದಲುದಿಸಿ ತಾನಿಂತುಶುಭತರಾಕೃತಿಯೆನ್ನಿಸಿಲಭಿಸುತ್ತ ನರ್ತಕಿಯನು ಲಾಲಿಸುತವಿಭು ನಿನ್ನ ನೋಲೈಪುದು 1ಸ್ಥೂಲತರ ಸ್ವನವಾದರೂ ಕಿಂಕಿಣೀಜಾಲಕಿದು ಜೋಡಾಗುತಪಾಲಿಸುತ ಪದಗತಿಯನು ಮನದ ಬಲಕಾಲಯವದಹುದೆನ್ನಲು2ಮೊದಲ ವರ್ಣವು ರುದ್ರನು ಮಧ್ಯದಲಿಹುದುಗಿದಕ್ಷರ ವಿಷ್ಣುವುತುದಿಳಕಾರವು ಬ್ರಹನು ಇಷ್ಟಕ್ಕೆಸದನವಾಗ್ಯನುಸರಿಸಲು 3ಮೂರು ಮೂರ್ತಿಗಳಂಗವ ವರ್ಣಗಳುತೋರೆ ನಡುವೆ ದಕಾರವಸೇರಿದ ರಕಾರ ತಾನು ವ್ಯಂಜನದಿತಾರಕಬ್ರಹ್ಮವಾಗೆ 4ಇಂತು ಮರ್ದಳವೆಸೆಯಲು ಇಂದಿರಾವಂತ ನೀ ಕಟ್ಟಿದಂತೆಕಂತುಪಿತ ತಿರುಪತೀಶಾ ಇಲ್ಲಿ ನೀನಿಂತು ಕೇಳ್ವೆಂಕಟೇಶಾ 5ಓಂ ಗೋಪಗೋಪೀಶ್ವರಾಯ ನಮಃ
--------------
ತಿಮ್ಮಪ್ಪದಾಸರು
ಮಲಗಯ್ಯ ಕೇಶವಾಮಲಗಯ್ಯ ಮಾಧವಾ ಮಲಗಯ್ಯ ಚನ್ನಕೇಶವ ರಂಗರಾಯಾ ಪ ಶ್ರೀಲೋಲ ಮಲಗಯ್ಯ ಪಾಡಿ ತೂಗುವೆನಯ್ಯ ಬಾಲನ ಸಲಹಯ್ಯ ಕೂಡಿ ಪರಮ್ಮಾತ್ಮಾ ಅ.ಪ. ಜಗವೆಲ್ಲ ಕತ್ತಲೆಯಿಂದ ಮಸುಕಿಹುದಯ್ಯ ಖಗವೃಂದ ಪಶುವರ್ಗವೆಲ್ಲ ನಿದ್ರಿಪುದೂ ಜಗವೆಲ್ಲ ನಿಃಶಬ್ದವಾಗಿದೆ ಶ್ರೀಹರಿ ಗಗನದಿ ಗೂಗೆಯು ತೂಗುತಿದಯ್ಯ 1 ಜನರೆಲ್ಲ ಹರಿ ನಿಂನ ಸೇವೆ ಮಾಳ್ದುದ ಬಿಟ್ಟು ಘನನಿದ್ರಾಂಗನೆಯನ್ನು ಅಪ್ಪಿ ಕೊಳ್ಳುವರೊ ಪ್ರಣವ ಸ್ವರೂಪನೇ ಮಲಗು ನೀ ಬೇಗದಿ ತನುವೆಂಬ ತೊಟ್ಟಿಲದಿ ತೂಗುವೆನಯ್ಯಾ 2 ಪನ್ನಗಶಯನನೆ ಆದ್ಯಾಂತರಹಿತನೇ ಮನ್ನಿಸಿ ಭಕ್ತರ ಪೊರೆವ ಮಾದವನೇ ಬಿನ್ನರೂಪವ ತಾಳಿ ಕಾಯವು ದಣಿದಿದೆ ಇನ್ನು ನಿದ್ರೆಗೆ ಪೋಗು ತೂಗುವೆನಯ್ಯ 3
--------------
ಕರ್ಕಿ ಕೇಶವದಾಸ
ಮಲಗಲೇತಕೆ ಹರಿಯೆ | ಚಲುವ ಚನ್ನಿಗ ದೊರೆಯೆ ಪ ಎಲರುಣೀವರ ಶಯ್ಯ | ಬಳಲಿಕೇಕಯ್ಯಾ ಅ.ಪ. ವೇದ ಕದ್ದನ ಹರನೆ | ಭೂಧಾರಿ ಗಿರಿಧರನೆಭೂದರಿಸಿ ಭೊಮ್ಮನಿಗೆ | ಆದರದಿ ಕೊಟ್ಟವನೇ |ಭಾದಿಸೇ ಭಕ್ತ ಪ್ರ | ಹ್ಲಾದನನ ಕಾಯ್ದವನೆಮೋದದಿಂದಲಿ ಬಲಿಯ | ಪಾದವಾ ಮೆಟ್ಟಿದನೆ 1 ಗಂಡು ಗೊಡಲಿಯ ಪಿಡಿದು | ಭಂಡ ಭೂಭುಜ ತರಿದುಲಂಡ ರಾವಣ ಶಿರ | ಚೆಂಡಾಡಿದ ಧೊರೆಯೇಕಂಡ ಕಂಡವರ ಮನೆ | ಗಂಡಲೆದು ಪಾಲ್ಮೊಸರಉಂಡುಂಡು ಚೆಲ್ಲಾಡಿ | ಭಂಡು ಮಾಡಿದೆ ಕೃಷ್ಣ 2 ಮುಪ್ಪೊರರ ಸತಿಯರನು | ಅಪ್ಪಿ ವ್ರತ ಭಂಗವನುತಪ್ಪದೇ ಮಾಡಿ ಹಯ | ವಪ್ಪಿ ಏರ್ದವನೇಇಪ್ಪರಿಯ ಚರ್ಯ ದಿಂ | ಸೊಪ್ಪಾಗಿ ಮಲಗಿದೆಯೋಗುಪ್ತ ಮಹಿಮನೆ ದೇವ | ಅವ್ವ ಶ್ರೀರಂಗ ಪುರಗ 3 ಕ್ಲೇಶ 4 ಪೂರ್ವ ವಾಹಿನಿ ಎನಿಪ | ಕಾವೇರಿ ತೀರಗನೆಪೂರ್ವದಿವಿಜರ ಹರನೆ | ಸಾರ್ವಭೌಮಾಊರ್ವಿ ಯೊಳ್ಪೆಸರಾದ | ಪಾರ್ವ ಗೌತಮ ವರದಕೋರ್ವೆ ತವ ಚರಣ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಲಗು ಮಲಗಯ್ಯ ಹನುಮ ಕಲಿಭಂಜನ ಭೀಮ ಜಲಧಿ ಅಲವಬೋಧನಾಮಾ ಜೋ ಜೋ ಪ ತ್ರೇತೆಯಲಿ ರಾಮದೂತನಾಗಿ ನೀ ಬಂದು ಭೀತಿಯಿಲ್ಲದೆ ಲಂಕೆಯ ದಹಿಸಿದೆಯೊ ಅಂದು ಸೀತೆಯಿತ್ತಂಥ ಚೂಡಾಮಣಿಯನು ತಂದು ಪ್ರೀತಿಪಡಿಸಿದೆ ರಾಮನ ನೀ ದಯಾಸಿಂಧು 1 ದ್ವಾಪರಾಂತದಲಿ ಭೀಮನಾಗಿ ನೀ ಬಂದೆ ಪಾಪಿ ಕೀಚಕ ದುಶ್ಶಾಸನಾದ್ಯರ ಕೊಂದೆ ಸಿರಿ ಕೃಷ್ಣನ ಪಾದಕೆರಗಿ ನಿಂದೆ ಭಾಪು ಭಾಪುರೆಂದೆನಿಸಿಕೊಂಡೆ ಅವನಿಂದೆ 2 ನಾನೆ ದೇವರೆಂಬ ಮತವನು ಹೆಮ್ಮೆಯಿಂದ ದಾನವರೀ ಕಲಿಯುಗದಲಿ ಪೊಗಳೆ ಮುದದಿಂದ ನೀನವತರಿಸಿ ಮಧ್ವಮುನಿ ಪೆಸರಿನಿಂದ ಹೀನ ಮತವ ಮುರಿದೆಯೊ ವಾಗ್ಭಾಣಗಳಿಂದ 3 ಏಕಾದ್ಯಶ ಕರ್ಮಗಳ ಶ್ರೀ ಹರಿಗರ್ಪಿಸಿ ಆತನನು ನೀ ಬಹು ಸಂತೋಷವನುಪಡಿಸಿ ಜಾತರಹಿತನಾಗೆನುತ ಆಶಿಷವ ವಹಿಸಿ ವಾತಸುತ ಕುಳಿತಿಹೆ ಯಂತ್ರೋದ್ಧಾರನೆನಿಸಿ 4 ಕಂಗಳನು ಮುಚ್ಚಿ ಜಪಮಾಲೆಯನು ತಿರುಗಿಸುತ ರಂಗೇಶವಿಠಲನ ತಾನದೊಳು ಸ್ಮರಿಸುತ ಹಿಂಗೇಕೆ ಕುಳಿತಿಹೆ ಮಲಗೇಳಯ್ಯ ದಾತ ತುಂಗ ವಿಕ್ರಮ ನೀನು ತ್ರಿಭುವನದಿ ಪ್ರಖ್ಯಾತ 5
--------------
ರಂಗೇಶವಿಠಲದಾಸರು
ಮಲಗು ಮಲಗೆಲೊ ಸುಮ್ಮನೆ ಸುಕುಮಾರ ಚೆಲುವ ಜೋಗುಳವ ಪಾಡುವೆ ಗೋಪಾಲ ಪ ಲಲನಾಮಣಿಯರು ಸುಲಭದಿ ನಿನ್ನನು ಕಲಭಾಷಣದಿಂದ ಸೆಳೆಯ ಬಯಸುತಿಹರೋ ಅ.ಪ ಭೋಗಿಶಯನ ಹರಿ ಈ ಜಗದೊಳಗೆ ಈಗ ಬಂದಿರುವ ಜಾಗವನರಿಯದೆ ಯೋಗಿ ಜನರು ಅನುರಾಗದಿಂದ ನಿನ್ನ ಸಾಗಿಸಲಿರುವರೊ ಕೂಗದೆ ಸುಖದಲಿ 1 ದುರುಳ ಶಕಟನನು ಮುರಿದ ಕೋಮಲದ ಚರಣ ಕಮಲಗಳು ಉರಿಯುತಲಿದ್ದರು ಮರೆಯಲದನು ಸುವಿನೋದವೀಯುವ ಸರಸಪದಗಳನು ಪರಿಪರಿಯರುಹುವೆನೊ 2 ಎನ್ನಯ ಕರಗಳು ನೋಯುತಲಿರುವುವು ಚಿನ್ಮಯ ರೂಪನೆ ನಿದ್ರೆಯ ಮಾಡೊ ದಧಿ ಪಯ ಬೆಣ್ಣೆಯ ಕೊಡುವೆ ಪ್ರಸನ್ನ ಸುಹೃದಯದಲಿ 3
--------------
ವಿದ್ಯಾಪ್ರಸನ್ನತೀರ್ಥರು
ಮಲ್ಲಮರ್ಧನ ರಾಣಿ - ಮಹ ಲಕ್ಷುಮೀ ಪ ಖುಲ್ಲ ಜನರೆದೆದಲ್ಲಣೆಯೆ | ಕೊಲ್ಲಾಪುರ ನಿಲಯೆ ಅ.ಪ. ಪ್ರಕೃತಿ ಚೇತಾತ್ಮೆ ಜಡ | ಪ್ರಕೃತಿ ದ್ರವ್ಯದ ಕಾರ್ಯವಿಕೃತಿ ಗೊಳಿಸುತ ಮೊದಲು | ವೈಕೃತವು ತದನಂತರಾ |ವ್ಯಕುತಿ ಗೈಯುತ ಲಿಂಗ | ಪ್ರಕೃತಿ ಕಾರ್ಯವ ಮಾಡಿಸುಕೃತ ತ್ರಿವಿಧರ ಸಹಜ | ಪ್ರಕೃತಿ ಶಬ್ದನಿಗೀವೇ 1 ಪರಿಭವ ಕಾರ್ಯನೀ ಮಾಳ್ಪೆ ಪ್ರಜ್ಞಾಂತ | ಪ್ರೇಮ ರೂಪದಲೀಈ ಮಹತ್ತುಪಕಾರ | ಸಾಮಸನ್ನುತ ಹರಿಯನೇಮದಿಂದಲಿ ಗೈವ | ಭಾಮೆಗಾ ನಮಿಪೇ 2 ಹರಿಕಾರ್ಯ ಸತ್ಸಾಧ್ಯೆ | ವಿರಜೆ ರೂಪದಿ ಹರಿಯೆ ||ವರ ಮಂದಿರಾವರಣ | ನೆರೆ ವಿರಚಿಸೀ |ಸರುವ ಸಜ್ಜೀವ ತವ | ಸರಿತದೋಲ್ ಅವಭೃತವವಿರಚಿಸಲು ಜಡ ಪ್ರಕೃತಿ | ಹರಿಸುವೆಯೆ ದಯದೀ 3 ಶ್ರೀ ಸಿತ ದ್ವೀಪಾದಿ | ಆ ಸುರೂಪವ ತಾಳಿವಾಸುದೇವನ ಸೇವೆ | ಆಶೆಯಲಿ ಗೈವೇ |ಈಸು ತವ ಮಹಿಮೆಯನು | ತೋಷದಲಿ ಸ್ತುತಿಪರಭಿಲಾಷೆ ಸಲಿಸುತ ತೋರ್ಪೆ | ವಾಸುದೇವನ ರೂಪ 4 ಸತಿ ಪತಿ ತೋರೇ 5
--------------
ಗುರುಗೋವಿಂದವಿಠಲರು
ಮಹಾಲಕ್ಷ್ಮಿ ಇಂದಿರೆ ಮಂದಿರದೊಳು ನಿಂದಿರೆ ಪ. ನಿತ್ಯ ಎನ್ನ ಆಹಾಗಂಧ ತುಳಸಿ ಅರವಿಂದ ಮಲ್ಲಿಗೆ ಪುಷ್ಪದಿಂದ ಪೂಜಿಸುವೆನು ಕುಂದುಗಳೆಣಿಸದೆ ಅ.ಪ. ಘಲು ಘಲು ಗೆಜ್ಜೆಯ ನಾದದಿಂದಫಳಫಳಿಸುವ ದಿವ್ಯಪಾದದೊಳುಪಿಲ್ಯ ಕಾಲುಂಗುರನಾದ ಅಂಘ್ರಿಚಲಿಸುವ ದಿವ್ಯಸುಸ್ವಾದ ಆಹಾಕಾಲಂದಿಗೆ ಗೆಜ್ಜೆ ಝಳಪಿಸುತ್ತ ನ-ಮ್ಮಾಲಯದೊಳು ನಿಲ್ಲೆ ಪಾಲವಾರಿಧಿಕನ್ನೆ 1 ಸಿರಿ ಅರಳೆಲೆ ಕುಂಕುಮಹೆರಳಗೊ[ಂ]ಡೆಗಳಿಂದ ಹರಿಯ ಮೋದಿಸುವೆ 2 ಜಯ ಜಯ ವಿಜಯಸಂಪೂರ್ಣೆ ಭಕ್ತಭಯನಿವಾರಣೆ ಎಣೆಗಾಣೆ ಎನ್ನಕಾಯುವರನ್ಯರ ಕಾಣೆ ಶೇಷ-ಶಯನನ್ನ ತೋರೆ ಸುಶ್ರೇಣೆ ಆಹಾಕೈಯ ಪಿಡಿದು ಭವಭಯವ ಪರಿಹರಿಸೆ ಸಿರಿಹಯವದನನ ದಯವ ಪಾಲಿಸೆ ಲಕ್ಷ್ಮಿ 3
--------------
ವಾದಿರಾಜ
ಮಹಾಲಕ್ಷ್ಮಿ ಇಂದಿರೆ ಮುಕುಂದ ಹೃನ್ಮಂದಿರೆ ಪ. ಇಂದಿರೆ ಲೋಕವಿಖ್ಯಾತೆ | ಶ್ರೀ- ನಂದನ ಕಂದನೊಳು ಪ್ರೀತೆ | ಆಹ ಬಂದೆನೆ ಭವದೊಳು ನಿಂದೆನೆ ನಿನ ಪದ ದ್ವಂದ ಸನ್ನಿಧಿಯಲಿ ಇಂದಿರೇಶನ ತೋರೆ ಅ.ಪ. ತ್ರಿಗುಣಾಭಿಮಾನಿಯೆ ದೇವಿ | ನಿನ್ನ ಜಗದೊಳು ನುತಿಪರ ಕಾಯ್ವಿ | ನಿತ್ಯ ನಗಧರನನು ಸೇವಿಸುವಿ | ಲಯ ಜಗ ಸೃಷ್ಟಿ ಸ್ಥಿತಿಯಲ್ಲಿ ದೇವಿ | ಆಹ ಬಗೆ ಬಗೆ ರೂಪದಿ ಸುಗುಣವಂತೆಯಾಗಿ ನಿಗಮಾದಿಗಳಿಂದ ನಗಧರನನು ಸ್ತುತಿಪೆ 1 ಸಕಲಾಭರಣ ರೂಪದಿಂದ | ಹರಿಯ ಅಕಳಂಕ ಭಕ್ತಿಗಳಿಂದ | ಪಂಚ ಪ್ರಕೃತ್ಯಾದಿ ರೂಪಗಳಿಂದ | ನಾನಾ ಸಕಲ ಸಾಮಗ್ರಿಗಳಿಂದ | ಆಹಾ ಮುಕುತಿ ನಾಲ್ಕರಲ್ಲಿ ಭಕುತಿಯಿಂ ಸೇವಿಸುತ ಮುಕುತರಿಂದೋಲಗ ಅಕಳಂಕದಿಂ ಕೊಂಬೆ 2 ಪಾದದಿ ಪಿಲ್ಯೆ ಪಾಡಗವೊ | ಮೋದ ವಾದ ನೆರೆಗೆ ವೈಭವವೂ | ಗಾಂಭೀ- ರ್ಯದ ವಡ್ಯಾಣ ನಡುವು | ಮೇಲೆ ಭಾ- ರದ ಕುಚದ್ವಯ ಬಾಹು | ಆಹ ಶ್ರೀದನ ಪೆಗಲೊಳು ಮೋದದಿಂದೆಸೆವ ಕೈ ಆದರದಲಿ ನಿನ್ನ ಪಾದಸೇವೆಯ ನೀಡೆ 3 ಕರದಲ್ಲಿ ಕಡಗ ಕಂಕಣ | ಬೆರಳ ವರ ವಜ್ರದುಂಗುರಾ ಭರಣ | ನಾಗ- ಮುರಿಗೆ ಸರಿಗೆ ಕಂಠಾಭರಣ | ಬಲ ಕರದಲ್ಲಿ ಪದ್ಮ ಭಕ್ತರನ | ಆಹ ವರದೃಷ್ಟಿಯಿಂದಲಿ ನಿರುತ ಈಕ್ಷಿಸುತ ಪರಿಪರಿ ಬಗೆಯಿಂದ ಪೊರೆವೊ ಸುಂದರಕಾಯೆ4 ಗೋಪಾಲಕೃಷ್ಣವಿಠ್ಠಲನÀ | ನಿಜ ವ್ಯಾಪಾರ ಕೊಡೆ ಎನಗೆ ಮನನ | ಪೂರ್ಣ ರೂಪಳೆ ಮುಖದ ಚಲುವಿನ | ನಿನ್ನ ರೂಪವ ತೋರಿಸೆ ಮುನ್ನ | ಆಹ ತಾಪ ಹರಿಸಿ ಲಕುಮಿ ಶ್ರೀಪತಿ ಪದದಲ್ಲಿ ಕಾಪಾಡು ನಿತ್ಯದಿ 5
--------------
ಅಂಬಾಬಾಯಿ
ಮಹಾಲಕ್ಷ್ಮಿ ಇಂದಿರೇ ಪಾಲಿಸು ಕಮಲಮಂದಿರೆ ಪ ಇಂದಿರೆ ಇಂದುನಿಭಾಸ್ಯೆ - ಗುಣ - ವೃಂದ ಶೋಭಿತೆ ಶುಭಗಾತ್ರೆ - ಆಹಾ ಇಂದು ಶೇಖರಸುರವಂದಿತಪಾದ ದ್ವಂದಾರವಿಂದಳೆ ಮಂದಸ್ಮಿತಾನನೆ ಅ.ಪ ಅರುಣದಿಂದೊಪ್ಪುವ ಚರಣ ಯುಗಳಾ - ಭರಣ ಭೂಷಿತ ಯೋಗಿಶರಣಾ ನಿಜ ಶರಣರ್ಗೆ ರನ್ನದರ್ಪಣಾಭವ - ಅರಣತಾರಣಕಾರಣ - ಆಹಾ ಶರಣು ಪೊಕ್ಕೆನು ದೇವಿ ಚರಣಕಮಲಯುಗ ವರಣಿಸಲಳವಲ್ಲ ಕರುಣಿಸು ನೀ ಎನ್ನ 1 ಶ್ರುತಿನುತವಿತತಸÀಚ್ಚರಿಯೆ ಸದಾ- ನತÀರ ಸಂತೈಪೊದಾಶ್ಚರಿಯೆ ನಿನ್ನ ಸ್ತುತಿಸಿದವಗೆ ಮಹಾ ಶಿರಿಯೆ ಮತ್ತೆ ನಿರಯ ಅಹಾ ಸತತ ನಿನ್ನಲಿ ಮನೋರತಿನಿತ್ತು ಶೋಕದ ವ್ರತತಿ ಖಂಡಿಸಿ ಸುಖತತಿಯ ಪಾಲಿಸು ದೇವೀ 2 ಜಗಕೆ ಸೃಷ್ಟಿಸ್ಥಿತಿನಾಶಕಾರಿ ಬಗೆ ಬಗೆ ಭವನದಲ್ಲಿ ಕ್ಲೇಶ-ಹರಸಿ ಸುಗಮದಿಂದ ಪರಿತೋಷ-ಬಡಿಸಿ ನಗಿಸುವಿ ಎನ್ನಭಿಲಾಷಾ ಅಹಾ ನಗೆಮುಖದಲಿ ಗುರು ಜಗನ್ನಾಥ ವಿಠಲನ್ನ ನಿತ್ಯ ಸೊಗಸಾಗಿ ಇರುತಿಪ್ಪಿ 3
--------------
ಗುರುಜಗನ್ನಾಥದಾಸರು
ಮಹಿಮೆ ಸಾಲದೆ, ಇಷ್ಟೇ ಮಹಿಮೆ ಸಾಲದೆ ಪ ಅಹಿಶಯನನ ಒಲುಮೆಯಿಂದಮಹಿಯೊಳೆಮ್ಮ ಶ್ರೀಪಾದರಾಯರ ಅ.ಪ ಮುತ್ತಿನ ಕವಚ ಮೇಲ್ಕುಲಾವಿರತ್ನ ಕೆತ್ತಿದ ಕರ್ಣಕುಂಡಲಕಸ್ತೂರಿ ತಿಲಕ ಶ್ರೀಗಂಧ ಲೇಪನವಿಸ್ತರದಿಂದ ಮೆರೆದು ಬರುವ 1 ವಿಪ್ರ ಹತ್ಯ ದೋಷ ಬರಲುಕ್ಷಿಪ್ರ ಶಂಖೋದಕದಿ ಕಳೆಯೆಅಪ್ರಬುದ್ಧರು ದೂಷಿಸೆ ಗೇರೆಣ್ಣೆಕಪ್ಪು ವಸನ ಶುಭ್ರಮಾಡಿದ2 ಹರಿಗೆ ಸಮರ್ಪಿಸಿದ ನಾನಾಪರಿಯ ಶಾಕಗಳನು ಭುಂಜಿಸೆನರರು ನಗಲು ಶ್ರೀಶಕೃಷ್ಣನಕರುಣದಿಂದಲಿ ಹಸಿಯ ತೋರಿದ3
--------------
ವ್ಯಾಸರಾಯರು